< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 23 >
1 ಏಳನೆಯ ವರ್ಷದಲ್ಲಿ ಯೆಹೋಯಾದಾವನು ತನ್ನನ್ನು ಬಲಪಡಿಸಿಕೊಂಡು ಶತಾಧಿಪತಿಗಳಾಗಿರುವ ಯೆರೋಹಾಮನ ಮಗ ಅಜರ್ಯನನ್ನೂ, ಯೆಹೋಹಾನಾನನ ಮಗ ಇಷ್ಮಾಯೇಲನನ್ನೂ, ಓಬೇದನ ಮಗ ಅಜರ್ಯನನ್ನೂ, ಅದಾಯನ ಮಗ ಮಾಸೇಯನನ್ನೂ, ಜಿಕ್ರಿಯ ಮಗ ಎಲಿಷಾಫಾಟನನ್ನೂ ಕರೆದುಕೊಂಡು, ಅವರ ಸಂಗಡ ಒಡಂಬಡಿಕೆಯನ್ನು ಮಾಡಿದನು.
सातवे साल यहूयदा' ने ज़ोर पकड़ा और सैकड़ों के सरदारों या'नी 'अज़रियाह बिन यहूराम और इस्मा'ईल बिन यहूहनान और अज़रियाह बिन 'ओबेद और मासियाह बिन 'अदायाह और इलीसाफ़त बिन ज़िकरी से 'अहद बाँधा।
2 ಇವರು ಯೆಹೂದವನ್ನು ಸಂಚರಿಸಿ ಯೆಹೂದದ ಸಮಸ್ತ ಪಟ್ಟಣಗಳಿಂದ ಲೇವಿಯರನ್ನೂ, ಇಸ್ರಾಯೇಲಿನ ಕುಟುಂಬದಲ್ಲಿ ಮುಖ್ಯಸ್ಥರನ್ನೂ ಕೂಡಿಸಿಕೊಂಡು, ಯೆರೂಸಲೇಮಿಗೆ ಬಂದರು.
वह यहूदाह में फिरे, और यहूदाह के सब शहरों में से लावियों को, और इस्राईल के आबाई ख़ान्दानों के सरदारों को इकट्ठा किया, और वह येरूशलेम में आए।
3 ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ.
और सारी जमा'अत ने ख़ुदा के घर में बादशाह के साथ 'अहद बाँधा, और यहूयदा' ने उनसे कहा, “देखो! यह शाहज़ादा जैसा ख़ुदावन्द ने बनी दाऊद के हक़ में फ़रमाया है, हुकूमत करेगा।
4 ಈಗ ನೀವು ಮಾಡಬೇಕಾದದ್ದೇನೆಂದರೆ, ಸಬ್ಬತ್ ದಿನದಲ್ಲಿ ಪ್ರವೇಶಿಸುವ ಯಾಜಕರೂ, ಲೇವಿಯರೂ ಆದ ನಿಮ್ಮಲ್ಲಿರುವ ಮೂರನೇ ಒಂದು ಭಾಗವು ದ್ವಾರಪಾಲಕರಾಗಿರಬೇಕು.
जो काम तुम को करना है वह यह है कि तुम काहिनों और लावियों में से जो सब्त को आते हो, एक तिहाई दरबान हो,
5 ಇನ್ನೊಂದು ಭಾಗವು ಅರಮನೆಯನ್ನೂ, ಮತ್ತೊಂದು ಭಾಗವು ಅಸ್ತಿವಾರದ ಬಾಗಿಲನ್ನೂ, ಇತರ ಸಮಸ್ತ ಜನರೂ ಯೆಹೋವ ದೇವರ ಆಲಯದ ಅಂಗಳದಲ್ಲಿಯೂ ಇರಬೇಕು.
और एक तिहाई शाही महल पर, और एक तिहाई बुनियाद के फाटक पर; और सब लोग ख़ुदावन्द के घर के सहनों में हो।
6 ಆದರೆ ಯಾಜಕರೂ, ಲೇವಿಯರಲ್ಲಿ ಸೇವೆ ಮಾಡುವವರೂ ಅಲ್ಲದೆ ಬೇರೆ ಯಾರೂ ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಕೂಡದು. ಅವರು ಪ್ರತಿಷ್ಠಿತರಾದುದರಿಂದ ಒಳಗೆ ಪ್ರವೇಶಿಸಲಿ. ಆದರೆ ಸಮಸ್ತ ಜನರು ಯೆಹೋವ ದೇವರ ಆಜ್ಞಾನುಸಾರವಾಗಿ ಹೊರಗಿರಬೇಕು.
