< ಜೆಕರ್ಯನು 14 >

1 ಆಹಾ, ಚೀಯೋನೇ, ಯೆಹೋವನ ನ್ಯಾಯತೀರ್ಪಿನ ದಿನವು ಬರುತ್ತಿದೆ; ಸೂರೆಯಾದ ನಿನ್ನ ಆಸ್ತಿಯು ಆಗ ನಿನ್ನ ಮಧ್ಯದಲ್ಲಿ ಹಂಚಿಕೆಯಾಗುವುದು.
पाहा! परमेश्वराच्या न्यायाचा दिवस येत आहे. तुम्ही लुटलेली संपत्ती त्या दिवशी तुमच्या शहरात वाटली जाईल.
2 ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.
यरूशलेमेशी लढावयास मी सर्व राष्ट्रांना एकत्र करीन. ते नगरी ताब्यात घेतील आणि घरांना लुटतील. स्त्रियांवर बलात्कार करतील व अर्धे-अधिक लोक कैद केले जातील. पण उरलेल्या लोकांस नगरीतून नेले जाणार नाही.
3 ಆಗ ಯೆಹೋವನು ಹೊರಟು, ಯುದ್ಧದ ದಿನದಲ್ಲಿ ಹೇಗೋ ಹಾಗೆಯೇ ಆ ಜನಾಂಗಗಳಿಗೆ ಪ್ರತಿಭಟಿಸುವನು.
मग परमेश्वर त्या राष्ट्रांविरुध्द युध्द पुकारेल; युद्धाच्या दिवसात जसे तो युद्ध करत असे तशाप्रकारे तो राष्ट्रांशी युध्द करेल.
4 ಯೆರೂಸಲೇಮಿನ ಪೂರ್ವದಿಕ್ಕಿಗೆ ಎದುರಾಗಿರುವ ಎಣ್ಣೆಯ ಮರಗಳ ಗುಡ್ಡದ ಮೇಲೆ ಆತನ ಪಾದಗಳು ನಿಂತಿರಲು, ಆ ಗುಡ್ಡವು ಪೂರ್ವದಿಂದ ಪಶ್ಚಿಮದ ಉದ್ದಕ್ಕೂ ಸೀಳಿಹೋಗಿ ಮಧ್ಯದಲ್ಲಿ ದೊಡ್ಡ ಡೊಂಗರವಾಗುವುದು. ಗುಡ್ಡದ ಅರ್ಧಭಾಗವು ಉತ್ತರಕ್ಕೂ, ಅರ್ಧಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.
त्यावेळी, तो यरूशलेमेच्या पूर्वेला असलेल्या जैतून पर्वतावर उभा राहताच तो पर्वत दुभंगेल; त्या पर्वताचा अर्धा भाग उत्तरेकडे व अर्धा भाग दक्षिणेकडे सरकेल. जैतूनाच्या झाडांचा डोंगर पूर्वेकडून पश्चिमेपर्यंत दुभागून एक खोल दरी निर्माण होईल.
5 ನೀವು ಯೆಹೋವನ ಗುಡ್ಡಗಳ ನಡುವಣ ಆ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು.
तेव्हा तुम्ही माझ्या पर्वताच्या खोऱ्याकडे पळाल, कारण ती दरी आसलापर्यंत पोहोंचेल; व यहूदाचा राजा उज्जीया ह्याच्या काळात झालेल्या भूकंपाच्या वेळी तुम्ही जसे पळाला तसे पळाल; पण माझा परमेश्वर, देव तेथे येईल आणि तुमच्याबरोबर त्याचे सर्व पवित्र अनुयायी असतील.
6 ಆ ದಿನದಲ್ಲಿ ಬೆಳಕಿರದು, ಜ್ಯೋತಿಗಳು ಅಡಗಿಹೋಗುವವು, ಇಂಥಾ ದಿನವು ಒಂದೇ,
आणि तो एक विशेष दिवस असेल त्यावेळी प्रकाश नसेल, आणि गारठा वा कडाक्याची थंडी नसेल.
