< ಅರಸುಗಳು - ಪ್ರಥಮ ಭಾಗ 2 >
1 ಆದರೆ ದಾವೀದನ ಸಾಯುವ ಕಾಲ ಸಮೀಪಿಸಿದ್ದರಿಂದ ಅವನು ತನ್ನ ಮಗ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,
१जब दाऊद के मरने का समय निकट आया, तब उसने अपने पुत्र सुलैमान से कहा,
2 “ಭೂಮಿಯಲ್ಲಿರುವವರೆಲ್ಲರು ಹೋಗುವ ಮಾರ್ಗವಾಗಿ ನಾನು ಹೋಗುತ್ತೇನೆ. ನೀನು ಬಲಗೊಂಡು ಶೂರನಾಗಿರು.
२“मैं संसार की रीति पर कूच करनेवाला हूँ इसलिए तू हियाव बाँधकर पुरुषार्थ दिखा।
3 ನಿನ್ನ ದೇವರಾದ ಯೆಹೋವ ದೇವರ ಆಜ್ಞೆಗಳನ್ನು ಅನುಸರಿಸಿ ಅವರ ಮಾರ್ಗದಲ್ಲೇ ನಡೆದುಕೋ; ಮೋಶೆಯ ನಿಯಮದಲ್ಲಿ ಬರೆದಿರುವ ಅವರ ಆಜ್ಞಾನಿಯಮಗಳಿಗೂ, ವಿಧಿನಿರ್ಣಯಗಳಿಗೂ ವಿಧೇಯನಾಗಿರು. ಹೀಗೆ ಮಾಡುವುದಾದರೆ ನೀನು ಏನು ಮಾಡಿದರೂ, ಎಲ್ಲಿ ಸಂಚರಿಸಿದರೂ ಎಲ್ಲಾದರಲ್ಲಿಯೂ ಯಶಸ್ವಿಯಾಗುವೆ.
३और जो कुछ तेरे परमेश्वर यहोवा ने तुझे सौंपा है, उसकी रक्षा करके उसके मार्गों पर चला करना और जैसा मूसा की व्यवस्था में लिखा है, वैसा ही उसकी विधियों तथा आज्ञाओं, और नियमों, और चितौनियों का पालन करते रहना; जिससे जो कुछ तू करे और जहाँ कहीं तू जाए, उसमें तू सफल होए;
4 ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.
४और यहोवा अपना वह वचन पूरा करे जो उसने मेरे विषय में कहा था, ‘यदि तेरी सन्तान अपनी चाल के विषय में ऐसे सावधान रहें, कि अपने सम्पूर्ण हृदय और सम्पूर्ण प्राण से सच्चाई के साथ नित मेरे सम्मुख चलते रहें तब तो इस्राएल की राजगद्दी पर विराजनेवाले की, तेरे कुल परिवार में घटी कभी न होगी।’
5 “ಇದಲ್ಲದೆ ಚೆರೂಯಳ ಮಗ ಯೋವಾಬನು ನನಗೂ, ಇಸ್ರಾಯೇಲಿನ ಸೈನ್ಯಗಳಿಗೆ ಇಬ್ಬರು ಅಧಿಪತಿಗಳಾದ ನೇರನ ಮಗ ಅಬ್ನೇರನಿಗೂ, ಯೆತೆರನ ಮಗ ಅಮಾಸನಿಗೂ ಏನು ಮಾಡಿದನೋ ನೀನು ಬಲ್ಲೆ. ಅವನು ಅವರನ್ನು ಕೊಂದು, ಸಮಾಧಾನ ಕಾಲದಲ್ಲಿ ಯುದ್ಧದ ರಕ್ತವನ್ನು ಚೆಲ್ಲಿ, ತನ್ನ ನಡುವಲ್ಲಿರುವ ನಡುಕಟ್ಟಿನ ಮೇಲೆಯೂ, ತನ್ನ ಪಾದಗಳಲ್ಲಿರುವ ಪಾದರಕ್ಷೆಗಳ ಮೇಲೆಯೂ ಯುದ್ಧದ ರಕ್ತವನ್ನು ಹಚ್ಚಿಕೊಂಡನು.
