< ಸಮುವೇಲನು - ಪ್ರಥಮ ಭಾಗ 25 >

1 ಸಮುಯೇಲನು ಮರಣಹೊಂದಿದನು. ಇಸ್ರಾಯೇಲರೆಲ್ಲರು ಕೂಡಿಬಂದು ಅವನಿಗೋಸ್ಕರ ಗೋಳಾಡಿ, ರಾಮದಲ್ಲಿರುವ ಅವನ ಮನೆಯ ಅಂಗಳದಲ್ಲಿ ಅವನನ್ನು ಸಮಾಧಿಮಾಡಿದರು. ಅನಂತರ ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.
సమూయేలు చనిపోయాడు. ఇశ్రాయేలీయులంతా సమావేశమై అతని కోసం ఏడ్చారు. రమాలో ఉన్న అతని సొంత ఇంట్లో సమాధి చేశారు. తరువాత దావీదు లేచి పారాను అరణ్య ప్రాంతానికి వెళ్లిపోయాడు.
2 ಆದರೆ ಕರ್ಮೆಲಿನಲ್ಲಿ ಸೊತ್ತುಗಳಿರುವ ಮಾವೋನಿನ ಒಬ್ಬ ಮನುಷ್ಯನಿದ್ದನು. ಅವನು ಬಹು ಸಿರಿವಂತನಾಗಿದ್ದನು. ಅವನಿಗೆ ಮೂರು ಸಾವಿರ ಕುರಿಗಳೂ ಸಾವಿರ ಮೇಕೆಗಳೂ ಇದ್ದವು.
మాయోను గ్రామంలో ఒకడున్నాడు. అతని ఆస్తిపాస్తులన్నీ కర్మెలులో ఉన్నాయి. అతడు చాలా ధనవంతుడు, అతనికి మూడువేల గొర్రెలు, వెయ్యి మేకలు ఉన్నాయి. అతడు కర్మెలులో తన గొర్రెల బొచ్చు కత్తిరించడానికి వెళ్ళాడు.
3 ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆ ಕತ್ತರಿಸುತ್ತಿದ್ದನು. ಈ ಮನುಷ್ಯನ ಹೆಸರು ನಾಬಾಲನು. ಅವನ ಹೆಂಡತಿಯ ಹೆಸರು ಅಬೀಗೈಲಳು. ಆ ಸ್ತ್ರೀಯು ಬಹು ಬುದ್ಧಿವಂತೆ ಹಾಗು ಸುಂದರಿ. ಆದರೆ ಆ ಮನುಷ್ಯನು ಒರಟಾದವನೂ ದುಷ್ಕರ್ಮಿಯೂ ಆಗಿದ್ದನು. ಅವನು ಕಾಲೇಬನ ವಂಶಸ್ಥನು.
అతని పేరు నాబాలు, అతని భార్య పేరు అబీగయీలు. ఈమె జ్ఞానం గలదీ, అందగత్తే. అయితే అతడు మాత్రం మొరటు వాడు, తన వ్యవహారాలన్నిటిలో దుర్మార్గుడు. అతడు కాలేబు సంతతివాడు.
4 ನಾಬಾಲನು ತನ್ನ ಕುರಿಗಳ ಉಣ್ಣೆ ಕತ್ತರಿಸುವ ವರ್ತಮಾನವನ್ನು ದಾವೀದನು ಮರುಭೂಮಿಯಲ್ಲಿ ಕೇಳಿದನು.
నాబాలు గొర్రెలబొచ్చు కత్తిరిస్తున్నాడని ఎడారిలో ఉన్న దావీదు విన్నాడు.
5 ಆಗ ದಾವೀದನು ಹತ್ತು ಮಂದಿ ಯುವಕರನ್ನು ಕಳುಹಿಸಿದನು. ದಾವೀದನು ಅವರಿಗೆ, “ನೀವು ಕರ್ಮೆಲಿಗೆ ಹೋಗಿ ನಾಬಾಲನ ಬಳಿಗೆ ಸೇರಿದಾಗ, ನನ್ನ ಹೆಸರಿನಿಂದ ಅವನ ಕ್ಷೇಮಸಮಾಚಾರವನ್ನು ಕೇಳಿ, ಬಾಳುವವನಾದ ಅವನಿಗೆ ಹೇಳಬೇಕಾದದ್ದೇನೆಂದರೆ:
తన దగ్గరున్న వారిలో పదిమంది యువకులను పిలిచి వారితో ఇలా అన్నాడు. “మీరు కర్మెలుకు నాబాలు దగ్గరికి పోయి, నా పేరు చెప్పి కుశల ప్రశ్నలడిగి
6 ‘ನಿನಗೆ ಸಮಾಧಾನವೂ, ನಿನ್ನ ಮನೆಗೆ ಸಮಾಧಾನವೂ ನಿನ್ನ ಸರ್ವಸಂಪತ್ತಿಗೂ ಸಮಾಧಾನವೂ ಆಗಲಿ.
