< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 18 >

1 ಯೆಹೋಷಾಫಾಟನಿಗೆ ಐಶ್ವರ್ಯವೂ, ಘನತೆಯೂ ಅಧಿಕವಾಗಿರುವಾಗ, ಅವನು ಅಹಾಬನ ಸಂಗಡ ಬಂಧುತ್ವ ಮಾಡಿದನು.
ယောရှဖတ်မင်းသည် ဂုဏ်အသရေနှင့် စည်းစိမ် ဥစ္စာများ၍၊ အာဟပ်မင်းနှင့် အမျိုးဆက်လေ၏။
2 ಕೆಲವು ವರ್ಷಗಳ ತರುವಾಯ ಅವನು ಅಹಾಬನ ಬಳಿಗೆ ಸಮಾರ್ಯಕ್ಕೆ ಹೋದನು. ಆಗ ಅಹಾಬನು ಅವನಿಗೋಸ್ಕರವೂ, ಅವನ ಸಂಗಡ ಇದ್ದ ಜನರಿಗೋಸ್ಕರವೂ ಅನೇಕ ಕುರಿದನಗಳನ್ನೂ ವಧಿಸಿ ಔತಣವನ್ನೇರ್ಪಡಿಸಿ, ತನ್ನ ಸಂಗಡ ಯುದ್ಧಕ್ಕಾಗಿ ಗಿಲ್ಯಾದಿನ ರಾಮೋತಿಗೆ ಹೋಗಲು ಪ್ರೇರೇಪಿಸಿದನು.
နောက်တဖန်ရှမာရိမြို့၊ အာဟပ်မင်းထံသို့ ကိုယ်တိုင်သွား၍၊ ဣသရေလရှင်ဘုရင်အာဟပ်သည် ယုဒရှင်ဘုရင်ယောရှဖတ်နှင့်၊ သူ၏လူတို့အဘို့ များစွာ သော သိုးနွားတို့ကိုစီရင်၍၊ ဂိလဒ်ပြည်ရာမုတ်မြို့သို့ လိုက်စေခြင်းငှါ၊
3 ಇಸ್ರಾಯೇಲಿನ ಅರಸನಾದ ಅಹಾಬನು ಯೆಹೂದದ ಅರಸನಾದ ಯೆಹೋಷಾಫಾಟನಿಗೆ, “ನೀನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಮಾಡಲು ನನ್ನ ಸಂಗಡ ಬರುತ್ತೀಯಾ?” ಎಂದನು. ಅದಕ್ಕವನು, “ನಾನೂ ನೀನೂ, ನನ್ನ ಜನರೂ ನಿನ್ನ ಜನರೂ ಒಂದೇ ಅಲ್ಲವೇ? ನಾವು ಯುದ್ಧದಲ್ಲಿ ನಿನ್ನ ಸಂಗಡ ಇರುವೆವು,” ಎಂದನು.
ဂိလဒ်ပြည်ရာမုတ်မြို့သို့ ငါနှင့်အတူ လိုက်မည် လောဟုမေးလျှင်၊ ယောရှုဖတ်က၊ ငါသည် မင်းကြီးကဲ့သို့ ၎င်း၊ ငါသူတို့သည် မင်းကြီး၏လူကဲ့သို့ဖြစ်လျက်၊ မင်းကြီး နှင့်ဝိုင်း၍ စစ်တိုက်မည်ဟု ပြန်ပြော၏။
4 ಆದರೆ ಯೆಹೋಷಾಫಾಟನು ಇಸ್ರಾಯೇಲಿನ ಅರಸನಿಗೆ, “ಈ ಹೊತ್ತು ಮೊದಲು ಯೆಹೋವ ದೇವರ ಆಲೋಚನೆಯನ್ನು ವಿಚಾರಿಸಿರಿ,” ಎಂದನು.
တဖန်ယောရှဖတ်က၊ ထာဝရဘုရား၏ နှုတ် ကပတ်တော်ကို ယနေ့မေးမြန်းပါလော့ဟု ဣသရေလ ရှင်ဘုရင်အားဆိုသော်၊
5 ಆಗ ಇಸ್ರಾಯೇಲಿನ ಅರಸನು ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ ಅವರಿಗೆ, “ನಾನು ಗಿಲ್ಯಾದಿನ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ, ಬೇಡವೋ?” ಎಂದು ಕೇಳಿದನು. ಅದಕ್ಕವರು, “ಹೋಗು, ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.
