< ಸಮುವೇಲನು - ಪ್ರಥಮ ಭಾಗ 13 >

1 ಸೌಲನು ಅರಸನಾದಾಗ ಮೂವತ್ತು ವರ್ಷ ಪ್ರಾಯದವನಾಗಿದ್ದನು. ಅವನು ಇಸ್ರಾಯೇಲರ ಮೇಲೆ ನಲವತ್ತೆರಡು ವರ್ಷಕಾಲ ಆಳಿದನು.
शासन शुरू करते समय शाऊल की आयु तीस वर्ष की थी, और उन्होंने इस्राएल पर चालीस वर्ष तक शासन किया.
2 ಸೌಲನು ಇಸ್ರಾಯೇಲರೊಳಗಿಂದ ಮೂರು ಸಾವಿರ ಜನ ಪುರುಷರನ್ನು ಆಯ್ದುಕೊಂಡನು. ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯು, ಬೇತೇಲಿನ ದಿನ್ನೆ ಪ್ರದೇಶಗಳಲ್ಲಿಯು ಇದ್ದರು. ಒಂದು ಸಾವಿರ ಜನರು ಬೆನ್ಯಾಮೀನ್ಯರ ಗಿಬೆಯದಲ್ಲಿ ಯೋನಾತಾನನ ಜೊತೆಗಿದ್ದರು. ಉಳಿದ ಜನರನ್ನು ಅವನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.
इस्राएल राष्ट्र में से शाऊल ने अपने लिए तीन हज़ार पुरुषों को चुना. इनमें से दो हज़ार उनके साथ बेथेल के पहाड़ी क्षेत्र के नगर मिकमाश में तथा शेष एक हज़ार बिन्यामिन की सीमा में गिबिया नामक स्थान में योनातन के साथ रहने लगे. शाऊल ने बाकी सभी को घर लौट जाने का आदेश दिया.
3 ಯೋನಾತಾನನು ಗಿಬೆಯದಲ್ಲಿ ಫಿಲಿಷ್ಟಿಯರ ಠಾಣವನ್ನು ಹೊಡೆದನು; ಫಿಲಿಷ್ಟಿಯರಿಗೆ ಅದು ತಿಳಿದುಬಂತು. ಆದ್ದರಿಂದ ಸೌಲನು ದೇಶದಲ್ಲೆಲ್ಲಾ ಹಿಬ್ರಿಯರು ಕೇಳಲೆಂದು ತುತೂರಿಯನ್ನು ಊದಿಸಿದನು.
योनातन ने गेबा में स्थित फिलिस्तीनियों की टुकड़ी को हरा दिया. फिलिस्तीनियों को इसकी सूचना प्राप्‍त हो गई. स्थिति को समझते हुए शाऊल ने सारे इस्राएल में यह संदेश भिजवा दिया, “सारे इब्री सावधान हो जाएं!”
4 “ಫಿಲಿಷ್ಟಿಯರ ಕಾವಲುಪಡೆಯ ಪಾಳೆಯವನ್ನು ಸೌಲನು ನಾಶಮಾಡಿದ್ದರಿಂದ, ಇಸ್ರಾಯೇಲರು ಈಗ ಫಿಲಿಷ್ಟಿಯರಿಗೆ ಅಸಹ್ಯಕರ ಶತ್ರುವಾದರು,” ಎಂಬ ವರ್ತಮಾನವನ್ನು ಸಮಸ್ತ ಇಸ್ರಾಯೇಲರು ಕೇಳಿದರು. ಮತ್ತು ಗಿಲ್ಗಾಲಿಗೆ ಬಂದು ಸೌಲನನ್ನು ಸೇರಿಕೊಳ್ಳಲು ಜನರನ್ನು ಕರೆದರು.
सारे इस्राएल राष्ट्र ने इसका मतलब यह निकाला: “फिलिस्तीनियों की छावनी पर शाऊल ने हमला किया है, जिसके फलस्वरूप अब उनके लिए इस्राएल एक घृणित शत्रु बन गया है.” तब लोगों को शाऊल के सामने एकत्र करने के लिए गिलगाल नामक स्थान पर बुलाया गया.
