< ಅರಣ್ಯಕಾಂಡ 6 >

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
याहवेह ने मोशेह को आज्ञा दी,
2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸು: ಯಾವ ಪುರುಷನಾಗಲಿ ಸ್ತ್ರೀಯಾಗಲಿ ನಾಜೀರರ ಹರಕೆಯನ್ನು ಅಂದರೆ ಯೆಹೋವನಿಗೆ ತನ್ನನ್ನು ಪ್ರತಿಷ್ಠಿಸಿಕೊಳ್ಳುವ,
“इस्राएल के घराने को बुलाकर उन्हें यह आज्ञा दो: ‘जब कोई स्त्री अथवा कोई पुरुष नाज़ीरी संकल्प करता है, तथा यह संकल्प समर्पण के विषय में हो कि वह स्वयं को याहवेह के लिए समर्पित करता है,
3 ವಿಶೇಷವಾದ ಹರಕೆಯನ್ನು ಮಾಡಿದಾಗ ದ್ರಾಕ್ಷಾರಸವನ್ನೂ ಮತ್ತು ಮದ್ಯಪಾನವನ್ನೂ ಮುಟ್ಟಬಾರದು. ದ್ರಾಕ್ಷಾರಸದ ಹುಳಿಯನ್ನಾಗಲಿ ಬೇರೆ ಮದ್ಯಪಾನದ ಹುಳಿಯನ್ನಾಗಲಿ ಕುಡಿಯಬಾರದು. ದ್ರಾಕ್ಷಿ ಹಣ್ಣಿನಿಂದ ಮಾಡಿದ ಯಾವ ಪಾನವನ್ನೂ ಕುಡಿಯಬಾರದು. ಹಸಿ ಅಥವಾ ಒಣಗಿದ ದ್ರಾಕ್ಷಿ ಹಣ್ಣನ್ನೂ ತಿನ್ನಬಾರದು.
वह दाखमधु से अलग रहे, सिरके का सेवन न करे, चाहे वह अंगूर के रस से बना हुआ हो अथवा किसी नशीले द्रव्य का. वह अंगूर के रस का भी सेवन न करे, वह न तो वाटिका से लाए गए अंगूरों का सेवन करे और न ही सुखाए हुए अंगूरों का.
4 ಅವನು ಹರಕೆಮಾಡಿ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ದ್ರಾಕ್ಷಾಲತೆಯಿಂದ ಬೆಳೆದ ಬೀಜವನ್ನಾಗಲಿ, ಸಿಪ್ಪೆಯನ್ನಾಗಲಿ ತಿನ್ನಬಾರದು.
अपने पूरे संकल्प किए हुए समय में वह किसी भी ऐसी वस्तु को न खाए, जो अंगूर से बनी हो, यहां तक कि न तो अंगूर के बीज से लेकर अंगूर के छिलकों का.
5 “ಅವನು ತನ್ನ ಹರಕೆಯ ದಿನಗಳಲ್ಲಿ ಕ್ಷೌರಮಾಡಿಸಿಕೊಳ್ಳಬಾರದು. ಅವನು ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳು ಮುಗಿಯುವ ತನಕ ತಾನು ದೇವರಿಗೆ ಮೀಸಲಾಗಿದ್ದು ತನ್ನ ತಲೆಯ ಕೂದಲನ್ನು ಕತ್ತರಿಸದೆ ಬಿಡಬೇಕು.
“‘जब तक उसके संकल्प का समय है, उसके सिर पर उस्तरा न फेरा जाएगा. जिस समय के लिए उसने संकल्प किया है वह याहवेह के लिए अलग तथा पवित्र बना रहेगा; वह अपने बाल लंबे होते जाने देगा.
6 ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳಲ್ಲಿ ಯಾವ ಶವವನ್ನೂ ಮುಟ್ಟಬಾರದು.
“‘याहवेह के लिए अलग रहने के समय में वह कभी भी किसी शव के पास नहीं जाएगा.
7 ತಾಯಿ, ತಂದೆ, ಅಣ್ಣ, ತಮ್ಮ, ಅಕ್ಕ, ತಂಗಿ ಇವರಲ್ಲಿ ಯಾರು ಸತ್ತರೂ ಅವರ ನಿಮಿತ್ತ ಅವನು ತನ್ನನ್ನು ದೇವರಿಂದ ಪ್ರತ್ಯೇಕಿಸಿ ಅಪವಿತ್ರಮಾಡಿಕೊಳ್ಳಬಾರದು. ಏಕೆಂದರೆ ತಾನು ದೇವರಿಗೆ ಮೀಸಲಾಗಿ ಬಿಟ್ಟ ಕೂದಲು ತಲೆಯ ಮೇಲೆ ಇದೆಯಲ್ಲಾ.
