< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 20 >

1 ಮರು ವರ್ಷ ವಸಂತ ಕಾಲದಲ್ಲಿ ಅರಸರು ಯುದ್ಧಕ್ಕೆ ಹೊರಡುವ ಸಮಯದಲ್ಲಿ, ಯೋವಾಬನು ಬಲವಾದ ಸೈನ್ಯವನ್ನು ಕರೆದುಕೊಂಡು ಹೋಗಿ, ಅಮ್ಮೋನಿಯರ ಪ್ರಾಂತಗಳನ್ನು ಹಾಳು ಮಾಡಿ, ರಬ್ಬ ನಗರಕ್ಕೆ ಮುತ್ತಿಗೆಹಾಕಿದನು. ಆದರೆ ದಾವೀದನು ಯೆರೂಸಲೇಮಿನಲ್ಲಿಯೇ ಇದ್ದನು. ಯೋವಾಬನು ರಬ್ಬ ಪಟ್ಟಣದ ಮೇಲೆ ದಾಳಿಮಾಡಿ, ಅದನ್ನು ನಾಶಮಾಡಿದನು.
यह घटना वसन्त के मौसम की है, जब राजा युद्ध के लिए निकल पड़ते थे. सेना की अगुवाई योआब कर रहा था. उन्होंने अम्मोन के वंशजों के देश को नाश कर दिया था. उन्होंने रब्बाह नामक नगर पर घेरा डाल दिया. मगर योआब ने रब्बाह पर हमला किया और उसे नाश कर दिया मगर इस मौके पर दावीद येरूशलेम में ही रहे.
2 ಇದಲ್ಲದೆ ದಾವೀದನು ರಬ್ಬಾ ನಗರಕ್ಕೆ ಬಂದಾಗ, ಮಲ್ಕಾಮ್ ಮೂರ್ತಿಯ ತಲೆಯ ಮೇಲೆ ಇದ್ದ ಕಿರೀಟವನ್ನು ಸಹ ತೆಗೆದುಕೊಂಡನು. ಅದು ಮೂವತ್ತೈದು ಕಿಲೋಗ್ರಾಂ ತೂಕದ್ದಾಗಿತ್ತು. ಅದನ್ನು ಬಂಗಾರದಿಂದಲೂ, ಅಮೂಲ್ಯವಾದ ರತ್ನಗಳಿಂದಲೂ ಅಲಂಕರಿಸಲಾಗಿತ್ತು, ಆ ಕಿರೀಟವನ್ನು ದಾವೀದನ ಶಿರಸ್ಸಿನಲ್ಲಿ ಧರಿಸಲಾಯಿತು. ಆ ಪಟ್ಟಣದೊಳಗಿಂದ ಅತ್ಯಧಿಕವಾದ ಕೊಳ್ಳೆಯನ್ನೂ ತೆಗೆದುಕೊಂಡು ಬಂದನು.
जब दावीद रब्बाह पहुंचा, तब दावीद ने उनके राजा के सिर से मुकुट उतार लिया. इस मुकुट का कुल भार लगभग पैंतीस किलो पाया गया. इस मुकुट में रत्न भी जड़े हुए थे. यह मुकुट दावीद के सिर पर रख दिया गया. दावीद उस नगर से भारी मात्रा में लूटा हुआ सामान ले आए.
3 ಇದಲ್ಲದೆ ಅವನು ಅದರಲ್ಲಿದ್ದ ಜನರನ್ನು ಹೊರಗೆ ತಂದು, ಅವರನ್ನು ಗರಗಸ ಗುದ್ದಲಿ ಕೊಡಲಿಗಳಿಂದ ಕೆಲಸ ಮಾಡುವದಕ್ಕೂ ಇಟ್ಟನು. ಅದೇ ಪ್ರಕಾರ ದಾವೀದನು ಅಮ್ಮೋನಿಯರ ಸಮಸ್ತ ಪಟ್ಟಣಗಳಿಗೂ ಮಾಡಿದನು. ಅನಂತರ ದಾವೀದನು ಎಲ್ಲಾ ಸೈನಿಕರೊಡನೆ ಯೆರೂಸಲೇಮಿಗೆ ತಿರುಗಿಬಂದನು.