ဣသရေလရှင်ဘုရင်သည် ပရောဖက်လေးရာ တို့ကို စုဝေးစေပြီးလျှင်၊ ငါသည်ဂိလဒ်ပြည်ရာမုတ်မြို့သို့ စစ်ချီကောင်းသလော။ မချီဘဲနေ ကောင်းသလောဟု မေးသော်၊ သူတို့က ချီတော်မူပါ။ ထာဝရဘုရားသည် အရှင်မင်းကြီး၏လက်တော်သို့ အပ်တော်မူမည်ဟု လျှောက် ကြ၏။
6 ಆದರೆ ಯೆಹೋಷಾಫಾಟನು, “ಯೆಹೋವ ದೇವರ ಪ್ರವಾದಿಗಳಲ್ಲಿ ಇವರ ಹೊರತಾಗಿ ನಾವು ವಿಚಾರಿಸುವ ಹಾಗೆ ಬೇರೆ ಪ್ರವಾದಿ ಇಲ್ಲಿ ಇಲ್ಲವೋ?” ಎಂದು ಕೇಳಿದನು.
ယောရှဖတ်ကလည်း၊ ငါတို့မေးမြန်းစရာ ထာဝရဘုရား၏ ပရောဖက်တစုံတပါးမျှမရှိသလောဟု မေးသော်၊
7 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.
ဣသရေလရှင်ဘုရင်က၊ ထာဝရဘုရားကို မေးမြန်းရသော သူတယောက်၊ ဣမလသားမိက္ခာ ရှိသေး၏။ သို့ရာတွင်။ ထိုသူကိုငါမုန်း၏။ ငါ၌ မင်္ဂလာစကားကိုမဟော၊ အမင်္ဂလာစကားကိုသာ အစဉ်ဟောတတ်သည်ဟု ယောရှဖတ်အားဆိုလျှင်၊ ယောရှဖတ်က၊ ထိုသို့မင်းကြီး မပြောပါနှင့်ဟု ပြန်ဆို၏။
8 ಆಗ ಇಸ್ರಾಯೇಲಿನ ಅರಸನು ಒಬ್ಬ ಅಧಿಕಾರಿಯನ್ನು ಕರೆದು, “ಇಮ್ಲನ ಮಗನಾದ ಮೀಕಾಯನನ್ನು ಶೀಘ್ರವಾಗಿ ಕರೆದುಕೊಂಡು ಬಾ,” ಎಂದನು.
ထိုအခါ ဣသရေလရှင်ဘုရင်သည် အရာရှိ တယောက်ကိုခေါ်၍၊ ဣမလသားမိက္ခာကို အလျင် အမြန်ခေါ်ခဲ့ဟု မိန့်တော်မူ၏။
9 ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ರಾಜವಸ್ತ್ರಗಳನ್ನು ಧರಿಸಿಕೊಂಡು, ಸಮಾರ್ಯದ ಬಾಗಿಲಿನ ಮುಂದೆ ಬಯಲಿನಲ್ಲಿ ತಮ್ಮ ತಮ್ಮ ಸಿಂಹಾಸನಗಳ ಮೇಲೆ ಕುಳಿತುಕೊಂಡಿದ್ದರು. ಸಕಲ ಪ್ರವಾದಿಗಳೂ ಅವರ ಮುಂದೆ ಪ್ರವಾದಿಸುತ್ತಿದ್ದರು.