5 ಆಗ ಇಸ್ರಾಯೇಲರ ಸಂಗಡ ಯುದ್ಧಮಾಡಲು ಫಿಲಿಷ್ಟಿಯರ ಮೂವತ್ತು ಸಾವಿರ ರಥಗಳೂ, ಆರು ಸಾವಿರ ಕುದುರೆ ಸವಾರರೂ, ಸಮುದ್ರತೀರದ ಮರಳಷ್ಟು ಜನರೂ ಕೂಡಿಕೊಂಡು ಬೇತಾವೆನಿನ ಪೂರ್ವದಿಕ್ಕಿನಲ್ಲಿರುವ ಮಿಕ್ಮಾಷಿನಲ್ಲಿ ಇಳಿದುಕೊಂಡರು.
इस्राएल से युद्ध के लिए फिलिस्तीनियों ने तीन हज़ार रथ, छः हज़ार घुड़सवार तथा एक ऐसी सेना तैयार कर ली थी, जो गिनती में वैसी ही लगती थी जैसे सागर के किनारे के रेत के कण. इन सबने जाकर मिकमाश नामक स्थान पर बेथ-आवेन के पूर्व में तंबू डाल दिए.
6 ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದದ್ದರಿಂದ ತಾವು ಇಕ್ಕಟ್ಟಿನಲ್ಲಿ ಇರುವುದನ್ನು ಕಂಡು, ಗವಿಗಳಲ್ಲಿಯೂ, ಮುಳ್ಳಿನ ಪೊದೆಗಳಲ್ಲಿಯೂ, ಗುಡ್ಡಗಳಲ್ಲಿಯೂ, ಕುಣಿಗಳಲ್ಲಿಯೂ ಬಾವಿಗಳಲ್ಲಿಯೂ ಅಡಗಿಕೊಂಡರು.
जब इस्राएली सेना को यह अहसास हुआ कि वे यहां कठिन स्थिति में आ फंसे हैं, क्योंकि उनकी सेना पर दबाव बढ़ता जा रहा था, सेना ने गुफाओं, झाड़ियों, चट्टानों, गड्ढों तथा कुंओं में जाकर छिपने लगे.
7 ಇದಲ್ಲದೆ ಹಿಬ್ರಿಯರಲ್ಲಿ ಕೆಲವರು ಯೊರ್ದನನ್ನು ದಾಟಿ, ಗಾದ್ ದೇಶಕ್ಕೂ, ಗಿಲ್ಯಾದಿಗೂ ಹೋದರು. ಆದರೆ ಸೌಲನು ಇನ್ನೂ ಗಿಲ್ಗಾಲಿನಲ್ಲಿದ್ದನು. ಜನರೆಲ್ಲರು ನಡುಗಿದವರಾಗಿ ಅವನನ್ನು ಹಿಂಬಾಲಿಸಿದರು.
कुछ इब्री तो भागकर यरदन के पार गाद और गिलआद तक चले गए. मगर शाऊल गिलगाल में ही ठहरे रहे. उनके सैनिकों पर घोर भय छाया हुआ था.
8 ಸೌಲನು ತನಗೆ ಸಮುಯೇಲನು ನೇಮಿಸಿದ ಕಾಲದ ಪ್ರಕಾರ ಏಳು ದಿವಸ ಕಾದಿದ್ದನು. ಸಮುಯೇಲನು ಗಿಲ್ಗಾಲಿಗೆ ಬಾರದೆ ಇದ್ದುದರಿಂದ ಜನರು ಅವನನ್ನು ಬಿಟ್ಟು ಚದರಿಹೋದರು.
शाऊल इस स्थिति में शमुएल द्वारा बताए गए समय, सात दिन तक ठहरे रहे. मगर शमुएल गिलगाल नहीं आए. सैनिक शाऊल को छोड़कर जाने लगे.