ఆ ధనికునితో ఇలా అనండి. మీరు వర్ధిల్లుతారు గాక. మీకూ మీ ఇంటికీ మీ ఆస్తిపాస్తులకూ క్షేమం ఉండాలి.
7 “‘ಈಗ ನಿನಗೆ ಕುರಿಗಳ ಉಣ್ಣೆ ಕತ್ತರಿಸುವವರು ಉಂಟೆಂದು ಕೇಳಿದ್ದೇನೆ. ಆದರೆ ನಮ್ಮ ಸಂಗಡವಿದ್ದ ನಿನ್ನ ಕುರಿಕಾಯುವವರು ಕರ್ಮೆಲಿನಲ್ಲಿದ್ದ ದಿವಸಗಳೆಲ್ಲಾ ನಾವು ಅವರಿಗೆ ತೊಂದರೆಪಡಿಸಲಿಲ್ಲ. ಅವರು ಒಂದಾದರೂ ಕಳೆದುಕೊಳ್ಳಲಿಲ್ಲ.
మీతో గొర్రెబొచ్చు కత్తిరించే వారున్నారని నాకు తెలిసింది. మీ గొర్రెల కాపరులు మా దగ్గరున్నప్పుడు మేము వారికి ఏ కీడూ తలపెట్టలేదు. వారు కర్మెలు ప్రాంతంలో ఉన్నంతకాలం వారేదీ పోగొట్టుకోలేదు.
8 ನಿನ್ನ ಸೇವಕರನ್ನು ಕೇಳು. ಅವರು ನಿನಗೆ ಹೇಳುವರು. ಆದ್ದರಿಂದ ಈಗ ಈ ಯುವಕರಿಗೆ ನಿನ್ನ ದೃಷ್ಟಿಯಲ್ಲಿ ದಯೆ ದೊರಕಲಿ. ಏಕೆಂದರೆ ಒಳ್ಳೆಯ ದಿವಸದಲ್ಲಿ ಬಂದೆವು. ನಿನ್ನ ಕೈಯಲ್ಲಿ ದೊರಕುವುದನ್ನು ನಿನ್ನ ಸೇವಕರಿಗೂ, ನಿನ್ನ ಪುತ್ರನಾದ ದಾವೀದನಿಗೂ ದಯಪಾಲಿಸು ಎಂದು ಅವನಿಗೆ ಹೇಳಿರಿ,’” ಎಂದು ಅವರನ್ನು ಕಳುಹಿಸಿದನು.
మీ పనివారిని అడగండి, వారే చెబుతారు. కాబట్టి నేను పంపిన కుర్రాళ్ళకు దయ చూపండి. మేము పండగ పూట వచ్చాం గదా. మీ మనసుకు తోచింది మీ దాసులకు, మీ కుమారుడు దావీదుకు ఇచ్చి పంపండి.”
9 ದಾವೀದನ ಯುವಕರು ಬಂದು ಈ ಮಾತುಗಳನ್ನೆಲ್ಲಾ ದಾವೀದನ ಹೆಸರಿನಲ್ಲಿ ನಾಬಾಲನಿಗೆ ಹೇಳಿ ಮೌನವಾದರು.
దావీదు పంపిన యువకులు వచ్చి అతని పేరు చెప్పి ఆ మాటలన్నిటినీ నాబాలుకు తెలియజేసి కూర్చున్నారు.
10 ನಾಬಾಲನು ದಾವೀದನ ಸೇವಕರಿಗೆ ಉತ್ತರವಾಗಿ, “ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಉಂಟು.
౧౦దావీదు సేవకులతో నాబాలు “దావీదు ఎవడు? యెష్షయి కొడుకెవడు? ఈ రోజుల్లో తమ యజమానులను విడిచి పారిపోయిన దాసులు చాలా మంది ఉన్నారు.
11 ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆ ಕತ್ತರಿಸುವವರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನು ತೆಗೆದು, ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ?” ಎಂದನು.
౧౧నా అన్నపానాలను, నా గొర్రెల బొచ్చు కత్తిరించే వారికోసం సిద్ధపరచిన నా మాంసాన్ని, ఎక్కడి నుంచి వచ్చాడో తెలియని వాడికి ఇవ్వాలా?” అన్నాడు.