7 ಅದು ಯೆಹೋವನಿಗೆ ತಿಳಿದಿರುವುದು, ಅದು ಹಗಲೂ ಅಲ್ಲ, ಇರುಳೂ ಅಲ್ಲ, ಆದರೆ ಸಂಜೆಯ ವೇಳೆಯಲ್ಲಿ ಬೆಳಕಾಗುವುದು.
तो दिवस विशेष होईल तो परमेश्वरासच ठाऊक; कारण तो दिवसही नसणार वा रात्रही नसणार. तर संध्याकाळचा प्रकाशासारखा प्रकाश असेल.
8 ಆ ದಿನದಲ್ಲಿ ಜೀವಕರವಾದ ಜಲಪ್ರವಾಹವು ಯೆರೂಸಲೇಮಿನೊಳಗಿಂದ ಹೊರಡುವುದು; ಅರ್ಧಭಾಗವು ಪೂರ್ವಸಮುದ್ರಕ್ಕೂ, ಅರ್ಧಭಾಗವು ಪಶ್ಚಿಮ ಸಮುದ್ರಕ್ಕೂ ಹರಿಯುವುದು; ಬೇಸಿಗೆಕಾಲದಲ್ಲಿಯೂ, ಮಳೆಗಾಲದಲ್ಲಿಯೂ ಹರಿಯುತ್ತಲೇ ಇರುವುದು.
तेव्हा यरूशलेमेतून सतत वाहणाऱ्या पाण्याचा झरा वाहील, त्यास दोन पाट फुटतील. एक पाट पूर्वेकडे वाहत जाऊन पुर्वेकडील समुद्राला मिळेल तर दुसरा पाट पश्चिमेकडे वाहत जाऊन भूमध्य समुद्राला मिळेल, हिवाळा असो वा उन्हाळा तो वाहत राहील.
9 ಯೆಹೋವನು ಭೂಲೋಕಕ್ಕೆಲ್ಲಾ ರಾಜನಾಗಿರುವನು; ಆ ದಿನದಲ್ಲಿ ಯೆಹೋವನೊಬ್ಬನೇ ದೇವರೆಂದೂ ಆತನ ಹೆಸರೊಂದೇ ಸ್ತುತ್ಯವೆಂದೂ ಎಲ್ಲರಿಗೂ ತಿಳಿದಿರುವುದು.
त्यावेळी, परमेश्वर सर्व पृथ्वीचा राजा असेल. त्यादिवशी केवळ परमेश्वर व केवळ त्याचे नाव असणार.
10 ೧೦ ಆಗ ದೇಶವು ಗೆಬದಿಂದ ಯೆರೂಸಲೇಮಿನ ದಕ್ಷಿಣದಲ್ಲಿರುವ ರಿಮ್ಮೋನಿನವರೆಗೆ ತಗ್ಗಾಗಿ ಮಾರ್ಪಡುವುದು; ಯೆರೂಸಲೇಮೋ ಬೆನ್ಯಾಮೀನಿನ ಬಾಗಿಲಿನಿಂದ ಪೂರ್ವಕಾಲದ ಬಾಗಿಲಿನ ಸ್ಥಳದವರೆಗೆ, ಮೂಲೆಯ ಬಾಗಿಲಿನ ತನಕ, ಹನನೇಲನ ಬುರುಜಿನಿಂದ ಅರಸನ ದ್ರಾಕ್ಷಿಯ ಆಲೆಗಳವರೆಗೂ ಎತ್ತರದಲ್ಲಿ ನಿಂತಿರುವುದು.
१०तेव्हा सर्व देश यरूशलेमेच्या दक्षिणेस असलेली गिबा ते रिम्मोन ह्यांमधील अराबाप्रमाणे होईल; यरूशलेम मात्र पुन्हा उभारले जाईल; अगदी बन्यामीनच्या प्रवेशद्वारापासून ते पाहिल्या प्रवेशद्वारापर्यंत आणि हनानेलच्या मनोऱ्यापासून राजाच्या द्राक्षकुंडापर्यंत; अशी ती आपल्या स्थळी वसेल.
11 ೧೧ ಅದರಲ್ಲಿ ಜನರು ಸುರಕ್ಷಿತವಾಗಿ ವಾಸಿಸುವರು. ಇನ್ನು ಶಾಪವಿರದು; ಯೆರೂಸಲೇಮ್ ನೆಮ್ಮದಿಯಾಗಿ ನೆಲೆಗೊಂಡಿರುವುದು.
