< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 14 >
1 ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು.
၁တုရုမြို့မှဟိရံမင်းသည်ဒါဝိဒ်ထံသို့ကုန်သွယ် ရေးသံတမန်အဖွဲ့တစ်ဖွဲ့ကိုစေလွှတ်ကာ နန်း တော်တည်ဆောက်ရန်အတွက်အာရဇ်သစ်များ နှင့်တကွ လက်သမားများ၊ ပန်းရံများကို ပေးပို့လိုက်၏။-
2 ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ, ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.
၂သို့ဖြစ်၍ဒါဝိဒ်သည်မိမိအားဣသရေလ ဘုရင်အဖြစ်ဖြင့် ထာဝရဘုရားခန့်ထား တော်မူပြီဖြစ်ကြောင်း၊ မိမိ၏ပြည်သူတို့ အကျိုးငှာဣသရေလနိုင်ငံကို ချမ်းသာ ကြွယ်ဝစေတော်မူပြီဖြစ်ကြောင်းသိရှိ ရ၏။
3 ದಾವೀದನು ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಮದುವೆಮಾಡಿಕೊಂಡನು. ಇನ್ನೂ ಹೆಚ್ಚು ಪುತ್ರ, ಪುತ್ರಿಯರನ್ನೂ ಪಡೆದನು.
၃ဒါဝိဒ်သည်ယေရုရှလင်မြို့တွင်ထပ်မံ၍ လက်ထပ်ထိမ်းမြားမှုများကိုပြုသဖြင့် သားသမီးများထပ်မံ၍ရရှိလေသည်။-
4 ಯೆರೂಸಲೇಮಿನಲ್ಲಿ ಅವನಿಗೆ ಹುಟ್ಟಿದ ಮಕ್ಕಳ ಹೆಸರುಗಳು: ಶಮ್ಮೂವ, ಶೋಬಾಬ್, ನಾತಾನ್, ಸೊಲೊಮೋನ್,
၄ယေရုရှလင်မြို့တွင်ရရှိသောသားတို့၏ နာမည်များမှာရှမွာ၊ ရှောဗပ်၊ နာသန်၊ ရှော လမုန်၊-
5 ಇಬ್ಹಾರ್, ಎಲೀಷೂವ, ಎಲ್ಪೆಲೆಟ,
၅ဣဗဟာ၊ ဧလိရွှ၊ ဧလိပလက်၊-
7 ಎಲೀಷಾಮ, ಎಲ್ಯಾದ, ಎಲೀಫೆಲೆಟ್.
၇ဧလိရှမာ၊ ဧလျာဒနှင့်ဧလိဖလက်ဟူ၍ ဖြစ်၏။
8 ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಅವರಿಗೆದುರಾಗಿ ಹೊರಟನು.
၈ဣသရေလနိုင်ငံတော်တစ်ဝှမ်းလုံးမှဒါဝိဒ် အားမင်းမြှောက်လိုက်ကြကြောင်း ဖိလိတ္တိအမျိုး သားတို့ကြားသိကြသောအခါ ဒါဝိဒ်ကိုဖမ်း ဆီးရန်တပ်ချီလာကြ၏။ သို့ဖြစ်၍ဒါဝိဒ် သည်ထိုသူတို့နှင့်ရင်ဆိုင်ရန်ထွက်ခွာလာခဲ့၏။-
9 ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.
၉ဖိလိတ္တိအမျိုးသားတို့သည်ရေဖိမ်ချိုင့်ဝှမ်းသို့ ရောက်ရှိကြသောအခါ လူတို့အားစတင်တိုက် ခိုက်လုယက်ကြကုန်၏။-
10 ಅದಕ್ಕೆ ದಾವೀದನು, “ನಾನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಬಹುದೋ? ಅವರನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವಿರೋ?” ಎಂದು ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು ಅವನಿಗೆ, “ಹೋಗು, ನಾನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನು,” ಎಂದು ಹೇಳಿದರು.
၁၀ဒါဝိဒ်က``ကျွန်တော်မျိုးသည်ဖိလိတ္တိအမျိုး သားတို့ကိုတိုက်ရပါမည်လော။ ကိုယ်တော်ရှင် သည်ကျွန်တော်မျိုးအားအောင်ပွဲကိုပေးတော် မူပါမည်လော'' ဟုဘုရားသခင်အားမေး လျှောက်၏။ ထာဝရဘုရားက``တိုက်လော့၊ ငါသည်သင့် အားအောင်ပွဲကိုပေးတော်မူမည်'' ဟုမိန့် တော်မူ၏။
11 ಹಾಗೆಯೇ ದಾವೀದನು ಮತ್ತು ಅವನ ಸಂಗಡಿಗರೂ ಬಾಳ್ ಪೆರಾಜಿಮ್ ಎಂಬಲ್ಲಿಗೆ ಹೋಗಿ ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿದನು. ಆಗ ದಾವೀದನು, “ಪ್ರವಾಹವು ಕೊಚ್ಚಿಕೊಂಡು ಹೋಗುವಹಾಗೆ, ದೇವರು ನನ್ನ ಕೈಯಿಂದ ನನ್ನ ಶತ್ರುಗಳನ್ನು ನಾಶಮಾಡಿದ್ದಾರೆ,” ಎಂದನು. ಆದಕಾರಣ ಆ ಸ್ಥಳಕ್ಕೆ ಬಾಳ್ ಪೆರಾಜಿಮ್ ಎಂದು ಹೆಸರಿಟ್ಟನು.
