< ಅರಣ್ಯಕಾಂಡ 23 >

1 ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿ ಏಳು ಯಜ್ಞವೇದಿಗಳನ್ನು ಕಟ್ಟಿಸು ಮತ್ತು ಏಳು ಹೋರಿಗಳನ್ನು ಮತ್ತು ಏಳು ಟಗರುಗಳನ್ನು ಸಿದ್ಧಪಡಿಸಬೇಕು” ಎಂದು ಹೇಳಿದನು.
बालामले बालाकलाई भने, “यहाँ मेरो निम्ति सातवटा वेदी निर्माण गर्नुहोस्, र सातवटा साँढे र सातवटा भेडा तयार पार्नुहोस् ।
2 ಬಾಲಾಕನು ಹಾಗೆಯೇ ಮಾಡಿದನು. ಬಾಲಾಕನು ಮತ್ತು ಬಿಳಾಮನು ಪ್ರತಿ ಯಜ್ಞವೇದಿಯ ಮೇಲೆ ಒಂದು ಹೋರಿಯನ್ನು ಮತ್ತು ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದರು.
बालाकले बालामले भनेजस्तै गरे । अनि बालाक र बालामले हरेक वेदीमा एउटा-एउटा साँढे र भेडा बलि चढाए ।
3 ಬಿಳಾಮನು ಬಾಲಾಕನಿಗೆ, “ನೀನು ಸರ್ವಾಂಗಹೋಮದ ಸ್ಥಳದಲ್ಲೇ ಇರು. ನಾನು ಸ್ವಲ್ಪ ದೂರ ಹೋಗಿ ಬರುತ್ತೇನೆ. ಯೆಹೋವನು ನನಗೆ ಎದುರಾಗಿ ಬಂದು, ಆತನು ನನಗೆ ಏನನ್ನು ಸೂಚಿಸುವನೋ ಅದನ್ನು ನಿನಗೆ ತಿಳಿಸುವೆನು” ಎಂದು ಹೇಳಿ ಮರವಿಲ್ಲದ ಒಂದು ಎತ್ತರವಾದ ಸ್ಥಳಕ್ಕೆ ಹೋದನು.
अनि बालामले बालाकलाई भने, “तपाईं आफ्‍नो बलिदानको छेउमा खडा हुनुहोस् र म जाने छु । सायद परमप्रभु मलाई भेट्न आउनुहुने छ । उहाँले मलाई जे देखाउनुहुन्छ, सो म गर्ने छु ।” त्यसैले तिनी कुनै रुख नभएको पहडाको चुचुरोतिर गए ।
4 ದೇವರು ಬಿಳಾಮನಿಗೆ ಎದುರಾಗಿ ಬಂದಾಗ ಬಿಳಾಮನು ಆತನಿಗೆ, “ನಾನು ಆ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಒಂದೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನು, ಒಂದು ಟಗರನ್ನು ಸರ್ವಾಂಗಹೋಮವಾಗಿ ಸಮರ್ಪಿಸಿದ್ದೇನೆ” ಎಂದು ಹೇಳಿದನು.
तिनी पहाडको टुप्पोमा हुँदा परमेश्‍वरले तिनलाई भेट्नुभयो र बालामले उहाँलाई भने, “मैले सातवटा वेदी बनाएको छु र मैले हरेक वेदीमा एउटा-एउटा साँढे र भेडा बलि चढाएको छु ।”
5 ಯೆಹೋವನು ಬಿಳಾಮನಿಗೆ ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟು, “ನೀನು ಬಾಲಾಕನ ಬಳಿಗೆ ಹಿಂತಿರುಗಿ ಹೋಗಿ ಹೀಗೆ ಹೇಳಬೇಕು” ಎಂದು ಆಜ್ಞಾಪಿಸಿದನು.
परमप्रभुले बालामको मुखमा वचन हालिदिनुभयो र भन्‍नुभयो, “बालाककहाँ फर्केर जा र त्यसलाई भन् ।”
6 ಬಿಳಾಮನು ಬಾಲಾಕನ ಬಳಿಗೆ ಹಿಂತಿರುಗಿ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ್ದ ಯಜ್ಞವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರೆಲ್ಲರೂ ಅವನ ಬಳಿಯಲ್ಲಿದ್ದರು.
