< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 18 >
1 ಇದರ ತರುವಾಯ ದಾವೀದನು ಫಿಲಿಷ್ಟಿಯರ ಮೇಲೆ ದಾಳಿಮಾಡಿ ಅವರನ್ನು ಸೋಲಿಸಿ, ಅವರಿಂದ ಗತ್ ಪಟ್ಟಣವನ್ನೂ ಅದರ ಸುತ್ತಲಿನ ಗ್ರಾಮಗಳನ್ನೂ ತೆಗೆದುಕೊಂಡು, ಆಡಳಿತವನ್ನು ತನ್ನ ಸ್ವಾಧೀನದಲ್ಲಿಟ್ಟುಕೊಂಡನು.
१यानंतर असे झाले की, दावीदाने पलिष्ट्यांवर स्वारी केली आणि त्यांचा पराभव केला. त्याने पलिष्ट्यांच्या हातातून गथ आणि त्यांची गावे घेतली.
2 ಹಾಗೆಯೇ ಅವನು ಮೋವಾಬ್ಯರನ್ನು ಸಹ ಸೋಲಿಸಿದನು, ಮೋವಾಬ್ಯರು ದಾವೀದನಿಗೆ ಅಧೀನರಾಗಿ ಕಪ್ಪಕೊಡುವವರಾದರು.
२मग त्याने मवाबाचा पराभव केला आणि मवाबी लोक दावीदाचे सेवक झाले आणि त्यास कर देऊ लागले.
3 ಇದಲ್ಲದೆ ದಾವೀದನು ಯೂಫ್ರೇಟೀಸ್ ನದಿಯ ಬಳಿಯಲ್ಲಿ ತನ್ನ ಅಧಿಕಾರವನ್ನು ಸ್ಥಾಪಿಸುವದಕ್ಕೆ ಹೋಗುತ್ತಿರುವಾಗ, ಹಮಾತಿನ ಬಳಿಯಲ್ಲಿ ಚೋಬದ ಅರಸನಾದ ಹದದೆಜೆರನನ್ನು ಸೋಲಿಸಿದನು.
३मग सोबाचा राजा हद्देजर आपल्या राज्याची सीमा फरात नदीपर्यंत स्थिर करण्यास जात असता दावीदाने हमाथाजवळ त्याचा पराभव केला.
4 ದಾವೀದನು ಅವನಿಂದ ಸಾವಿರ ರಥಗಳನ್ನೂ, ಏಳು ಸಾವಿರ ರಾಹುತರನ್ನೂ, ಇಪ್ಪತ್ತು ಸಾವಿರ ಕಾಲಾಳುಗಳನ್ನೂ ವಶಪಡಿಸಿಕೊಂಡನು. ನೂರು ರಥಗಳಿಗೆ ಕುದುರೆಗಳನ್ನು ಉಳಿಸಿ, ಇತರ ಕುದುರೆಗಳ ಕಾಲಿನ ನರಗಳನ್ನು ಕೊಯ್ಯಿಸಿಬಿಟ್ಟನು.
४दावीदाने त्याच्याकडून एक हजार रथ, सात हजार सारथी, आणि वीस हजार पायदळ एवढे घेतले. दावीदाने रथाच्या जवळपास सर्व घोड्यांच्या शिरा तोडल्या पण त्यातून शंभर रथाचे घोडे मात्र त्याने शाबूत ठेवले.
5 ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು.
५जेव्हा दिमिष्क नगरातील अरामी लोक सोबाचा राजा हद्देजर याच्या मदतीला आले, त्यांच्यापैकी बावीस हजार लोकांसही दावीदाने जिवे मारले.
6 ತರುವಾಯ ದಾವೀದನು ದಮಸ್ಕದ ಅರಾಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಹೀಗೆ ಅರಾಮ್ಯರು ದಾವೀದನಿಗೆ ಅಧೀನರಾಗಿ, ಕಪ್ಪವನ್ನು ಕೊಡುವವರಾದರು. ದಾವೀದನು ಹೋದ ಸ್ಥಳಗಳಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.
