< ಅರಸುಗಳು - ಪ್ರಥಮ ಭಾಗ 1 >

1 ಅರಸನಾದ ದಾವೀದನು ವೃದ್ಧನಾಗಿಯೂ, ಬಹಳ ಪ್ರಾಯ ಹೋದವನಾಗಿಯೂ ಇರುವಾಗ, ಅವನ ಮೇಲೆ ಹೊದಿಕೆಗಳನ್ನು ಹಾಕಿದರೂ, ಅವನಿಗೆ ಬೆಚ್ಚಗಾಗುತ್ತಿರಲಿಲ್ಲ.
राजा दावीद अब बहुत बूढ़े हो चुके थे. उन्हें ओढ़ाया अवश्य जाता, था मगर कपड़े उनके शरीर को गर्म नहीं रख पा रहे थे.
2 ಆದ್ದರಿಂದ ಅವನ ಸೇವಕರು ಅವನಿಗೆ, “ಅರಸ, ನಮ್ಮ ಒಡೆಯನಿಗೋಸ್ಕರ ಕನ್ನಿಕೆಯನ್ನು ಹುಡುಕುವೆವು. ಅವಳು ಅರಸನ ಬಳಿಯಲ್ಲಿ ನಿಂತು, ಅವನನ್ನು ಜೋಪಾನ ಮಾಡಲಿ. ಅರಸನಾದ ನಮ್ಮ ಒಡೆಯನಿಗೆ ಬೆಚ್ಚಗೆ ಆಗುವ ಹಾಗೆ, ಅವನ ಮಗ್ಗುಲಲ್ಲಿ ಅವಳು ಮಲಗಲಿ,” ಎಂದರು.
इसलिये उनके सेवकों ने उन्हें सलाह दी, “महाराज, हमारे स्वामी के लिए एक जवान लड़की की खोज की जाए, वह महाराज की सेवा करे और उनके सामने ही रहे. वही आपकी गोद में सोया करे, कि महाराज, हमारे स्वामी की देह गर्म रह सके.”
3 ಹಾಗೆಯೇ ಅವರು ಸೌಂದರ್ಯವತಿಯಾದ ಹುಡುಗಿಗೋಸ್ಕರ ಇಸ್ರಾಯೇಲಿನ ಮೇರೆಗಳಲ್ಲೆಲ್ಲಾ ಹುಡುಕಿ, ಶೂನೇಮ್ಯಳಾದ ಅಬೀಷಗ್ ಎಂಬವಳನ್ನು ಕಂಡುಕೊಂಡು, ಅವಳನ್ನು ಅರಸನ ಬಳಿಗೆ ತಂದರು.
तब उन्होंने पूरे इस्राएल में एक सुंदर लड़की को खोजना शुरू कर दिया. उन्हें शुनाम देश में ऐसी लड़की मिल गई, जिसका नाम था अबीशाग. वे उसे राजा के सामने ले आए.
4 ಈ ಸೌಂದರ್ಯವತಿಯಾದ ಹುಡುಗಿಯು ಅರಸನ ಆರೈಕೆ ಮಾಡುತ್ತಾ, ಅವನ ಸೇವೆ ಮಾಡುತ್ತಿದ್ದಳು. ಅರಸನು ಅವಳೊಂದಿಗೆ ಸಂಪರ್ಕ ಮಾಡಲಿಲ್ಲ.
यह जवान लड़की बहुत ही सुंदर थी. उसे राजा की सेविका बना दिया गया, वह उनकी सेवा करने में लग गई; मगर राजा ने उसके साथ शारीरिक संबंध नहीं बनाए.
5 ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು, “ನಾನು ಅರಸನಾಗಿರಬೇಕು,” ಎಂದುಕೊಂಡು, ತನಗೋಸ್ಕರ ರಥಗಳನ್ನೂ, ಸಾರಥಿಯರನ್ನೂ, ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿ ಪುರುಷರನ್ನೂ ಸಿದ್ಧಮಾಡಿದನು.
उसी समय हेग्गीथ के पुत्र अदोनियाह ने अपने आपको ऊंचा उठाते हुए यह घोषणा की: “अगला राजा मैं हूं.” उसने अपने लिए रथ और घुड़सवार भी तैयार कर लिए और अपने आगे-आगे दौड़ने के लिए पचास सैनिक भी.
6 ಅವನ ತಂದೆಯು ಎಂದಾದರೂ, “ನೀನು ಹೀಗೆ ಏಕೆ ಮಾಡಿದೆ?” ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಅವನು ಬಹು ಒಳ್ಳೆಯ ರೂಪವಂತನಾಗಿದ್ದನು. ಅಬ್ಷಾಲೋಮನ ತರುವಾಯ ಅವನ ತಾಯಿ ಅವನನ್ನು ಹೆತ್ತಳು.
उसके पिता ने उससे यह प्रश्न करते हुए कभी नहीं रोका: “तुमने ऐसा क्यों किया है?” अदोनियाह एक सुंदर युवक था. उसका जन्म अबशालोम के ठीक बाद ही हुआ था.
7 ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು.
अदोनियाह ने जाकर ज़ेरुइयाह के पुत्र योआब और पुरोहित अबीयाथर से मिलकर बातचीत की. उन्होंने अदोनियाह की तरफ होकर उसकी सहायता भी की.
