< ಜ್ಞಾನೋಕ್ತಿಗಳು 21 >

1 ರಾಜನ ಸಂಕಲ್ಪಗಳು ಯೆಹೋವನ ಕೈಯಲ್ಲಿ ಇರುವ ನೀರಿನ ಕಾಲುವೆಗಳಂತೆ ಇವೆ, ಆತನು ತನಗೆ ಬೇಕಾದ ಕಡೆಗೆ ಅದನ್ನು ತಿರುಗಿಸುತ್ತಾನೆ.
राजाको हृदय परमप्रभुको हातमा भएको खोलाजस्तो हो । उहाँलाई खुसी लागेअनुसार उहाँले त्यसलाई फर्काउनुहुन्छ ।
2 ನರನ ನಡತೆಯು ಸ್ವಂತ ದೃಷ್ಟಿಗೆ ಸರಿಯಾಗಿ ಕಾಣುತ್ತವೆ, ಯೆಹೋವನು ಹೃದಯಗಳನ್ನೇ ಪರೀಕ್ಷಿಸುವನು.
हरेक मानिसको बाटो त्यसको आफ्नै दृष्‍टिमा ठिक छ, तर परमप्रभुले नै हृदयको जाँच गर्नुहुन्छ ।
3 ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.
बलिदानभन्दा जे ठिक र न्यायसङ्गत छ, त्यही गर्नु परमप्रभुको लागि बढी ग्रहणयोग्य हुन्छ ।
4 ಗರ್ವದ ದೃಷ್ಟಿ, ಕೊಬ್ಬಿದ ಹೃದಯ, ದುಷ್ಟರ ಭಾಗ್ಯ, ಇವು ಧರ್ಮವಿರುದ್ಧ.
अहङ्कारी आँखा, घमण्डी हृदय र दुष्‍टको बत्ती पाप हुन् ।
5 ಶ್ರಮಶೀಲರಿಗೆ ತಮ್ಮ ಯತ್ನಗಳಿಂದ ಸಮೃದ್ಧಿ, ಆತುರಪಡುವವರಿಗೆಲ್ಲಾ ಕೊರತೆಯೇ.
परिश्रमीका योजनाहरूले केवल उन्‍नतितिर लैजान्छन्, तर हतार काम गर्नेचाहिँ केवल दरिद्रतामा पुग्छ ।
6 ಸುಳ್ಳಿನಿಂದ ಸಿಕ್ಕಿದ ಸಂಪತ್ತು ಹಬೆಯಂತೆ ಅಸ್ಥಿರ, ಮೃತ್ಯುಪಾಶದಂತೆ ನಾಶಕರ.
झुट बोलेर सम्पत्ति आर्जन गर्नु उडिजाने बाफ र मार्ने पासोजस्तै हो ।
7 ದುಷ್ಟರು ನ್ಯಾಯವನ್ನು ನಿರಾಕರಿಸುವ ಕಾರಣ, ಅವರ ಬಲಾತ್ಕಾರವು ಅವರನ್ನೇ ಎಳೆದುಕೊಂಡು ಹೋಗುವುದು.
दुष्‍टहरूको हिंसाले तिनीहरूलाई तानेर लैजान्छ, किनकि ठिक काम गर्न तिनीहरू इन्कार गर्छन् ।
8 ದೋಷಿಯ ದಾರಿ ಡೊಂಕು; ಶುದ್ಧನ ನಡತೆ ಸರಳ.
दोषी मानिसको बाटो टेडो हुन्छ, तर निर्दोषले ठिक काम गर्छ ।
9 ಮನೆಯಲ್ಲಿ ಜಗಳಗಂಟಿಯ ಜೊತೆಯಲ್ಲಿರುವುದಕ್ಕಿಂತಲೂ, ಮಾಳಿಗೆಯ ಒಂದು ಮೂಲೆಯಲ್ಲಿ ವಾಸಿಸುವುದೇ ಲೇಸು.
झगडालु पत्‍नीसित एउटै घरमा बस्‍नुभन्दा कौसीको कुनामा बस्‍नु बेस हुन्छ ।
10 ೧೦ ದುರಾತ್ಮನು ಕೇಡಿನ ಮೇಲೇ ಮನಸ್ಸಿಡುವನು ನೆರೆಯವನಿಗೂ ದಯೆತೋರಿಸನು.