५“फिर तू स्वयं जानता है, कि सरूयाह के पुत्र योआब ने मुझसे क्या-क्या किया! अर्थात् उसने नेर के पुत्र अब्नेर, और येतेर के पुत्र अमासा, इस्राएल के इन दो सेनापतियों से क्या-क्या किया। उसने उन दोनों को घात किया, और मेल के समय युद्ध का लहू बहाकर उससे अपनी कमर का कमरबन्द और अपने पाँवों की जूतियाँ भिगो दीं।
6 ಆದಕಾರಣ ನೀನು ನಿನ್ನ ಜ್ಞಾನದ ಪ್ರಕಾರಮಾಡಿ, ಅವನ ನರೆತಲೆಯನ್ನು ಸಮಾಧಾನದಿಂದ ಸಮಾಧಿ ಸೇರದಂತೆ ಮಾಡು. (Sheol )
६इसलिए तू अपनी बुद्धि से काम लेना और उस पक्के बाल वाले को अधोलोक में शान्ति से उतरने न देना। (Sheol )
7 “ನೀನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಮಕ್ಕಳಿಗೆ ದಯೆತೋರಿಸು. ಅವರು ನಿನ್ನ ಮೇಜಿನಲ್ಲಿ ಊಟಮಾಡುವವರಾಗಿ ನಿನ್ನ ಸಂಗಡ ಇರಲಿ. ಏಕೆಂದರೆ ನಾನು ನಿನ್ನ ಸಹೋದರನಾದ ಅಬ್ಷಾಲೋಮನ ಮುಂದೆ ಓಡಿಹೋದಾಗ ಅವರು ನನ್ನನ್ನು ಉಪಚರಿಸಿದರು.
७फिर गिलादी बर्जिल्लै के पुत्रों पर कृपा रखना, और वे तेरी मेज पर खानेवालों में रहें, क्योंकि जब मैं तेरे भाई अबशालोम के सामने से भागा जा रहा था, तब उन्होंने मेरे पास आकर वैसा ही किया था।
8 “ಇದಲ್ಲದೆ ನಾನು ಮಹನಯಿಮಿಗೆ ಹೋಗುವ ದಿನದಲ್ಲಿ ಘೋರವಾದ ಶಾಪದಿಂದ ನನ್ನನ್ನು ಶಪಿಸಿದ ಬಹುರೀಮಿನ ಬೆನ್ಯಾಮೀನನಾದ ಗೇರನ ಮಗನಾಗಿರುವ ಶಿಮ್ಮಿಯು ನಿನ್ನ ಬಳಿಯಲ್ಲಿದ್ದಾನೆ. ಅವನು ಯೊರ್ದನ್ ನದಿ ಬಳಿಯಲ್ಲಿ ನನ್ನನ್ನು ಎದುರುಗೊಳ್ಳಲು ಬಂದದ್ದರಿಂದ, ‘ನಾನು ನಿನ್ನನ್ನು ಖಡ್ಗದಿಂದ ಕೊಲ್ಲುವುದಿಲ್ಲ,’ ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆಯಿಟ್ಟೆನು.
८फिर सुन, तेरे पास बिन्यामीनी गेरा का पुत्र बहूरीमी शिमी रहता है, जिस दिन मैं महनैम को जाता था उस दिन उसने मुझे कड़ाई से श्राप दिया था पर जब वह मेरी भेंट के लिये यरदन को आया, तब मैंने उससे यहोवा की यह शपथ खाई, कि मैं तुझे तलवार से न मार डालूँगा।
9 ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು. (Sheol )
९परन्तु अब तू इसे निर्दोष न ठहराना, तू तो बुद्धिमान पुरुष है; तुझे मालूम होगा कि उसके साथ क्या करना चाहिये, और उस पक्के बाल वाले का लहू बहाकर उसे अधोलोक में उतार देना।” (Sheol )
10 ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.
१०तब दाऊद अपने पुरखाओं के संग जा मिला और दाऊदपुर में उसे मिट्टी दी गई।
11 ದಾವೀದನು ಇಸ್ರಾಯೇಲಿನ ಮೇಲೆ ಆಳಿದ ದಿವಸಗಳು ನಾಲ್ವತ್ತು ವರ್ಷಗಳು. ಏಳು ವರ್ಷ ಹೆಬ್ರೋನಿನಲ್ಲಿ ಆಳಿದನು. ಮೂವತ್ತಮೂರು ವರ್ಷ ಯೆರೂಸಲೇಮಿನಲ್ಲಿ ಆಳಿದನು.
११दाऊद ने इस्राएल पर चालीस वर्ष राज्य किया, सात वर्ष तो उसने हेब्रोन में और तैंतीस वर्ष यरूशलेम में राज्य किया था।
12 ಆಗ ಸೊಲೊಮೋನನು ತನ್ನ ತಂದೆಯಾದ ದಾವೀದನ ಸಿಂಹಾಸನದ ಮೇಲೆ ಕುಳಿತನು. ಅವನ ರಾಜ್ಯವು ಬಹು ಸ್ಥಿರವಾಗಿತ್ತು.
