< ಜ್ಞಾನೋಕ್ತಿಗಳು 14 >

1 ಜ್ಞಾನವಂತೆಯು ತನ್ನ ಮನೆಯನ್ನು ಕಟ್ಟಿಕೊಳ್ಳುವಳು, ಜ್ಞಾನಹೀನಳು ಅದನ್ನು ಸ್ವಂತ ಕೈಯಿಂದ ನಾಶಮಾಡುವಳು.
बुद्धिमान् स्‍त्रीले आफ्नो घर बनाउँछे, तर मूर्ख स्‍त्रीले आफ्नै हातले त्यो भत्काउँछे ।
2 ಸರಳಮಾರ್ಗಿಯು ಯೆಹೋವನಿಗೆ ಭಯಪಡುವನು, ವಕ್ರಮಾರ್ಗಿಯು ಆತನನ್ನು ಅಸಡ್ಡೆಮಾಡುವನು.
सोझो भएर हिँड्नेले परमप्रभुको भय मान्छ, तर आफ्ना चालहरूमा बेइमान व्यक्तिले उहाँलाई तुच्छ ठान्छ ।
3 ಮೂರ್ಖನ ಮಾತುಗಳು ಅವನ ಬೆನ್ನಿಗೆ ಬೆತ್ತ, ಜ್ಞಾನಿಗಳ ತುಟಿಗಳು ಅವರನ್ನು ಕಾಯುವವು.
मूर्खको मुखबाट त्यसको मूर्खताको हाँगा निस्कन्छ, तर बुद्धिमान्‌को ओठले त्यसको रक्षा गर्छ ।
4 ಎತ್ತುಗಳಿಲ್ಲದಿರುವಾಗ ಗೋದಲಿಯು ಶುದ್ಧ, ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ವೃದ್ಧಿಯಾಗುವುದು.
गाईवस्तु नभएको ठाउँमा भकारी खाली हुन्छ, तर गोरुको बलद्वारा प्रशस्त फसलको कटनी हुन सक्छ ।
5 ಸತ್ಯಸಾಕ್ಷಿಯು ಸುಳ್ಳಾಡನು, ಸುಳ್ಳುಸಾಕ್ಷಿಯು ಅಸತ್ಯವನ್ನೇ ಆಡುವನು.
विश्‍वासयोग्य साक्षीले झुट बोल्दैन, तर झुटो साक्षीले झुटा कुराहरू निकाल्छ ।
6 ಧರ್ಮನಿಂದಕನಲ್ಲಿ ಹುಡುಕಿದರೂ ಜ್ಞಾನವು ಸಿಕ್ಕದು, ವಿವೇಕಿಗೆ ತಿಳಿವಳಿಕೆಯು ಸುಲಭವಾಗಿ ದೊರೆಯುವುದು.
गिल्ला गर्नेले बुद्धिको खोजी गर्छ, तर पाउँदैन, जब कि समझदार व्यक्तिलाई ज्ञान सजिलैसित आउँछ ।
7 ನೀನು ಜ್ಞಾನಹೀನನ ಬಳಿಗೆ ಹೋದರೆ ಅವನ ತುಟಿಗಳಲ್ಲಿ ಯಾವ ತಿಳಿವಳಿಕೆಯನ್ನೂ ಕಾಣಲಾರೆ.
मूर्ख मानिसबाट टाढै बस, किनकि तिमीले त्यसको ओठमा ज्ञान पाउने छैनौ ।
8 ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.
समझदार मानिसको बुद्धि उसको आफ्नै मार्ग बुझ्नको लागि हो, तर मूर्खहरूको मूर्खता छल हो ।
9 ಮೂರ್ಖರನ್ನು ಅವರ ದೋಷವೇ ಹಾಸ್ಯಮಾಡುವುದು, ಯಥಾರ್ಥವಂತರಲ್ಲಿ (ದೇವರ) ದಯೆಯಿರುವುದು.
