< ಕೀರ್ತನೆಗಳು 107 >

1 ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವಾಗಿರುವುದು.
परमेश्वरास धन्यावाद द्या. कारण तो चांगला आहे. आणि त्याची कराराची विश्वसनियता सर्वकाळ टिकणारी आहे.
2 ಯೆಹೋವನ ವಿಮುಕ್ತರು ಅಂದರೆ ಆತನು ಶತ್ರುಗಳಿಂದ ಬಿಡಿಸಿ,
परमेश्वराने उद्धारलेले, ज्यांना खंडणी भरून त्याने शत्रूच्या अधिकारातून सोडवले आहे,
3 ಪೂರ್ವ, ಪಶ್ಚಿಮ, ಉತ್ತರ ಮತ್ತು ದಕ್ಷಿಣಗಳಲ್ಲಿಯೂ, ಸಮುದ್ರದ ಕಡೆಯಲ್ಲಿಯೂ ಇರುವ ದೇಶಗಳಿಂದ ಕೂಡಿಸಿದವರೆಲ್ಲರೂ ಸ್ತುತಿಮಾಡಲಿ.
त्याने त्यांना परक्या देशातून पूर्व व पश्चिम, उत्तर व दक्षिण या दिशातून एकवट केले आहे.
4 ಅವರು ಅರಣ್ಯದಲ್ಲಿಯೂ, ಮರಳುಗಾಡಿನಲ್ಲಿಯೂ, ದಾರಿತಪ್ಪಿ ಅಲೆಯುವವರಾಗಿ, ಜನವಿರುವ ಊರನ್ನು ಕಾಣದೆ,
ते रानात वैराण प्रदेशातील रस्त्याने भटकले; आणि त्यांना राहण्यास नगर सापडले नाही.
5 ಹಸಿವೆ, ನೀರಡಿಕೆಗಳಿಂದ ಬಲಗುಂದಿದವರಾಗಿದ್ದರು.
ते खूप भुकेले आणि तान्हेले होते; आणि ते थकव्याने मूर्च्छित झाले.
6 ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಬಿಡಿಸಿದನು.
नंतर त्यांनी आपल्या संकटात परमेश्वरास हाक मारली, आणि त्याने त्यांना त्यांच्या विपत्तीतून सोडवले.
7 ಜನವಿರುವ ಊರನ್ನು ಸೇರುವಂತೆ, ಅವರನ್ನು ಸರಿಯಾದ ದಾರಿಯಲ್ಲಿ ನಡೆಸಿದನು.
त्याने त्यांना सरळ मार्गाने नेले यासाठी की, त्या नगरात त्यांना वस्त्ती करावी
8 ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
अहा, परमेश्वराच्या कराराची विश्वसनियता आणि आश्चर्यकारक गोष्टी त्याने मनुष्यजातीसाठी केल्या त्याबद्दल लोक त्याचा धन्यवाद करोत.
9 ಆತನು ಬಾಯಾರಿದವರ ಆಶೆಯನ್ನು ಪೂರೈಸಿ, ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಗೊಳಿಸುತ್ತಾನೆ.
कारण त्याने तान्हेल्या जिवास तृप्त केले, आणि भुकेल्या जिवाला उत्तम पदार्थांनी भरले.
10 ೧೦ ಕತ್ತಲಲ್ಲಿಯೂ, ಘೋರಾಂಧಕಾರದಲ್ಲಿಯೂ, ಬೇಡಿಗಳಿಂದ ಬಂಧಿಸಲ್ಪಟ್ಟು, ನೋವಿನಿಂದ ಬಿದ್ದುಕೊಂಡಿದ್ದರು.
१०काही कैदी क्लेशाने आणि साखळ्यांनी जखडलेले असता; काळोखात आणि मरणाच्या छायेत बसले आहेत.
11 ೧೧ ಅವರು ದೇವರ ಕಟ್ಟಳೆಗಳಿಗೆ ವಿರುದ್ಧವಾಗಿ ನಿಂತು, ಪರಾತ್ಪರನಾದ ದೇವರ ಸಂಕಲ್ಪವನ್ನು ನಿರಾಕರಿಸಿದ್ದರಿಂದ,
११त्यांनी देवाच्या वचनाविरुध्द बंड केले, आणि त्यांनी परात्पराचे शिक्षण नापसंत केले.
