< ಅರಸುಗಳು - ಪ್ರಥಮ ಭಾಗ 21 >
1 ಕೆಲವು ಕಾಲದ ನಂತರ, ಇಜ್ರೆಯೇಲ್ ಪಟ್ಟಣದಲ್ಲಿ ಸಮಾರ್ಯದ ಅರಸನಾದ ಅಹಾಬನ ಅರಮನೆಯ ಬಳಿಯಲ್ಲಿ ಇಜ್ರೆಯೇಲಿನವನಾದ ನಾಬೋತನಿಗೆ ಒಂದು ದ್ರಾಕ್ಷಿ ತೋಟವಿತ್ತು.
౧యెజ్రెయేలులో సమరయ రాజు అహాబు భవనాన్ని ఆనుకుని యెజ్రెయేలు వాడు నాబోతుకు ఒక ద్రాక్షతోట ఉంది.
2 ಅಹಾಬನು ನಾಬೋತನಿಗೆ, “ತೋಟವು ನನ್ನ ಮನೆಯ ಬಳಿಯಲ್ಲಿ ಇರುವುದರಿಂದ ಅದು ನನಗೆ ಕಾಯಿಪಲ್ಯದ ತೋಟವಾಗುವ ಹಾಗೆ ಅದನ್ನು ನನಗೆ ಕೊಡು. ನಾನು ಅದಕ್ಕೆ ಬದಲಾಗಿ ಅದಕ್ಕಿಂತ ಒಳ್ಳೆಯ ದ್ರಾಕ್ಷಿತೋಟವನ್ನು ನಿನಗೆ ಕೊಡುವೆನು. ಇಲ್ಲವೆ ನಿನ್ನ ದೃಷ್ಟಿಗೆ ಒಳ್ಳೆಯದಾಗಿದ್ದರೆ, ಹಣದಲ್ಲಿ ಅದರ ಬೆಲೆಯನ್ನು ಕೊಡುವೆನು,” ಎಂದನು.
౨అహాబు నాబోతును పిలిపించి “నీ ద్రాక్షతోట నా భవనాన్ని ఆనుకుని ఉంది. కాబట్టి అది నాకివ్వు. దానిలో కూరగాయలు పండించుకుంటాను. దానికి బదులు దాని కంటే మంచి ద్రాక్షతోట నీకిస్తాను. లేకపోతే దాని ఖరీదైనా ఇస్తాను” అన్నాడు.
3 ಆದರೆ ನಾಬೋತನು ಅಹಾಬನಿಗೆ, “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡದಂತೆ ಯೆಹೋವ ದೇವರು ನನ್ನನ್ನು ತಡೆಯಲಿ,” ಎಂದನು.
౩అందుకు నాబోతు “నా పిత్రార్జితాన్ని నీకివ్వడానికి నాకెంత మాత్రం కుదరదు” అన్నాడు.
4 “ನಾನು ನನ್ನ ಪಿತೃಗಳ ಬಾಧ್ಯತೆಯನ್ನು ನಿನಗೆ ಕೊಡುವುದಿಲ್ಲ,” ಎಂದು ಇಜ್ರೆಯೇಲಿನವನಾದ ನಾಬೋತನು ಹೇಳಿದ ಮಾತಿಗೋಸ್ಕರ, ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು, ತನ್ನ ಮಂಚದ ಮೇಲೆ ಮಲಗಿ, ತನ್ನ ಮುಖವನ್ನು ತಿರುಗಿಸಿಕೊಂಡು ಊಟಮಾಡದೆ ಇದ್ದನು.
౪నా పిత్రార్జితాన్ని నీకివ్వనని యెజ్రెయేలు వాడైన నాబోతు తనతో చెప్పినందువల్ల అహాబు విచారంగా కోపంతో తన భవనానికి వెళ్లిపోయాడు. మంచం మీద పడుకుని ఎవరితో మాట్లాడకుండా భోజనం చేయకుండా ఉన్నాడు.
