< ರೋಮಾಪುರದವರಿಗೆ 10 >

1 ಸಹೋದರರೇ, ಇಸ್ರಾಯೇಲ್ಯರು ರಕ್ಷಣೆ ಹೊಂದಬೇಕೆಂಬುದೇ ನನ್ನ ಮನೋಭಿಲಾಷೆಯೂ ಮತ್ತು ದೇವರಿಗೆ ನಾನು ಮಾಡುವ ವಿಜ್ಞಾಪನೆಯೂ ಆಗಿದೆ.
Bratří, příchylnost zajisté s zvláštní líbostí srdce mého jestiť k Izraelovi, i modlitba za něj k Bohu, aby spasen byl.
2 ದೇವರ ಬಗ್ಗೆ ಆಸಕ್ತಿಯುಳ್ಳವರಾಗಿದ್ದಾರೆಂದು ನಾನು ಅವರ ವಿಷಯದಲ್ಲಿ ಸಾಕ್ಷಿ ಕೊಡುತ್ತೇನೆ; ಆದರೂ ಅವರ ಆಸಕ್ತಿಯು ಜ್ಞಾನಾನುಸಾರವಾದುದಲ್ಲ.
Neboť jim svědectví vydávám, žeť horlivost Boží mají, ale ne podlé umění.
3 ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.
Nebo neznajíce Boží spravedlnosti, a svou vlastní spravedlnost usilujíce vystaviti, spravedlnosti Boží nebyli poddáni.
4 ನಂಬುವವರೆಲ್ಲರಿಗೆ ನೀತಿಯನ್ನು ದೊರಕಿಸಿಕೊಡುವುದಕ್ಕಾಗಿ ಕ್ರಿಸ್ತನೇ ಧರ್ಮಶಾಸ್ತ್ರವನ್ನು ಕೊನೆಗೊಳಿಸಿದನು.
Konec zajisté zákona jest Kristus k ospravedlnění všelikému věřícímu.
5 ಧರ್ಮಶಾಸ್ತ್ರದ ನೀತಿಯನುಸಾರ, “ಅದನ್ನು ಅನುಸರಿಸಿದವನು ಅದರಿಂದಲೇ ಜೀವಿಸುವನೆಂದು” ಮೋಶೆಯು ಬರೆಯುತ್ತಾನೆ.
Nebo Mojžíš píše o spravedlnosti, kteráž jest z zákona, pravě: Který by koli člověk činil ty věci, živ bude v nich.
6 ಆದರೆ ನಂಬಿಕೆಯಿಂದುಂಟಾಗುವ ನೀತಿಯು ಈ ರೀತಿಯಾಗಿ ಹೇಳುತ್ತದೆ. “‘ಕ್ರಿಸ್ತನನ್ನು ಭೂಮಿಗಿಳಿಸಿಕೊಂಡು ಬರುವುದಕ್ಕಾಗಿ ಮೇಲಣ ಲೋಕಕ್ಕೆ ಏರಿಹೋದವರಾರು?’
Ta pak spravedlnost, kteráž jest z víry, takto praví: Neříkej v srdci svém: Kdo vstoupí na nebe? To jest Krista s výsosti svésti.
7 ಎಂದಾಗಲಿ ‘ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿಕೊಂಡು ಬರುವುದಕ್ಕಾಗಿ ಯಾರು ಪಾತಾಳಲೋಕಕ್ಕೆ ಇಳಿದುಹೋದರು? ಎಂದಾಗಲಿ ನಿನ್ನ ಮನಸ್ಸಿನಲ್ಲಿ ಅಂದುಕೊಳ್ಳಬಾರದು.’” ಆದರೆ ಅದು ಏನನ್ನು ಹೇಳುತ್ತದೆ. (Abyssos g12)
Aneb kdo sstoupí do propasti? To jest Krista z mrtvých vzbuditi. (Abyssos g12)
8 “ದೇವರ ವಾಕ್ಯವು ನಿನ್ನ ಸಮೀಪದಲ್ಲಿಯೇ ಇದೆ; ಅದು ನಿನ್ನ ಬಾಯಲ್ಲಿಯೂ, ನಿನ್ನ ಹೃದಯದಲ್ಲಿಯೂ ಇದೆ.” ಆ ವಾಕ್ಯವು ನಾವು ಸಾರುವ ನಂಬಿಕೆಯ ವಿಷಯವಾದ ವಾಕ್ಯವೇ.