वह स्वयं को अपने माता-पिता अथवा भाई-बहन की मृत्यु होने पर भी अशुद्ध नहीं करेगा क्योंकि वह अपनी देह सहित परमेश्वर के लिए अलग किया गया है.
8 ತಾನು ಪ್ರತಿಷ್ಠಿಸಿಕೊಂಡಿರುವ ದಿನಗಳೆಲ್ಲೆಲ್ಲಾ ಅವನು ಯೆಹೋವನಿಗೆ ಮೀಸಲಾಗಿಯೇ ಇರಬೇಕು.
अलग रहने के पूरे समय तक वह याहवेह के लिए पवित्र है.
9 ಯಾರಾದರೂ ಆಕಸ್ಮಾತ್ತಾಗಿ ಅವನ ಬಳಿಯಲ್ಲೇ ಸತ್ತರೆ, ತಾನು ಪ್ರತಿಷ್ಠಿಸಿಕೊಂಡ ತಲೆಯ ಕೂದಲು ಅಪವಿತ್ರವಾದರೆ ಏಳನೆಯ ದಿನದಲ್ಲಿ ಅಂದರೆ ಶುದ್ಧನಾಗುವ ದಿನದಲ್ಲಿ ತಲೆಯನ್ನು ಕ್ಷೌರಮಾಡಿಸಿಕೊಳ್ಳಬೇಕು.
“‘किंतु यदि उसके निकट ही किसी व्यक्ति की मृत्यु अचानक हो गई हो, जिसके परिणामस्वरूप वह अपने समर्पित बालों को अशुद्ध कर देता है, तब वह उस दिन, जब वह स्वयं को अलग कर लेता है, अपने बाल मुंडवा ले.
10 ೧೦ ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತರಬೇಕು.
आठवें दिन वह दो पण्डुक अथवा दो कबूतर के बच्‍चे तंबू के द्वार पर लाकर पुरोहित को सौंप देगा.
11 ೧೧ ಯಾಜಕನು ಒಂದನ್ನು ದೋಷಪರಿಹಾರ ಯಜ್ಞವಾಗಿ, ಇನ್ನೊಂದನ್ನು ಸರ್ವಾಂಗಹೋಮವಾಗಿ ಸಮರ್ಪಿಸಿ ಶವಸೋಂಕಿದವನಿಗಾಗಿ ದೋಷಪರಿಹಾರ ಮಾಡಿ ಅವನ ತಲೆಯ ಕೂದಲನ್ನು ಆ ದಿನದಿಂದ ಪವಿತ್ರವೆಂದು ನಿರ್ಣಯಿಸಬೇಕು.
पुरोहित एक पक्षी को पापबलि के लिए तथा अन्य पक्षी होमबलि के लिए भेंट करके उसके लिए प्रायश्चित विधि पूरी करेगा, क्योंकि वह उस व्यक्ति के शव के कारण अशुद्ध हो गया था. उसी दिन वह व्यक्ति अपने सिर को पवित्र करेगा,
12 ೧೨ ಅವನು ಎಷ್ಟು ದಿನಗಳವರೆಗೆ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದಾನೋ, ಅಷ್ಟು ದಿನಗಳವರೆಗೆ ಹೊಸದಾಗಿ ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಳ್ಳಬೇಕು ಮತ್ತು ಪ್ರಾಯಶ್ಚಿತ್ತಯಜ್ಞವಾಗಿ ಒಂದು ವರ್ಷದ ಕುರಿಮರಿಯನ್ನು ಸಮರ್ಪಿಸಬೇಕು. ಮೊದಲು ಮಾಡಿದ್ದ ಹರಕೆಗೆ ವಿಘ್ನಪ್ರಾಪ್ತವಾದುದರಿಂದ ಕಳೆದುಹೋದ ದಿನಗಳು ವ್ಯರ್ಥವಾದುದೆಂದು ಪರಿಗಣಿಸಬೇಕು.