दुष्‍टको भोकले खराबीको लालसा गर्छ । त्यसको छिमेकीले त्यसको आँखामा निगाह देख्दैन ।
11 ೧೧ ಧರ್ಮನಿಂದಕನಿಗೆ ದಂಡನೆಯಾದರೆ ನೋಡಿದ ಮೂಢನೂ ಜ್ಞಾನವನ್ನು ಪಡೆಯುವನು, ಜ್ಞಾನಿಗೆ ಶಿಕ್ಷೆಯಾದರೆ ತಾನೇ ತಿಳಿವಳಿಕೆಯನ್ನು ಹೊಂದುವನು.
खिल्ली गर्नेलाई दण्ड दिइँदा निर्बुद्धि बुद्धिमान् बन्छ, र बुद्धिमान् मानिसलाई अर्ती दिइँदा त्यसले ज्ञानलाई पक्रिराख्छ ।
12 ೧೨ ನೀತಿಸ್ವರೂಪನು ಅಧರ್ಮಿಯ ಮನೆಯನ್ನು ಲಕ್ಷ್ಯಕ್ಕೆ ತಂದು, ಅಧರ್ಮಿಗಳನ್ನು ಕೆಡವಿ ಅವರನ್ನು ಕೇಡಿಗೆ ತಳ್ಳುವನು.
धर्मात्माले दुष्‍ट मानिसको घरको निगरानी गर्छ । उहाँले दुष्‍ट मानिसहरूमाथि विपत्ति ल्याउनुहुन्छ ।
13 ೧೩ ಬಡವನ ಕೂಗಿಗೆ ಕಿವಿಮುಚ್ಚಿಕೊಳ್ಳುವವನು, ತಾನೇ ಮೊರೆಯಿಡುವಾಗ ಯಾರೂ ಉತ್ತರಕೊಡರು.
गरिबको पुकारामा कान थुन्‍नेले पुकारा गर्दा त्यसलाई जवाफ दिइने छैन ।
14 ೧೪ ಗುಪ್ತ ಬಹುಮಾನವು ಕೋಪವನ್ನಾರಿಸುವುದು, ಮಡಲಲ್ಲಿಟ್ಟ ಲಂಚವು ಕ್ರೋಧವನ್ನು ಅಣಗಿಸುವುದು.
गुप्‍तमा दिइएको उपहारले रिस मारिदिन्छ, र लुकाएर दिइएको उपहारले बल्दो क्रोधलाई शान्त पारिदिन्छ ।
15 ೧೫ ನ್ಯಾಯಮಾರ್ಗವು ಶಿಷ್ಟರಿಗೆ ಸಂತೋಷ, ಕೆಡುಕರಿಗೆ ಕೇಡು.
न्याय कायम हुँदा यसले धर्मात्मामा आनन्द ल्याउँछ भने खराबी गर्नेहरूमा त्रास ल्याउँछ ।
16 ೧೬ ಜ್ಞಾನಮಾರ್ಗದಿಂದ ತಪ್ಪಿದವನಿಗೆ, ಪ್ರೇತಸಮೂಹವೇ ವಿಶ್ರಾಂತಿಸ್ಥಾನ.
समझशक्तिको मार्गबाट तर्कने मानिसले मरेकाहरूको सभामा विश्राम पाउने छ ।
17 ೧೭ ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.
मोजमज्‍जालाई प्रेम गर्ने गरिब हुनेछ । दाखमद्य र तेललाई प्रेम गर्ने धनी हुने छैन ।
18 ೧೮ ಶಿಷ್ಟನಿಗೆ ಪ್ರತಿಯಾಗಿ ದುಷ್ಟನೂ, ಸತ್ಯವಂತರಿಗೆ ಬದಲಾಗಿ ದ್ರೋಹಿಯೂ ದಂಡನೆಗೆ ಈಡಾಗುವರು.
दुष्‍ट मानिस धर्मी मानिसको लागि प्रायश्‍चित्त हुन्छ, र विश्‍वासघाती मानिस सोझो मानिसको लागि प्रायश्‍चित्त हुन्छ ।
19 ೧೯ ಕಾಡುವ ಜಗಳಗಂಟಿಯ ಸಹವಾಸಕ್ಕಿಂತಲೂ, ಕಾಡಿನ ವಾಸವೇ ಲೇಸು.
झगडालु र रिसालु पत्‍नीसित बस्‍नुभन्दा उजाड्-स्थानमा बस्‍नु बेस हुन्छ ।
20 ೨೦ ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
इच्छा गरिएको खजाना र तेल बुद्धिमान्‌को बासस्थानमा हुन्छन्, तर मूर्खले यी सबै निलिदिन्छन् ।
21 ೨೧ ನೀತಿ ಮತ್ತು ಕೃಪೆಗಳನ್ನು ಹುಡುಕುವವನು ಜೀವ ಮತ್ತು ಕೀರ್ತಿಗಳನ್ನು ಪಡೆಯುವನು.