Ale co dí? Blízko tebe jestiť slovo, v ústech tvých a v srdci tvém. Toť jest slovo to víry, kteréž kážeme:
9 ಅದೇನೆಂದರೆ ನೀನು ಯೇಸುವನ್ನೇ ಕರ್ತನೆಂದು ಬಾಯಿಂದ ಅರಿಕೆಮಾಡಿಕೊಂಡು ದೇವರು ಆತನನ್ನು ಸತ್ತವರೊಳಗಿಂದ ಎಬ್ಬಿಸಿದನೆಂದು ಹೃದಯದಿಂದ ನಂಬಿದರೆ ನಿನಗೆ ರಕ್ಷಣೆಯಾಗುವುದು ಎಂಬುದೇ.
Vyznáš-li ústy svými Pána Ježíše, a srdcem svým uvěříš-li, že jej Bůh vzkřísil z mrtvých, spasen budeš.
10 ೧೦ ಹೃದಯದಿಂದ ನಂಬುವುದರ ಮೂಲಕ ನೀತಿಯು ದೊರಕುತ್ತದೆ. ಬಾಯಿಂದ ಅರಿಕೆಮಾಡುವುದರ ಮೂಲಕ ರಕ್ಷಣೆಯಾಗುತ್ತದೆ.
Srdcem se zajisté věří k spravedlnosti, ale ústy vyznání se děje k spasení.
11 ೧೧ “ಆತನ ಮೇಲೆ ನಂಬಿಕೆಯಿಡುವ ಒಬ್ಬನಾದರೂ ಆಶಾಭಂಗಪಡುವುದಿಲ್ಲವೆಂದು” ಧರ್ಮಶಾಸ್ತ್ರವು ಹೇಳುತ್ತದೆ.
Nebo dí písmo: Všeliký, kdož věří v něj, nebude zahanben.
12 ೧೨ ಈ ವಿಷಯದಲ್ಲಿ ಯೆಹೂದ್ಯರಿಗೂ ಅಥವಾ ಗ್ರೀಕನಿಗೂ ಹೆಚ್ಚು ಕಡಿಮೆ ಏನೂ ಇಲ್ಲ. ಎಲ್ಲರಿಗೂ ಒಬ್ಬನೇ ಕರ್ತನು; ಆತನು ತನ್ನ ನಾಮವನ್ನು ಹೇಳಿಕೊಳ್ಳುವವರಿಗೆ ಹೇರಳವಾಗಿ ಕೊಡುವುದಕ್ಕೆ ಶಕ್ತನಾಗಿದ್ದಾನೆ.
Neníť zajisté rozdílu mezi Židem a Řekem; nebo tentýž Pán všech, bohatý jest ke všechněm vzývajícím jej.
13 ೧೩ ಆದ್ದರಿಂದ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೂ ರಕ್ಷಣೆಯಾಗುವುದೆಂದು ಬರೆದಿದೆ.
Každý zajisté, kdožkoli vzýval by jméno Páně, spasen bude.
14 ೧೪ ಆದರೆ ಅವರು ನಂಬದೆ ಇರುವುದರಿಂದ ಆತನ ನಾಮವನ್ನು ಹೇಳಿಕೊಳ್ಳುವುದಾದರೂ ಹೇಗೆ? ಮತ್ತು ಆತನ ಸುದ್ದಿಯನ್ನು ಕೇಳದಿರುವಲ್ಲಿ ಆತನನ್ನು ನಂಬುವುದಾದರೂ ಹೇಗೆ? ಪ್ರಚಾರಪಡಿಸುವವನಿಲ್ಲದೆ ಕೇಳುವುದಾದರೂ ಹೇಗೆ? ಸುವಾರ್ತೆಸಾರುವವರನ್ನು ಕಳುಹಿಸದೆ ಸಾರುವುದು ಹೇಗೆ?
Ale kterak budou vzývati toho, v kteréhož neuvěřili? A kterak uvěří tomu, o němž neslyšeli? A kterak uslyší bez kazatele?
15 ೧೫ ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.
A kterak kázati budou, jestliže nebudou posláni? Jakož psáno jest: Jak krásné nohy zvěstujících pokoj, zvěstujících dobré věci.
