< ಅರಣ್ಯಕಾಂಡ 32 >

1 ರೂಬೇನ್ ಕುಲದವರಿಗೂ, ಗಾದ್ ಕುಲದವರಿಗೂ ಬಹಳ ದನಕುರಿಗಳಿದ್ದವು. ಯಗ್ಜೇರ್, ಗಿಲ್ಯಾದ್ ಎಂಬ ಪ್ರದೇಶವನ್ನು ನೋಡಿದಾಗ ಅವು ದನಕುರಿಗಳ ಮೇವಿಗೆ ತಕ್ಕ ಸ್ಥಳವೆಂದು ತಿಳಿದುಕೊಂಡರು.
రూబేనీయులకు, గాదీయులకు, పశువులు అతి విస్తారంగా ఉండడం వలన యాజెరు, గిలాదు ప్రాంతాలు మందలకు తగిన స్థలమని వారు గ్రహించారు.
2 ಗಾದ್ ಮತ್ತು ರೂಬೇನ್ ಸಂತತಿಯವರು ಮೋಶೆ ಮತ್ತು ಮಹಾಯಾಜಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ,
వారు మోషేతో, యాజకుడు ఎలియాజరుతో సమాజ నాయకులతో
3 “ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್,
“అతారోతు, దీబోను, యాజెరు, నిమ్రా, హెష్బోను, ఏలాలే, షెబాము, నెబో, బెయోను అనే ప్రాంతాలు,
4 ಇವು ಯೆಹೋವನು ಇಸ್ರಾಯೇಲರ ಸಮೂಹಕ್ಕೆ ಅಧೀನಪಡಿಸಿದ ಪಟ್ಟಣಗಳು. ದನಕುರಿಗಳ ಮೇವಿಗೆ ತಕ್ಕ ಪ್ರದೇಶವಾಗಿದೆ. ನಿಮ್ಮ ದಾಸರಾದ ನಮಗೆ ಬಹಳ ದನ ಕುರಿಗಳುಂಟು.
అంటే ఇశ్రాయేలు ప్రజలందరి ఎదుట యెహోవా జయించిన దేశం పశువుల మందలకు అనువైంది. మీ సేవకులైన మాకు మందలు ఉన్నాయి.
5 ಆದಕಾರಣ ನೀವು, ದಾಸರಾದ ನಮ್ಮ ಮೇಲೆ ದಯೆ ಇಟ್ಟು ನಮ್ಮನ್ನು ಯೊರ್ದನ್ ನದಿಯ ಆಚೆಗೆ ಬರಮಾಡಿದ ಈ ಪ್ರದೇಶವನ್ನೇ ಸ್ವತ್ತಾಗಿ ಕೊಡಬೇಕು” ಎಂದು ಕೇಳಿಕೊಂಡರು.
కాబట్టి మా మీద మీకు దయ కలిగితే, మమ్మల్ని యొర్దాను నది దాటించవద్దు. మాకు ఈ దేశాన్ని వారసత్వంగా ఇవ్వండి” అన్నారు.
6 ಮೋಶೆಯು ಗಾದ್ ಮತ್ತು ರೂಬೇನ್ ಸಂತಾನದವರಿಗೆ, “ನಿಮ್ಮ ಸಹೋದರರು ಯದ್ಧಕ್ಕೆ ಹೋಗುವಾಗ ನೀವು ಅಲ್ಲೇ ಕುಳಿತುಕೊಂಡಿರಬೇಕೇನು?
అప్పుడు మోషే గాదీయులకు, రూబేనీయులకు ఇలా జవాబిచ్చాడు. “మీ సోదరులు యుద్ధాలు చేస్తూ ఉంటే మీరు ఇక్కడే ఉండిపోవచ్చా?
7 ಯೆಹೋವನು ಇಸ್ರಾಯೇಲರಿಗೆ ಕೊಟ್ಟ ದೇಶಕ್ಕೆ ಅವರು ಹೋಗದಂತೆ ನೀವು ಏಕೆ ಅವರಿಗೆ ಅಧೈರ್ಯವನ್ನು ಹುಟ್ಟಿಸುತ್ತೀರಿ?
యెహోవా ఇశ్రాయేలు ప్రజలకు ఇచ్చిన దేశానికి వెళ్ళకుండా మీరు వారి హృదయాలను ఎందుకు నిరుత్సాహ పరుస్తున్నారు?
