< ಜೆಕರ್ಯನು 7 >

1 ಅರಸನಾದ ದಾರ್ಯಾವೆಷನ ಆಳ್ವಿಕೆಯ ನಾಲ್ಕನೆಯ ವರ್ಷದ ಕಿಸ್ಲೇವ್ ಎಂಬ ಒಂಭತ್ತನೆಯ ತಿಂಗಳಿನ ನಾಲ್ಕನೆಯ ದಿನದಲ್ಲಿ ಯೆಹೋವನು ಜೆಕರ್ಯನಿಗೆ ಒಂದು ವಾಕ್ಯವನ್ನು ದಯಪಾಲಿಸಿದನು.
पारसचा राजा दारयावेश याच्या कारकिर्दीच्या चौथ्या वर्षांच्या नवव्या माहिन्याच्या म्हणजे किसलेव महिन्याच्या चौथ्या दिवशी, जखऱ्याला परमेश्वराकडून वचन प्राप्त झाले.
2 ಅಷ್ಟರೊಳಗೆ ಬೇತೇಲಿನವರು ಸರೆಚರನನ್ನೂ, ರೆಗೆಮ್ ಮೆಲೆಕನನ್ನೂ, ಅವನ ಪರಿಜನರನ್ನೂ ಯೆಹೋವನ ಪ್ರಸನ್ನತೆಯ ಪ್ರಾರ್ಥನೆಗಾಗಿ ಕಳುಹಿಸಿದ್ದರು.
बेथेलच्या लोकांनी शरेसर, रगेम्मेलेक व त्यांची माणसे यांना परमेश्वराची कृपा मिळावी म्हणून पाठवले.
3 ಆಗ, “ನಾವು ಬಹು ವರ್ಷಗಳಿಂದ ಮಾಡಿಕೊಂಡು ಬಂದಂತೆ ಮುಂದೆಯೂ ಐದನೆಯ ತಿಂಗಳಿನಲ್ಲಿ ಉಪವಾಸ ಮಾಡಿ ಅಳಬೇಕೋ? ಎಂದು ಪ್ರವಾದಿಗಳ ಮತ್ತು ಸೇನಾಧೀಶ್ವರನಾದ ಯೆಹೋವನ ಆಲಯದ ಯಾಜಕರ ಹತ್ತಿರ ವಿಚಾರಿಸಿಕೊಂಡು ಬನ್ನಿರಿ” ಎಂಬುದಾಗಿ ಅವರಿಗೆ ಅಪ್ಪಣೆಕೊಟ್ಟು ಕಳುಹಿಸಿದ್ದೇವು.
ते संदेष्ट्यांना आणि सेनाधीश परमेश्वराच्या मंदिरातील याजकांना म्हणाले: “प्रत्येक वर्षाच्या पाचव्या महिन्यात आम्ही उपवास करून शोक प्रकट करत आहोत. हे आम्ही असेच चालू ठेवायचे का?”
4 ಹೀಗಿರಲು ಸೇನಾಧೀಶ್ವರ ಯೆಹೋವನು ಈ ವಾಕ್ಯವನ್ನು ನನಗೆ ದಯಪಾಲಿಸಿದನು.
मला सेनाधीश परमेश्वराकडून वचन मिळाले की:
5 “ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
“याजकांना आणि या देशातील इतर लोकांस सांग की तुम्ही सत्तर वर्षे प्रत्येक वर्षांच्या पाचव्या आणि सातव्या महिन्यात उपवास केला व शोक प्रकट केला. पण हा उपवास खरोखरच माझ्यासाठी होता का?
6 ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.
जे तुम्ही खाल्ले-प्यायले ते आपल्यासाठीच होते की नाही?
7 ಯೆರೂಸಲೇಮು ಸುತ್ತಣ ಪಟ್ಟಣಗಳ ಸಮೇತ ಜನಭರಿತವಾಗಿಯೂ, ನೆಮ್ಮದಿಯಾಗಿಯೂ ಇದ್ದು, ದಕ್ಷಿಣ ಪ್ರಾಂತ್ಯದಲ್ಲಿಯೂ, ಪೂರ್ವದ ಇಳಕಲಿನ ಪ್ರದೇಶದಲ್ಲಿಯೂ ಜನರು ತುಂಬಿದ್ದಾಗ ಆ ಪೂರ್ವಕಾಲದ ಪ್ರವಾದಿಗಳ ಮೂಲಕ ಯೆಹೋವನು ಪ್ರಕಟಿಸಿದ ಮಾತುಗಳನ್ನು ನೀವು ಕೇಳಿಲ್ಲವೇ?’”
याच गोष्टी सांगण्यासाठी परमेश्वराने फार पूर्वीच या आधीच्या संदेष्ट्यांच्या द्वारे घोषीत केले होते. जेव्हा यरूशलेम ही एक भरभराट झालेली आणि लोकांनी गजबजलेली नगरी होती, यरूशलेमेच्या भोवतालच्या गावात, नेगेबला व पश्चिमेकडील डोंगरपायथ्याशी वस्ती होती. तेव्हादेखील देवाने हीच वचने सांगितली होती.”