5 ಆಗ ಅವನ ಹೆಂಡತಿ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ, “ನೀನು ವ್ಯಸನವಾಗಿರುವುದೇಕೆ? ಯಾಕೆ ಊಟಮಾಡುವುದಿಲ್ಲ?” ಎಂದಳು.
౫అప్పుడు అతని భార్య యెజెబెలు వచ్చి “నీవు విచారంగా భోజనం చేయకుండా ఉన్నావేంటి?” అని అడిగింది.
6 ಅವನು ಅವಳಿಗೆ, “ಏಕೆಂದರೆ ನಾನು ಇಜ್ರೆಯೇಲಿನವನಾದ ನಾಬೋತನ ಸಂಗಡ ಮಾತನಾಡಿ, ‘ನಿನ್ನ ದ್ರಾಕ್ಷಿತೋಟವನ್ನು ನನಗೆ ಕ್ರಯಕ್ಕೆ ಕೊಡು. ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷಿತೋಟವನ್ನು ಕೊಡುವೆನು,’ ಎಂದು ಅವನಿಗೆ ಹೇಳಿದೆನು. ಅದಕ್ಕವನು, ‘ನನ್ನ ದ್ರಾಕ್ಷಿತೋಟವನ್ನು ಕೊಡುವುದಿಲ್ಲ,’” ಎಂದು ಹೇಳಿದನು.
౬అతడు ఆమెతో ఇలా అన్నాడు. “నీ ద్రాక్షతోటను నాకు అమ్ము. లేకపోతే దానికి బదులు మరొక ద్రాక్షతోట నీకిస్తానని యెజ్రెయేలు వాడైన నాబోతును అడిగాను. అతడు నా ద్రాక్షతోట నీకివ్వను అన్నాడు.”
7 ಆಗ ಅವನ ಹೆಂಡತಿ ಈಜೆಬೆಲಳು ಅವನಿಗೆ, “ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೋ? ಎದ್ದು ಊಟಮಾಡು. ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ನಿನಗೆ ಕೊಡಿಸುತ್ತೇನೆ,” ಎಂದಳು.
౭అందుకు యెజెబెలు “నీవు ఇశ్రాయేలు రాజ్యాన్ని పరిపాలన చేయడం లేదా? లేచి భోజనం చెయ్యి. మనస్సులో సంతోషంగా ఉండు. నేనే యెజ్రెయేలు వాడైన నాబోతు ద్రాక్షతోట నీకిప్పిస్తాను” అంది.
8 ಹೀಗೆ ಅವಳು ಅಹಾಬನ ಹೆಸರಿನಲ್ಲಿ ಪತ್ರಗಳನ್ನು ಬರೆದು, ಅವುಗಳಿಗೆ ಅವನ ಮುದ್ರೆಹಾಕಿ, ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯರಿಗೂ, ಗೌರವಸ್ಥರಿಗೂ ಕಳುಹಿಸಿದಳು.
౮ఆమె అహాబు పేర ఉత్తరాలు రాయించి అతని ముద్రతో ముద్రించి, ఆ ఉత్తరాలను నాబోతు నివసిస్తున్న పట్టణ పెద్దలకూ ఇంకా ముఖ్యమైన వారికీ పంపింది.
9 ಅವಳು ಪತ್ರಗಳಲ್ಲಿ, “ನೀವು ಉಪವಾಸವನ್ನು ಪ್ರಕಟಮಾಡಿ ನಾಬೋತನನ್ನು ಜನರೊಳಗೆ ಎತ್ತರದ ಸ್ಥಳದಲ್ಲಿ ಕೂರಿಸಿ,
౯ఆ ఉత్తరాల్లో ఇలా రాయించింది. “ఉపవాస దినం జరగాలని మీరు చాటింపు వేయించి నాబోతును ప్రజల ఎదుట నిలబెట్టండి.
10 ‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.