ဣသရေလရှင်ဘုရင်နှင့် ယုဒရှင်ဘုရင် ယော ရှဖတ်တို့သည် မင်းမြောက်တန်ဆာကို ဝတ်ဆင်လျက်၊ ရှမာရိမြို့တံခါးဝရှေ့၊ ဟင်းလင်းသောအရပ်၌ ရာဇပလ္လင် တို့အပေါ်မှာ ထိုင်၍၊ ပရောဖက်အပေါင်းတို့သည် ရှေ့တော်၌ ဟောပြောကြ၏။
10 ಆಗ ಕೆನಾನನ ಮಗನಾದ ಚಿದ್ಕೀಯನು, “ತನಗೆ ಕಬ್ಬಿಣದ ಕೊಂಬುಗಳನ್ನು ಮಾಡಿಕೊಂಡು, ‘ಇವುಗಳಿಂದ ನೀನು ಅರಾಮ್ಯರನ್ನು ನಿರ್ಮೂಲ ಮಾಡುವವರೆಗೂ ಇರಿದು ಹಾಕುವೆ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
၁၀ခေနာနာသားဇေဒကိသည် သံဦးချိုတို့ကို လုပ်၍၊ ထာဝရဘုရား မိန့်တော်မူသည်ကား၊ ကိုယ်တော် သည် ရှုရိပြည်ကို မဖျက်ဆီးမှီတိုင်အောင်၊ ဤဦးချိုတို့နှင့် တိုးရမည်ဟု မိန့်တော်မူကြောင်းကို ဆင့်ဆို၏။
11 ಸಮಸ್ತ ಪ್ರವಾದಿಗಳೂ ಹಾಗೆಯೇ ಪ್ರವಾದಿಸಿ, “ಗಿಲ್ಯಾದಿನ ರಾಮೋತಿಗೆ ಹೋಗಿ ಜಯ ಹೊಂದು. ಯೆಹೋವ ದೇವರು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವರು,” ಎಂದರು.
၁၁ပရောဖက်အပေါင်းတို့ကလည်း၊ ဂိလဒ်ပြည် ရာမုတ်မြို့သို့စစ်ချီ၍ အောင်တော်မူပါ၊ ထာဝရ ဘုရားသည် အရှင်မင်းကြီး၏လက်တော်သို့ အပ်တော် မူမည်ဟု ပရောဖက်ပြု၍ ဟောကြ၏။
12 ಆದರೆ ಮೀಕಾಯನನ್ನು ಕರೆಯಲು ಹೋದ ದೂತನು ಅವನಿಗೆ, “ನೋಡು, ಎಲ್ಲ ಪ್ರವಾದಿಗಳು ಏಕಮನಸ್ಸಿನಿಂದ ಅರಸನಿಗೆ ಒಳ್ಳೆಯದನ್ನೇ ಪ್ರವಾದಿಸಿದ್ದಾರೆ. ನಿನ್ನ ಮಾತು ಅವರಲ್ಲಿ ಒಬ್ಬನ ಮಾತಿನ ಹಾಗೆಯೇ ಇರಲಿ; ಒಳ್ಳೆಯ ಮಾತು ಆಡು,” ಎಂದನು.
၁၂မိက္ခာကိုခေါ်သောတမန်က၊ ပရောဖက် အပေါင်းတို့သည် မင်္ဂလာစကားကိုသာ ရှင်ဘုရင်အား တညီတညွတ်တည်း ဟောကြ၏။ ကိုယ်တော်လည်း သူတို့ဟောကြသည်နည်းတူ၊ မင်္ဂလာစကားကိုသာ ဟောတော်မူပါဟုဆိုလျှင်၊
13 ಅದಕ್ಕೆ ಮೀಕಾಯನು, “ಯೆಹೋವ ದೇವರ ಜೀವದಾಣೆ, ನನ್ನ ದೇವರು ಏನು ಹೇಳುವರೋ, ಅದನ್ನೇ ಮಾತನಾಡುವೆನು,” ಎಂದನು.
၁၃မိက္ခာက၊ ထာဝရဘုရား အသက်ရှင်တော်မူ သည်အတိုင်း၊ ငါ၏ဘုရားသခင်မိန့်တော်မူသော စကားကိုသာ ငါပြန်ပြောရမည်ဟုဆို၏။
14 ಅವನು ಅರಸನ ಬಳಿಗೆ ಬಂದಾಗ, ಅರಸನು ಅವನಿಗೆ, “ಮೀಕಾಯೆಹುವೇ, ನಾವು ಗಿಲ್ಯಾದಿನ ರಾಮೋತ್ ವಿರುದ್ಧವಾಗಿ ಯುದ್ಧಕ್ಕೆ ಹೋಗಬಹುದೋ ಅಥವಾ ಬೇಡವೋ?” ಎಂದನು. ಆಗ ಅವನು, “ಹೋಗಿ ಜಯ ಹೊಂದಿರಿ. ಅವರು ನಿಮ್ಮ ಕೈವಶರಾಗುವರು,” ಎಂದನು.
