< ಜ್ಞಾನೋಕ್ತಿಗಳು 15 >

1 ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.
विनम्र जवाफले क्रोधलाई हटाउँछ, तर कठोर वचनले रिस उठाउँछ ।
2 ಜ್ಞಾನಿಗಳ ನಾಲಿಗೆಯು ತಿಳಿವಳಿಕೆಯನ್ನು ಸಾರ್ಥಕ ಮಾಡುವುದು, ಜ್ಞಾನಹೀನರ ಬಾಯಿಯು ಮೂರ್ಖತನವನ್ನು ಕಾರುವುದು.
बुद्धिमान् मानिसहरूको जिब्रोले ज्ञानको तारिफ गर्छ, तर मूर्खहरूको मुखले मूर्खता खन्याउँछ ।
3 ಯೆಹೋವನ ದೃಷ್ಟಿಯು ಎಲ್ಲೆಲ್ಲಿಯೂ ಇರುವುದು, ಆತನು ಕೆಟ್ಟವರನ್ನು ಮತ್ತು ಒಳ್ಳೆಯವರನ್ನು ನೋಡುತ್ತಲೇ ಇರುವನು.
परमप्रभुको दृष्‍टि जताततै छ । उहाँले दुष्‍ट र असलमाथि नजर लगाउनुहुन्छ ।
4 ಸಂತೈಸುವ ನಾಲಿಗೆ ಜೀವವೃಕ್ಷವು, ಬಲತ್ಕರಿಸುವ ನಾಲಿಗೆ ಮನಮುರಿಯುವುದು.
निको पार्ने जिब्रो जीवनको रुख हो, तर छलपूर्ण जिब्रोले आत्मालाई चोट पुर्‍याउँछ ।
5 ಮೂರ್ಖನು ತಂದೆಯ ಶಿಕ್ಷೆಯನ್ನು ತಿರಸ್ಕರಿಸುವನು, ಗದರಿಕೆಯನ್ನು ಗಮನಿಸುವವನು ಜಾಣನು.
मूर्खले आफ्नो बुबाको अर्तीलाई हेला गर्छ, तर सुधारबाट सिक्‍नेचाहिँ विवेकशील हो ।
6 ಶಿಷ್ಟನ ಮನೆಯಲ್ಲಿ ದೊಡ್ಡ ನಿಧಿ, ದುಷ್ಟನ ಆದಾಯವು ನಷ್ಟಕ್ಕೆ ದಾರಿ.
धर्मात्माको घरमा ठुलो खजाना हुन्छ, तर दुष्‍ट मानिसको कमाइले त्यसलाई कष्‍ट दिन्छ ।
7 ಜ್ಞಾನಿಗಳ ತುಟಿಗಳು ತಿಳಿವಳಿಕೆಯನ್ನು ಬಿತ್ತುವವು. ಜ್ಞಾನಹೀನರ ಹೃದಯವು ಅದನ್ನು ಬಿತ್ತುವುದೇ ಇಲ್ಲ.
बुद्धिमान् मानिसहरूको ओठले चारैतिर ज्ञान फैलाउँछ, तर मूर्खहरूको हृदय त्यस्तो हुँदैन ।
8 ದುಷ್ಟರ ಯಜ್ಞ ಯೆಹೋವನಿಗೆ ಅಸಹ್ಯ, ಶಿಷ್ಟರ ಬಿನ್ನಹ ಆತನಿಗೆ ಇಷ್ಟ.
परमप्रभुले दुष्‍ट मानिसहरूको बलिदानलाई घृणा गर्नुहुन्छ, तर धर्मी मानिसहरूको प्रार्थना उहाँको आनन्द हो ।
9 ದುಷ್ಟನ ನಡತೆಯು ಯೆಹೋವನಿಗೆ ಅಸಹ್ಯ, ಧರ್ಮಾಸಕ್ತನು ಆತನಿಗೆ ಪ್ರಿಯ.