౧౦నీవు దేవుణ్ణి, రాజునూ దూషించావు, అని అతని మీద సాక్ష్యం చెప్పడానికి ఇద్దరు నిజాయితీ లేని మనుషులను ఏర్పాటు చేయండి. తీర్పు అయిన తరువాత అతన్ని బయటికి తీసికెళ్ళి రాళ్లతో కొట్టి చంపేయండి.”
11 ಆಗ ಅವನ ಪಟ್ಟಣದ ಮನುಷ್ಯರೂ, ಅವನ ಪಟ್ಟಣದ ನಿವಾಸಿಗಳೂ ಆದ ಹಿರಿಯರೂ, ಗೌರವಸ್ಥರೂ, ಈಜೆಬೆಲಳು ಅವರಿಗೆ ಕಳುಹಿಸಿದ ಪ್ರಕಾರವೂ, ಅವಳು ಅವರ ಬಳಿಗೆ ಕಳುಹಿಸಿದ ಪತ್ರಗಳಲ್ಲಿ ಬರೆದ ಪ್ರಕಾರವೂ ಮಾಡಿದರು.
౧౧అతని నగర పెద్దలూ పట్టణంలో నివసించే ముఖ్యమైన వారూ యెజెబెలు తమకు పంపిన ఉత్తరాల్లో ఉన్నట్టుగా జరిగించారు.
12 ಅವರು ಉಪವಾಸವನ್ನು ಪ್ರಕಟಮಾಡಿ, ನಾಬೋತನನ್ನು ಜನರೊಳಗೆ ಎತ್ತರ ಸ್ಥಳದಲ್ಲಿ ಕೂರಿಸಿದರು.
౧౨ఉపవాస దినం చాటించి నాబోతును ప్రజల ఎదుట నిలబెట్టారు.
13 ಆಗ ದುಷ್ಟರಾದ ಇಬ್ಬರು ಮನುಷ್ಯರು ಬಂದು ಅವನಿಗೆದುರಾಗಿ ಕುಳಿತುಕೊಂಡರು. ಈ ದುಷ್ಟಜನರ ಸಮ್ಮುಖದಲ್ಲಿ ನಾಬೋತನಿಗೆ ವಿರೋಧವಾಗಿ, “ಈ ನಾಬೋತನು ದೇವರನ್ನೂ, ಅರಸನನ್ನೂ ದೂಷಿಸಿದನು,” ಎಂದು ಸಾಕ್ಷಿ ಹೇಳಿದರು. ಆಗ ನಾಬೋತನನ್ನು ಪಟ್ಟಣದ ಹೊರಗೆ ಕರೆದುಕೊಂಡು ಹೋಗಿ, ಅವನು ಸಾಯುವ ಹಾಗೆ ಅವರು ಅವನಿಗೆ ಕಲ್ಲೆಸೆದರು.
౧౩అప్పుడు ఇద్దరు నిజాయితీ లేని మనుషులు వచ్చి అతని ఎదుట కూర్చుని “నాబోతు దేవుణ్ణీ రాజునూ దూషించాడు” అని ప్రజల ఎదుట నాబోతు మీద సాక్ష్యం చెప్పారు. వాళ్ళు పట్టణం బయటికి అతన్ని తీసికెళ్లి రాళ్లతో కొట్టి చంపేశారు.
14 ಅವನು ಸತ್ತನು. ಅವರು ಈಜೆಬೆಲಳಿಗೆ, “ನಾಬೋತನು ಕಲ್ಲೆಸೆತದಿಂದ ಸತ್ತನು,” ಎಂದು ಹೇಳಿ ಕಳುಹಿಸಿದರು.
౧౪నాబోతు రాతి దెబ్బలతో చచ్చిపోయాడని వాళ్ళు యెజెబెలుకు కబురు పంపారు.