१२तब सुलैमान अपने पिता दाऊद की गद्दी पर विराजमान हुआ और उसका राज्य बहुत दृढ़ हुआ।
13 ಆದರೆ ಹಗ್ಗೀತಳ ಮಗ ಅದೋನೀಯನು ಸೊಲೊಮೋನನ ತಾಯಿಯಾದ ಬತ್ಷೆಬೆಯ ದರ್ಶನಕ್ಕೆ ಬಂದನು. ಬತ್ಷೆಬೆಳು ಅವನಿಗೆ, “ಸಮಾಧಾನವಾಗಿ ಬರುತ್ತೀಯೋ?” ಎಂದಳು. ಅದಕ್ಕೆ ಅವನು, “ಸಮಾಧಾನವೇ,” ಎಂದನು.
१३तब हग्गीत का पुत्र अदोनिय्याह, सुलैमान की माता बतशेबा के पास आया, बतशेबा ने पूछा, “क्या तू मित्रभाव से आता है?”
14 ಅವನು, “ನಿನಗೆ ಹೇಳತಕ್ಕ ಮಾತಿದೆ,” ಎಂದನು. ಬತ್ಷೆಬೆಳು, “ಹೇಳು,” ಎಂದಳು.
१४उसने उत्तर दिया, “हाँ, मित्रभाव से!” फिर वह कहने लगा, “मुझे तुझ से एक बात कहनी है।” उसने कहा, “कह!”
15 ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು.
१५उसने कहा, “तुझे तो मालूम है कि राज्य मेरा हो गया था, और समस्त इस्राएली मेरी ओर मुँह किए थे, कि मैं राज्य करूँ; परन्तु अब राज्य पलटकर मेरे भाई का हो गया है, क्योंकि वह यहोवा की ओर से उसको मिला है।
16 ಆದರೆ ಈಗ ನನಗೆ ಒಂದು ಬಿನ್ನಹವಿದೆ. ಅದನ್ನು ತಿರಸ್ಕರಿಸಬೇಡ,” ಎಂದನು. ಬತ್ಷೆಬೆಳು ಅವನಿಗೆ, “ಅದೇನು ಹೇಳು,” ಎಂದಳು.
१६इसलिए अब मैं तुझ से एक बात माँगता हूँ, मुझ को मना न करना।” उसने कहा, “कहे जा।”
17 ಆಗ ಅವನು, “ನೀನು ದಯಮಾಡಿ ಅರಸನಾದ ಸೊಲೊಮೋನನು ಶೂನೇಮ್ಯಳಾದ ಅಬೀಷಗಳನ್ನು ನನಗೆ ಹೆಂಡತಿಯಾಗಿ ಕೊಡಲು ಅವನನ್ನು ಕೇಳು. ಏಕೆಂದರೆ ಅವನು ನಿನಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.
१७उसने कहा, “राजा सुलैमान तुझे इन्कार नहीं करेगा; इसलिए उससे कह, कि वह मुझे शूनेमिन अबीशग को ब्याह दे।”
18 ಅದಕ್ಕೆ ಬತ್ಷೆಬೆಳು, “ಒಳ್ಳೆಯದು, ನಿನಗೋಸ್ಕರ ಅರಸನ ಸಂಗಡ ಮಾತನಾಡುವೆನು,” ಎಂದಳು.
१८बतशेबा ने कहा, “अच्छा, मैं तेरे लिये राजा से कहूँगी।”
19 ಆದ್ದರಿಂದ ಬತ್ಷೆಬೆಳು ಅದೋನೀಯನಿಗೋಸ್ಕರ ಮಾತನಾಡುವುದಕ್ಕೆ ಅರಸನಾದ ಸೊಲೊಮೋನನ ಬಳಿಗೆ ಹೋದಳು. ಅರಸನು ಅವಳನ್ನು ಎದುರುಗೊಳ್ಳಲು ಎದ್ದು, ಅವಳಿಗೆ ಅಡ್ಡಬಿದ್ದು, ತಾನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ರಾಜಮಾತೆಗೋಸ್ಕರ ಆಸನವನ್ನು ಹಾಕಿಸಿದನು. ಅವಳು ಅವನ ಬಲಗಡೆಯಲ್ಲಿ ಕುಳಿತುಕೊಂಡಳು.
१९तब बतशेबा अदोनिय्याह के लिये राजा सुलैमान से बातचीत करने को उसके पास गई, और राजा उसकी भेंट के लिये उठा, और उसे दण्डवत् करके अपने सिंहासन पर बैठ गया: फिर राजा ने अपनी माता के लिये एक सिंहासन रख दिया, और वह उसकी दाहिनी ओर बैठ गई।
20 ಅವಳು ಅವನಿಗೆ, “ನಿನ್ನಿಂದ ಒಂದು ಚಿಕ್ಕ ಬಿನ್ನಹವಿದೆ, ಆಗುವುದಿಲ್ಲವೆಂದು ಹೇಳಬೇಡ,” ಎಂದಳು. ಅರಸನು ಅವಳಿಗೆ, “ನನ್ನ ತಾಯಿಯೇ ಕೇಳು. ಏಕೆಂದರೆ ನಾನು ನಿನ್ನ ಮಾತಿಗೆ ಆಗುವುದಿಲ್ಲವೆಂದು ಹೇಳುವುದಿಲ್ಲ,” ಎಂದನು.