परमप्रभुले दुष्‍ट मानिसहरूको मार्गलाई घृणा गर्नुहुन्छ, तर ठिक कुराको पछि लाग्‍नेलाई उहाँले प्रेम गर्नुहुन्छ ।
10 ೧೦ ಧರ್ಮಮಾರ್ಗವನ್ನು ಬಿಟ್ಟವನಿಗೆ ತೀಕ್ಷ್ಣ ಶಿಕ್ಷಣ, ಗದರಿಕೆಯನ್ನು ಕೇಳದವನಿಗೆ ಸಾವು.
कठोर अनुशासनले आफ्नो बाटो त्याग्‍नेको प्रतीक्षा गर्छ, र सुधारलाई घृणा गर्नेचाहिँ मर्ने छ ।
11 ೧೧ ಪಾತಾಳವೂ, ನಾಶಲೋಕವೂ ಯೆಹೋವನಿಗೆ ಗೋಚರವಾಗಿರುವಲ್ಲಿ ನರವಂಶದವರ ಹೃದಯಗಳು ಆತನಿಗೆ ಮತ್ತೂ ಸ್ಪಷ್ಟ. (Sheol h7585)
पाताल र विनाश परमप्रभुको सामु खुला छन् भने मानिसको हृदय झन् कति खुला होला? (Sheol h7585)
12 ೧೨ ಧರ್ಮನಿಂದಕನು ಗದರಿಕೆಯನ್ನು ಕೇಳನು, ಜ್ಞಾನಿಗಳ ಸಂಗಡ ಸೇರನು.
गिल्ला गर्ने सुधारदेखि अप्रसन्‍न हुन्छ । त्यो बुद्धिमान्‌कहाँ जाँदैन ।
13 ೧೩ ಹರ್ಷ ಹೃದಯದಿಂದ ಹಸನ್ಮುಖ, ಮನೋವ್ಯಥೆಯಿಂದ ಆತ್ಮಭಂಗ.
आनन्दित हृदयले मुहारलाई हँसिलो बनाउँछ, तर हृदयको पिरले आत्मालाई चोट पुर्‍याउँछ ।
14 ೧೪ ವಿವೇಕಿಯ ಹೃದಯ ತಿಳಿವಳಿಕೆಯನ್ನು ಹುಡುಕುವುದು, ಮೂಢರ ಬಾಯಿ ಮೂರ್ಖತನವನ್ನು ಮುಕ್ಕುವುದು.
विवेशकशीलहरूको हृदयले ज्ञानको खोजी गर्छ, तर मूर्खहरूको मुखले मूर्खता नै रुचाउँछ ।
15 ೧೫ ದೀನನ ದಿನಗಳೆಲ್ಲಾ ದುಃಖಭರಿತ, ಹರ್ಷಹೃದಯನಿಗೆ ನಿತ್ಯವೂ ಔತಣ.
थिचोमिचोमा परेकाहरूका सबै दिन दुःखद हुन्छन्, तर आनन्दित हृदयको सुखको अन्त्य हुँदैन ।
16 ೧೬ ಕಳವಳದಿಂದ ಕೂಡಿದ ಬಹುಧನಕ್ಕಿಂತಲೂ ಯೆಹೋವನ ಭಯದಿಂದ ಕೂಡಿದ ಅಲ್ಪ ಧನವೇ ಲೇಸು.
भ्रमको साथ धेरै धन-सम्पत्ति हुनुभन्दा बरु परमप्रभुको भयको साथ थोरै हुनु उत्तम हो ।
17 ೧೭ ದ್ವೇಷವಿರುವಲ್ಲಿ ಮೃಷ್ಟಾನ್ನಕ್ಕಿಂತಲೂ, ಪ್ರೇಮವಿರುವಲ್ಲಿ ಸೊಪ್ಪಿನ ಊಟವೇ ಉತ್ತಮ.
