< ಕೀರ್ತನೆಗಳು 107 >
1 ೧ ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
請您們向上主讚頌,因為祂是美善寬仁,祂的仁慈永遠常存。
2 ೨ ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,
歌詠此曲的人們是:上主親身所救贖的,由敵人手中救出的,
3 ೩ ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.
從各地召集來的,東南西北聚來的。
4 ೪ ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,
他們在曠野和沙漠中漂流,找不到安居之城的道路。
5 ೫ ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.
他們口渴而又腹饑,生命已經奄奄一息;
6 ೬ ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.
他們於急難中一哀救上主,上主即拯救他們脫離困苦,
7 ೭ ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.
引領他們走入正道,走內入可安居的城廓。
8 ೮ ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
願他們感謝上主的仁慈,稱頌祂給人子顯的奇蹟。
9 ೯ ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.
因為祂使饑渴的人得到飽飫,祂使肚餓人享盡美物。
10 ೧೦ ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.
他們坐在黑暗與死影裏,盡為痛苦與鐵鍊所縛繫,
11 ೧೧ ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,
因為背棄了天主的命令,又輕視了至高者的叮嚀。
12 ೧೨ ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.
因此,祂以苦難折磨了他們的心神,他們跌倒了,卻沒有人來扶持他們。
13 ೧೩ ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
他們在急難中哀求上主,上主即救他們脫離困苦,
14 ೧೪ ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.
領他們擺脫死影與黑暗,把他們的銬鐐完全弄斷。
15 ೧೫ ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
願他們感謝上主的仁慈,稱頌祂給人子顯的奇蹟。
16 ೧೬ ಆತನು ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.
因為祂把銅門摧毀,又把鐵閂擊碎。
17 ೧೭ ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.
他們因行為邪惡而病重,因犯罪而遭受苦痛;
18 ೧೮ ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.
他們厭棄各樣的食物,快已接近死亡的門戶。
19 ೧೯ ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
他們於急難中一哀求主,上主即拯救他們脫離困苦。
20 ೨೦ ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.
主發一言就將他們病除,且拯救他們脫離了陰府。
21 ೨೧ ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
願他們感謝上主[的仁慈,稱頌祂給人子顯的奇蹟。
22 ೨೨ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.
願他們獻上感恩的祭獻,將祂的工程歡樂地宣傳。
23 ೨೩ ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ, ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು,
他們乖船,下海行航,在大洋中往來經商,
24 ೨೪ ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
他們看見過上主的奇異作為,遇到過祂行於汪洋中的奇跡:
25 ೨೫ ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು.
祂一發命,風浪狂掀,海中波檮頓時高翻,
26 ೨೬ ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.
時而忽躍沖天,時而忽墜棎淵;此危急之中,他們膽戰心寒,
27 ೨೭ ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.
恍惚且暈眩,有如醉漢;一切的經驗全部紊亂。
28 ೨೮ ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಹೊರತಂದನು.
他們於急難中一哀求上主,上主即拯救他們脫離困苦。
29 ೨೯ ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.
祂化風暴為平靜,海濤頓時便安定;
30 ೩೦ ಸಮುದ್ರವು ಶಾಂತವಾದುದರಿಂದ, ಹಡಗಿನವರು ಸಂತೋಷಪಟ್ಟರು, ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.
祂使風平浪靜,大家個個歡忭,祂領他們登上了渴薶的海岸。
31 ೩೧ ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.
願他們感謝上主的仁慈,稱頌祂給人子的奇蹟,
32 ೩೨ ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ.
在人民的集會中頌揚祂,在長老的議上讚美祂。
33 ೩೩ ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ,
上主使河域變為荒灘,青使清水泉變成乾川,
34 ೩೪ ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.
使肥沃土地變為鹹田,都因當地居民的罪愆。
35 ೩೫ ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
祂又能使沙漠變成水源,使旱地變成水泉。
36 ೩೬ ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು; ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು,
把饑餓的人徒置在那地,使他們與興建者安居的城邑;
37 ೩೭ ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು, ಆದಾಯವನ್ನು ಕೂಡಿಸಿಕೊಂಡರು.
耕田種地,開懇了葡萄園,因此收穫果實,豐富出產。
38 ೩೮ ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.
上主祝福了他們人口繁衍,賞賜他們的牲畜有增無減。
39 ೩೯ ಅವರು ಕೇಡು ತೊಂದರೆಗಳಿಂದಲೂ, ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.
其後因慘遭災患苦茌難,人口減少而被棄如前。
40 ೪೦ ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.
但上主卻使權貴遭受恥辱,任他們徘徊歧途無路可走。
41 ೪೧ ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.
但拯救貧窮人脫離災難,使他們家屬多如羊群一般。
42 ೪೨ ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.
正直的人見到必然歡忭,但邪惡的人卻啞口無言。
43 ೪೩ ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.
那一位賢哲詳察此事,並能體會上主的仁慈!