२०तब वह कहने लगी, “मैं तुझ से एक छोटा सा वरदान माँगती हूँ इसलिए मुझ को मना न करना,” राजा ने कहा, “हे माता माँग; मैं तुझे इन्कार नहीं करूँगा।”
21 ಅದಕ್ಕವಳು, “ಶೂನೇಮ್ಯಳಾದ ಅಬೀಷಗಳನ್ನು ನಿನ್ನ ಅಣ್ಣ ಅದೋನೀಯನಿಗೆ ಹೆಂಡತಿಯಾಗಲು ಅಪ್ಪಣೆಯಾಗಲಿ,” ಎಂದಳು.
२१उसने कहा, “वह शूनेमिन अबीशग तेरे भाई अदोनिय्याह को ब्याह दी जाए।”
22 ಅರಸನಾದ ಸೊಲೊಮೋನನು ತನ್ನ ತಾಯಿಗೆ ಉತ್ತರವಾಗಿ, “ಅದೋನೀಯನಿಗೋಸ್ಕರ ಶೂನೇಮ್ಯಳಾದ ಅಬೀಷಗ್ ಎಂಬಾಕೆಯನ್ನು ನೀನು ಕೇಳುವುದೇಕೆ? ರಾಜ್ಯವನ್ನೂ ಕೇಳು. ಏಕೆಂದರೆ ಅವನು ನನ್ನ ಅಣ್ಣನಾಗಿದ್ದಾನೆ. ಯಾಜಕ ಅಬಿಯಾತರನಿಗೋಸ್ಕರವೂ, ಚೆರೂಯಳ ಮಗ ಯೋವಾಬನಿಗೋಸ್ಕರವೂ ಕೇಳು,” ಎಂದನು.
२२राजा सुलैमान ने अपनी माता को उत्तर दिया, “तू अदोनिय्याह के लिये शूनेमिन अबीशग ही को क्यों माँगती है? उसके लिये राज्य भी माँग, क्योंकि वह तो मेरा बड़ा भाई है, और उसी के लिये क्या! एब्यातार याजक और सरूयाह के पुत्र योआब के लिये भी माँग।”
23 ತರುವಾಯ ಅರಸನಾದ ಸೊಲೊಮೋನನು, “ಅದೋನೀಯನು ಈ ಮಾತನ್ನು ತನ್ನ ಪ್ರಾಣಕ್ಕೆ ವಿರೋಧವಾಗಿ ಹೇಳದೆ ಇದ್ದರೆ, ನನಗೆ ದೇವರು ಹಾಗೆಯೂ, ಅದಕ್ಕಿಂತಲೂ ಅಧಿಕವಾಗಿಯೂ ಮಾಡಲಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಆಣೆ ಇಟ್ಟನು.
२३और राजा सुलैमान ने यहोवा की शपथ खाकर कहा, “यदि अदोनिय्याह ने यह बात अपने प्राण पर खेलकर न कही हो तो परमेश्वर मुझसे वैसा ही क्या वरन् उससे भी अधिक करे।
24 “ಹಾಗಾದರೆ ನನ್ನನ್ನು ಸ್ಥಿರಪಡಿಸಿ, ನನ್ನ ತಂದೆ ದಾವೀದನ ಸಿಂಹಾಸನದ ಮೇಲೆ ನನ್ನನ್ನು ಕೂಡಿಸಿ, ತಾವು ಮಾತುಕೊಟ್ಟ ಪ್ರಕಾರ ನನಗೆ ಮನೆತನ ಕಟ್ಟಿಸಿದ ಯೆಹೋವ ದೇವರ ಜೀವದಾಣೆ, ಈ ಹೊತ್ತು ಅದೋನೀಯನು ಸಾಯಬೇಕು,” ಎಂದನು.
२४अब यहोवा जिसने मुझे स्थिर किया, और मेरे पिता दाऊद की राजगद्दी पर विराजमान किया है और अपने वचन के अनुसार मेरा घर बसाया है, उसके जीवन की शपथ आज ही अदोनिय्याह मार डाला जाएगा।”
25 ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನನ್ನು ಕಳುಹಿಸಿದನು. ಇವನು ಹೋಗಿ ಅದೋನೀಯನನ್ನು ಕೊಂದುಹಾಕಿದನು.
