< ಜ್ಞಾನೋಕ್ತಿಗಳು 24 >

1 ಕೆಟ್ಟವರನ್ನು ನೋಡಿ ಹೊಟ್ಟೆಕಿಚ್ಚುಪಡಬೇಡ, ಅವರ ಸಹವಾಸವನ್ನು ಬಯಸಬೇಡ.
لَا تَحْسِدْ أَهْلَ ٱلشَّرِّ، وَلَا تَشْتَهِ أَنْ تَكُونَ مَعَهُمْ،١
2 ಅವರ ಮನಸ್ಸು ಹಿಂಸೆಯನ್ನು ಯೋಚಿಸುತ್ತಿರುವುದು, ಅವರ ತುಟಿಯು ಹಾನಿಯನ್ನು ಪ್ರಸ್ತಾಪಿಸುತ್ತಿರುವುದು.
لِأَنَّ قَلْبَهُمْ يَلْهَجُ بِٱلِٱغْتِصَابِ، وَشِفَاهَهُمْ تَتَكَلَّمُ بِٱلْمَشَقَّةِ.٢
3 ಮನೆಯನ್ನು ಕಟ್ಟುವುದಕ್ಕೆ ಜ್ಞಾನವೇ ಸಾಧನ, ಅದನ್ನು ಸ್ಥಿರಪಡಿಸುವುದಕ್ಕೆ ವಿವೇಕವೇ ಆಧಾರ,
بِٱلْحِكْمَةِ يُبْنَى ٱلْبَيْتُ وَبِالْفَهْمِ يُثَبَّتُ،٣
4 ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ, ಇಷ್ಟ ಸಂಪತ್ತಿನಿಂದ ತುಂಬಿಸುವುದಕ್ಕೆ, ತಿಳಿವಳಿಕೆಯೇ ಉಪಕರಣ.
وَبِالْمَعْرِفَةِ تَمْتَلِئُ ٱلْمَخَادِعُ مِنْ كُلِّ ثَرْوَةٍ كَرِيمَةٍ وَنَفِيسَةٍ.٤
5 ಜ್ಞಾನಿಗೆ ತ್ರಾಣ, ಬಲ್ಲವನಿಗೆ ಬಹು ಬಲ.
اَلرَّجُلُ ٱلْحَكِيمُ فِي عِزٍّ، وَذُو ٱلْمَعْرِفَةِ مُتَشَدِّدُ ٱلْقُوَّةِ.٥
6 ಮಂತ್ರಾಲೋಚನೆಯಿಂದ ಯುದ್ಧವನ್ನು ನಡೆಸು, ಬಹು ಸುಮಂತ್ರಿಗಳು ಇರುವಲ್ಲಿ ಸುರಕ್ಷಣೆಯಿರುವುದು.
لِأَنَّكَ بِٱلتَّدَابِيرِ تَعْمَلُ حَرْبَكَ، وَٱلْخَلَاصُ بِكَثْرَةِ ٱلْمُشِيرِينَ.٦
7 ಜ್ಞಾನವು ಮೂರ್ಖನಿಗೆ ನಿಲುಕದು, ಅವನು ನ್ಯಾಯಸ್ಥಾನದಲ್ಲಿ ಬಾಯಿಬಿಡಲಾರನು.
اَلْحِكَمُ عَالِيَةٌ عَنِ ٱلْأَحْمَقِ. لَا يَفْتَحْ فَمَهُ فِي ٱلْبَابِ.٧
8 ಕೇಡನ್ನು ಕಲ್ಪಿಸುವವನು, ಕುಯುಕ್ತಿಯುಳ್ಳವನು ಎನಿಸಿಕೊಳ್ಳುವನು.
اَلْمُتَفَكِّرُ فِي عَمَلِ ٱلشَّرِّ يُدْعَى مُفْسِدًا.٨
9 ಮೂರ್ಖನ ಸಂಕಲ್ಪವು ಪಾಪವೇ, ಧರ್ಮನಿಂದಕನು ಮನುಷ್ಯರಿಗೆ ಅಸಹ್ಯ.
فِكْرُ ٱلْحَمَاقَةِ خَطِيَّةٌ، وَمَكْرَهَةُ ٱلنَّاسِ ٱلْمُسْتَهْزِئُ.٩
10 ೧೦ ಇಕ್ಕಟ್ಟಿನ ದಿನದಲ್ಲಿ ನೀನು ಬಳಲಿಹೋದರೆ, ನಿನ್ನ ಬಲವೂ ಇಕ್ಕಟ್ಟೇ.
