< ರೋಮಾಪುರದವರಿಗೆ 11 >

1 ಹಾಗಾದರೆ ದೇವರು ತನ್ನ ಸ್ವಂತ ಜನರನ್ನು ಬೇಡವೆಂದು ತಿರಸ್ಕರಿಸಿದನೋ ಎಂದು ಕೇಳುತ್ತೇನೆ ಎಂದಿಗೂ ಇಲ್ಲ. ನಾನು ಸಹ ಇಸ್ರಾಯೇಲ್ಯನು, ಅಬ್ರಹಾಮನ ಸಂತತಿಯವನು, ಬೆನ್ಯಾಮೀನನ ಕುಲದವನು ಆಗಿದ್ದೇನಲ್ಲಾ.
وَهُنَا أَقُولُ: هَلْ رَفَضَ اللهُ شَعْبَهُ؟ حَاشَا! فَأَنَا أَيْضاً إِسْرَائِيلِيٌّ، مِنْ نَسْلِ إِبْرَاهِيمَ وَمِنْ سِبْطِ بِنْيَامِينَ.١
2 ದೇವರು ತಾನು ಮುಂದಾಗಿ ತನ್ನ ಜನರಾಗುವುದಕ್ಕೆ ಗೊತ್ತುಮಾಡಿಕೊಂಡಿದ್ದ ಪ್ರಜೆಗಳನ್ನು ತಳ್ಳಿಬಿಡಲಿಲ್ಲ. ಎಲೀಯನ ಬಗ್ಗೆ ಧರ್ಮಶಾಸ್ತ್ರವು ಹೇಳುವ ಮಾತು ನಿಮಗೆ ತಿಳಿಯದೋ?
إِنَّ اللهَ لَمْ يَرْفُضْ شَعْبَهُ الَّذِي كَانَ قَدِ اخْتَارَهُ. أَمَا تَعْلَمُونَ مَا يَقُولُهُ الْكِتَابُ فِي أَمْرِ إِيلِيَّا لَمَّا رَفَعَ إِلَى اللهِ شَكْوَى عَلَى إِسْرَائِيلَ قَائِلاً:٢
3 ಅವನು ದೇವರ ಮುಂದೆ, “ಕರ್ತನೇ ಅವರು ನಿನ್ನ ಪ್ರವಾದಿಗಳನ್ನು ಸಂಹರಿಸಿದ್ದಾರೆ, ನಿನ್ನ ಯಜ್ಞವೇದಿಗಳನ್ನು ಒಡೆದು ಹಾಕಿದ್ದಾರೆ. ನಾನೊಬ್ಬನೇ ಉಳಿದಿದ್ದೇನೆ. ಅವರು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ” ಎಂದು ಇಸ್ರಾಯೇಲ್ಯರ ಮೇಲೆ ದೂರು ಹೇಳಿದ್ದಕ್ಕೆ.
«يَا رَبُّ؟ قَتَلُوا أَنْبِيَاءَكَ، وَهَدَمُوا مَذَابِحَكَ، وَبَقِيتُ أَنَا وَحْدِي، وَهُمْ يَسْعَوْنَ إِلَى قَتْلِي!»٣
4 ದೇವರ ಉತ್ತರವೇನೆಂದರೆ, “ಬಾಳನ ವಿಗ್ರಹಕ್ಕೆ ಅಡ್ಡಬೀಳದೆ ಇರುವ ಏಳುಸಾವಿರ ಪುರುಷರನ್ನು ನನಗಾಗಿ ಉಳಿಸಿಕೊಂಡಿದ್ದೇನೆ” ಎಂಬುದೇ.
وَلكِنْ، مَاذَا كَانَ الْجَوَابُ الإِلَهِيُّ لَهُ؟ «أَبْقَيْتُ لِنَفْسِي سَبْعَةَ آلافِ رَجُلٍ لَمْ يَحْنُوا رُكْبَةً لِلْبَعْلِ!»٤
5 ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.