8 ಆದರೆ ಯಾಜಕನಾದ ಚಾದೋಕನೂ, ಯೆಹೋಯಾದಾವನ ಮಗ ಬೆನಾಯನೂ, ಪ್ರವಾದಿಯಾದ ನಾತಾನನೂ, ಶಿಮ್ಮಿಯೂ, ರೇಯಿಯೂ, ದಾವೀದನ ಪರಾಕ್ರಮಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.
मगर पुरोहित सादोक, यहोयादा का पुत्र बेनाइयाह, भविष्यद्वक्ता नाथान, शिमेई, रेइ और दावीद के वीर योद्धाओं ने अदोनियाह को समर्थन नहीं दिया.
9 ಅದೋನೀಯನು ಏನ್ ರೋಗೆಲಿನ ಬಳಿಯಲ್ಲಿರುವ ಚೋಹೆಲೆತ್ ಎಂಬ ಕಲ್ಲಿನ ಹತ್ತಿರ ಕುರಿಗಳನ್ನೂ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳಾದ ತನ್ನ ಸಮಸ್ತ ಸಹೋದರರನ್ನೂ, ಅರಸನ ಸೇವಕರಾದ ಸಮಸ್ತ ಯೆಹೂದದ ಜನರನ್ನೂ ಔತಣಕ್ಕೆ ಕರೆದನು.
अदोनियाह ने एन-रोगेल नामक स्थान पर जाकर ज़ोहेलेथ नामक चट्टान के पास भेड़ों, बैलों और हष्ट-पुष्ट पशुओं की बलि चढ़ाई. इस मौके पर उसने अपने सभी भाइयों—राजकुमारों और यहूदिया के राजकीय अधिकारियों को तो आमंत्रित किया था,
10 ಆದರೆ ಪ್ರವಾದಿಯಾದ ನಾತಾನನನ್ನೂ, ಬೆನಾಯನನ್ನೂ, ಪರಾಕ್ರಮಶಾಲಿಗಳನ್ನೂ, ತನ್ನ ಸಹೋದರನಾದ ಸೊಲೊಮೋನನನ್ನೂ ಕರೆಯಲಿಲ್ಲ.
मगर उसने इस मौके पर न तो भविष्यद्वक्ता नाथान को, न तो बेनाइयाह को न अपने भाई शलोमोन को और न किसी वीर योद्धा को आमंत्रित किया.
11 ಆಗ ನಾತಾನನು ಸೊಲೊಮೋನನ ತಾಯಿ ಬತ್ಷೆಬೆಳಿಗೆ, “ನಮ್ಮ ಒಡೆಯ ದಾವೀದನು ಅರಿಯದಿರುವಾಗ, ಹಗ್ಗೀತಳ ಮಗ ಅದೋನೀಯನು ಅರಸನಾಗಿದ್ದಾನೆ, ಎಂದು ನೀನು ಕೇಳಲಿಲ್ಲವೋ?
नाथान ने शलोमोन की माता बैथशेबा से कहा, “क्या तुमने सुना नहीं कि हेग्गीथ का पुत्र अदोनियाह राजा बन गया है, और दावीद हमारे स्वामी इससे अनजान हैं?”
12 ಆದ್ದರಿಂದ ನೀನು ನಿನ್ನ ಪ್ರಾಣವನ್ನೂ, ನಿನ್ನ ಮಗ ಸೊಲೊಮೋನನ ಪ್ರಾಣವನ್ನೂ ರಕ್ಷಿಸಿಕೊಳ್ಳುವ ಹಾಗೆ ಅಪ್ಪಣೆಯಾದರೆ, ನಿನಗೆ ಆಲೋಚನೆ ಹೇಳುತ್ತೇನೆ.
इसलिये अब मेरी सलाह सुनो, कि तुम अपना और अपने पुत्र शलोमोन का जीवन सुरक्षित रख सको:
13 ನೀನು ಅರಸನಾದ ದಾವೀದನ ಬಳಿಗೆ ಹೋಗಿ ಅವನಿಗೆ, ‘ಅರಸನಾದ ನನ್ನ ಒಡೆಯನೇ, “ನಿಶ್ಚಯವಾಗಿ ನನ್ನ ತರುವಾಯ ನಿನ್ನ ಮಗನಾದ ಸೊಲೊಮೋನನು ಆಳುವನೆಂದೂ, ಅವನು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ,” ನೀವು ನಿನ್ನ ದಾಸಿಗೆ ಆಣೆ ಇಟ್ಟು ಹೇಳಲಿಲ್ಲವೋ? ಹೀಗಿರಲಾಗಿ ಅದೋನೀಯನು ಆಳುವುದು ಏಕೆ?’ ಎಂದು ಕೇಳು.
इसी समय राजा दावीद से जाकर कहो, “महाराज, मेरे स्वामी, क्या आपने अपनी दासी से यह शपथ न ली थी, ‘मेरे बाद तुम्हारा पुत्र शलोमोन ही राजा बनेगा, वही मेरे सिंहासन पर बैठेगा? तो फिर अदोनियाह राजा कैसे बन बैठा?’