8 ಆ ದೇಶವನ್ನು ನೋಡಿಕೊಂಡು ಬರುವುದಕ್ಕೆ ನಾನು ಕಾದೇಶ್ ಬರ್ನೇಯದಿಂದ ನಿಮ್ಮ ತಂದೆಯರನ್ನು ಕಳುಹಿಸಿದಾಗ ಅವರೂ ಹಾಗೆಯೇ ಮಾಡಿದರು.
ఆ దేశాన్ని చూసి రావడానికి కాదేషు బర్నేయలో నేను మీ తండ్రులను పంపినప్పుడు వారు కూడా ఇలాగే చేశారు కదా.
9 ಅವರು ಎಷ್ಕೋಲ್ ತಗ್ಗಿಗೆ ಬಂದು ಆ ದೇಶವನ್ನು ನೋಡಿ ಇಸ್ರಾಯೇಲರಿಗೆ ಅಧೈರ್ಯವನ್ನು ಹುಟ್ಟಿಸಿದ್ದರಿಂದ ಇಸ್ರಾಯೇಲರು ತಮಗೆ ಯೆಹೋವನು ವಾಗ್ದಾನಮಾಡಿದ ದೇಶಕ್ಕೆ ಹೋಗಲು ಆಗಲಿಲ್ಲ.
వారు ఎష్కోలు లోయలోకి వెళ్లి ఆ దేశాన్ని చూసి ఇశ్రాయేలు ప్రజలను అధైర్యపరిచారు కాబట్టి యెహోవా తమకిచ్చిన దేశంలో ప్రవేశించలేకపోయారు.
10 ೧೦ ಆ ಕಾಲದಲ್ಲಿ ಯೆಹೋವನು ಕೋಪಗೊಂಡವನಾಗಿ ಪ್ರಮಾಣಮಾಡಿ,
౧౦ఆ రోజు యెహోవా కోపం తెచ్చుకున్నాడు.
11 ೧೧ ‘ಐಗುಪ್ತ ದೇಶದೊಳಗಿಂದ ಬಂದ ಈ ಜನರೊಳಗೆ ಯಾರೂ ನನ್ನನ್ನು ಪೂರ್ಣಮನಸ್ಸಿನಿಂದ ಅನುಸರಿಸದೆ ಹೋದುದರಿಂದ ನಾನು ಅಬ್ರಹಾಮ್, ಇಸಾಕ್, ಯಾಕೋಬರಿಗೆ ಪ್ರಮಾಣ ಪೂರ್ವಕವಾಗಿ ಕೊಟ್ಟ ದೇಶವನ್ನು, ಅವರೊಳಗೆ ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ವಯಸ್ಸಿನವರಲ್ಲಿ
౧౧ఇరవై సంవత్సరాలకు మించి, ఐగుప్తుదేశం నుండి వచ్చిన మనుషుల్లో యెహోవాను పూర్ణ మనస్సుతో అనుసరించిన కెనెజీయుడు, యెఫున్నె కొడుకు కాలేబు, నూను కొడుకు యెహోషువ తప్ప
12 ೧೨ ಕೆನಿಜ್ಜೀಯನಾದ ಯೆಫುನ್ನೆಯ ಮಗನಾದ ಕಾಲೇಬನೂ ಮತ್ತು ನೂನನ ಮಗನಾದ ಯೆಹೋಶುವನೂ ಇವರಿಬ್ಬರೇ ಹೊರತು ಯಾರೂ ನೋಡುವುದೇ ಇಲ್ಲ’” ಎಂದು ಖಂಡಿತವಾಗಿ ಹೇಳಿದನು.
౧౨మరి ఎవ్వడూ పూర్ణమనస్సుతో నన్ను అనుసరించలేదు కాబట్టి నేను అబ్రాహాము, ఇస్సాకు, యాకోబులకు ఇస్తానని ప్రమాణం చేసిన దేశాన్ని మరి ఎవరూ చూడనే చూడరు, అని శపథం చేశాడు.