၁၁သို့ဖြစ်၍ဒါဝိဒ်သည်ဗာလပေရဇိမ်မြို့တွင် ဖိလိတ္တိအမျိုးသားတို့အားတိုက်ခိုက်ရာအနိုင် ရလေ၏။ ဒါဝိဒ်က``ထာဝရဘုရားသည်ရန်သူ တပ်ကိုမြစ်ရေလျှံ၍ဖြိုခွင်းသကဲ့သို့ ငါ့ကို အသုံးပြု၍ဖြိုခွင်းတော်မူလေပြီ'' ဟုဆို ၏။ သို့ဖြစ်၍ထိုအရပ်ကိုဗာလပေရဇိမ်မြို့ ဟုခေါ်ဝေါ်သမုတ်ကြလေသည်။-
12 ಅಲ್ಲಿ ಫಿಲಿಷ್ಟಿಯರು ತಮ್ಮ ದೇವರುಗಳನ್ನು ಬಿಟ್ಟು ಹೋದುದರಿಂದ, ದಾವೀದನು ಅವುಗಳನ್ನು ಸುಟ್ಟುಹಾಕಬೇಕೆಂದು ಅಪ್ಪಣೆಮಾಡಿದನು.
၁၂ဖိလိတ္တိအမျိုးသားတို့သည်မိမိတို့ကိုးကွယ် သည့်ရုပ်တုများကို ထိုအရပ်တွင်ထားရစ်ခဲ့ ကြ၏။ ဒါဝိဒ်သည်လည်းယင်းတို့ကိုမီးရှို့ ပစ်ရန်အမိန့်ပေးတော်မူ၏။
13 ಫಿಲಿಷ್ಟಿಯರು ಮತ್ತೆ ತಿರುಗಿಬಂದು ತಗ್ಗಿನಲ್ಲಿ ಸುಲಿಗೆಮಾಡಲು ಪ್ರಾರಂಭಿಸಿದರು.
၁၃ထိုနောက်များမကြာမီဖိလိတ္တိအမျိုးသား တို့သည် ထိုချိုင့်ဝှမ်းသို့တစ်ဖန်ပြန်လာကြ လျက်စတင်လုယက်တိုက်ခိုက်ကြပြန်၏။-
14 ಆದ್ದರಿಂದ ದಾವೀದನು ತಿರುಗಿ ದೇವರನ್ನು ವಿಚಾರಿಸಿದನು. ಆಗ ದೇವರು ಅವನಿಗೆ, “ನೀನು ಅವರ ಹಿಂದೆ ಹೋಗದೆ, ಅವರನ್ನು ಬಿಟ್ಟು ತಿರುಗಿಕೊಂಡು ಹೋಗಿ, ಬಾಕಾಮರಗಳಿಗೆ ಎದುರಾಗಿ ಅವರ ಮೇಲೆ ದಾಳಿಮಾಡು.
၁၄ဒါဝိဒ်သည်လည်းနောက်တစ်ကြိမ်ဘုရားသခင် အားလျှောက်ထားစုံစမ်းပြန်၏။ ဘုရားသခင် က``သင်သည်ဤအရပ်မှနေ၍မတိုက်နှင့်။ အခြားတစ်ဖက်သို့လှည့်၍သွားပြီးလျှင် သစ်ဆီမွှေးပင်များအနီးမှနေ၍တိုက်လော့။-
15 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಯುದ್ಧಕ್ಕೆ ಹೊರಡು,” ಎಂದರು.
၁၅ငါသည်ဖိလိတ္တိတပ်ကိုဖြိုခွင်းရန်သင်တို့၏ ရှေ့မှချီတက်တော်မူမည်ဖြစ်၍ သင်တို့သည် သစ်ဆီမွှေးပင်ထိပ်ဖျားများတွင်စစ်ချီသံ များကိုကြားရသောအခါတိုက်ခိုက်ကြ လော့'' ဟုမိန့်တော်မူ၏။-
16 ಆಗ ದಾವೀದನು, ದೇವರು ತನಗೆ ಆಜ್ಞಾಪಿಸಿದ ಪ್ರಕಾರಮಾಡಿ, ಅವನು ಗಿಬ್ಯೋನಿನಿಂದ ಗೆಜೆರಿನವರೆಗೆ ಫಿಲಿಷ್ಟಿಯರ ದಂಡನ್ನು ಸಂಹರಿಸಿದರು.
၁၆ဒါဝိဒ်မင်းသည်ဘုရားသခင်မိန့်တော်မူသည် အတိုင်းပြု၍ ဖိလိတ္တိအမျိုးသားတို့ကိုဂိ ဗောင်မြို့မှသည်ဂါဇေရမြို့သို့တိုင်အောင် နှင်ထုတ်တော်မူ၏။-
17 ದಾವೀದನ ಕೀರ್ತಿಯು ಸಮಸ್ತ ದೇಶಗಳಿಗೆ ಹರಡಿತು. ಯೆಹೋವ ದೇವರು ಅವನ ಭಯವನ್ನು ಸಮಸ್ತ ಜನಾಂಗಗಳ ಮೇಲೆ ಬರಮಾಡಿದರು.
၁၇ဒါဝိဒ်မင်း၏ဂုဏ်သတင်းသည်အရပ်တကာ သို့ပြန့်နှံ့၍သွား၏။ မင်းကြီးအားလူမျိုး တကာတို့ကြောက်လန့်လာကြစေရန် ထာဝရ ဘုရားသည်စီရင်တော်မူသတည်း။