14 ನೀನು, ಇನ್ನೂ ಅರಸನ ಸಂಗಡ ಮಾತನಾಡುತ್ತಿರುವಾಗ, ನಾನು ನಿನ್ನ ಹಿಂದೆಯೇ ಒಳಗೆ ಬಂದು, ನಿನ್ನ ಮಾತುಗಳನ್ನು ಸ್ಥಿರಮಾಡುವೆನು,” ಎಂದನು.
जब तुम राजा से बातचीत कर ही रही होगी, मैं वहां तुम्हारे पीछे-पीछे आ जाऊंगा और तुम्हारी बातों में हामी भरूंगा.”
15 ಆಗ ಬತ್ಷೆಬೆಳು ಬಹು ವೃದ್ಧನಾಗಿದ್ದ ದಾವೀದನನ್ನು ನೋಡಲು ಅರಸನ ಕೊಠಡಿಯೊಳಗೆ ಹೋದಳು. ಅಲ್ಲಿ ಶೂನೇಮ್ಯಳಾದ ಅಬೀಷಗ್ ಅರಸನಿಗೆ ಸೇವೆಮಾಡುತ್ತಾ ಇದ್ದಳು.
तब बैथशेबा राजा के कमरे में गई. राजा बहुत ही बूढ़े हो चुके थे और शूनामी अबीशाग उनकी सेवा में लगी थी.
16 ಆಗ ಬತ್ಷೆಬೆಳು ಅರಸನಿಗೆ ಬಾಗಿ ನಮಸ್ಕರಿಸಿದಳು. ಅರಸನಾದ ದಾವೀದನು, “ನಿನಗೇನು ಬೇಕು?” ಎಂದನು.
बैथशेबा ने झुककर राजा को नमस्कार किया. राजा ने उससे पूछा, “क्या चाहती हो तुम?”
17 ಆಕೆಯು ಅರಸನಿಗೆ, “ನನ್ನ ಒಡೆಯನೇ, ನಿಶ್ಚಯವಾಗಿ ನಿನ್ನ ಮಗ ಸೊಲೊಮೋನನು ಆಳುವನೆಂದೂ, ಅವನು ನಿನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ, ನೀವು ನಿನ್ನ ದಾಸಿಗೆ ನಿನ್ನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ಪ್ರಮಾಣ ಮಾಡಿದಿರಿ.
बैथशेबा ने उन्हें उत्तर दिया, “मेरे स्वामी, आपने अपनी सेविका से याहवेह, आपके परमेश्वर की शपथ ली थी, ‘तुम्हारा पुत्र शलोमोन ही मेरे बाद राजा होगा, और वह मेरे राज सिंहासन पर बैठेगा.’
18 ಆದರೆ, ಅರಸನಾಗಿರುವ ನನ್ನ ಒಡೆಯನಾದ ನೀವು ಅರಿಯದೆ ಇರುವಾಗ, ಅದೋನೀಯನು ರಾಜನಾಗಿಬಿಟ್ಟಿದ್ದಾನೆ.
अब देखिए, अदोनियाह राजा बन बैठा है, जबकि महाराज, मेरे स्वामी, आपको इसके बारे में पता ही नहीं है.
19 ಇದಲ್ಲದೆ ಅವನು ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಬಲಿಯಾಗಿ ಅರ್ಪಿಸಿದ್ದಾನೆ, ಅರಸನ ಮಕ್ಕಳೆಲ್ಲರನ್ನೂ, ಯಾಜಕನಾದ ಅಬಿಯಾತರನನ್ನೂ, ಸೇನಾಧಿಪತಿ ಯೋವಾಬನನ್ನೂ ಔತಣಕ್ಕೆ ಕರೆದಿದ್ದಾನೆ. ಆದರೆ ನಿನ್ನ ಸೇವಕನಾದ ಸೊಲೊಮೋನನನ್ನು ಅವನು ಕರೆಯಲಿಲ್ಲ.
अदोनियाह ने बड़ी संख्या में बैलों, हष्ट-पुष्ट पशुओं और भेड़ों की बलि चढ़ाई है, और उसने राजा के सभी पुत्रों को पुरोहित अबीयाथर और सेनापति योआब को भी बुलाया है, मगर आपके सेवक शलोमोन को इसके लिए नहीं बुलाया गया है.
20 ಆದ್ದರಿಂದ ಅರಸನಾದ ನನ್ನ ಒಡೆಯನೇ, ನಿಮ್ಮ ತರುವಾಯ ನನ್ನ ಒಡೆಯನಾದ ಅರಸನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನೀವು ಹೇಳುವ ಹಾಗೆ, ಸಮಸ್ತ ಇಸ್ರಾಯೇಲರ ಕಣ್ಣುಗಳು ನಿಮ್ಮ ಮೇಲೆ ಇರುತ್ತವೆ.
महाराज, मेरे स्वामी, इस समय सारे इस्राएल की नज़रें आप पर लगी हैं, कि आप यह घोषणा करें कि महाराज, मेरे स्वामी के बाद कौन सिंहासन पर बैठेगा.