12 ೧೨ ಆತನು ಅವರನ್ನು ಕಷ್ಟಗಳಿಂದ ಕುಗ್ಗಿಸಿದನು; ನಿರಾಶ್ರಯರಾಗಿ ಬಿದ್ದುಹೋದರು.
१२त्यांने त्यांचे हृदय कष्टाद्वारे नम्र केले; ते अडखळून पडले आणि त्यांना मदत करायला तेथे कोणीही नव्हता.
13 ೧೩ ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
१३तेव्हा त्यांनी आपल्या संकटात परमेश्वरास हाक मारली आणि त्याने त्यांना त्यांच्या क्लेशातून बाहेर आणले.
14 ೧೪ ಆತನು ಅವರ ಬಂಧನಗಳನ್ನು ತೆಗೆದುಹಾಕಿ, ಕತ್ತಲೆಯಿಂದಲೂ, ಘೋರಾಂಧಕಾರದಿಂದಲೂ ಅವರನ್ನು ಹೊರತಂದನು.
१४देवाने त्यांना अंधारातून आणि मरणाच्या छायेतून बाहेर आणले, आणि त्यांची बंधणे तोडली.
15 ೧೫ ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
१५परमेश्वराच्या कराराची विश्वसनियता आणि त्याने मनुष्यजातीसाठी केलेल्या आश्चर्यकारक गोष्टीबद्दल लोक त्याचे उपकारस्मरण करोत.
16 ೧೬ ಆತನು ತಾಮ್ರದ ಕದಗಳನ್ನು ಒಡೆದು, ಕಬ್ಬಿಣದ ಅಗುಳಿಗಳನ್ನು ಮುರಿದುಬಿಟ್ಟಿದ್ದಾನೆ.
१६कारण त्याने पितळेची दारे तोडली, आणि लोखंडाचे गज तोडून टाकले.
17 ೧೭ ಮೂರ್ಖರು ಅಪರಾಧ, ದುರಾಚಾರಗಳ ದೆಸೆಯಿಂದ ಬಾಧೆಗೊಳಗಾದರು.
१७आपल्या बंडखोरीच्या मार्गात ते मूर्ख होते, आणि आपल्या पापामुळे ते पीडिले होते.
18 ೧೮ ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.
१८सर्व उत्तम अन्न खाण्याची इच्छा त्यांना होईना आणि ते मरणाच्या दाराजवळ ओढले गेले.
19 ೧೯ ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು.
१९तेव्हा त्यांनी आपल्या संकटात परमेश्वरास हाक मारली, आणि त्याने त्यांना क्लेशातून बाहेर आणले.
20 ೨೦ ಆತನು ದೂತನನ್ನೋ ಎಂಬಂತೆ ತನ್ನ ವಾಕ್ಯವನ್ನು ಕಳುಹಿಸಿ, ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು.
२०त्याने आपले वचन पाठवून त्यांना बरे केले, आणि त्याने त्यांच्या नाशापासून त्यांना सोडवले.
21 ೨೧ ಅವರು ಯೆಹೋವನ ಕೃಪೆಗೋಸ್ಕರವೂ, ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ, ಆತನನ್ನು ಕೊಂಡಾಡಲಿ.
२१परमेश्वराच्या कराराची विश्वसनियता व त्याने मनुष्यजातीसाठी केलेल्या आश्चर्यकारक गोष्टींबद्दल लोक त्याचे उपकारस्मरण करोत.
22 ೨೨ ಕೃತಜ್ಞತಾ ಯಜ್ಞಗಳನ್ನು ಸಮರ್ಪಿಸಿ, ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.
२२ते त्यास आभाररुपी यज्ञ अर्पण करोत, आणि गाण्यात त्याची कृत्ये जाहीर करोत.
23 ೨೩ ಹಡಗು ಹತ್ತಿ ಸಮುದ್ರ ಪ್ರಯಾಣ ಮಾಡುತ್ತಾ, ಮಹಾಜಲರಾಶಿಯಲ್ಲಿ ತಮ್ಮ ಉದ್ಯೋಗವನ್ನು ನಡೆಸುವವರು,
२३काही जहाजातून समुद्र प्रवास करतात, आणि महासागरापार व्यवसाय करतात.
24 ೨೪ ಯೆಹೋವನ ಮಹತ್ಕಾರ್ಯಗಳನ್ನೂ, ಅಗಾಧಜಲದಲ್ಲಿ ಆತನ ಅದ್ಭುತಗಳನ್ನೂ ನೋಡುತ್ತಾರೆ.