पर ख़ुदावन्द के घर में सिवा काहिनों के और उनके जो लावियों में से ख़िदमत करते हैं, और कोई न आने पाए वही अन्दर आए क्यूँकि वह मुक़द्दस है लेकिन सब लोग ख़ुदावन्द का पहरा देते रहें।
7 ಇದಲ್ಲದೆ ಲೇವಿಯರಲ್ಲಿ ಪ್ರತಿ ಮನುಷ್ಯನು ತನ್ನ ಕೈಯಲ್ಲಿ ಆಯುಧಗಳನ್ನು ಹಿಡಿದುಕೊಂಡು ಅರಸನ ಸುತ್ತಲೂ ಇರಬೇಕು. ಇವರ ಹೊರತು ಯಾವನಾದರೂ ಆಲಯದಲ್ಲಿ ಬಂದರೆ, ಅವನನ್ನು ಸಂಹರಿಸಬೇಕು. ಆದರೆ ಅರಸನು ಒಳಗೆ ಬರುವಾಗಲೂ, ಹೊರಗೆ ಹೋಗುವಾಗಲೂ ನೀವು ಅವನ ಜೊತೆಯಲ್ಲಿಯೇ ಇರಬೇಕು,” ಎಂದು ಹೇಳಿದನು.
और लावी अपने अपने हाथ में अपने हथियार लिए हुए बादशाह को चारों तरफ़ से घेरे रहे, और जो कोई हैकल में आए क़त्ल किया जाए और बादशाह जब अन्दर आए और बाहर निकले तो तुम उसके साथ रहना।”
8 ಹೀಗೆಯೇ ಯಾಜಕನಾದ ಯೆಹೋಯಾದಾವನು ಆಜ್ಞಾಪಿಸಿದ ಪ್ರಕಾರ ಲೇವಿಯರೂ ಸಮಸ್ತ ಯೆಹೂದದವರೂ ಮಾಡಿದರು. ಪ್ರತಿ ಮನುಷ್ಯನು ಸಬ್ಬತ್ ದಿನದಲ್ಲಿ ಮನೆಗೆ ಹೋಗತಕ್ಕ ಮತ್ತು ಬರತಕ್ಕ ಸಿಪಾಯಿಗಳನ್ನು ಕೂಡಿಸಿಕೊಂಡನು. ಏಕೆಂದರೆ ಯಾಜಕನಾದ ಯೆಹೋಯಾದನು ಸೇವಾವಿಮುಕ್ತರಾದ ವರ್ಗದವರನ್ನು ಕಳುಹಿಸಿಬಿಡಲಿಲ್ಲ.
इसलिए लावियों और सारे यहूदाह ने यहूयदा' काहिन के हुक्म के मुताबिक़ सब कुछ किया, और उनमें से हर शख़्स ने अपने लोगों को लिया, या'नी उनको जो सब्त को अन्दर आते थे और उनको जो सब्त को बाहर चले जाते थे; क्यूँकि यहूयदा' काहिन ने बारी वालों को रुख़सत नहीं किया था।
9 ಇದಲ್ಲದೆ ಯಾಜಕನಾದ ಯೆಹೋಯಾದನು ದೇವರ ಆಲಯದಲ್ಲಿದ್ದ ಅರಸನಾದ ದಾವೀದನ ಈಟಿಗಳನ್ನೂ, ದೊಡ್ಡ ಮತ್ತು ಸಣ್ಣ ಗುರಾಣಿಗಳನ್ನೂ ಶತಾಧಿಪತಿಗಳಾದವರಿಗೆ ಕೊಟ್ಟು,
और यहूयदा' काहिन ने दाऊद बादशाह की बर्छियाँ और ढालें और फरियाँ, जो ख़ुदा के घर में थीं, सैंकड़ों सरदारों को दीं।
10 ಆಯುಧಗಳನ್ನು ಕೈಯಲ್ಲಿ ಹಿಡಿದುಕೊಂಡಿದ್ದ ಸಮಸ್ತ ಜನರನ್ನೂ ಬಲಿಪೀಠದ ಬಳಿಯಲ್ಲಿಯೂ, ಆಲಯದ ಬಳಿಯಲ್ಲಿಯೂ, ಆಲಯದ ಬಲಗಡೆಯ ಮೊದಲುಗೊಂಡು ಆಲಯದ ಎಡಗಡೆಯವರೆಗೂ ಅರಸನ ಸುತ್ತಲೂ ಇರಿಸಿದನು.