21 ಇಲ್ಲದಿದ್ದರೆ ನನ್ನ ಒಡೆಯನೂ ಅರಸನೂ ತನ್ನ ಪಿತೃಗಳ ಸಂಗಡ ಸಮಾಧಿ ಸೇರಿದಾಗ, ನಾನೂ, ನನ್ನ ಮಗ ಸೊಲೊಮೋನನೂ ಅಪರಾಧಿಗಳಾಗಿ ಎಣಿಕೆಯಾಗುವೆವು,” ಎಂದಳು.
नहीं तो यही होगा कि जैसे ही आप मेरे स्वामी हमेशा के लिए अपने पूर्वजों में जा मिलेंगे, मुझे और मेरे पुत्र शलोमोन को अपराधी घोषित कर दिया जाएगा.”
22 ಅವಳು ಅರಸನ ಸಂಗಡ ಇನ್ನೂ ಮಾತನಾಡುತ್ತಿರುವಾಗ, ಪ್ರವಾದಿಯಾದ ನಾತಾನನು ಬಂದನು.
बैथशेबा राजा से यह बातें कर ही रही थी, कि भविष्यद्वक्ता नाथान वहां आ गए.
23 ಆಗ ಅರಸನಿಗೆ, “ಪ್ರವಾದಿಯಾದ ನಾತಾನನು,” ಎಂದರು. ಅವನು ಒಳಗೆ ಅರಸನ ಮುಂದೆ ಬಂದಾಗ, ಮೋರೆ ಕೆಳಗಾಗಿ ನೆಲಕ್ಕೆ ಅಡ್ಡಬಿದ್ದನು.
उन्हें बताया गया, “भविष्यद्वक्ता नाथान आए हैं.” जब भविष्यद्वक्ता नाथान राजा के सामने पहुंचे, उन्होंने राजा को दंडवत किया.
24 ಆಗ ನಾತಾನನು, “ಅರಸನಾದ ನನ್ನ ಒಡೆಯನೇ, ಅದೋನೀಯನು, ನನ್ನ ತರುವಾಯ ಆಳುವನೆಂದೂ, ನನ್ನ ಸಿಂಹಾಸನ ಮೇಲೆ ಕುಳಿತುಕೊಳ್ಳುವನೆಂದೂ, ನೀವು ಹೇಳಿದ್ದು ಹೌದೋ?
इसके बाद नाथान ने कहा, “महाराज, मेरे स्वामी, क्या यह आपकी घोषणा है ‘मेरे बाद अदोनियाह राज करेगा, वही मेरे सिंहासन पर बैठेगा?’
25 ಏಕೆಂದರೆ ಈ ಹೊತ್ತು ಅವನು ಇಳಿದು ಹೋಗಿ, ಎತ್ತುಗಳನ್ನೂ, ಕೊಬ್ಬಿದ ಪಶುಗಳನ್ನೂ, ಕುರಿಗಳನ್ನೂ ಕೊಲ್ಲಿಸಿ, ಅರಸನ ಮಕ್ಕಳೆಲ್ಲರನ್ನೂ, ಸೈನ್ಯಾಧಿಪತಿಗಳನ್ನೂ, ಯಾಜಕನಾದ ಅಬಿಯಾತರನನ್ನೂ ಕರೆದಿದ್ದಾನೆ. ಅವರು ಅವನ ಮುಂದೆ ತಿಂದು, ಕುಡಿದು, ‘ಅರಸನಾದ ಅದೋನೀಯನು ಚಿರಂಜೀವಿಯಾಗಿರಲಿ,’ ಎಂದು ಹೇಳುತ್ತಿದ್ದಾರೆ.
क्योंकि आज उसने जाकर बैल, हष्ट-पुष्ट पशु और बड़ी मात्रा में भेड़ों की बलि चढ़ाई है. इस मौके पर उसने सभी राजकुमारों, सेनापतियों और पुरोहित अबीयाथर को भी आमंत्रित किया है. ये सभी इस समय उसकी उपस्थिति में यह कहते हुए खुशी मना रहे है. ‘अदोनियाह सदा जीवित रहे!’
26 ಆದರೆ ನಿನ್ನ ಸೇವಕನಾದ ನನ್ನನ್ನೂ, ಯಾಜಕನಾದ ಚಾದೋಕನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ನಿಮ್ಮ ಸೇವಕನಾದ ಸೊಲೊಮೋನನನ್ನೂ, ಅವನು ಕರೆಯಲೇ ಇಲ್ಲ.
मगर अदोनियाह ने मुझे, हां मुझे, आपके सेवक को, पुरोहित सादोक को, यहोयादा के पुत्र बेनाइयाह और आपके सेवक शलोमोन को नहीं बुलाया है.
27 ಅರಸನಾದ ನನ್ನ ಒಡೆಯನಿಂದ ಈ ಕಾರ್ಯವಾಯಿತೋ? ಅರಸನಾದ ನನ್ನ ಒಡೆಯನು, ತನ್ನ ತರುವಾಯ ತನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವವನು ಯಾರೆಂದು ನಿಮ್ಮ ಸೇವಕನಾದ ನನಗೆ ನೀವು ತಿಳಿಸದೆ ಹೋದಿರೋ?” ಎಂದನು.
क्या, यह सब महाराज, मेरे स्वामी द्वारा किया गया है, और आपने अपने इन सेवकों को इस बात की सूचना देना सही न समझा, कि महाराज, मेरे स्वामी के बाद उनके सिंहासन पर कौन बैठेगा?”
