< ಸಮುವೇಲನು - ಪ್ರಥಮ ಭಾಗ 5 >

1 ಫಿಲಿಷ್ಟಿಯರು ದೇವರ ಮಂಜೂಷವನ್ನು ತೆಗೆದುಕೊಂಡು ಎಬೆನೆಜೆರಿನಿಂದ ಅಷ್ಡೋದಿಗೆ ತಂದರು.
यति बेला पलिश्‍तीहरूले परमेश्‍वरको सन्दुक कब्जा गरेका, र तिनीहरूले त्‍यो एबेन-एजेरबाट अश्दोदमा ल्याएका थिए ।
2 ಫಿಲಿಷ್ಟಿಯರು ದೇವರ ಮಂಜೂಷವನ್ನು ದಾಗೋನನ ಗುಡಿಗೆ ತೆಗೆದುಕೊಂಡುಹೋಗಿ, ದಾಗೋನನ ಪಕ್ಕದಲ್ಲಿಟ್ಟರು.
पलिश्तीहरूले परमेश्‍वरको सन्दुक लगे, दागोनको मन्‍दिरमा त्‍यो ल्याए र दागोनको नजिकै राखे ।
3 ಅಷ್ಡೋದ್ಯರು ಮಾರನೆಯ ದಿವಸ ಎದ್ದಾಗ, ದಾಗೋನ್ ವಿಗ್ರಹ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು.
जब अश्दोदका मानिसहरू अर्को दिन बिहान सबेरै उठे, हेर, दागोन त परमप्रभुको सन्दुकको सामु घोप्टो परेर ढलेको थियो । त्यसैले तिनीहरूले दागोनलाई उठाए र त्यसलाई आफ्‍नै स्थानमा खडा गरे ।
4 ಆಗ ಅವರು ದಾಗೋನನನ್ನು ತೆಗೆದು, ಅದನ್ನು ಅದರ ಸ್ಥಳದಲ್ಲಿ ತಿರುಗಿ ಇಟ್ಟರು. ಅವರು ಮಾರನೆಯ ದಿವಸ ಬೆಳಿಗ್ಗೆ ಎದ್ದಾಗ, ದಾಗೋನ್ ಯೆಹೋವ ದೇವರ ಮಂಜೂಷದ ಮುಂದೆ ಬೋರಲು ಬಿದ್ದಿತ್ತು. ದಾಗೋನನ ತಲೆಯೂ ಅದರ ಎರಡು ಕೈಗಳೂ ಕತ್ತರಿಸಲಾಗಿ ಹೊಸ್ತಿಲ ಮೇಲೆ ಬಿದ್ದಿದ್ದವು.
तर जब तिनीहरू अर्को बिहान सबेरै उठे, हेर, दागोन परमप्रभुको सन्दुकको सामु घोप्टो परेर ढलेको थियो । दागोनको शिर र दुवै हातहरू टुक्रिएर ढोकामा अलपत्र थियो । दागोनको जिउ मात्र बाँकी रहेको थियो ।
5 ಮುಂಡ ಮಾತ್ರ ಅದಕ್ಕೆ ಉಳಿದಿತ್ತು. ಆದ್ದರಿಂದ ಈ ದಿನದವರೆಗೂ ದಾಗೋನನ ಯಾಜಕರೂ, ದಾಗೋನನ ಗುಡಿಯನ್ನು ಪ್ರವೇಶಿಸುವವರೆಲ್ಲರೂ ಅಷ್ಡೋದಿನಲ್ಲಿರುವ ದಾಗೋನನ ಹೊಸ್ತಿಲನ್ನು ತುಳಿಯುವುದಿಲ್ಲ.