असल काम गर्ने र दयालु मानिसले जीवन, धार्मिकता र इज्‍जत पाउँछ ।
22 ೨೨ ಜ್ಞಾನಿಯು ಬಲಿಷ್ಠರ ಪಟ್ಟಣವನ್ನು ಮುತ್ತಿಗೆ ಹಾಕಿ, ಅವರು ನಂಬಿದ್ದ ಬಲವಾದ ಕೋಟೆಯನ್ನು ಕೆಡವಿ ಹಾಕುವನು.
बुद्धिमान् मानिसले शक्तिशाली योद्धाहरूको सहरको लेखाजोखा गर्छ, र तिनीहरूले भरोसा गरेको किल्लालाई भत्काइदिन्छ ।
23 ೨೩ ತನ್ನ ಬಾಯನ್ನೂ, ನಾಲಿಗೆಯನ್ನೂ ಕಾಯುವವನು ತೊಂದರೆಗಳಿಂದ ರಕ್ಷಿಸಿಕೊಳ್ಳುವನು.
आफ्नो मुख र जिब्रोको रखवाली गर्नेले आफैलाई कष्‍टबाट बचाउँछ ।
24 ೨೪ “ಧರ್ಮನಿಂದಕ” ಎನ್ನಿಸಿಕೊಳ್ಳುವವನು ಸೊಕ್ಕೇರಿದ ಅಹಂಕಾರಿಯಾಗಿ, ಗರ್ವ ಮತ್ತು ಮದದಿಂದ ಪ್ರವರ್ತಿಸುವನು.
घमण्डी र हठी मानिसको नाउँ “खिल्ली उडाउने” हो र त्यसले अभिमानीसाथ व्यवहार गर्छ ।
25 ೨೫ ಸೋಮಾರಿಯ ಆಶೆಯು ಅವನನ್ನು ಕೊಲ್ಲುವುದು, ಅವನ ಕೈಗಳು ದುಡಿಯಲಾರವು.
अल्छेको इच्छाले त्यसलाई मार्छ, किनकि त्यसको हातले काम गर्न इन्कार गर्छ ।
26 ೨೬ ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.
दिनभरि त्यसले केवल लालसा गर्छ, तर धर्मात्माले मुट्ठी खोलेर दिन्छ ।
27 ೨೭ ದುಷ್ಟರ ಯಜ್ಞವೇ ಅಸಹ್ಯ, ಅದನ್ನು ದುರ್ಬುದ್ಧಿಯಿಂದ ಅರ್ಪಿಸುವುದು ಮತ್ತೂ ಅಸಹ್ಯ.
दुष्‍टको बलिदान घृणित हुन्छ । त्यसले खराब अभिप्राय लिएर ल्याउँदा यो झनै घृणित हुन्छ ।
28 ೨೮ ಸುಳ್ಳು ಸಾಕ್ಷಿಯು ಅಳಿದುಹೋಗುವುದು, ಕೇಳಿದ್ದನ್ನೇ ಹೇಳುವವನ ಸಾಕ್ಷಿಯು ಶಾಶ್ವತವಾಗಿರುವುದು.
झुटो साक्षी नष्‍ट हुने छ, तर ध्यान दिएर सुन्‍नेले बोलिरहने छ ।
29 ೨೯ ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ, ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.
दुष्‍ट मानिस हठी हुन्छ, तर सोझो मानिस आफ्ना मार्गहरूबारे निश्‍चित हुन्छ ।
30 ೩೦ ಯಾವ ಜ್ಞಾನವೂ, ಯಾವ ವಿವೇಕವೂ, ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವುದಿಲ್ಲ.
यस्तो कुनै बुद्धि, समझशक्ति र सरसल्लाह छैन जुन परमप्रभुको विरुद्धमा खडा हुन सक्छ ।
31 ೩೧ ಅಶ್ವಬಲವು ಯುದ್ಧದಿನಕ್ಕಾಗಿ ಸನ್ನದ್ಧವಾಗಿದ್ದರೂ ಜಯವು ಯೆಹೋವನಿಂದಲೇ.
घोडा युद्धको लागि तयार पारिन्छ, तर विजयचाहिँ परमप्रभुकै हो ।

< ಜ್ಞಾನೋಕ್ತಿಗಳು 21 >