28 ಆಗ ಅರಸನಾದ ದಾವೀದನು ಉತ್ತರವಾಗಿ, “ಬತ್ಷೆಬೆಳನ್ನು ನನ್ನ ಬಳಿಗೆ ಕರೆಯಿರಿ,” ಎಂದನು. ಅವಳು ಅರಸನ ಸನ್ನಿಧಾನಕ್ಕೆ ಬಂದು ಅರಸನ ಮುಂದೆ ನಿಂತಳು.
जब राजा दावीद ने यह सुना, उन्होंने आदेश दिया, “मेरे सामने बैथशेबा को बुलाया जाए.” बैथशेबा आकर राजा के सामने खड़ी हो गई.
29 ಅರಸನು ಆಕೆಗೆ, “ನಿಶ್ಚಯವಾಗಿ, ನಿನ್ನ ಮಗ ಸೊಲೊಮೋನನು ನನ್ನ ತರುವಾಯ ಆಳುವನೆಂದೂ,
राजा ने यह शपथ लेते हुए कहा, “जीवित याहवेह की शपथ, जिन्होंने मुझे हर एक मुसीबत में से निकाला है,
30 ಅವನು ನನಗೆ ಬದಲಾಗಿ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವನೆಂದೂ ನಾನು ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿನಲ್ಲಿ ನಿನಗೆ ಹೇಗೆ ಆಣೆ ಇಟ್ಟು ಹೇಳಿದೆನೋ ಹಾಗೆಯೇ, ಈ ದಿನ ನಿಶ್ಚಯವಾಗಿ ಮಾಡುವೆನೆಂದೂ ಸಮಸ್ತ ಇಕ್ಕಟ್ಟಿನೊಳಗಿಂದ ನನ್ನ ಪ್ರಾಣವನ್ನು ವಿಮೋಚಿಸಿದ ಯೆಹೋವ ದೇವರ ಮೇಲೆ ಆಣೆ ಇಡುತ್ತೇನೆ,” ಎಂದೂ ಪ್ರಮಾಣವಾಗಿ ಹೇಳಿದನು.
मैंने इस्राएल के परमेश्वर, याहवेह के सामने जो शपथ ली थी, ‘तुम्हारा पुत्र शलोमोन मेरे बाद राजा होगा और वही मेरी जगह पर मेरे सिंहासन पर बैठेगा,’ मैं आज ठीक यही पूरा करूंगा.”
31 ಬತ್ಷೆಬೆಳು ಮುಖವನ್ನು ನೆಲಕ್ಕೆ ಬಗ್ಗಿಸಿ, ಅರಸನನ್ನು ವಂದಿಸಿ, “ನನ್ನ ಒಡೆಯನೂ, ಅರಸನೂ ಆದ ದಾವೀದನು ಎಂದೆಂದಿಗೂ ಬದುಕಲಿ,” ಎಂದಳು.
यह सुन बैथशेबा ने झुककर राजा को दंडवत करते हुए कहा, “राजा दावीद, मेरे स्वामी, सदा जीवित रहें.”
32 ಆಗ ಅರಸನಾದ ದಾವೀದನು, “ಯಾಜಕನಾದ ಚಾದೋಕನನ್ನೂ, ಪ್ರವಾದಿಯಾದ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ ನನ್ನ ಬಳಿಗೆ ಕರೆಯಿರಿ,” ಎಂದನು. ಅವರು ಅರಸನ ಸಮ್ಮುಖಕ್ಕೆ ಬಂದರು.
राजा दावीद ने आदेश दिया, “पुरोहित सादोक, भविष्यद्वक्ता नाथान और यहोयादा के पुत्र बेनाइयाह को मेरे सामने बुलाया जाए.” जब वे राजा के सामने आए,
33 ಅರಸನು ಅವರಿಗೆ, “ನೀವು ನಿಮ್ಮ ಯಜಮಾನನ ಸೇವಕರನ್ನು ಕರೆದುಕೊಂಡು ಹೋಗಿ ನನ್ನ ಮಗ ಸೊಲೊಮೋನನನ್ನು ನನ್ನ ಸ್ವಂತ ಹೇಸರಕತ್ತೆಯ ಮೇಲೆ ಏರಿಸಿ ಗೀಹೋನಿಗೆ ಅವನನ್ನು ಕರೆದುಕೊಂಡು ಹೋಗಿರಿ.
राजा ने उन्हें आदेश दिया, “मेरे पुत्र शलोमोन को मेरे निज खच्चर पर चढ़ाकर उसे अपने स्वामी के सेवकों के साथ लेकर गीहोन चले जाओ.
34 ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ.
वहां पहुंचकर पुरोहित सादोक और भविष्यद्वक्ता नाथान इस्राएल का राजा होने के लिए शलोमोन को अभिषेक करें. इसके बाद नरसिंग फूंकने के साथ यह घोषणा की जाए. ‘राजा शलोमोन सदा जीवित रहें!’