त्यसैले बालाम बालाककहाँ फर्के, जो आफ्‍नो बलिदानको छेउमा उभिरहेका थिए र मोआबका सबै अगुवा तिनीसँग थिए ।
7 ಆಗ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನು ನನ್ನನ್ನು ಆರಾಮಿನಿಂದ ಕರೆಯಿಸಿದನು, ಮೋವಾಬ್ಯರ ಅರಸನು ಪೂರ್ವ ಪರ್ವತಗಳಿಂದ ನನ್ನನ್ನು ಬರಮಾಡಿದನು, ‘ನೀನು ಬಂದು ಯಾಕೋಬ ವಂಶದವರನ್ನು ನನಗಾಗಿ ಶಪಿಸಬೇಕು.’ ‘ಇಸ್ರಾಯೇಲರನ್ನು ಎದುರಿಸುವುದಕ್ಕೆ ಬಾ.’
बालामले अगमवाणी कहन थाले र भने, “मोआबका राजा बालाकले मलाई पूर्वका पहाडहरूबाट अर्थात् अरामबाट ल्याएका छन् । तिनले भने, 'आउनुहोस् मेरो निम्ति याकूबलाई सराप दिनुहोस् ।' 'आउनुहोस्, इस्राएललाई धम्की दिनुहोस् ।'
8 ದೇವರು ಶಪಿಸದವನನ್ನು ನಾನು ಹೇಗೆ ಶಪಿಸಲಿ? ಯೆಹೋವನು ಎದುರಿಸದವನನ್ನು ನಾನು ಹೇಗೆ ಎದುರಿಸಲಿ?
परमेश्‍वरले नै सराप नदिनुभएकालाई मैले कसरी सराप दिन सक्छु? परमप्रभुले नै विरोध नगर्नुभएकाहरूलाई मैले कसरी विरोध गर्न सक्छु?
9 ಬಂಡೆಗಳ ಶಿಖರದಿಂದ ನಾನು ಅವರನ್ನು ನೋಡುತ್ತೇನೆ; ಗುಡ್ಡದಿಂದ ಅವರನ್ನು ದೃಷ್ಟಿಸುತ್ತೇನೆ. ಆ ಜನಾಂಗವು ಪ್ರತ್ಯೇಕವಾಗಿ ವಾಸಿಸುವುದು. ಆ ಜನಾಂಗವು ಇತರ ಜನಾಂಗಗಳಂತೆ ಸಾಧಾರಣ ಜನರೆಂದು ಎಣಿಸಲ್ಪಡುವುದಿಲ್ಲ.
म तिनलाई पहाडको चुचुरोबाट देख्छु; म तिनलाई पहाडबाट हेर्छु । हेर्नुहोस्, एक्लै बस्‍ने मानिसहरू र आफूलाई साधारण जातिको रूपमा ठान्दैनन् ।
10 ೧೦ ಯಾಕೋಬನ ಧೂಳನ್ನು ಲೆಕ್ಕಿಸುವುದಕ್ಕೆ ಯಾರಿಂದಾದಿತು? ಇಸ್ರಾಯೇಲಿನ ನಾಲ್ಕನೆಯ ಒಂದು ಭಾಗವನ್ನಾದರೂ ಲೆಕ್ಕಿಸುವುದಕ್ಕೆ ಯಾರಿಂದಾದಿತು? ನೀತಿವಂತನು ಸಾಯುವಂತೆ ನಾನು ಸಾಯಬೇಕು. ಅವರಿಗುಂಟಾಗುವ ಅವಸಾನವು ನನಗೂ ಆಗಬೇಕು!” ಎಂದನು.
याकूबको धूलोलाई वा इस्राएलको एक चौथाइलाई मात्र पनि कसले गन्‍न सक्छ? मेरो मरण धार्मिक व्यक्‍तिको जस्तो होस् र मेरो जीवन त्यसको जस्तै होस्!”
