< ಜ್ಞಾನೋಕ್ತಿಗಳು 22 >

1 ಬಹುಧನಕ್ಕಿಂತಲೂ ಒಳ್ಳೆಯ ಹೆಸರು ಉತ್ತಮ, ಬೆಳ್ಳಿ, ಬಂಗಾರಕ್ಕಿಂತಲೂ ಸತ್ಕೀರ್ತಿಯು ಅಮೂಲ್ಯ.
चांगले नाव विपुल धनापेक्षा आणि सोने व चांदीपेक्षा प्रीतीयुक्त कृपा निवडणे उत्तम आहे.
2 ಬಡವರು ಮತ್ತು ಸಿರಿವಂತರು ಸ್ಥಿತಿಯಲ್ಲಿ ಎದುರುಬದುರಾಗಿದ್ದಾರೆ, ಯೆಹೋವನೇ ಅವರನ್ನೆಲ್ಲಾ ಸೃಷ್ಟಿಸಿದನು.
गरीब आणि श्रीमंत यांच्यात हे सामाईक आहे, त्या सर्वांचा निर्माणकर्ता परमेश्वर आहे.
3 ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
शहाणा मनुष्य संकट येताना पाहून लपतो, पण भोळे पुढे जातात आणि त्यामुळे दुःख सोसतात.
4 ಧನ, ಮಾನ ಮತ್ತು ಜೀವಗಳು ದೀನಭಾವಕ್ಕೂ, ಯೆಹೋವನ ಭಯಕ್ಕೂ ಫಲ.
परमेश्वराचे भय नम्रता आणि संपत्ती, मान आणि जीवन आणते.
5 ವಕ್ರಬುದ್ಧಿಯುಳ್ಳವನ ಮಾರ್ಗದಲ್ಲಿ ಮುಳ್ಳುಗಳೂ, ಉರುಲುಗಳೂ ತುಂಬಿವೆ, ತನ್ನನ್ನು ರಕ್ಷಿಸಿಕೊಳ್ಳುವವನು ಅವುಗಳಿಗೆ ದೂರವಾಗಿರುವನು.
कुटिलाच्या मार्गात काटे आणि पाश असतात; जो कोणी आपल्या जिवाची काळजी करतो तो त्यापासून दूर राहतो.
6 ನಡೆಯಬೇಕಾದ ಮಾರ್ಗಕ್ಕೆ ತಕ್ಕಂತೆ ಮಕ್ಕಳನ್ನು ಶಿಕ್ಷಿಸು, ಮುಪ್ಪಿನಲ್ಲಿಯೂ ಓರೆಯಾಗರು.
मुलाने ज्या मार्गात चालावे त्याचे शिक्षण त्यास दे, आणि जेव्हा तो मोठा होईल तेव्हा त्या मार्गांपासून तो मागे फिरणार नाही.
7 ಬಲ್ಲಿದನು ಬಡವನಿಗೆ ಒಡೆಯ, ಸಾಲಗಾರನು ಸಾಲಕೊಟ್ಟವನಿಗೆ ಸೇವಕ.
श्रीमंत गरीबावर अधिकार गाजवितो, आणि जो कोणी एक उसने घेतो तो कोणा एका उसने देणाऱ्यांचा गुलाम आहे.
8 ಕೆಟ್ಟತನವನ್ನು ಬಿತ್ತುವವನು ಕೇಡನ್ನೇ ಕೊಯ್ಯುವನು, ಹೆಮ್ಮೆಯಿಂದ ಹಿಡಿದ ದಂಡವು ಅವನ ಕೈಯಿಂದ ಬಿದ್ದುಹೋಗುವುದು.
जो कोणी वाईट पेरतो तो संकटाची कापणी करतो, आणि त्याच्या क्रोधाची काठी तूटून जाईल.
9 ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.
जो उदार दृष्टीचा आहे तो आशीर्वादित होईल कारण तो आपले अन्न गरिबांबरोबर वाटून खातो.
10 ೧೦ ಧರ್ಮನಿಂದಕನನ್ನು ಓಡಿಸಿಬಿಟ್ಟರೆ ಜಗಳವು ತೊಲಗುವುದು, ಹೌದು, ವ್ಯಾಜ್ಯವು ತೀರಿ ಅವಮಾನವು ಇಲ್ಲವಾಗುವುದು.
१०निंदकाला घालवून दे म्हणजे भांडणे मिटतात, मतभेद आणि अप्रतिष्ठा संपून जातील.
11 ೧೧ ಹೃದಯಶುದ್ಧಿಯನ್ನು ಅಪೇಕ್ಷಿಸುವ ಮತ್ತು ಸವಿಮಾತನಾಡುವ ಮನುಷ್ಯನಿಗೆ ರಾಜನ ಸ್ನೇಹವು ದೊರೆಯುವುದು.
