< ಅರಸುಗಳು - ಪ್ರಥಮ ಭಾಗ 18 >
1 ಅನೇಕ ದಿವಸಗಳಾದ ತರುವಾಯ, ಮೂರನೆಯ ವರ್ಷದಲ್ಲಿ, ಯೆಹೋವ ದೇವರ ವಾಕ್ಯವು ಎಲೀಯನಿಗೆ ಬಂದಿತು, “ನೀನು ಹೋಗಿ ಅಹಾಬನಿಗೆ ನಿನ್ನನ್ನು ಪ್ರಕಟಿಸಿಕೋ. ಆಗ ನಾನು ಭೂಮಿಯ ಮೇಲೆ ಮಳೆಯನ್ನು ಕಳುಹಿಸುವೆನು,” ಎಂದು ಹೇಳಿದರು.
एक लंबे समय के बाद, तीसरे साल में एलियाह को याहवेह का यह आदेश प्राप्त हुआ: “जाओ, स्वयं को अहाब के सामने पेश करो. मैं पृथ्वी पर बारिश भेज रहा हूं.”
2 ಎಲೀಯನು ಅಹಾಬನಿಗೆ ತನ್ನನ್ನು ಪ್ರಕಟಿಸಿಕೊಳ್ಳಲು ಹೋದನು. ಆದರೆ ಸಮಾರ್ಯದಲ್ಲಿ ಬರವು ಘೋರವಾಗಿತ್ತು.
तब एलियाह अपने आपको अहाब की उपस्थिति में प्रस्तुत करने चले गए. इस समय शमरिया में अकाल बहुत ही भारी था.
3 ಅಹಾಬನು ತನ್ನ ಮನೆಯ ಉಗ್ರಾಣಿಕನಾದ ಓಬದ್ಯನನ್ನು ಕರೆದನು. ಓಬದ್ಯನು ಯೆಹೋವ ದೇವರಿಗೆ ಬಹಳ ಭಯಭಕ್ತಿವುಳ್ಳವನಾಗಿದ್ದನು.
अहाब ने ओबदयाह को बुलवाया. ओबदयाह याहवेह का बड़ा भक्त था.
4 ಈಜೆಬೆಲಳು ಯೆಹೋವ ದೇವರ ಪ್ರವಾದಿಗಳನ್ನು ಕೊಲ್ಲುತ್ತಿದ್ದಾಗ, ಓಬದ್ಯನು ನೂರು ಮಂದಿ ಪ್ರವಾದಿಗಳನ್ನು ತೆಗೆದುಕೊಂಡು, ಐವತ್ತು ಮಂದಿಯಾಗಿ ಅವರನ್ನು ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು, ಅವರನ್ನು ಸಂರಕ್ಷಣೆ ಮಾಡುತ್ತಾ ಇದ್ದನು.
वास्तव में जब ईजेबेल ने याहवेह के भविष्यवक्ताओं को मारना शुरू किया था, ओबदयाह ने सौ भविष्यवक्ताओं को पचास-पचास करके गुफा में छिपा रखा था और वह उनके लिए भोजन और जल का प्रबंध करते रहे थे.
5 ಅಹಾಬನು ಓಬದ್ಯನಿಗೆ, “ನೀನು ದೇಶದಲ್ಲಿರುವ ಎಲ್ಲಾ ನೀರಿನ ಬುಗ್ಗೆಗಳ ಬಳಿಗೂ, ಎಲ್ಲಾ ಹಳ್ಳಗಳ ಬಳಿಗೂ ಹೋಗು. ನಾವು ಸಮಸ್ತ ಪಶುಗಳನ್ನು ಕಳೆದುಕೊಳ್ಳದ ಹಾಗೆ ಕುದುರೆಗಳನ್ನೂ, ಹೇಸರಗತ್ತೆಗಳನ್ನೂ ಜೀವದಿಂದ ಇರಿಸುವುದಕ್ಕೆ ನಮಗೆ ಒಂದು ವೇಳೆ ಹುಲ್ಲು ದೊರಕಬಹುದು. ಆಗ ನಾವು ಅವುಗಳನ್ನು ಕೊಲ್ಲುವ ಅವಶ್ಯಕತೆ ಇರುವುದಿಲ್ಲ,” ಎಂದನು.
अहाब ने ओबदयाह से कहा, “सारे देश में जाकर जल के सोतों और घाटियों की खोज करो. संभव है हमें हमारे घोड़ों और खच्चरों के लिए चारा मिल ही जाए और उनके प्राण बच जाएं. इस प्रकार हमारे पशु नाश होने से बच जाएंगे.”
6 ಅವರು ದೇಶವನ್ನು ಹಾದು ಹೋಗಲು, ಅದನ್ನು ವಿಭಾಗ ಮಾಡಿಕೊಂಡು ಅಹಾಬನು ಒಂದು ಮಾರ್ಗದಲ್ಲಿಯೂ, ಓಬದ್ಯನು ಮತ್ತೊಂದು ಮಾರ್ಗದಲ್ಲಿಯೂ ಪ್ರತ್ಯೇಕವಾಗಿ ಹೋದರು.