11 ೧೧ ಬಾಲಾಕನು ಬಿಳಾಮನಿಗೆ, “ನೀನು ನನಗೆ ಮಾಡಿದ್ದೇನು? ನನ್ನ ಶತ್ರುಗಳನ್ನು ಶಪಿಸುವುದಕ್ಕೆ ಕರೆಯಿಸಿದೆನು. ನೀನು ಅವರನ್ನು ಶಪಿಸದೆ ಆಶೀರ್ವಾದವನ್ನೇ ಮಾಡಿದೆ” ಎಂದು ಹೇಳಿದನು.
बालाकले बालामलाई भने, “तपाईंले मलाई के गर्नुभएको? मेरा शत्रुहरूलाई सराप दिनुहोस् भनी मैले तपाईंलाई ल्याएँ, तर हे्र्नुहोस्, तपाईंले त तिनीहरूलाई आशिष् दिनुभयो ।”
12 ೧೨ ಅದಕ್ಕೆ ಬಿಳಾಮನು, “ಯೆಹೋವನು ಹೇಳುವ ಮಾತನ್ನೇ ನಾನು ಹೇಳಬೇಕಾಗಿದೆಯಲ್ಲವೇ?” ಎಂದನು.
बालामले जवाफ दिए र भने, “के परमप्रभुले मेरो मुखमा जे हाल्नुहुन्छ सो मात्र भन्‍न म सावधान हुनुपर्दैन र?”
13 ೧೩ ಆಗ ಬಾಲಾಕನು, “ದಯಮಾಡಿ ನನ್ನ ಕೂಡ ಇನ್ನೊಂದು ಸ್ಥಳಕ್ಕೆ ಬಾ. ಅಲ್ಲಿಂದ ಅವರನ್ನು ನೋಡಬಹುದು. ಆದರೆ ಅವರೆಲ್ಲರನ್ನು ನೋಡದೆ ಸಮೀಪದಲ್ಲಿ ಇರುವವರನ್ನು ಮಾತ್ರ ನೋಡುವಿ. ಅಲ್ಲಿ ನನಗಾಗಿ ಅವರನ್ನು ಶಪಿಸಬೇಕು” ಎಂದನು.
बालाकले तिनलाई भने, “कृपया मसँग अर्को ठाउँमा आउनुहोस् जहाँबाट तपाईंले तिनीहरूलाई देख्‍न सक्‍नुहुन्छ । तपाईंले तिनीहरूलाई नजिकको मात्र देख्‍नुहुने छ, तर तिनीहरू सबैलाई देख्‍नुहुने छैन । तपाईंले तिनीहरूलाई त्यहाँबाट सराप दिनुहुने छ ।”
14 ೧೪ ಹೀಗೆ ಬಾಲಾಕನು ಬಿಳಾಮನನ್ನು ಪಿಸ್ಗಾ ಬೆಟ್ಟದ ತುದಿಯಲ್ಲಿರುವ ಚೋಫೀಮ್ ಬಯಲು ಎಂಬ ಸ್ಥಳಕ್ಕೆ ಕರೆದುಕೊಂಡು ಹೋಗಿ ಅಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಪ್ರತಿಯೊಂದು ಯಜ್ಞವೇದಿಯಲ್ಲಿ ಒಂದು ಹೋರಿಯನ್ನೂ, ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
त्यसैले तिनले बालामलाई सोफीमको मैदानमा भएको पिसगाको टाकुरामा लगे, र अरू सातवटा वेदी बनाए । तिनले हरेकमा एउटा-एउटा साँढे र भेडा बलि चढाए ।
15 ೧೫ ಬಿಳಾಮನು ಬಾಲಾಕನಿಗೆ, “ನೀನು ಇಲ್ಲೇ ಸರ್ವಾಂಗಹೋಮ ಮಾಡಿರುವ ಸ್ಥಳದಲ್ಲಿ ನಿಂತುಕೋ. ನಾನು ಆ ಕಡೆಗೆ ಹೋಗಿ ಯೆಹೋವನನ್ನು ಎದುರುಗೊಳ್ಳುವೆನು” ಎಂದು ಹೇಳಿದನು.
