< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 19 >
1 ಇದರ ತರುವಾಯ, ಅಮ್ಮೋನಿಯರ ಅರಸನಾದ ನಾಹಾಷನು ಮರಣಹೊಂದಿದನು; ಅವನಿಗೆ ಬದಲಾಗಿ ಅವನ ಮಗನು ಅರಸನಾದನು.
अम्मोन के वंशजों के राजा नाहाश की मृत्यु के बाद उसका पुत्र उसके स्थान पर राजा हो गया.
2 ಆಗ ದಾವೀದನು, “ಹಾನೂನನ ತಂದೆಯಾದ ನಾಹಾಷನು ನನಗೆ ದಯೆ ತೋರಿಸಿದ್ದರಿಂದ, ನಾನೂ ಅವನ ಮಗ ಹಾನೂನನಿಗೆ ದಯೆ ತೋರಿಸುವೆನು,” ಎಂದನು. ದಾವೀದನು ಅವನ ತಂದೆಯನ್ನು ಕುರಿತು ಹಾನೂನನಿಗೆ ಸಂತಾಪ ಸೂಚಿಸಲು ತನ್ನ ಸೇವಕರನ್ನು ಕಳುಹಿಸಿದನು. ಹೀಗೆಯೇ ದಾವೀದನ ದೂತರು ಹಾನೂನನಿಗೆ ಸಂತಾಪ ಸೂಚಿಸಲು, ಅಮ್ಮೋನಿಯರ ದೇಶಕ್ಕೆ ಬಂದರು.
दावीद ने सोचा, “मैं नाहाश के पुत्र हानून पर अपनी दया बनाकर रखूंगा, क्योंकि उसका पिता मुझ पर कृपालु था,” इसलिये दावीद ने उसे उसके पिता की मृत्यु के संबंध में सांत्वना देने के लिए अपने दूत भेजे. दावीद के दूत अम्मोन के वंशजों के नगर में राजा हानून को सांत्वना देने पहुंचे,
3 ಆಗ ಅಮ್ಮೋನಿಯರ ಪ್ರಧಾನರು ಹಾನೂನನಿಗೆ, “ದಾವೀದನು ನಿನ್ನ ಬಳಿಗೆ ಸಂತಾಪ ಸೂಚಿಸುವವರನ್ನು ಕಳುಹಿಸಿದ್ದರಿಂದ, ನಿನ್ನ ತಂದೆಯನ್ನು ಘನಪಡಿಸುತ್ತಾನೆಂದು ಯೋಚಿಸುತ್ತೀಯೋ? ಅವನ ದೂತರು ಈ ದೇಶವನ್ನು ಸಂಚರಿಸಿ ನೋಡುವುದಕ್ಕೂ ಶೋಧಿಸುವುದಕ್ಕೂ ಅದನ್ನು ಕೆಡವಿ ಹಾಕುವುದಕ್ಕೂ ನಿನ್ನ ಬಳಿಗೆ ಬರಲಿಲ್ಲವೋ?” ಎಂದರು.
किंतु अम्मोन के वंशजों के शासकों ने हानून से कहा, “क्या आप वास्तव में यह मानते हैं कि इन दूतों को आपको सांत्वना देने के लिए भेजते हुए दावीद ने आपके पिता का सम्मान करने का विचार किया है? ज़रा सोचिए, क्या उसके ये सेवक आपके पास जासूसी करके नाश करने के लक्ष्य से हमारे देश का भेद लेने तो नहीं आए हैं?”
4 ಆದ್ದರಿಂದ ಹಾನೂನನು ದಾವೀದನ ದೂತರನ್ನು ಹಿಡಿದು ಅವರ ಗಡ್ಡ, ತಲೆ ಬೋಳಿಸಿ, ಅವರ ವಸ್ತ್ರಗಳನ್ನು ಬೆನ್ನ ಹಿಂದೆ ಮಧ್ಯದಿಂದ ಸೊಂಟದ ಕೆಳಗಿನವರೆಗೂ ಕತ್ತರಿಸಿ, ಅವರನ್ನು ಕಳುಹಿಸಿಬಿಟ್ಟನು.