فَكَذَلِكَ، فِي الزَّمَانِ الْحَاضِرِ، مَاتَزَالُ بَقِيَّةٌ اخْتَارَهَا اللهُ بِالنِّعْمَةِ.٥
6 ಕೃಪೆಯಿಂದ ಆರಿಸಿಕೊಂಡನು ಅಂದ ಮೇಲೆ ಒಳ್ಳೆಯ ಕಾರ್ಯದಿಂದಲ್ಲ. ಹಾಗಲ್ಲದ ಪಕ್ಷಕ್ಕೆ ಕೃಪೆಯನ್ನು ಇನ್ನು ಕೃಪೆಯನ್ನುವುದಕ್ಕಾಗುವುದಿಲ್ಲ.
وَلكِنْ، بِمَا أَنَّ ذَلِكَ قَدْ تَمَّ بِالنِّعْمَةِ، فَلَيْسَ بَعْدُ عَلَى أَسَاسِ الأَعْمَالِ، وَإلَّا فَلَيْسَتِ النِّعْمَةُ نِعْمَةً بَعْدُ.٦
7 ಇದರಿಂದ ತಿಳಿಯತಕ್ಕದ್ದೇನು? ಇಸ್ರಾಯೇಲ್ಯರು ಹುಡುಕಿದ್ದನ್ನು ಅವರು ಹೊಂದಲಿಲ್ಲ. ಅವರೊಳಗೆ ಆರಿಸಲ್ಪಟ್ಟವರಿಗೆ ಅದು ದೊರೆಯಿತು. ಉಳಿದವರು ಮೊಂಡರಾದರು.
فَمَا الْخُلاصَةُ إِذاً؟ إِنَّ مَا يَسْعَى إِلَيْهِ إِسْرَائِيلُ لَمْ يَنَالُوهُ، بَلْ نَالَهُ الْمُخْتَارُونَ مِنْهُمْ، وَالْبَاقُونَ عَمِيَتْ بَصَائِرُهُمْ،٧
8 “ದೇವರು ಅವರಿಗೆ ಮಂದಬುದ್ಧಿಯ ಆತ್ಮನನ್ನು, ಅಂದರೆ ಕಾಣದ ಕಣ್ಣುಗಳನ್ನೂ, ಕೇಳದ ಕಿವಿಗಳನ್ನೂ ಕೊಟ್ಟನು. ಈ ಭಾವವು ಈ ಹೊತ್ತಿನವರೆಗೂ ಹಾಗೆಯೇ ಇದೆ” ಎಂದು ಬರೆದ ಪ್ರಕಾರ ಅವರಿಗೆ ಆಯಿತು.
وَفْقاً لِمَا قَدْ كُتِبَ: «أَلْقَى اللهُ عَلَيْهِمْ رُوحَ خُمُولٍ وَأَعْطَاهُمْ عُيُوناً لَا يُبْصِرُونَ بِها، وَآذَاناً لَا يَسْمَعُونَ بِها، حَتَّى هَذَا الْيَوْمِ».٨
9 ಇದಲ್ಲದೆ “ಅವರ ಭೋಜನವೇ ಅವರಿಗೆ ಬಲೆಯೂ, ಜಾಲವೂ, ಅಡೆತಡೆಯೂ, ಪ್ರತಿಕಾರವೂ ಆಗಲಿ;
كَذَلِكَ يَقُولُ دَاوُدُ: «لِتَصِرْ لَهُمْ مَائِدَتُهُمْ فَخّاً وَشَرَكاً وَعَقَبَةً وَعِقَاباً.٩
10 ೧೦ ಅವರ ಕಣ್ಣು ಮೊಬ್ಬಾಗಿ ಕಾಣದೆಹೋಗಲಿ ಅವರ ಬೆನ್ನು ಯಾವಾಗಲೂ ಬೊಗ್ಗಿಕೊಂಡಿರುವಂತೆ ಮಾಡು” ಎಂದು ದಾವೀದನು ಹೇಳುತ್ತಾನೆ.
