< ಜ್ಞಾನೋಕ್ತಿಗಳು 19 >

1 ಕಪಟವಾಗಿ ಮಾತನಾಡುವ ಮೂಢನಿಗಿಂತಲೂ, ನಿರ್ದೋಷಿಯಾಗಿ ನಡೆಯುವ ದರಿದ್ರನೇ ಶ್ರೇಷ್ಠ.
ज्याची वाणी कुटिल असून जो मूर्ख आहे त्याच्यापेक्षा जो कोणी गरीब मनुष्य आपल्या सात्विकपणाने चालतो तो उत्तम आहे.
2 ತಿಳಿವಳಿಕೆಯಿಲ್ಲದೆ ಕೋರುವುದು ಯುಕ್ತವಲ್ಲ, ದುಡುಕುವ ಕಾಲು ದಾರಿತಪ್ಪುವುದು.
ज्ञानाशिवाय इच्छा असणे सुद्धा चांगले नाही, आणि जो कोणी उतावळ्या पायांचा आहे तो वाट चुकतो.
3 ಮನುಷ್ಯನು ಮೂರ್ಖತನದಿಂದ ತನ್ನ ಗತಿಯನ್ನು ಕೆಡಿಸಿಕೊಂಡು, ಯೆಹೋವನ ಮೇಲೆ ಕುದಿಯುವನು.
मनुष्याचा मूर्खपणा त्याच्या आयुष्याचा नाश करतो, आणि त्याचे मन परमेश्वराविरूद्ध संतापते.
4 ಭಾಗ್ಯವಂತನಿಗೆ ಬಹು ಮಂದಿ ಸ್ನೇಹಿತರು, ಬಡವನಿಗೆ ಇದ್ದ ಸ್ನೇಹಿತನೂ ದೂರವಾಗುವನು.
संपत्ती खूप मित्रांची भर घालते, पण गरीब मनुष्याचे मित्र त्याच्यापासून वेगळे होतात.
5 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ತಪ್ಪಿಸಿಕೊಳ್ಳನು.
खोटा साक्षीदार शिक्षा झाल्यावाचून राहणार नाही, आणि जो कोणी लबाड्या करतो तो सुटणार नाही.
6 ಉದಾರಿಯ ಕಟಾಕ್ಷವನ್ನು ಅನೇಕರು ಕೋರುವರು, ದಾನಶೂರನಿಗೆ ಪ್ರತಿಯೊಬ್ಬನೂ ಸ್ನೇಹಿತನಲ್ಲವೇ.
उदार मनुष्यापासून पुष्कळ लोक मदतीसाठी विचारणा करतात; आणि जो कोणी दान देतो त्याचा प्रत्येकजण मित्र आहे.
7 ಬಡವನನ್ನು ಬಂಧುಗಳೆಲ್ಲಾ ಹಗೆಮಾಡುವರು, ಹೌದು, ಮಿತ್ರರೂ ಅವನಿಗೆ ದೂರವಾಗುವರು. ಅವರ ಬರೀ ಮಾತುಗಳನ್ನು ನಂಬಿ ಹಿಂಬಾಲಿಸಿದರೆ ಏನೂ ಸಿಕ್ಕದು.
गरीब मनुष्याचे सर्व बंधू त्याचा द्वेष करतात, तर मग त्याचे मित्र त्याच्यापासून किती तरी दूर जाणार! तो बोलत त्यांच्या पाठोपाठ जातो पण ते निघून जातात.
8 ಬುದ್ಧಿಯನ್ನು ಸಂಪಾದಿಸುವವನು ತನಗೆ ತಾನೇ ಮಿತ್ರನು, ವಿವೇಕವನ್ನು ಕಾಪಾಡುವವನು ಮೇಲನ್ನು ಪಡೆಯುವನು.
जो कोणी ज्ञान मिळवतो तो आपल्या जिवावर प्रेम करतो, जो कोणी सुज्ञता सांभाळतो त्यास जे काही चांगले आहे ते मिळेल.
9 ಸುಳ್ಳುಸಾಕ್ಷಿಯು ಶಿಕ್ಷಿಸಲ್ಪಡದೆ ಇರುವುದಿಲ್ಲ, ಸುಳ್ಳಾಡುವವನು ಹಾಳಾಗುವನು.
खोटी साक्ष देणाऱ्याला शिक्षा झाल्यावाचून राहणार नाही, पण जो कोणी लबाड्या करतो त्याचा नाश होईल.
10 ೧೦ ಮೂಢನಿಗೆ ಸುಖಭೋಗ ಜೀವನ ಯುಕ್ತವಲ್ಲ, ದಾಸನಿಗೆ ದೊರೆಗಳ ಮೇಲಣ ದೊರೆತನ ಯುಕ್ತವಲ್ಲ.
१०मूर्खाला आलिशानपणा शोभत नाही, तसे सरदारांवर राज्य करणे गुलामाला कितीतरी कमी शोभते.