तब हानून ने दावीद के सेवकों को पकड़कर उनके बाल और दाढ़ी मूंड दी और उनके वस्त्रों को बीच में नितम्बों तक काट दिया और उन्हें लौट जाने दिया.
5 ಆಗ ಕೆಲವರು ಹೋಗಿ, ಈ ಮನುಷ್ಯರನ್ನು ಕುರಿತು ದಾವೀದನಿಗೆ ತಿಳಿಸಿದಾಗ, ಬಹಳ ಅಪಮಾನ ಹೊಂದಿದ ಅವರಿಗೆ ದಾವೀದನು ತನ್ನ ಆಳುಗಳನ್ನು ಅವರಿಗೆದುರಾಗಿ ಕಳುಹಿಸಿ, “ನಿಮ್ಮ ಗಡ್ಡಗಳು ಬೆಳೆಯುವವರೆಗೂ ಯೆರಿಕೋವಿನಲ್ಲಿ ಇರಿ. ಆಮೇಲೆ ತಿರುಗಿ ಬನ್ನಿರಿ,” ಎಂದು ಹೇಳಿಸಿದನು.
कुछ लोगों ने जाकर इसकी सूचना दावीद को दे दी. राजा ने कुछ दूतों को उस सुझाव के साथ बुलवा लिया, “आकर येरीख़ो में उस समय तक ठहरे रहना जब तक तुम्हारी दाढ़ी बढ़ न जाए. तब तुम यहां लौट सकते हो,” क्योंकि वे इस समय बहुत ही शर्म महसूस कर रहे थे.
6 ತಾವು ದಾವೀದನಿಗೆ ಅಸಹ್ಯರಾದೆವೆಂದು ಹಾನೂನನಿಗೆ ಮತ್ತು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅರಾಮಿನಲ್ಲಿಯೂ, ಅರಾಮ್ ಮಾಕದಲ್ಲಿಯೂ, ಚೋಬದಲ್ಲಿಯೂ ರಥಗಳನ್ನೂ, ರಾಹುತರನ್ನೂ ಕೂಲಿಗೆ ತೆಗೆದುಕೊಳ್ಳಲು ಮೂವತ್ತು ನಾಲ್ಕು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನು ಕಳುಹಿಸಿದರು.
जब अम्मोन के वंशजों ने यह पाया कि उन्होंने स्वयं को दावीद के सामने बहुत ही घृणित बना लिया है, हानून और अम्मोन के वंशजों ने लगभग पैंतीस हज़ार किलो चांदी देकर मेसोपोतामिया, आराम-माकाह और ज़ोबाह से घुड़सवार और रथ किराये पर ले लिए.
7 ಹೀಗೆಯೇ ಅವರು ಮೂವತ್ತೆರಡು ಸಾವಿರ ರಥಗಳನ್ನೂ, ಮಾಕದ ಅರಸನನ್ನೂ, ಅವನ ಜನರನ್ನೂ ಕೂಲಿಗೆ ತೆಗೆದುಕೊಂಡರು. ಇವರು ಬಂದು ಮೇದೆಬ ಊರಿನ ಬಳಿಯಲ್ಲಿ ದಂಡಿಳಿದರು. ಇದಲ್ಲದೆ ಅಮ್ಮೋನಿಯರು ತಮ್ಮ ಪಟ್ಟಣಗಳಿಂದ ಯುದ್ಧಕ್ಕೆ ಕೂಡಿಬಂದರು.
इसके द्वारा उन्होंने 32,000 रथ किराये पर ले लिए. माकाह के राजा ने अपने सैनिकों के साथ आकर मेदेबा में शिविर डाल दिए. अम्मोन के वंशजों ने अपने नगरों से इकट्ठा होकर युद्ध के लिए मोर्चा बांधा.
8 ದಾವೀದನು ಇದನ್ನು ಕೇಳಿದಾಗ, ಅವನು ಯೋವಾಬನನ್ನೂ, ಪರಾಕ್ರಮಶಾಲಿಗಳಾದ ಸಮಸ್ತ ಸೈನಿಕರನ್ನೂ ಕಳುಹಿಸಿದನು.
जब दावीद को इसका समाचार प्राप्त हुआ, उन्होंने योआब के साथ वीर योद्धाओं की सारी सेना वहां भेज दी.