दोषबलि चढाइँदा मूर्खहरूले गिल्ला गर्छन्, तर सोझाहरूका बिचमा स्‍नेह बाँडचुँड गरिन्छ ।
10 ೧೦ ಪ್ರತಿಯೊಬ್ಬನು ತನ್ನ ಹೃದಯದ ವ್ಯಾಕುಲವನ್ನು ತಾನು ಗ್ರಹಿಸಿಕೊಳ್ಳುವನು, ಅವನ ಆನಂದದಲ್ಲಿಯೂ ಬೇರೆಯವರು ಪಾಲುಗಾರರಾಗುವುದಿಲ್ಲ.
हृदयले यसको आफ्नै तिक्तता जान्दछ, र कुनै पनि परदेशीले यसको आनन्द बाँडचुँड गर्दैन ।
11 ೧೧ ದುಷ್ಟರ ಮನೆಗೆ ನಾಶನ, ಶಿಷ್ಟರ ಗುಡಾರಕ್ಕೆ ಏಳಿಗೆ.
दुष्‍ट मानिसहरूको घर नष्‍ट पारिने छ, तर धर्मी मानिसहरूको पालमा फलिफा हुने छ ।
12 ೧೨ ಮನುಷ್ಯನ ದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ.
कुनै बाटो मानिसलाई सोझोजस्तै लाग्ला, तर अन्त्यमा त्यसले मृत्युमा पुर्‍याउँछ ।
13 ೧೩ ನಗುವವನಿಗೂ ಮನೋವ್ಯಥೆಯುಂಟು, ಉಲ್ಲಾಸದ ಅಂತ್ಯವು ವ್ಯಾಕುಲವೇ.
हृदयमा हाँसो भए तापनि वेदना हुन सक्छ, र हर्षको अन्तचाहिँ शोकमा हुन सक्छ ।
14 ೧೪ ಭ್ರಷ್ಟನು ಕರ್ಮಫಲವನ್ನು ತಿಂದು ತಿಂದು ದಣಿಯುವನು, ಶಿಷ್ಟನು ತನ್ನಲ್ಲಿ ತಾನೇ ತೃಪ್ತನಾಗುವನು.
विश्‍वासयोग्य नभएको व्यक्तिले आफ्ना चालहरूको प्रतिफल भोग्‍ने छ, तर असल व्यक्तिले आफ्नो इनाम पाउने छ ।
15 ೧೫ ಮೂಢನು ಯಾವ ಮಾತನ್ನಾದರೂ ನಂಬುವನು, ಜಾಣನು ತನ್ನ ನಡತೆಯನ್ನು ಚೆನ್ನಾಗಿ ಗಮನಿಸುವನು.
बेवकूफ मानिसले हरेक कुरा पत्याउँछ, तर समझदार मानिसले आफ्ना चालहरूबारे विचार गर्छ ।
16 ೧೬ ಜ್ಞಾನಿಯು ಕೇಡಿಗೆ ಭಯಪಟ್ಟು ಓರೆಯಾಗುವನು, ಜ್ಞಾನಹೀನನು ಸೊಕ್ಕಿನಿಂದ ಭಯವನ್ನು ಲಕ್ಷಿಸನು.
बुद्धिमान् मानिस डराएर दुष्‍टताबाट टाढै बस्छ, तर मूर्खले निश्‍चयतासाथ चेताउनीलाई खारेज गरिदिन्छ ।
17 ೧೭ ಮುಂಗೋಪಿಯು ಬುದ್ಧಿಹೀನನಾಗಿ ವರ್ತಿಸುವನು, ಕುಯುಕ್ತಿಯುಳ್ಳವನು ದ್ವೇಷಕ್ಕೆ ಪಾತ್ರನು.
झट्ट रिसाउनेले मूर्ख कुराहरू गर्छ, र दुष्‍ट योजनाहरू रच्नेलाई घृणा गरिन्छ ।
18 ೧೮ ಮೂರ್ಖರಿಗೆ ಮೂರ್ಖತನವೇ ಸ್ವತ್ತು, ಜಾಣರಿಗೆ ಜ್ಞಾನವೇ ಕಿರೀಟ.