11 ೧೧ ಮನುಷ್ಯನ ವಿವೇಕವು ಅವನ ಸಿಟ್ಟಿಗೆ ಅಡ್ಡಿ, ಪರರ ದೋಷವನ್ನು ಲಕ್ಷಿಸದಿರುವುದು ಅವನಿಗೆ ಭೂಷಣ.
११बुद्धीने मनुष्य रागास मंद होतो, आणि अपराधाकडे दुर्लक्ष करणे त्याची शोभा आहे.
12 ೧೨ ರಾಜನ ರೋಷವು ಸಿಂಹದ ಗರ್ಜನೆ, ಅವನ ದಯೆಯು ಪೈರಿನ ಇಬ್ಬನಿ.
१२राजाचा राग सिंहाच्या गर्जनेसारखा आहे, पण त्याचा उपकार गवतावर पडलेल्या दहिवरासारखे आहे.
13 ೧೩ ಜ್ಞಾನಹೀನನಾದ ಮಗನು ತಂದೆಗೆ ಹಾನಿ, ಜಗಳವಾಡುವ ಹೆಂಡತಿಯು ತಟತಟನೆ ತೊಟ್ಟಿಕ್ಕುವ ಹನಿ.
१३मूर्ख मुलगा आपल्या वडिलांना अरिष्टासारखा आहे; आणि भांडखोर पत्नी सतत गळणाऱ्या पाण्याच्या थेंबाप्रमाणे आहे.
14 ೧೪ ಮನೆಮಾರು, ಆಸ್ತಿಪಾಸ್ತಿಯು ಪೂರ್ವಿಕರಿಂದ ದೊರಕುವವು, ವಿವೇಕಿನಿಯಾದ ಹೆಂಡತಿಯು ಯೆಹೋವನ ಅನುಗ್ರಹವೇ.
१४घर व संपत्ती आईवडीलांकडून आलेले वतन आहे, पण समंजस पत्नी परमेश्वरापासून आहे.
15 ೧೫ ಮೈಗಳ್ಳತನವು ಗಾಢನಿದ್ರೆಯಲ್ಲಿ ಮುಳುಗಿಸುವುದು, ಸೋಮಾರಿಯು ಹಸಿವೆಗೊಳ್ಳುವನು.
१५आळशीपणा आपणाला गाढ झोपेत टाकतो, पण ज्याला काम करण्याची इच्छा नाही तो उपाशी जातो.
16 ೧೬ ಆಜ್ಞೆಯನ್ನು ಪಾಲಿಸುವವನು ಆತ್ಮವನ್ನು ಪಾಲಿಸುವನು, ನಡತೆಯನ್ನು ಲಕ್ಷಿಸದವನು ಸಾಯುವನು.
१६जो कोणी आज्ञा पाळतो तो आपल्या जीवाचे रक्षण करतो, पण जो मनुष्य आपल्या मार्गाविषयी विचार करत नाही तो मरेल.
17 ೧೭ ಬಡವರಿಗೆ ದಯೆತೋರಿಸುವವನು ಯೆಹೋವನಿಗೆ ಸಾಲಕೊಡುವವನು, ಆ ಉಪಕಾರಕ್ಕೆ ಯೆಹೋವನೇ ಪ್ರತ್ಯುಪಕಾರ ಮಾಡುವನು.
१७जो कोणी गरीबावर दया करतो तो परमेश्वरास उसने देतो, आणि तो त्याने जे काही केले त्याची परतफेड करील.
18 ೧೮ ಬುದ್ಧಿ ಬರುವುದೆಂಬ ನಿರೀಕ್ಷೆಯಿಂದ ಮಗನನ್ನು ಶಿಕ್ಷಿಸು, ಹಾಳುಮಾಡಲು ಮನಸ್ಸು ಮಾಡಬೇಡ,
१८काही आशा असेल तर आपल्या मुलाला शिक्षा कर, आणि त्याच्या मरणाची तुझ्या जिवाला काळजी वाटू देऊ नको.
19 ೧೯ ಕೋಪಿಷ್ಠನು ತನಗಾಗುವ ದಂಡನೆಯನ್ನು ಅನುಭವಿಸಲಿ, ಬಿಡಿಸಿದರೆ ಪ್ರತಿಬಾರಿಯೂ ಬಿಡಿಸಬೇಕಾಗುವುದು.
१९रागीट मनुष्याला दंड दिला पाहिजे; जर तुम्ही त्यास सोडवले, तर तुम्हास दुसऱ्या वेळेसही सोडवावे लागेल.
20 ೨೦ ಬುದ್ಧಿವಾದವನ್ನು ಕೇಳು, ಉಪದೇಶವನ್ನಾಲಿಸು, ಮುಂದೆ ಜ್ಞಾನಿಯಾಗುವಿ.
