< ಅರಣ್ಯಕಾಂಡ 35 >

1 ಯೊರ್ದನ್ ನದಿಯ ತೀರದಲ್ಲಿ ಯೆರಿಕೋ ಪಟ್ಟಣದ ಹತ್ತಿರವಿರುವ ಮೋವಾಬ್ಯರ ಮೈದಾನದಲ್ಲಿ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
परमेश्वर मोशेशी बोलला. हे मवाबामधील यार्देनाच्या खोऱ्यात यरीहोसमोर यार्देन नदीजवळ घडले. परमेश्वर म्हणाला,
2 “ಇಸ್ರಾಯೇಲರು ತಾವು ಹೊಂದುವ ಸ್ವತ್ತಿನಲ್ಲಿ ಕೆಲವು ಪಟ್ಟಣಗಳನ್ನೂ, ಆ ಪಟ್ಟಣಗಳ ಸುತ್ತಲಿನ ಭೂಮಿಯನ್ನೂ ಲೇವಿಯರಿಗೆ ವಾಸಕ್ಕಾಗಿ ಕೊಡಬೇಕೆಂದು ಅವರಿಗೆ ಆಜ್ಞಾಪಿಸು.
इस्राएल लोकांस सांग की, त्यांनी त्यांच्या वतनातील काही नगरे लेवी लोकांस द्यावी. इस्राएल लोकांनी काही नगरे आणि त्याच्या आजूबाजूची कुरणे लेवी लोकांस द्यावी.
3 ಆ ಪಟ್ಟಣಗಳು ಲೇವಿಯರ ವಾಸ ಸ್ಥಳವಾಗುವುದು. ಸುತ್ತಲಿರುವ ಭೂಮಿಗಳು ಅವರ ದನಕುರಿಗಳಿಗಾಗಿಯೂ ಮತ್ತು ಪಶುಗಳಿಗಾಗಿಯೂ ಇರುವವು.
लेवी लोक त्या नगरात राहतील आणि लेवी लोकांची कुरणे गाईबैल आणि शेरडेमेंढरे इत्यादी जनावरांसाठी असावीत.
4 ನೀವು ಲೇವಿಯರಿಗೆ ಕೊಡುವ ಪಟ್ಟಣಗಳು ಸುತ್ತಲಿನ ಭೂಮಿಯ ಪ್ರತಿಯೊಂದು ಪಟ್ಟಣಗಳ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.
आणि नगराची जी कुरणे लेव्यांना जी गायराने द्याल ती हजार हात सभोवार असावी.
5 ನೀವು ಪಟ್ಟಣದ ಹೊರಗಡೆ ಪೂರ್ವ ದಿಕ್ಕಿನಲ್ಲಿ ಎರಡು ಸಾವಿರ ಮೊಳ, ದಕ್ಷಿಣದಲ್ಲಿ ಎರಡು ಸಾವಿರ ಮೊಳ, ಪಶ್ಚಿಮದಲ್ಲಿ ಎರಡು ಸಾವಿರ ಮೊಳ, ಉತ್ತರದಲ್ಲಿ ಎರಡು ಸಾವಿರ ಮೊಳ, ಅಳೆಯಬೇಕು. ಮಧ್ಯದಲ್ಲಿ ಪಟ್ಟಣಗಳಿರಬೇಕು. ಹೀಗೆ ಅವರ ಪಟ್ಟಣಗಳ ಉಪನಗರಗಳು ಇರಬೇಕು.
नगरांच्या तटबंदी बाहेर पूर्व बाजूस दोन हजार हात, दोन हजार हात दक्षिणेला, दोन हजार हात पश्चिमेला आणि दोन हजार हात उत्तर बाजूस मोजावे. नगर मध्ये असावे.