12 ಹೀಗೆ ದಾವೀದನ ಯುವಕರು ತಮ್ಮ ಮಾರ್ಗವಾಗಿ ಹಿಂದಕ್ಕೆ ತಿರುಗಿ ದಾವೀದನ ಬಳಿಗೆ ಬಂದು, ಈ ಮಾತುಗಳನ್ನೆಲ್ಲಾ ತಿಳಿಸಿದರು.
౧౨దావీదు కుర్రాళ్ళు తిరుగు ముఖం పట్టి, వచ్చి ఈ మాటలన్నీ అతనికి చెప్పారు.
13 ಆಗ ದಾವೀದನು ತನ್ನ ಜನರಿಗೆ, “ನಿಮ್ಮಲ್ಲಿ ಒಬ್ಬೊಬ್ಬನೂ ನಿಮ್ಮ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಳ್ಳಿರಿ,” ಎಂದನು. ಪ್ರತಿಯೊಬ್ಬನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ಹಾಗೆಯೇ ದಾವೀದನೂ ತನ್ನ ಖಡ್ಗವನ್ನು ಸೊಂಟಕ್ಕೆ ಕಟ್ಟಿಕೊಂಡನು. ದಾವೀದನ ಹಿಂದೆ ಹೆಚ್ಚು ಕಡಿಮೆ ನಾನೂರು ಮಂದಿ ಹೋದರು. ಇನ್ನೂರು ಮಂದಿ ಸಲಕರಣೆಗಳ ಬಳಿಯಲ್ಲಿ ನಿಂತರು.
౧౩అప్పుడు దావీదు వారితో “మీరంతా నడుముకు కత్తులు ధరించుకోండి” అని చెప్పాడు. వారు కత్తులు ధరించుకున్నారు. దావీదు కూడా ఒక కత్తి ధరించాడు. దావీదుతో పాటు దాదాపు 400 మంది బయలుదేరారు. 200 మంది సామాను దగ్గర ఉన్నారు.
14 ಆಗ ಕೆಲಸದವರಲ್ಲಿ ಯುವಕನಾದವನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಯಜಮಾನನನ್ನು ವಂದಿಸಲು ದಾವೀದನು ಮರುಭೂಮಿಯಿಂದ ದೂತರನ್ನು ಕಳುಹಿಸಿದನು.
౧౪పనివాడొకడు నాబాలు భార్య అబీగయీలుతో “అమ్మా, మన అయ్యగారిని కుశల ప్రశ్నలు అడగడానికి దావీదు అరణ్యంలో నుండి మనుషులను పంపాడు. ఆయన వారితో కఠినంగా మాట్లాడాడు.
15 ಆದರೆ ಇವನು ಅವರನ್ನು ನಿಂದಿಸಿದನು. ಆ ಜನರು ನಮಗೆ ಮಹಾ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನಗಳೆಲ್ಲಾ ನಾವು ತೊಂದರೆ ಪಡಲಿಲ್ಲ. ಒಂದನ್ನಾದರೂ ಕಳೆದುಕೊಳ್ಳಲಿಲ್ಲ.
౧౫అయితే ఆ మనుష్యులు మాకెంతో ఉపకారం చేసిన వాళ్ళు. మేము గడ్డి మైదానాల్లో వారి మధ్య ఉన్నంత కాలమూ ప్రమాదం గానీ నష్టం గాని మాకు కలగలేదు.
16 ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡು ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯಂತೆ ಗೋಡೆಯಾಗಿದ್ದರು.
౧౬మేము గొర్రెలను కాచుకొంటూ ఉన్నంత కాలం వారు పగలూ రాత్రీ మా చుట్టూ ప్రాకారం లాగా ఉండేవారు.
17 ಈಗ ನೀನು ಮಾಡಬೇಕಾದದ್ದೇನೆಂದು ಆಲೋಚಿಸಿ ನೋಡು. ಏಕೆಂದರೆ ಕೇಡು ನಮ್ಮ ಯಜಮಾನನ ಮೇಲೂ ಅವನ ಮನೆಯ ಮೇಲೆಯೂ ನಿಶ್ಚಯವಾಗಿದೆ. ದುಷ್ಟನಾಗಿರುವ ಅವನ ಸಂಗಡ ಮಾತನಾಡುವುದು ಅಸಾಧ್ಯ,” ಎಂದನು.
౧౭అయితే ఇప్పుడు మా యజమానికీ అతని ఇంటివారందరికీ వాళ్ళు కీడు తలపెట్టారు. కాబట్టి ఇప్పుడు నువ్వు ఏమి చెయ్యాలో జాగ్రత్తగా ఆలోచించు. మన అయ్యగారు పనికిమాలిన దుష్టుడు, ఎవరి మాటా వినడు.”
