< ಅರಸುಗಳು - ಪ್ರಥಮ ಭಾಗ 12 >

1 ರೆಹಬ್ಬಾಮನು ಶೆಕೆಮಿಗೆ ಹೋದನು; ಅವನನ್ನು ಅರಸನಾಗಿ ಮಾಡುವುದಕ್ಕೆ ಸಮಸ್ತ ಇಸ್ರಾಯೇಲರು ಶೆಕೆಮಿಗೆ ಬಂದರು.
रिहोबोयाम शेकेम नगर गया, क्योंकि उसके राजाभिषेक के उद्देश्य से सारा इस्राएल वहां इकट्ठा हुआ था.
2 ಅರಸನಾದ ಸೊಲೊಮೋನನ ಸಮ್ಮುಖದಿಂದ ಓಡಿಹೋಗಿ ಈಜಿಪ್ಟಿನಲ್ಲಿ ವಾಸವಾಗಿದ್ದ ನೆಬಾಟನ ಮಗ ಯಾರೊಬ್ಬಾಮನು ಇದನ್ನು ಕೇಳಿದಾಗ, ಅವನು ಈಜಿಪ್ಟಿನಿಂದ ತಿರುಗಿಬಂದನು.
जब नेबाथ के पुत्र यरोबोअम ने यह सुना, जो इस समय मिस्र देश में ही रह रहा था—वह राजा शलोमोन से भागकर यहीं ठहरा हुआ था—
3 ಆಗ ಯಾರೊಬ್ಬಾಮನೂ ಸಮಸ್ತ ಇಸ್ರಾಯೇಲರೂ ರೆಹಬ್ಬಾಮನ ಬಳಿಗೆ ಬಂದು, ಅವನ ಸಂಗಡ ಮಾತನಾಡಿ,
लोगों ने संदेश भेजकर उसे बुलवा लिया. तब यरोबोअम और सारी इस्राएली सभा अपनी बात रखने रिहोबोयाम के पास गई. उन्होंने रिहोबोयाम से कहा,
4 “ನಿನ್ನ ತಂದೆಯು ನಮ್ಮ ನೊಗವನ್ನು ಭಾರವಾಗಿ ಮಾಡಿದನು. ಈಗ ನೀನು ನಿನ್ನ ತಂದೆಯ ಕಠಿಣವಾದ ಸೇವೆಯನ್ನೂ, ಅವನು ನಮ್ಮ ಮೇಲೆ ಹಾಕಿದ ಅವನ ಭಾರವಾದ ನೊಗವನ್ನೂ ಹಗುರಮಾಡಿದರೆ, ನಾವು ನಿನಗೆ ಸೇವೆಮಾಡುತ್ತೇವೆ,” ಎಂದರು.
“आपके पिता ने हमारा जूआ बहुत ही भारी कर दिया था; अब तो आपके पिता द्वारा कराई गई मेहनत और इस भारी जूए को हल्का कर दीजिए. हम आपकी सेवा हमेशा करते रहेंगे.”
5 ಅವನು ಅವರಿಗೆ, “ನೀವು ಹೋಗಿ ಮೂರು ದಿವಸಗಳಾದ ತರುವಾಯ ತಿರುಗಿ ನನ್ನ ಬಳಿಗೆ ಬನ್ನಿರಿ,” ಎಂದು ಹೇಳಿದ್ದರಿಂದ ಜನರು ಹೊರಟು ಹೋದರು.
रिहोबोयाम ने उन्हें उत्तर दिया, “अभी आप जाइए और तीन दिन के बाद आइए, तब मैं आपको इसका उत्तर दूंगा.” तब वे सब लौट गए.
6 ಆಗ ಅರಸನಾದ ರೆಹಬ್ಬಾಮನು ತನ್ನ ತಂದೆ ಸೊಲೊಮೋನನು ಬದುಕಿರುವಾಗ ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.