यसैकारण आज पनि दागोनको भवनमा आउने दागोनका पुजारीहरू र कसैले पनि अश्दोदको दागोनको ढोकामा टेक्दैनन् ।
6 ಯೆಹೋವ ದೇವರ ಕೈ ಅಷ್ಡೋದಿನವರ ಮೇಲೆ ಮಹಾ ಭಾರವಾಗಿತ್ತು. ಅವರನ್ನು ನಾಶಮಾಡಿ, ಅಷ್ಡೋದನ್ನೂ, ಅದರ ಮೇರೆಗಳನ್ನೂ ಗಡ್ಡೆರೋಗದಿಂದಲೂ ಬಾಧಿಸಿದರು.
अश्दोदका मानिसहरूमाथि परमप्रभुको हात भारी भयो । उहाँले तिनीहरूलाई विनाश पार्नुभयो, अनि अश्दोद र त्‍यसको वरिपरि क्षेत्रहरूमा गिर्खाको रूढीले प्रहार गर्नुभयो ।
7 ಈ ಪ್ರಕಾರ ಸಂಭವಿಸಿದ್ದನ್ನು ಅಷ್ಡೋದಿನ ಜನರು ಕಂಡಾಗ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮ ಬಳಿಯಲ್ಲಿ ಇರಬಾರದು. ಏಕೆಂದರೆ ಅವರ ಕೈ ನಮ್ಮ ಮೇಲೆಯೂ, ನಮ್ಮ ದೇವರಾದ ದಾಗೋನನ ಮೇಲೆಯೂ ಕಠಿಣವಾಗಿದೆ,” ಎಂದರು.
जे भइरहेको थियो त्‍यो कुरा जब अश्दोदका मानिसहरूले थाहा पाए, तब तिनीहरूले भने, “इस्राएलका परमेश्‍वरको सन्दुक हामीसँग रहनु हुँदैन, किनभने हामी र हाम्रो देवता दागोनको विरुद्धमा उहाँको हात भारी भएको छ ।”
8 ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ತಮ್ಮ ಬಳಿಗೆ ಕರೆಯಕಳುಹಿಸಿ ಅವರಿಗೆ, “ಇಸ್ರಾಯೇಲ್ ದೇವರ ಮಂಜೂಷವನ್ನು ಏನು ಮಾಡೋಣ?” ಎಂದರು. ಅದಕ್ಕವರು, “ಇಸ್ರಾಯೇಲ್ ದೇವರ ಮಂಜೂಷವು ಗತ್ ಊರಿಗೆ ಕಳುಹಿಸಬೇಕು,” ಎಂದರು. ಅವರು ಇಸ್ರಾಯೇಲ್ ದೇವರ ಮಂಜೂಷವನ್ನು ಅಲ್ಲಿಗೆ ಕಳುಹಿಸಿದರು.
त्यसैले तिनीहरूले बोलाउन पठाए र पलिश्तीहरूका सबै शासकहरूलाई एकसाथ भेला गरे । तिनीहरूले उनीहरूलाई भने, “इस्राएलका परमेश्‍वरको सन्दुकलाई हामीले के गर्नुपर्छ?” तिनीहरूले जवाफ दिए, “इस्राएलका परमेश्‍वरको सन्दुकलाई गातमा नै ल्याइयोस् ।” त्यसैले तिनीहरूले इस्राएलका परमेश्‍वरको सन्दुकलाई बोकेर त्यहाँ ल्याए ।
9 ಆದರೆ ಅವರು ಅದನ್ನು ತಂದ ತರುವಾಯ, ಯೆಹೋವ ದೇವರ ಕೈ ಆ ಪಟ್ಟಣದ ಮೇಲೆ ಬಂದು ಮಹಾ ನಾಶಮಾಡಿತು. ಇದಲ್ಲದೆ ಯೆಹೋವ ದೇವರು ಚಿಕ್ಕವರಿಂದ ಹಿರಿಯರವರೆಗೂ ಆ ಪಟ್ಟಣದ ಮನುಷ್ಯರನ್ನು ಹೊಡೆದರು. ಅವರಿಗೆ ಗಡ್ಡೆರೋಗ ಬಂದಿತು.