दावीद उन नगरवासियों को नगर से बाहर निकाल लाए और उन्हें आरियों, गेंतियों और कुल्हाड़ियों से होनेवाले कामों में लगा दिया. दावीद ने अम्मोनियों के सभी नगरों के साथ यही किया. इसके बाद दावीद और सभी लोग येरूशलेम लौट गए.
4 ಇದರ ತರುವಾಯ, ಫಿಲಿಷ್ಟಿಯರ ಸಂಗಡ ಗೆಜೆರಿನಲ್ಲಿ ಯುದ್ಧನಡೆಯಿತು. ಆಗ ಹುಷಾ ಊರಿನವನಾದ ಸಿಬ್ಬೆಕೈ ಎಂಬವನು ರೆಫಾಯನಾದ ಸಿಪ್ಪೈ ಎಂಬವನನ್ನು ಕೊಂದದ್ದರಿಂದ ಫಿಲಿಷ್ಟಿಯರು ಸೋತುಹೋದರು.
इसके बाद गेज़ेर में फिलिस्तीनियों के विरुद्ध युद्ध छिड़ गया. इसमें हुशाथी सिब्बेकाई ने दैत्यों के वंशज सिप्पाई को मार गिराया, जिससे फिलिस्तीनी दावीद के अधीन हो गए.
5 ಅನಂತರ ಫಿಲಿಷ್ಟಿಯರ ಸಂಗಡ ಯುದ್ಧ ಉಂಟಾದಾಗ, ಯಾಯೀರನ ಮಗನಾದ ಎಲ್ಹನಾನನು ಗಿತ್ತೀಯನಾದ ಗೊಲ್ಯಾತನ ಸಹೋದರನಾದ ಲಹ್ಮೀಯನ್ನು ಕೊಂದನು. ಈ ಗೊಲ್ಯಾತನ ಈಟಿಯ ಹಿಡಿಕೆಯು ನೇಯುವವರ ಕುಂಟೆ ಕಟ್ಟಿಗೆಗೆ ಸಮನಾಗಿತ್ತು.
एक बार फिर फिलिस्तीनियों से युद्ध छिड़ गया. याईर के पुत्र एलहानन ने गाथ गोलियथ के भाई लाहमी को मार डाला, लाहमी के भाले की छड़ बुनकर के छड़ के बराबर थी.
6 ಇನ್ನೊಂದು ಸಾರಿ ಗತ್ ಊರಿನಲ್ಲಿ ಯುದ್ಧ ಉಂಟಾದಾಗ, ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು. ಅವನ ಕೈಕಾಲುಗಳ ಬೆರಳುಗಳು ಆರಾರರಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನು ಸಹ ರೆಫಾಯನಿಗೆ ಹುಟ್ಟಿದವನಾಗಿದ್ದನು.
तब एक बार फिर गाथ में युद्ध छिड़ गया. वहां एक बहुत ही विशाल डीलडौल का व्यक्ति था, जिसके हाथों और पांवों में छः-छः उंगलियां थीं-पूरी चौबीस. वह भी दानवों का ही वंशज था.
7 ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮ್ಮನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.
जब उसने इस्राएल पर व्यंग्य-बाण छोड़ने शुरू किए, दावीद के भाई शिमिया के पुत्र योनातन ने उसको मार दिया.
8 ಇವರು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು.
ये सभी गाथ नगर में दानवों का ही वंशज था. वे दावीद और उनके सेवकों द्वारा मार गिराए गए.

< ಪೂರ್ವಕಾಲವೃತ್ತಾಂತ ಪ್ರಥಮ ಭಾಗ 20 >