16 ೧೬ ಆದರೂ ಆ ಶುಭವರ್ತಮಾನಕ್ಕೆ ಎಲ್ಲರೂ ಕಿವಿಗೊಡಲಿಲ್ಲ. ಈ ವಿಷಯದಲ್ಲಿ ಯೆಶಾಯನು, “ಕರ್ತನೇ, ನಾವು ಸಾರಿದ ಸುವಾರ್ತೆಯನ್ನು ಯಾರು ನಂಬಿದರು?” ಎಂದು ನುಡಿಯುತ್ತಾನೆ.
Ale nevšickni uposlechli evangelium. Nebo Izaiáš praví: Pane, kdo uvěřil kázaní našemu?
17 ೧೭ ಆದಕಾರಣ ಸಾರಿದ ಸುವಾರ್ತೆಯನ್ನು ಕೇಳುವುದರಿಂದ ನಂಬಿಕೆಯು ಹುಟ್ಟುತ್ತದೆ, ಕೇಳಿಸಿಕೊಳ್ಳುವುದು ಕ್ರಿಸ್ತನ ವಾಕ್ಯವಾಗಿದೆ.
Tedy víra z slyšení, slyšení pak skrze slovo Boží.
18 ೧೮ ಆದರೂ “ಅವರಿಗೆ ಕೇಳಿಸಲಿಲ್ಲವೇನೋ?” ಎಂದು ಹೇಳುತ್ತೇನೆ. ಹೌದು ನಿಶ್ಚಯವಾಗಿ ಕೇಳಿಸಿಕೊಂಡಿದ್ದರು. “ಸಾರುವವರ ಧ್ವನಿಯು ಭೂಮಿಯಲ್ಲೆಲ್ಲಾ ಪ್ರಸರಿಸಿತು, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿದವು.”
Ale pravímť: Zdaliž neslyšeli? Anobrž po vší zemi rozšel se zvuk jejich, a do končin okršlku země slova jejich.
19 ೧೯ ಆದರೆ “ಇಸ್ರಾಯೇಲ್ಯರು ಆ ವಾರ್ತೆಯನ್ನು ತಿಳಿದುಕೊಳ್ಳಲಿಲ್ಲವೇನು” ಎಂದು ಹೇಳುತ್ತೇನೆ. ಈ ವಿಷಯದಲ್ಲಿ, “ಜನಾಂಗವಲ್ಲದವರ ಮೂಲಕ ನಿಮ್ಮಲ್ಲಿ ಅಸೂಯೆ ಹುಟ್ಟುವಂತೆ ಪ್ರೆರೇಪಿಸುತ್ತೇನೆ; ವಿವೇಕವಿಲ್ಲದ ಜನರ ಮೂಲಕ ನಿಮ್ಮನ್ನು ರೊಚ್ಚಿಗೆಬ್ಬಿಸುವೆನು” ಎಂದು ಮೊದಲು ಮೋಶೆಯು ಹೇಳುತ್ತಾನೆ.
Ale pravím: Zdaliž nepoznal Izrael? Ano první Mojžíš řekl: Já k závisti vás přivedu skrze národ ten, kterýž není národ; skrze národ nemoudrý k hněvu popudím vás.
20 ೨೦ ಇದಲ್ಲದೆ ಯೆಶಾಯನು ಧೈರ್ಯವಾಗಿ ಮಾತನಾಡಿ, “ನನ್ನನ್ನು ಹುಡುಕದವರಿಗೂ ನಾನು ಸಿಕ್ಕಿದೆನು, ನನ್ನನ್ನು ಕೇಳದವರಿಗೆ ನಾನು ಪ್ರತ್ಯಕ್ಷನಾದೆನು,” ಎಂದು ಹೇಳುತ್ತಾನೆ.
A Izaiáš směle dí: Nalezen jsem od těch, kteříž mne nehledali; zjeven jsem těm, kteříž se na mne neptali.
21 ೨೧ ಆದರೆ ಅವನು ಇಸ್ರಾಯೇಲ್ಯರನ್ನು ಕುರಿತು, “ನನ್ನ ಮಾತಿಗೆ ಅವಿಧೇಯರಾಗಿ ಎದುರುಮಾತನಾಡುವ ಜನರನ್ನು ನಾನು ದಿನವೆಲ್ಲಾ ಎಡೆಬಿಡದೆ ಕೈ ಚಾಚಿ ಕರೆದೆನೆಂದು” ಆತನು ಹೇಳುತ್ತಾನೆ.
Ale proti Izraelovi dí: Přes celý den roztahoval jsem ruce své k lidu nepovolnému a protivnému.

< ರೋಮಾಪುರದವರಿಗೆ 10 >