6 ಮನುಷ್ಯನನ್ನು ಹತ್ಯೆಮಾಡಿದವರು ಆಶ್ರಯಕ್ಕಾಗಿ ಓಡಿ ಹೋಗುವುದಕ್ಕೋಸ್ಕರ ನೀವು ನೇಮಿಸುವ ಆರು ಆಶ್ರಯನಗರಗಳನ್ನೂ, ಬೇರೆ ನಲ್ವತ್ತೆರಡು ಪಟ್ಟಣಗಳನ್ನೂ ಅಂತು ನಲ್ವತ್ತೆಂಟು ಪಟ್ಟಣಗಳನ್ನು ಲೇವಿಯರಿಗೆ ಕೊಡಬೇಕು.
त्यापैकी सहा शहरे शरणपुरे असतील. जर एखाद्या मनुष्याने चुकून कुणाला मारले तर तो मनुष्य संरक्षणासाठी त्या शहरात जाऊ शकतो. त्या सहा शहरांखेरीज आणखी बेचाळीस नगरे तुम्ही लेवींना द्या.
7 ನೀವು ಲೇವಿಯರಿಗೆ ಹುಲ್ಲುಗಾವಲುಗಳ ಸಂಗಡ ಕೊಡಬೇಕಾದ ಸಮಸ್ತ ಪಟ್ಟಣಗಳು ನಲ್ವತ್ತೆಂಟಾಗಿರಬೇಕು.
म्हणजे तुम्ही एकूण अठ्ठेचाळीस नगरे लेवींना द्या. त्या शहरांभोवतालची जमीनही तुम्ही लेवींना द्या.
8 ಇಸ್ರಾಯೇಲರ ಸ್ವತ್ತಿನಲ್ಲಿ ಆಯಾ ಕುಲದ ಸ್ವತ್ತಿನ ಪ್ರಮಾಣಕ್ಕೆ ತಕ್ಕ ಹಾಗೆ ಹೆಚ್ಚಾದ ಜನರುಳ್ಳವರಿಂದ ಹೆಚ್ಚಾಗಿಯೂ, ಕಡಿಮೆಯಾದ ಜನರಿಂದ ಕಡಿಮೆಯಾಗಿಯೂ ಲೇವಿಯರಿಗೋಸ್ಕರ ಊರುಗಳನ್ನು ಕೊಡಿಸಬೇಕು.”
इस्राएलाच्या मोठ्या कुटुंबांना वतनाचे मोठे तुकडे मिळतील आणि लहान वतनातून कमी अशी द्यावीत. प्रत्येक वंशाने आपआपल्या वतनाच्या मानाने लेव्यांना नगरे द्यावी.
9 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
नंतर परमेश्वर मोशेशी बोलला. तो म्हणाला,
10 ೧೦ “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನೀವು ಯೊರ್ದನ್ ನದಿಯನ್ನು ದಾಟಿ ಕಾನಾನ್ ದೇಶವನ್ನು ಸೇರಿದ ನಂತರ,
१०इस्राएलाच्या वंशाशी बोल, त्यांना या गोष्टी सांग, तुम्ही लोक यार्देन नदी पार करून कनानच्या प्रदेशात जाल.
11 ೧೧ ಆಶ್ರಯ ಸ್ಥಾನಗಳಾಗುವುದಕ್ಕೆ ಪಟ್ಟಣಗಳನ್ನು ನೇಮಿಸಬೇಕು. ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಅವುಗಳಲ್ಲಿ ಒಂದಕ್ಕೆ ಓಡಿಹೋಗಿ ಸುರಕ್ಷಿತನಾಗಿರಬಹುದು.
११तेव्हा तुम्ही शरणपुरे निवडा. जर एखाद्याने चुकून कुणाला ठार मारले तर तो संरक्षणासाठी त्यापैकी एखाद्या शहरात जाऊ शकतो.