२५अतः राजा सुलैमान ने यहोयादा के पुत्र बनायाह को भेज दिया और उसने जाकर, उसको ऐसा मारा कि वह मर गया।
26 ಯಾಜಕನಾದ ಅಬಿಯಾತರನಿಗೆ ಅರಸನು, “ನೀನು ಅನಾತೋತಿನಲ್ಲಿರುವ ನಿನ್ನ ಹೊಲಗಳಿಗೆ ಹೋಗು. ಏಕೆಂದರೆ ನೀನು ಸಾವಿಗೆ ಪಾತ್ರನಾಗಿದ್ದೀಯೆ. ಆದರೆ ನೀನು ಸಾರ್ವಭೌಮ ಯೆಹೋವ ದೇವರ ಮಂಜೂಷವನ್ನು ನನ್ನ ತಂದೆ ದಾವೀದನ ಮುಂದೆ ಹೊತ್ತದ್ದರಿಂದಲೂ, ನನ್ನ ತಂದೆಯ ಎಲ್ಲಾ ಕಷ್ಟಗಳಲ್ಲಿ ನೀನು ಪಾಲುಗಾರನಾಗಿದ್ದರಿಂದಲೂ, ನಾನು ಈಗ ನಿನ್ನನ್ನು ಸಾಯಿಸುವುದಿಲ್ಲ,” ಎಂದನು.
२६तब एब्यातार याजक से राजा ने कहा, “अनातोत में अपनी भूमि को जा; क्योंकि तू भी प्राणदण्ड के योग्य है। आज के दिन तो मैं तुझे न मार डालूँगा, क्योंकि तू मेरे पिता दाऊद के सामने प्रभु यहोवा का सन्दूक उठाया करता था; और उन सब दुःखों में जो मेरे पिता पर पड़े थे तू भी दुःखी था।”
27 ಹೀಗೆಯೇ ಯೆಹೋವ ದೇವರು ಶೀಲೋವಿನಲ್ಲಿ ಏಲಿಯ ಮನೆಯನ್ನು ಕುರಿತು ಹೇಳಿದ ವಾಕ್ಯವು ಈಡೇರುವುದಕ್ಕೆ ಸೊಲೊಮೋನನು ಅಬಿಯಾತರನನ್ನು ಯೆಹೋವ ದೇವರಿಗೆ ಯಾಜಕನಾಗಿರದ ಹಾಗೆ ಹೊರಡಿಸಿಬಿಟ್ಟನು.
२७और सुलैमान ने एब्यातार को यहोवा के याजक होने के पद से उतार दिया, इसलिए कि जो वचन यहोवा ने एली के वंश के विषय में शीलो में कहा था, वह पूरा हो जाए।
28 ಆಗ ಈ ಸುದ್ದಿ ಯೋವಾಬನಿಗೆ ಬಂತು. ಏಕೆಂದರೆ ಯೋವಾಬನು ಅಬ್ಷಾಲೋಮನ ಹಿಂದೆ ಹೋಗದೆ ಇದ್ದರೂ, ಅದೋನೀಯನ ಹಿಂದೆ ಹೋದನು. ಆದ್ದರಿಂದ ಯೋವಾಬನು ಯೆಹೋವ ದೇವರ ಮಂದಿರಕ್ಕೆ ಓಡಿಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದನು.
२८इसका समाचार योआब तक पहुँचा; योआब अबशालोम के पीछे तो नहीं हो लिया था, परन्तु अदोनिय्याह के पीछे हो लिया था। तब योआब यहोवा के तम्बू को भाग गया, और वेदी के सींगों को पकड़ लिया।
29 ಯೋವಾಬನು ಯೆಹೋವ ದೇವರ ಗುಡಾರಕ್ಕೆ ಓಡಿಹೋಗಿ ಬಲಿಪೀಠದ ಬಳಿಯಲ್ಲಿ ಇದ್ದಾನೆ, ಎಂಬ ಸುದ್ದಿ ಅರಸನಾದ ಸೊಲೊಮೋನನಿಗೆ ತಿಳಿಯಿತು. ಆಗ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ, “ನೀನು ಹೋಗಿ ಅವನನ್ನು ಕೊಂದುಹಾಕು,” ಎಂದನು.