घृणा भएको ठाउँमा पुष्‍टाइएको बाछो खानुभन्दा बरु प्रेम भएको ठाउँमा सागसब्जी खानु उत्तम हो ।
18 ೧೮ ಕೋಪಿಷ್ಠನು ವ್ಯಾಜ್ಯವನ್ನೆಬ್ಬಿಸುವನು, ದೀರ್ಘಶಾಂತನು ಜಗಳವನ್ನು ಶಮನಪಡಿಸುವನು.
रिसाएको मानिसले तर्क-वितर्क गर्छ, तर रिसाउनमा धिमा व्यक्तिले झगडालाई शान्त पार्छ ।
19 ೧೯ ಸೋಮಾರಿಯ ಮಾರ್ಗ ಮುಳ್ಳುಬೇಲಿ, ಯಥಾರ್ಥವಂತನ ಮಾರ್ಗ ರಾಜಮಾರ್ಗ.
अल्छेको बाटो काँढाको छेकबार भएको ठाउँझैँ हुन्छ, तर धर्मीको बाटो निर्मित लोकमार्ग हो ।
20 ೨೦ ಜ್ಞಾನವಂತನಾದ ಮಗನು ತಂದೆಯನ್ನು ಉಲ್ಲಾಸಗೊಳಿಸುವನು, ಜ್ಞಾನಹೀನನು ತಾಯಿಯನ್ನು ತಿರಸ್ಕರಿಸುವನು.
बुद्धिमान् छोरोले आफ्नो बुबालाई आनन्द दिन्छ, तर मूर्ख व्यक्तिले आफ्नी आमालाई तुच्छ ठान्छ ।
21 ೨೧ ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು, ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.
मूर्खताले बेसमझको मानिसलाई आनन्द दिन्छ, तर समझशक्ति भएको मानिस सिधा बाटोमा हिँड्छ ।
22 ೨೨ ಆಲೋಚನೆ ಹೇಳುವವರಿಲ್ಲದೆ ಉದ್ದೇಶಗಳು ನೆರವೇರವು, ಬಹು ಮಂದಿ ಆಲೋಚನಾಪರರು ಇರುವಲ್ಲಿ ಅವು ನೆರವೇರುವವು.
सरसल्लाह नहुँदा योजनाहरू गलत हुन्छन्, तर धेरै परामर्शदाताहरूद्वारा तिनीहरू सफल हुन्छन् ।
23 ೨೩ ತಕ್ಕ ಉತ್ತರಕೊಡುವವನಿಗೆ ಎಷ್ಟೋ ಸಂತೋಷ! ಸಮಯೋಚಿತವಾದ ನುಡಿಯಲ್ಲಿ ಎಷ್ಟೋ ಸ್ವಾರಸ್ಯ!
उचित जवाफ दिँदा मानिसले आनन्द पाउँछ । ठिक समयमा बोलिएको वचन कति असल हुन्छ!
24 ೨೪ ಜೀವದ ಮಾರ್ಗವು ವಿವೇಕಿಯನ್ನು ಮೇಲಕ್ಕೆತ್ತುವುದು; ಅದು ಅವನನ್ನು ಪಾತಾಳದಿಂದ ತಪ್ಪಿಸುವುದು. (Sheol h7585)
जीवनको मार्गले विवेकशील मानिसहरूलाई उँभोतिर लैजान्छ । यसले तिनीहरूलाई उँधो पातालतिर जानदेखि फर्काउँछ । (Sheol h7585)
25 ೨೫ ಯೆಹೋವನು ಗರ್ವಿಷ್ಠನ ಮನೆಯನ್ನು ಕೆಡವಿಬಿಡುವನು; ವಿಧವೆಯ ಮೇರೆಯನ್ನು ನೆಲೆಗೊಳಿಸುವನು.