12 ೧೨ ಅವನು ಸಭೆಯವರಿಂದ ತೀರ್ಪು ಹೊಂದುವುದಕ್ಕಿಂತ ಮೊದಲೇ ಹತವಾದವನ ಸಮೀಪಬಂಧುವಿನಿಂದ ಸಾಯದಂತೆ ಆ ಆಶ್ರಯ ಪಟ್ಟಣಗಳು ನಿಮ್ಮೊಳಗೆ ಇರಬೇಕು.
१२आणि ती नगरे सूड घेणाऱ्यापासून आश्रयासाठी असावी. त्या मनुष्याचा न्याय होईपर्यंत तो तेथे सुरक्षित राहू शकतो.
13 ೧೩ ಹೀಗೆ ಆರು ಪಟ್ಟಣಗಳನ್ನು ಆಶ್ರಯದ ಪಟ್ಟಣಗಳಾಗಿ ನೇಮಿಸಬೇಕು.
१३अशी सहा संरक्षक शहरे असतील.
14 ೧೪ ನೀವು ಯೊರ್ದನ್ ನದಿಯ ಆಚೆಯಲ್ಲಿ ಮೂರು ಮತ್ತು ಕಾನಾನ್ ದೇಶದಲ್ಲಿ ಮೂರು ಪಟ್ಟಣಗಳನ್ನು ನೇಮಿಸಬೇಕು. ಅವು ಆಶ್ರಯದ ಪಟ್ಟಣಗಳಾಗಿ ಇರಬೇಕು.
१४यापैकी तीन शहरे यार्देन नदीच्या पूर्वेला असतील आणि तीन शहरे कनानाच्या प्रदेशात यार्देन नदीच्या पश्चिमेला असतील ती तुम्ही आश्रयाची नगरे म्हणून द्या.
15 ೧೫ ಕೈತಪ್ಪಿ ಮತ್ತೊಬ್ಬನನ್ನು ಕೊಂದವನು ಇಸ್ರಾಯೇಲನಾಗಲಿ, ಪರದೇಶದವನಾಗಲಿ ಮತ್ತು ನಿಮ್ಮಲ್ಲಿ ಇಳಿದುಕೊಂಡವನಾಗಲಿ ಆ ಆರು ಪಟ್ಟಣಗಳೊಳಗೆ ಒಂದಕ್ಕೆ ಓಡಿಹೋಗಿ ಆಶ್ರಯಹೊಂದಬಹುದು.
१५ही शहरे इस्राएलाच्या नागरिकांसाठी, परदेशी नागारिकासाठी आणि प्रवाशांसाठी शरणपुरे असतील. यांच्यापैकी कोणीही चुकून कुणाला ठार मारले तर ते संरक्षणसाठी या शहरात जाऊ शकतात.
16 ೧೬ “‘ಯಾವನಾದರೂ ಕಬ್ಬಿಣದ ಆಯುಧದಿಂದ ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅಂಥವನಿಗೆ ಮರಣಶಿಕ್ಷೆಯಾಗಬೇಕು.
१६जर एखादा मनुष्य कुणाला मारण्यासाठी लोखंडी शस्त्राचा उपयोग करत असेल तर त्याने मरण पावले पाहिजे.
17 ೧೭ ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಕಲ್ಲನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆ ಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
१७आणि जर एखाद्याने दगड घेऊन कुणाला मारले तर त्यानेसुध्दा मरण पावले पाहिजे. पण त्या दगडाचा आकार एखाद्याला मारण्यासाठी वापरण्यात येणाऱ्या दगडाएवढा असला पाहिजे.
18 ೧೮ ಯಾವನಾದರೂ ಮನುಷ್ಯನನ್ನು ಕೊಲ್ಲುವಷ್ಟು ದೊಡ್ಡ ಮರದ ಆಯುಧವನ್ನು ಕೈಯಲ್ಲಿ ಹಿಡಿದು ಮತ್ತೊಬ್ಬನನ್ನು ಹೊಡೆದು ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು.