६नंतर अराममधील दिमिष्कात दावीदाने बस्थान बसविले. अरामी लोक दावीदाचे सेवक होऊन त्यास कर देऊ लागले. अशाप्रकारे दावीद जेथे जेथे जात असे तेथे परमेश्वर त्यास जय देत असे.
7 ಆಗ ದಾವೀದನು ಹದದೆಜೆರನ ಸೇವಕರಿಗಿದ್ದ ಬಂಗಾರದ ಗುರಾಣಿಗಳನ್ನು ತೆಗೆದುಕೊಂಡು, ಅವುಗಳನ್ನು ಯೆರೂಸಲೇಮಿಗೆ ತಂದನು.
७हद्देजराच्या सेवकांच्या सोन्याच्या ढाली दावीदाने काढून घेतल्या आणि त्या यरूशलेमेला आणल्या.
8 ಇದಲ್ಲದೆ ಹದದೆಜೆರನ ಪಟ್ಟಣಗಳಾದ ಟಿಭತಿನಿಂದಲೂ, ಕೂನ್ದಿಂದಲೂ ದಾವೀದನು ಅತ್ಯಧಿಕವಾಗಿ ಕಂಚನ್ನು ತೆಗೆದುಕೊಂಡು ಬಂದನು. ಅದರಿಂದ ಸೊಲೊಮೋನನು ಕಂಚಿನ ಕೊಳವನ್ನೂ, ಸ್ತಂಭಗಳನ್ನೂ, ವಿವಿಧ ಪಾತ್ರೆಗಳನ್ನೂ ಮಾಡಿಸಿದನು.
८हद्देजराची नगरे टिमथ आणि कून यातून दावीदाने पुष्कळ पितळही हस्तगत केले. हे पितळ वापरुन नंतर शलमोनाने पितळी समुद्र, गंगाळ व स्तंभ आणि पितळी भांडी बनवली.
9 ದಾವೀದನು ಚೋಬದ ಅರಸನಾದ ಹದದೆಜೆರನ ಸಮಸ್ತ ಸೈನ್ಯವನ್ನು ಸೋಲಿಸಿದನೆಂಬ ವರ್ತಮಾನವನ್ನು ಹಮಾತಿನ ಅರಸನಾದ ತೋವು ಕೇಳಿದಾಗ,
९जेव्हा दावीदाने सोबाचा राजा हद्देजर याच्या सर्व सैन्याचा पराभव केल्याची बातमी तोवू हमाथ नगराचा राजा याने ऐकली.
10 ಅರಸನಾದ ದಾವೀದನ ಕ್ಷೇಮಸಮಾಚಾರವನ್ನು ವಿಚಾರಿಸಲೂ, ಹದದೆಜೆರನ ವಿರುದ್ಧ ಯುದ್ಧಮಾಡಿ ಅವನನ್ನು ಸೋಲಿಸಿದ್ದಕ್ಕಾಗಿ ಅವನನ್ನು ಅಭಿನಂದಿಸಿ, ಹರಸುವಂತೆ, ತೋವು ತನ್ನ ಪುತ್ರನಾದ ಹದೋರಾಮನನ್ನು ಎಲ್ಲಾ ತರವಾದ ಬೆಳ್ಳಿ, ಬಂಗಾರ, ಕಂಚಿನ ಪಾತ್ರೆಗಳ ಸಹಿತವಾಗಿ ದಾವೀದನ ಬಳಿಗೆ ಕಳುಹಿಸಿದನು; ಏಕೆಂದರೆ ಹದದೆಜೆರನಿಗೆ ತೋವಿಯ ಸಂಗಡ ಯುದ್ಧಗಳಿದ್ದವು.
१०तेव्हा त्याने हदोराम या आपल्या पुत्राला दावीद राजाचे क्षेमकुशल विचारण्यासाठी आणि त्याचे अभिनंदन करण्यासाठी त्याच्याकडे पाठवले, कारण दावीद हद्देजराविरुध्द लढला व त्याचा पराभव केला, तोवू आणि हद्देजर यांच्यात लढाया होतच असत. हदोरामने आपल्याबरोबर सोने, रुपे, पितळ याची भांडी आणली.