9 ಆಗ ಅಮ್ಮೋನಿಯರು ಹೊರಟು, ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಅವರ ಸಹಾಯಕ್ಕಾಗಿ ಬಂದ ಅರಸರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.
अम्मोनियों ने आकर नगर फाटक पर मोर्चा बना लिया. जो राजा इस युद्ध में मिले हुए थे, वे इनसे अलग मैदान में ही ठहरे हुए थे.
10 ಯೋವಾಬನು, ಯುದ್ಧವು ತನ್ನ ವಿರೋಧವಾಗಿ ಹಿಂದೆಯೂ, ಮುಂದೆಯೂ ಇರುವುದನ್ನು ಕಂಡಾಗ, ಅವನು ಇಸ್ರಾಯೇಲಿನ ಎಲ್ಲಾ ಶ್ರೇಷ್ಠ ಸೈನಿಕರನ್ನು ಆಯ್ದುಕೊಂಡು, ಅರಾಮ್ಯರಿಗೆ ಎದುರಾಗಿ ನಿಲ್ಲಿಸಿದನು.
जब योआब ने यह देखा कि उनके विरुद्ध युद्ध छिड़ चुका है—सामने से और पीछे से भी, उन्होंने इस्राएल के सर्वोत्तम योद्धा अलग किए और उन्हें अरामियों का सामना करने के लिए चुन दिया.
11 ಆದರೆ ಉಳಿದ ಜನರನ್ನು ಅಮ್ಮೋನಿಯರಿಗೆದುರಾಗಿ ವ್ಯೂಹ ಕಟ್ಟುವ ಹಾಗೆ, ಅವರನ್ನು ತನ್ನ ತಮ್ಮನಾದ ಅಬೀಷೈಯನ ಕೈಯಲ್ಲಿ ಒಪ್ಪಿಸಿಕೊಟ್ಟು,
शेष सैनिकों को योआब ने अपने भाई अबीशाई के नेतृत्व में छोड़ दिया कि वे अम्मोनियों का सामना करें.
12 ಅವನಿಗೆ ಯೋವಾಬನು, “ಅರಾಮ್ಯರು ನನಗಿಂತ ಬಲವುಳ್ಳವರಾದರೆ, ನೀನು ನನಗೆ ಸಹಾಯಮಾಡಬೇಕು; ಅಮ್ಮೋನಿಯರು ನಿನಗಿಂತ ಬಲವುಳ್ಳವರಾದರೆ, ನಾನು ಬಂದು ನಿನಗೆ ಸಹಾಯ ಮಾಡುವೆನು.
योआब का आदेश था, “यदि तुम्हें यह लगे कि अरामी मुझ पर हावी हो रहे हैं, तब तुम मेरी रक्षा के लिए आ जाना, मगर यदि अम्मोनी तुम पर प्रबल होने लगे, तब मैं तुम्हारी रक्षा के लिए आ जाऊंगा.
13 ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ, ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ. ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.
साहस बनाए रखो. हम अपने परमेश्वर के नगरों के लिए और अपने देशवासियों के लिए साहस का प्रदर्शन करें, कि याहवेह वह कर सकें, जो उनकी दृष्टि में सही है.”
14 ಆಗ ಯೋವಾಬನೂ, ಅವನ ಸಂಗಡ ಇದ್ದ ಜನರೂ ಅರಾಮ್ಯರ ಮೇಲೆ ದಾಳಿಮಾಡಲು ಹತ್ತಿರವಾದಾಗ, ಅರಾಮ್ಯರು ಓಡಿಹೋದರು.
योआब और उनके साथ के सैनिकों ने अश्शूरियों पर हमला किया और अरामी उनके सामने से भाग खड़े हुए.
15 ಅರಾಮ್ಯರು ಓಡಿ ಹೋದದ್ದನ್ನು ಅಮ್ಮೋನಿಯರು ಕಂಡಾಗ, ಅವರೂ ಸಹ ಯೋವಾಬನ ತಮ್ಮನಾದ ಅಬೀಷೈಯನ ಎದುರಿನಿಂದ ಓಡಿಹೋಗಿ, ಪಟ್ಟಣದೊಳಗೆ ಅಡಗಿಕೊಂಡರು. ಆಗ ಯೋವಾಬನು ಯೆರೂಸಲೇಮಿಗೆ ತಿರುಗಿಹೋದನು.