त्यसपछि बालामले बालाकलाई भने, “यहीँ नै तपाईंको बलिदानको छेउमा उभिनुहोस्, म परमप्रभुलाई भेट्न जान्छु ।”
16 ೧೬ ಯೆಹೋವನು ಬಿಳಾಮನಿಗೆ ಎದುರಾಗಿ ಬಂದು ಅವನು ಹೇಳಬೇಕಾದ ಮಾತನ್ನು ಕಲಿಸಿಕೊಟ್ಟನು. ಆಗ ಅವನು ಹೇಳಿದ್ದೇನೆಂದರೆ, “ನೀನು ಬಾಲಾಕನ ಬಳಿಗೆ ತಿರುಗಿ ಹೋಗಿ ಹೀಗೆ ಹೇಳಬೇಕು” ಎಂದನು.
त्यसैले परमप्रभुले बालामलाई भेट्नुभयो र तिनको मुखमा सन्देश हालिदिनुभयो । तिनले भने, “बालाककहाँ जा र तिनलाई मेरो सन्देश दे ।”
17 ೧೭ ಬಿಳಾಮನು ಬಾಲಾಕನ ಬಳಿಗೆ ಬಂದಾಗ ಬಾಲಾಕನು ತಾನು ಸರ್ವಾಂಗಹೋಮವನ್ನು ಸಮರ್ಪಿಸಿದ ವೇದಿಯ ಹತ್ತಿರ ನಿಂತಿದ್ದನು. ಮೋವಾಬ್ಯರ ಪ್ರಧಾನರು ಅವನ ಸಂಗಡ ಇದ್ದರು. ಬಾಲಾಕನು, “ಯೆಹೋವನು ಏನು ಹೇಳಿದ್ದಾನೆ?” ಎಂದನು.
बालाम तिनीकहाँ फर्केर आए र तिनी आफ्नो होमबलिको छेउमा उभिरहेका थिए र मोआबका अगुवाहरू तिनीसँग थिए । अनि बालाकले तिनलाई भने, “परमप्रभुले के भन्‍नुभयो?”
18 ೧೮ ಬಿಳಾಮನು ಪದ್ಯರೂಪವಾಗಿ ಪ್ರವಾದಿಸಿದ್ದೇನೆಂದರೆ, “ಬಾಲಾಕನೇ, ಎದ್ದು ಕಿವಿಗೊಟ್ಟು ಕೇಳು. ಚಿಪ್ಪೋರನ ಮಗನೇ, ನನ್ನ ಮಾತನ್ನು ಲಾಲಿಸು.
बालामले अगमवाणी गर्न थाले, “उठ् बालाक र सुन् । हे सिप्पोरका छोरा मेरो कुरा सुन् ।
19 ೧೯ ದೇವರು ಮನುಷ್ಯನಂತೆ ಎರಡು ಮಾತಿನವನಲ್ಲ. ಮಾನವನಂತೆ ಮನಸ್ಸನ್ನು ಬದಲಾಯಿಸುವವನಲ್ಲ. ತಾನು ಹೇಳಿದ ಪ್ರಕಾರ ನಡೆಯದಿರುತ್ತಾನೆಯೇ? ಮಾತುಕೊಟ್ಟ ನಂತರ ನೆರವೇರಿಸುವುದಿಲ್ಲವೋ?
परमेश्‍वर मानिस वा मानव हुनुहुन्‍न कि उहाँले ढाँट्नुपरोस्, उहाँले आफ्नो मन बदल्नुपरोस् । के उहाँले पुरा नगर्ने गरी कुनै कुरा प्रतिज्ञा गर्नुभएको छ? के उहाँले कुनै गर्छु भनेर पुरा गर्नुभएको छैन र?
20 ೨೦ ಅವರನ್ನು ಆಶೀರ್ವದಿಸುವುದಕ್ಕೆ ನನಗೆ ಅಪ್ಪಣೆಯಾಯಿತು. ಆತನು ಆಶೀರ್ವದಿಸಿದ ನಂತರ ನಾನು ಬದಲಾಯಿಸಲಾರೆನು.
