< ಸಮುವೇಲನು - ಪ್ರಥಮ ಭಾಗ 7 >
1 ಕಿರ್ಯತ್ ಯಾರೀಮಿನವರು ಬಂದು ಯೆಹೋವ ದೇವರ ಮಂಜೂಷವನ್ನು ತೆಗೆದುಕೊಂಡು, ಗುಡ್ಡದ ಮೇಲೆ ಇರುವ ಅಬೀನಾದಾಬನ ಮನೆಯಲ್ಲಿ ತಂದಿಟ್ಟರು. ಅವನ ಪುತ್ರನಾದ ಎಲಿಯಾಜರನನ್ನು ಯೆಹೋವ ದೇವರ ಮಂಜೂಷವನ್ನು ಕಾಯಲು ಪ್ರತಿಷ್ಠಿಸಿದರು.
तब किरयथ-यआरीम से कुछ लोग आए और याहवेह के संदूक को वहां से ले जाकर पर्वत पर बने अबीनादाब के घर में रख दिया. उन्होंने याहवेह के संदूक की देखरेख के लिए अबीनादाब के पुत्र एलिएज़र का अभिषेक किया.
2 ಮಂಜೂಷವು ಕಿರ್ಯತ್ ಯಾರೀಮಿನಲ್ಲಿ ಬಂದು ಬಹಳ ದಿವಸಗಳು ಅಂದರೆ ಇಪ್ಪತ್ತು ವರ್ಷಗಳಾದವು. ಆಗ, ಇಸ್ರಾಯೇಲ್ ಮನೆತನದವರೆಲ್ಲರು ಯೆಹೋವ ದೇವರಿಗೋಸ್ಕರ ಹಂಬಲಿಸಿ ಗೋಳಾಡುತ್ತಿದ್ದರು.
लंबे समय तक लगभग बीस वर्ष तक, संदूक किरयथ-यआरीम में ही रहा. अब सारे इस्राएल राष्ट्र को याहवेह की चाह होने लगी थी.
3 ಆಗ ಸಮುಯೇಲನು ಇಸ್ರಾಯೇಲ್ ಮನೆಯವರಿಗೆಲ್ಲಾ ಮಾತನಾಡಿ, “ನೀವು ನಿಮ್ಮ ಪೂರ್ಣಹೃದಯದಿಂದ ಯೆಹೋವ ದೇವರ ಕಡೆಗೆ ತಿರುಗಿ, ನಿಮ್ಮಲ್ಲಿರುವ ಅನ್ಯದೇವರುಗಳನ್ನೂ, ಅಷ್ಟೋರೆತನ್ನೂ ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಿ, ನಿಮ್ಮ ಹೃದಯವನ್ನು ಯೆಹೋವ ದೇವರಿಗೆ ಸಿದ್ಧಮಾಡಿ, ಅವರೊಬ್ಬರನ್ನೇ ಸೇವಿಸಿದರೆ ಅವರು ನಿಮ್ಮನ್ನು ಫಿಲಿಷ್ಟಿಯರ ಕೈಗಳೊಳಗಿಂದ ತಪ್ಪಿಸುವರು,” ಎಂದನು.
शमुएल ने समस्त इस्राएली राष्ट्र को संबोधित करते हुए कहा, “यदि तुम हृदय की गहराई से याहवेह की ओर फिर रहे हो, तो अपने बीच से सारे पराए देवताओं तथा अश्तोरेथ की प्रतिमाओं को हटाकर दूर कर दो. अपना हृदय याहवेह को समर्पित कर सिर्फ उन्हीं की वंदना करते रहो. तब याहवेह तुम्हें फिलिस्तीनियों के सताने से मुक्त करेंगे.”
4 ಆಗ ಇಸ್ರಾಯೇಲರು ಬಾಳನನ್ನೂ, ಅಷ್ಟೋರೆತನ್ನೂ ತೆಗೆದುಹಾಕಿ, ಯೆಹೋವ ದೇವರೊಬ್ಬರನ್ನೇ ಸೇವಿಸಿದರು.