18 ಆಗ ಅಬೀಗೈಲಳು ತೀವ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸವನ್ನೂ ಬೇಯಿಸಿದ ಐದು ಕುರಿಗಳ ಮಾಂಸವನ್ನೂ ಐವತ್ತು ಸೇರು ಹುರಿದ ಧಾನ್ಯವನ್ನೂ ಒಣಗಿದ ನೂರು ದ್ರಾಕ್ಷಿ ಗೊನೆಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ಕತ್ತೆಗಳ ಮೇಲೆ ಹೇರಿಸಿಕೊಂಡು,
౧౮అప్పుడు అబీగయీలు నాబాలుతో ఏమీ చెప్పకుండా గబగబా 200 రొట్టెలు, రెండు ద్రాక్షారసం తిత్తులు, వండిన ఐదు గొర్రెల మాంసం, ఐదు మానికల వేయించిన ధాన్యం, 100 ఎండు ద్రాక్షగెలలు, 200 అంజూరు పండ్ల ముద్దలు గాడిదలకెక్కించి
19 ತನ್ನ ಸೇವಕರಿಗೆ, “ನನಗೆ ಮುಂದಾಗಿ ಹೋಗಿರಿ. ನಾನು ನಿಮ್ಮ ಹಿಂದೆ ಬರುವೆನು,” ಎಂದು ಹೇಳಿದಳು. ಆದರೆ ತನ್ನ ಗಂಡನಾದ ನಾಬಾಲನಿಗೆ ಇದನ್ನು ತಿಳಿಸಲಿಲ್ಲ.
౧౯తన పనివాళ్ళతో “మీరు నాకంటే ముందుగా వెళ్ళండి., నేను మీ వెనుక వస్తాను” అని చెప్పింది.
20 ಆಗ, ಅವಳು ಒಂದು ಕತ್ತೆಯ ಮೇಲೆ ಹತ್ತಿಕೊಂಡು ಮಾರ್ಗದಲ್ಲಿ ಬೆಟ್ಟದ ಮರೆಗೆ ಬಂದಾಗ, ದಾವೀದನೂ ಅವನ ಜನರೂ ಅವಳಿಗೆ ಎದುರಾಗಿ ಇಳಿದು ಬಂದರು. ಅವಳು ಅವರನ್ನು ಎದುರುಗೊಂಡಳು.
౨౦ఆమె గాడిద ఎక్కి కొండ లోయలోబడి వస్తుంటే దావీదు, అతని మనుషులు ఆమెకు ఎదురుపడ్డారు. ఆమె వారిని కలుసుకుంది.
21 ಅಷ್ಟರಲ್ಲಿ ದಾವೀದನು ತನ್ನ ಜನರಿಗೆ, “ಅಡವಿಯಲ್ಲಿದ್ದ ಇವನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಅವನು ನಾನು ಮಾಡಿದ ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.
౨౧అంతకుముందు దావీదు “నాబాలు ఆస్తిపాస్తులన్నింటిలో ఏదీ పోకుండా ఈ అడివి ప్రాంతంలో అతని ఆస్తి అంతటికీ నేను అనవసరంగా కాపలా కాశాను. అతడు మాత్రం ఉపకారానికి ప్రతిగా నాకు అపకారం చేశాడు గదా”
22 ಬೆಳಗಾಗುವಷ್ಟರಲ್ಲಿ ಅವನ ಜನರಲ್ಲಿ ನಾನು ಒಬ್ಬ ಗಂಡಸನನ್ನಾದರೂ ಉಳಿಸಿದರೆ, ದೇವರು ದಾವೀದನಾದ ನನಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ,” ಎಂದು ಹೇಳಿದ್ದನು.
౨౨అనుకుని “అతనికి చెందిన వారిలో ఒక మగపిల్లవాడి నైనా తెల్లవారే సరికి ఉండయ్యను. లేదా దేవుడు మరి గొప్ప అపాయం దావీదు శత్రువులకు కలుగజేయుగాక” అని శపథం చేశాడు.
23 ಅಬೀಗೈಲಳು ದಾವೀದನನ್ನು ಕಂಡಾಗ, ಕತ್ತೆಯಿಂದಿಳಿದು ದಾವೀದನಿಗೆ ಎದುರಾಗಿ ಹೋಗಿ, ಅವನ ಮುಂದೆ ಬೋರಲು ಬಿದ್ದು ನಮಸ್ಕರಿಸಿದಳು.