तर तिनीहरूले त्यो वरिपरि ल्याएपछि, परमप्रभुको हात त्‍यो सहरको विरुद्धमा परेर ठुलो गोलमाल गोलमाल भयो । उहाँले सहरका साना र ठुला सबै मानिसहरूलाई प्रहार गर्नुभयो । अनि तिनीहरूमा गिर्खाको रूढी फैलियो ।
10 ಅವರು ದೇವರ ಮಂಜೂಷವನ್ನು ಎಕ್ರೋನಿಗೆ ಕಳುಹಿಸಿದರು. ದೇವರ ಮಂಜೂಷವು ಎಕ್ರೋನಿಗೆ ಬಂದಾಗ, ಎಕ್ರೋನ್ಯರು, “ನಮ್ಮನ್ನೂ, ನಮ್ಮ ಜನರನ್ನೂ ಕೊಂದುಹಾಕಬೇಕೆಂದು ಇಸ್ರಾಯೇಲ್ ದೇವರ ಮಂಜೂಷವನ್ನು ನಮ್ಮ ಬಳಿಗೆ ತಂದರು,” ಎಂದು ಕೂಗಿ ಹೇಳಿದರು.
त्यसैले तिनीहरूले परमेश्‍वरको सन्दुकलाई एक्रोनमा पठाए । तर परमेश्‍वरको सन्दुक एक्रोनमा आउने बित्तिकै, एक्रोनीहरूले यसो भन्‍दै कराए, “तिनीहरूले हामी र हाम्रा मानिसहरूलाई मार्नलाई इस्राएलका परमेश्‍वरको सन्दुक हामीकहाँ ल्याएका छन् ।”
11 ಆಗ ಆ ಇಡೀ ಪಟ್ಟಣಕ್ಕೆ ಮರಣಾಂತಿಕ ವಿನಾಶ ಉಂಟಾಗಿ, ದೇವರ ಕೈ ಅಲ್ಲಿ ಮಹಾಬಾಧಕವಾಗಿದ್ದರಿಂದ ಅವರು ಫಿಲಿಷ್ಟಿಯರ ಅಧಿಪತಿಗಳೆಲ್ಲರನ್ನು ಒಟ್ಟುಗೂಡಿಸಿ, “ಇಸ್ರಾಯೇಲ್ ದೇವರ ಮಂಜೂಷವು ನಮ್ಮನ್ನೂ, ನಮ್ಮ ಜನರನ್ನೂ ಕೊಂದು ಹಾಕದ ಹಾಗೆ ನೀವು ಅದನ್ನು ಅದರ ಸ್ವಸ್ಥಳಕ್ಕೆ ತಿರುಗಿ ಹೋಗುವಂತೆ ಕಳುಹಿಸಿಬಿಡಿರಿ,” ಎಂದರು.
त्यसैले तिनीहरूले पलिश्तीहरूका सबै शासकहरूलाई बोलाए र भेला गरे । तिनीहरूले उनीहरूलाई भने, “इस्राएलका परमेश्‍वरको सन्दुकलाई पठाइदिनुहोस्, र यो आफ्नै ठाउँतिर फर्कोस्, ताकि त्‍यसले हामी र हाम्रा मानिसहरूलाई नमारोस् ।” किनकि सहरभरि भयङ्कर मृत्‍युको त्रास फैलिएको थियो । त्यहाँ परमेश्‍वरको हात धेरै भारी पर्‍यो ।
12 ಉಳಿದವರು ಸತ್ತು ಹೋಗದೆ ಗಡ್ಡೆರೋಗದಿಂದ ಬಾಧಿತರಾದರು, ಆ ಪಟ್ಟಣದ ಗೋಳಾಟವು ಆಕಾಶಕ್ಕೆ ಮುಟ್ಟಿತು.
नमरेका मानिसहरूमा गिर्खाको रूढी आइपर्‍यो र सहरको क्रन्दन आकाशसम्‍मै पुग्यो ।

< ಸಮುವೇಲನು - ಪ್ರಥಮ ಭಾಗ 5 >