तब इस्राएलियों ने अपने मध्य से सारे पराए देवताओं और अश्तोरेथ की मूर्तियों का त्याग कर दिया तथा वे सिर्फ याहवेह ही की वंदना करने लगे.
5 ಸಮುಯೇಲನು, “ನಾನು ನಿಮಗೋಸ್ಕರವಾಗಿ ಯೆಹೋವ ದೇವರನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲರನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ,” ಎಂದನು.
तब शमुएल ने उन्हें आदेश दिया, “सारा इस्राएल मिज़पाह नामक स्थान पर एकत्र हो, कि मैं तुम्हारे लिए याहवेह से प्रार्थना करूं.”
6 ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟಾಗಿ ಕೂಡಿಬಂದು, ಯೆಹೋವ ದೇವರ ಮುಂದೆ ನೀರು ತಂದು ಹೊಯ್ದು, ಆ ದಿವಸದಲ್ಲಿ ಉಪವಾಸ ಮಾಡಿ, “ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇವೆ” ಎಂದು ಅಲ್ಲಿ ಹೇಳಿದರು. ಸಮುಯೇಲನು ಇಸ್ರಾಯೇಲರಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
वे सभी मिज़पाह में इकट्ठा हो गए और उन्होंने जल निकाला और याहवेह के सामने उंडेल दिया. उस दिन उन्होंने उपवास किया और यह स्वीकार किया, “हमने याहवेह के विरुद्ध पाप किया है.” मिज़पाह ही वह स्थान था, जहां से शमुएल ने इस्राएल राष्ट्र के न्यायाध्यक्ष के पद पर काम करना शुरू किया.
7 ಇಸ್ರಾಯೇಲರು ಮಿಚ್ಪೆಯಲ್ಲಿ ಕೂಡಿ ಬಂದರೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರ ಅಧಿಪತಿಗಳು ಇಸ್ರಾಯೇಲರಿಗೆ ವಿರೋಧವಾಗಿ ಏರಿ ಬಂದರು. ಆಗ ಇಸ್ರಾಯೇಲರು ಇದನ್ನು ಕೇಳಿ ಫಿಲಿಷ್ಟಿಯರಿಗೋಸ್ಕರ ಭಯಪಟ್ಟು,
जब फिलिस्तीनियों को यह समाचार प्राप्त हुआ कि इस्राएली मिज़पाह क्षेत्र में एकत्र हो गए हैं, फिलिस्तीनी प्रधानों ने इस्राएल के विरुद्ध मोर्चा बांधा. जब इस्राएलियों को इसके विषय में सूचना प्राप्त हुई, वे फिलिस्तीनियों से डरने लगे.
8 ಅವರು ಸಮುಯೇಲನಿಗೆ, “ನಮ್ಮ ದೇವರಾದ ಯೆಹೋವ ದೇವರು ನಮ್ಮನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವವರೆಗೆ, ನೀನು ನಮಗೋಸ್ಕರವಾಗಿ ಪ್ರಾರ್ಥನೆಮಾಡಿ ಮೊರೆಯಿಡುವುದನ್ನು ನಿಲ್ಲಿಸಬೇಡ,” ಎಂದರು.
उन्होंने शमुएल से आग्रह किया, “हमारी ओर से याहवेह हमारे परमेश्वर से प्रार्थना करना बंद न कीजिए, कि हमें फिलिस्तीनियों से सुरक्षा प्राप्त होती रहे.”
9 ಆಗ ಸಮುಯೇಲನು ಹಾಲು ಕುಡಿಯುವ ಕುರಿಮರಿಯನ್ನು ತೆಗೆದುಕೊಂಡು, ಯೆಹೋವ ದೇವರಿಗೆ ಪೂರ್ಣ ದಹನಬಲಿಯನ್ನು ಅರ್ಪಿಸಿದನು, ಇಸ್ರಾಯೇಲರಿಗೋಸ್ಕರ ಯೆಹೋವ ದೇವರಿಗೆ ಮೊರೆಯಿಟ್ಟನು. ಯೆಹೋವ ದೇವರು ಅವನಿಗೆ ಉತ್ತರವನ್ನು ದಯಪಾಲಿಸಿದರು.