इसके लिए अहाब और ओबदयाह ने सारे देश को दो भागों में बांट लिया. अहाब एक दिशा में चला गया और ओबदयाह अकेले दूसरी दिशा में.
7 ಓಬದ್ಯನು ಮಾರ್ಗದಲ್ಲಿ ಹೋಗುತ್ತಿರುವಾಗ, ಎಲೀಯನು ಅವನನ್ನು ಸಂಧಿಸಿದನು. ಓಬದ್ಯನು ಅವನನ್ನು ಗುರುತಿಸಿ ಸಾಷ್ಟಾಂಗ ನಮಸ್ಕಾರಮಾಡಿ, “ನೀನು ನನ್ನ ಒಡೆಯನಾದ ಎಲೀಯನಲ್ಲವೋ?” ಎಂದನು.
जब ओबदयाह मार्ग में ही थे कि उनकी भेंट एलियाह से हो गई. ओबदयाह ने उन्हें पहचान लिया. भूमि पर मुख के बल होकर उन्होंने एलियाह से कहा, “क्या आप ही मेरे स्वामी एलियाह हैं?”
8 ಎಲೀಯನು ಅವನಿಗೆ, “ನಾನೇ, ನೀನು ಹೋಗಿ, ‘ಎಲೀಯನು ಇಲ್ಲಿದ್ದಾನೆ’ ಎಂದು ನಿನ್ನ ಯಜಮಾನನಿಗೆ ಹೇಳು,” ಎಂದನು.
एलियाह ने उत्तर दिया, “हां. जाकर अपने स्वामी को सूचित करो, ‘देखिए, एलियाह आ गया है.’”
9 ಅದಕ್ಕವನು, “ಅಹಾಬನು ನನ್ನನ್ನು ಕೊಂದುಹಾಕುವ ಹಾಗೆ ನೀನು ನಿನ್ನ ಸೇವಕನನ್ನು ಅವನ ಕೈಯಲ್ಲಿ ಒಪ್ಪಿಸಿಕೊಡಲು ನಾನೇನು ಪಾಪಮಾಡಿದೆನು?
ओबदयाह ने उन्हें उत्तर दिया, “मुझसे ऐसा कौन सा पाप हो गया है,” जो आप मृत्यु दंड के लिए मुझे अहाब के हाथों में सौंप रहे हैं?
10 ನಿನ್ನ ದೇವರಾದ ಯೆಹೋವ ದೇವರ ಜೀವದಾಣೆ, ನನ್ನ ಯಜಮಾನನು ನಿನ್ನನ್ನು ಹುಡುಕಲು ಕಳುಹಿಸದ ಜನಾಂಗವೂ, ರಾಜ್ಯವೂ ಒಂದೂ ಇಲ್ಲ. ಅವರು, ‘ಎಲೀಯನು ನಮ್ಮಲ್ಲಿ ಇಲ್ಲ,’ ಎಂದು ಹೇಳಿದಾಗ, ಅಹಾಬನು ಆ ರಾಜ್ಯಕ್ಕೂ, ಜನಾಂಗಕ್ಕೂ ಆಣೆ ಇಡಿಸಿಕೊಂಡನು.
“याहवेह, आपके जीवित परमेश्वर की शपथ, न तो कोई ऐसा देश है न ऐसा राष्ट्र, जहां मेरे स्वामी ने आपको खोजने किसी को न भेजा हो. और जब उन्हें यह सूचना दी गयी, एलियाह तो यहां भी नहीं है, वह उस देश और राष्ट्र से शपथ खिलाई, कि खोजने पर भी उन्हें आप नहीं मिले.
11 ಈಗ ನೀನು, ‘ಇಗೋ, ಎಲೀಯನು ಇಲ್ಲಿದ್ದಾನೆಂದು ನಿನ್ನ ಯಜಮಾನನಿಗೆ ತಿಳಿಸು,’ ಎಂದು ಹೇಳುತ್ತೀ.
और यहां आपका आदेश है, जाकर अपने स्वामी को बताओ, ‘देखिए, यहां है एलियाह!’
12 ನಾನು ನಿನ್ನನ್ನು ಬಿಟ್ಟು ಹೋಗುವಾಗ, ಯೆಹೋವ ದೇವರ ಆತ್ಮರು ನಾನರಿಯದ ಸ್ಥಳಕ್ಕೆ ನಿನ್ನನ್ನು ಒಯ್ಯುವರು. ನಾನು ಬಂದು ಅಹಾಬನಿಗೆ ತಿಳಿಸಿದಾಗ, ಅವನು ನಿನ್ನನ್ನು ಕಾಣದೆ ಹೋದರೆ ನನ್ನನ್ನು ಕೊಂದುಹಾಕುವನು. ಆದರೆ ನಿನ್ನ ಸೇವಕನಾದ ನಾನು ನನ್ನ ಚಿಕ್ಕಂದಿನಿಂದ ಯೆಹೋವ ದೇವರನ್ನು ಆರಾಧಿಸುತ್ತೇನೆ.
मैं जैसे ही यहां आपको छोड़कर जाऊंगा, याहवेह के आत्मा आपको न जाने कहां ले जाएंगे. और जब मैं अहाब को सूचना दूंगा और वह आपको यहां नहीं पाएंगे, वह तो मुझे मृत्यु दंड दे देंगे, जबकि मैं आपका सेवक बचपन से याहवेह के लिए भय रखता आया हूं.