१८आणि जर एखादा मनुष्य कुणाला मारण्यासाठी लाकडाच्या तुकड्याचा उपयोग करीत असेल तर तो मनुष्य सुद्धा मेला पाहीजे. हा लाकडाचा तुकडा म्हणजे सामान्यतः कोणाला तरी मारण्यासाठी उपयोगात आणतात तसे लाकडाचे शस्त्र असले पाहिजे.
19 ೧೯ ನರಹತ್ಯೆಮಾಡಿದವನು ಎಲ್ಲಿ ಸಿಕ್ಕಿದರೂ ಅವನನ್ನು ಕೊಲ್ಲಬೇಕಾದವನು ಯಾರೆಂದರೆ ಹತವಾದವನ ಸಮೀಪಬಂಧುವೇ.
१९मरण पावलेल्या मनुष्याच्या कुटुंबातील कोणीही त्या खुन्याचा पाठलाग करून त्यास ठार मारू शकतो.
20 ೨೦ ಯಾವನಾದರೂ ಮತ್ತೊಬ್ಬನನ್ನು ಹಗೆಮಾಡಿ ನೂಕುವುದರಿಂದಾಗಲಿ, ಸಮಯ ನೋಡಿಕೊಂಡು ಅವನ ಮೇಲೆ ಏನಾದರೂ ಎಸೆಯುವುದರಿಂದಾಗಲಿ,
२०मनुष्य एखाद्याला हाताने मारून सुद्धा ठार मारू शकतो. किंवा एखाद्याला ढकलून देऊन सुद्धा ठार मारू शकतो. किंवा कोणाला काही फेकून मारून सुद्धा त्यास ठार करु शकतो.
21 ೨೧ ಇಲ್ಲವೆ ದ್ವೇಷದಿಂದ ಕೈಯಾರೆ ಹೊಡೆಯುವುದರಿಂದಾಗಲಿ ಕೊಂದರೆ ಅವನು ನರಹತ್ಯೆಮಾಡಿದವನೇ. ಅವನಿಗೆ ಮರಣಶಿಕ್ಷೆಯಾಗಬೇಕು. ಹತವಾದವನ ಸಮೀಪಬಂಧುವು ಅವನನ್ನು ಎಲ್ಲಿ ಕಂಡರೂ ಕೊಲ್ಲಬೇಕು.
२१जर कोणी ते हेतूपूर्वक द्वेषबुद्धीने केले असेल तर तो खुनी ठरतो. त्या मनुष्यास ठार मारलेच पाहिजे. मरण पावलेल्या मनुष्याच्या कुटुंबातील कोणीही त्या खुन्याचा पाठलाग करून त्यास मारु शकतो.
22 ೨೨ “‘ಆದರೆ ಒಬ್ಬನು ಯಾವ ದ್ವೇಷವೂ ಇಲ್ಲದೆ ಆಕಸ್ಮಾತ್ತಾಗಿ ನೂಕುವುದರಿಂದಾಗಲಿ, ಹಾನಿಮಾಡುವ ಸಮಯವನ್ನು ನೋಡಿಕೊಳ್ಳದೆ ಏನಾದರೂ ಎಸೆಯುವುದರಿಂದಾಗಲಿ,
२२एखादा मनुष्य अपघाताने दुसऱ्याला मारू शकेल. मरण पावलेल्या मनुष्याचा त्याने द्वेष केला नाही त्यास त्याने चुकून मारले असेल. किंवा त्याने एखादी वस्तू चुकून फेकली असेल आणि ती चुकून एखाद्याला लागून तो मेला तर त्याने ते विचारपूर्वक केले असे नाही.