لِتُظْلِمْ عُيُونُهُمْ كَيْ لَا يُبْصِرُوا، وَلْتَكُنْ ظُهُورُهُمْ مُنْحَنِيَةً دَائِماً!»١٠
11 ೧೧ ಹಾಗಾದರೆ “ಅವರು ಬಿದ್ದೇಹೋಗುವಂತೆ ಎಡವಿದರೇನು” ಎಂದು ಕೇಳುತ್ತೇನೆ. ಹಾಗೆ ಎಂದಿಗೂ ಆಗಬಾರದು ಅವರು ಬಿದ್ದುಹೋದದ್ದರಿಂದ ಕ್ರಿಸ್ತನಿಂದ ಉಂಟಾಗುವ ರಕ್ಷಣೆಯು ಅನ್ಯಜನರಿಗೆ ಉಂಟಾಯಿತು. ಇದರಿಂದ ದೇವರು ಅವರಲ್ಲಿ ಅಸೂಯೆ ಹುಟ್ಟಿಸುತ್ತಾನೆ.
فَأَقُولُ إِذاً: هَلْ تَعَثَّرُوا لِكَيْ يَسْقُطُوا أَبَداً؟ حَاشَا! بَلْ بِسَقْطَتِهِمْ تَوَفَّرَ الْخَلاصُ لِلأُمَمِ، لَعَلَّ ذلِكَ يُثِيرُ غَيْرَتَهُمْ.١١
12 ೧೨ ಅವರು ಬಿದ್ದುಹೋದದ್ದು ಸರ್ವಲೋಕದ ಸೌಭಾಗ್ಯಕ್ಕೂ, ಅವರು ಸೋತುಹೋದದ್ದು ಅನ್ಯಜನಗಳ ಸಂಪತ್ತಿಗೂ ಮಾರ್ಗವಾಗಿರಲಾಗಿ ಅವರ ಪೂರ್ಣ ಪುನಃಸ್ಥಾಪನೆಯು ಪ್ರಪಂಚಕ್ಕೆ ಎಷ್ಟೋ ಹೆಚ್ಚಾದ ಭಾಗ್ಯಕ್ಕೆ ಕಾರಣವಾಗುವುದು.
فَإِذَا كَانَتْ سَقْطَتُهُمْ غِنىً لِلْعَالَمِ، وَخَسَارَتُهُمْ غِنىً لِلأُمَمِ، فَكَمْ بِالأَحْرَى يَكُونُ اكْتِمَالُهُمْ؟١٢
13 ೧೩ ಅನ್ಯಜನರಾಗಿರುವ ನಿಮಗೆ ನಾನು ಹೇಳುವುದೇನಂದರೆ, ನಾನು ಅನ್ಯಜನರಿಗೆ ಅಪೊಸ್ತಲನಾಗಿರಲಾಗಿ ನನ್ನ ಸೇವೆಯ ಬಗ್ಗೆ ಹೊಗಳಿಕೊಳ್ಳುತ್ತಿದ್ದೇನೆ.
فَإِنِّي أُخَاطِبُكُمْ، أَنْتُمُ الأُمَمَ، بِمَا أَنِّي رَسُولٌ لِلأُمَمِ، مُمَجِّداً رِسَالَتِي،١٣
14 ೧೪ ಇದರಿಂದಾಗಿ ಸ್ವಜನರಲ್ಲಿ ಅಸೂಯೆಯನ್ನು ಕೆರಳಿಸಿ ಅವರಲ್ಲಿ ಕೆಲವರನ್ನು ರಕ್ಷಣೆಯ ಮಾರ್ಗಕ್ಕೆ ತಂದೇನು.
لَعَلِّي أُثِيرُ غَيْرَةَ بَنِي جِنْسِي فَأُنْقِذَ بَعْضاً مِنْهُمْ.١٤
15 ೧೫ ಯಾಕೆಂದರೆ ಇಸ್ರಾಯೇಲ್ಯರನ್ನು ನಿರಾಕರಿಸುವುದರಿಂದ ಲೋಕವು ದೇವರ ಸಂಗಡ ಸಂಧಾನವಾಗುವುದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವುದರಿಂದ ಏನಾಗುವುದು? ಸತ್ತವರು ಜೀವಿತರಾಗಿ ಎದ್ದುಬಂದತಾಗುವುದಿಲ್ಲವೇ.
