< ಕೀರ್ತನೆಗಳು 58 >

1 ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ಅಲ್ತಷ್ಖೇತೆಂಬ ರಾಗ; ದಾವೀದನ ಕಾವ್ಯ. ಅಧಿಕಾರಿಗಳೇ, ನೀವು ಕೊಡುವ ತೀರ್ಪುಗಳು ನೀತಿಗನುಸಾರವಾಗಿವೆಯೋ? ಜನರ ವ್ಯಾಜ್ಯಗಳನ್ನು ನ್ಯಾಯಯುತವಾಗಿ ಬಗೆಹರಿಸುತ್ತಿರೋ?
ए शासकहरू हो, के तिमीहरू धर्मिकतामा बोल्छौ? ए मानिसहरू, के तिमीहरू ठिक किसमले न्याय गर्छौ?
2 ನಿಮ್ಮ ಮನಸ್ಸಿನ ಕಲ್ಪನೆಯೆಲ್ಲಾ ಕೆಟ್ಟತನವೇ; ನೀವು ದೇಶದವರಿಗೆ ಅನ್ಯಾಯವನ್ನೇ ತೂಗಿಕೊಡುವವರಾಗಿದ್ದೀರಲ್ಲಾ.
गर्दैनौ, तिमीहरू आफ्नो हृदयमा दुष्‍टता गर्छौ । तिमीहरू आफ्नै हातले देशभरि हिंसा फैलाउँछौ ।
3 ದುಷ್ಟರು ಜನ್ಮದಿಂದಲೇ ಧರ್ಮಭ್ರಷ್ಟರು; ಅವರು ಹುಟ್ಟಿದಂದಿನಿಂದ ಸುಳ್ಳುಗಾರರಾಗಿ ದಾರಿ ತಪ್ಪಿದವರು.
दुष्‍टहरू गर्भमा हुँदा पनि तिनीहरू पथभ्रष्‍ट हुन्छन् । जन्मेदेखि नै तिनीहरू झुट बोलेर पथभ्रष्‍ट हुन्छन् ।
4 ಅವರು ಸರ್ಪದಂತೆ ವಿಷಭರಿತರು.
तिनीहरूका विष सर्पको विषजस्तै छ । तिनीहरू बहिरा गोमनजस्तै छन् जसले यसका कानहरू बन्द गर्छ,
5 ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದ ಅಥವಾ ಅದಕ್ಕೆ ಕಿವಿಗೊಡದ ಕಳ್ಳ ಹಾವಿನಂತೆ ಇರುತ್ತಾರೆ.
त्यसले सपेराको आवाज सुन्दैन, तिनीहरू जत्ति नै निपुण भए पनि पर्वाह छैन ।
6 ದೇವರೇ, ಅವರ ಹಲ್ಲುಗಳನ್ನು ಮುರಿದುಬಿಡು; ಯೆಹೋವನೇ, ಪ್ರಾಯದ ಸಿಂಹಗಳ ಕೋರೆ ಹಲ್ಲುಗಳನ್ನು ಕಿತ್ತುಹಾಕು.
हे परमेश्‍वर, तिनीहरूका दाँतहरू भाँचिदिनुहोस् । हे परमप्रभु, जवान सिंहहरूका बङ्गराहरू झारिदिनुहोस् ।
7 ಕ್ಷಣದಲ್ಲಿ ಹರಿದು ಕಾಣದೆ ಹೋಗುವ ನೀರಿನಂತೆ ಅವರು ಮಾಯವಾಗಲಿ; ಬಾಣ ತಾಗಿತೋ ಎಂಬಂತೆ ಅವರು ಬೀಳಲಿ.
पानी बगेर गएजस्तै तिनीहरू बिलेर जाऊन् । तिनीहरूले आफ्‍ना काँडाहरू हान्दा, तिनका चुच्‍चो नभएजस्तै ती होऊन् ।
8 ಒಣಗಿ ಸತ್ತ ಬಸವನಹುಳದಂತೆ ನಿರ್ನಾಮವಾಗಲಿ; ಗರ್ಭವಿಳಿದ ಪಿಂಡದಂತೆ ಸೂರ್ಯನನ್ನು ನೋಡದೆ ಹೋಗಲಿ.
तिनीहरू शंखेकीराजस्तै होऊन् र बिलि जाऊन् र तिनीहरू एउटी स्‍त्रीको तुहेको बालकजस्तै होऊन् जसले कहिल्यै सूर्यको उज्यालो देख्दैनन् ।
9 ಇನ್ನೂ ಹಸಿರಿರುರುವಾಗಲೇ ಒಲೆಗೆ ಹಾಕಿದ ಮುಳ್ಳಿನ ಕೊಂಪೆಯನ್ನು ಬಿರುಗಾಳಿಯು ಹಾರಿಸಿಬಿಡುವಂತೆ ದೇವರ ಉಗ್ರಕೋಪವು ಅವರನ್ನು ನಿಶ್ಶೇಷಮಾಡಲಿ.
तिम्रा भाँडाहरूले काँढाको आगोको राप थाहा पाउनअगि नै हरिया काँढाहरू र जलिरहेका काँढाहरूजस्तै त्यसले तिनीहरूलाई भुमरीसँगै उठाइ लानेछ ।
10 ೧೦ ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.
धर्मीले परमेश्‍वरको बदला देख्दा, त्यो आनन्‍दित हुनेछ । तिनीहरूले आफ्ना खुट्टाहरू दुष्‍टहरूका रगतमा धुनेछन्,
11 ೧೧ ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.
ताकि मानिसहरूले भन्‍नेछन्, “साँच्‍चै, धर्मी व्‍यक्‍तिको निम्ति इनाम छ । साँच्‍चै, परमेश्‍वर हुनुहुन्छ जसले पृथ्वीको न्याय गर्नुहुन्‍छ ।”

< ಕೀರ್ತನೆಗಳು 58 >