< ಕೀರ್ತನೆಗಳು 2 >

1 ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?
राष्ट्रे का बंडखोर झाली आहेत, आणि लोक व्यर्थच का कट रचत आहेत?
2 ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,
पृथ्वीचे राजे परमेश्वराविरूद्ध व त्याच्या अभिषिक्त्याविरूद्ध एकत्र उभे झाले आहेत, आणि राज्यकर्ते एकत्र मिळून कट रचत आहेत, ते म्हणतात.
3 “ನಮಗೆ ಅವರು ಹಾಕಿದ ಬಂಧನಗಳನ್ನು ಕಿತ್ತುಹಾಕಿ, ಬೇಡಿಗಳನ್ನು ಮುರಿದು ಬಿಸಾಡೋಣ” ಎಂದು ಮಾತನಾಡಿಕೊಳ್ಳುತ್ತಾರಲ್ಲಾ.
चला, आपण त्यांच्या बेड्या तोडून टाकू, जे त्यांनी आपणावर लादल्या होत्या. आणि त्यांचे साखळदंड फेकून देऊ.
4 ಪರಲೋಕದಲ್ಲಿ ಆಸೀನನಾಗಿರುವಾತನು ಅದಕ್ಕೆ ನಗುವನು; ಕರ್ತನು ಅವರನ್ನು ಪರಿಹಾಸ್ಯಮಾಡುವನು.
परंतु तो जो आकाशांत बसलेला आहे तो हसेल, प्रभू त्यांचा उपहास करेल.
5 ಅನಂತರ ಆತನು ಸಿಟ್ಟಾಗಿ, ಕೋಪಾವೇಶದಿಂದ ಅವರನ್ನು ಕಳವಳಗೊಳಿಸಿ,
तेव्हा तो आपल्या रागात त्यांच्याशी बोलेल, आणि आपल्या संतापाने त्यांना घाबरे करील.
6 “ನಾನು ನೇಮಿಸಿದ ಅರಸನನ್ನು ಚೀಯೋನೆಂಬ ನನ್ನ ಪರಿಶುದ್ಧ ಪರ್ವತದಲ್ಲಿಯೇ ಸ್ಥಾಪಿಸಿದ್ದಾಯಿತು” ಎಂದು ಹೇಳುವನು.
मी माझ्या पवित्र डोंगरावर, सीयोनावर, माझ्या राजास अभिषेक केला आहे.
7 ನಾನು ಯೆಹೋವನ ಆಜ್ಞೆಯನ್ನು ತಿಳಿಸುತ್ತೇನೆ, ಕೇಳಿರಿ; ಆತನು ನನಗೆ, “ನನಗೆ ನೀನು ಮಗನು; ನಾನೇ ಈ ಹೊತ್ತು ನಿನ್ನನ್ನು ಪಡೆದಿದ್ದೇನೆ.
मी परमेश्वराचा फर्मान घोषीत करीन, तो मला म्हणाला, “तू माझा पुत्र आहेस.” या दिवशी मी तुझा पिता झालो आहे.
8 ನೀನು ಕೇಳಿಕೊಂಡರೆ ನಾನು ಅನ್ಯಜನಗಳನ್ನೆಲ್ಲಾ ನಿನಗೆ ಅಧೀನಮಾಡುವೆನು; ಭೂಮಿಯ ಕಟ್ಟಕಡೆಯವರೆಗೂ ಇರುವ ಎಲ್ಲಾ ದೇಶಗಳನ್ನೂ ನಿನಗೆ ಸ್ವತ್ತಾಗಿ ಕೊಡುವೆನು.
मला माग, आणि मी तुला राष्ट्रे तुझे वतन आणि पृथ्वीच्या सीमा तुझ्या ताब्यात देईल.
9 ನೀನು ಕಬ್ಬಿಣದ ಗದೆಯಿಂದ ಅವರನ್ನು ನಾಶಮಾಡುವಿ; ಮಣ್ಣಿನ ಮಡಿಕೆಗಳನ್ನೋ ಎಂಬಂತೆ ಅವರನ್ನು ಒಡೆದುಹಾಕುವಿ” ಎಂದು ಹೇಳಿದನು.
लोखंडी दंडाने तू त्यांना तोडशील, कुंभाराच्या भांड्यासारखा तू त्यांना फोडशील.
10 ೧೦ ಆದುದರಿಂದ ಅರಸುಗಳಿರಾ, ವಿವೇಕಿಗಳಾಗಿರಿ; ದೇಶಾಧಿಪತಿಗಳಿರಾ, ಬುದ್ಧಿವಾದಕ್ಕೆ ಕಿವಿಗೊಡಿರಿ.
१०म्हणून आता, अहो राजांनो, सावध व्हा; पृथ्वीच्या राज्यकर्त्यांनो, चूक दुरुस्त करा.
11 ೧೧ ಯೆಹೋವನನ್ನು ಭಯಭಕ್ತಿಯಿಂದ ಸೇವಿಸಿರಿ; ನಡುಗುತ್ತಾ ಉಲ್ಲಾಸಪಡಿರಿ.
११भय धरून परमेश्वराची स्तुती करा आणि थरथर कापून हर्ष करा.
12 ೧೨ ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಯೆಹೋವನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಯೆಹೋವನನ್ನು ಆಶ್ರಯಿಸುವವರೆಲ್ಲರು ಧನ್ಯರು.
१२आणि तो तुमच्यावर रागावू नये, ह्यासाठी देवाच्या पुत्रास खरी निष्ठा द्या, म्हणजे तुम्ही मरणार नाही. कारण देवाचा क्रोध त्वरीत पेटेल. जे सर्व त्याच्याठायी आश्रय घेतात ते आशीर्वादीत आहेत.

< ಕೀರ್ತನೆಗಳು 2 >