إِنِ ٱرْتَخَيْتَ فِي يَوْمِ ٱلضِّيقِ ضَاقَتْ قُوَّتُكَ.١٠
11 ೧೧ ಕೊಲೆಗೆ ಸೆಳೆಯಲ್ಪಟ್ಟವರನ್ನು ರಕ್ಷಿಸು, ಸಂಹಾರಕ್ಕೆ ಗುರಿಯಾದವರನ್ನು ತಪ್ಪಿಸು.
أَنْقِذِ ٱلْمُنْقَادِينَ إِلَى ٱلْمَوْتِ، وَٱلْمَمْدُودِينَ لِلْقَتْلِ. لَا تَمْتَنِعْ.١١
12 ೧೨ “ಇದು ನನಗೆ ಗೊತ್ತಿರಲಿಲ್ಲ” ಎಂದು ನೀನು ನೆವ ಹೇಳಿದರೆ, ಹೃದಯಶೋಧಕನು ಗ್ರಹಿಸುವುದಿಲ್ಲವೋ? ನಿನ್ನ ಆತ್ಮವನ್ನು ಕಾಯುವಾತನು ತಿಳಿಯುವುದಿಲ್ಲವೋ? ಪ್ರತಿಯೊಬ್ಬನ ಕರ್ಮಕ್ಕೆ ಪ್ರತಿಫಲವನ್ನು ಕೊಡದೆ ಬಿಟ್ಟಾನೇ?
إِنْ قُلْتَ: «هُوَذَا لَمْ نَعْرِفْ هَذَا»، أَفَلَا يَفْهَمُ وَازِنُ ٱلْقُلُوبِ؟ وَحَافِظُ نَفْسِكَ أَلَا يَعْلَمُ؟ فَيَرُدُّ عَلَى ٱلْإِنْسَانِ مِثْلَ عَمَلِهِ.١٢
13 ೧೩ ಕಂದಾ, ಜೇನು ಚೆನ್ನಾಗಿದೆಯಲ್ಲವೆ, ಜೇನುತುಪ್ಪವು ನಿನ್ನ ಬಾಯಿಗೆ ಸಿಹಿಯಷ್ಟೆ, ಅದನ್ನು ತಿನ್ನು.
يَا ٱبْنِي، كُلْ عَسَلًا لِأَنَّهُ طَيِّبٌ، وَقَطْرَ ٱلْعَسَلِ حُلْوٌ فِي حَنَكِكَ.١٣
14 ೧೪ ಜ್ಞಾನವು ನಿನ್ನ ಆತ್ಮಕ್ಕೆ ಹೀಗೆಯೇ ಇರುವುದೆಂದು ತಿಳಿದುಕೋ, ಅದನ್ನು ಪಡೆದುಕೊಂಡರೆ ಮುಂದೆ ಫಲಕಾಲ ಬರುವುದು, ನಿನ್ನ ನಿರೀಕ್ಷೆಯು ನಿರರ್ಥಕವಾಗದು.
كَذَلِكَ مَعْرِفَةُ ٱلْحِكْمَةِ لِنَفْسِكَ. إِذَا وَجَدْتَهَا فَلَا بُدَّ مِنْ ثَوَابٍ، وَرَجَاؤُكَ لَا يَخِيبُ.١٤
15 ೧೫ ದುಷ್ಟನೇ, ಶಿಷ್ಟನ ಮನೆಗೆ ಹೊಂಚುಹಾಕಬೇಡ, ಅವನ ನಿವಾಸವನ್ನು ಸೂರೆಮಾಡಬೇಡ.
لَا تَكْمُنْ أَيُّهَا ٱلشِّرِّيرُ لِمَسْكَنِ ٱلصِّدِّيقِ. لَا تُخْرِبْ رَبْعَهُ.١٥
16 ೧೬ ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.
لِأَنَّ ٱلصِّدِّيقَ يَسْقُطُ سَبْعَ مَرَّاتٍ وَيَقُومُ، أَمَّا ٱلْأَشْرَارُ فَيَعْثُرُونَ بِٱلشَّرِّ.١٦
17 ೧೭ ನಿನ್ನ ಶತ್ರು ಬಿದ್ದರೆ ಹಿಗ್ಗಬೇಡ, ಎಡವಿದರೆ ನಿನ್ನ ಹೃದಯವು ಹರ್ಷಿಸದಿರಲಿ.