२०सल्ला ऐक आणि शिक्षण स्वीकार, म्हणजे तू आपल्या आयुष्याच्या शेवटी सुज्ञान होशील.
21 ೨೧ ಮನುಷ್ಯನ ಮನಸ್ಸಿನಲ್ಲಿ ಅನೇಕ ಸಂಕಲ್ಪಗಳಿವೆ, ಯೆಹೋವನ ಸಂಕಲ್ಪವೇ ಈಡೇರುವುದು.
२१मनुष्याच्या मनात बऱ्याच योजना येतात, पण परमेश्वराचे उद्देश स्थिर राहतील.
22 ೨೨ ಮನುಷ್ಯನು ತನ್ನ ಹೃದಯದಲ್ಲಿ ಬಯಸುವಂಥದ್ದು ನಿಷ್ಠೆಯಾಗಿದೆ, ಬಡವನಾಗಿರುವುದು ಉತ್ತಮ.
२२प्रामाणिकपणा ही मनुष्याची इच्छा असते; आणि खोटे बोलणाऱ्यापेक्षा गरीब चांगला.
23 ೨೩ ಯೆಹೋವನ ಭಯವು ಜೀವದಾಯಕವು, ಭಯಭಕ್ತಿಯುಳ್ಳವನು ತೃಪ್ತನಾಗಿ ನೆಲೆಗೊಳ್ಳುವನು, ಅವನಿಗೆ ಕೇಡು ಸಂಭವಿಸದು.
२३परमेश्वरास आदर द्या तो त्यास पात्र आहे; आणि तो जीवनाकडे नेतो, आणि ज्या कोणाकडे ते आहे तो समाधानी आहे, आणि त्याची संकटांनी हानी होणार नाही.
24 ೨೪ ಮೈಗಳ್ಳನು ಪಾತ್ರೆಯೊಳಗೆ ಕೈ ಮುಳುಗಿಸಿದ ಮೇಲೆ, ತಿರುಗಿ ಬಾಯಿಯ ಹತ್ತಿರಕ್ಕೆ ತರಲಾರನು.
२४आळशी आपला हात ताटात घालतो, आणि तो पुन्हा आपल्या तोंडाकडेसुद्धा घेऊन जात नाही.
25 ೨೫ ಧರ್ಮನಿಂದಕನಿಗೆ ಪೆಟ್ಟುಹೊಡೆ, ನೋಡಿದ ಅವಿವೇಕಿ ಜಾಣನಾಗುವನು, ವಿವೇಕಿಯನ್ನು ಗದರಿಸು, ತಾನೇ ತಿಳಿವಳಿಕೆಯನ್ನು ಗ್ರಹಿಸುವನು.
२५निंदकाला तडाखा मार म्हणजे भोळा समंजस होईल, बुद्धिमानाला शब्दाचा मारा कर म्हणजे त्यास ज्ञान कळेल.
26 ೨೬ ತಂದೆಯನ್ನು ಹೊಡೆದು, ತಾಯಿಯನ್ನು ಓಡಿಸುವ ಮಗನು, ನಾಚಿಕೆಯನ್ನು ಮತ್ತು ಅವಮಾನವನ್ನು ಉಂಟುಮಾಡುವನು.
२६जो कोणी आपल्या पित्याला लुटतो, व आईला हाकलून लावतो, तो मुलगा लाज आणि दोष आणणारा आहे.
27 ೨೭ ಮಗನೇ, ಬುದ್ಧಿವಾದಗಳನ್ನು ಅನುಸರಿಸಲಿಕ್ಕೆ ಮನಸ್ಸಿಲ್ಲದಿದ್ದರೆ, ಉಪದೇಶ ಕೇಳುವುದನ್ನೇ ಬಿಟ್ಟುಬಿಡು.
२७माझ्या मुला, जर तू सूचना ऐकण्याचे थांबवले तर ज्ञानाच्या वचनापासून भटकशील.
28 ೨೮ ನೀಚ ಸಾಕ್ಷಿಯು ನ್ಯಾಯವನ್ನು ಗೇಲಿಮಾಡುವನು, ದುಷ್ಟರ ಬಾಯಿ ದ್ರೋಹವನ್ನು ಆತುರದಿಂದ ನುಂಗುವುದು.
२८भ्रष्ट साक्षीदार न्यायाची थट्टा करतो आणि वाईटाचे मुख अन्याय गिळून टाकते.
29 ೨೯ ಧರ್ಮನಿಂದಕರಿಗೆ ದಂಡನೆಯ ತೀರ್ಪು ಸಿದ್ಧ, ಮೂಢರ ಬೆನ್ನಿಗೆ ಪೆಟ್ಟು ಖಂಡಿತ.
२९निंदकासाठी धिक्कार आणि मूर्खाच्या पाठीसाठी फटके तयार आहेत.

< ಜ್ಞಾನೋಕ್ತಿಗಳು 19 >