فَإِذَا كَانَ إِبْعَادُهُمْ فُرْصَةً لِمُصَالَحَةِ الْعَالَمِ، فَمَاذَا يَكُونُ قُبُولُهُمْ إِلّا حَيَاةً مِنْ بَيْنِ الأَمْوَاتِ؟١٥
16 ೧೬ ಕಣಕದಲ್ಲಿ ಪ್ರಥಮಫಲವನ್ನು ದೇವರಿಗರ್ಪಿಸಿದ ಮೇಲೆ ಕಣಕವೆಲ್ಲಾ ಪವಿತ್ರವಾಯಿತು. ಬೇರು ಶುದ್ಧವಾಗಿದ್ದ ಮೇಲೆ ಕೊಂಬೆಗಳೂ ಹಾಗೆಯೇ.
وَإذَا كَانَتِ الْقِطْعَةُ الأُولَى مِنَ الْعَجِينِ مُقَدَّسَةً، فَالْعَجِينُ كُلُّهُ مُقَدَّسٌ؛ وَإذَا كَانَ أَصْلُ الشَّجَرَةِ مُقَدَّساً، فَالأَغْصَانُ أَيْضاً تَكُونُ مُقَدَّسَةً.١٦
17 ೧೭ ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.
فَإِذَا كَانَتْ بَعْضُ أَغْصَانِ الزَّيْتُونَةِ قَدْ قُطِعَتْ، ثُمَّ طُعِّمْتَ فِيهَا وَأَنْتَ مِنْ زَيْتُونَةٍ بَرِّيَّةٍ، فَصِرْتَ بِذَلِكَ شَرِيكاً فِي أَصْلِ الزَّيْتُونَةِ وَغِذَائِهَا،١٧
18 ೧೮ ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ. ಅದು ನಿನಗೆ ಆಧಾರವಾಗಿದೆ.
فَلا تَفْتَخِرْ عَلَى بَاقِي الأَغْصَانِ. وَإِنْ كُنْتَ تَفْتَخِرُ، فَلَسْتَ أَنْتَ تَحْمِلُ الأَصْلَ، بَلْ هُوَ يَحْمِلُكَ.١٨
19 ೧೯ ಈ ಮಾತಿಗೆ, “ನನ್ನನ್ನು ಕಸಿಮಾಡುವುದಕ್ಕಾಗಿ ಕೊಂಬೆಗಳು ಮುರಿದುಹಾಕಲ್ಪಟ್ಟವಲ್ಲಾ” ಎಂದು ನೀನು ಒಂದು ವೇಳೆ ಹೇಳಬಹುದು.
وَلكِنَّكَ قَدْ تَقُولُ: «تِلْكَ الأَغْصَانُ قَدْ قُطِعَتْ لأُطَعَّمَ أَنَا!»١٩
20 ೨೦ ನೀನು ಹೇಳುವುದು ನಿಜ. ಅವರು ನಂಬದೇ ಹೋದ್ದದರಿಂದ ಮುರಿದುಹಾಕಲ್ಪಟ್ಟರು. ನೀನು ನಿಂತಿರುವುದು ನಂಬಿಕೆಯಿಂದಲೇ.
صَحِيحٌ! فَهِيَ قُطِعَتْ لِسَبَبِ عَدَمِ الإِيمَانِ، وَأَنْتَ إِنَّمَا تَثْبُتُ بِسَبَبِ الإِيمَانِ. فَلا يَأْخُذْكَ الْغُرُورُ، بَلْ خَفْ٢٠
21 ೨೧ ಗರ್ವಪಡಬೇಡ, ಭಯದಿಂದಿರು. ದೇವರು ಹುಟ್ಟುಕೊಂಬೆಗಳನ್ನು ಉಳಿಸದೆ ಇದ್ದ ಮೇಲೆ ನಿನ್ನನ್ನೂ ಉಳಿಸುವುದಿಲ್ಲ.