तथा वह याहवेह के सामने नाज़री होने की अवधि को भेंट करेगा. फिर वह एक वर्ष का मेमना दोष बलि के रूप में भेंट करेगा. उसके संकल्प की पूरी अवधि उसके अशुद्ध हो जाने के कारण मान्य नहीं होगी.
13 ೧೩ ನಾಜೀರನು ತನ್ನ ವ್ರತದಿನಗಳು ಮುಗಿದಾಗ ತನ್ನನ್ನು ಸಮರ್ಪಿಸಬೇಕಾದ ಕ್ರಮವನ್ನು ಅನುಸರಿಸಬೇಕು. ಅವನು ದೇವದರ್ಶನದ ಗುಡಾರದ ಬಾಗಿಲಿಗೆ ಬರಬೇಕು.
“‘संकल्प लेने के दिन पूरे होने पर उस नाज़ीर के लिए विधि इस प्रकार है: वह अपनी भेंट मिलनवाले तंबू के द्वार पर ले आएगा.
14 ೧೪ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆಗಳು ಯಾವುವೆಂದರೆ: ಅವನು ಸರ್ವಾಂಗಹೋಮಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಟಗರಿನ ಮರಿಯನ್ನು, ದೋಷಪರಿಹಾರ ಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಒಂದು ವರ್ಷದ ಹೆಣ್ಣು ಕುರಿಮರಿಯನ್ನು, ಸಮಾಧಾನಯಜ್ಞಕ್ಕಾಗಿ ದೋಷವಿಲ್ಲದ ಪೂರ್ಣಾಂಗವಾದ ಟಗರನ್ನು ತರಬೇಕು.
वह अपनी यह भेंट याहवेह को चढ़ाएगा: एक वर्ष का निर्दोष मेमना, एक वर्ष की भेड़ पापबलि के लिए, तथा एक निर्दोष मेढ़ा मेल बलि के लिए.
15 ೧೫ ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.
इनके अलावा मैदे की तेल मिली हुई अखमीरी रोटी एक टोकरी, तथा अखमीरी पपड़ियां, जिन पर तेल चुपड़ दिया गया हो. इनके साथ अन्‍नबलि तथा अर्घ भी.
16 ೧೬ ಯಾಜಕನು ಇವುಗಳನ್ನು ಯೆಹೋವನ ಸನ್ನಿಧಿಗೆ ತಂದು ನಾಜೀರನ ದೋಷಪರಿಹಾರಕ ಯಜ್ಞವನ್ನೂ ಮತ್ತು ಸರ್ವಾಂಗಹೋಮವನ್ನೂ ಸಮರ್ಪಿಸಬೇಕು.
“‘यह सब पुरोहित याहवेह के सामने लाकर भेंट करेगा; इनमें अखमीरी रोटियां भी शामिल होंगी. पुरोहित अन्‍नबलि एवं अर्घ भी भेंट करेगा.
17 ೧೭ ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.
वह याहवेह को मेल बलि के लिए अखमीरी रोटी की टोकरी के साथ मेढ़ा भी भेंट करेगा. इसी प्रकार अन्‍नबलि एवं अर्घ भी.
18 ೧೮ ಆಗ ನಾಜೀರನು ತನ್ನ ಸಮರ್ಪಣೆಯ ದೀಕ್ಷೆಯನ್ನು ಸೂಚಿಸುವ ತಲೆಯ ಕೂದಲನ್ನು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಕ್ಷೌರಮಾಡಿಸಿಕೊಂಡು, ಆ ಕೂದಲನ್ನು ಸಮಾಧಾನಯಜ್ಞದ್ರವ್ಯಗಳ ಕೆಳಗಿರುವ ಬೆಂಕಿಯಲ್ಲಿ ಹಾಕಬೇಕು.
“‘इसके बाद वह नाज़ीर अपने सिर के बाल मिलनवाले तंबू के प्रवेश द्वार पर जाकर मुंडवाएगा, तथा अपने भेंट किए हुए बालों को उस आग में डाल देगा, जो मेल बलियों के बलि पशु के नीचे जलती है.
19 ೧೯ ತರುವಾಯ ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.
“‘जब वह नाज़ीर अपना सिर मुंडवा चुके, तब पुरोहित उसके हाथों में उस मेढ़े के कंधे, जो इस समय उबाले जा चुके होंगे, टोकरी से एक अखमीरी रोटी तथा एक अखमीरी पपड़ी रख देगा.