13 ೧೩ ಯೆಹೋವನು ಇಸ್ರಾಯೇಲರ ಮೇಲೆ ಕೋಪಗೊಂಡವನಾಗಿ ತನ್ನ ದೃಷ್ಟಿಯಲ್ಲಿ ಕೆಟ್ಟ ನಡತೆಯುಳ್ಳ ಆ ಸಂತತಿಯವರೆಲ್ಲರೂ ನಾಶವಾಗುವ ತನಕ ನಲ್ವತ್ತು ವರ್ಷ, ಇಸ್ರಾಯೇಲರನ್ನು ಮರುಭೂಮಿಯಲ್ಲೇ ತಿರುಗಾಡುವಂತೆ ಮಾಡಿದನು.
౧౩అప్పుడు ఇశ్రాయేలు ప్రజల మీద యెహోవా కోపం రగులుకోవడం వల్ల ఆయన దృష్ఠికి చెడుతనం చూపిన ఆ తరం వారంతా నాశనం అయ్యే వరకూ వారిని అరణ్యంలో తిరిగేలా చేశాడు.
14 ೧೪ “ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.
౧౪ఇప్పుడు ఇశ్రాయేలు ప్రజల మీద యెహోవాకు మరింత కోపం పుట్టించేలా ఆ పాపుల పిల్లలైన మీరు వారి స్థానంలో బయలుదేరారు.
15 ೧೫ ನೀವು ಆತನನ್ನು ಹಿಂಬಾಲಿಸದೆ ಇರುವ ಕಾರಣ ಆತನು ಆ ಜನರನ್ನು ಮರುಭೂಮಿಯಲ್ಲಿ ಇರಿಸಿದರೆ, ಈ ಸಮಸ್ತ ಜನಾಂಗವನ್ನು ನೀವೇ ನಾಶ ಮಾಡುವಿರಿ” ಎಂದು ಹೇಳಿದನು.
౧౫మీరు ఆయన్ని అనుసరించకుండా వెనక్కి తగ్గిపోతే ఆయన ఈ ప్రజలందరినీ ఈ అడవిలోనే నిలిపివేస్తాడు. ఆ విధంగా మీరు ఈ ప్రజలందరి నాశనానికి కారకులౌతారు.”
16 ೧೬ ಆಗ ಅವರು ಮೋಶೆಯ ಬಳಿಗೆ ಬಂದು, “ನಾವು ಇಲ್ಲಿ ನಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ, ನಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನು ಕಟ್ಟಿಕೊಳ್ಳುವೆವು.
౧౬అందుకు వారు అతనితో “మేము ఇక్కడ మా పశువుల కోసం దొడ్లూ, మా పిల్లల కోసం ఊరులూ కట్టుకుంటాం.
17 ೧೭ ನಾವಾದರೋ ಇಸ್ರಾಯೇಲರನ್ನು ಅವರವರ ಸ್ಥಳಗಳಿಗೆ ಸೇರಿಸುವವರೆಗೂ ಯುದ್ಧಕ್ಕೆ ಸನ್ನದ್ಧರಾಗಿ ಅವರ ಮುಂದೆ ನಡೆಯುವೆವು. ಅಷ್ಟರಲ್ಲಿ ನಮ್ಮ ಕುಟುಂಬಗಳವರು ಈ ದೇಶದ ನಿವಾಸಿಗಳ ಭಯದ ದೆಸೆಯಿಂದ ಕೋಟೆಕೋತ್ತಲುಗಳುಳ್ಳ ಊರುಗಳಲ್ಲಿ ವಾಸಿಸಲಿ.
౧౭ఇశ్రాయేలు ప్రజలను వారివారి స్థలాలకు చేర్చే వరకూ మేము యుద్ధానికి సిద్ధపడి వారి ముందు సాగిపోతాం. అయితే మా పిల్లలు ఈ ప్రాంత ప్రజల భయం వలన ప్రాకారాలున్న ఊర్లలో నివసించాలి.
18 ೧೮ ಇಸ್ರಾಯೇಲರೆಲ್ಲರೂ ತಮ್ಮ ತಮ್ಮ ಸ್ವತ್ತುಗಳನ್ನು ಸ್ವತಂತ್ರಿಸಿಕೊಳ್ಳುವ ವರೆಗೂ ನಾವು ನಮ್ಮ ಮನೆಗಳಿಗೆ ತಿರುಗಿ ಹೋಗುವುದಿಲ್ಲ.
౧౮ఇశ్రాయేలీయుల్లో ప్రతివాడూ తన తన వారసత్వాన్ని పొందేవరకూ మా ఇళ్ళకు తిరిగి రాము.