8 ಅಲ್ಲದೆ ಯೆಹೋವನು ಜೆಕರ್ಯನಿಗೆ ಈ ವಾಕ್ಯವನ್ನು ದಯಪಾಲಿಸಿ,
परमेश्वराचे वचन जखऱ्याला मिळाले:
9 “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,
सेनाधीश परमेश्वर असे म्हणतो की “जे सत्य व न्याय्य आहे तेच तुम्ही करा. एकमेकांवर प्रेम व करुणा दाखवा. प्रत्येक मनुष्याने आपल्या बंधू बरोबर असे वागावे.
10 ೧೦ ಒಬ್ಬರಿಗೊಬ್ಬರು ಪ್ರೀತಿ, ಕರುಣೆಗಳನ್ನು ತೋರಿಸಿರಿ; ವಿಧವೆ, ಅನಾಥ, ವಿದೇಶಿ, ದರಿದ್ರರಿಗೂ ಅನ್ಯಾಯಮಾಡಬೇಡಿರಿ; ನಿಮ್ಮಲ್ಲಿ ಯಾವನೂ ತನ್ನ ಸಹೋದರನಿಗೆ ಕೇಡನ್ನು ಬಗೆಯದಿರಲಿ.’
१०विधवा, अनाथ, परके व गरीब यांना छळू नका. एकमेकांचे वाईट करण्याचे मनातसुध्दा आणू नका.”
11 ೧೧ “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.
११पण त्या लोकांनी ऐकण्याचे नाकारले व मान ताठ केली, देवाची वाणी ऐकू येऊ नये म्हणून त्यांनी आपले कान झाकून घेतले.
12 ೧೨ ಧರ್ಮೋಪದೇಶವನ್ನೂ, ಸೇನಾಧೀಶ್ವರ ಯೆಹೋವನು ಪೂರ್ವಕಾಲದ ಪ್ರವಾದಿಗಳ ಮೂಲಕ ತನ್ನ ಆತ್ಮನಿಂದ ಹೇಳಿಸಿದ ಮಾತುಗಳನ್ನೂ ಕೇಳಬಾರದೆಂದು ತಮ್ಮ ಹೃದಯಗಳನ್ನು ವಜ್ರದಷ್ಟು ಕಠಿಣಪಡಿಸಿಕೊಂಡರು. ಆದಕಾರಣ ಸೇನಾಧೀಶ್ವರ ಯೆಹೋವನ ಕೋಪಕ್ಕೆ ಗುರಿಯಾದರು.
१२जे नियम सेनाधीश परमेश्वराने आपल्या आत्म्याचा उपयोग करून जे धर्मशास्त्र व संदेष्ट्यांद्वारे वचन पाठवले ते लोक ऐकेनात. त्यांनी आपली मने पाषाणासारखी कठीण केली, तेव्हा सेनाधीश परमेश्वर कोपला.
13 ೧೩ “ಆಗ ಸೇನಾಧೀಶ್ವರ ಯೆಹೋವನು ಇಂತೆಂದನು, ‘ನಾನು ಕೂಗಿದರೂ ಅವರು ಹೇಗೆ ಕೇಳಲಿಲ್ಲವೋ ಹಾಗೆ ಅವರು ಕೂಗಿದರೂ ನಾನು ಕೇಳುವುದಿಲ್ಲ.
१३तेव्हा असे झाले की, त्याने आवाहन केले पण त्यांनी प्रतिसाद दिला नाही. त्याच प्रकारे, सेनाधीश परमेश्वर म्हणतो, “त्यांनी माझा धावा केल्यास, मी उत्तर देणार नाही.
14 ೧೪ ಅವರು ನೋಡದ ಎಲ್ಲಾ ಜನಾಂಗಗಳ ಮಧ್ಯಕ್ಕೆ ಅವರನ್ನು ತೂರಿಬಿಡುವೆನು. ಯೆಹೋವನ ಈ ಮಾತಿನಂತೆ ಅವರು ಚದರಿದ ಮೇಲೆ ದೇಶವು ಹಾಳಾಯಿತು. ಅದರಲ್ಲಿ ಯಾರೂ ಹೋಗುತ್ತಿರಲಿಲ್ಲ, ಬರುತ್ತಿರಲಿಲ್ಲ; ಆ ರಮ್ಯ ದೇಶವನ್ನು ಹಾಳುಮಾಡಿದರು.’”
१४एखाद्या वावटळीच्या वाऱ्याप्रमाणे मी त्यांना अनोळखी राष्ट्रांमध्ये पांगवीन. त्यांचा देश त्यांच्या मागे ओसाड पडेल व तेथे कोणी ये-जा करणार नाही, कारण, त्यांनी उत्तम देश वैराण केला आहे.”

< ಜೆಕರ್ಯನು 7 >