बेसमझ मानिसले मूर्खता कमाउँछ, तर समझदार मानिसले ज्ञानको मुकुट पहिरिन्छ ।
19 ೧೯ ಕೆಟ್ಟವರು ಒಳ್ಳೆಯವರಿಗೆ ಬಾಗುವರು, ದುಷ್ಟರು ಶಿಷ್ಟರ ಬಾಗಿಲಲ್ಲಿ ಅಡ್ಡಬೀಳುವರು.
खराब मानिसहरू असल मानिसहरूका सामु र दुष्‍ट मानिसहरू धर्मात्माका ढोकाहरूमा झुक्‍ने छन् ।
20 ೨೦ ಬಡವನು ನೆರೆಯವನಿಗೂ ಅಸಹ್ಯ, ಧನವಂತನಿಗೆ ಬಹು ಜನ ಮಿತ್ರರು.
आफ्नै मित्रहरूबाट समेत गरिब मानिसलाई घृणा गरिन्छ, तर धनी मानिसका धेरै साथीहरू हुन्छन् ।
21 ೨೧ ನೆರೆಯವನನ್ನು ತಿರಸ್ಕರಿಸುವವನು ದೋಷಿ, ದರಿದ್ರನನ್ನು ಕನಿಕರಿಸುವವನು ಧನ್ಯನು.
आफ्नो छिमेकीलाई हेला गर्नेले पाप गरिरहेको हुन्छ, तर गरिबलाई स्‍नेह देखाउने आशिषित् हुन्छ ।
22 ೨೨ ಕುಯುಕ್ತಿಯುಳ್ಳವರು ದಾರಿತಪ್ಪಿದವರೇ ಸರಿ, ಒಳ್ಳೆಯದನ್ನು ಕಲ್ಪಿಸುವವರು ಪ್ರೀತಿಸತ್ಯತೆಗಳಿಗೆ ಪಾತ್ರರು.
के खराब युक्ति रच्नेहरू बरालिँदैनन् र? तर असल गर्ने योजना बनाउनेहरूले करारको विश्‍वसनीयता र भरोसा प्राप्‍त गर्ने छन् ।
23 ೨೩ ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.
सबै कडा परिश्रमले लाभ ल्याउँछ, तर कुरा मात्र गर्नाले गरिबीमा पुर्‍याउँछ ।
24 ೨೪ ಜ್ಞಾನಿಗಳ ಜ್ಞಾನಕಿರೀಟವೇ ಅವರ ಶ್ರೇಷ್ಠ ಸಂಪತ್ತು, ಜ್ಞಾನಹೀನರ ಮೂರ್ಖತನವು ಬರೀ ಮೂರ್ಖತನವೇ.
बुद्धिमान् मानिसहरूको मुकुट तिनीहरूको सम्पत्ति हो, तर मूर्खहरूको मूर्खताले तिनीहरूमा झन् बढी मूर्खता ल्याउँछ ।
25 ೨೫ ಸತ್ಯಸಾಕ್ಷಿಯು ಪ್ರಾಣರಕ್ಷಕ, ಸುಳ್ಳುಸಾಕ್ಷಿಯು ವಂಚಕ.
विश्‍वासयोग्य साक्षीले जीवन बचाउँछ, तर झुटो साक्षीले झुटा कुराहरू ओकल्छ ।
26 ೨೬ ಯೆಹೋವನಿಗೆ ಭಯಪಡುವುದರಿಂದ ಕೇವಲ ನಿರ್ಭಯ, ಆತನ ಮಕ್ಕಳಿಗೆ ಆಶ್ರಯವಿದ್ದೇ ಇರುವುದು.
परमप्रभुको भय मान्‍नेसित बढी निश्‍चयता हुन्छ । त्यस मानिसको छोराछोरीका निम्ति यो सुरक्षाको एउटा बलियो स्थानझैँ हुने छ ।
27 ೨೭ ಯೆಹೋವನ ಭಯ ಜೀವದ ಬುಗ್ಗೆ, ಮೃತ್ಯುಪಾಶದಿಂದ ತಪ್ಪಿಸಿಕೊಳ್ಳಲು ಅದು ಸಾಧನವಾಗಿದೆ.