13 ಈಜೆಬೆಲಳು ಪ್ರವಾದಿಗಳನ್ನು ಕೊಲ್ಲುತ್ತಿದ್ದ ಸಮಯದಲ್ಲಿ ಯೆಹೋವ ದೇವರ ಪ್ರವಾದಿಗಳನ್ನು ನೂರು ಮಂದಿಯನ್ನು, ಐವತ್ತು ಐವತ್ತು ಮಂದಿಯಾಗಿ ಗವಿಯಲ್ಲಿ ಬಚ್ಚಿಟ್ಟು, ಅವರಿಗೆ ಆಹಾರವನ್ನೂ, ನೀರನ್ನೂ ಕೊಟ್ಟು ಸಂರಕ್ಷಿಸಿದ್ದು ನನ್ನ ಯಜಮಾನನಾದ ನೀನು ಕೇಳಿಸಿಕೊಳ್ಳಲಿಲ್ಲವೇ?
क्या मेरे स्वामी को इस विषय में बताया नहीं गया, कि जब ईजेबेल ने याहवेह के भविष्यवक्ताओं की हत्या कर दी थी, मैंने उस स्थिति में क्या किया था, मैंने कैसे याहवेह के सौ भविष्यवक्ताओं को पचास-पचास करके गुफा में छिपा दिया था और उनके लिए भोजन और जल की व्यवस्था की थी?
14 ಆದರೆ ಈಗ ನನ್ನ ಯಜಮಾನನು ನನ್ನನ್ನು ಕೊಂದುಹಾಕುವ ಹಾಗೆ, ‘ಎಲೀಯನು ಇದ್ದಾನೆ ಎಂದು ನೀನು ಹೋಗಿ ಅವನಿಗೆ ಹೇಳು,’ ಎಂಬುದಾಗಿ ನೀನು ಹೇಳುತ್ತೀ,” ಎಂದನು.
और अब आप आदेश दे रहे है, जाकर अपने स्वामी को सूचना दो, ‘देखिए, यहां है एलियाह.’ अहाब तो ज़रूर मेरी हत्या कर देंगे!”
15 ಅದಕ್ಕೆ ಎಲೀಯನು, “ನಾನು ಸನ್ನಿಧಿಸೇವೆ ಮಾಡುತ್ತಿರುವ ಸೇನಾಧೀಶ್ವರ ಯೆಹೋವ ದೇವರಾಣೆ, ಇಂದು ನನ್ನನ್ನು ಅವನಿಗೆ ತೋರಿಸಿಕೊಳ್ಳುವೆನು,” ಎಂದನು.
एलियाह ने उन्हें उत्तर दिया, “मैं जिनका सेवक हूं, उस जीवित, सेनाओं के याहवेह की शपथ, आज मैं निश्चित ही अपने आपको अहाब के सामने प्रस्तुत करूंगा.”
16 ಹೀಗೆ ಓಬದ್ಯನು ಅಹಾಬನೆದುರಿಗೆ ಹೋಗಿ ತಿಳಿಸಿದ್ದರಿಂದ ಅಹಾಬನು ಎಲೀಯನನ್ನು ಎದುರುಗೊಳ್ಳಲು ಹೋದನು.
तब ओबदयाह अहाब से भेंटकरने चले गए. और उन्हें यह सूचना दे दी. अहाब एलियाह से मिलने चला.
17 ಅಹಾಬನು ಎಲೀಯನನ್ನು ಕಂಡಾಗ ಅವನಿಗೆ, “ಇಸ್ರಾಯೇಲನ್ನು ಕಷ್ಟಕ್ಕೆ ಒಳಪಡಿಸುವವನು ನೀನಲ್ಲವೋ?” ಎಂದನು.
एलियाह को देखते ही अहाब कह उठा, “अच्छा तुम्हीं हो इस्राएल के सतानेवाले!”
18 ಅದಕ್ಕೆ ಅವನು, “ನಾನು ಇಸ್ರಾಯೇಲನ್ನು ಕಳವಳಪಡಿಸುವುದಿಲ್ಲ. ಆದರೆ ನೀನೂ, ನಿನ್ನ ತಂದೆಯ ಕುಟುಂಬದವರೂ ಯೆಹೋವ ದೇವರ ಆಜ್ಞೆಯನ್ನು ತೊರೆದುಬಿಟ್ಟು, ಬಾಳನನ್ನು ಹಿಂಬಾಲಿಸುವ ನೀವೇ ಕಳವಳಪಡಿಸುವವರು.
एलियाह ने उत्तर दिया, “सतानेवाला मैं नहीं, आप और आपके पिता का परिवार है. आप हैं जिन्होंने याहवेह के आदेशों को टाला है और बाल देवताओं का अनुसरण किया है.