15 ನಾಬೋತನು ಕಲ್ಲೆಸೆತದಿಂದ ಸತ್ತಿದ್ದಾನೆಂದು ಈಜೆಬೆಲಳು ಕೇಳಿದಾಗ, ಅವಳು ಅಹಾಬನಿಗೆ, “ನೀನೆದ್ದು ಇಜ್ರೆಯೇಲಿನವನಾದ ನಾಬೋತನು ಕ್ರಯಕ್ಕೆ ಕೊಡಲು ಸಮ್ಮತಿಸದಿದ್ದ ದ್ರಾಕ್ಷಿತೋಟವನ್ನು ಸ್ವಾಧೀನ ಮಾಡಿಕೋ. ಏಕೆಂದರೆ ನಾಬೋತನು ಜೀವದಿಂದಿಲ್ಲ, ಸತ್ತಿದ್ದಾನೆ,” ಎಂದಳು.
౧౫అది విని యెజెబెలు “నాబోతు బతికి లేడు, చచ్చిపోయాడు. కాబట్టి నీవు లేచి యెజ్రెయేలు వాడైన నాబోతు ఖరీదుకు నీకివ్వనన్న అతని ద్రాక్షతోటను స్వాధీనం చేసుకో” అని అహాబుతో చెప్పింది.
16 ನಾಬೋತನು ಸತ್ತನೆಂದು ಅಹಾಬನು ಕೇಳಿದಾಗ, ಅವನೆದ್ದು ಇಜ್ರೆಯೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಸ್ವಾಧೀನಮಾಡಿಕೊಳ್ಳಲು ಹೋದನು.
౧౬నాబోతు చనిపోయాడని అహాబు విని లేచి యెజ్రెయేలు వాడైన నాబోతు ద్రాక్షతోటను స్వాధీన పరచుకోడానికి వెళ్ళాడు.
17 ಆಗ ಯೆಹೋವ ದೇವರ ವಾಕ್ಯವು ತಿಷ್ಬೀಯನಾದ ಎಲೀಯನಿಗೆ ಉಂಟಾಗಿ,
౧౭అప్పుడు యెహోవా తిష్బీయుడైన ఏలీయాతో ఇలా చెప్పాడు,
18 “ನೀನೆದ್ದು ಸಮಾರ್ಯದಲ್ಲಿರುವ ಇಸ್ರಾಯೇಲಿನ ಅರಸನಾದ ಅಹಾಬನಿಗೆ ಎದುರಾಗಿ ಹೋಗು. ಅವನು ನಾಬೋತನ ದ್ರಾಕ್ಷಿ ತೋಟದಲ್ಲಿದ್ದಾನೆ. ಅದನ್ನು ಸ್ವಾಧೀನಮಾಡಿಕೊಳ್ಳಲು ಅಲ್ಲಿಗೆ ಹೋಗಿದ್ದಾನೆ.
౧౮“నీవు లేచి సమరయలో ఉన్న ఇశ్రాయేలు రాజైన అహాబును కలుసుకోడానికి బయలు దేరు. అతడు నాబోతు ద్రాక్షతోటలో ఉన్నాడు. అతడు దాన్ని స్వాధీనం చేసుకోడానికి వెళ్ళాడు.
19 ನೀನು ಅವನಿಗೆ, ‘ನೀನು ಕೊಂದುಹಾಕಿ ಸ್ವಾಧೀನ ಮಾಡಿಕೊಂಡಿಯಲ್ಲಾ. ಆದ್ದರಿಂದ ನಾಯಿಗಳು ನಾಬೋತನ ರಕ್ತವನ್ನು ನೆಕ್ಕಿದ ಸ್ಥಳದಲ್ಲಿಯೇ ನಿನ್ನ ರಕ್ತವನ್ನು ನಿಶ್ಚಯವಾಗಿ ನೆಕ್ಕುವುವು,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
౧౯నీవు అతనితో ఇలా చెప్పు, యెహోవా చెప్పేదేమిటంటే దీన్ని స్వాధీనం చేసుకోవాలని నీవు నాబోతును చంపించావు గదా! యెహోవా చెప్పేదేమిటంటే ఏ స్థలం లో కుక్కలు నాబోతు రక్తాన్ని నాకాయో ఆ స్థలం లోనే కుక్కలు నీ రక్తాన్ని కూడా నాకుతాయి.”