9 ಆಗ ಸೌಲನು, “ದಹನಬಲಿಯನ್ನೂ, ಸಮಾಧಾನದ ಬಲಿಗಳನ್ನೂ ನನ್ನ ಬಳಿಗೆ ತೆಗೆದುಕೊಂಡು ಬನ್ನಿರಿ,” ಎಂದು ಹೇಳಿ ದಹನಬಲಿಯನ್ನು ಅರ್ಪಿಸಿದನು.
तब शाऊल ने आदेश दिया, “मेरे पास होमबलि तथा मेल बलियां लाई जाएं.” शाऊल ने होमबलि चढ़ाई.
10 ಆದರೆ ಅವನು ದಹನಬಲಿಯನ್ನು ಅರ್ಪಿಸಿ, ತೀರಿಸುವಷ್ಟರೊಳಗೆ ಸಮುಯೇಲನು ಬಂದನು. ಆಗ ಅವನನ್ನು ವಂದಿಸುವುದಕ್ಕಾಗಿ ಸೌಲನು ಅವನನ್ನು ಎದುರುಗೊಳ್ಳಲು ಹೋದನು.
ठीक जैसे ही उन्होंने होमबलि चढ़ाना खत्म किया ही था, शमुएल वहां आ पहुंचे. शाऊल उनसे भेंटकरने तथा उनका अभिवंदन करने उनके निकट गए.
11 ಆದರೆ ಸಮುಯೇಲನು, “ನೀನೇನು ಮಾಡಿದಿ?” ಎಂದು ಸೌಲನನ್ನು ಕೇಳಿದನು. ಸೌಲನು, “ಸೈನಿಕರು ನನ್ನನ್ನು ಬಿಟ್ಟು ಹೋಗುತ್ತಿರುವುದನ್ನು, ನೀನು ನೇಮಿಸಿದ ದಿವಸಗಳ ಪ್ರಕಾರ ಬಾರದಿರುವುದನ್ನು ಮತ್ತು ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಕೂಡಿಕೊಂಡಿರುವುದನ್ನು ಕಂಡೆನು.
उसी क्षण शमुएल ने उनसे प्रश्न किया, “यह क्या कर डाला है तुमने?” शाऊल ने स्पष्ट किया, “जब मैंने देखा कि सेना मुझे छोड़ भागने लगी है, तथा आप भी बताए हुए समय पर यहां नहीं पहुंचे, तथा वहां फिलिस्तीनी मिकमाश में इकट्ठा हो चुके थे,
12 ಆಗ ನಾನು ನನ್ನಲ್ಲಿಯೇ ಯೋಚಿಸುತ್ತಾ, ‘ಫಿಲಿಷ್ಟಿಯರು ಗಿಲ್ಗಾಲಿಗೆ ಬಂದು ನನ್ನ ಮೇಲೆ ದಾಳಿಮಾಡುವುದು ಖಚಿತ ಮತ್ತು ನಾನು ಎಂದಿಗೂ ಯೆಹೋವ ದೇವರ ಸಹಾಯವನ್ನು ಕೇಳಲಿಲ್ಲ.’ ಆದ್ದರಿಂದ ನನ್ನಲ್ಲಿಯೇ ಆದ ಒತ್ತಡದಿಂದ ದಹನಬಲಿಯನ್ನು ಅರ್ಪಿಸಿದೆನು,” ಎಂದನು.
मैंने विचार किया, ‘अब तो फिलिस्तीनी निश्चयतः गिलगाल आकर मुझ पर हमला करेंगे, और मैंने याहवेह से सहायता की बिनती ही नहीं की.’ तब इस विवशता में मैंने होमबलि चढ़ा दी है.”
13 ಸಮುಯೇಲನು ಸೌಲನಿಗೆ, “ನೀನು ಬುದ್ಧಿಹೀನವಾದ ಕೆಲಸಮಾಡಿದ್ದೀ; ನಿನ್ನ ದೇವರಾದ ಯೆಹೋವ ದೇವರು ನಿನಗೆ ಆಜ್ಞಾಪಿಸಿದ ಆಜ್ಞೆಯನ್ನು ಕೈಗೊಳ್ಳಲಿಲ್ಲ. ಯೆಹೋವ ದೇವರು ಇಸ್ರಾಯೇಲರಲ್ಲಿ ನಿನ್ನ ರಾಜ್ಯವನ್ನು ಎಂದೆಂದಿಗೂ ಸ್ಥಿರಪಡಿಸುವುದಕ್ಕೆ ಇದ್ದರು.