لَا تَفْرَحْ بِسُقُوطِ عَدُوِّكَ، وَلَا يَبْتَهِجْ قَلْبُكَ إِذَا عَثَرَ،١٧
18 ೧೮ ಯೆಹೋವನು ನಿನ್ನ ಹರ್ಷವನ್ನು ಕಂಡು ಬೇಸರಗೊಂಡು, ತನ್ನ ಕೋಪವನ್ನು ಅವನ ಕಡೆಯಿಂದ ತಿರುಗಿಸಾನು.
لِئَلَّا يَرَى ٱلرَّبُّ وَيَسُوءَ ذَلِكَ فِي عَيْنَيْهِ، فَيَرُدَّ عَنْهُ غَضَبَهُ.١٨
19 ೧೯ ಕೆಡುಕರ ಮೇಲೆ ಉರಿಗೊಳ್ಳದಿರು, ದುಷ್ಟರನ್ನು ನೋಡಿ ಹೊಟ್ಟೆಕಿಚ್ಚುಪಡದಿರು.
لَا تَغَرْ مِنَ ٱلْأَشْرَارِ وَلَا تَحْسِدِ ٱلْأَثَمَةَ،١٩
20 ೨೦ ಕೆಟ್ಟವನಿಗೆ ಶುಭಕಾಲವು ಬಾರದು, ದುಷ್ಟರ ದೀಪವು ಆರಿಯೇ ಹೋಗುವುದು.
لِأَنَّهُ لَا يَكُونُ ثَوَابٌ لِلْأَشْرَارِ. سِرَاجُ ٱلْأَثَمَةِ يَنْطَفِئُ.٢٠
21 ೨೧ ಮಗನೇ, ಯೆಹೋವನಿಗೂ ಮತ್ತು ರಾಜನಿಗೂ ಭಯಪಡು, ತಿರುಗಿಬೀಳುವವರ ಗೊಡವೆಗೆ ಹೋಗಬೇಡ.
يَا ٱبْنِي، ٱخْشَ ٱلرَّبَّ وَٱلْمَلِكَ. لَا تُخَالِطِ ٱلْمُتَقَلِّبِينَ،٢١
22 ೨೨ ಅವರಿಬ್ಬರು ವಿಧಿಸುವ ವಿಪತ್ತು ಫಕ್ಕನೆ ಸಂಭವಿಸುವುದು, ಅವರಿಂದಾಗುವ ನಾಶವು ಯಾರಿಗೆ ತಿಳಿದೀತು?
لِأَنَّ بَلِيَّتَهُمْ تَقُومُ بَغْتَةً، وَمَنْ يَعْلَمُ بَلَاءَهُمَا كِلَيْهِمَا.٢٢
23 ೨೩ ಇವು ಕೂಡ ಜ್ಞಾನಿಗಳ ಮಾತುಗಳು: ನ್ಯಾಯವಿಚಾರಣೆಯಲ್ಲಿ ಪಕ್ಷಪಾತವು ಧರ್ಮವಲ್ಲ.
هَذِهِ أَيْضًا لِلْحُكَمَاءِ: مُحَابَاةُ ٱلْوُجُوهِ فِي ٱلْحُكْمِ لَيْسَتْ صَالِحَةً.٢٣
24 ೨೪ ಯಾವನು ಅಧರ್ಮಿಗೆ, “ನೀನು ಧರ್ಮಾತ್ಮನು” ಎಂದು ಹೇಳುತ್ತಾನೋ, ಅವನನ್ನು ಜನರು ಶಪಿಸುವರು, ಪ್ರಜೆಗಳು ದೂಷಿಸುವರು.
مَنْ يَقُولُ لِلشِّرِّيرِ: «أَنْتَ صِدِّيقٌ» تَسُبُّهُ ٱلْعَامَّةُ. تَلْعَنُهُ ٱلشُّعُوبُ.٢٤
25 ೨೫ ದುಷ್ಟನನ್ನು ಗದರಿಸುವವರಿಗಾದರೋ ಶುಭವಾಗುವುದು, ಸುಖಕರವಾದ ಆಶೀರ್ವಾದವೂ ಲಭಿಸುವುದು.
أَمَّا ٱلَّذِينَ يُؤَدِّبُونَ فَيَنْعَمُونَ، وَبَرَكَةُ خَيْرٍ تَأْتِي عَلَيْهِمْ.٢٥
26 ೨೬ ಯಥಾರ್ಥವಾದ ಉತ್ತರವು, ತುಟಿಗೆ ಮುದ್ದು.