20 ೨೦ ಯಾಜಕನು ಅವುಗಳನ್ನು ನೈವೇದ್ಯವಾಗಿ ನಿವಾಳಿಸಿ ಯೆಹೋವನ ಸನ್ನಿಧಿಯಲ್ಲಿ ಸಮರ್ಪಿಸಬೇಕು. ನೈವೇದ್ಯ ಮಾಡುವ ಎದೆಯ ಭಾಗದಂತೆ ಹಾಗೂ ಯಾಜಕರಿಗಾಗಿ ಪ್ರತ್ಯೇಕಿಸುವ ತೊಡೆಯಂತೆ ಯಾಜಕನಿಗೆ ಸಲ್ಲಿಸಬೇಕು. ಅನಂತರ ಆ ನಾಜೀರನು ದ್ರಾಕ್ಷಾರಸವನ್ನು ಪಾನಮಾಡಬೇಕು.
इसके बाद पुरोहित इन्हें याहवेह के सामने हिलाने की बलि के रूप में हिलाएगा. हिलाने के लिए ठहराए हुए भेंट के मेढ़े का सीना तथा ऊपर उठाकर भेंट करने के लिए ठहराई हुई जांघ उस पुरोहित के लिए पवित्र होगी. यह सब हो जाने के बाद उस नाज़ीर के लिए दाखमधु पीना वर्जित न रहेगा.’
21 ೨೧ ಹರಕೆಮಾಡಿಕೊಂಡ ನಾಜೀರರ ವ್ರತ ನಿಯಮವು ಇದೇ. ಅವರು ತಮ್ಮ ವ್ರತಪೂರ್ತಿಗಾಗಿ ಯೆಹೋವನಿಗೆ ಸಮರ್ಪಿಸಬೇಕಾದ ಕಾಣಿಕೆ ಇದೇ. ಅವರು ತಮ್ಮ ಶಕ್ತಿಗನುಸಾರ ಹೆಚ್ಚಾಗಿಯೂ ಕೊಡಬಹುದು. ಆದರೆ ತಾವು ಕೊಡುತ್ತೆವೆಂದು ಹರಕೆಮಾಡಿದಷ್ಟು ವ್ರತವಿಧಿಗನುಸಾರವಾಗಿ ಕೊಡಲೇಬೇಕು.”
“‘यही है उस नाज़ीर से संबंधित विधि, उसके अलावा, जो कुछ उसके लिए संभव है! जो अपने अलग रहने के द्वारा याहवेह के सामने संकल्प लेता है, उसने जो कुछ संकल्प किया है, उसे वह अपने अलग रहने की विधि के अनुसार अवश्य पूरी करे.’”
22 ೨೨ ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,
फिर याहवेह ने मोशेह को यह आज्ञा दी,
23 ೨೩ “ನೀನು ಆರೋನನಿಗೂ ಮತ್ತು ಅವನ ಮಕ್ಕಳಿಗೂ ಹೀಗೆ ಆಜ್ಞಾಪಿಸು, ‘ನೀವು ಇಸ್ರಾಯೇಲರನ್ನು ಹೀಗೆ ಆಶೀರ್ವದಿಸಬೇಕು. ಈ ಪ್ರಕಾರ ಅವರಿಗೆ ಹೇಳಬೇಕು,
“अहरोन एवं उसके पुत्रों को यह आज्ञा दो, ‘जब तुम इस्राएल के घराने को आशीर्वाद दो, तो उनसे इस प्रकार कहना:
24 ೨೪ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ;
“‘“याहवेह तुम्हें आशीष प्रदान करें, तथा तुम्हें सुरक्षित रखें;
25 ೨೫ ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ;
याहवेह तुम पर अपने मुख का प्रकाश चमकाकर तुम पर अनुग्रह करें;
26 ೨೬ ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ’ ಎಂಬುದೇ.
याहवेह तुम्हारी ओर मुड़कर तुम्हें शांति प्रदान करें.”’
27 ೨೭ ಹೀಗೆ ಅವರು ಇಸ್ರಾಯೇಲರನ್ನು ಕುರಿತು ನನ್ನ ಹೆಸರನ್ನು ಉಚ್ಚರಿಸುವಾಗ ನಾನು ಅವರನ್ನು ಆಶೀರ್ವದಿಸುವೆನು.”
“जब वे इस्राएल के घराने पर मेरा नाम रखेंगे, तब मैं उनका भला करूंगा.”

< ಅರಣ್ಯಕಾಂಡ 6 >