< ಚೆಫನ್ಯನು 2 >
1 ೧ ನಾಚಿಕೆಗೇಡಿ ಜನಾಂಗದವರೇ, ತೀರ್ಪು ಫಲಿಸುವುದರೊಳಗೆ, ಯೆಹೋವನ ಉಗ್ರಕೋಪವು ನಿಮ್ಮ ಮೇಲೆ ಬರುವುದಕ್ಕೆ ಮೊದಲೇ ಯೆಹೋವನ ಸಿಟ್ಟಿನ ದಿನವೂ ಉರಿದು ನಿಮ್ಮ ಮೇಲೆ ಬರುವುದಕ್ಕಿಂತ ಮೊದಲೇ, ನೀವೆಲ್ಲರೂ ಸೇರಿ ಬನ್ನಿರಿ, ಒಟ್ಟಾಗಿ ಕೂಡಿರಿ.
१हे निर्लज्ज राष्ट्रा, तुम्ही सर्वजण गोळा व्हा आणि एकत्र या.
2 ೨ ಆ ಕಾಲವು ಹೊಟ್ಟಿನಂತೆ ಹಾರಿಹೋಗುತ್ತದಲ್ಲಾ.
२फर्मान सादर होण्या आधी आणि दिवस भुसासारखा उडून जाईल त्यापूर्वी, परमेश्वराचा कोप तुमच्यावर येईल त्यापुर्वी, परमेश्वराचा क्रोधाचा दिवस तुमच्यावर येण्यापूर्वी तुम्ही एकत्र या.
3 ೩ ಯೆಹೋವನ ನಿಯಮವನ್ನು ಕೈಕೊಂಡು ನಡೆಯುವ ಲೋಕದ ದೀನರೇ, ನೀವೆಲ್ಲರೂ ಯೆಹೋವನ ನೀತಿಯನ್ನು ಅನುಸರಿಸಿರಿ, ಧರ್ಮವನ್ನು ಅಭ್ಯಾಸಿಸಿರಿ, ನಮ್ರತೆಯನ್ನು ಹೊಂದಿಕೊಳ್ಳಿರಿ; ಬಹುಶಃ ಯೆಹೋವನ ಸಿಟ್ಟಿನ ದಿನದಲ್ಲಿ ನೀವು ಮರೆಯಾಗುವಿರಿ.
३पृथ्वीवरील सर्व नम्र लोकहो, जे तुम्ही परमेश्वराचे नियम पाळता, ते तुम्ही त्यास शोधा, धार्मिकता शोधा! नम्रता शोधा! नम्र होण्यास शिका. कदाचित परमेश्वराच्या क्रोधाच्या दिवशी तुम्ही सुरक्षित रहाल.
4 ೪ ಗಾಜ ಪಟ್ಟಣ ನಿರ್ಜನವಾಗುವುದು, ಅಷ್ಕೆಲೋನ್ ಹಾಳಾಗುವುದು, ಅಷ್ಡೋದ್ ನಿವಾಸಿಗಳನ್ನು ನಡು ಮಧ್ಯಾಹ್ನದಲ್ಲಿ ಆಕ್ರಮಿಸಿ ಓಡಿಸಿಬಿಡುವರು, ಎಕ್ರೋನ್ ನಗರ ನಿರ್ಮೂಲವಾಗುವುದು.
४गज्जाचा त्याग करण्यात येईल व अष्कलोन ओसाड होईल. ते भरदुपारी अश्दोदला बाहेर काढतील, आणि एक्रोन उपटले जाईल.
5 ೫ ಅಯ್ಯೋ, ಕರಾವಳಿಯಲ್ಲಿ ವಾಸಿಸುವ ಕೆರೇತ್ಯ ಜನಾಂಗವೇ, ನಿನ್ನ ಗತಿಯನ್ನು ಏನು ಹೇಳಲಿ! ಕಾನಾನೇ, ಫಿಲಿಷ್ಟಿಯ ದೇಶವೇ, ಯೆಹೋವನ ನುಡಿಯು ನಿನಗೆ ವಿರುದ್ಧವಾಗಿದೆ; ನಿನ್ನಲ್ಲಿ ವಾಸಿಸುವ ಜನರೇ ನಿಲ್ಲದಂತೆ ನಿನ್ನನ್ನು ನಾಶಮಾಡುವೆನು.
५समुद्राकाठी राहणाऱ्या लोकांस, करेथी राष्ट्राला हाय हाय! परमेश्वर तुमच्याविरुध्द बोलला आहे. कनान, जो पलिष्ट्यांचा देश आहे, मी तुझा असा नाश करणार की, तुझ्यात कोणीही रहीवासी उरणार नाही.