११लोक तेथे वस्ती करतील, ह्यापुढे त्यांचा नाश होणार नाही; यरूशलेम अगदी सुरक्षित असेल.
12 ೧೨ ಯೆರೂಸಲೇಮಿನ ಮೇಲೆ ಯುದ್ಧ ಮಾಡಿದ ಸಕಲ ಜನಾಂಗಗಳಿಗೂ ಯೆಹೋವನು ಈ ವ್ಯಾಧಿಯು ಬರುವಂತೆ ಮಾಡುವನು, ಹೆಜ್ಜೆಯ ಮೇಲೆ ನಿಂತ ಹಾಗೆಯೇ ಅವರ ಮಾಂಸವು ಕೊಳೆತು ಹೋಗುವುದು, ಕಣ್ಣು ಕುಣಿಯಲ್ಲೇ ಇಂಗುವುದು, ನಾಲಿಗೆಯು ಬಾಯಲ್ಲೇ ಕ್ಷಯಿಸುವುದು.
१२पण यरूशलेमविरुध्द लढलेल्या राष्ट्रांना परमेश्वर शिक्षा करील; तो त्या राष्ट्रांचा या मरीने संहार करील: ते आपल्या पायांवर उभे असतांनाच त्यांची कातडी कुजू लागेल; त्यांचे डोळे त्यांच्या खाचांत आणि त्यांच्या जीभा त्यांच्या तोंडांत सडतील.
13 ೧೩ ಆ ದಿನದಲ್ಲಿ ಯೆಹೋವನು ಉಂಟುಮಾಡುವ ದೊಡ್ಡ ಗಲಿಬಿಲಿಯು ಅವರಲ್ಲಿ ಹರಡುವುದು; ಒಬ್ಬರ ಕೈಯನೊಬ್ಬರು ತಡೆಹಿಡಿಯುವರು, ಒಬ್ಬರ ಮೇಲೊಬ್ಬರು ಕೈಯೆತ್ತುವರು.
१३तेव्हा परमेश्वराकडून खरोखरच लोकांची त्रेधा उडेल; प्रत्येकजण आपल्या शेजाऱ्याचा हात धरील आणि शेजारी एकमेकांशी भांडतील.
14 ೧೪ ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.
१४यहूदाही यरूशलेममध्ये लढेल. भोवतीच्या सर्व राष्ट्रांकडून संपत्ती मिळेल; त्यांना भरपूर सोने, चांदी आणि वस्रे यांचा पूर येईल.
15 ೧೫ ಜನಾಂಗಗಳಿಗೆ ತಗಲುವಂಥ ವ್ಯಾಧಿಯೇ ಕುದುರೆ, ಹೇಸರಗತ್ತೆ, ಒಂಟೆ, ಕತ್ತೆ ಅಂತು ಆ ಪಾಳೆಯಗಳಲ್ಲಿನ ಸಮಸ್ತ ಪಶುಗಳಿಗೂ ತಗಲುವುದು.
१५ही मरी शत्रू सैन्याच्या छावणीत पसरेल व त्यांच्या घोड्यांवर, खेचरांवर, उंटांवर आणि गाढवांवर व प्रत्येक जनावरावर ही मरी येईल.
16 ೧೬ ಅನಂತರ ಯೆರೂಸಲೇಮಿನ ಮೇಲೆ ಬಿದ್ದ ಸಕಲ ಜನಾಂಗಗಳಲ್ಲಿ ಉಳಿದವರೆಲ್ಲರೂ ಸೇನಾಧೀಶ್ವರ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೂ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೂ ಪ್ರತಿವರ್ಷವೂ ಹೊರಟುಬರುವರು.
१६यरूशलेमेशी लढण्यास आलेल्या राष्ट्रांपैकी जे वाचतील ते सर्व, सेनाधीश परमेश्वराची उपासना करण्यासाठी, मंडपाचा सण साजरा करायला, दरवर्षी यरूशलेमेला येतील.