परमप्रभुको भय जीवनको फुहारा हो, जसद्वारा मानिस मृत्युका जालहरूबाट उम्कन्छ ।
28 ೨೮ ಪ್ರಜೆಗಳ ವೃದ್ಧಿ ರಾಜನ ಮಹಿಮೆ, ಪ್ರಜೆಗಳ ನಾಶ ಪ್ರಭುವಿಗೆ ಭಯ.
राजाको महिमा तिनका धेरै मानिसहरूको सङ्ख्यामा पाइन्छ, तर मानिसहरूविना राजकुमार नष्‍ट हुन्छ ।
29 ೨೯ ದೀರ್ಘಶಾಂತನು ಕೇವಲ ಬುದ್ಧಿವಂತನು, ಮುಂಗೋಪಿಯು ಮೂರ್ಖತನವನ್ನು ಧ್ವಜವಾಗಿ ಎತ್ತುವನು.
धैर्यवान् मानिससित ठुलो समझशक्ति हुन्छ, तर गरम मिजासको मानिसले मूर्खतालाई उचाल्छ ।
30 ೩೦ ಶಾಂತಗುಣವು ದೇಹಕ್ಕೆ ಜೀವಾಧಾರವು, ಕ್ರೋಧವು ಎಲುಬಿಗೆ ಕ್ಷಯವು.
शान्त हृदय शरीरको लागि जीवन हो, तर ईर्ष्याले हड्‍डीहरूलाई सडाउँछ ।
31 ೩೧ ಬಡವರನ್ನು ಹಿಂಸಿಸುವವನು ಸೃಷ್ಟಿಕರ್ತನನ್ನು ಹೀನೈಸುವನು, ಗತಿಯಿಲ್ಲದವರನ್ನು ಕರುಣಿಸುವವನು ಆತನನ್ನು ಘನಪಡಿಸುವನು.
गरिबलाई थिचोमिचो गर्नेले आफ्नो सृष्‍टिकर्तालाई सराप्छ, तर खाँचोमा परेकाहरूलाई स्‍नेह देखाउनेले उहाँको आदर गर्छ ।
32 ೩೨ ದುಷ್ಟನು ವಿಪತ್ತಿಗೊಳಗಾಗಿ ಹಾಳಾಗುವನು, ಶಿಷ್ಟನು ಮರಣಕಾಲದಲ್ಲಿಯೂ ಆಶ್ರಯಹೊಂದುವನು.
आफ्ना खराब कामहरूद्वारा दुष्‍ट मानिस तल खसालिन्छ, तर धर्मात्माले मृत्युमा समेत आश्रय पाउँछ ।
33 ೩೩ ವಿವೇಕಿಯ ಹೃದಯ ಜ್ಞಾನಾಶ್ರಯ, ಜ್ಞಾನಹೀನನ ಹೃದಯದಲ್ಲಿ ಅದು ಕಾಣದು.
बुद्धिले विवेकीको हृदयमा बास गर्छ, र मूर्खहरूका बिचमा समेत त्यसले आफूलाई चिनाउँछ ।
34 ೩೪ ಪ್ರಜೆಗೆ ಧರ್ಮವು ಉನ್ನತಿ, ಅಧರ್ಮವು ಅವಮಾನ.
धार्मिकताले देशलाई उचाल्छ, तर पाप कुनै पनि मानिसको लागि अपमानको कुरो हो ।
35 ೩೫ ಜಾಣನಾದ ಸೇವಕನಿಗೆ ರಾಜನ ಕೃಪೆ, ಮಾನಗೇಡಿಗೆ ರಾಜನ ರೌದ್ರ.
समझदारसित काम गर्ने नोकरमाथि राजाको स्‍नेह हुन्छ, तर लाजमर्दो तरिकाले काम गर्नेमाथि तिनको रिस पर्छ ।

< ಜ್ಞಾನೋಕ್ತಿಗಳು 14 >