إِنَّ اللهَ رُبَّمَا لَا يُبْقِي عَلَيْكَ مَادَامَ لَمْ يُبْقِ عَلَى الأَغْصَانِ الأَصْلِيَّةِ.٢١
22 ೨೨ ಆದ್ದರಿಂದ ದೇವರ ದಯೆಯನ್ನೂ, ದಂಡನೆಯನ್ನು ನೋಡು; ಬಿದ್ದವರಿಗೆ ದಂಡನೆಯನ್ನೂ, ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ಆತನ ದಯೆಯನ್ನು ಹೊಂದುವಿ. ಇಲ್ಲವಾದರೆ ನಿನ್ನನ್ನೂ ಕಡಿದುಹಾಕುವನು.
فَتَأَمَّلْ إِذاً لُطْفَ اللهِ وَشِدَّتَهُ: أَمَّا الشِّدَّةُ، فَعَلَى الَّذِينَ سَقَطُوا؛ وَأَمَّا لُطْفُ اللهِ فَمِنْ نَحْوِكَ مَادُمْتَ تَثْبُتُ فِي اللُّطْفِ. وَلَوْ لَمْ تَكُنْ ثَابِتاً، لَكُنْتَ أَنْتَ أَيْضاً تُقْطَعُ.٢٢
23 ೨೩ ಇಸ್ರಾಯೇಲ್ಯರ ಕೂಡ ಇನ್ನು ಅಪನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಅವರನ್ನೂ ಕಸಿಮಾಡುವನು. ದೇವರು ಅವರನ್ನು ತಿರುಗಿ ಕಸಿಕಟ್ಟುವುದಕ್ಕೆ ಸಮರ್ಥನಾಗಿದ್ದಾನೆ.
وَهُمْ أَيْضاً، إِنْ لَمْ يَثْبُتُوا فِي عَدَمِ الإِيمَان فَسَوْفَ يُطَعَّمُونَ، لأَنَّ اللهَ قَادِرٌ أَنْ يُطَعِّمَهُمْ مِنْ جَدِيدٍ.٢٣
24 ೨೪ ನೀನು ಹುಟ್ಟು ಕಾಡುಮರದಿಂದ ಕಡಿದು ತೆಗೆಯಲ್ಪಟ್ಟು ನಿನಗೆ ಸಂಬಂಧಪಡದ ಊರು ಮರದಲ್ಲಿ ಕಸಿಕಟ್ಟಿಸಿಕೊಂಡವನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವುದು ಎಷ್ಟೋ ಯುಕ್ತವಾಗಿದೆಯಲ್ಲವೇ.
فَإِذَا كُنْتَ أَنْتَ قَدْ قُطِعْتَ مِنَ الزَّيْتُونَةِ الْبَرِّيَّةِ الَّتِي تَنْتَمِي إِلَيْهَا أَصْلاً، وَطُعِّمْتَ خِلافاً لِلْعَادَةِ فِي الزَّيْتُونَةِ الْجَيِّدَةِ، فَكَمْ بِالأَحْرَى هَؤُلاءِ، الَّذِينَ هُمْ أَغْصَانٌ أَصْلِيَّةٌ، سَوْفَ يُطَعَّمُونَ فِي زَيْتُونَتِهِمِ الْخَاصَّةِ.٢٤
25 ೨೫ ಸಹೋದರರೇ, ನಿಮ್ಮನ್ನು ನೀವೇ ಬುದ್ಧಿವಂತರೆಂಬುದಾಗಿ ಎಣಿಸಿಕೊಳ್ಳದೆ ಇರಲು ಇದುವರೆಗೆ ಗುಪ್ತವಾಗಿದ್ದ ಒಂದು ಸಂಗತಿ ನಿಮಗೆ ತಿಳಿಸಬೇಕೆಂದು ಅಪೇಕ್ಷಿಸುತ್ತೇನೆ ಅದೇನೆಂದರೆ ಇಸ್ರಾಯೇಲ್ಯರಲ್ಲಿ ಒಂದು ಪಾಲು ಜನರಿಗೆ ಉಂಟಾದ ಮೊಂಡತನವು ಯಾವಾಗಲೂ ಇರದೆ ಅನ್ಯಜನಗಳ ಸಮುದಾಯವು ದೇವರ ರಾಜ್ಯದಲ್ಲಿ ಸೇರುವ ತನಕ ಮಾತ್ರ ಇರುವುದು.