35 ಆಗ ಅವನು ಬಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಹಾಗೆ, ನೀವು ಅವನ ಹಿಂದೆ ಬನ್ನಿರಿ. ಏಕೆಂದರೆ ಅವನು ನನಗೆ ಬದಲಾಗಿ ಅರಸನಾಗಿರುವನು. ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ, ನಾಯಕನಾಗಿರಲು ನಾನು ಅವನನ್ನು ನೇಮಿಸಿದ್ದೇನೆ,” ಎಂದನು.
आप सभी इसके बाद शलोमोन के पीछे-पीछे आएं. तब वह यहां आकर मेरे राज सिंहासन पर बैठे कि वह मेरे बाद मेरी जगह पर राजा हो जाए; क्योंकि खुद मैंने उसे यहूदिया और इस्राएल पर राजा बनाया है.”
36 ಯೆಹೋಯಾದಾವನ ಮಗ ಬೆನಾಯನು ಅರಸನಿಗೆ ಉತ್ತರವಾಗಿ, “ಆಮೆನ್, ಅರಸನಾದ ನನ್ನ ಒಡೆಯನ ದೇವರಾದ ಯೆಹೋವ ದೇವರು ಹಾಗೆಯೇ ಹೇಳಲಿ.
यहोयादा के पुत्र बेनाइयाह ने राजा से कहा, “आमेन! महाराज, मेरे स्वामी के परमेश्वर, याहवेह भी ऐसा ही कहें.
37 ಯೆಹೋವ ದೇವರು ಅರಸನಾದ ನನ್ನ ಒಡೆಯನ ಸಂಗಡ ಹೇಗೆ ಇದ್ದರೋ, ಹಾಗೆಯೇ ಸೊಲೊಮೋನನ ಸಂಗಡ ಇದ್ದು, ನನ್ನ ಒಡೆಯನೂ, ಅರಸನೂ ಆದ ದಾವೀದನ ಸಿಂಹಾಸನಕ್ಕಿಂತ ಇವನ ಸಿಂಹಾಸನವನ್ನು ಅಧಿಕವಾಗಿ ಮಾಡಲಿ,” ಎಂದನು.
जिस प्रकार याहवेह महाराज, मेरे स्वामी के साथ साथ रहे हैं, उसी प्रकार वह शलोमोन के साथ साथ बने रहें, और उसके सिंहासन को मेरे स्वामी, राजा दावीद के सिंहासन से भी अधिक बढ़ाएं.”
38 ಆಗ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ, ಯೆಹೋಯಾದಾವನ ಮಗ ಬೆನಾಯನೂ, ಕೆರೇತ್ಯರೂ, ಪೆಲೇತ್ಯರೂ ಹೋಗಿ, ಸೊಲೊಮೋನನನ್ನು ಅರಸನಾದ ದಾವೀದನ ಹೇಸರಕತ್ತೆಯ ಮೇಲೆ ಕುಳ್ಳಿರಿಸಿಕೊಂಡು ಗೀಹೋನಿಗೆ ಕರೆತಂದರು.
तब पुरोहित सादोक, भविष्यद्वक्ता नाथान, यहोयादा का पुत्र बेनाइयाह और केरेथि और पेलेथी शलोमोन को राजा दावीद के निज खच्चर पर बैठाकर उसे गीहोन ले गए.
39 ಆಗ ಯಾಜಕನಾದ ಚಾದೋಕನು ಗುಡಾರದೊಳಗಿಂದ ತೈಲದ ಕೊಂಬನ್ನು ತಂದು ಸೊಲೊಮೋನನನ್ನು ಅಭಿಷೇಕಿಸಿದನು. ಅವರು ತುತೂರಿಯನ್ನು ಊದಿದರು. ಆಗ ಜನರೆಲ್ಲರು, “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ,” ಎಂದರು.
वहां पुरोहित सादोक ने मिलनवाले तंबू से लाए हुए सींग के तेल से शलोमोन का अभिषेक किया. तब उन्होंने नरसिंगा फूंका और सभी ने एक आवाज में यह नारे लगाए: “राजा शलोमोन सदा जीवित रहें!”
40 ಇದಲ್ಲದೆ ಜನರೆಲ್ಲರೂ ಅವನನ್ನು ಹಿಂಬಾಲಿಸಿದರು. ಜನರು ಕೊಳಲು ಊದಿ ಮಹಾ ಆನಂದದಿಂದ ಸಂತೋಷಿಸಿದರು. ಅವರ ಶಬ್ದದಿಂದ ಭೂಮಿಯು ಕಂಪಿಸಿತು.
तब सारी भीड़ बड़े ही आनंद में बांसुरी बजाते हुए राजा के पीछे-पीछे चलने लगी. इतनी तेज थी उनकी आवाज कि इससे धरती डोल उठी!
41 ಆಗ ಅದೋನೀಯನೂ, ಅವನ ಸಂಗಡ ಕರೆಹೊಂದಿದವರೂ ತಿಂದು, ತೀರಿಸಿದಾಗ ಅದನ್ನು ಕೇಳಿದರು. ಯೋವಾಬನು ತುತೂರಿಯ ಶಬ್ದವನ್ನು ಕೇಳಿದಾಗ, “ಪಟ್ಟಣದಲ್ಲಿ ಗದ್ದಲದ ಶಬ್ದವೇಕೆ?” ಎಂದನು.