इसी समय राजा रिहोबोयाम ने उन पुरनियों से सलाह ली, जो उसके पिता शलोमोन के जीवन भर उसके सेवक रहे थे. उसने पूछा, “मेरे लिए आपकी क्या राय है? मैं इन लोगों को क्या उत्तर दूं?”
7 ಅವರು ಅವನಿಗೆ, “ನೀನು ಇಂದು ಈ ಜನರಿಗೆ ಸೇವಕನಾಗಿ ಅವರನ್ನು ಸೇವಿಸಿ, ಒಳ್ಳೆಯ ಮಾತುಗಳಿಂದ ಅವರಿಗೆ ಉತ್ತರವನ್ನು ಕೊಡು, ಆಗ ಅವರು ನಿರಂತರವಾಗಿ ನಿನ್ನ ಸೇವಕರಾಗಿರುವರು,” ಎಂದು ಹೇಳಿದರು.
उन्होंने उसे उत्तर दिया, “यदि आप आज इन लोगों के सामने सेवक की तरह बनकर उन्हें उत्तर देते हुए उनसे मीठी बातें करें, तो वे आजीवन आपके सेवक बने रहेंगे.”
8 ಆದರೆ ರೆಹಬ್ಬಾಮನು, ಹಿರಿಯರು ತನಗೆ ಹೇಳಿದ ಆಲೋಚನೆಯನ್ನು ಬಿಟ್ಟು, ತನ್ನ ಸಂಗಡ ಬೆಳೆದು ತನ್ನ ಮುಂದೆ ನಿಂತಿರುವ ಯೌವನಸ್ಥರ ಆಲೋಚನೆಯನ್ನು ಕೇಳಿ,
मगर रिहोबोयाम ने पुरनियों की इस सलाह को छोड़ दिया और जाकर उन युवाओं से सलाह ली, जो उसी के साथ बड़े हुए थे और जो उसके सेवक थे.
9 ಅವನು ಅವರಿಗೆ, “ನಿನ್ನ ತಂದೆಯು ನಮ್ಮ ಮೇಲೆ ಹಾಕಿದ ನೊಗವನ್ನು ಹಗುರ ಮಾಡೆಂದು ನನಗೆ ಹೇಳಿದ ಈ ಜನರಿಗೆ ಉತ್ತರ ಕೊಡಲು ನಿಮ್ಮ ಆಲೋಚನೆ ಏನು?” ಎಂದು ಕೇಳಿದನು.
उसने उनसे पूछा “इन लोगों के लिए तुम्हारी राय क्या है, जिन्होंने मुझसे विनती की, ‘आपके पिता द्वारा हम पर रखा गया जूआ हल्का कर दीजिए’?”
10 ಆಗ ಅವನ ಸಂಗಡ ಬೆಳೆದ ಯೌವನಸ್ಥರು ಅವನಿಗೆ, “ನಿನ್ನ ತಂದೆಯು ನಮ್ಮ ನೊಗವನ್ನು ಭಾರಮಾಡಿದನು. ಆದರೆ ನೀನು ಅದನ್ನು ನಮಗೆ ಹಗುರ ಮಾಡೆಂದು ನಿನ್ನ ಸಂಗಡ ಮಾತನಾಡಿದ ಈ ಜನರಿಗೆ, ‘ನನ್ನ ಕಿರುಬೆರಳು ನನ್ನ ತಂದೆಯ ನಡುವಿಗಿಂತ ದಪ್ಪವಾಗಿರುವುದು.
उसके साथ साथ पले बढ़े युवाओं ने उसे उत्तर दिया, “जिन लोगों ने आपसे यह विनती की है, ‘आपके पिता द्वारा हम पर रखे गए भारी जूए को हल्का कर दीजिए,’ उन्हें यह उत्तर दीजिए, ‘मेरे हाथ की छोटी उंगली ही मेरे पिता की कमर से मोटी है!