इस पर शमुएल ने एक दूध पीता मेमना लेकर उसे याहवेह के सामने अग्निबलि के रूप में अर्पण किया. तब शमुएल ने इस्राएल की ओर से याहवेह की दोहाई दी, और याहवेह ने उन्हें इसका प्रत्युत्तर दिया.
10 ಸಮುಯೇಲನು ದಹನಬಲಿಯನ್ನು ಅರ್ಪಿಸುವಾಗ, ಫಿಲಿಷ್ಟಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಲು ಸಮೀಪಕ್ಕೆ ಬಂದರು. ಆಗ ಯೆಹೋವ ದೇವರು ಫಿಲಿಷ್ಟಿಯರ ಮೇಲೆ ದೊಡ್ಡ ಶಬ್ದದಿಂದ ಗುಡುಗಿ ಅವರನ್ನು ಕಳವಳಗೊಳಿಸಿ, ಇಸ್ರಾಯೇಲರಿಗೆ ಸೋತು ಓಡಿಹೋಗುವಂತೆ ಮಾಡಿದರು.
जब शमुएल यह अग्निबलि अर्पित कर ही रहे थे, फिलिस्तीनी इस्राएल पर हमला करने के लक्ष्य से निकट आ गए. मगर उस दिन याहवेह फिलिस्तीनियों पर बादल द्वारा ऐसे गरजे कि फिलिस्तीनी आतंक के कारण सम्भ्रमित हो गए. तब इस्राएलियों ने उन्हें वहीं हरा दिया.
11 ಆಗ ಇಸ್ರಾಯೇಲರು ಮಿಚ್ಪೆಯಿಂದ ಹೊರಟು, ಫಿಲಿಷ್ಟಿಯರನ್ನು ಹಿಂದಟ್ಟಿ, ಬೇತ್ಕಾರಿನವರೆಗೂ ಅವರನ್ನು ಹೊಡೆದರು.
फिर इस्राएली मिज़पाह से बाहर निकल आए फिलिस्तीनियों को खदेड़ते हुए, उनका संहार करते हुए, बेथ-कार नामक स्थान के नीचे तक चले गए.
12 ಸಮುಯೇಲನು ಒಂದು ಕಲ್ಲನ್ನು ತೆಗೆದುಕೊಂಡು ಮಿಚ್ಪೆಗೂ, ಶೇನಿಗೂ ಮಧ್ಯದಲ್ಲಿ ನಿಲ್ಲಿಸಿ, “ಇಲ್ಲಿಯವರೆಗೂ ಯೆಹೋವ ದೇವರು ನಮಗೆ ಸಹಾಯ ಮಾಡಿದ್ದಾರೆ,” ಎಂದು ಹೇಳಿ ಅದಕ್ಕೆ ಎಬೆನೆಜೆರ್ ಎಂದು ಹೆಸರಿಟ್ಟನು.
मिज़पाह तथा शेन नामक स्थानों के मध्य शमुएल ने इस घटना की स्मारक स्वरूप, एक शिला लेकर वहां प्रतिष्ठित कर उसे एबेन-एज़र नाम दिया; क्योंकि उन्होंने यह गवाह दिया, “अब तक याहवेह ने हमारी सहायता की है.”
13 ಫಿಲಿಷ್ಟಿಯರು ಸೋತುಹೋದುದರಿಂದ ಇಸ್ರಾಯೇಲಿನ ಮೇರೆಯಲ್ಲಿ ಬರಲೇ ಇಲ್ಲ. ಇದಲ್ಲದೆ ಸಮುಯೇಲನು ಇದ್ದ ದಿವಸಗಳೆಲ್ಲಾ ಯೆಹೋವ ದೇವರ ಕೈ ಫಿಲಿಷ್ಟಿಯರಿಗೆ ವಿರೋಧವಾಗಿತ್ತು.