२९जब राजा सुलैमान को यह समाचार मिला, “योआब यहोवा के तम्बू को भाग गया है, और वह वेदी के पास है,” तब सुलैमान ने यहोयादा के पुत्र बनायाह को यह कहकर भेज दिया, कि तू जाकर उसे मार डाल।
30 ಬೆನಾಯನು ಯೆಹೋವ ದೇವರ ಗುಡಾರಕ್ಕೆ ಬಂದು ಯೋವಾಬನಿಗೆ, “ನೀನು ಹೊರಗೆ ಬರಬೇಕೆಂದು ಅರಸನು ಹೇಳುತ್ತಾನೆ,” ಎಂದನು. ಅದಕ್ಕವನು, “ಇಲ್ಲ, ಇಲ್ಲಿಯೇ ಸಾಯುತ್ತೇನೆ,” ಎಂದನು. ಬೆನಾಯನು ಅರಸನ ಬಳಿಗೆ ತಿರುಗಿ ಹೋಗಿ ಯೋವಾಬನು ಹೇಳಿದ್ದನ್ನು ತಿಳಿಸಿದನು.
३०तब बनायाह ने यहोवा के तम्बू के पास जाकर उससे कहा, “राजा की यह आज्ञा है, कि निकल आ।” उसने कहा, “नहीं, मैं यहीं मर जाऊँगा।” तब बनायाह ने लौटकर यह सन्देश राजा को दिया “योआब ने मुझे यह उत्तर दिया।”
31 ಅರಸನು ಬೆನಾಯನಿಗೆ, “ಅವನು ಹೇಳಿದ ಪ್ರಕಾರ ಮಾಡು. ಯೋವಾಬನು ನಿನ್ನ ಹಾಗೂ ನನ್ನ ತಂದೆಯ ಮನೆಯವರ ನಿರಪರಾಧ ರಕ್ತವನ್ನು ಚೆಲ್ಲಿದ ದೋಷವನ್ನು ತೊಲಗಿಸುವ ಹಾಗೆ ಅವನನ್ನು ಕೊಂದು, ಅವನ ಶವವನ್ನು ಸಮಾಧಿಮಾಡು.
३१राजा ने उससे कहा, “उसके कहने के अनुसार उसको मार डाल, और उसे मिट्टी दे; ऐसा करके निर्दोषों का जो खून योआब ने किया है, उसका दोष तू मुझ पर से और मेरे पिता के घराने पर से दूर करेगा।
32 ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.
३२और यहोवा उसके सिर वह खून लौटा देगा क्योंकि उसने मेरे पिता दाऊद के बिना जाने अपने से अधिक धर्मी और भले दो पुरुषों पर, अर्थात् इस्राएल के प्रधान सेनापति नेर के पुत्र अब्नेर और यहूदा के प्रधान सेनापति येतेर के पुत्र अमासा पर टूटकर उनको तलवार से मार डाला था।
33 ಆದ್ದರಿಂದ ಅವರ ರಕ್ತಾಪರಾಧವು ಯೋವಾಬನ ತಲೆಯ ಮೇಲೆಯೂ, ಅವನ ಸಂತತಿಯವರ ತಲೆಯ ಮೇಲೆಯೂ ಯುಗಯುಗಕ್ಕೂ ಇರುವುದು. ಆದರೆ ದಾವೀದನ ಮೇಲೆಯೂ, ಅವನ ಸಂತಾನದವರ ಮೇಲೆಯೂ, ಅವನ ಮನೆಯ ಮೇಲೆಯೂ, ಅವನ ಸಿಂಹಾಸನದ ಮೇಲೆಯೂ ಯೆಹೋವ ದೇವರಿಂದ ಸಮಾಧಾನವು ಯುಗಯುಗಾಂತರಕ್ಕೂ ಇರುವುದು,” ಎಂದನು.
३३अतः योआब के सिर पर और उसकी सन्तान के सिर पर खून सदा तक रहेगा, परन्तु दाऊद और उसके वंश और उसके घराने और उसके राज्य पर यहोवा की ओर से शान्ति सदैव तक रहेगी।”
34 ಹಾಗೆಯೇ ಯೆಹೋಯಾದಾವನ ಮಗ ಬೆನಾಯನು ಹೋಗಿ ಯೋವಾಬನನ್ನು ಕೊಂದುಹಾಕಿದನು. ಅವನ ಶವಕ್ಕೆ ಮರುಭೂಮಿಯಲ್ಲಿದ್ದ ಅವನ ಮನೆಯ ನಿವೇಶನದಲ್ಲಿ ಸಮಾಧಿಯಾಯಿತು.
३४तब यहोयादा के पुत्र बनायाह ने जाकर योआब को मार डाला; और उसको जंगल में उसी के घर में मिट्टी दी गई।
35 ಆಗ ಅರಸನು ಯೆಹೋಯಾದಾವನ ಮಗ ಬೆನಾಯನನ್ನು ಯೋವಾಬನಿಗೆ ಬದಲಾಗಿ ಸೈನ್ಯದ ಮೇಲೆ ನೇಮಿಸಿದನು. ಇದಲ್ಲದೆ ಅರಸನು ಅಬಿಯಾತರನಿಗೆ ಬದಲಾಗಿ ಯಾಜಕನಾದ ಚಾದೋಕನನ್ನು ನೇಮಿಸಿದನು.