19 ಆದ್ದರಿಂದ ನೀನು ಕರ್ಮೆಲು ಬೆಟ್ಟದ ಬಳಿಯಲ್ಲಿ ಸಮಸ್ತ ಇಸ್ರಾಯೇಲನ್ನೂ, ಬಾಳನ ನಾನೂರ ಐವತ್ತು ಮಂದಿ ಪ್ರವಾದಿಗಳನ್ನೂ, ಈಜೆಬೆಲಳ ಮೇಜಿನ ಹತ್ತಿರ ಭೋಜನಮಾಡುವ ಅಶೇರನ ನಾನೂರು ಮಂದಿ ಪ್ರವಾದಿಗಳನ್ನೂ ನನ್ನ ಬಳಿಗೆ ಕೂಡಿಸು,” ಎಂದನು.
इसलिये अब मेरे सामने कर्मेल पर्वत पर सारे इस्राएल को इकट्ठा होने के लिए आदेश भेजिए. इसके अलावा बाल के चार सौ पचास और अशेरा के चार सौ भविष्यवक्ताओं को भी बुलाइए, जो ईजेबेल की मेज़ पर भोजन करते हैं.”
20 ಹೀಗೆ ಅಹಾಬನು ಇಸ್ರಾಯೇಲರೆಲ್ಲರನ್ನೂ ಕರೆಯಿಸಿ, ಕರ್ಮೆಲು ಬೆಟ್ಟದ ಬಳಿಯಲ್ಲಿ ಪ್ರವಾದಿಗಳನ್ನು ಕೂಡಿಸಿದನು.
तब अहाब ने सारे इस्राएल और भविष्यवक्ताओं को कर्मेल पर्वत पर इकट्ठा होने का आदेश दिया.
21 ಆಗ ಎಲೀಯನು ಸಕಲ ಜನರ ಬಳಿಗೆ ಬಂದು, “ನೀವು ಎರಡು ಅಭಿಪ್ರಾಯಗಳ ಮಧ್ಯದಲ್ಲಿ ಎಷ್ಟರವರೆಗೂ ನಿಂತುಕೊಂಡಿರುವಿರಿ? ಯೆಹೋವ ದೇವರು ದೇವರಾಗಿದ್ದರೆ, ಅವರನ್ನೇ ಹಿಂಬಾಲಿಸಿರಿ; ಬಾಳನು ದೇವರಾಗಿದ್ದರೆ, ಅವನನ್ನೇ ಹಿಂಬಾಲಿಸಿರಿ,” ಎಂದನು. ಜನರು ಅವನಿಗೆ ಒಂದು ಮಾತಾದರೂ ಹೇಳಲಿಲ್ಲ.
एलियाह ने भीड़ के निकट आकर कहा, “दो मतों के बीच तुम लोग और कब तक डगमगाते रहोगे? यदि याहवेह ही परमेश्वर हैं तो उनका अनुसरण करो; और अगर बाल, तो उसका.” इसके उत्तर में लोग एक शब्द तक न कह सके.
22 ಆಗ ಎಲೀಯನು ಜನರಿಗೆ, “ಯೆಹೋವ ದೇವರ ಪ್ರವಾದಿಗಳಲ್ಲಿ ನಾನೊಬ್ಬನೇ ಉಳಿದಿದ್ದೇನೆ. ಆದರೆ ಬಾಳನ ಪ್ರವಾದಿಗಳು ನಾನೂರ ಐವತ್ತು ಮಂದಿಯಿದ್ದಾರೆ.
तब एलियाह ने भीड़ को कहा, “सिर्फ मैं; याहवेह का भविष्यद्वक्ता बाकी रह गया हूं, मगर बाल के भविष्यद्वक्ता चार सौ पचास व्यक्ति हैं.
23 ಈಗ ಎರಡು ಹೋರಿಗಳನ್ನು ಅವರು ನಮಗೆ ಕೊಡಲಿ. ಒಂದು ಹೋರಿಯನ್ನು ಅವರು ಆಯ್ದುಕೊಂಡು, ಅದನ್ನು ತುಂಡುತುಂಡಾಗಿ ಕಡಿದು, ಬೆಂಕಿ ಹಾಕದೆ, ಕಟ್ಟಿಗೆಗಳ ಮೇಲೆ ಇಡಲಿ. ನಾನು ಇನ್ನೊಂದು ಹೋರಿಯನ್ನು ಹಾಗೆ ಮಾಡಿ, ಬೆಂಕಿ ಹಾಕದೆ ಕಟ್ಟಿಗೆಗಳ ಮೇಲೆ ಇಡುವೆನು.
हमें दो बछड़े दिए जाएं. उन्हें अपने लिए बछड़ा चुनने दिया जाए. वे उसके टुकड़े कर लकड़ी पर सजा दें, मगर लकड़ी में आग न लगाई जाए. मैं भी दूसरे बछड़े को तैयार कर लकड़ी पर सजाऊंगा मगर उसमें आग न लगाऊंगा.
24 ನೀವು ನಿಮ್ಮ ದೇವರ ಹೆಸರು ಹೇಳಿ ಪ್ರಾರ್ಥಿಸಿರಿ; ಅನಂತರ ನಾನು ಯೆಹೋವ ದೇವರ ಹೆಸರು ಹೇಳಿ ಪ್ರಾರ್ಥಿಸುವೆನು. ಅವರಿಬ್ಬರಲ್ಲಿ ಯಾರು ಆಲಿಸಿ, ಬೆಂಕಿಯನ್ನು ಕಳುಹಿಸುವರೋ, ಅವರೇ ದೇವರೆಂದು ನಿಶ್ಚಯಿಸೋಣ,” ಎಂದನು. ಅದಕ್ಕೆ ಜನರೆಲ್ಲರು ಉತ್ತರವಾಗಿ, “ಈ ಮಾತು ಸರಿ,” ಎಂದರು.