इस प्रकार फिलिस्तीनी हरा दिए गए. इसके बाद उन्होंने इस्राएल की सीमा पर हमला दोबारा नहीं किया. शमुएल के संपूर्ण जीवनकाल में फिलिस्तीनियों पर याहवेह का गुस्सा बना रहा.
14 ಫಿಲಿಷ್ಟಿಯರು ಇಸ್ರಾಯೇಲಿನಿಂದ ತೆಗೆದುಕೊಂಡಿದ್ದ ಎಕ್ರೋನ್ ಮೊದಲ್ಗೊಂಡು ಗತ್ ಊರಿನವರೆಗೂ ಇರುವ ಪಟ್ಟಣಗಳನ್ನು ಇಸ್ರಾಯೇಲ್ಯರು ಫಿಲಿಷ್ಟಿಯರಿಂದ ತಿರುಗಿ ತೆಗೆದುಕೊಂಡರು. ಅವುಗಳ ಮೇರೆಗಳನ್ನು ಇಸ್ರಾಯೇಲರು ಫಿಲಿಷ್ಟಿಯರ ಕೈಯಿಂದ ಬಿಡಿಸಿಕೊಂಡರು. ಇಸ್ರಾಯೇಲಿಗೂ, ಅಮೋರಿಯರಿಗೂ ಮಧ್ಯೆ ಸಮಾಧಾನ ಉಂಟಾಗಿತ್ತು.
एक्रोन से लेकर गाथ तक, वे नगर, जो फिलिस्तीनियों ने इस्राएल से छीन लिए थे, इस्राएल को लौटा दिए गए. स्वयं इस्राएल ने फिलिस्तीनियों द्वारा अधिकृत किए गए अपने क्षेत्र उनसे मुक्त करवा लिए. इस्राएल तथा अमोरियों के बीच भी शान्तिपूर्ण संबंधों की स्थापना हो गई.
15 ಇದಲ್ಲದೆ ಸಮುಯೇಲನು ತಾನು ಬದುಕಿದ ಎಲ್ಲಾ ದಿವಸಗಳಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು.
शमुएल आजीवन इस्राएल के प्रशासक-न्यायध्यक्ष रहे.
16 ಅವನು ಪ್ರತಿವರ್ಷ ಹೊರಟು ಬೇತೇಲನ್ನೂ, ಗಿಲ್ಗಾಲನ್ನೂ, ಮಿಚ್ಪೆಯನ್ನೂ ಸುತ್ತಿಕೊಂಡು ಹೋಗಿ ಆ ಸ್ಥಳಗಳಲ್ಲೆಲ್ಲಾ ಇಸ್ರಾಯೇಲರಿಗೆ ನ್ಯಾಯತೀರಿಸಿದನು.
वर्ष-प्रतिवर्ष वह भ्रमण करते हुए बेथेल, गिलगाल तथा मिज़पाह ये तीन मुख्यालयों पर जाकर इस्राएल का न्याय करते थे.
17 ಆದರೆ ಅವನು ರಾಮಕ್ಕೆ ತಿರುಗಿ ಬರುತ್ತಾ ಇದ್ದನು. ಏಕೆಂದರೆ ಅಲ್ಲಿ ಅವನ ಮನೆ ಇತ್ತು, ಅಲ್ಲಿ ಇಸ್ರಾಯೇಲಿಗೆ ನ್ಯಾಯತೀರಿಸಿದನು. ಯೆಹೋವ ದೇವರಿಗೆ ಅಲ್ಲಿ ಒಂದು ಬಲಿಪೀಠವನ್ನು ಕಟ್ಟಿಸಿದನು.
फिर वह रामाह नगर को लौट जाते थे, क्योंकि उनका घर-परिवार यहीं था. वह इस्राएल का न्याय और शासन यहां से भी करते थे, साथ ही उन्होंने यहां याहवेह के लिए एक वेदी भी बनाई थी.