19 ೧೯ ನಮಗೆ ಯೊರ್ದನ್ ನದಿಯ ಆಚೆ ಪೂರ್ವ ದಿಕ್ಕಿನಲ್ಲಿ ಸ್ವತ್ತನ್ನು ಅಪೇಕ್ಷಿಸುವುದಿಲ್ಲ” ಎಂದರು.
౧౯తూర్పున యొర్దాను ఇవతల మాకు వారసత్వం దొరికింది కాబట్టి ఇక యొర్దాను అవతల వారితో వారసత్వం అడగం” అన్నారు.
20 ೨೦ ಅದಕ್ಕೆ ಮೋಶೆ ಅವರಿಗೆ, “ನೀವು ಯೆಹೋವನ ಮಾತಿನಂತೆ ನಡೆದರೆ ನಿಮ್ಮಲ್ಲಿರುವ ಭಟರೆಲ್ಲರೂ ಯುದ್ಧಸನ್ನದ್ಧರಾಗಿ,
౨౦అప్పుడు మోషే వారితో “మీరు మీ మాట మీద నిలబడి యెహోవా సన్నిధిలో యుద్ధానికి సిద్ధపడి యెహోవా తన ఎదుటనుండి తన శత్రువులను వెళ్లగొట్టే వరకూ
21 ೨೧ ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ
౨౧యెహోవా సన్నిధిలో మీరంతా యొర్దాను అవతలికి వెళ్ళి
22 ೨೨ ಯುದ್ಧಮಾಡಿ ತರುವಾಯ ನೀವು ತಿರುಗಿ ಬಂದು ಆತನ ದೃಷ್ಟಿಯಲ್ಲೂ, ಇಸ್ರಾಯೇಲರ ದೃಷ್ಟಿಯಲ್ಲೂ ನಿರ್ದೋಷಿಗಳಾಗಿರುವಿರಿ ಮತ್ತು ಈ ದೇಶವು ಯೆಹೋವನ ಸನ್ನಿಧಿಯಲ್ಲೇ ನಿಮಗೆ ಸ್ವತ್ತಾಗಿರುವುದು.
౨౨ఆ దేశాన్ని జయించిన తరవాత మీరు తిరిగి రావచ్చు. మీరు యెహోవా దృష్టికీ ఇశ్రాయేలీయుల దృష్టికీ నిర్దోషులుగా ఉంటారు. అప్పుడు ఈ దేశం యెహోవా సన్నిధిలో మీకు వారసత్వం అవుతుంది.
23 ೨೩ “ಆದರೆ ನೀವು ಹಾಗೆ ಮಾಡದೆ ಹೋದರೆ, ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದವರಾಗುವಿರಿ ಮತ್ತು ನಿಮ್ಮ ಪಾಪವು ನಿಮ್ಮನ್ನು ಹಿಡಿಯುವ ತನಕ ಹುಡುಕಿಕೊಂಡೇ ಬರುವುದು ಎಂದು ತಿಳಿದುಕೊಳ್ಳಿರಿ.
౨౩మీరు అలా చేయకపోతే యెహోవా దృష్టికి పాపం చేసిన వారవుతారు కాబట్టి మీ పాపం మిమ్మల్ని పట్టుకొంటుందని తెలుసుకోండి.
24 ೨೪ ನೀವು ನಿಮ್ಮ ಕುಟುಂಬಗಳಿಗೋಸ್ಕರ ಊರುಗಳನ್ನೂ, ದನಕುರಿಗಳಿಗೋಸ್ಕರ ದೊಡ್ಡಿಗಳನ್ನೂ ಕಟ್ಟಿಕೊಂಡ ತರುವಾಯ ನಿಮ್ಮ ಮಾತಿನ ಪ್ರಕಾರ ಮಾಡಿರಿ” ಎಂದನು.
౨౪మీరు మీ పిల్లల కోసం ఊర్లను, మీ పశువుల కోసం దొడ్లను కట్టుకుని మీరు చెప్పిన ప్రకారం చేయండి అన్నాడు.”
25 ೨೫ ಅದಕ್ಕೆ ಗಾದ್ಯರೂ ಮತ್ತು ರೂಬೇನ್ಯರೂ ಮೋಶೆಗೆ, “ಸ್ವಾಮಿಯವರ ಅಪ್ಪಣೆಯ ಪ್ರಕಾರ ದಾಸರಾದ ನಾವು ಮಾಡುತ್ತೇವೆ ಎಂದರು.