11 ನನ್ನ ತಂದೆಯು ನಿಮ್ಮ ಮೇಲೆ ಭಾರವಾದ ನೊಗವನ್ನು ಹೊರಿಸಿದನು. ಆದರೆ ನಾನು ನಿಮ್ಮ ನೊಗವನ್ನು ಇನ್ನೂ ಹೆಚ್ಚು ಭಾರವಾಗಿ ಮಾಡುವೆನು. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಹೊಡೆದದ್ದು ನಿಜ, ನಾನಾದರೋ ನಿಮ್ಮನ್ನು ಚೇಳು ಕೊರಡೆಗಳಿಂದ ಶಿಕ್ಷಿಸುವೆನು,’ ಎಂದು ನೀನು ಅವರಿಗೆ ಹೇಳು,” ಎಂದರು.
यदि मेरे पिता ने तुम पर भारी जूआ लादा था, तो मैं उसे और भी अधिक भारी बना दूंगा. मेरे पिता ने तो तुम्हें नियंत्रण में रखने के लिए कोड़े इस्तेमाल किए थे, मगर मैं इसके लिए बिच्छू का इस्तेमाल करूंगा.’”
12 ಆಗ, “ಮೂರನೆಯ ದಿವಸದಲ್ಲಿ ನನ್ನ ಬಳಿಗೆ ಬನ್ನಿರಿ,” ಎಂದು ಅರಸನು ಹೇಳಿದ ಪ್ರಕಾರ, ಮೂರನೆಯ ದಿವಸದಲ್ಲಿ ಯಾರೊಬ್ಬಾಮನೂ, ಸಮಸ್ತ ಜನರೂ ಅರಸನಾದ ರೆಹಬ್ಬಾಮನ ಬಳಿಗೆ ಬಂದರು.
जब यरोबोअम और सारी भीड़ तीन दिन बाद रिहोबोयाम के सामने आया, जैसा राजा द्वारा बताया गया था, “मेरे पास तीन दिन के बाद आना.”
13 ಆದರೆ ಅರಸನು ಜನರಿಗೆ ಕಠಿಣವಾದ ಉತ್ತರವನ್ನು ಕೊಟ್ಟು, ಹಿರಿಯರು ಅವನಿಗೆ ಕೊಟ್ಟ ಆಲೋಚನೆಯನ್ನು ನಿರಾಕರಿಸಿ,
राजा ने पुरनियों की सलाह को छोड़कर लोगों को कठोर उत्तर दिया,
14 ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು. ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.
जो उन्हें युवाओं के द्वारा दी गई सलाह के अनुसार था. उसने कहा, “मेरे पिता ने तुम्हारा जूआ भारी किया था, तो मैं इसे और ज्यादा भारी कर दूंगा. मेरे पिता ने अगर तुम पर कोड़े चलाए थे, तो अब मैं तुम पर बिच्छू ड़ंक के समान कोड़े बरसाऊंगा.”
15 ಅರಸನು ಜನರ ಮಾತನ್ನು ಕೇಳದೆಹೋದದ್ದು ಯೆಹೋವ ದೇವರಿಂದಲೇ. ಹೀಗೆ ಯೆಹೋವ ದೇವರು ಶೀಲೋವಿನವನಾದ ಅಹೀಯನ ಮುಖಾಂತರವಾಗಿ ನೆಬಾಟನ ಮಗನಾದ ಯಾರೊಬ್ಬಾಮನಿಗೆ ಹೇಳಿಸಿದ ಮಾತು ಈಡೇರುವುದಕ್ಕೆ ಕಾರಣವಾಯಿತು.
राजा ने लोगों की एक न सुनी क्योंकि यह सारी बातें याहवेह द्वारा तय की जा चुकी थी, कि वह अपनी कही हुई बात पूरी करे, जो उन्होंने नेबाथ के पुत्र यरोबोअम से शीलो के भविष्यद्वक्ता अहीयाह द्वारा की थी.