౨౩అబీగయీలు దావీదును చూసి, గాడిద మీదనుంచి త్వరగా దిగి దావీదుకు సాష్టాంగ నమస్కారం చేసి అతని పాదాలపై బడి ఇలా అంది.
24 ಆಮೇಲೆ ಅವನ ಪಾದಗಳ ಮೇಲೆ ಬಿದ್ದು, “ನನ್ನ ಒಡೆಯನೇ, ಈ ಅಕ್ರಮವು ನನ್ನ ಮೇಲಿರಲಿ; ದಯಮಾಡಿ ನಿನ್ನ ದಾಸಿಯಾದ ನಾನು ಮಾತಾಡುವುದಕ್ಕೆ ಅಪ್ಪಣೆಯಾಗಲಿ. ನಿನ್ನ ದಾಸಿಯ ಮಾತುಗಳನ್ನು ಕೇಳು.
౨౪“ప్రభూ, ఈ అపరాధం నాదిగా ఎంచు. నీ దాసినైన నన్ను మాటలాడనియ్యి, నీ దాసినైన నేను చెప్పేమాటలు ఆలకించు.
25 ನನ್ನ ಒಡೆಯನೇ, ದಯಮಾಡಿ ದುಷ್ಟನಾದ ನಾಬಾಲನ ಮೇಲೆ ಲಕ್ಷ್ಯವಿಡಬೇಡ. ಏಕೆಂದರೆ ಅವನ ಹೆಸರು ಹೇಗೋ, ಹಾಗೆಯೇ ಅವನು. ಅವನು ನಾಬಾಲನೆಂಬ ಹೆಸರುಳ್ಳವನು. ಬುದ್ಧಿಹೀನತೆ ಅವನಲ್ಲಿ ಇದೆ. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಸೇವಕರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
౨౫అయ్యా, దుష్టుడైన ఈ నాబాలును పట్టించుకోవద్దు. అతడు అతని పేరుకు తగిన వాడే. అతనిపేరు నాబాలు కదా, మోటుతనం అతని లక్షణం. నా ప్రభువైన మీరు పంపించిన కుర్రాళ్ళు నీ దాసినైన నాకు కనబడలేదు.
26 ಆದಕಾರಣ ನನ್ನ ಒಡೆಯನೇ, ನೀನು ರಕ್ತ ಚೆಲ್ಲುವುದಕ್ಕೂ, ನಿನ್ನ ಕೈಯಿಂದ ನಿನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಹೋಗುವುದನ್ನು ದೇವರು ತಡೆದದ್ದರಿಂದ, ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ ನಿನ್ನ ಶತ್ರುಗಳೂ, ನನ್ನ ಒಡೆಯನಿಗೆ ಕೇಡನ್ನು ಹುಡುಕುವವರೂ ನಾಬಾಲನ ಹಾಗೆಯೇ ಆಗಲಿ.
౨౬నా ప్రభూ, యెహోవా జీవం తోడు, నీ జీవం తోడు, రక్తపాతం జరిగించకుండా, నీవే స్వయంగా పగ తీర్చుకోకుండా యెహోవా నిన్ను ఆపాడు. నీ శత్రువులు, నా యేలినవాడవైన నీకు కీడు చేయనుద్దేశించే వారందరికీ నాబాలుకు పట్టే గతే పట్టాలి అని యెహోవా జీవం తోడు, నీ జీవం తోడు అని ప్రమాణం చేస్తున్నాను.”
27 ಈಗ ನಿನ್ನ ದಾಸಿಯು ನನ್ನ ಒಡೆಯನಿಗೆ ತೆಗೆದುಕೊಂಡು ಬಂದ ಈ ಕಾಣಿಕೆಯು ನನ್ನ ಒಡೆಯನ ಹೆಜ್ಜೆಯಲ್ಲಿ ನಡೆಯುವವರಿಗೆ ಸಲ್ಲಲಿ.
౨౭“ఇప్పుడు నేను నా యేలినవాడవైన నీకోసం నీ దాసి తెచ్చిన ఈ కానుకను నా యేలినవాడవైన నిన్ను ఆశ్రయించి ఉన్న పనివారికి ఇప్పించు.
28 “ನೀನು ದಯಮಾಡಿ ನಿನ್ನ ದಾಸಿಯ ತಪ್ಪನ್ನು ಮನ್ನಿಸಬೇಕು. ಏಕೆಂದರೆ ನನ್ನ ಒಡೆಯನು ಯೆಹೋವ ದೇವರ ಯುದ್ಧಗಳನ್ನು ನಡೆಸುತ್ತಾನೆ. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನ ಕಾಣದಿರಲಿ. ಯೆಹೋವ ದೇವರು ನಿಶ್ಚಯವಾಗಿ ನನ್ನ ಒಡೆಯನಾದ ನಿನಗೆ ಶಾಶ್ವತ ರಾಜ್ಯವನ್ನು ಸ್ಥಿರಪಡಿಸುವರು.