၁၄ရှင်ဘုရင်ထံသို့ရောက်သောအခါ၊ ရှင်ဘုရင်က၊ အချင်းမိက္ခာ၊ ငါတို့သည် ဂိလဒ်ပြည်ရာမုတ်မြို့သို့ စစ်ချီ ကောင်းသလော။ မချီဘဲနေ ကောင်းသလောဟုမေးလျှင်၊ မိက္ခာကစစ်ချီ၍ အောင်တော်မူပါ။ ရန်သူတို့ကို လက်တော်သို့ အပ်တော်မူမည်ဟု ပြန်လျှောက်၏။
15 ಆಗ ಅರಸನು ಅವನಿಗೆ, “ನೀನು ಯೆಹೋವ ದೇವರ ಹೆಸರಿನಲ್ಲಿ ಸತ್ಯವನ್ನಲ್ಲದೆ ಬೇರೊಂದು ನನಗೆ ಹೇಳಬಾರದೆಂದು ನಾನು ಎಷ್ಟು ಸಾರಿ ನಿನಗೆ ಆಣೆ ಇಡಬೇಕು?” ಎಂದನು.
၁၅ရှင်ဘုရင်ကလည်း၊ မှန်သောစကားမှတပါး အခြားသောစကားကို ထာဝရဘုရားအခွင့်နှင့် သင်သည် ငါ့အားမဟောမည်အကြောင်း၊ ငါသည်ဘယ်နှစ်ကြိမ် တိုင်အောင် သင့်အား အကျိန်ပေးရမည်နည်းဟု မေးသော်၊
16 ಅದಕ್ಕೆ ಮೀಕಾಯನು, “ಇಸ್ರಾಯೇಲರೆಲ್ಲರು ಕುರುಬನಿಲ್ಲದ ಕುರಿಗಳಂತೆ ಬೆಟ್ಟಗಳ ಮೇಲೆ ಚದರಿಹೋದದ್ದನ್ನು ಕಂಡೆನು. ಆಗ ಯೆಹೋವ ದೇವರು, ‘ಇವರಿಗೆ ಯಜಮಾನನು ಇಲ್ಲ. ಪ್ರತಿ ಮನುಷ್ಯನು ತನ್ನ ತನ್ನ ಮನೆಗೆ ಸಮಾಧಾನವಾಗಿ ಹಿಂದಿರುಗಿ ಹೋಗಲಿ,’ ಎಂಬುದಾಗಿ ಹೇಳಿದರು,” ಎಂದನು.
၁၆မိက္ခာက၊ ဣသရေလအမျိုးသားအပေါင်းတို့ သည် သိုးထိန်းမရှိသောသိုးကဲ့သို့ တောင်များအပေါ်မှာ အရပ်ရပ်ကွဲပြားလျက်ရှိကြသည်ကို ငါမြင်ပြီ။ ထာဝရ ဘုရားကလည်း၊ ဤသူအပေါင်းတို့သည် အရှင်မရှိသော ကြောင့်၊ အသီးသီးကိုယ်နေရာသို့ ပြန်ကြပါလေစေဟု မိန့်တော်မူကြောင်းကို လျှောက်ဆို၏။
17 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ಇವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಕೆಟ್ಟದ್ದನ್ನೇ ಪ್ರವಾದಿಸುವನೆಂದು ನಾನು ನಿನಗೆ ಹೇಳಲಿಲ್ಲವೇ?” ಎಂದನು.
၁၇ဣသရေလရှင်ဘုရင်ကလည်း၊ သူသည် ငါ၌ မင်္ဂလာစကားကိုမဟော၊ အမင်္ဂလာစကားကိုသာ ဟောတတ်သည်ဟုမင်းကြီးအား ငါမပြောသလောဟု ယောရှဖတ်အားဆို၏။
18 ಆಗ ಮೀಕಾಯನು, “ಆದ್ದರಿಂದ ಯೆಹೋವ ದೇವರ ವಾಕ್ಯವನ್ನು ಕೇಳು. ಯೆಹೋವ ದೇವರು ತಮ್ಮ ಸಿಂಹಾಸನದ ಮೇಲೆ ಕುಳಿತುಕೊಂಡಿರುವುದನ್ನೂ ಆಕಾಶದ ಸಮಸ್ತ ಸೈನ್ಯವು ಅವರ ಬಲಗಡೆ ಮತ್ತು ಎಡಗಡೆಯಲ್ಲಿ ನಿಂತಿರುವುದನ್ನೂ ನಾನು ಕಂಡೆನು.