16 ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.
जब सारे इस्राएल के सामने यह बात आ गई कि राजा ने उनकी विनती की ओर ध्यान ही नहीं दिया है, उन्होंने राजा से यह कह दिया: “क्या भाग है दावीद में हमारा? क्या मीरास है यिशै पुत्र में हमारी? लौट जाओ अपने-अपने तंबुओं में, इस्राएल! दावीद, तुम अपने ही वंश को संभालते रहो!” तब इस्राएली अपने-अपने तंबुओं को लौट गए.
17 ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲರ ಮೇಲೆ ರೆಹಬ್ಬಾಮನು ಆಳಿದನು.
मगर यहूदिया प्रदेशवासी इस्राएलियों पर रिहोबोयाम का शासन हो गया.
18 ಆಗ ರೆಹಬ್ಬಾಮನು ದಾಸರ ಮೇಲ್ವಿಚಾರಕನಾದ ಅದೋನೀರಾಮನನ್ನು ಕಳುಹಿಸಿದನು. ಆದರೆ ಇಸ್ರಾಯೇಲರೆಲ್ಲರು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು. ಆದ್ದರಿಂದ ಅರಸನಾದ ರೆಹಬ್ಬಾಮನು ಆತುರಪಟ್ಟು ತನ್ನ ರಥವನ್ನೇರಿ ಯೆರೂಸಲೇಮಿಗೆ ಓಡಿಹೋದನು.
राजा रिहोबोयाम ने अदोरम को, जो बेगार श्रमिकों का मुखिया था, इस्राएलियों के पास भेजा. सारे इस्राएलियों ने उसका पथराव किया कि उसकी हत्या हो गई. यह देख राजा रिहोबोयाम ने बिना देर किए रथ जुतवाया और वह येरूशलेम को भाग गया.
19 ಹೀಗೆ ಇಂದಿನವರೆಗೂ ಇಸ್ರಾಯೇಲರು ದಾವೀದನ ಕುಟುಂಬದವರೊಡನೆ ವಿರೋಧವಾಗಿ ತಿರುಗಿಬೀಳುತ್ತಲೇ ಇದ್ದಾರೆ.
इस प्रकार इस्राएल राज्य आज तक दावीद के वंश के विरुद्ध विद्रोह की स्थिति में है.
20 ಇಸ್ರಾಯೇಲರು ಯಾರೊಬ್ಬಾಮನು ತಿರುಗಿ ಬಂದಿದ್ದಾನೆಂದು ಕೇಳಿದಾಗ, ಅವರು ಸಭೆಗೆ ಅವನನ್ನು ಕರೆಕಳುಹಿಸಿ, ಸಮಸ್ತ ಇಸ್ರಾಯೇಲಿನ ಮೇಲೆ ಅವನನ್ನು ಅರಸನನ್ನಾಗಿ ಮಾಡಿದರು. ಯೆಹೂದನ ಗೋತ್ರ ಹೊರತಾಗಿ ದಾವೀದನ ಮನೆಯನ್ನು ಹಿಂಬಾಲಿಸುವವರು ಯಾರೂ ಇರಲಿಲ್ಲ.
जब सारे इस्राएल देश में यह मालूम चल गया कि यरोबोअम लौट आया है, उन्होंने उसे सभा में आमंत्रित किया और उसका सारे इस्राएल के राजा के रूप में राजाभिषेक कर दिया. सिर्फ यहूदाह गोत्र दावीद वंश के साथ रहा.