فَإِنِّي لَا أُرِيدُ، أَيُّهَا الإِخْوَةُ، أَنْ يَخْفَى عَلَيْكُمْ هَذَا السِّرُّ، لِكَيْ لَا تَكُونُوا حُكَمَاءَ فِي نَظَرِ أَنْفُسِكُمْ، وَهُوَ أَنَّ الْعَمَى قَدْ أَصَابَ إِسْرَائِيلَ جُزْئِيًّا إِلَى أَنْ يَتِمَّ دُخُولُ الأُمَمِ.٢٥
26 ೨೬ ಆ ನಂತರ ಇಸ್ರಾಯೇಲ್ ಜನರೆಲ್ಲರೂ ರಕ್ಷಣೆಹೊಂದುವರು. ಇದಕ್ಕೆ ಆಧಾರವಾಗಿ ಧರ್ಮಶಾಸ್ತ್ರದಲ್ಲಿ ಬಿಡಿಸುವವನು “ಚೀಯೋನಿನೊಳಗಿಂದ ಹೊರಟು ಬಂದು ಯಾಕೋಬನಲ್ಲಿರುವ ಭಕ್ತಿಹೀನತೆಯನ್ನು ನಿವಾರಣೆಮಾಡುವನು.
وَهكَذَا، سَوْفَ يَخْلُصُ جَمِيعُ إِسْرَائِيلَ، وَفْقاً لِمَا قَدْ كُتِبَ: «إِنَّ الْمُنْقِذَ سَيَطْلُعُ مِنْ صِهْيَوْنَ وَيَرُدُّ الإِثْمَ عَنْ يَعْقُوبَ.٢٦
27 ೨೭ ನಾನು ಅವರ ಸಂಗಡ ಮಾಡಿಕೊಂಡ ಈ ಒಡಂಬಡಿಕೆಯು ನಾನು ಅವರ ಪಾಪಗಳನ್ನು ಪರಿಹರಿಸುವಾಗ ನೆರವೇರುವುದು.” ಎಂದು ಬರೆದಿದೆ.
وَهَذَا هُوَ الْعَهْدُ مِنِّي لَهُمْ حِينَ أُزِيلُ خَطَايَاهُمْ».٢٧
28 ೨೮ ಅವರು ಸುವಾರ್ತೆಯನ್ನು ಬೇಡವೆಂದದ್ದರಿಂದ ದೇವರು ನಿಮಗೆ ಹಿತವನ್ನು ಉಂಟುಮಾಡಿ ಅವರನ್ನು ಶತ್ರುಗಳೆಂದೆಣಿಸಿದ್ದಾನೆ. ಆದರೂ ಅವರು ತಾನು ಆರಿಸಿಕೊಂಡ ಪೂರ್ವಿಕರ ವಂಶಸ್ಥರಾಗಿರುವುದರಿಂದ ಅವರನ್ನು ಪ್ರಿಯರೆಂದು ಎಣಿಸಿದ್ದಾನೆ.
فَفِيمَا يَتَعَلَّقُ بِالإِنْجِيلِ، هُمْ أَعْدَاءُ اللهِ مِنْ أَجْلِكُمْ. وَأَمَّا فِيمَا يَتَعَلَّقُ بِالاخْتِيَارِ الإِلهِيِّ فَهُمْ مَحْبُوبُونَ مِنْ أَجْلِ الآبَاءِ.٢٨
29 ೨೯ ದೇವರು ವರಗಳನ್ನು ಅನುಗ್ರಹಿಸುವುದಕ್ಕೆ ಜನರನ್ನು ಕರೆಯುವುದ್ದಕ್ಕೂ ಮನಸ್ಸು ಬದಲಾಯಿಸುವವನಲ್ಲ.