౨౫అందుకు గాదీయులు, రూబేనీయులు మోషేతో “మా యజమానివి నువ్వు ఆజ్ఞాపించినట్టు నీ సేవకులైన మేము చేస్తాం.
26 ೨೬ ನಮ್ಮ ಮಕ್ಕಳು, ಹೆಂಡತಿಯರೂ, ದನಕುರಿಗಳು ನಮ್ಮ ಸಂಪತ್ತು ಇಲ್ಲೇ ಗಿಲ್ಯಾದ್ ದೇಶದ ಊರುಗಳಲ್ಲಿ ಇರಲಿ.
౨౬మా పిల్లలు, భార్యలు, మా ఆవుల మందలు గిలాదు ఊళ్ళలో ఉంటారు.
27 ೨೭ ನಿನ್ನ ದಾಸರಾದ ನಮ್ಮಲ್ಲಿ ಯುದ್ಧಸನ್ನದ್ಧರೆಲ್ಲರೂ ಸ್ವಾಮಿಯವರ ಅಪ್ಪಣೆಯ ಪ್ರಕಾರ ಯೆಹೋವನ ಮುಂದುಗಡೆಯಲ್ಲಿ ಹೊರಟು ನದಿಯನ್ನು ದಾಟಿ ಯುದ್ಧಮಾಡುವೆವು” ಎಂದು ಉತ್ತರ ಕೊಟ್ಟರು.
౨౭నీ సేవకులైన మేము, అంటే మా సైన్యంలో ప్రతి యోధుడు మా యజమానివి నువ్వు చెప్పినట్టు యెహోవా సన్నిధిలో యుద్ధం చేయడానికి యొర్దాను అవతలికి వస్తాము” అన్నారు.
28 ೨೮ ಆದಕಾರಣ ಮೋಶೆ ಅವರ ವಿಷಯವಾಗಿ ಮಹಾಯಾಜಕ ಎಲ್ಲಾಜಾರನಿಗೂ, ನೂನನ ಮಗನಾದ ಯೆಹೋಶುವನಿಗೂ ಇಸ್ರಾಯೇಲರ ಮತ್ತು ಗೋತ್ರಗಳ ಕುಲಾಧಿಪತಿಗಳಿಗೂ ಆಜ್ಞೆಮಾಡಿದನು.
౨౮కాబట్టి మోషే వారిని గురించి యాజకుడైన ఎలియాజరుకు, నూను కుమారుడు యెహోషువకు, ఇశ్రాయేలు గోత్రాల్లో పూర్వీకుల వంశాల నాయకులకు ఇలా ఆజ్ఞాపించాడు,
29 ೨೯ ಮೋಶೆಯು ಅವರಿಗೆ, “ಗಾದ್ಯರಲ್ಲಿಯೂ, ರೂಬೇನ್ಯರಲ್ಲಿಯೂ ಯುದ್ಧಸನ್ನದ್ಧರಾದವರೆಲ್ಲರೂ ನಿಮ್ಮೊಡನೆ ಯೊರ್ದನ್ ನದಿಯನ್ನು ದಾಟಿ ಯೆಹೋವನ ಮುಂದೆ ಯುದ್ಧಮಾಡಿದರೆ ಕಾನಾನ್ ದೇಶವನ್ನು ನೀವು ಸ್ವಾಧೀನಮಾಡಿಕೊಂಡಾಗ ನೀವು ಗಿಲ್ಯಾದ್ ಪ್ರದೇಶವನ್ನು ಅವರಿಗೆ ಸ್ವಾಸ್ತ್ಯವಾಗುವುದಕ್ಕೆ ಕೊಡಬೇಕು.
౨౯“గాదీయులు, రూబేనీయులు అందరూ యెహోవా సన్నిధిలో యుద్ధానికి సిద్దపడి మీతో కూడా యొర్దాను అవతలికి వస్తే, ఆ దేశాన్ని మీరు జయించిన తరవాత మీరు గిలాదు దేశాన్ని వారికి వారసత్వంగా ఇవ్వాలి.
30 ೩೦ ಆದರೆ ಅವರು ನಿಮ್ಮೊಡನೆ ಯುದ್ಧಕ್ಕೆ ಹೋಗದಿದ್ದರೆ ಕಾನಾನ್ ದೇಶದಲ್ಲಿಯೇ ಅವರಿಗೆ ಸ್ವಾಸ್ತ್ಯವಾಗಬೇಕು” ಎಂದು ಹೇಳಿದನು.