23 ೨೩ ಕೊಲ್ಲುವಷ್ಟು ದೊಡ್ಡ ಕಲ್ಲನ್ನು ತಿಳಿಯದೆ ಬೀಳಿಸುವುದರಿಂದಾಗಲಿ ಮತ್ತೊಬ್ಬನು ಸತ್ತರೆ ಅವನು ಆ ಮನುಷ್ಯನಿಗೆ ವೈರಿಯಾಗಿರದೆಯೂ ಹಾನಿಯನ್ನು ಮಾಡಬೇಕೆಂಬ ಅಭಿಪ್ರಾಯವಿಲ್ಲದೆಯೂ ಇದ್ದ ಪಕ್ಷಕ್ಕೆ,
२३किंवा एखाद्या मनुष्याने दगड फेकला आणि तो त्यास न दिसलेल्या मनुष्यास लागला व तो मेला तर त्या मनुष्याने योजनापूर्वक मारले असे नाही. तो मनुष्य मरण पावलेल्या मनुष्याचा द्वेष करत नव्हता. तो केवळ योगायोगाने मेला.
24 ೨೪ ಸಭೆಯವರು ಹತ್ಯೆಮಾಡಿದವನಿಗೂ, ಹತವಾದವನ ಸಮೀಪಬಂಧುವಿಗೂ ಈ ಸಂಗತಿಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.
२४जर असे घडले तर काय करायचे ते लोकांनी ठरवायचे. मरण पावलेल्या मनुष्याच्या कुटुंबातील एखादा मनुष्य त्यास मारु शकतो की नाही ते लोक न्यायालयाने ठरवायचे.
25 ೨೫ ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.
२५जर लोकांनी खुन्याचे त्या कुटुंबापासून रक्षण कराचये असे ठरवले तर लोकांनी खुन्याला संरक्षक शहरात परत न्यावे आणि पवित्र तेलाने अभिषेक केलेला मुख्य याजक मरत नाही तोपर्यंत खुन्याने तिथेच रहावे.
26 ೨೬ “‘ಆ ಹತ್ಯೆಮಾಡಿದವನು ಯಾವಾಗಲಾದರೂ ತಾನು ಓಡಿಹೋಗಿದ್ದು ಆಶ್ರಯಪಟ್ಟಣದ ಮೇರೆಯ ಹೊರಗೆ ಹೋಗಿರುವಾಗ,
२६त्या मनुष्याने संरक्षक शहराच्या बाहेर जायचे नाही. जर त्याने त्या सीमा ओलांडल्या
27 ೨೭ ಹತವಾದವನ ಸಮೀಪಬಂಧುವು ಅವನನ್ನು ಆಶ್ರಯಪಟ್ಟಣದ ಹೊರಗೆ ಕಂಡು ಕೊಂದುಹಾಕಿದರೆ ಅವನು ಕೊಲೆಪಾತಕನಾಗುವುದಿಲ್ಲ.
२७आणि आश्रयाच्या नगराच्या सीमेबाहेर मृत मनुष्याच्या कुटुंबाने त्यास पकडले आणि मारले तर त्या कुटुंबातील तो मनुष्य खुनाचा अपराधी ठरणार नाही.
28 ೨೮ ಮಹಾಯಾಜಕನು ಜೀವದಿಂದಿರುವ ತನಕ ಅವನು ಆಶ್ರಯ ಪಟ್ಟಣದೊಳಗೆ ಇರಬೇಕಾಗಿತ್ತು. ಮಹಾಯಾಜಕನು ತೀರಿಹೋದ ನಂತರ ಅವನು ತನ್ನ ಸ್ವಾಸ್ತ್ಯವಿರುವ ಸ್ಥಳಕ್ಕೆ ಹೋಗಬಹುದು.
२८एखाद्या मनुष्याने चुकून कोणाला मारले असेल तर त्याने मुख्य याजक मरेपर्यंत शरणपुरातच राहिले पाहिजे. मुख्य याजक मेल्यानंतर तो मनुष्य त्याच्या स्वत: च्या प्रदेशात जाऊ शकतो.
29 ೨೯ “‘ನೀವೂ, ನಿಮ್ಮ ಸಂತತಿಯವರೂ ನಿಮ್ಮ ಎಲ್ಲಾ ವಾಸಸ್ಥಳಗಳಲ್ಲಿ ಈ ಮಾತುಗಳಿಗೆ ಅನುಸಾರವಾಗಿ ನ್ಯಾಯತೀರಿಸಬೇಕು.