၁၈မိက္ခာကလည်း၊ သို့ဖြစ်၍ ထာဝရဘုရား၏ အမိန့်တော်ကို နားထောင်ပါ။ ထာဝရဘုရားသည် ပလ္လင် တော်ပေါ်မှာ ထိုင်တော်မူသည်ကို၎င်း၊ ကောင်းကင် ဗိုလ်ခြေအပေါင်းတို့သည် လက်ျာတော်ဘက်၊ လက်ဝဲ တော်ဘက်၌ရပ်နေကြသည်ကို၎င်း၊ ငါမြင်ပြီ။
19 ಆಗ ಯೆಹೋವ ದೇವರು, ‘ಇಸ್ರಾಯೇಲಿನ ಅರಸನಾದ ಅಹಾಬನು ಹೋಗಿ ಗಿಲ್ಯಾದಿನ ರಾಮೋತಿನಲ್ಲಿ ಬೀಳುವ ಹಾಗೆ ಅವನನ್ನು ಮರುಳುಗೊಳಿಸುವವನು ಯಾರು?’ ಎಂದರು. “ಒಬ್ಬನು ಒಂದು ವಿಧವಾಗಿಯೂ ಮತ್ತೊಬ್ಬನು ಇನ್ನೊಂದು ವಿಧವಾಗಿಯೂ ಹೇಳುತ್ತಿದ್ದರು.
၁၉ထာဝရဘုရားကလည်း၊ အာဟပ်သည် ဂိလဒ် ပြည်ရာမုတ်မြို့သို့ စစ်ချီ၍ဆုံးစေခြင်းငှါ၊ အဘယ်သူ သွေးဆောင်မည်နည်းဟု မေးတော်မူလျှင်၊ အခြံအရံ တော်တို့သည် တယောက်တနည်းစီ ပြန်လျှောက်ကြ၏။
20 ಕೊನೆಯಲ್ಲಿ, ಒಂದು ಆತ್ಮವು ಹೊರಟುಬಂದು ಯೆಹೋವ ದೇವರ ಮುಂದೆ ನಿಂತು, ‘ನಾನು ಅವನನ್ನು ಮರುಳುಗೊಳಿಸುತ್ತೇನೆ,’ ಎಂದಿತು. “ಆಗ ಯೆಹೋವ ದೇವರು, ‘ಅದು ಹೇಗೆ?’ ಎಂದರು.
၂၀တဖန်ဝိညာဉ်တပါးသည်လာ၍ ထာဝရဘုရား ရှေ့တော်၌ ရပ်လျက်၊ အကျွန်ုပ်သွေးဆောင်ပါမည်ဟု လျှောက်လျှင်၊
21 “ಅದಕ್ಕದು, ‘ನಾನು ಹೊರಟು ಅವನ ಎಲ್ಲಾ ಪ್ರವಾದಿಗಳ ಬಾಯಲ್ಲಿ ಸುಳ್ಳನ್ನಾಡುವ ಆತ್ಮವಾಗಿರುವೆನು,’ ಎಂದಿತು. “ಅದಕ್ಕೆ ಯೆಹೋವ ದೇವರು, ‘ನೀನು ಅವನನ್ನು ಮರುಳುಗೊಳಿಸುವೆ ಮತ್ತು ಜಯಿಸುವೆ, ಹೊರಟುಹೋಗಿ ಹಾಗೆ ಮಾಡು,’ ಎಂದರು.
၂၁ထာဝရဘုရားက၊ အဘယ်သို့သွေးဆောင်မည် နည်းဟု မေးတော်မူသော်၊ အကျွန်ုပ်သွား၍ ထိုမင်းကြီး ၏ပရောဖက်အပေါင်းတို့ထဲမှာ၊ မုသားစကားကို ပြော တတ်သော စိတ်ဝိညာဉ်ဖြစ်ပါမည်ဟု ပြန်လျှောက်သော် သင်သည်သွေးဆောင်၍ နိုင်လိမ့်မည်။ ထိုသို့သွား၍ ပြုလော့ဟု မိန့်တော်မူ၏။
22 “ಆದ್ದರಿಂದ ಇಗೋ, ಯೆಹೋವ ದೇವರು ಈ ನಿನ್ನ ಪ್ರವಾದಿಗಳ ಬಾಯಿಯಲ್ಲಿ ಸುಳ್ಳನ್ನಾಡುವ ಆತ್ಮವನ್ನು ಇಟ್ಟಿದ್ದಾರೆ. ಇದಲ್ಲದೆ ಯೆಹೋವ ದೇವರು ನಿನ್ನನ್ನು ಕುರಿತು ಕೇಡನ್ನು ಹೇಳಿದ್ದಾರೆ,” ಎಂದನು.