हेर्नुहोस्, आशिष् दिने आज्ञा मलाई दिइएको छ । परमेश्‍वरले आशिष् दिनुभएको छ र म यसलाई उल्टाउन सक्दिनँ ।
21 ೨೧ ಈ ಯಾಕೋಬನಲ್ಲಿ ಯಾವ ಆಪತ್ತಿನ ಸೂಚನೆಯೂ ಕಾಣುವುದಿಲ್ಲ ಅಥವಾ ಇಸ್ರಾಯೇಲರಿಗೆ ಯಾವ ವಿಪತ್ತಿನ ಸೂಚನೆಯೂ ತೋರುವುದಿಲ್ಲ. ಅವರಿಗೆ ದೇವರಾಗಿರುವ ಯೆಹೋವನು ಅವರ ಸಂಗಡ ಇದ್ದಾನೆ, ಅವರು ತಮ್ಮ ಅರಸನಿಗಾಗಿ ಮಾಡುವ ಜಯ ಘೋಷವು ಕೇಳಿಸುತ್ತ ಇದೆ.
उहाँले याकूबसँग कुनै कठिनाइ वा इस्राएलमा कुनै कष्‍ट देख्‍नुभएको छैन । परमप्रभु तिनीहरूका परमेश्‍वर तिनीहरूसँग हुनुहुन्छ र तिनीहरूका राजाको जय-ध्वनि तिनीहरूमाझ छ ।
22 ೨೨ ಅವರನ್ನು ಐಗುಪ್ತ ದೇಶದಿಂದ ಕರೆದುಕೊಂಡು ಬಂದವನು ದೇವರೇ, ಅವರು ಕಾಡುಕೋಣದಷ್ಟು ಬಲವುಳ್ಳವರು.
परमेश्‍वरले तिनीहरूलाई जङ्गली गोरुको जस्तै शक्‍तिले मिश्रबाट ल्याउनुभयो ।
23 ೨೩ ಯಾಕೋಬರಿಗೆ ವಿರುದ್ಧವಾದ ಶಕುನವಿಲ್ಲ, ಇಸ್ರಾಯೇಲರಲ್ಲಿ ಕಣಿ ಕೇಳುವುದಿಲ್ಲ. ಬದಲಾಗಿ, ಯಾಕೋಬ ಮತ್ತು ಇಸ್ರಾಯೇಲರ ವಿಷಯದಲ್ಲಿ ಹೀಗೆ ಹೇಳುವರು. ‘ದೇವರು ಮಾಡುವ ಕೆಲಸವನ್ನು ನೋಡಿರಿ!’
याकूब विरुद्ध कुनै टुनामुनाले काम गर्दैन र इस्राएललाई कुनै जोखनाले हानि पुर्‍याउँदैन । बरु, याकूब र इस्राएलबारे यसो भन्‍नुपर्छ, 'हेर, परमेश्‍वरले के गर्नुभएको छ!'
24 ೨೪ ಇಗೋ, ಜನಾಂಗದವರು ಎದ್ದು ಪ್ರಾಯದ ಸಿಂಹದಂತೆ ನಿಂತಿದ್ದಾರೆ; ಸಿಂಹವು ಮೃಗವನ್ನು ಕೊಂದು ಮಾಂಸವನ್ನು ತಿಂದು ತೃಪ್ತಿಹೊಂದದ ಹೊರತು ಮಲಗುವುದಿಲ್ಲ ತಾನು ಬೇಟೆಯಾಡಿದ ರಕ್ತವನ್ನು ಕುಡಿದು ಮಲಗುವುದು.”
हेर, मानिसहरू सिंहनीजस्तै उठ्छन्, सिंहजस्तै उठ्छन् र आक्रमण गर्छन् । त्यो आफ्नो सिकारलाई नखाएसम्म र त्यसले मारेको सिकारको रगत नपिएसम्म आराम गर्दैन ।”
25 ೨೫ ಆಗ ಬಾಲಾಕನು ಬಿಳಾಮನಿಗೆ, “ನೀನು ಅವರನ್ನು ಶಪಿಸಲೂ ಬೇಡ; ಆಶೀರ್ವದಿಸಲೂ ಬೇಡ” ಎಂದು ಹೇಳಿದನು.
