< ರೋಮಾಪುರದವರಿಗೆ 3 >
1 ೧ ಹಾಗಾದರೆ ಯೆಹೂದ್ಯರ ವೈಶಿಷ್ಟ್ಯವೇನು? ಸುನ್ನತಿ ಮಾಡಿಸಿಕೊಂಡದರಿಂದ ಲಾಭವೇನು?
౧అలాగైతే యూదుల గొప్పతనం ఏమిటి? సున్నతి వలన ప్రయోజనం ఏమిటి?
2 ೨ ಎಲ್ಲಾ ವಿಷಯಗಳನ್ನು ಕುರಿತು ಹೇಳಲು ಬಹಳ ಉಂಟು. ಮೊದಲನೇಯದಾಗಿ ದೈವೋಕ್ತಿಗಳು ಅವರ ವಶಕ್ಕೆ ಸಮರ್ಪಿಸಿ ಒಪ್ಪಿಸಲ್ಪಟ್ಟಿವೆ.
౨ప్రతి విషయంలో ఎక్కువే. మొదటిది, దేవుని వాక్కులు యూదులకే అప్పగించబడ్డాయి.
3 ೩ ಅವರಲ್ಲಿ ಕೆಲವರಿಗೆ ನಂಬಿಕೆ ಇರಲಿಲ್ಲವಾದರೂ? ಅವರ ಅಪನಂಬಿಕೆಯಿಂದ ದೇವರು ನಂಬಿಕೆಗೆ ತಪ್ಪುವವನಾದಾನೋ? ಎಂದಿಗೂ ಇಲ್ಲ.
౩కొందరు యూదులు నమ్మదగని వాళ్ళు అయినంత మాత్రాన దేవుడు నమ్మదగినవాడు కాకపోతాడా?
4 ೪ ಬದಲಾಗಿ, “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.” ಎಂದು ಗ್ರಂಥಗಳಲ್ಲಿ ಬರೆದಿರುವ ಹಾಗೆಯೇ, ಎಲ್ಲಾ ಮಾನವರು ಸುಳ್ಳುಗಾರರಾದರೂ, ದೇವರು ಮಾತ್ರ ಸತ್ಯವಂತನೇ.
౪కానేకాదు. “నీ మాటల్లో నీవు నీతిమంతుడుగా కనిపించడానికి, నీపై విచారణ జరిగినప్పుడు గెలవడానికి” అని రాసి ఉన్న ప్రకారం మనుషులంతా అబద్ధికులైనా సరే, దేవుడు మాత్రం సత్యవంతుడే.
5 ೫ ಆದರೆ ನಮ್ಮ ಅನ್ಯಾಯದ ನಡವಳಿಕೆಯಿಂದ ದೇವರು ನೀತಿವಂತನೆಂದು ಪ್ರಸಿದ್ಧಿಗೆ ಬರುವುದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಗಾರನೋ? ಎಂದಿಗೂ ಇಲ್ಲ. ಈ ಮಾತನ್ನು ಮನುಷ್ಯನ ರೀತಿಯಲ್ಲಿ ಆಡುತ್ತಿದ್ದೇನೆ.
౫మన దుర్నీతి దేవుని న్యాయాన్ని వెల్లడి చేస్తున్నప్పటికీ కోపం చూపే దేవుడు అన్యాయం చేసేవాడని చెప్పాలా? నేను మానవ వ్యవహార రీతిలో మాట్లాడుతున్నాను.
6 ೬ ದೇವರು ಅನ್ಯಾಯಗಾರನಾಗಿದ್ದರೆ ಲೋಕಕ್ಕೆ ನ್ಯಾಯ ತೀರ್ಪಾಗುವುದಾದರೂ ಹೇಗೆ?
౬అలా కానే కాదు. అలాగైతే దేవుడు లోకానికి ఎలా తీర్పు తీరుస్తాడు?
7 ೭ ನನ್ನ ಸುಳ್ಳಿನಿಂದ ದೇವರ ಸತ್ಯವು ಪ್ರಸಿದ್ಧಿಗೆ ಬಂದು ಆತನ ಮಹಿಮೆ ಹೆಚ್ಚಾಗುವುದಾದರೆ ಇನ್ನು ನನ್ನನ್ನು ಪಾಪಿಯೆಂದು ಪರಿಗಣಿಸುವುದು ಯಾಕೆ?
౭నా అబద్ధం ద్వారా దేవుని సత్యం విస్తరించి ఆయనకు మహిమ కలిగితే నేను పాపినని తీర్పు పొందడం ఎందుకు?
8 ೮ “ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
౮మంచి జరగడం కోసం చెడు జరిగిద్దాం అని మేము బోధిస్తున్నామని ఇప్పటికే కొందరు మాపై నిందారోపణ చేసినట్టు మేము నిజంగానే ఆ ప్రకారం చెప్పవచ్చు కదా? వారి మీదికి వచ్చే శిక్ష న్యాయమైనదే.