౨౮నీ దాసినైన నా తప్పు క్షమించు. నా యేలినవాడవైన నీవు, యెహోవా యుద్ధాలు చేస్తున్నావు గనక నా యేలినవాడవైన నీకు ఆయన శాశ్వతమైన రాజ వంశాన్ని ఇస్తాడు. నీ జీవిత కాలమంతటా నీకు అపాయం కలుగదు.
29 ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು.
౨౯నిన్ను హింసించడానికైనా, నీ ప్రాణం తీయడానికైనా ఎవడైనా పూనుకుంటే, నా యేలినవాడవైన నీ ప్రాణాన్ని నీ దేవుడైన యెహోవా తన దగ్గరున్న జీవపుమూటలో భద్రపరుస్తాడు. ఒకడు వడిసెలతో రాయి విసరినట్టు ఆయన నీ శత్రువుల ప్రాణాలు విసిరేస్తాడు.
30 ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಯೆಹೋವ ದೇವರು ಹೇಳಿದ ಒಳ್ಳೆಯದೆಲ್ಲವನ್ನು ನಿನಗೆ ಮಾಡಿ, ನಿನ್ನನ್ನು ಇಸ್ರಾಯೇಲರ ಮೇಲೆ ನಾಯಕನಾಗಿ ನೇಮಿಸಿದಾಗ,
౩౦యెహోవా నా యేలినవాడవైన నిన్ను గురించిసెలవిచ్చిన మేలంతటినీ నీకు చేసి నిన్ను ఇశ్రాయేలీయుల మీద అధిపతిగా నియమిస్తాడు. ఆ తరువాత
31 ನೀನು ಸುಮ್ಮನೆ ನಿರಪರಾಧಿಯ ರಕ್ತವನ್ನು ಸುರಿಸಿ ಮುಯ್ಯಿಗೆ ಮುಯ್ಯಿ ತೀರಿಸಿಕೊಂಡದ್ದರಿಂದ ಉಂಟಾಗುವ ಪಶ್ಚಾತ್ತಾಪ ಮನೋವ್ಯಥೆಗಳಿಗೆ ಕಾರಣವಿರುವದಿಲ್ಲ. ಆದರೆ ನನ್ನ ಒಡೆಯನನ್ನು ಯೆಹೋವ ದೇವರು ಚೆನ್ನಾಗಿ ನಡೆಸಿದಾಗ, ನಿನ್ನ ದಾಸಿಯನ್ನು ಜ್ಞಾಪಕಮಾಡಿಕೊಳ್ಳಬೇಕು,” ಎಂದಳು.
౩౧నీవు అకారణంగా రక్తం చిందించినందుకూ పగ తీర్చుకొన్నందుకూ మనోవేదన, పరితాపం నా యేలినవాడవైన నీకు ఎంతమాత్రం కలగకూడదు. యెహోవా నా యేలినవాడవైన నీకు మేలు చేసిన తరువాత నీవు నీ దాసినైన నన్ను జ్ఞాపకం చేసుకో” అంది.
32 ಆಗ ದಾವೀದನು ಅಬೀಗೈಲಳಿಗೆ, “ನನ್ನನ್ನು ಎದುರುಗೊಳ್ಳುವುದಕ್ಕೆ ಈ ಹೊತ್ತು ನಿನ್ನನ್ನು ಕಳುಹಿಸಿದ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ.
౩౨అందుకు దావీదు అబీగయీలుతో “నాకు ఎదురు రావడానికి నిన్ను పంపిన ఇశ్రాయేలీయుల దేవుడైన యెహోవాకు స్తుతి.
33 ನಿನ್ನ ಬುದ್ಧಿಮಾತಿಗಾಗಿಯೂ, ನಾನು ರಕ್ತ ಚೆಲ್ಲುವುದಕ್ಕೂ, ನನ್ನ ಕೈಯಿಂದ ನನಗೆ ಮುಯ್ಯಿ ತೀರಿಸಿಕೊಳ್ಳುವುದಕ್ಕೂ ಈ ಹೊತ್ತು ನನ್ನನ್ನು ತಡೆದ ನಿನಗೆ ಆಶೀರ್ವಾದ ಆಗಲಿ.