त्यसपछि बालाकले बालामलाई भने, “तिनीहरूलाई सराप नदिनुहोस् वा आशिष् पनि नदिनुहोस् ।”
26 ೨೬ ಅದಕ್ಕೆ ಬಿಳಾಮನು ಬಾಲಾಕನಿಗೆ ಉತ್ತರವಾಗಿ, “ಯೆಹೋವನು ಆಜ್ಞಾಪಿಸುವುದನ್ನೆಲ್ಲಾ ನಾನು ಹೇಳಬೇಕೆಂದು ನಿನಗೆ ಹೇಳಲಿಲ್ಲವೇ?” ಎಂದನು.
तर बालामले जवाफ दिए र भने, “के परमप्रभुले भन्‍नलाई बताउनुभएको कुरा मात्र मैले भन्‍नुपर्छ भनी मैले भनेको थिइनँ र?”
27 ೨೭ ತರುವಾಯ ಬಾಲಾಕನು ಬಿಳಾಮನಿಗೆ, “ಬೇರೊಂದು ಸ್ಥಳಕ್ಕೆ ನಿನ್ನನ್ನು ಕರೆದುಕೊಂಡು ಹೋಗುತ್ತೇನೆ ಬಾ; ಅಲ್ಲಿಯಾದರೂ ನೀನು ಅವರನ್ನು ಶಪಿಸುವುದಕ್ಕೆ ದೇವರು ಅನುಮತಿ ಕೊಡಬಹುದು” ಎಂದು ಹೇಳಿದನು.
त्यसैले बालाकले बालामलाई जावाफ दिए, “अब आउनुहोस्, म तपाईंलाई अर्को ठाउँमा लैजान्छु । सायद त्यहाँबाट मेरो निम्ति तिनीहरूलाई सराप दिन परमेश्‍वरले इच्छा गर्नुहुने छ ।”
28 ೨೮ ಆದಕಾರಣ ಬಾಲಾಕನು ಬಿಳಾಮನನ್ನು ಪೆಗೋರ್ ಎಂಬ ಬೆಟ್ಟದ ತುದಿಗೆ ಕರೆದುಕೊಂಡು ಹೋದನು. ಆ ಬೆಟ್ಟದ ಮೇಲಿನಿಂದ ಕೆಳಗಿರುವ ಯೆಷೀಮೋನ್ ಎಂಬ ಅರಣ್ಯಪ್ರದೇಶವು ಕಾಣಿಸುತ್ತದೆ.
त्यसैले बालाकले बालामलाई पोरको टाकुरामा लगे, जहाँबाट तल मरुभूमि देखिन्छ ।
29 ೨೯ ಆಗ ಬಿಳಾಮನು ಬಾಲಾಕನಿಗೆ, “ಇಲ್ಲಿಯೂ ಏಳು ಯಜ್ಞವೇದಿಗಳನ್ನು ಕಟ್ಟಿಸಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ ಸಿದ್ಧಮಾಡು” ಎಂದು ಹೇಳಿದನು
बालामले बालाकलाई भने, “यहाँ सातवटा वेदी बनाउनुहोस् अनि सातवटा साँढे र भेडा तयार पार्नुहोस् ।”
30 ೩೦ ಬಿಳಾಮನ ಅಪ್ಪಣೆಯ ಪ್ರಕಾರ ಬಾಲಾಕನು ಪ್ರತಿಯೊಂದು ಯಜ್ಞ ವೇದಿಯಲ್ಲಿ ಒಂದು ಹೋರಿಯನ್ನೂ. ಒಂದು ಟಗರನ್ನೂ ಸರ್ವಾಂಗಹೋಮವಾಗಿ ಸಮರ್ಪಿಸಿದನು.
बालाकले बालामले भनेबमोजिम गरे; तिनले हरेक वेदीमा एउटा-एउटा साँढे र भेडा बलि चढाए ।

< ಅರಣ್ಯಕಾಂಡ 23 >