२९तुम्हा लोकांच्या सर्व शहरांमध्ये हाच नियम सदैव लागू राहील.
30 ೩೦ ಯಾವನಾದರೂ ಮತ್ತೊಬ್ಬನನ್ನು ಕೊಂದಾಗ ನೀವು ಸಾಕ್ಷಿಗಳನ್ನು ವಿಚಾರಿಸಿಕೊಂಡು ಅವನಿಗೆ ಮರಣಶಿಕ್ಷೆಯನ್ನು ವಿಧಿಸಬಾರದು.
३०मारणाऱ्याला मरणाची शिक्षा जर साक्षीदार असेल तरच दिली जाईल. जर एकच साक्षीदार असेल तर कोणालाही मरणाची शिक्षा दिली जाणार नाही.
31 ೩೧ “‘ಮರಣಶಿಕ್ಷೆಗೆ ಪಾತ್ರನಾದ ಕೊಲೆಪಾತಕನನ್ನು ಉಳಿಸುವುದಕ್ಕೆ ಈಡನ್ನು ತೆಗೆದುಕೊಳ್ಳಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
३१जर एखाद्या मनुष्यावर खुनाचा दोष असेल तर त्यास मारलेच पाहिजे. पैसे घेऊन त्याची शिक्षा बदलू नका, त्या खुन्याला आवश्य जीवे मारावे.
32 ೩೨ ನೀವು ಆಶ್ರಯಪಟ್ಟಣಕ್ಕೆ ಓಡಿಹೋದವನಿಂದ ಧನವನ್ನು ತೆಗೆದುಕೊಂಡು ಮಹಾಯಾಜಕನು ಜೀವದಿಂದಿರುವಾಗಲೇ ಸ್ವಸ್ಥಳಕ್ಕೆ ಹೋಗಗೊಡಿಸಬಾರದು. ಅವನಿಗೆ ಮರಣಶಿಕ್ಷೆಯೇ ಆಗಬೇಕು.
३२जर एखाद्याने कुणाला मारले आणि तो संरक्षक शहरात पळून गेला तर घरी जाण्यासाठी त्याच्याकडून पैसे घेऊ नका. मुख्य याजक मरेपर्यंत त्याने शरणापुरातच राहिले पाहिजे.
33 ೩೩ “‘ನೀವು ಹೀಗೆ ನಡೆದುಕೊಂಡರೆ ನಿಮ್ಮ ದೇಶವು ಅಪವಿತ್ರವಾಗುವುದಿಲ್ಲ. ರಕ್ತವು ದೇಶವನ್ನು ಅಪವಿತ್ರ ಮಾಡುವುದು. ಕೊಲ್ಲಲ್ಪಟ್ಟವನ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.
३३ज्या देशात तुम्ही रहाल तो भ्रष्ट करू नका. कारण खुनाने देश भ्रष्ट होतो आणि रक्तपात केल्याशिवाय देशाबद्दल म्हणजे त्या देशात झालेल्या रक्तपाताबद्दल प्रायश्चित होऊ शकत नाही.
34 ೩೪ ನೀವು ವಾಸಿಸುವ ದೇಶವನ್ನು ಅಪವಿತ್ರಮಾಡಬಾರದು. ಯೆಹೋವನೆಂಬ ನಾನೇ ಇಸ್ರಾಯೇಲರ ಮಧ್ಯದಲ್ಲಿ ವಾಸಿಸುತ್ತೇನೆ.’”
३४मी परमेश्वर आहे. मी तुमच्या देशात इस्राएल लोकांबरोबर राहीन. मी तिथे राहणार आहे. म्हणून ती जागा निष्पाप लोकांच्या रक्ताने अशुद्ध करु नका.

< ಅರಣ್ಯಕಾಂಡ 35 >