౩౩నేను పగ తీర్చుకోకుండా ఈ రోజున రక్తపాతం చేయకుండా నన్ను వివేకంతో ఆపినందుకు నీకు ఆశీర్వాదం కలుగు గాక.
34 ಏಕೆಂದರೆ ನಿನಗೆ ಕೇಡು ಆಗದ ಹಾಗೆ ನನ್ನನ್ನು ತಡೆದ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಜೀವದಾಣೆ, ನೀನು ತ್ವರೆಯಾಗಿ ನನ್ನನ್ನು ಎದುರುಗೊಳ್ಳದಿದ್ದರೆ, ಉದಯವಾಗುವಷ್ಟರಲ್ಲಿ ನಾಬಾಲನಿಗೆ ಒಬ್ಬನಾದರೂ ಉಳಿಯುತ್ತಿರಲಿಲ್ಲ,” ಎಂದು ಹೇಳಿದನು.
౩౪ఒకవేళ ఈ రోజు నీవు త్వరగా నన్ను ఎదుర్కొనక పోయినట్టయితే, నీకు హాని చేయకుండా నన్ను ఆటంకపరచిన ఇశ్రాయేలీయుల దేవుడైన యెహోవా జీవం పైన ఆన బెట్టి చెబుతున్నాను, తెల్లవారేలోగా నాబాలుకు మగవాడొకడు కూడా మిగిలేవాడు కాదు” అని చెప్పాడు.
35 ಅವಳು ತನಗೆ ತಂದದ್ದನ್ನು ದಾವೀದನು ತೆಗೆದುಕೊಂಡು ಅವಳಿಗೆ, “ನೀನು ಸಮಾಧಾನವಾಗಿ ನಿನ್ನ ಮನೆಗೆ ಹೋಗು; ನಾನು ನಿನ್ನ ಮಾತನ್ನು ಕೇಳಿ ನಿನ್ನ ಮುಖ ದಾಕ್ಷಿಣ್ಯವನ್ನು ನೋಡಿದೆನು,” ಎಂದನು.
౩౫ఆమె తెచ్చిన వాటిని ఆమె చేత తీసుకు “నీ మాటలు నేను విన్నాను, నీ విన్నపం అంగీకరించాను. నిశ్చింతగా నీ ఇంటికి వెళ్ళు” అని ఆమెతో చెప్పాడు.
36 ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ.
౩౬అబీగయీలు తిరిగి నాబాలు దగ్గరికి వచ్చినప్పుడు, రాజుల్లాగా అతడు ఇంట్లో విందు చేసి, తప్ప తాగుతూ కులుకుతూ మత్తుగా ఉన్నాడు. అందుకని తెల్లవారే వరకూ ఆమె అతనితో ఏమాటా చెప్పలేదు.
37 ಉದಯದಲ್ಲಿ ನಾಬಾಲನ ದ್ರಾಕ್ಷಾರಸದ ಅಮಲು ಇಳಿದಾಗ, ಅವನ ಹೆಂಡತಿಯು ಈ ಮಾತುಗಳನ್ನು ಅವನಿಗೆ ತಿಳಿಸಲು, ಹೃದಯಾಘಾತವಾಗಿ ಅವನು ಕಲ್ಲಿನ ಹಾಗಾದನು.
౩౭ఉదయాన నాబాలు మత్తు దిగిన తరువాత అతని భార్య అతనితో ఆ విషయం చెప్పగానే భయంతో అతని గుండె పగిలింది. అతడు రాయి లాగా బిగుసుకు పోయాడు.
38 ಹೆಚ್ಚು ಕಡಿಮೆ ಹತ್ತು ದಿವಸಗಳಾದ ತರುವಾಯ, ಯೆಹೋವ ದೇವರ ದಂಡನೆಯ ನಿಮಿತ್ತ ನಾಬಾಲನು ಸತ್ತುಹೋದನು.
౩౮పది రోజుల తరువాత యెహోవా నాబాలును దెబ్బ తీయగా అతడు చనిపోయాడు.
39 ನಾಬಾಲನು ಸತ್ತನೆಂದು ದಾವೀದನು ಕೇಳಿದಾಗ, “ನನ್ನ ನಿಂದೆಯ ವ್ಯಾಜ್ಯವನ್ನು ನಾಬಾಲನಿಂದ ವಿಚಾರಿಸಿ, ತನ್ನ ಸೇವಕನನ್ನು ಕೇಡು ಮಾಡಗೊಡದ ಹಾಗೆ ತಡೆದ ಯೆಹೋವ ದೇವರು ಸ್ತುತಿಹೊಂದಲಿ. ಏಕೆಂದರೆ ಯೆಹೋವ ದೇವರು ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆ ಬರಮಾಡಿದರು,” ಎಂದನು. ದಾವೀದನು ಅಬೀಗೈಲಳನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ಅವಳ ಸಂಗಡ ಮಾತನಾಡಲು ಸೇವಕರನ್ನು ಕಳುಹಿಸಿದನು.