११ज्याला मनाची शुद्धता आवडते, आणि ज्याची वाणी कृपामय असते; अशांचा मित्र राजा असतो.
12 ೧೨ ಯೆಹೋವನ ಕಣ್ಣು ತಿಳಿವಳಿಕೆಗೆ ಕಾವಲು, ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.
१२परमेश्वराचे नेत्र ज्ञानाचे रक्षक आहेत, परंतु तो विश्वासघातक्यांची वचने उलथून टाकतो.
13 ೧೩ “ಹೊರಗೆ ಸಿಂಹವಿದೆ, ನನ್ನನ್ನು ಬೀದಿಯಲ್ಲಿ ಕೊಂದ್ದಿತು” ಎಂಬುದು ಸೋಮಾರಿಯ ನೆವ.
१३आळशी म्हणतो, “बाहेर रस्त्यावर सिंह आहे! मी उघड्या जागेवर ठार होईल.”
14 ೧೪ ಜಾರಸ್ತ್ರೀಯ ಬಾಯಿ ಆಳವಾದ ಹಳ್ಳ, ಯೆಹೋವನಿಗೆ ಸಿಟ್ಟನ್ನೆಬ್ಬಿಸಿದವನು ಅದರಲ್ಲಿ ಬೀಳುವನು.
१४व्यभिचारी स्त्रियांचे तोंड खोल खड्डा आहे; ज्या कोणाच्याविरूद्ध परमेश्वराचा कोप भडकतो तो त्यामध्ये पडतो.
15 ೧೫ ಮೂರ್ಖತನವು ಮಕ್ಕಳ ಮನಸ್ಸಿಗೆ ಸಹಜ, ಆದರೆ ಶಿಕ್ಷಕನ ಬೆತ್ತವು ಅದನ್ನು ತೊಲಗಿಸುವುದು.
१५बालकाच्या हृदयात मूर्खता जखडलेली असते, पण शिक्षेची काठी ती त्याच्यापासून दूर करील.
16 ೧೬ ಸ್ವಂತ ಲಾಭಕ್ಕಾಗಿ ಬಡವರನ್ನು ಹಿಂಸಿಸುವವನಿಗೂ, ಸಿರಿವಂತರಿಗೆ ಲಂಚಕೊಡುವವನಿಗೂ ಕೊರತೆಯೇ ಗತಿ.
१६जो कोणी आपली संपत्ती वाढविण्यासाठी गरीबावर जुलूम करतो, किंवा जो धनवानाला भेटी देतो, तोही गरीब होईल.
17 ೧೭ ಕಿವಿಗೊಟ್ಟು ಜ್ಞಾನಿಗಳ ಮಾತುಗಳನ್ನು ಕೇಳು, ನನ್ನ ಜ್ಞಾನಬೋಧೆಗೆ ಮನಸ್ಸು ಕೊಡು.
१७ज्ञानाची वचने ऐकून घे आणि त्याकडे लक्ष दे, आणि आपले मन माझ्या ज्ञानाकडे लाव.
18 ೧೮ ನೀನು ಆ ಮಾತುಗಳನ್ನು ಅಂತರಂಗದಲ್ಲಿ ಕಾಪಾಡುತ್ತಾ, ತುಟಿಗಳಲ್ಲಿ ಸಿದ್ಧಪಡಿಸಿಕೊಂಡಿದ್ದರೆ ಎಷ್ಟೋ ರಮ್ಯ.
१८कारण ती जर तू आपल्या अंतर्यामात ठेवशील, आणि ती सर्व तुझ्या ओठावर तयार राहतील. तर किती बरे होईल.
19 ೧೯ ನೀನು ಯೆಹೋವನಲ್ಲಿ ಭರವಸವಿಡಬೇಕೆಂದು, ಅವುಗಳನ್ನು ಈ ದಿನ ನಿನಗೇ ತಿಳಿಯಪಡಿಸಿದ್ದೇನೆ.
१९परमेश्वरावर तुम्ही विश्वास ठेवावा, म्हणून मी तुला ती वचने आज शिकवली आहेत.
20 ೨೦ ಸತ್ಯವಚನಗಳು ಎಷ್ಟೋ ಯಥಾರ್ಥವೆಂದು ನೀನು ತಿಳಿದುಕೊಂಡು, ನಿನ್ನನ್ನು ಕಳುಹಿಸಿದವರಿಗೆ ಸತ್ಯವಚನಗಳನ್ನೇ ಅರಿಕೆ ಮಾಡುವಂತೆ,
२०मी तुझ्यासाठी शिक्षण व ज्ञान ह्यातल्या तीस म्हणी लिहिल्या नाहीत काय?