6 ೬ ಸಮುದ್ರ ತೀರದ ಆ ಪ್ರಾಂತ್ಯವು ಹುಲ್ಲುಗಾವಲಾಗಿ, ಕುರುಬರ ಗುಡಿಸಲಾಗಿ, ಹಿಂಡುಗಳ ದೊಡ್ಡಿಗಳು ಇವೇ ಅಲ್ಲಿರುವವು.
६तेव्हा समुद्राकाठचा प्रांत मेंढपाळासाठी मोकळी राने होतील व मेंढ्यांच्या कळपांसाठी वाडे असलेली कुरणे असा होईल.
7 ೭ ಆ ಕರಾವಳಿಯು ಉಳಿದ ಯೆಹೂದ್ಯರ ಪಾಲಾಗುವುದು; ದನಕುರಿಗಳನ್ನು ಅಲ್ಲೇ ಮೇಯಿಸುವರು; ಸಂಜೆಗೆ ಅಷ್ಕೆಲೋನಿನ ಮನೆಗಳಲ್ಲಿ ಮಲಗಿಕೊಳ್ಳುವರು; ಅವರ ದೇವರಾದ ಯೆಹೋವನು ಅವರನ್ನು ಪರಾಂಬರಿಸಿ ಅವರ ದುರವಸ್ಥೆಯನ್ನು ತಪ್ಪಿಸುವನು.
७किनाऱ्याचा प्रदेश यहूदाच्या घराण्यातील राहिलेल्यांचा होईल. ते त्यावर आपले कळप चारतील. संध्याकाळी, ते अष्कलोनमधील घरात विश्रांती घेतील, कारण परमेश्वर त्यांचा देव त्यांची काळजी घेईल, आणि त्यांचे भविष्य पुनर्संचयित करीन.
8 ೮ ಮೋವಾಬ್ಯರೂ, ಅಮ್ಮೋನ್ಯರೂ ಅಹಂಕಾರದಿಂದ ನನ್ನ ಜನರ ಮೇರೆಯನ್ನು ಮೀರಿ, ಅವರನ್ನು ನಿಂದಿಸಿ, ಅವರ ಮೇಲೆ ಹೊರಿಸಿರುವ ದೂರುದೂಷಣೆಗಳು ನನ್ನ ಕಿವಿಗೆ ಬಿದ್ದಿವೆ.
८मवाबाने मारलेले टोमणे व अम्मोनाने वापरलेले अपशब्द मी ऐकले आहेत. त्यांनी माझ्या लोकांची निंदा केली व त्यांच्या सीमांचे उल्लंघन केले आहे.
9 ೯ ಇಸ್ರಾಯೇಲರ ದೇವರಾದ ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನನ್ನ ಜೀವದಾಣೆ, ಸೊದೋಮಿನ ಗತಿಯೇ ಮೋವಾಬಿಗೂ ಆಗುವುದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವುದು; ಆ ಪ್ರಾಂತ್ಯಗಳು ಮುಳ್ಳುಗಿಡಗಳಿಂದಲೂ, ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯ ನಾಶನಕ್ಕೆ ಈಡಾಗುವವು; ನನ್ನ ಜನರಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು. ಅಳಿದುಳಿದ ನನ್ನ ಜನರಿಗೆ ಅವು ಸ್ವಾಸ್ತ್ಯವಾಗುವವು.”
९ह्यास्तव सैन्याचा परमेश्वर, इस्राएलाचा प्रभू असे म्हणतो, “मी जिवंत आहे, म्हणून मवाब सदोमासारखा होईल व अम्मोनवासी गमोरा यांसारखे होतील. ते एक निरुपयोगी ठिकाण व मिठाच्या खांचा व कायमचे ओसाड असे होतील. पण माझ्या लोकांतील राहिलेले त्यांना लूटतील, आणि माझ्या राष्ट्रातले शेष त्यांचे वतन पावेल.”
10 ೧೦ ಆ ಪ್ರಾಂತ್ಯಗಳವರು ಸೇನಾಧೀಶ್ವರನಾದ ಯೆಹೋವನ ಜನರನ್ನು ದೂಷಿಸಿ, ಅವರ ಮೇಲೆ ಉಬ್ಬಿಕೊಂಡು ಬಂದುದ್ದರಿಂದ ಅವರ ಅಹಂಕಾರದ ನಿಮಿತ್ತವೇ ಅವರಿಗೆ ಈ ಗತಿಯಾಗುವುದು!