၂၂သို့ဖြစ်၍ ထာဝရဘုရားသည် မုသာစကားကို ပြောတတ်သော စိတ်ဝိညာဉ်ကို မင်းကြီး၏ပရောဖက် အပေါင်းတို့၌ သွင်းတော်မူပြီ။ မင်းကြီး၏အမှုမှာ အမင်္ဂလာစကားကို ပြောတော်မူပြီဟု ဟောလေ၏။
23 ಆಗ ಕೆನಾನನ ಮಗನಾದ ಚಿದ್ಕೀಯನು ಸಮೀಪಕ್ಕೆ ಬಂದು ಮೀಕಾಯನ ಕೆನ್ನೆಯ ಮೇಲೆ ಹೊಡೆದು, “ಯೆಹೋವ ದೇವರ ಆತ್ಮವು ನನ್ನನ್ನು ಬಿಟ್ಟು, ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಬಂದಿತು?” ಎಂದನು.
၂၃ထိုအခါ ခေနာနာသားဇေဒကိသည် ချဉ်းလာ၍ မိက္ခာ၏ပါးကို ပုတ်လျက်၊ ထာဝရဘုရား၏ ဝိညာဉ်တော် သည် သင်နှင့်နှုတ်ဆက်ခြင်းငှါ၊ အဘယ်လမ်းဖြင့် ငါမှ ထွက်တော်မူသနည်းဟု မေးလျှင်၊
24 ಅದಕ್ಕೆ ಮೀಕಾಯನು, “ಇಗೋ, ನಿನ್ನನ್ನು ಬಚ್ಚಿಟ್ಟುಕೊಳ್ಳಲು ಒಳಕೊಠಡಿಗೆ ನೀನು ಹೋಗುವ ದಿವಸದಲ್ಲಿ ನೋಡುವೆ,” ಎಂದನು.
၂၄မိက္ခာက၊ သင်သည်ပုန်းရှောင်၍နေခြင်းငှါ၊ အတွင်းခန်းထဲသို့ ဝင်သောနေ့၌ သင်မြင်လိမ့်မည်ဟု ဆို၏။
25 ಆಗ ಇಸ್ರಾಯೇಲಿನ ಅರಸನು ಹೇಳಿದ್ದೇನೆಂದರೆ, “ನೀವು ಮೀಕಾಯನನ್ನು ಹಿಡಿದು ಪಟ್ಟಣದ ಅಧಿಪತಿಯಾದ ಆಮೋನನ ಬಳಿಗೂ, ಅರಸನ ಮಗನಾದ ಯೋವಾಷನ ಬಳಿಗೂ ತೆಗೆದುಕೊಂಡುಹೋಗಿ,
၂၅ဣသရေလရှင်ဘုရင်က၊ မိက္ခာကို မြို့ဝန်မင်း အာမုန်ထံ၊ သားတော်ယောရှထံသို့ ယူသွား၍၊
26 ‘ನಾನು ಸಮಾಧಾನವಾಗಿ ತಿರುಗಿ ಬರುವವರೆಗೂ ನೀವು ಇವನನ್ನು ಸೆರೆಮನೆಯಲ್ಲಿಟ್ಟು, ಅವನಿಗೆ ರೊಟ್ಟಿ ಮತ್ತು ನೀರನ್ನು ಬಿಟ್ಟು ಮತ್ತೇನೂ ಕೊಡಬೇಡಿರೆಂದು ಅರಸನು ಹೇಳಿದ್ದಾನೆ’ ಎಂದು ತಿಳಿಸು,” ಎಂದನು.
၂၆ဤသူကို ထောင်ထဲမှာလှောင်ထားကြ။ ငါသည် ငြိမ်ဝပ်စွာပြန်၍ မလာမှီတိုင်အောင်၊ ဆင်းရဲစွာ စားသောက်စေဟု အမိန့်တော်ရှိကြောင်းကို ဆင့်ဆိုလော့ ဟု စီရင်၏။
27 ಅದಕ್ಕೆ ಮೀಕಾಯನು, “ನೀನು ಸಮಾಧಾನದಿಂದ ನಿಜವಾಗಿ ಬಂದರೆ, ಯೆಹೋವ ದೇವರು ನನ್ನ ಮುಖಾಂತರ ಮಾತನಾಡಿಲ್ಲ, ಎಂದು ಹೇಳಿ; ಜನರೇ, ನೀವೆಲ್ಲರೂ ನನ್ನ ಮಾತನ್ನು ಗಮನದಲ್ಲಿಡಿರಿ!” ಎಂದು ಕೂಗಿ ಹೇಳಿದನು.