जब अम्मोनियों ने यह देखा कि अरामी मैदान छोड़कर भाग रहे हैं, वे भी योआब के भाई अबीशाई के सामने से भागने लगे और नगर के भीतर जा छिपे. योआब येरूशलेम लौट गया.
16 ಅರಾಮ್ಯರಿಗೆ ತಾವು ಇಸ್ರಾಯೇಲರಿಂದ ಸೋತುಹೋದೆವೆಂದು ತಿಳಿದಾಗ, ಅವರು ದೂತರನ್ನು ಕಳುಹಿಸಿ, ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಇತರ ಅರಾಮ್ಯರನ್ನು ಕರೆಯಿಸಿಕೊಂಡರು. ಹದದೆಜೆರನ ಸೇನಾಧಿಪತಿಯಾದ ಶೋಫಕನು ಅವರ ನಾಯಕನಾದನು.
जब अश्शूरियों ने यह देखा कि उन्हें इस्राएल से हार का सामना करना पड़ा है, तब उन्होंने दूत भेजकर फरात नदी के पार से और भी सेना की विनती की. हादेदेज़र की इस सेना का प्रधान था शोफख.
17 ಅದನ್ನು ದಾವೀದನಿಗೆ ತಿಳಿಸಿದಾಗ, ಅವನು ಸಮಸ್ತ ಇಸ್ರಾಯೇಲರನ್ನು ಕೂಡಿಸಿಕೊಂಡು, ಯೊರ್ದನನ್ನು ದಾಟಿ, ಅವರಿಗೆದುರಾಗಿ ವ್ಯೂಹ ಕಟ್ಟಿದನು. ದಾವೀದನು ಅರಾಮ್ಯರಿಗೆದುರಾಗಿ ಸೈನ್ಯವನ್ನು ವ್ಯೂಹ ಕಟ್ಟಿದ ಮೇಲೆ, ಅವರು ಅವನ ವಿರುದ್ಧ ಯುದ್ಧಮಾಡಿದರು.
जब दावीद को इसकी सूचना दी गई, वह सारी इस्राएली सेना को इकट्ठा कर यरदन के पार चले गए और उन्होंने अरामी सेना के विरुद्ध मोर्चा बांधा. दोनों में युद्ध छिड़ गया.
18 ಆದರೆ ಅರಾಮ್ಯರು ಇಸ್ರಾಯೇಲರ ಎದುರಿನಿಂದ ಓಡಿದರು. ದಾವೀದನು ಅರಾಮ್ಯರಲ್ಲಿ ಏಳು ಸಾವಿರ ರಥಗಳನ್ನೂ ಹಾಳು ಮಾಡಿ, ನಲವತ್ತು ಸಾವಿರ ಕಾಲಾಳುಗಳನ್ನೂ, ಅವರ ಸೇನಾಧಿಪತಿಯಾದ ಶೋಫಕನನ್ನೂ ಕೊಂದುಹಾಕಿದನು.
अरामी इस्राएलियों के सामने पीठ दिखाकर भागने लगे. दावीद ने अरामी सेना के 700 रथ सैनिक, 40,000 घुड़सवार मार गिराए और उनकी सेना के आदेशक शोफख का वध कर दिया.
19 ಹದದೆಜೆರನ ಅಧೀನ ರಾಜರು ತಾವು ಇಸ್ರಾಯೇಲರ ಮುಂದೆ ಸೋತುಹೋದದ್ದನ್ನು ಕಂಡಾಗ, ಅವರು ದಾವೀದನ ಸಂಗಡ ಸಂಧಾನ ಮಾಡಿಕೊಂಡು, ಅವನಿಗೆ ಅಧೀನರಾದರು. ತರುವಾಯ ಅರಾಮ್ಯರು ಅಮ್ಮೋನಿಯರಿಗೆ ಮತ್ತೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದವರಾದರು.
जब हादेदेज़र के अधीन सभी जागीरदारों ने यह देखा कि वे इस्राएल द्वारा हरा दिया गया है, उन्होंने दावीद से संधि कर ली और उनके अधीन हो गए. अब अरामी अम्मोन-वंशजो की सहायता के लिए तैयार न थे.