౩౦కాని వారు యుద్ధానికి సిద్ధపడి మీతో కలిసి అవతలకి రాకపోతే వారు కనాను దేశంలో మీ మధ్యనే వారసత్వం పొందుతారు”
31 ೩೧ ಅದಕ್ಕೆ ಗಾದ್ಯರೂ ರೂಬೇನ್ಯರೂ ಉತ್ತರವಾಗಿ, “ಯೆಹೋವನು ನಿನ್ನ ದಾಸರಾದ ನಮಗೆ ಆಜ್ಞಾಪಿಸಿದಂತೆಯೇ ಮಾಡುವೆವು.
౩౧దానికి గాదీయులు, రూబేనీయులు “యెహోవా నీ సేవకులైన మాతో చెప్పినట్టే చేస్తాం.
32 ೩೨ ನಾವು ಯೆಹೋವನ ಮುಂದೆ ಯುದ್ಧಸನ್ನದ್ಧರಾಗಿ ಕಾನಾನ್ ದೇಶಕ್ಕೆ ಹೊರಡುವೆವು, ಆಗ ಯೊರ್ದನ್ ನದಿಯ ಆಚೆಯೇ ನಮಗೆ ಸ್ವತ್ತು ದೊರಕಬೇಕು” ಎಂದರು.
౩౨మేము యెహోవా సన్నిధిలో యుద్ధానికి సిద్ధపడి నది దాటి కనాను దేశంలోకి వెళ్తాం. అప్పుడు యొర్దాను ఇవతల మేము వారసత్వం పొందుతాం” అని జవాబిచ్చారు.
33 ೩೩ ಹೀಗೆ ಮೋಶೆಯು ಗಾದ್ಯರಿಗೂ, ರೂಬೇನ್ಯರಿಗೂ, ಯೋಸೇಫನ ಮಗನಾದ ಮನಸ್ಸೆಯ ಕುಲದವರಲ್ಲಿ ಅರ್ಧಜನರಿಗೂ, ಅಮೋರಿಯರ ಅರಸನಾದ ಸೀಹೋನನ ರಾಜ್ಯವನ್ನೂ, ಬಾಷಾನಿನ ಅರಸನಾದ ಓಗನ ರಾಜ್ಯವನ್ನೂ, ಅವುಗಳ ಎಲ್ಲಾ ಊರುಗಳನ್ನೂ ಮತ್ತು ಆ ಊರುಗಳಿಗೆ ಸೇರಿದ ಭೂಮಿಗಳನ್ನೂ ಕೊಟ್ಟನು.
౩౩అప్పుడు మోషే వారికి, అంటే గాదీయులకు, రూబేనీయులకు, యోసేపు కుమారుడు మనష్షే అర్థగోత్రం వారికి, అమోరీయుల రాజైన సీహోను రాజ్యాన్ని, బాషాను రాజైన ఓగు రాజ్యాన్ని, వాటి ఊళ్ళన్నిటినీ ఆ దేశాల చుట్టూ ఉన్న గ్రామాలనూ ఇచ్చాడు.
34 ೩೪ ಗಾದ್ಯನ ಮಕ್ಕಳು ದೀಬೋನ್, ಅಟಾರೋತ್, ಅರೋಯೇರ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.
౩౪గాదీయులు దీబోను, అతారోతు, అరోయేరు, అత్రోతు, షోపాను,
35 ೩೫ ಆಟ್ರೋತ್ಷೋಫಾನ್, ಯಗ್ಜೇರ್, ಯೊಗ್ಬೆಹಾ,
౩౫యాజెరు, యొగ్బెహ, బేత్నిమ్రా, బేత్హారాను
36 ೩೬ ಬೇತ್‌ನಿಮ್ರಾ ಮತ್ತು ಬೇತ್ ಹಾರಾನಿನ ಸುತ್ತ ಗೋಡೆಗಳುಳ್ಳ ಊರುಗಳನ್ನು ಹೊಸದಾಗಿ ಕಟ್ಟಿಕೊಂಡರು. ತಮ್ಮ ದನಕುರಿಗಳಿಗೋಸ್ಕರ ದೊಡ್ಡಿಗಳನ್ನು ಕಟ್ಟಿಕೊಂಡರು.