17 ೧೭ ಲೋಕದ ಸಮಸ್ತ ಕುಲಗಳಲ್ಲಿ ಯಾವ ಕುಲದವರು ಸೇನಾಧೀಶ್ವರನಾದ ಯೆಹೋವನೆಂಬ ರಾಜಾಧಿರಾಜನನ್ನು ಆರಾಧಿಸುವುದಕ್ಕೆ ಯೆರೂಸಲೇಮಿಗೆ ಬರುವುದಿಲ್ಲವೋ ಅವರಿಗೆ ಮಳೆಬರುವುದಿಲ್ಲ.
१७पृथ्वीवरील जी सर्व कुटुंबे यरूशलेमेला प्रभूराजाची, सेनाधीश परमेश्वराची उपासना करायला जाणार नाहीत त्यांच्या देशात परमेश्वर पाऊस पाडणार नाही.
18 ೧೮ ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.
१८जर मिसराचे घराणे मंडपाचा सण साजरा करण्यासाठी आले नाही, तर त्यांच्यावरही पर्जन्यवृष्टी होणार नाही; मंडपाच्या सणात जी राष्ट्रे वर चढून जाणार नाहीत त्यांच्यावर, शत्रूंच्या राष्ट्रांत परमेश्वराने जी मरी पसरवली होती, ती तो त्यांच्यावर आणिल.
19 ೧೯ ಐಗುಪ್ತಕ್ಕೂ ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿರುವ ಸಕಲ ಜನಾಂಗಗಳಿಗೂ ಸಂಭವಿಸುವ ದಂಡನೆಯು ಇದೇ.
१९ही शिक्षा मंडपाच्या सणाला न आल्याबद्दल मिसराला व इतर प्रत्येक राष्ट्रांना असेल.
20 ೨೦ ಆ ದಿನದಲ್ಲಿ, “ಯೆಹೋವನಿಗೆ ಮೀಸಲು” ಎಂಬ ಲಿಪಿಯು ಕುದುರೆಗಳ ಘಂಟೆಗಳ ಮೇಲೂ ಕೆತ್ತಿರುವುದು; ಯೆಹೋವನ ಆಲಯದ ಪಾತ್ರೆಗಳೆಲ್ಲವೂ ಯಜ್ಞವೇದಿಯ ಪಕ್ಕದ ಬೋಗುಣಿಗಳಂತೆ ಪರಿಶುದ್ಧವಾಗಿರುವವು.
२०त्यावेळी, घोड्यांच्या सरंजामावरसुध्दा “परमेश्वरासाठी पवित्र” अशी अक्षरे कोरलेली असतील आणि परमेश्वराच्या मंदिरातीली भांडी, वेदींपुढील कटोऱ्यांइतकीच महत्वाची असतील.
21 ೨೧ ಅಲ್ಲದೆ ಯೆರೂಸಲೇಮಿನಲ್ಲಿಯೂ, ಯೆಹೂದದಲ್ಲಿಯೂ ಇರುವ ಸಕಲ ಪಾತ್ರೆಗಳು ಸೇನಾಧೀಶ್ವರ ಯೆಹೋವನಿಗೆ ಮೀಸಲಾಗಿರುವವು; ಯಜ್ಞಮಾಡುವವರೆಲ್ಲರು ಬಂದು ಅವುಗಳನ್ನು ತೆಗೆದುಕೊಂಡು ಆ ಪಾತ್ರೆಗಳಲ್ಲಿ ಬೇಯಿಸುವರು; ಆ ದಿನದಲ್ಲಿ ಸೇನಾಧೀಶ್ವರ ಯೆಹೋವನ ಆಲಯದೊಳಗೆ ಯಾವ ವ್ಯಾಪಾರಿಯೂ ಇರುವುದಿಲ್ಲ.
२१यरूशलेमेतील व यहूदातील प्रत्येक पात्र सेनाधीश परमेश्वरास पवित्र होईल; परमेश्वरासाठी यज्ञ करणारा प्रत्येकजण ही भांडी घेईल व त्यामध्ये अन्न शिजविल; त्यादिवसापासून सेनाधीश परमेश्वराच्या निवासस्थानात कनानी आणखी असणार नाहीत.

< ಜೆಕರ್ಯನು 14 >