शमुएल ने उत्तर दिया, “तुमने एक मूर्खतापूर्ण काम किया है! वह आदेश, जो तुम्हें याहवेह तुम्हारे परमेश्वर द्वारा दिया गया था, उसका तुमने उल्लंघन कर दिया है. यदि तुमने उस आदेश का पालन किया होता, याहवेह इस्राएल पर तुम्हारे शासन को हमेशा के लिए स्थिर कर देते!
14 ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.
याहवेह ने अपने लिए एक ऐसा व्यक्ति खोज लिया है, जो उनके हृदय के अनुकूल है. याहवेह ने उसे ही अपनी प्रजा का नेतृत्व करने के लिए चुन लिया है; यह सब इसलिये, कि तुमने उन आदेशों का पालन नहीं किया, जो तुम्हें याहवेह द्वारा दिए गए थे. अब तुम्हारा शासन चिरस्थायी न रहेगा.”
15 ಸಮುಯೇಲನು ಎದ್ದು ಗಿಲ್ಗಾಲಿನಿಂದ ಬೆನ್ಯಾಮೀನ್ ದೇಶದ ಗಿಬೆಯಕ್ಕೆ ಹೋದನು. ಸೌಲನು ತನ್ನ ಸಂಗಡ ಇದ್ದ ಜನರನ್ನು ಲೆಕ್ಕಮಾಡಿದಾಗ, ಅವರು ಸುಮಾರು ಆರುನೂರು ಜನರಿದ್ದರು.
इसके बाद शमुएल गिलगाल से बिन्यामिन प्रदेश के गिबिया नगर को चले गए. शाऊल ने शेष रह गए सैनिकों को इकट्ठा किया. ये गिनती में लगभग छः सौ थे.
16 ಸೌಲನೂ, ಅವನ ಮಗ ಯೋನಾತಾನನೂ, ಅವನ ಸಂಗಡ ಇರುವ ಜನರೂ ಸಹಿತವಾಗಿ ಬೆನ್ಯಾಮೀನ್ಯರ ಗಿಬೆಯದಲ್ಲಿ ಇದ್ದರು. ಆದರೆ ಫಿಲಿಷ್ಟಿಯರು ಮಿಕ್ಮಾಷಿನಲ್ಲಿ ಇಳಿದುಕೊಂಡಿದ್ದರು.
शाऊल, उनके पुत्र योनातन तथा बाकी रह गई सेना बिन्यामिन प्रदेश के गेबा में ही ठहरे रहे; जबकि फिलिस्तीनियों का शिविर मिकमाश में था.
17 ಆಗ ಫಿಲಿಷ್ಟಿಯರ ಪಾಳೆಯದಿಂದ ಸುಲಿದುಕೊಳ್ಳುವವರು ಮೂರು ಗುಂಪಾಗಿ ಹೊರಟರು. ಒಂದು ಗುಂಪು ಒಫ್ರದ ಮಾರ್ಗವಾಗಿ ಶುವಲ್ ದೇಶದ ಕಡೆಗೆ ಹೋಯಿತು.
फिलिस्तीनी शिविर से तीन छापामार दल निकले, एक दल उस मार्ग पर, जो शुआल देश के ओफ़राह नगर को जाता था,
18 ಮತ್ತೊಂದು ಗುಂಪು ಬೇತ್ ಹೋರೋನಿನ ಮಾರ್ಗವಾಗಿ ಹೋಯಿತು. ಬೇರೊಂದು ಗುಂಪು ಮರುಭೂಮಿಗೆ ಎದುರಾಗಿರುವ ಜೆಬೋಯಿಮ್ ತಗ್ಗಿಗೆದುರಾದ ಮೇರೆಯ ಮಾರ್ಗವಾಗಿ ಹೋಯಿತು.