၂၇မိက္ခာကလည်း၊ မင်းကြီးသည် ငြိမ်စပ်စွာ ပြန်လာရလျှင်၊ ထာဝရဘုရားသည် ငါ့အားဖြင့်မိန့်တော် မမူ၊ အိုလူများအပေါင်းတို့၊ နားထောင်ကြလော့ဟုဆို၏။
28 ಹೀಗೆಯೇ ಇಸ್ರಾಯೇಲಿನ ಅರಸನೂ, ಯೆಹೂದದ ಅರಸನಾದ ಯೆಹೋಷಾಫಾಟನೂ ಗಿಲ್ಯಾದಿನ ರಾಮೋತಿಗೆ ಹೋದರು.
၂၈ထိုသို့ ဣသရေလရှင်ဘုရင်နှင့် ယုဒရှင်ဘုရင် ယောရှဖတ်တို့သည်၊ ဂိလဒ်ပြည်ရာမုတ်မြို့သို့ စစ်ချီကြ၏။
29 ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾನು ವೇಷಹಾಕಿಕೊಂಡು ಯುದ್ಧದಲ್ಲಿ ಪ್ರವೇಶಿಸುವೆನು. ಆದರೆ ನೀನು ನಿನ್ನ ರಾಜವಸ್ತ್ರಗಳನ್ನು ಧರಿಸಿಕೊಂಡಿರು,” ಎಂದನು. ಹಾಗೆಯೇ ಇಸ್ರಾಯೇಲಿನ ಅರಸನು ವೇಷಹಾಕಿಕೊಂಡು ಯುದ್ಧಕ್ಕೆ ಹೋದನು.
၂၉ဣသရေလရှင်ဘုရင်က၊ ငါသည် ခြားနားသော အယောင်ကို ဆောင်၍စစ်ပွဲထဲသို့ ဝင်မည်။ မင်းကြီးမူ ကား၊ မင်မြောက်တန်ဆာကို ဝတ်ဆင်ပါလော့ဟု ယောရှ ဖတ်အားဆိုပြီးမှ၊ ဣသရေလရှင်ဘုရင်သည် ခြားနား သော အယောင်ကိုဆောင်လျက် စစ်ပွဲထဲသို့ဝင်၏။
30 ಅರಾಮಿನ ಅರಸನು ತನ್ನ ರಥಗಳ ಮೇಲೆ ಅಧಿಕಾರವುಳ್ಳವರಿಗೆ, “ನೀವು ಶತ್ರುಗಳ ಸಾಧಾರಣ ಸೈನಿಕರನ್ನೂ ಅಧಿಪತಿಗಳನ್ನೂ ಬಿಟ್ಟು ಇಸ್ರಾಯೇಲಿನ ಅರಸನನ್ನು ಮಾತ್ರ ಗುರಿಯಾಗಿಸಿಕೊಂಡು ಯುದ್ಧಮಾಡಿರಿ,” ಎಂದು ಆಜ್ಞಾಪಿಸಿದನು.
၃၀ရှုရိရှင်ဘုရင်က၊ ဣသရေလရှင်ဘုရင်မှတပါး၊ အခြားသော လူကြီးလူငယ်ကို မတိုက်နှင့်ဟု ရထားစီး သူရဲအုပ်ဗိုလ်မင်းတို့ကိုမှာထားနှင့်သောကြောင့်၊
31 ಆದ್ದರಿಂದ ರಥಗಳ ಅಧಿಪತಿಗಳು ಯೆಹೋಷಾಫಾಟನನ್ನು ಕಂಡಾಗ, “ಇವನೇ ಇಸ್ರಾಯೇಲಿನ ಅರಸನು,” ಎಂದು ಹೇಳಿ ಅವನ ಸಂಗಡ ಯುದ್ಧಮಾಡುವುದಕ್ಕೆ ತಿರುಗಿಕೊಂಡರು. ಆದರೆ ಯೆಹೋಷಾಫಾಟನು ಕೂಗಿಕೊಂಡನು. ಆಗ ಯೆಹೋವ ದೇವರು ಅವನಿಗೆ ಸಹಾಯಮಾಡಿ, ಶತ್ರುಗಳನ್ನು ಅವನ ಕಡೆಯಿಂದ ತೊಲಗಿಸಿದರು.