21 ೨೧ ಸತ್ಯ, ತಿಳಿವಳಿಕೆಯ ವಿಷಯವಾಗಿ ಇದಕ್ಕೆ ಮೊದಲೇ ನಿನಗಾಗಿ ಬರೆದಿರುವೆನಲ್ಲಾ.
२१या सत्याच्या वचनाचे विश्वासूपण तुला शिकवावे, ज्याने तुला पाठवले त्यास विश्वासाने उत्तरे द्यावीत म्हणून नाहीत काय?
22 ೨೨ ಬಡವರಿಗೆ ದಿಕ್ಕಿಲ್ಲವೆಂದು ತಿಳಿದು ಅವರನ್ನು ಸೂರೆ ಮಾಡಬೇಡ, ನ್ಯಾಯಸ್ಥಾನದಲ್ಲಿ ದರಿದ್ರರನ್ನು ತುಳಿಯಬೇಡ.
२२गरीब मनुष्यास लुटू नको, कारण तो गरीबच आहे, किंवा गरजवंतावर वेशीत जुलूम करू नकोस.
23 ೨೩ ಯೆಹೋವನೇ ಅವರ ವ್ಯಾಜ್ಯವನ್ನು ನಡೆಸಿ, ಹಾಳುಮಾಡಿದವರ ಜೀವವನ್ನು ಹಾಳುಮಾಡುವನು.
२३कारण परमेश्वर त्यांचा कैवार घेईल, आणि ज्या कोणी त्यांना लुटले त्यांचे जिवन तो लुटेल.
24 ೨೪ ಕೋಪಿಷ್ಠನ ಸಂಗಡ ಸ್ನೇಹ ಬೆಳಸಬೇಡ, ಸಿಟ್ಟುಗಾರನ ಸಹವಾಸ ಮಾಡಬೇಡ.
२४जो कोणी एक व्यक्ती रागाने राज्य करतो त्याची मैत्री करू नकोस, आणि जो कोणी संतापी आहे त्याच्याबरोबर जाऊ नकोस.
25 ೨೫ ಮಾಡಿದರೆ ಅವನ ದುರ್ನಡತೆಯನ್ನು ಅನುಸರಿಸಿ, ನಿನ್ನ ಆತ್ಮವನ್ನು ಉರುಲಿಗೆ ಸಿಕ್ಕಿಸಿಕೊಳ್ಳುವಿ ನೋಡಿಕೋ.
२५तुम्ही त्याचे मार्ग शिकाल, आणि गेलात तर तुम्ही स्वतःला जाळ्यात अडकवून घ्याल.
26 ೨೬ ಮಾತುಕೊಟ್ಟು ಸಾಲಕ್ಕೆ ಹೊಣೆಯಾಗುವವರಲ್ಲಿ, ನೀನೂ ಒಬ್ಬನಾಗಬೇಡ,
२६दुसऱ्याच्या कर्जाला जे जामीन होतात, आणि हातावर हात मारणारे त्यांच्यातला तू एक होऊ नको.
27 ೨೭ ಆ ಸಾಲವನ್ನು ತೀರಿಸುವುದಕ್ಕೆ ನಿನ್ನಿಂದಾಗದಿರಲು, ಸಾಲಕೊಟ್ಟವನು ನಿನ್ನ ಕೆಳಗಿನ ಹಾಸಿಗೆಯನ್ನು ಕಿತ್ತುಹಾಕುವುದು ಬೇಕೇ?
२७जर तुझ्याकडे कर्ज फेडण्यास काही नसले, तर त्याने तुमच्या अंगाखालून तुझे अंथरुण का काढून घ्यावे?
28 ೨೮ ನಿನ್ನ ಪೂರ್ವಿಕರು ಹಾಕಿದ ಪೂರ್ವಕಾಲದ ಮೇರೆಯನ್ನು ದಾಟಬೇಡ.
२८तुझ्या वडिलांनी जी प्राचीन सीमा घालून ठेवली आहे, तो दगड दूर करू नकोस.
29 ೨೯ ತನ್ನ ಕೆಲಸದಲ್ಲಿ ಚಾತುರ್ಯವುಳ್ಳವನನ್ನು ನೋಡು, ಇಂಥವನು ರಾಜನ ಸನ್ನಿಧಿಯಲ್ಲಿ ನಿಲ್ಲುವನೇ ಹೊರತು, ಸಾಮಾನ್ಯ ಜನರ ಮುಂದೆ ಅಲ್ಲ.
२९जो आपल्या कामात तरबेज अशा मनुष्यास तू पाहिले आहे का? तो राजासमोर उभा राहील; तो सामान्य लोकांसमोर उभा राहणार नाही.

< ಜ್ಞಾನೋಕ್ತಿಗಳು 22 >