11 ಇವುಗಳನ್ನು ಅರಸನಾದ ದಾವೀದನು ಎದೋಮ್ಯರು, ಮೋವಾಬ್ಯರು, ಅಮ್ಮೋನ್ಯರು, ಫಿಲಿಷ್ಟಿಯರು, ಅಮಾಲೇಕ್ಯರು ಎಂಬ ಸಕಲ ಜನಾಂಗಗಳ ಬಳಿಯಿಂದ ತೆಗೆದುಕೊಂಡು ಬಂದ ಬೆಳ್ಳಿಬಂಗಾರವನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದನು.
११जे सोने रुपे त्याने सर्व राष्ट्रांपासून, अदोम, मवाब, अम्मोनी, पलिष्टी आणि अमालेकी यांच्यापासून घेतले होते, ती भांडीही दावीद राजाने परमेश्वरास समर्पिली.
12 ಇದಲ್ಲದೆ ಚೆರೂಯಳ ಮಗ ಅಬೀಷೈಯನು ಉಪ್ಪಿನ ತಗ್ಗಿನಲ್ಲಿ ಹದಿನೆಂಟು ಸಾವಿರ ಎದೋಮ್ಯರ ಸೈನಿಕರನ್ನು ಕೊಂದನು.
१२सरुवेचा पुत्र अबीशय याने क्षार खोऱ्यात अठरा हजार अदोमी लोकांस मारले.
13 ಎದೋಮಿನಲ್ಲಿ ಕಾವಲುದಂಡುಗಳನ್ನು ಇಟ್ಟನು. ಇದರಿಂದ, ಎದೋಮ್ಯರೆಲ್ಲರು ದಾವೀದನಿಗೆ ಅಧೀನರಾದರು. ದಾವೀದನು ಹೋದಲ್ಲೆಲ್ಲಾ ಯೆಹೋವ ದೇವರು ಅವನಿಗೆ ಜಯಕೊಟ್ಟರು.
१३अदोमामध्ये अबीशयने मजबूत बस्थान बसविले आणि सर्व अदोमी दावीदाचे सेवक झाले. परमेश्वराने दावीदाला जेथे कोठे तो गेला तेथे त्यास जय मिळवून दिला.
14 ಹೀಗೆಯೇ ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.
१४दावीदाने सर्व इस्राएलावर राज्य केले आणि त्याने त्याच्या सर्व लोकांचा योग्य न्याय करत असे व नीतिने वागत असे.
15 ಚೆರೂಯಳ ಮಗ ಯೋವಾಬನು ಸೈನ್ಯದ ಅಧಿಪತಿಯಾಗಿದ್ದನು. ಅಹೀಲೂದನ ಮಗ ಯೆಹೋಷಾಫಾಟನು ಆಸ್ಥಾನದ ಆಗುಹೋಗುಗಳನ್ನು ದಾಖಲಿಸುವವನಾಗಿದ್ದನು.
१५सरुवेचा पुत्र यवाब हा दावीदाच्या सैन्याचा मुख्य अधिकारी होता. अहीलुदाचा पुत्र यहोशाफाट अखबारनवीस त्याचा अधिकारी होता.
16 ಅಹೀಟೂಬನ ಮಗ ಚಾದೋಕನೂ, ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಶವ್ಷನು ಕಾರ್ಯದರ್ಶಿಯಾಗಿದ್ದನು.
१६अहीटूबचा पुत्र सादोक आणि अब्याथारचा पुत्र अबीमलेख याजक होते. शवूशा हा नियमशास्त्र शिक्षक होता.
17 ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ, ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು. ದಾವೀದನ ಪುತ್ರರು ಅರಸನ ಬಳಿಯಲ್ಲಿ ಪ್ರಧಾನರಾಗಿದ್ದರು.
१७यहोयादाचा पुत्र बनाया हा करेथी व पलेथी लोकांवरील जबाबदार अधिकारी होता. दावीदाचे पुत्र राजाचे मुख्य सल्लागार होते.