तुम लोग अपने देवता की दोहाई देना और मैं याहवेह की दोहाई दूंगा. परमेश्वर वही होगा, जो आग के द्वारा उत्तर देगा.” भीड़ ने एक स्वर में उत्तर दिया, “अच्छा विचार है यह!”
25 ಆಗ ಎಲೀಯನು ಬಾಳನ ಪ್ರವಾದಿಗಳಿಗೆ, “ನೀವು ಅನೇಕರಾಗಿರುವುದರಿಂದ ಒಂದು ಹೋರಿಯನ್ನು ಆಯ್ದುಕೊಂಡು, ಅದನ್ನು ಮೊದಲು ಸಿದ್ಧಮಾಡಿ, ನಿಮ್ಮ ದೇವರುಗಳ ಹೆಸರನ್ನು ಕರೆಯಿರಿ. ಆದರೆ ಬೆಂಕಿಯನ್ನು ಹೊತ್ತಿಸಬೇಡಿರಿ,” ಎಂದನು.
एलियाह ने बाल के भविष्यवक्ताओं के सामने प्रस्ताव रखा, “अपने लिए एक बछड़ा चुन लो और पहले तुम इसे तैयार करो, क्योंकि तुम लोग गिनती में अधिक हो. अपने देवता की दोहाई दो, मगर उसमें आग न लगाना.”
26 ಅವರು ತಮಗೆ ಕೊಟ್ಟ ಹೋರಿಯನ್ನು ತೆಗೆದುಕೊಂಡು ಸಿದ್ಧಪಡಿಸಿದರು. “ಬಾಳನೇ, ನಮಗೆ ಕಿವಿಗೊಡು,” ಎಂದು ಉದಯದಿಂದ ಮಧ್ಯಾಹ್ನದವರೆಗೂ ಬಾಳನ ಹೆಸರನ್ನು ಕರೆಯುತ್ತಿದ್ದರು. ಆದರೆ ಒಂದು ಶಬ್ದವಾಗಲಿ, ಉತ್ತರ ಕೊಡುವವನಾಗಲಿ ಇರಲಿಲ್ಲ. ಅವರು ಮಾಡಿದ ಬಲಿಪೀಠದ ಹತ್ತಿರ ಕುಣಿದಾಡಿದರು.
उन्होंने उन्हें दिए गए बछड़े को लेकर उसे बलि के लिए तैयार किया और उन्होंने बाल को बलि देनी शुरू की और सुबह से दोपहर तक वे यह कहकर दोहाई देते रहे, “हे बाल, हमारी सुनो!” किंतु न तो कोई आवाज ही सुनी गई और न किसी से कोई उत्तर ही मिला. वे अपनी बनाई हुई वेदी के आस-पास उछलते-कूदते रहे.
27 ಮಧ್ಯಾಹ್ನದಲ್ಲಿ ಎಲೀಯನು ಅವರನ್ನು ಗೇಲಿಮಾಡಿ ಅವರಿಗೆ, “ದೊಡ್ಡ ಶಬ್ದದಿಂದ ಕೂಗಿರಿ, ಏಕೆಂದರೆ ಅವನು ಒಬ್ಬ ದೇವರಲ್ಲವೇ? ಒಂದು ವೇಳೆ ಅವನು ಧ್ಯಾನದಲ್ಲಿರಬಹುದು; ಇಲ್ಲವೆ ಯಾವುದೋ ಕೆಲಸದಲ್ಲಿರಬಹುದು; ಇಲ್ಲವೆ ಪ್ರಯಾಣದಲ್ಲಿದ್ದಾನೆ; ಇಲ್ಲವೆ ಅವನು ನಿದ್ದೆಯಲ್ಲಿದ್ದಾನೆ; ಈಗ ಅವನು ಎಚ್ಚರವಾಗಬೇಕು,” ಎಂದನು.
दोपहर के समय एलियाह ने उनका मज़ाक उड़ाकर कहा: “थोड़ा ऊंची आवाज में पुकारो! वह देवता है, हो सकता है वह ध्यानमग्न होगा, या वह शौच के लिए गया होगा या यह भी संभव है कि वह यात्रा पर गया हो या वह गहरी नींद में हो, जिसे जगाना ज़रूरी हो गया है.”
28 ಅವರು ದೊಡ್ಡ ಶಬ್ದದಿಂದ ಕೂಗಿ, ತಮ್ಮ ಕ್ರಮದ ಪ್ರಕಾರವೇ ರಕ್ತವು ತಮ್ಮ ಮೇಲೆ ಸೋರುವ ಮಟ್ಟಿಗೂ ಖಡ್ಗಗಳಿಂದಲೂ, ಚೂರಿಗಳಿಂದಲೂ ತಮ್ಮನ್ನು ಕೊಯ್ದುಕೊಂಡರು.