20 ಆಗ ಅಹಾಬನು ಎಲೀಯನಿಗೆ, “ನನ್ನ ಶತ್ರುವೇ, ನೀನು ನನ್ನನ್ನು ಕಂಡುಹಿಡಿದೆಯಾ,” ಎಂದನು. ಅದಕ್ಕೆ ಎಲೀಯನು, “ಕಂಡುಕೊಂಡೆನು, ನೀನು ಯೆಹೋವ ದೇವರ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡುವಂತೆ ನಿನ್ನನ್ನು ಮಾರಿಕೊಂಡದ್ದರಿಂದ,
౨౦అది విని అహాబు ఏలీయాతో “నా పగవాడా, నేను నీకు దొరికానా?” అన్నాడు. అందుకు ఏలీయా ఇలా అన్నాడు. “యెహోవా దృష్టికి కీడు చేయడానికి నిన్ను నువ్వే అమ్ముకున్నావు. కాబట్టి నీవు నాకు దొరికావు.
21 ‘ನಾನು ನಿನ್ನ ಮೇಲೆ ಕೇಡನ್ನು ಬರಮಾಡಿ, ನಿನ್ನ ಸಂತತಿಯನ್ನು ತೆಗೆದುಹಾಕಿ, ಅಹಾಬನಿಗೆ ಒಬ್ಬ ಗಂಡು ಮಗುವನ್ನಾದರೂ ಉಳಿಸದೆ ಇಸ್ರಾಯೇಲಿನಲ್ಲಿ ಎಲ್ಲರನ್ನು ತೆಗೆದುಹಾಕಿಬಿಡುವೆನು.
౨౧యెహోవా నీతో ఇలా చెబుతున్నాడు, నేను నీ మీదికి కీడు రప్పిస్తాను. నీ వంశం వారిని నాశనం చేస్తాను. ఇశ్రాయేలు వారిలో బానిస గానీ స్వతంత్రుడు గానీ అహాబు వైపు ఎవరూ లేకుండా పురుషులందరినీ నిర్మూలం చేస్తాను.
22 ನೀನು ನನಗೆ ಎಬ್ಬಿಸಿದ ಕೋಪದ ನಿಮಿತ್ತವೂ, ಇಸ್ರಾಯೇಲನ್ನು ಪಾಪ ಮಾಡುವಂತೆ ಮಾಡಿದ್ದರ ನಿಮಿತ್ತವೂ, ನಾನು ನಿನ್ನ ಮನೆಯನ್ನು ನೆಬಾಟನ ಮಗನಾದ ಯಾರೊಬ್ಬಾಮನ ಮನೆಯ ಹಾಗೆಯೂ, ಅಹೀಯನ ಮಗ ಬಾಷನ ಮನೆಯ ಹಾಗೆಯೂ ಮಾಡುವೆನು, ಎಂದನು.’
౨౨ఇశ్రాయేలువారు పాపం చేయడానికి నీవు కారకుడివై నాకు కోపం పుట్టించావు. కాబట్టి నెబాతు కొడుకు యరొబాము కుటుంబానికీ అహీయా కొడుకు బయెషా కుటుంబానికీ నేను చేసినట్లు నీ కుటుంబానికీ చేస్తాను.
23 “ಈಜೆಬೆಲಳನ್ನು ಕುರಿತು ಯೆಹೋವ ದೇವರು, ‘ನಾಯಿಗಳು ಈಜೆಬೆಲಳನ್ನು ಇಜ್ರೆಯೇಲ್ ಗೋಡೆಯ ಬಳಿಯಲ್ಲಿ ತಿನ್ನುವುವು.’
౨౩యెజెబెలు గురించి యెహోవా చెప్పేదేమిటంటే యెజ్రెయేలు ప్రాకారం దగ్గర కుక్కలు యెజెబెలును పీక్కుతింటాయి.