२४ते परमेश्वराची कृत्ये पाहतात, आणि त्याची अद्भुत कृत्ये समुद्रावर पाहतात.
25 ೨೫ ಆತನು ಅಪ್ಪಣೆಕೊಡಲು ಬಿರುಗಾಳಿಯುಂಟಾಗಿ, ಅದರಲ್ಲಿ ತೆರೆಗಳನ್ನು ಎಬ್ಬಿಸಿತು.
२५कारण तो आज्ञा करतो आणि वादळ उठवितो; तेव्हा समुद्र खवळतो.
26 ೨೬ ಜನರು ಆಕಾಶಕ್ಕೆ ಏರುತ್ತಲೂ, ಅಗಾಧಕ್ಕೆ ಇಳಿಯುತ್ತಲೂ ಕಂಗೆಟ್ಟು ಕರಗಿಹೋದರು.
२६लाटा आकाशापर्यंत वर पोहचतात, मग त्या खाली खोल तळाकडे जातात. मनुष्याचे धैर्य धोक्यामुळे गळून जाते.
27 ೨೭ ಅವರು ದಿಕ್ಕುತೋರದವರಾಗಿ ಸುತ್ತುತ್ತಾ, ಕುಡುಕರಂತೆ ಹೊಯ್ದಾಡುತ್ತಿದ್ದರು.
२७ते मद्याप्यासारखे डुलतात आणि झोकांड्या खातात, आणि त्यांची बुद्धी गुंग होते.
28 ೨೮ ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು, ಆತನು ಅವರನ್ನು ಕಷ್ಟದಿಂದ ಹೊರತಂದನು.
२८तेव्हा ते आपल्या संकटात परमेश्वरास हाक मारतात, आणि तो त्यांना त्यांच्या क्लेशातून बाहेर आणून वाचवतो.
29 ೨೯ ಆತನು ಬಿರುಗಾಳಿಯನ್ನು ಶಾಂತಪಡಿಸಿದನು; ತೆರೆಗಳು ನಿಂತವು.
२९तो वादळ शांत करतो, आणि लाटांना स्तब्ध करतो.
30 ೩೦ ಸಮುದ್ರವು ಶಾಂತವಾದುದರಿಂದ, ಹಡಗಿನವರು ಸಂತೋಷಪಟ್ಟರು, ಅವರು ಮುಟ್ಟಬೇಕಾದ ರೇವಿಗೆ ಆತನು ಅವರನ್ನು ಸೇರಿಸಿದನು.
३०समुद्र शांत झाल्यामुळे ते आनंद करतात, तो त्यांना त्यांच्या इच्छित बंदरास आणतो.
31 ೩೧ ಅವರು ಯೆಹೋವನ ಕೃಪೆಗೋಸ್ಕರವೂ ಆತನು ಮಾನವರಿಗಾಗಿ ನಡೆಸಿದ ಅದ್ಭುತಗಳಿಗೋಸ್ಕರವೂ ಆತನನ್ನು ಕೊಂಡಾಡಲಿ.
३१परमेश्वरास त्याच्या कराराची विश्वसनियता आणि त्याने मनुष्यजातीसाठी केलेल्या आश्चर्यकारक गोष्टींबद्दल लोक त्याचे उपकारस्मरण करोत.
32 ೩೨ ನೆರೆದ ಸಭೆಯಲ್ಲಿ ಆತನನ್ನು ಕೀರ್ತಿಸಲಿ; ಹಿರಿಯರ ಸಮೂಹದಲ್ಲಿ ಕೊಂಡಾಡಲಿ.
३२लोकांच्या मंडळीत तो उंचविला जावो आणि वडिलांच्या सभेत त्याची स्तुती होवो.
33 ೩೩ ಆತನು ನಿವಾಸಿಗಳ ದುಷ್ಟತನಕ್ಕಾಗಿ ನದಿಗಳನ್ನು ಅರಣ್ಯವಾಗುವಂತೆಯೂ,
३३तो नद्यांना रान करतो, पाण्याच्या झऱ्यांची कोरडी भूमी करतो,
34 ೩೪ ನೀರಿನ ಬುಗ್ಗೆಗಳನ್ನು ಒಣನೆಲವಾಗುವಂತೆಯೂ, ಫಲಭೂಮಿಯನ್ನು ಉಪ್ಪು ನೆಲವಾಗುವಂತೆಯೂ ಮಾಡಿದನು.
३४आणि फलदायी जमिनीची नापीक जमिन करतो. कारण तेथील राहणाऱ्या वाईट लोकांमुळे.