౩౯నాబాలు చనిపోయాడని దావీదు విని “నాబాలు చేసిన కీడును యెహోవా అతని తలమీదికే రప్పించాడు. ఆయన సేవకుడినైన నేను కీడు చేయకుండా నన్ను కాపాడి, నాబాలు వలన నేను పొందిన అవమానం తీర్చిన యెహోవాకు స్తుతి కలుగు గాక” అన్నాడు. తరవాత దావీదు అబీగయీలును తాను పెళ్లి చేసుకోవాలని ఆమెతో మాటలాడడానికి తన వారిని పంపాడు.
40 ದಾವೀದನ ಸೇವಕರು ಕರ್ಮೆಲಿನಲ್ಲಿರುವ ಅಬೀಗೈಲಳ ಬಳಿಗೆ ಬಂದಾಗ ಅವಳಿಗೆ, “ದಾವೀದನು ನಿನ್ನನ್ನು ತನಗೆ ಹೆಂಡತಿಯಾಗಿ ತೆಗೆದುಕೊಳ್ಳುವುದಕ್ಕಾಗಿ ನಮ್ಮನ್ನು ನಿನ್ನ ಬಳಿಗೆ ಕಳುಹಿಸಿದನು,” ಎಂದು ಹೇಳಿದರು.
౪౦దావీదు సేవకులు కర్మెలులో అబీగయీలు దగ్గరికి వచ్చి “దావీదు నిన్ను పెళ్లి చేసుకోడానికి తీసుకు రమ్మని మమ్మల్ని పంపించాడు” అని చెప్పారు.
41 ಆಗ ಅವಳು ಎದ್ದು ಬೋರಲು ಬಿದ್ದು, “ನಿನ್ನ ದಾಸಿಯಾದ ನಾನು ನನ್ನ ಒಡೆಯನ ಸೇವಕರ ಪಾದಗಳನ್ನು ತೊಳೆಯುವುದಕ್ಕೂ ಸಿದ್ಧಳಾಗಿದ್ದೇನೆ,” ಎಂದಳು.
౪౧ఆమె లేచి సాగిలపడి “నా స్వామి ఇష్టం. నా యేలినవాని సేవకుల కాళ్లు కడగడానికైనా నా యేలినవాని దాసీనైన నేను సిద్దం” అని చెప్పింది.
42 ಅಬೀಗೈಲಳು ತ್ವರೆಯಾಗಿ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು, ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರೆದುಕೊಂಡು ದಾವೀದನ ಸೇವಕರ ಹಿಂದೆ ಹೋಗಿ, ಅವನಿಗೆ ಹೆಂಡತಿಯಾದಳು.
౪౨ఆమె త్వరగా లేచి గాడిదనెక్కి ఐదుగురు పనికత్తెలు వెంట రాగా దావీదు పంపిన దూతలవెంట వెళ్ళింది. దావీదు ఆమెను పెళ్లి చేసుకున్నాడు.
43 ಇದಲ್ಲದೆ ದಾವೀದನು ಇಜ್ರೆಯೇಲ್ ಊರಿನವಳಾದ ಅಹೀನೋವಮಳನ್ನು ಮದುವೆ ಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.
౪౩దావీదు యెజ్రెయేలు వాసి అహీనోయమును కూడా పెళ్లి చేసుకున్నాడు. వారిద్దరూ అతనికి భార్యలయ్యారు.
44 ಆದರೆ ಸೌಲನು ದಾವೀದನ ಹೆಂಡತಿಯಾಗಿದ್ದ ಮೀಕಲಳೆಂಬ ತನ್ನ ಮಗಳನ್ನು ಗಲ್ಲೀಮ್ ಪಟ್ಟಣದ ಲಯಿಷನ ಮಗನಾದ ಪಲ್ಟೀ ಎಂಬವನಿಗೆ ಮದುವೆ ಮಾಡಿಕೊಟ್ಟಿದ್ದನು.
౪౪సౌలు కూతురు మీకాలు దావీదు భార్య. సౌలు ఆమెను గల్లీము ఊరివాడైన లాయీషు కొడుకు పల్తీయేలుకు ఇచ్చాడు.

< ಸಮುವೇಲನು - ಪ್ರಥಮ ಭಾಗ 25 >