तब वे ऊंची आवाज में चिल्लाते हुए अपनी प्रथा के अनुसार तलवारों और बर्छियों से अपने आपको छेदने लगे, जिससे उनकी देह लहूलुहान हो गई.
29 ಮಧ್ಯಾಹ್ನವಾದ ತರುವಾಯ ಸಾಯಂಕಾಲದ ಬಲಿ ಅರ್ಪಿಸುವ ವೇಳೆಯವರೆಗೂ ಪರವಶರಾಗಿ ಕೂಗುತ್ತಾ ಇದ್ದರು. ಆದರೆ ಶಬ್ದವಾದರೂ, ಉತ್ತರ ಕೊಡುವವನಾದರೂ, ಲಕ್ಷಿಸುವವನಾದರೂ ಇರಲಿಲ್ಲ.
दोपहर के बाद, वे संध्या बलि तक आवेश में पागलों जैसे बड़बड़ाते रहे, मगर कहीं से कोई आवाज सुनाई नहीं दी. न किसी ने उत्तर दिया न किसी ने इनकी ओर ध्यान दिया.
30 ಆಗ ಎಲೀಯನು ಸಮಸ್ತ ಜನರಿಗೂ, “ನನ್ನ ಬಳಿಗೆ ಬನ್ನಿರಿ,” ಎಂದನು. ಜನರೆಲ್ಲರು ಅವನ ಬಳಿಗೆ ಬಂದರು. ಕಿತ್ತು ಹಾಕಿದ ಯೆಹೋವ ದೇವರ ಬಲಿಪೀಠವನ್ನು ಅವನು ದುರಸ್ತಿ ಮಾಡಿದನು.
तब सभी लोगों को एलियाह ने कहा, “मेरे पास आओ.” सभी उनके पास आ गए. एलियाह ने याहवेह की वेदी की मरम्मत की थी, जो इस समय टूटी-फूटी थी.
31 “ನಿನಗೆ ಇಸ್ರಾಯೇಲನೆಂಬ ಹೆಸರುಂಟಾಗಿರುವುದು,” ಎಂದು ಯೆಹೋವ ದೇವರ ವಾಕ್ಯವು ಬಂದ ಯಾಕೋಬನ ಮಕ್ಕಳ ಗೋತ್ರಗಳ ಲೆಕ್ಕದ ಪ್ರಕಾರ, ಎಲೀಯನು ಹನ್ನೆರಡು ಕಲ್ಲುಗಳನ್ನು ತೆಗೆದುಕೊಂಡು,
एलियाह ने, जिस याकोब से याहवेह का यह वादा था, “तुम्हारे नाम इस्राएल होगा,” उस याकोब के पुत्रों के गोत्रों की गिनती के अनुसार बारह पत्थर इकट्ठे किए थे.
32 ಆ ಕಲ್ಲುಗಳಿಂದ ಯೆಹೋವ ದೇವರ ಹೆಸರಿಗೆ ಬಲಿಪೀಠವನ್ನು ಕಟ್ಟಿ, ಆ ಬಲಿಪೀಠದ ಸುತ್ತಲೂ ಇಪ್ಪತ್ತು ಸೇರು ಬೀಜವರೀ ನೆಲವನ್ನು ಅಗೆಸಿ, ಒಂದು ಕಾಲುವೆಯನ್ನು ಮಾಡಿದನು.
एलियाह ने इन बारह पत्थरों को लेकर याहवेह के सम्मान में एक वेदी बनाई. इसके बाद उन्होंने वेदी के चारों ओर ऐसी गहरी नाली खोद दी, जिसमें लगभग ग्यारह किलो बीज समा सकता था.
33 ತರುವಾಯ ಅವನು ಕಟ್ಟಿಗೆಗಳನ್ನು ಪೀಠದ ಮೇಲೆ ಇಟ್ಟು, ಹೋರಿಯನ್ನು ತುಂಡುತುಂಡಾಗಿ ಕಡಿದು, ಕಟ್ಟಿಗೆಗಳ ಮೇಲೆ ಇಟ್ಟು, “ನೀವು ನಾಲ್ಕು ಕೊಡ ನೀರು ತುಂಬಿಕೊಂಡು ದಹನಬಲಿಯ ಮೇಲೆಯೂ, ಕಟ್ಟಿಗೆಗಳ ಮೇಲೆಯೂ ಹೊಯ್ಯಿರಿ,” ಎಂದನು.
फिर उन्होंने लकड़ी काटकर वेदी पर सजाकर रख दी और बछड़े को टुकड़े-टुकड़े कर लकड़ियों पर सजा दिया. इसके बाद उन्होंने उन्हें आदेश दिया, “चार घड़े जल से भरकर सारा जल होमबलि और लकड़ियों पर उंडेल दो.”
34 ಅವರು ಅವನು ಹೇಳಿದಂತೆ ಮಾಡಿದರು. ಆಗ ಎಲೀಯನು, “ಎರಡನೆಯ ಸಾರಿ ಹೊಯ್ಯಿರಿ,” ಎಂದನು. ಅವರು ಎರಡನೆಯ ಸಾರಿಯೂ ಹೊಯ್ದರು. ಮೂರನೆಯ ಸಾರಿ, “ಹೊಯ್ಯಿರಿ,” ಎಂದನು. ಮೂರನೆಯ ಸಾರಿಯೂ ಹೊಯ್ದರು.