यह आवाज अदोनियाह और उसके सभी अतिथियों ने भी सुनी. इस समय वे अपना भोजन खत्म कर ही रहे थे. जैसे ही योआब ने नरसिंगे की आवाज सुनी, वह पूछने लगा, “नगर में इस चिल्लाहट का कारण क्या है?”
42 ಅವನು ಇನ್ನೂ ಮಾತನಾಡುತ್ತಿರುವಾಗ, ಯಾಜಕನಾಗಿರುವ ಅಬಿಯಾತರನ ಮಗ ಯೋನಾತಾನನು ಬಂದನು. ಅದೋನೀಯನು ಅವನಿಗೆ, “ಒಳಗೆ ಬಾ. ಏಕೆಂದರೆ ನೀನು ಯೋಗ್ಯ ಮನುಷ್ಯನೂ, ಒಳ್ಳೆಯ ಸಮಾಚಾರ ತರುವವನೂ ಆಗಿರುತ್ತೀ?” ಎಂದನು.
वह यह पूछताछ कर ही रहा था, कि पुरोहित अबीयाथर का पुत्र योनातन वहां आ पहुंचा. अदोनियाह ने उससे कहा, “यहां आओ तुम भले व्यक्ति हो, इसलिये भला समाचार ही लाए होगे.”
43 ಆಗ ಯೋನಾತಾನನು ಅದೋನೀಯನಿಗೆ, ನಿಶ್ಚಯವಾಗಿ ಒಳ್ಳೆಯ ಸಮಾಚಾರವಲ್ಲ! “ನಮ್ಮ ಒಡೆಯನೂ ಅರಸನೂ ಆಗಿರುವ ದಾವೀದನು ಸೊಲೊಮೋನನನ್ನು ಅರಸನಾಗಿ ಮಾಡಿದ್ದಾನೆ.
योनातन ने उसे उत्तर दिया, “नहीं! हमारे स्वामी, महाराज दावीद ने शलोमोन को राजा बना दिया है.
44 ಇದಲ್ಲದೆ ಅರಸನು ಅವನ ಸಂಗಡ ಯಾಜಕನಾದ ಚಾದೋಕನನ್ನೂ, ಪ್ರವಾದಿ ನಾತಾನನನ್ನೂ, ಯೆಹೋಯಾದಾವನ ಮಗ ಬೆನಾಯನನ್ನೂ, ಕೆರೇತ್ಯರನ್ನೂ, ಪೆಲೇತ್ಯರನ್ನೂ ಕಳುಹಿಸಿದ್ದಾನೆ. ಅವರು ಅವನನ್ನು ಅರಸನ ಹೇಸರಕತ್ತೆಯ ಮೇಲೆ ಕೂಡಿಸಿಕೊಂಡು ಹೋಗಿ,
राजा दावीद ने उसे पुरोहित सादोक, भविष्यद्वक्ता नाथान, यहोयादा के पुत्र बेनाइयाह और केरेथि और पेलेथी भी उसके साथ भेजे हैं. इसके अलावा उन्होंने शलोमोन को राजा दावीद के निज खच्चर पर भी चढ़ा दिया है.
45 ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಸೊಲೊಮೋನನನ್ನು ಗೀಹೋನಿನಲ್ಲಿ ಅರಸನಾಗಿರಲು ಅಭಿಷೇಕಿಸಿದ್ದಾರೆ. ಅವರು ಸಂತೋಷಪಡುತ್ತಾ ಅಲ್ಲಿಂದ ಬಂದ ಕಾರಣ ಪಟ್ಟಣವು ಗದ್ದಲವಾಯಿತು. ನೀವು ಕೇಳುವ ಆರ್ಭಟವು ಇದೇ.
पुरोहित सादोक और भविष्यद्वक्ता नाथान ने गीहोन में शलोमोन का राजाभिषेक कर दिया है. वे सभी वहां से बड़ी ही खुशी में लौटे हैं. इसलिये नगर में यह आनंद मनाने की आवाज सुनाई दे रही है. यही है वह चिल्लाहट, जो आपने सुनी है.
46 ಇದಲ್ಲದೆ ಸೊಲೊಮೋನನು ರಾಜ್ಯ ಸಿಂಹಾಸನದ ಮೇಲೆ ಕುಳಿತುಕೊಂಡಿದ್ದಾನೆ.
इन सबके अलावा अब शलोमोन राज सिंहासन पर बैठे हैं.
47 ಇದರ ಹೊರತು ಅರಸನ ಸೇವಕರೂ, ನಮ್ಮ ಯಜಮಾನನೂ, ಅರಸನೂ ಆದ ದಾವೀದನನ್ನು ಆಶೀರ್ವದಿಸಲು ಬಂದು, ‘ದೇವರು ಸೊಲೊಮೋನನ ಹೆಸರನ್ನು ನಿಮ್ಮ ಹೆಸರಿಗಿಂತಲೂ ಪ್ರಸಿದ್ಧ ಮಾಡಲಿ. ಅವನ ಸಿಂಹಾಸನವನ್ನು ನಿಮ್ಮ ಸಿಂಹಾಸನಕ್ಕಿಂತ ದೊಡ್ಡದಾಗಿ ಮಾಡಲಿ,’ ಎಂದೂ ಹೇಳುತ್ತಿರುವಾಗ, ಅರಸನು ಮಂಚದ ಮೇಲೆ ಬಾಗಿ,
वह सब होने के बाद राजा के सेवकों ने जाकर महाराज, हमारे स्वामी को यह कहते हुए बधाईयां दी है ‘परमेश्वर शलोमोन के नाम को आपके नाम से भी अधिक ऊंचा करें, उनके राज सिंहासन को आपके राज सिंहासन से भी अधिक बढ़ाएं.’ यह सुन महाराज ने अपने पलंग पर ही दंडवत किया.