9 ೯ ಹಾಗಾದರೆ ಏನು ಹೇಳಬೇಕು? ನಾವು ಅನ್ಯರಿಗಿಂತ ಶ್ರೇಷ್ಠರೋ? ಎಷ್ಟು ಮಾತ್ರಕ್ಕೂ ಇಲ್ಲ. ಯೆಹೂದ್ಯರೇ ಆಗಲಿ ಗ್ರೀಕರೇ ಆಗಲಿ ಎಲ್ಲರೂ ಪಾಪಕ್ಕೆ ಒಳಗಾಗಿ ಅಪರಾಧಿಗಳಾಗಿದ್ದಾರೆಂದು ಮೊದಲೇ ತೋರಿಸಿಕೊಟ್ಟಿದ್ದೇವಲ್ಲಾ.
౯అలాగని మేము వారికంటే మంచివారమా? ఎంతమాత్రం కాదు. యూదులైనా, యూదేతరులైనా, అందరూ పాపం కింద ఉన్నారని ఇప్పటికే దోషారోపణ చేశాం కదా.
10 ೧೦ ಧರ್ಮಶಾಸ್ತ್ರದಲ್ಲಿ ಬರೆದಿರುವಂತೆ, “ನೀತಿವಂತನು ಇಲ್ಲ, ಒಬ್ಬನಾದರೂ ಇಲ್ಲ;
౧౦దీని విషయంలో ఏమని రాసి ఉన్నదంటే, “నీతిమంతుడు లేడు, ఒక్కడు కూడా లేడు.
11 ೧೧ ತಿಳಿವಳಿಕೆಯುಳ್ಳವನು ಇಲ್ಲ, ದೇವರನ್ನು ಹುಡುಕುವವನು ಇಲ್ಲ.
౧౧గ్రహించేవాడెవడూ లేడు, దేవుణ్ణి వెదికే వాడెవడూ లేడు.
12 ೧೨ ಎಲ್ಲರೂ ದಾರಿತಪ್ಪಿ ನಡೆಯುತ್ತಾ, ಕೆಟ್ಟುಹೋಗಿದ್ದಾರೆ. ಒಳ್ಳೆಯದನ್ನು ಮಾಡುವವನು ಇಲ್ಲ, ಒಬ್ಬನಾದರೂ ಇಲ್ಲ.
౧౨అందరూ దారి తప్పిపోయారు, అందరూ ఏకంగా పనికిమాలినవారయ్యారు. మంచి జరిగించేవాడు లేడు, ఒక్కడు కూడా లేడు.
13 ೧೩ ಅವರ ಗಂಟಲು ತೆರೆದಿರುವ ಸಮಾಧಿಯಾಗಿದೆ. ಅವರು ನಾಲಿಗೆಯಿಂದ ವಂಚನೆಯ ಮಾತುಗಳನ್ನಾಡುತ್ತಾರೆ. ಅವರ ತುಟಿಯ ಹಿಂದೆ ಹಾವಿನ ವಿಷವಿದೆ.
౧౩వారి గొంతుక తెరచి ఉన్న సమాధిలాగా ఉంది. వారు నాలుకతో మోసం చేస్తూ ఉంటారు. వారి పెదవుల కింద పాము విషం ఉంది.
14 ೧೪ ಅವರ ಬಾಯಿ ಶಾಪದಿಂದಲೂ ಕ್ರೋಧದ ಮಾತುಗಳಿಂದಲೂ, ತುಂಬಿದೆ.
౧౪వారి నోటినిండా శాపనార్ధాలు, పగ ఉన్నాయి.
15 ೧೫ ಅವರ ಕಾಲುಗಳು ರಕ್ತವನ್ನು ಸುರಿಸಲು ಆತುರಪಡುತ್ತವೆ.
౧౫రక్తం చిందించడానికి వారి పాదాలు పరిగెడుతూ ఉన్నాయి.
16 ೧೬ ಅವರು ಹೋದ ದಾರಿಗಳಲ್ಲಿ ನಾಶಸಂಕಟಗಳು ಪೀಡೆಗಳು ಉಂಟಾಗುತ್ತವೆ.
౧౬వారి మార్గాల్లో నాశనం, కష్టం ఉన్నాయి.
17 ೧೭ ಸಮಾಧಾನದ ಮಾರ್ಗವನ್ನೇ ಅರಿಯರು.
౧౭వారికి శాంతిమార్గం తెలియదు.
18 ೧೮ ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ” ಎಂದು ಹೀಗೆ ಬರೆದಿದೆಯಲ್ಲಾ.
౧౮వారి దృష్టికి దేవుని భయం అంటే తెలియదు.”
19 ೧೯ ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.