फिर उन्होंने कहा, “यही एक बार फिर करो.” उन्होंने वैसा ही किया. फिर एलियाह ने कहा, “यही एक बार फिर करो.” उन्होंने यह सब तीसरी बार भी किया.
35 ಆದ್ದರಿಂದ ನೀರು ಬಲಿಪೀಠದ ಸುತ್ತಲೂ ಹರಿಯಿತು. ಇದಲ್ಲದೆ ಅವನು ಕಾಲುವೆಯನ್ನು ನೀರಿನಿಂದ ತುಂಬಿಸಿದನು.
जल वेदी के चारों ओर बह निकला, और नालियां तक जल से भर गईं.
36 ಸಾಯಂಕಾಲದ ಬಲಿಯನ್ನು ಅರ್ಪಿಸುವ ವೇಳೆಯಲ್ಲಿ ಪ್ರವಾದಿಯಾದ ಎಲೀಯನು ಬಲಿಪೀಠದ ಸಮೀಪಕ್ಕೆ ಬಂದು, “ಅಬ್ರಹಾಮನಿಗೂ, ಇಸಾಕನಿಗೂ, ಇಸ್ರಾಯೇಲಿಗೂ ದೇವರಾದ ಯೆಹೋವ ದೇವರೇ, ಇಸ್ರಾಯೇಲಿನಲ್ಲಿ ನೀವೇ ದೇವರೆಂದೂ, ನಾನು ನಿಮ್ಮ ಸೇವಕನೆಂದೂ, ನಾನು ಈ ಕಾರ್ಯಗಳನ್ನೆಲ್ಲಾ ನಿಮ್ಮ ಮಾತಿನ ಹಾಗೆಯೇ ಮಾಡಿದ್ದೇನೆಂದೂ ಇಂದು ತೋರಿಸಿಕೊಡಿರಿ.
शाम की बलि चढ़ाने के समय भविष्यद्वक्ता एलियाह ने वेदी के निकट आकर यह दोहाई दी, “याहवेह, अब्राहाम, यित्सहाक और याकोब के परमेश्वर, आज यह सबको पता चल जाए कि इस्राएल देश में परमेश्वर सिर्फ आप ही हैं, और यह भी कि मैं आपका सेवक हूं, और यह सब मैंने सिर्फ आपके ही आदेश पर किया है.
37 ನೀವು ದೇವರಾದ ಯೆಹೋವ ದೇವರೆಂದೂ, ನೀವು ಅವರ ಹೃದಯವನ್ನು ತಿರುಗಿಸಿದ್ದೀರೆಂದೂ ಈ ಜನರು ತಿಳಿಯುವ ಹಾಗೆ ನನಗೆ ಉತ್ತರಕೊಡಿರಿ. ಯೆಹೋವ ದೇವರೇ, ನನಗೆ ಉತ್ತರಕೊಡಿರಿ” ಎಂದು ಬೇಡಿದನು.
याहवेह, मुझे उत्तर दीजिए, मुझे उत्तर दीजिए, कि ये लोग जान जाएं कि आप, याहवेह, ही परमेश्वर हैं, और आपने ही उनके हृदय अपनी ओर दोबारा फेर लिए हैं.”
38 ಕೂಡಲೇ ಯೆಹೋವ ದೇವರ ಬೆಂಕಿಯು ಇಳಿದುಬಂದು, ದಹನಬಲಿಯನ್ನೂ, ಕಟ್ಟಿಗೆಗಳನ್ನೂ, ಕಲ್ಲುಗಳನ್ನೂ, ಮಣ್ಣನ್ನೂ ಸುಟ್ಟುಬಿಟ್ಟು, ಕಾಲುವೆಯಲ್ಲಿದ್ದ ನೀರನ್ನು ಹೀರಿಬಿಟ್ಟಿತು.
यह पूरा होते ही याहवेह द्वारा भेजी गई आग गिरी! उससे होमबलि, लकड़ियां, पत्थर और धूल, सभी कुछ भस्म हो गया, और आग नाली में भरा जल चट कर गई.
39 ಜನರೆಲ್ಲರು ಇದನ್ನು ಕಂಡಾಗ ಬೋರಲು ಬಿದ್ದು, “ಯೆಹೋವ ದೇವರೇ ದೇವರು! ಯೆಹೋವ ದೇವರೇ ದೇವರು!” ಎಂದರು.
जब उन सबने यह सब देखा, वे मुंह के बल ज़मीन पर गिरकर यह स्वीकारने लगे, “याहवेह ही परमेश्वर हैं, याहवेह ही परमेश्वर हैं.”
40 ಆಗ ಎಲೀಯನು ಅವರಿಗೆ, “ನೀವು ಬಾಳನ ಪ್ರವಾದಿಗಳನ್ನು ಹಿಡಿಯಿರಿ. ಅವರಲ್ಲಿ ಒಬ್ಬನೂ ತಪ್ಪಿಸಿಕೊಳ್ಳದೆ ಇರಲಿ,” ಎಂದನು. ಇವರು ಅವರನ್ನು ಹಿಡಿದರು. ಎಲೀಯನು ಅವರನ್ನು ಕೀಷೋನು ಹಳ್ಳದ ಬಳಿಗೆ ತೆಗೆದುಕೊಂಡುಹೋಗಿ ಅಲ್ಲಿ ಅವರನ್ನು ಕೊಂದುಹಾಕಿದನು.