၃၁ရထားစီးသူရဲအုပ်ဗိုလ်မင်းတို့သည် ယောရှဖတ် ကိုမြင်သောအခါ၊ ထိုသူသည် ဣသရေလရှင်ဘုရင် ဖြစ်လိမ့်မည်ဟုဆိုလျက်၊ သူ့ကို တိုက်အံ့သောငှါ ဝိုင်းလာ ကြ၍၊ ယောရှဖတ်လည်း ကြွေးကြော်လေ၏။ ထာဝရ ဘုရားလည်းမစ၍ သူတို့ကိုလွှဲသွားစေခြင်းငှါ၊ ဘုရား သခင်သွေးဆောင်တော်မူ၏။
32 ಅವನು ಇಸ್ರಾಯೇಲಿನ ಅರಸನಲ್ಲವೆಂದು ರಥಗಳ ಅಧಿಪತಿಗಳಿಗೆ ಗೊತ್ತಾದಾಗ, ಅವರು ಅವನನ್ನು ಬಿಟ್ಟುಹೋದರು.
၃၂ဣသရေလရှင်ဘုရင်မဟုတ်ကြောင်းကို၊ ရထားစီးသူရဲအုပ်ဗိုလ်မင်းတို့သည် ရိပ်မိသောအခါ၊ မလိုက်ဘဲ အခြားသို့ ရှောင်သွားကြ၏။
33 ಆದರೆ ಅರಾಮ್ಯರ ಸೈನಿಕನೊಬ್ಬನು ಗುರಿ ಇಡದೆ ಬಿಲ್ಲಿಗೆ ಬಾಣವನ್ನೇರಿಸಿ ಹೊಡೆಯಲು, ಅದು ಇಸ್ರಾಯೇಲಿನ ಅರಸನಿಗೆ, ಅವನ ಕವಚದ ಸಂದಿನಲ್ಲಿ ಬಂದು ತಾಕಿತು. ಆದ್ದರಿಂದ ಅವನು ತನ್ನ ರಥ ನಡೆಸುವವನಿಗೆ, “ನೀನು ರಥವನ್ನು ತಿರುಗಿಸಿ ನನ್ನನ್ನು ಸೈನ್ಯದೊಳಗಿಂದ ಆಚೇಕಡೆಗೆ ತೆಗೆದುಕೊಂಡು ಹೋಗು, ನನಗೆ ದೊಡ್ಡ ಗಾಯವಾಗಿದೆ,” ಎಂದನು.
၃၃လူတယောက်သည် မရွယ်ဘဲလေးနှင့်ပစ်၍၊ ဣသရေလရှင်ဘုရင်ကို၊ သံချပ်အင်္ကျီအဆစ်ကြားမှာ မှန်လေသော်၊ ငါ့ကိုစစ်ပွဲထဲက လှည့်၍ ထုတ်ဆောင် လော့။ ငါနာသည်ဟု မိမိရထားတော်ထိန်းကိုဆို၏။
34 ಆ ದಿವಸವೆಲ್ಲಾ ಯುದ್ಧವು ಬಹು ಘೋರವಾದದ್ದರಿಂದ ಇಸ್ರಾಯೇಲಿನ ಅರಸನಾದ ಅಹಾಬನು ಸಾಯಂಕಾಲದವರೆಗೂ ಅರಾಮ್ಯರಿಗೆ ಎದುರಾಗಿ ರಥದಲ್ಲಿಯೇ ಆತುಕೊಂಡು ನಿಂತಿದ್ದನು, ಸೂರ್ಯನು ಅಸ್ತಮಿಸಿದಾಗ ಅವನು ಮರಣಹೊಂದಿದನು.
၃၄ထိုနေ့၌တိုး၍တိုက်ကြ၏။ ဣသရေလရှင်ဘုရင် သည် ညဦးယံတိုင်အောင်၊ ရှုရိလူတဘက်တချက်၌ ရထားတော်ထဲမှာ လူကိုမှီ၍ထိုင်နေ၏။ နေဝင်ချိန်နီး သောအခါ အသက်တော်ကုန်၏။

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 18 >