౧౯ప్రతి నోటికీ మూతపడాలనీ, లోకమంతా దేవుని తీర్పు కిందికి రావాలనీ ధర్మశాస్త్రం చెప్పే మాటలన్నీ దానికి లోబడి ఉన్నవారితోనే చెబుతున్నదని మనకు తెలుసు.
20 ೨೦ ಯಾಕೆಂದರೆ ಯಾವ ಮನುಷ್ಯನಾದರೂ ನೇಮನಿಷ್ಠೆಗಳನ್ನು ಅನುಸರಿಸಿ ದೇವರ ಸನ್ನಿಧಿಯಲ್ಲಿ ನೀತಿವಂತನೆಂದು ನಿರ್ಣಯಿಸಲ್ಪಡುವುದಿಲ್ಲ. ಧರ್ಮಶಾಸ್ತ್ರದಿಂದ ಪಾಪದ ಅರಿವು ಉಂಟಾಗುತ್ತದಷ್ಟೆ.
౨౦ఎందుకంటే ధర్మశాస్త్రాన్ని పాటించడం ద్వారా ఏ మనిషీ దేవుని దృష్టికి నీతిమంతుడు కాలేడు. ధర్మశాస్త్రం వలన పాపమంటే ఏమిటో తెలుస్తున్నది.
21 ೨೧ ಈಗಲಾದರೋ ದೇವರಿಂದ ದೊರಕುವ ನೀತಿಯು ನಂಬುವವರೆಲ್ಲರಿಗೆ ಧರ್ಮಶಾಸ್ತ್ರ ನಿಯಮಗಳಿಲ್ಲದೆ ಪ್ರಕಟವಾಗಿದೆ. ಅದು ಮೋಶೆಯ ಧರ್ಮಶಾಸ್ತ್ರದಿಂದಲೂ ಪ್ರವಾದಿಗಳ ನುಡಿಗಳಿಂದಲೂ ಸಾಕ್ಷಿಗೊಂಡಿರುತ್ತವೆ.
౨౧ఇదిలా ఉంటే ధర్మశాస్త్రంతో సంబంధం లేకుండా దేవుని న్యాయం వెల్లడైంది. ధర్మశాస్త్రమూ ప్రవక్తలూ రాసింది దానికి సాక్ష్యంగా ఉన్నాయి.
22 ೨೨ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.
౨౨అది యేసు క్రీస్తులో విశ్వాసమూలంగా నమ్మే వారందరికీ కలిగే దేవుని నీతి.
23 ೨೩ ಎಲ್ಲರೂ ಪಾಪ ಮಾಡಿ ದೇವರ ಮಹಿಮೆಯನ್ನು ಹೊಂದದೇ ಹೋಗಿದ್ದಾರೆ.
౨౩భేదమేమీ లేదు. అందరూ పాపం చేసి దేవుడు ఇవ్వజూపిన మహిమను అందుకోలేక పోతున్నారు.
24 ೨೪ ಅವರು ನೀತಿವಂತರೆಂದು ನಿರ್ಣಯ ಹೊಂದುವುದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಅದು ಕ್ರಿಸ್ತ ಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವುದು.
౨౪నమ్మేవారు దేవుని కృప చేతా, క్రీస్తు యేసులోని విమోచన ద్వారా, ఉచితంగా నీతిమంతులని తీర్పు పొందుతున్నారు.
25 ೨೫ ಪೂರ್ವ ಕಾಲದಲ್ಲಿ ಮಾನವರ ಪಾಪವನ್ನು ದಂಡಿಸದೆ ತಾಳ್ಮೆಯಿಂದಿದ್ದ ದೇವರು, ನಂಬಿಕೆಯುಳ್ಳವರಿಗೆ ಪಾಪಕ್ಷಮೆಯನ್ನು ತರುವ ಸಲುವಾಗಿ ಯೇಸುಕ್ರಿಸ್ತನನ್ನು ರಕ್ತಧಾರೆ ಎರೆಯುವಂತೆ ಮಾಡಿದನು.
౨౫క్రీస్తు యేసు రక్తంలో విశ్వాసం ద్వారా పాప పరిహారం పొందేలా దేవుడు తన కోపాగ్నిని తొలగించే పాప పరిహారార్ధ బలిగా ఆయనను కనుపరిచాడు. అందులో దేవుని ఉద్దేశం తన న్యాయాన్ని ప్రదర్శించడమే. ఎందుకంటే, గతంలోని పాపాలను దేవుడు సహనంతో దాటిపోయాడు.