एलियाह ने उन्हें आदेश दिया, “बाल के भविष्यवक्ताओं को पकड़ लो; एक भी बचने न पाए.” उन्होंने उन्हें पकड़ लिया. एलियाह उन्हें कीशोन नाले पर ले गए और वहां उन सबको मार दिया.
41 ಅನಂತರ ಎಲೀಯನು ಅಹಾಬನಿಗೆ, “ನೀನು ಹೋಗಿ ತಿಂದು, ಕುಡಿ. ಏಕೆಂದರೆ ದೊಡ್ಡಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.
एलियाह ने अहाब से कहा, “उठिए, और भोजन कर लीजिए. मुझे मूसलाधार बारिश की आवाज सुनाई दे रही है.”
42 ಅಹಾಬನು ತಿಂದು, ಕುಡಿಯುವುದಕ್ಕೆ ಹೋದನು. ಎಲೀಯನು ಕರ್ಮೆಲಿನ ಶಿಖರವನ್ನು ಏರಿ, ನೆಲದ ಮೇಲೆ ಬಿದ್ದು, ತನ್ನ ಮೊಣಕಾಲಿನ ಮಧ್ಯೆ ತಲೆಯನ್ನಿಟ್ಟನು.
तब अहाब भोजन करने चला गया. एलियाह कर्मेल पर्वत के शिखर पर चले गए. उन्होंने भूमि की ओर झुककर अपने चेहरे को घुटनों में छिपा लिया.
43 ತನ್ನ ಸೇವಕನಿಗೆ, “ನೀನು ಹೋಗಿ ಸಮುದ್ರದ ಕಡೆಗೆ ನೋಡು,” ಎಂದನು. ಅವನು ಹೋಗಿ ನೋಡಿ, “ಏನೂ ಇಲ್ಲ,” ಎಂದನು. ಅವನು, “ಏಳು ಸಾರಿ ತಿರುಗಿ ಹೋಗಿ ನೋಡು,” ಎಂದನು.
और अपने सेवक को आदेश दिया, “जाकर समुद्र की दिशा में देखते रहो.” उसने जाकर देखा और सूचना दी. “वहां तो कुछ भी नहीं है!” एलियाह ने यह आदेश सात बार दिया “जाकर फिर देखो!”
44 ಏಳನೆಯ ಸಾರಿ ಇವನು ಹೋಗಿ ನೋಡಿದಾಗ, “ಇಗೋ, ಸಮುದ್ರದಿಂದ ಒಂದು ಮನುಷ್ಯನ ಅಂಗೈಯಷ್ಟು ಚಿಕ್ಕ ಮೇಘವು ಏಳುತ್ತಿದೆ,” ಎಂದನು. ಆಗ, “ನೀನು ಹೋಗಿ ಅಹಾಬನಿಗೆ ಬೇಗನೇ ರಥವನ್ನು ತೆಗೆದುಕೊಂಡು ಮಳೆಯು ನಿನ್ನನ್ನು ತಡೆಯದಂತೆ ಇಳಿದುಹೋಗೆಂದು ಹೇಳು,” ಎಂದನು.
सातवीं बार सेवक ने सूचना दी, “देखिए-देखिए! मनुष्य की बांह के समान बादल का एक छोटा टुकड़ा समुद्र की सतह से उठ रहा है.” एलियाह ने सेवक को आदेश दिया, “जाकर अहाब से कहो, ‘अपना रथ तैयार कर पर्वत से नीचे उतर जाइए, कहीं ऐसा न हो कि आप बारिश में घिर जाएं.’”
45 ಆಗ ಇದ್ದಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ, ಗಾಳಿಯಿಂದಲೂ ಕಪ್ಪಾಗಿ ದೊಡ್ಡಮಳೆಯು ಉಂಟಾಯಿತು. ಅಹಾಬನು ರಥದಲ್ಲಿ ಏರಿ ಇಜ್ರೆಯೇಲ್ ಪಟ್ಟಣಕ್ಕೆ ಹೋದನು.
कुछ ही देर बाद आकाश बादलों से काला हो गया, क्योंकि हवा बहने लगी थी और मूसलाधार बारिश शुरू हो गई. अहाब रथ पर येज़्रील चला गया.
46 ಯೆಹೋವ ದೇವರ ಕೈ ಎಲೀಯನ ಮೇಲೆ ಇದ್ದುದರಿಂದ ಅವನು ತನ್ನ ಸಡಿಲವಾದ ಬಟ್ಟೆಗಳನ್ನು ನಡುಕಟ್ಟಿಕೊಂಡು ಇಜ್ರೆಯೇಲ್ ಪಟ್ಟಣದವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
याहवेह की कृपादृष्टि में एलियाह ने ऐसा बल पाया, कि उन्होंने अपने ढीले कपड़े समेटे और कमर कसकर दौड़ते हुए अहाब के रथ से आगे निकलकर येज़्रील तक पहुंच गए.