21 ಸೊಲೊಮೋನನ ಮಗನಾದ ರೆಹಬ್ಬಾಮನು ಯೆರೂಸಲೇಮಿಗೆ ಬಂದ ತರುವಾಯ, ರಾಜ್ಯವನ್ನು ತಿರುಗಿ ಪಡೆಯುವ ಹಾಗೆ ಇಸ್ರಾಯೇಲಿಗೆ ವಿರೋಧವಾಗಿ ಯುದ್ಧಮಾಡಲು ಬೆನ್ಯಾಮೀನನ ಗೋತ್ರದ ಮತ್ತು ಯೆಹೂದನ ಸಮಸ್ತ ಕುಟುಂಬಗಳಿಂದ 1,80,000 ಸಮರ್ಥ ಸೈನಿಕರನ್ನು ಆಯ್ದುಕೊಂಡು ಒಟ್ಟುಗೂಡಿಸಿದನು.
जब रिहोबोयाम येरूशलेम लौटा, उसने सारे यहूदाह और बिन्यामिन गोत्र को इकट्ठा किया. ये एक लाख अस्सी हज़ार योद्धा थे, जिन्हें परखकर अलग किया गया था, कि ये इस्राएल वंश से युद्ध करें और शलोमोन के पुत्र रिहोबोयाम के राज्य को दोबारा उसे लौटा दें.
22 ಆದರೆ ದೇವರ ವಾಕ್ಯವು ದೇವರ ಮನುಷ್ಯನಾಗಿರುವ ಶೆಮಾಯನಿಗೆ ಉಂಟಾಗಿ,
मगर परमेश्वर के एक जन शेमायाह को परमेश्वर का आदेश इन शब्दों में मिला,
23 “ನೀನು ಯೆಹೂದದ ಅರಸನಾದ ಸೊಲೊಮೋನನ ಮಗನಾಗಿರುವ ರೆಹಬ್ಬಾಮನಿಗೂ, ಯೆಹೂದ ಬೆನ್ಯಾಮೀನನ ಸಮಸ್ತ ಮನೆಯವರಿಗೂ ಮತ್ತು ಮಿಕ್ಕಿದ ಜನರಿಗೂ ಹೇಳಬೇಕಾದದ್ದೇನೆಂದರೆ,
“शलोमोन के पुत्र यहूदिया के राजा रिहोबोयाम से और यहूदाह और बिन्यामिन के सभी गोत्रों से और बाकी सभी लोगों से जाकर यह कहो:
24 ‘ನೀವು ಇಸ್ರಾಯೇಲರಾಗಿರುವ ನಿಮ್ಮ ಸಹೋದರರಿಗೆ ವಿರೋಧವಾಗಿ ಯುದ್ಧಮಾಡಲು ಹೋಗಬೇಡಿರಿ. ಪ್ರತಿ ಮನುಷ್ಯನು ತನ್ನ ಮನೆಗೆ ಹಿಂದಿರುಗಲಿ.’ ಏಕೆಂದರೆ ಈ ಕಾರ್ಯವು ತಮ್ಮಿಂದ ಉಂಟಾಯಿತೆಂದು ಯೆಹೋವ ದೇವರು ಹೇಳುತ್ತಾರೆ,” ಎಂದನು. ಆದ್ದರಿಂದ ಅವರು ಯೆಹೋವ ದೇವರ ವಾಕ್ಯವನ್ನು ಕೇಳಿ, ಯೆಹೋವ ದೇವರ ವಾಕ್ಯದ ಪ್ರಕಾರವೇ ಹಿಂದಿರುಗಿ ಹೋದರು.
‘यह याहवेह का आदेश है, अपने इन संबंधियों से, जो इस्राएल के वंशज हैं, युद्ध न करना. तुममें से हर एक अपने-अपने घर लौट जाए, क्योंकि यह स्थिति मेरे द्वारा उत्पन्‍न की गई है.’” तब उन्होंने याहवेह के आदेश का पालन किया. याहवेह के आदेश के अनुसार वे सब अपने-अपने घर लौट गए.