26 ೨೬ ಯೇಸುಕ್ರಿಸ್ತನಲ್ಲಿ ನಂಬಿಕೆ ಇಡುವವರನ್ನು ತಮ್ಮೊಡನೆ ಸತ್ಸಂಬಂಧದಲ್ಲಿ ಇರಿಸಿಕೊಳ್ಳುವುದಕ್ಕಾಗಿಯು ತಾನು ಸತ್ಯಸ್ವರೂಪನೂ, ನೀತಿವಂತನೂ ಎಂದು ವ್ಯಕ್ತಪಡಿಸುವ ಸಲುವಾಗಿಯೂ ಪ್ರಸ್ತುತ ಕಾಲದಲ್ಲಿ ದೇವರು ಹೀಗೆ ಮಾಡಿದರು.
౨౬ప్రస్తుత కాలంలో తన న్యాయాన్ని కనబరిచే నిమిత్తం తాను న్యాయవంతుడుగా, యేసులో విశ్వాసంగల వాణ్ణి న్యాయవంతుని తీర్చే వాడుగా ఉండడానికి దేవుడు ఇలా చేశాడు.
27 ೨೭ ಹಾಗಾದರೆ ನಮ್ಮನ್ನು ನಾವು ಹೊಗಳಿಕೊಳ್ಳುವುದಕ್ಕೆ ಅವಕಾಶವೆಲ್ಲಿ? ಅದು ಇಲ್ಲದೆ ಹೋಯಿತು. ಯಾವ ಆಧಾರದಿಂದ? ಕರ್ಮಮಾರ್ಗವನ್ನು ಅನುಸರಿಸುವುದರಿಂದಲೋ? ಅಲ್ಲ. ನಂಬಿಕೆಮಾರ್ಗವನ್ನು ಅನುಸರಿಸುವುದರಿಂದಲೇ.
౨౭కాబట్టి మనం గొప్పలు చెప్పుకోడానికి కారణమేది? దాన్ని కొట్టివేయడం అయిపోయింది. ఏ నియమాన్ని బట్టి? క్రియలను బట్టా? కాదు, విశ్వాస నియమాన్ని బట్టే.
28 ೨೮ ಧರ್ಮಶಾಸ್ತ್ರ ಸಂಬಂಧವಾದ ಕರ್ಮಗಳಿಲ್ಲದೆ ನಂಬಿಕೆಯಿಂದಲೇ ಮನುಷ್ಯರು ನೀತಿವಂತರೆಂದು ನಿರ್ಣಯಿಸಲ್ಪಡುವರೆಂಬುದಾಗಿ ನಿಶ್ಚಯಮಾಡಿಕೊಂಡಿದ್ದೇವಲ್ಲಾ
౨౮కాబట్టి మనుషులు ధర్మశాస్త్ర క్రియలు లేకుండానే విశ్వాసం వలన నీతిమంతులని తీర్పు పొందుతున్నారని నిర్ణయిస్తున్నాము.
29 ೨೯ ದೇವರು ಯೆಹೂದ್ಯರಿಗೆ ಮಾತ್ರ ದೇವರಾಗಿದ್ದಾನೋ? ಹೌದು ದೇವರು ಒಬ್ಬನೇ ಹೀಗಿರಲಾಗಿ ಆತನು ಅನ್ಯಜನರಿಗೂ ಸಹ ದೇವರಾಗಿದ್ದಾನೆ.
౨౯దేవుడు యూదులకు మాత్రమేనా దేవుడు? యూదేతరులకు కాడా? అవును, వారికి కూడా దేవుడే.
30 ೩೦ ಆತನು ಸುನ್ನತಿಯವರನ್ನು ನೀತಿವಂತರೆಂದು ನಿರ್ಣಯಿಸುವುದಕ್ಕೆ ಅವರ ನಂಬಿಕೆಯೇ ಆಧಾರ. ಹಾಗೆಯೇ ಸುನ್ನತಿಯಿಲ್ಲದವರನ್ನು ನಿರ್ಣಯಿಸುವುದಕ್ಕೂ ನಂಬಿಕೆಯೇ ಕಾರಣ.
౩౦దేవుడు ఒక్కడే కాబట్టి, ఆయన సున్నతి గలవారిని విశ్వాసం ద్వారా, సున్నతి లేని వారిని విశ్వాసం మూలంగా నీతిమంతులుగా తీరుస్తాడు.
31 ೩೧ ಹಾಗಾದರೆ ನಂಬಿಕೆಯಿಂದ ಧರ್ಮಶಾಸ್ತ್ರವನ್ನು ತೆಗೆದು ಹಾಕುತ್ತೇವೋ? ಎಂದಿಗೂ ಇಲ್ಲ. ಧರ್ಮಶಾಸ್ತ್ರವನ್ನು ಸ್ಥಿರಪಡಿಸುತ್ತೇವಷ್ಟೇ.
౩౧విశ్వాసం ద్వారా ధర్మశాస్త్రాన్ని కొట్టివేస్తున్నామా? కాదు, ధర్మశాస్త్రాన్ని స్థిరపరుస్తున్నాము.