35 ೩೫ ಅರಣ್ಯವನ್ನು ಕೆರೆಯಾಗಿಯೂ, ಒಣನೆಲವನ್ನು ಬುಗ್ಗೆಗಳಾಗಿಯೂ ಮಾಡಿ,
३५तो वाळवंटाचे पाण्याचे तळे करतो, आणि कोरडी भूमीतून पाण्याचे झरे करतो.
36 ೩೬ ಅಲ್ಲಿ ಹಸಿದವರನ್ನು ನೆಲೆಗೊಳಿಸಿದನು; ಅವರು ನೆಲೆಯಾಗಿ ವಾಸಿಸಲು ಪಟ್ಟಣವನ್ನು ಕಟ್ಟಿಕೊಂಡು,
३६तेथे भुकेल्यास वसवतो, आणि त्यामध्ये राहण्यासाठी नगर बांधतो.
37 ೩೭ ಹೊಲಗಳನ್ನು ಬಿತ್ತಿ, ದ್ರಾಕ್ಷಾಲತೆಗಳನ್ನು ನೆಟ್ಟು, ಆದಾಯವನ್ನು ಕೂಡಿಸಿಕೊಂಡರು.
३७ते नगरे बांधतात त्यामध्ये शेते पेरतात, द्राक्षमळे लावतात, आणि विपुल पिके काढतात.
38 ೩೮ ಆತನು ಆಶೀರ್ವದಿಸಿದ್ದರಿಂದ ಅವರು ಬಹಳವಾಗಿ ಹೆಚ್ಚಿದರು. ಅವರಿಗೆ ದನಕರುಗಳೇನೂ ಕಡಿಮೆ ಇರಲಿಲ್ಲ.
३८तो त्यास आशीर्वाद देतो आणि त्यांची खूप वाढ होते, तो त्यांच्या गुरांना कमी होऊ देत नाही.
39 ೩೯ ಅವರು ಕೇಡು ತೊಂದರೆಗಳಿಂದಲೂ, ಸಂಕಟದಿಂದಲೂ ಕುಗ್ಗಿಹೋಗಿ ಸ್ವಲ್ಪ ಜನರಾದರು.
३९नंतर यातनामयी अरिष्ट आणि दुःख यांमुळे ते कमी होतात आणि नष्ट होतात.
40 ೪೦ ಪ್ರಭುಗಳಿಗೆ ಅಪಮಾನವನ್ನು ಉಂಟುಮಾಡಿ, ಅವರನ್ನು ದಾರಿಯಿಲ್ಲದ ಅರಣ್ಯದಲ್ಲಿ ಅಲೆದಾಡಿಸುವವನು.
४०तो शत्रूंच्या अधिपतीवर अपमान ओततो, आणि त्यांना रस्ते नसलेल्या रानातून भटकायला लावतो.
41 ೪೧ ಕಷ್ಟದಲ್ಲಿದ್ದ ದೀನರನ್ನು ಉನ್ನತಸ್ಥಿತಿಗೆ ಏರಿಸಿ, ಅವರ ಕುಟುಂಬಗಳನ್ನು ಕುರಿಹಿಂಡಿನಂತೆ ಹೆಚ್ಚಿಸಿದನು.
४१पण तो गरजवंताना क्लेशापासून सुरक्षित ठेवतो, आणि त्यांच्या कुटुंबांची कळपासारखी काळजी घेतो.
42 ೪೨ ಯಥಾರ್ಥರು ಇದನ್ನು ನೋಡಿ ಹಿಗ್ಗುವರು; ಕೆಡುಕುಬಾಯಿ ಮುಚ್ಚಿಹೋಗುವುದು.
४२सरळ मनाचे हे पाहतात आणि आनंदी होतात, आणि सर्व दुष्ट आपले तोंड बंद करतात.
43 ೪೩ ಜ್ಞಾನಿಗಳು ಈ ಸಂಗತಿಗಳನ್ನು ಗಮನಿಸಿ, ಯೆಹೋವನ ಕೃಪಾಕಾರ್ಯಗಳನ್ನು ಗ್ರಹಿಸಿಕೊಳ್ಳಲಿ.
४३जो कोणी ज्ञानी आहे त्याने ह्या गोष्टींकडे लक्ष द्यावे आणि परमेश्वराच्या कराराच्या विश्वसनीयतेच्या कृतीवर मनन करावे.

< ಕೀರ್ತನೆಗಳು 107 >