दूसरा दल उस मार्ग की ओर, जो बेथ-होरोन की ओर जाता था तथा अन्य दल उस सीमा की ओर चला जाता था, जो निर्जन प्रदेश की दिशा में ज़ेबोईम घाटी के ढलान पर है.
19 “ಹಿಬ್ರಿಯರು ತಮಗೆ ಖಡ್ಗವನ್ನಾದರೂ ಈಟಿಯನ್ನಾದರೂ ಮಾಡಿಕೊಳ್ಳಬಾರದು,” ಎಂದು ಫಿಲಿಷ್ಟಿಯರ ಆಜ್ಞೆಯಿದ್ದದರಿಂದ, ಆಗ ಇಸ್ರಾಯೇಲ್ ದೇಶದಲ್ಲಿ ಒಬ್ಬ ಕಮ್ಮಾರನಾದರೂ ಸಿಕ್ಕಲಿಲ್ಲ.
संपूर्ण इस्राएल राष्ट्र में कोई भी लोहार न था क्योंकि फिलिस्तीनियों ने इस आशंका के चलते यह रोक रखा था, “हमारे विरुद्ध प्रयोग के लिए इब्री तलवारों और भालों का निर्माण न करने लगे!”
20 ಆದ್ದರಿಂದ ಇಸ್ರಾಯೇಲರೆಲ್ಲಾ ತಮ್ಮ ತಮ್ಮ ನೇಗಿಲಿನ ಗುಳಗಳನ್ನೂ, ಸಲಿಕೆಗಳನ್ನೂ, ಕೊಡಲಿಗಳನ್ನೂ, ಗುದ್ದಲಿಗಳನ್ನೂ ಮೊನೆ ಮಾಡುವುದಕ್ಕೆ ಫಿಲಿಷ್ಟಿಯರ ಬಳಿಗೆ ಹೋಗಬೇಕಾಗಿತ್ತು.
फलस्वरूप इस्राएलियों को अपने हल की फाल, कुल्हाड़ी, हंसिया तथा काटने के उपकरणों में धार पैनी कराने के लिए फिलिस्तीनियों के पास ही जाना पड़ता था.
21 ಆದರೆ ಸಲಿಕೆ, ಗುದ್ದಲಿ, ಕುಂಟೆ, ಮುಳ್ಳುಗೋಲು, ಕೊಡಲಿ, ಅಂಕುಶ ಇವುಗಳನ್ನು ಹದಮಾಡುವುದಕ್ಕೆ ಅವರಲ್ಲಿ ಅರವು ಮಾತ್ರ ಇತ್ತು.
तब हल की फाल पर धार लगाने के लिए दो तिहाई शेकेल; कुल्हाड़ी या अंकुश की धार लगाने के लिए एक तिहाई शेकेल देना होता था.
22 ಯುದ್ಧದ ದಿವಸದಲ್ಲಿ ಸೌಲ ಯೋನಾತಾನರ ಜೊತೆಯಲ್ಲಿದ್ದ ಸಮಸ್ತ ಜನರಲ್ಲಿ ಒಬ್ಬನ ಕೈಯಲ್ಲಾದರೂ ಖಡ್ಗವಾಗಲಿ, ಈಟಿಯಾಗಲಿ ಇರಲಿಲ್ಲ. ಆದರೆ ಸೌಲನಿಗೂ, ಅವನ ಪುತ್ರನಾದ ಯೋನಾತಾನನಿಗೂ ಮಾತ್ರವೇ ಇತ್ತು.
तब युद्ध के समय शाऊल और योनातन के साथ के सैनिकों के पास न तो तलवार थी न भाला. हां सिर्फ शाऊल और उनके पुत्र योनातन के पास ये हथियार थे.
23 ಆಗ ಫಿಲಿಷ್ಟಿಯರ ದಂಡು ಮಿಕ್ಮಾಷಿನ ಕಣಿವೆಯ ಮಾರ್ಗದತ್ತ ಹೊರಟಿತು.
फिलिस्तीनी सेना की एक टुकड़ी मिकमाश के पर्वतीय संकरे मार्ग में निकल हुई थी.

< ಸಮುವೇಲನು - ಪ್ರಥಮ ಭಾಗ 13 >