25 ಯಾರೊಬ್ಬಾಮನು ಎಫ್ರಾಯೀಮನ ಬೆಟ್ಟದಲ್ಲಿ ಶೆಕೆಮ್ ಪಟ್ಟಣವನ್ನು ಭದ್ರಪಡಿಸಿ, ಅದರಲ್ಲಿ ವಾಸಿಸಿದನು. ಅಲ್ಲಿಂದ ಹೊರಟುಹೋಗಿ ಪೆನೀಯೇಲ್ ಪಟ್ಟಣವನ್ನು ಭದ್ರಪಡಿಸಿದನು.
यरोबोअम ने एफ्राईम के पहाड़ी इलाके में शेकेम नामक नगर को बसाया और वहीं रहने लगा. कुछ समय बाद उसे छोड़ उसने पनीएल नामक स्थान को मजबूत किया.
26 ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,
यरोबोअम ने विचार किया, “अब तो राज्य दावीद वंश के पास लौट जाएगा.
27 ಈ ಜನರು ಯೆರೂಸಲೇಮಿನಲ್ಲಿರುವ ಯೆಹೋವ ದೇವರ ಮಂದಿರಕ್ಕೆ ಬಲಿ ಅರ್ಪಿಸಲು ಹೋದರೆ, ಆಗ ಇವರ ಹೃದಯವು ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ಮತ್ತೆ ತಿರುಗುವುದು. ಅವರು ನನ್ನನ್ನು ಕೊಂದುಹಾಕಿ, ಯೆಹೂದದ ಅರಸನಾದ ರೆಹಬ್ಬಾಮನ ಕಡೆಗೆ ತಿರುಗಿ ಹೋದಾರು,” ಎಂದುಕೊಂಡನು.
यदि मेरे प्रजाजन बलि चढ़ाने के उद्देश्य से येरूशलेम में याहवेह के भवन को ही जाते रहेंगे, तो यह तय ही है कि उनका हृदय उनके स्वामी की ओर ही लगता जाएगा; यहूदिया के राजा रिहोबोयाम की ओर, और ये लोग मेरी हत्या कर देंगे और यहूदिया के राजा रिहोबोयाम की ओर फिर जाएंगे.”
28 ಅರಸನು ತನ್ನ ಸಲಹೆಗಾರರನ್ನು ಕೇಳಿ, ಎರಡು ಬಂಗಾರದ ಕರುಗಳನ್ನು ಮಾಡಿಸಿ ಜನರಿಗೆ, “ಯೆರೂಸಲೇಮಿನವರೆಗೂ ಜಾತ್ರೆಗೆ ಹೋಗುವುದು ನಿಮಗೆ ಕಷ್ಟವಾಗಿದೆ. ಇಸ್ರಾಯೇಲರೇ, ಇಗೋ ಈಜಿಪ್ಟಿನಿಂದ ನಿಮ್ಮನ್ನು ಬರಮಾಡಿದ ನಿಮ್ಮ ದೇವರುಗಳು,” ಎಂದನು.
सलाह-मशविरा करने के बाद, राजा ने सोने के दो बछड़े ढाले, और लोगों के सामने घोषणा की, “बहुत हो चुका तुम्हारा येरूशलेम जाना. इस्राएल, यह देखो, तुम्हारे देवता ये हैं, ये ही हैं जो तुम्हें मिस्र देश से बाहर निकाल लाए हैं.”
29 ಒಂದನ್ನು ಬೇತೇಲಿನಲ್ಲಿಯೂ, ಒಂದನ್ನು ದಾನಿನಲ್ಲಿಯೂ ಸ್ಥಾಪಿಸಿದನು.
इसके बाद उसने एक को तो बेथेल में और दूसरे को दान प्रदेश में प्रतिष्ठित किया.
30 ಇದು ಪಾಪಕ್ಕೆ ಕಾರಣವಾಯಿತು. ದಾನಿನಲ್ಲಿರುವುದನ್ನು ಪೂಜಿಸಲು ಜನರು ಅಲ್ಲಿಯವರೆಗೆ ಹೋಗುತ್ತಿದ್ದರು.