48 ‘ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಉತ್ತರಾಧಿಕಾರಿಯನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ,’ ಎಂದು ಹೇಳಿದ್ದಾರೆ,” ಎಂದನು.
साथ ही राजा ने यह भी कहा, ‘धन्य हैं, याहवेह, इस्राएल के परमेश्वर, जिन्होंने आज किसी को मेरे सिंहासन पर बैठने के लिए चुना है, और उसे खुद मेरी आंखों ने देख लिया है.’”
49 ಆಗ ಅದೋನೀಯನ ಸಂಗಡ ಔತಣಕ್ಕೆ ಬಂದಿದ್ದ ಎಲ್ಲರೂ ಹೆದರಿಕೊಂಡು ಎದ್ದು, ತಮ್ಮ ತಮ್ಮ ಸ್ಥಳಗಳಿಗೆ ಹೊರಟು ಹೋದರು.
यह सुन अदोनियाह के सभी अतिथि बहुत ही डर गए. वे सभी उसी समय उठकर अपने-अपने रास्ते पर निकल गए.
50 ಆದರೆ ಅದೋನೀಯನು ಸೊಲೊಮೋನನಿಗೆ ಭಯಪಟ್ಟದ್ದರಿಂದ ಎದ್ದು ಹೋಗಿ ಬಲಿಪೀಠದ ಕೊಂಬುಗಳನ್ನು ಹಿಡಿದುಕೊಂಡನು.
फिर अदोनियाह मन ही मन शलोमोन से डरने लगा; इसलिये उसने तुरंत जाकर वेदी के सींग पकड़ लिए. शलोमोन को इस बात की ख़बर इस प्रकार दी गई:
51 ಆಗ ಒಬ್ಬನು ಅರಸನಾದ ಸೊಲೊಮೋನನಿಗೆ, “ಅದೋನೀಯನು, ನಿನಗೆ ಭಯಪಡುತ್ತಾನೆ. ಏಕೆಂದರೆ ಇಗೋ, ಅವನು ಬಲಿಪೀಠದ ಕೊಂಬುಗಳನ್ನು ಹಿಡಿದು, ‘ಅರಸನಾದ ಸೊಲೊಮೋನನು ಖಡ್ಗದಿಂದ ತನ್ನ ಸೇವಕನನ್ನು ಕೊಲ್ಲುವುದಿಲ್ಲವೆಂದು ಈ ಹೊತ್ತು ನನಗೆ ಆಣೆ ಇಡಲಿ,’ ಎಂದು ಹೇಳುತ್ತಾನೆ,” ಎಂದನು.
“सुनिए, सुनिए! अदोनियाह महाराज से डरता है, इसलिये उसने जाकर यह कहते हुए वेदी के सींग थाम लिए हैं, ‘आज महाराज शलोमोन यह शपथ लें, कि वह अपने सेवक को तलवार से नहीं मारेंगे.’”
52 ಅದಕ್ಕೆ ಸೊಲೊಮೋನನು, “ಅವನು ಉತ್ತಮನಾಗಿ ನಡೆಯುವುದಾದರೆ, ಅವನ ಕೂದಲಲ್ಲಿ ಒಂದಾದರೂ ನೆಲಕ್ಕೆ ಬೀಳದು. ಆದರೆ ಅವನಲ್ಲಿ ಕೆಟ್ಟತನವು ಸಿಕ್ಕಿದರೆ ಅವನು ಸಾಯುವನು,” ಎಂದನು.
शलोमोन ने उत्तर दिया, “यदि वह अपने आपको एक अच्छा व्यक्ति साबित करे, उसका ज़रा सा भी नुकसान न होगा; मगर यदि उसमें दुष्टता का अंश भी पाया गया तो उसकी मृत्यु तय है.”
53 ಅರಸನಾದ ಸೊಲೊಮೋನನು ಅವನನ್ನು ಕರೆಸಿದಾಗ, ಬಲಿಪೀಠದ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಆಗ ಅವನು ಬಂದು ಅರಸನಾದ ಸೊಲೊಮೋನನಿಗೆ ಅಡ್ಡಬಿದ್ದನು. ಸೊಲೊಮೋನನು ಅವನಿಗೆ, “ನಿನ್ನ ಮನೆಗೆ ಹೋಗು,” ಎಂದನು.
राजा शलोमोन ने आदेश दिया कि उसे वेदी से लाकर उनके सामने पेश किया जाए. वह लाया गया, और उसे राजा शलोमोन के सामने पेश किया गया. वह आया और राजा शलोमोन के सामने दंडवत हो गया. राजा शलोमोन ने उसे आदेश दिया, “आप अपने घर को लौट जाइए.”

< ಅರಸುಗಳು - ಪ್ರಥಮ ಭಾಗ 1 >