३५तब राजा ने उसके स्थान पर यहोयादा के पुत्र बनायाह को प्रधान सेनापति ठहराया; और एब्यातार के स्थान पर सादोक याजक को ठहराया।
36 ಆಗ ಅರಸನು ಶಿಮ್ಮಿಯನ್ನು ಕರೆಯಿಸಿ ಅವನಿಗೆ, “ನೀನು ಯೆರೂಸಲೇಮಿನಲ್ಲಿ, ನಿನಗೆ ಮನೆಯನ್ನು ಕಟ್ಟಿಸಿಕೊಂಡು, ಅಲ್ಲಿಂದ ಎಲ್ಲಿಗೂ ಹೋಗದೆ ವಾಸವಾಗಿರು.
३६तब राजा ने शिमी को बुलवा भेजा, और उससे कहा, “तू यरूशलेम में अपना एक घर बनाकर वहीं रहना और नगर से बाहर कहीं न जाना।
37 ಯಾವ ದಿವಸದಲ್ಲಿ ನೀನು ಹೊರಟು ಕಿದ್ರೋನೆಂಬ ಹಳ್ಳವನ್ನು ದಾಟುವೆಯೋ, ಆ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ ಎಂದು ಖಂಡಿತ ತಿಳಿದುಕೋ ಮತ್ತು ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರುವುದು,” ಎಂದನು.
३७तू निश्चय जान रख कि जिस दिन तू निकलकर किद्रोन नाले के पार उतरे, उसी दिन तू निःसन्देह मार डाला जाएगा, और तेरा लहू तेरे ही सिर पर पड़ेगा।”
38 ಶಿಮ್ಮಿ ಅರಸನಿಗೆ, “ನಿಮ್ಮ ಮಾತು ಒಳ್ಳೆಯದು. ಅರಸನಾದ ನನ್ನ ಒಡೆಯನು ಹೇಳಿದ ಪ್ರಕಾರವೇ, ನಿನ್ನ ಸೇವಕನು ಮಾಡುವನು,” ಎಂದನು. ಶಿಮ್ಮಿ ಯೆರೂಸಲೇಮಿನಲ್ಲಿ ಬಹಳ ದಿವಸ ವಾಸವಾಗಿದ್ದನು.
३८शिमी ने राजा से कहा, “बात अच्छी है; जैसा मेरे प्रभु राजा ने कहा है, वैसा ही तेरा दास करेगा।” तब शिमी बहुत दिन यरूशलेम में रहा।
39 ಮೂರು ವರ್ಷಗಳ ಅಂತ್ಯದಲ್ಲಿ ಶಿಮ್ಮಿಯ ಸೇವಕರಲ್ಲಿ ಇಬ್ಬರು ಗತ್ನ ಅರಸನೂ ಮಾಕನ ಮಗನೂ ಆದ ಆಕೀಷನ ಬಳಿಗೆ ಓಡಿಹೋದರು. ಆಗ ಶಿಮ್ಮಿಗೆ, “ನಿನ್ನ ಸೇವಕರು ಗತ್ನಲ್ಲಿ ಇದ್ದಾರೆ” ಎಂದು ತಿಳಿಸಿದರು.
३९परन्तु तीन वर्ष के व्यतीत होने पर शिमी के दो दास, गत नगर के राजा माका के पुत्र आकीश के पास भाग गए, और शिमी को यह समाचार मिला, “तेरे दास गत में हैं।”
40 ಆದ್ದರಿಂದ ಶಿಮ್ಮಿ ಎದ್ದು ತನ್ನ ಕತ್ತೆಗೆ ತಡಿಯನ್ನು ಹಾಕಿಸಿ, ತನ್ನ ಸೇವಕರನ್ನು ಹುಡುಕಲು ಗತ್ನಲ್ಲಿರುವ ಆಕೀಷನ ಬಳಿಗೆ ಹೋದನು. ಶಿಮ್ಮಿ ಹೋಗಿ ಗತ್ನಿಂದ ತನ್ನ ಸೇವಕರನ್ನು ಕರೆದುಕೊಂಡು ಬಂದನು.
४०तब शिमी उठकर अपने गदहे पर काठी कसकर, अपने दास को ढूँढ़ने के लिये गत को आकीश के पास गया, और अपने दासों को गत से ले आया।
41 ಶಿಮ್ಮಿ ಯೆರೂಸಲೇಮನ್ನು ಬಿಟ್ಟು ಗತ್ ಊರಿಗೆ ಹೋಗಿ, ತಿರುಗಿ ಬಂದಿದ್ದಾನೆಂದು ಸೊಲೊಮೋನನಿಗೆ ತಿಳಿಯಿತು.