यह पाप साबित हुआ, क्योंकि लोग उसकी उपासना करने दूर के दान प्रदेश तक जाने लगे.
31 ಅವನು ಉನ್ನತ ಸ್ಥಳಗಳಲ್ಲಿ ಪೂಜಾಸ್ಥಳಗಳನ್ನು ಕಟ್ಟಿಸಿ, ಲೇವಿಯರಲ್ಲದ ಸಾಮಾನ್ಯ ಜನರನ್ನು ಯಾಜಕರನ್ನಾಗಿ ನೇಮಿಸಿದನು.
उसने पूजा स्थलों पर मंदिर बनवा दिए, और सारी प्रजा में से ऐसे व्यक्तियों को पुरोहित चुन दिया, जो लेवी के वंशज न थे.
32 ಯಾರೊಬ್ಬಾಮನು ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಯೆಹೂದದಲ್ಲಿರುವ ಹಬ್ಬದ ಪ್ರಕಾರ ಹಬ್ಬವನ್ನು ನೇಮಿಸಿ, ಪೀಠದ ಮೇಲೆ ಬಲಿಗಳನ್ನು ಅರ್ಪಿಸಿದನು. ಈ ಪ್ರಕಾರ ಅವನು ಬೇತೇಲಿನಲ್ಲಿ ಮಾಡಿ, ಅವನು ರೂಪಿಸಿದ ಕರುಗಳ ವಿಗ್ರಹಗಳಿಗೆ ಬಲಿಗಳನ್ನು ಅರ್ಪಿಸಲು ಬೇತೇಲಿನಲ್ಲಿ ತಾನು ನೇಮಿಸಿದ ಉನ್ನತ ಸ್ಥಳಗಳ ಯಾಜಕರನ್ನೇ ಇರಿಸಿದನು.
तब यरोबोअम ने आठवें महीने के पन्द्रहवें दिन एक पर्व घोषित कर दिया. यह वैसा ही पर्व था, जो यहूदिया में मनाया जाता था. उसने बेथेल में वेदी पर उन बछड़ों के लिए, जो स्वयं उसने गढ़ी थी, बलियां चढ़ाईं. उसने बेथेल में उन पूजा की जगहों पर पुरोहित चुन लिए, जिन पूजा घरों को खुद उसी ने बनवाया था.
33 ಹೀಗೆ ಅವನು ತನ್ನ ಸ್ವಂತ ಹೃದಯದಲ್ಲಿ ಯೋಚಿಸಿದ ತಿಂಗಳಲ್ಲಿ ಎಂಟನೆಯ ತಿಂಗಳ ಹದಿನೈದನೆಯ ದಿವಸದಲ್ಲಿ ಅವನು ಬೇತೇಲಿನಲ್ಲಿ ಕಟ್ಟಿಸಿದ ಪೀಠದ ಮೇಲೆ ಬಲಿಗಳನ್ನರ್ಪಿಸಿ, ಇಸ್ರಾಯೇಲರಿಗೆ ಹಬ್ಬವನ್ನು ನೇಮಿಸಿದನು. ಇದಲ್ಲದೆ ತಾನೇ ಪೀಠದ ಮೇಲೆ ಬಲಿಗಳನ್ನರ್ಪಿಸಿ ಧೂಪವನ್ನು ಸುಟ್ಟನು.
वह बेथेल में अपनी ही बनाई हुई वेदी पर आठवें महीने के पन्द्रहवें दिन गया, और यह महीना और दिन खुद उसने अपनी ही बुद्धि से निश्चित किया था. इस प्रकार उसने इस्राएली प्रजा के लिए यह उत्सव ठहराया था, फिर वह धूप जलाने वेदी पर गया.

< ಅರಸುಗಳು - ಪ್ರಥಮ ಭಾಗ 12 >