24 “ಅಹಾಬನ ಕುಟುಂಬದವರಲ್ಲಿ ಪಟ್ಟಣದೊಳಗೆ ಯಾವನು ಸಾಯುವನೋ, ಅವನನ್ನು ನಾಯಿಗಳು ತಿನ್ನುವುವು. ಹೊಲದಲ್ಲಿ ಸಾಯುವವನನ್ನು ಆಕಾಶದ ಪಕ್ಷಿಗಳು ತಿನ್ನುವುವು, ಎಂದು ಹೇಳುತ್ತಾರೆ,” ಎಂದನು.
౨౪పట్టణంలో చనిపోయే అహాబు సంబంధులను కుక్కలు తింటాయి. పొలంలో చనిపోయేవారిని రాబందులు తింటాయి” అన్నాడు.
25 ತನ್ನ ಹೆಂಡತಿ ಈಜೆಬೆಲಳಿಂದ ಪ್ರೇರೇಪಿತನಾಗಿ, ಯೆಹೋವ ದೇವರ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿ ಬಿಟ್ಟ ಅಹಾಬನ ಹಾಗೆ ದುಷ್ಟನು ಇನ್ನೊಬ್ಬನು ಇರಲಿಲ್ಲ.
౨౫తన భార్య యెజెబెలు ప్రేరేపణతో యెహోవా దృష్టిలో కీడు చేయడానికి తన్ను తాను అమ్ముకున్న అహాబులాంటి వాడు ఎవ్వడూ లేడు.
26 ಇದಲ್ಲದೆ ಯೆಹೋವ ದೇವರು ಇಸ್ರಾಯೇಲರ ಮುಂದೆ ಹೊರಡಿಸಿಬಿಟ್ಟ ಅಮೋರಿಯರು ಮಾಡಿದ ಎಲ್ಲಾ ವಿಗ್ರಹಗಳನ್ನು ಹಿಂಬಾಲಿಸಿ ಅಸಹ್ಯವಾಗಿ ನಡೆದನು.
౨౬ఇశ్రాయేలీయుల దగ్గరనుంచి యెహోవా వెళ్లగొట్టిన అమోరీయులు చేసినట్టు, అతడు విగ్రహాలను పెట్టుకుని చాలా నీచంగా ప్రవర్తించాడు.
27 ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು.
౨౭అహాబు ఆ మాటలు విని తన బట్టలు చించుకుని గోనెపట్ట కట్టుకుని ఉపవాసముండి, గోనెపట్ట మీద పడుకుని చాలా విచారించాడు.
28 ಆಗ ಯೆಹೋವ ದೇವರ ವಾಕ್ಯವು ತಿಷ್ಬೀಯನಾದ ಎಲೀಯನಿಗೆ ಉಂಟಾಗಿ,
౨౮యెహోవా తిష్బీ వాడైన ఏలీయాతో ఇలా చెప్పాడు.
29 “ಅಹಾಬನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದನ್ನು ನೋಡಿದಿಯಲ್ಲವೇ? ಅವನು ನನ್ನ ಮುಂದೆ ತನ್ನನ್ನು ತಗ್ಗಿಸಿಕೊಂಡದ್ದರಿಂದ ನಾನು ಅವನ ಜೀವಮಾನದಲ್ಲಿ ಆ ಕೇಡನ್ನು ಬರಮಾಡದೆ, ಅವನ ಮಗನ ಕಾಲದಲ್ಲಿ ಅವನ ಮನೆಯ ಮೇಲೆ ಬರಮಾಡುವೆನು,” ಎಂದನು.
౨౯“అహాబు నా ఎదుట తనను తాను ఎంత తగ్గించుకుంటున్నాడో చూశావా? తనను నా ఎదుట తగ్గించుకుంటున్నాడు కాబట్టి, రాబోయే ఆ కీడును అతని కాలంలో పంపించను. నేనతని కొడుకు రోజుల్లో అతని వంశం మీదికి కీడు రానిస్తాను.”