परमप्रभुले अहङ्कारीको घर भत्काइदिनुहुन्छ, तर विधवाको सम्पत्तिको रक्षा गर्नुहुन्छ ।
26 ೨೬ ಕುಯುಕ್ತಿಯು ಯೆಹೋವನಿಗೆ ಅಸಹ್ಯ, ನಯನುಡಿಯು ಆತನಿಗೆ ಪ್ರಿಯ.
परमप्रभुले दुष्‍ट मानिसहरूको विचारलाई घृणा गर्नुहुन्छ, तर दयाका वचनहरू शुद्ध हुन्छन् ।
27 ೨೭ ಸೂರೆಮಾಡುವವನು ಸ್ವಂತ ಮನೆಯನ್ನು ಬಾಧಿಸುವನು. ಲಂಚವನ್ನೊಪ್ಪದವನು ಸುಖವಾಗಿ ಬಾಳುವನು.
चोरी गर्नेले आफ्नो परिवारमा सङ्कष्‍ट ल्याउँछ, तर घुसलाई घृणा गर्नेचाहिँ बाँच्ने छ ।
28 ೨೮ ಶಿಷ್ಟನ ಹೃದಯ ವಿವೇಚಿಸಿ ಉತ್ತರಕೊಡುತ್ತದೆ, ದುಷ್ಟನ ಬಾಯಿ ಕೆಟ್ಟದ್ದನ್ನು ಕಾರುತ್ತದೆ.
जवाफ दिनुअगि धर्मात्माको हृदयले मनन गर्छ, तर दुष्‍ट मानिसको मुखले आफ्नो सबै खराबी ओकल्छ ।
29 ೨೯ ಯೆಹೋವನು ದುಷ್ಟರಿಗೆ ದೂರ, ಶಿಷ್ಟರ ಬಿನ್ನಹಕ್ಕೆ ಹತ್ತಿರ.
दुष्‍ट मानिसहरूबाट परमप्रभु निकै टाढा हुनुहुन्छ, तर उहाँले धर्मी मानिसहरूको प्रार्थना सुन्‍नुहुन्छ ।
30 ೩೦ ಹಸನ್ಮುಖ ಹೃದಯಕ್ಕೆ ಆನಂದ, ಶುಭಸಮಾಚಾರ ದೇಹಕ್ಕೆ ಆರೋಗ್ಯ.
आँखाको ज्योतिले हृदयमा आनन्द ल्याउँछ, र शुभ खबर शरीरको लागि स्वास्थ्य हो ।
31 ೩೧ ಜೀವಪ್ರದವಾದ ಗದರಿಕೆಗೆ ಕಿವಿಗೊಡುವವನು, ಜ್ಞಾನಿಗಳ ನಡುವೆ ನೆಲೆಗೊಳ್ಳುವನು.
कसरी जिउने भनी कसैले तिमीलाई सुधार गर्दा तिमीले ध्यान दियौ भने तिमी बुद्धिमान् मानिसहरूका बिचमा रहने छौ ।
32 ೩೨ ಶಿಕ್ಷೆಯನ್ನು ತಿರಸ್ಕರಿಸುವವನು ತನ್ನನ್ನೇ ನಿರಾಕರಿಸಿಕೊಳ್ಳುವನು, ಗದರಿಕೆಯನ್ನು ಕೇಳುವವನು ಬುದ್ಧಿಯನ್ನು ಪಡೆಯುವನು.
अनुशासनलाई इन्कार गर्नेले आफैलाई तुच्छ ठान्छ, तर सुधारलाई ध्यान दिनेले समझशक्ति पाउँछ ।
33 ೩೩ ಯೆಹೋವನ ಭಯವೇ ಜ್ಞಾನೋಪದೇಶ, ಗೌರವಕ್ಕೆ ಮೊದಲು ವಿನಯ.
परमप्रभुको भयले बुद्धि सिकाउँछ, र आदरअगि विनम्रता आउँछ ।

< ಜ್ಞಾನೋಕ್ತಿಗಳು 15 >