१०मवाब व अम्मोन यांची अशी स्थिती होण्याचे कारण गर्विष्ठपणा असेल, कारण त्यांनी सैन्याचा परमेश्वर याच्या लोकांस टोमणे मारले व त्यांची थट्टा केली.
11 ೧೧ ಯೆಹೋವನು ಅವರಿಗೆ ಭಯಂಕರನಾಗುವನು; ಲೋಕದ ದೇವರುಗಳನ್ನೆಲ್ಲಾ ನಾಶಮಾಡುವನು; ಸಮಸ್ತ ಜನರು, ಪ್ರತಿಯೊಂದು ಪ್ರಾಂತ್ಯದ ನಿವಾಸಿಗಳು ಸಕಲ ಜನಾಂಗಗಳವರು ತಮ್ಮ ತಮ್ಮ ಸ್ಥಳಗಳಲ್ಲೇ ಆತನನ್ನು ಆರಾಧಿಸುವರು.
११ते लोक परमेश्वरास घाबरतील, कारण तो पृथ्वीवरील त्यांच्या दैवतांची थट्टा करेल, सर्व लोक त्याची उपासना करतील. प्रत्येक जण आपापल्या ठिकाणी व सर्व राष्ट्रद्विपे त्याची आराधना करतील.
12 ೧೨ ಕೂಷಿನವರೇ, ನೀವು ಸಹ ನನ್ನ ಖಡ್ಗದಿಂದ ಹತರಾಗುವಿರಿ.
१२अहो कूशींनो, तुम्हीही माझ्या तलवारीने मराल.
13 ೧೩ ಯೆಹೋವನು ಉತ್ತರಕ್ಕೆ ಕೈಚಾಚಿ ಅಶ್ಶೂರವನ್ನು ಧ್ವಂಸ ಮಾಡುವನು; ನಿನವೆಯನ್ನು ಹಾಳುಮಾಡಿ ನೀರಿಲ್ಲದ ಮರುಭೂಮಿಯಂತೆ ಒಣಗಿಸಿಬಿಡುವನು.
१३नंतर परमेश्वराचा हात उत्तरेकडे हल्ला करेल आणि अश्शूरचा नाश करीन, आणि निनवेला ओसाड व रूक्ष वाळवंट असे करेल.
14 ೧೪ ಜನಾಂಗಗಳ ಪಶುಗಳೆಲ್ಲಾ ಮಂದೆಮಂದೆಯಾಗಿ ಅದರ ಮಧ್ಯದಲ್ಲಿ ಮಲಗಿಕೊಳ್ಳುವವು; ಕೊಕ್ಕರೆಯೂ, ಮುಳ್ಳುಹಂದಿಯೂ ಹಟ್ಟಿಗಳಲ್ಲಿ ವಾಸಮಾಡಿಕೊಳ್ಳುವವು. ಗೂಬೆಯು ಕಿಟಕಿಗಳಲ್ಲಿ ಮನೆಕಂಬಗಳ ಮೇಲೆ ಚಿಲಿಪಿಲಿ ಗಾನವು ತಂಗುವವು; ಕಾಗೆಗಳ ಕೂಗು ಹೊಸ್ತಿಲುಗಳಲ್ಲಿ ಕೇಳುವುದು; ದೇವದಾರು ಹಲಿಗೆಯ ಹೊದಿಕೆಯು ಕೀಳಲ್ಪಡುವುದು.
१४तेथे फक्त कळप व राष्ट्रांचे पशू तिच्यामध्ये वसतील, तिच्या खांबांवर घुबडे व पक्षी आपले घरटे करतील, त्यांचा आवाज खिडक्यांतून ऐकू येईल. कावळे त्याच्या दारापाशी ओरडतील, त्यांचा आवाज खिडक्यांतून ऐकू येईल. करण त्याने गंधसरूचे लाकडी खांब उघडे केले आहे.
15 ೧೫ ಈ ನಿನವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ, “ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ” ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಕೊಟ್ಟಿಗೆಯ ಬೀಡಾಗಿದೆ! ಅದರ ಮುಂದೆ ಹಾದುಹೋಗುವವರೆಲ್ಲರು ಸಿಳ್ಳು ಹಾಕಿ ಅಪಹಾಸ್ಯ ಮಾಡುತ್ತಾರೆ.
१५जी नगरी आधी हर्षात व भीती शिवाय जगत होती, आणि आपल्या मनात म्हणत होती की, मीच आहे आणि माझ्याबरोबरीची दुसरी कोणीच नाही, तीच ही आहे. ती आता कशी ओसाड व वनपशू बसण्याचे स्थान अशी झाली आहे! आणि तिच्याजवळून जाणारा येणारा प्रत्येकजण फुसफुसणार व आपला हात हलवणार!