فَإِنَّ اللهَ لَا يَتَرَاجَعُ أَبَداً عَنْ هِبَاتِهِ وَدَعْوَتِهِ.٢٩
30 ೩೦ ಯಾವ ಪ್ರಕಾರ ನೀವು ಪೂರ್ವದಲ್ಲಿ ಅವಿಧೇಯರಾಗಿದ್ದರೂ ಈಗ ಅವರ ಅವಿಧೇಯತೆಯ ದೆಸೆಯಿಂದ ಕರುಣೆ ಹೊಂದಿದ್ದೀರೋ,
وَالْوَاقِعُ أَنَّهُ كَمَا كُنْتُمْ أَنْتُمْ فِي الْمَاضِي غَيْرَ مُطِيعِينَ لِلهِ، وَلَكِنَّكُمُ الآنَ نِلْتُمُ الرَّحْمَةَ مِنْ جَرَّاءِ عَدَمِ طَاعَتِهِمْ هُمْ،٣٠
31 ೩೧ ಅದೇ ಪ್ರಕಾರವಾಗಿ ಇಸ್ರಾಯೇಲ್ಯರೂ ಈಗ ಅವಿಧೇಯರಾಗಿದ್ದರೂ ನಿಮಗೆ ದೊರಕಿದ ಕರುಣೆಯನ್ನು ಅವರು ಹೊಂದುವರು.
فَكَذَلِكَ الآنَ هُمْ غَيْرُ مُطِيعِينَ لِلهِ. لِيَنَالُوا هُمْ أَيْضاً الرَّحْمَةَ، مِنْ جَرَّاءِ الرَّحْمَةِ الَّتِي نِلْتُمُوهَا أَنْتُمْ.٣١
32 ೩೨ ಯಾಕೆಂದರೆ ದೇವರು ಎಲ್ಲರಿಗೂ ಕರುಣೆಯನ್ನು ತೋರಿಸಬೇಕೆಂಬ ಉದ್ದೇಶವುಳ್ಳವನಾಗಿದ್ದು ಎಲ್ಲರನ್ನೂ ಅವಿಧೇಯತೆಯೆಂಬ ದುಸ್ಥಿತಿಯಲ್ಲಿ ಮುಚ್ಚಿಹಾಕಿದ್ದಾನೆ. (eleēsē g1653)
فَإِنَّ اللهَ حَبَسَ الْجَمِيعَ مَعاً فِي عَدَمِ الطَّاعَةِ لِكَيْ يَرْحَمَهُمْ جَمِيعاً. (eleēsē g1653)٣٢
33 ೩೩ ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.
فَمَا أَعْمَقَ غِنَى اللهِ وَحِكْمَتَهُ وَعِلْمَهُ! مَا أَبْعَدَ أَحْكَامَهُ عَنِ الْفَحْصِ وَطُرُقَهُ عَنِ التَّتَبُّعِ!٣٣
34 ೩೪ “ಕರ್ತನ ಮನಸ್ಸನ್ನು ತಿಳಿದುಕೊಂಡವರಾರು? ಆತನಿಗೆ ಆಲೋಚನಾಕರ್ತನಾಗಿದ್ದವನು ಯಾರು?
«لأَنَّهُ مَنْ عَرَفَ فِكْرَ الرَّبِّ؟ أَوْ مَنْ كَانَ لَهُ مُشِيراً؟٣٤
35 ೩೫ ಮುಂಗಡವಾಗಿ ಆತನಿಗೆ ಕೊಟ್ಟು ಆನಂತರ ಪ್ರತಿಫಲವನ್ನು ತೆಗೆದುಕೊಳ್ಳುವವನು ಯಾರು?”
أَوْ مَنْ أَقْرَضَهُ شَيْئاً حَتَّى يُرَدَّ لَهُ؟»٣٥
36 ೩೬ ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್. (aiōn g165)
فَإِنَّ مِنْهُ وَبِهِ وَلَهُ كُلَّ شَيْءٍ. لَهُ الْمَجْدُ إِلَى الأَبَدِ. آمِينَ! (aiōn g165)٣٦

< ರೋಮಾಪುರದವರಿಗೆ 11 >