౩౬అనే ఊళ్ళలో ప్రాకారాలు, పశువుల దొడ్లు కట్టుకున్నారు.
37 ೩೭ ರೂಬೇನ್ಯರ ಮಕ್ಕಳು ಹೆಷ್ಬೋನ್, ಎಲೆಯಾಲೆ, ಕಿರ್ಯಾತಯಿಮ್ ಊರುಗಳನ್ನು ಹೊಸದಾಗಿ ಕಟ್ಟಿಸಿದರು.
౩౭రూబేనీయులు హెష్బోను, ఏలాలే, కిర్యతాయిము, నెబో, బయల్మెయోను,
38 ೩೮ ಸಿಬ್ಮಾ ಎಂಬ ಊರುಗಳನ್ನೂ, ಬೇರೆ ಹೆಸರಿನಿಂದ ಉಚ್ಚರಿಸತಕ್ಕ ನೆಬೋ, ಬಾಳ್ಮೆಯೋನ್ ಎಂಬವುಗಳನ್ನೂ ಹೊಸದಾಗಿ ಕಟ್ಟಿ ಅವುಗಳಿಗೆ ಬೇರೆ ಹೆಸರುಗಳನ್ನು ಇಟ್ಟರು.
౩౮షిబ్మా అనే ఊళ్లు కట్టి, వాటికి కొత్త పేర్లు పెట్టారు.
39 ೩೯ ಮನಸ್ಸೆಯ ಮಗನಾದ ಮಾಕೀರನ ವಂಶದವರು ಗಿಲ್ಯಾದಿಗೆ ಹೋಗಿ ಅದನ್ನು ಸ್ವಾಧೀನಮಾಡಿಕೊಂಡು ಅಲ್ಲಿದ್ದ ಅಮೋರಿಯರನ್ನು ಹೊರಡಿಸಿಬಿಟ್ಟರು.
౩౯మనష్షే సంతానం అయిన మాకీరీయులు గిలాదుపై దండెత్తి దాన్ని ఆక్రమించి దానిలోని అమోరీయులను వెళ్లగొట్టారు.
40 ೪೦ ಮೋಶೆಯು ಮನಸ್ಸೆಯ ಮಗನಾದ ಮಾಕೀರನ ಸಂತತಿಯವರಿಗೆ ಗಿಲ್ಯಾದ್ ಪ್ರದೇಶವನ್ನು ಕೊಡಲಾಗಿ ಅವರು ಅಲ್ಲೇ ವಾಸಮಾಡಿಕೊಂಡರು.
౪౦మోషే మనష్షే కొడుకు మాకీరుకు గిలాదును ఇచ్చాడు.
41 ೪೧ ಮನಸ್ಸೆಯ ವಂಶದವನಾದ ಯಾಯೀರನು ಯುದ್ಧಕ್ಕೆ ಹೊರಟು ಅಮೋರಿಯರ ಗ್ರಾಮಗಳನ್ನು ಸ್ವಾಧೀನಮಾಡಿಕೊಂಡು ಅವುಗಳಿಗೆ ಯಾಯೀರನ ಗ್ರಾಮಗಳೆಂದು ಹೆಸರಿಟ್ಟನು.
౪౧అతని సంతానం అక్కడ నివసించింది. మనష్షే కొడుకు యాయీరు వెళ్లి అక్కడి గ్రామాలను ఆక్రమించి వాటికి యాయీరు గ్రామాలు అని పేరు పెట్టాడు.
42 ೪೨ ನೋಬಹನು ಯುದ್ಧಕ್ಕೆ ಹೊರಟು ಕೆನಾತ್ ಎಂಬ ಪಟ್ಟಣವನ್ನೂ ಮತ್ತು ಅದಕ್ಕೆ ಸೇರಿದ ಊರುಗಳನ್ನೂ ಜಯಿಸಿ ಅದಕ್ಕೆ ನೋಬಹ ಎಂದು ತನ್ನ ಹೆಸರನ್ನೇ ಕೊಟ್ಟನು.
౪౨నోబహు వెళ్లి కెనాతును దాని గ్రామాలను ఆక్రమించి దానికి నోబహు అని తన పేరు పెట్టాడు.

< ಅರಣ್ಯಕಾಂಡ 32 >