تُقَبَّلُ شَفَتَا مَنْ يُجَاوِبُ بِكَلَامٍ مُسْتَقِيمٍ.٢٦
27 ೨೭ ನಿನ್ನ ಕೆಲಸದ ಸಾಮಾನುಗಳನ್ನು ಸಿದ್ಧಮಾಡು, ನಂತರ ಹೊಲಗದ್ದೆಗಳ ಕೆಲಸವನ್ನು ಮುಗಿಸು, ಆಮೇಲೆ ನಿನ್ನ ಮನೆಯನ್ನು ಕಟ್ಟು.
هَيِّئْ عَمَلَكَ فِي ٱلْخَارِجِ وَأَعِدَّهُ فِي حَقْلِكَ، بَعْدُ تَبْنِي بَيْتَكَ.٢٧
28 ೨೮ ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ, ಮಾತಿನಿಂದ ಮೋಸಮಾಡಬೇಡ.
لَا تَكُنْ شَاهِدًا عَلَى قَرِيبِكَ بِلَا سَبَبٍ، فَهَلْ تُخَادِعُ بِشَفَتَيْكَ؟٢٨
29 ೨೯ “ಅವನು ನನಗೆ ಮಾಡಿದಂತೆ ನಾನೂ ಅವನಿಗೆ ಮಾಡುವೆನು, ಅವನು ಮಾಡಿದ್ದಕ್ಕೆ ಸರಿಯಾಗಿ ಮುಯ್ಯಿತೀರಿಸುವೆನು” ಅಂದುಕೊಳ್ಳಬೇಡ.
لَا تَقُلْ: «كَمَا فَعَلَ بِي هَكَذَا أَفْعَلُ بِهِ. أَرُدُّ عَلَى ٱلْإِنْسَانِ مِثْلَ عَمَلِهِ».٢٩
30 ೩೦ ಸೋಮಾರಿಯ ಹೊಲದ ಮೇಲೆಯೂ, ಬುದ್ಧಿಹೀನನ ದ್ರಾಕ್ಷಿಯ ತೋಟದ ಮೇಲೆಯೂ ಹಾದು ಹೋದೆನು.
عَبَرْتُ بِحَقْلِ ٱلْكَسْلَانِ وَبِكَرْمِ ٱلرَّجُلِ ٱلنَّاقِصِ ٱلْفَهْمِ،٣٠
31 ೩೧ ಆಹಾ, ಮುಳ್ಳುಗಿಡಗಳು ಅದರಲ್ಲಿ ಹರಡಿಕೊಂಡಿದ್ದವು, ಕಳೆಗಳು ಅದನ್ನು ಮುಚ್ಚಿದ್ದವು, ಅದರ ಕಲ್ಲಿನ ಗೋಡೆಯು ಹಾಳಾಗಿತ್ತು.
فَإِذَا هُوَ قَدْ عَلَاهُ كُلَّهُ ٱلْقَرِيصُ، وَقَدْ غَطَّى ٱلْعَوْسَجُ وَجْهَهُ، وَجِدَارُ حِجَارَتِهِ ٱنْهَدَمَ.٣١
32 ೩೨ ಆಗ ನಾನು ನೋಡಿ ಆಲೋಚಿಸಿದೆನು, ದೃಷ್ಟಿಸಿ ಶಿಕ್ಷಿತನಾದೆನು.
ثُمَّ نَظَرْتُ وَوَجَّهْتُ قَلْبِي. رَأَيْتُ وَقَبِلْتُ تَعْلِيمًا:٣٢
33 ೩೩ ಇನ್ನು ಸ್ವಲ್ಪ ನಿದ್ದೆ, ಇನ್ನು ತುಸ ತೂಕಡಿಕೆ, ಇನ್ನೂ ಕೊಂಚ ನಿದ್ದೆಗಾಗಿ ಕೈಮುದುರಿಕೊಳ್ಳುವೆ ಅಂದುಕೊಳ್ಳುವಿಯಾ?
نَوْمٌ قَلِيلٌ بَعْدُ نُعَاسٌ قَلِيلٌ، وَطَيُّ ٱلْيَدَيْنِ قَلِيلًا لِلرُّقُودِ،٣٣
34 ೩೪ ಬಡತನವು ದಾರಿಗಳ್ಳನ ಹಾಗೂ, ಕೊರತೆಯು ಪಂಜುಗಳ್ಳನಂತೆಯೂ ನಿನ್ನ ಮೇಲೆ ಬೀಳುವವು.
فَيَأْتِي فَقْرُكَ كَعَدَّاءٍ وَعَوَزُكَ كَغَازٍ.٣٤

< ಜ್ಞಾನೋಕ್ತಿಗಳು 24 >