४१जब सुलैमान राजा को इसका समाचार मिला, “शिमी यरूशलेम से गत को गया, और फिर लौट आया है,”
42 ಆಗ ಅರಸನು ಶಿಮ್ಮಿಯನ್ನು ಕರೆಕಳುಹಿಸಿ ಅವನಿಗೆ, “ನೀನು ಯಾವ ದಿವಸದಲ್ಲಿ ಹೊರಟು ಎಲ್ಲಿಗಾದರೂ ಹೋದರೆ, ಅದೇ ದಿವಸದಲ್ಲಿ ನಿಶ್ಚಯವಾಗಿ ಸಾಯುವೆ, ಎಂದು ಖಂಡಿತವಾಗಿ ತಿಳಿದುಕೋ, ಎಂಬುದಾಗಿ ನಾನು ನಿನಗೆ ದೃಢವಾಗಿ ಹೇಳಿ, ಯೆಹೋವ ದೇವರ ಹೆಸರಿನಲ್ಲಿ ನಿನ್ನಿಂದ ಪ್ರಮಾಣ ಮಾಡಿಸಲಿಲ್ಲವೋ? ನಾನು ಹೇಳಿದ ಮಾತುಒಳ್ಳೆಯದೆಂದು ನೀನು ಹೇಳಲಿಲ್ಲವೋ?
४२तब उसने शिमी को बुलवा भेजा, और उससे कहा, “क्या मैंने तुझे यहोवा की शपथ न खिलाई थी? और तुझ से चिताकर न कहा था, ‘यह निश्चय जान रख कि जिस दिन तू निकलकर कहीं चला जाए, उसी दिन तू निःसन्देह मार डाला जाएगा?’ और क्या तूने मुझसे न कहा था, ‘जो बात मैंने सुनी, वह अच्छी है?’
43 ನೀನು ಯೆಹೋವ ದೇವರ ಆಣೆಯನ್ನೂ, ನಾನು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನೂ ನೀನು ಕೈಗೊಳ್ಳದೆ ಇದ್ದದ್ದೇನು?” ಎಂದನು.
४३फिर तूने यहोवा की शपथ और मेरी दृढ़ आज्ञा क्यों नहीं मानी?”
44 ಅರಸನು ಶಿಮ್ಮಿಗೆ, “ನೀನು ನನ್ನ ತಂದೆ ದಾವೀದನಿಗೆ ಮಾಡಿದ ಕೇಡನ್ನು ನಿನ್ನ ಹೃದಯವು ತಿಳಿದಿದೆ. ಯೆಹೋವ ದೇವರು ನಿನ್ನ ಕೆಟ್ಟತನವನ್ನು ನಿನ್ನ ತಲೆಯ ಮೇಲೆ ಬರಮಾಡುವರು.
४४और राजा ने शिमी से कहा, “तू आप ही अपने मन में उस सब दुष्टता को जानता है, जो तूने मेरे पिता दाऊद से की थी? इसलिए यहोवा तेरे सिर पर तेरी दुष्टता लौटा देगा।
45 ಆದರೆ ಅರಸನಾದ ಸೊಲೊಮೋನನಿಗೆ ಆಶೀರ್ವಾದವಾಗಲಿ. ದಾವೀದನ ಸಿಂಹಾಸನವು ಯೆಹೋವ ದೇವರ ಮುಂದೆ ಯುಗಯುಗಾಂತರಕ್ಕೂ ಸ್ಥಿರವಾಗಿರುವುದು,” ಎಂದನು.
४५परन्तु राजा सुलैमान धन्य रहेगा, और दाऊद का राज्य यहोवा के सामने सदैव दृढ़ रहेगा।”
46 ಆಗ ಅರಸನಾದ ಸೊಲೊಮೋನನು ಯೆಹೋಯಾದಾವನ ಮಗ ಬೆನಾಯನಿಗೆ ಆಜ್ಞಾಪಿಸಿದ್ದರಿಂದ, ಅವನು ಹೊರಟು ಹೋಗಿ ಶಿಮ್ಮಿಯ ಮೇಲೆ ಬಿದ್ದು ಅವನನ್ನು ಕೊಂದುಹಾಕಿದನು. ಹೀಗೆ ರಾಜ್ಯವು ಸೊಲೊಮೋನನ ಕೈಯಲ್ಲಿ ಸ್ಥಿರವಾಯಿತು.
४६तब राजा ने यहोयादा के पुत्र बनायाह को आज्ञा दी, और उसने बाहर जाकर, उसको ऐसा मारा कि वह भी मर गया। इस प्रकार सुलैमान के हाथ में राज्य दृढ़ हो गया।