और उसने सब लोगों को जो अपना अपना हथियार हाथ में लिए हुए थे, हैकल की दहनी तरफ़ से उसकी बाई तरफ़ तक, मज़बह और हैकल के पास बादशाह के चारो तरफ़ खड़ा कर दिया।
11 ಆಗ ಯೆಹೋಯಾದಾವನು ಅವನ ಮಕ್ಕಳೂ ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅವನನ್ನು ಅರಸನನ್ನಾಗಿ ಘೋಷಿಸಿ, ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.
फिर वह शाहज़ादे को बाहर लाए, और उसके सिर पर ताज रखकर गवाही नामा दिया और उसे बादशाह बनाया; और यहूयदा' और उसके बेटों ने उसे मसह किया, और वह बोल उठे, “बादशाह सलामत रहे।”
12 ಆದರೆ ಅರಸನನ್ನು ಹರಸುತ್ತಾ, ಓಡುತ್ತಾ ಇದ್ದ ಜನರ ಶಬ್ದವನ್ನು ಅತಲ್ಯಳು ಕೇಳಿದಾಗ, ಅವಳು ಯೆಹೋವ ದೇವರ ಆಲಯದಲ್ಲಿ ಜನರ ಬಳಿಗೆ ಬಂದಳು.
जब 'अतलियाह ने लोगों का शोर सुना, जो दौड़ दौड़ कर बादशाह की तारीफ़ कर रहे थे, तो वह ख़ुदावन्द के घर में लोगों के पास आई।
13 ಅರಸನು ಪ್ರವೇಶಿಸುವ ಸ್ಥಳದಲ್ಲಿ ತನ್ನ ಸ್ತಂಭದ ಬಳಿಯಲ್ಲಿ ನಿಂತಿದ್ದನು. ಪ್ರಧಾನರೂ, ತುತೂರಿ ಊದುವವರೂ, ಅರಸನ ಬಳಿಯಲ್ಲಿ ನಿಂತಿದ್ದರು. ಇದಲ್ಲದೆ ದೇಶದ ಜನರೆಲ್ಲರೂ ಸಂತೋಷಪಟ್ಟು ತುತೂರಿಗಳನ್ನು ಊದುತ್ತಿದ್ದರು. ಹಾಗೆಯೇ ಹಾಡುಗಾರರು ಗೀತವಾದ್ಯಗಳನ್ನು ಹಿಡಿದು ಸ್ತುತಿಸುವವರೂ ಬೋಧಿಸುವವರೂ ಇದ್ದರು. ಇದನ್ನು ಕಂಡ ಕೂಡಲೆ ಅತಲ್ಯಳು ತನ್ನ ವಸ್ತ್ರಗಳನ್ನು ಹರಿದುಕೊಂಡು, “ದ್ರೋಹ, ದ್ರೋಹ,” ಎಂದು ಕೂಗಿದಳು.
और उसने निगाह की और क्या देखा कि बादशाह फाटक में अपने सुतून के पास खड़ा है, और बादशाह के नज़दीक हाकिम और नरसिंगे हैं और सारी ममलकत के लोग ख़ुश हैं और नरसिंगे फूंक रहे हैं, और गानेवाले बाजों को लिए हुए मदहसराई करने में पेशवाई कर रहे हैं। तब 'अतलियाह ने अपने कपड़े फाड़े और कहा, “गद्र है! गद्र!”
14 ಆಗ ಯಾಜಕನಾದ ಯೆಹೋಯಾದಾವನು ಸೈನ್ಯದ ಮೇಲೆ ಇರುವ ಶತಾಧಿಪತಿಗಳನ್ನು ಹೊರಗೆ ಕರೆತಂದು ಅವರಿಗೆ, “ಅವಳನ್ನು ಯೆಹೋವ ದೇವರ ಆಲಯದಲ್ಲಿ ಕೊಲ್ಲಬೇಡಿರಿ, ಎರಡು ಸಾಲು ಸಿಪಾಯಿಗಳು ಅವಳನ್ನು ನಡುವೆ ಸಾಗಿಸಿಕೊಂಡು ಹೋಗಿ ಹೊರಗೆ ತಳ್ಳಲಿ ಮತ್ತು ಅವಳನ್ನು ಹಿಂಬಾಲಿಸುವಂಥವರನ್ನು ಖಡ್ಗದಿಂದ ಕೊಂದುಹಾಕಿರಿ,” ಎಂದು ಆಜ್ಞಾಪಿಸಿದನು.
तब यहूयदा' काहिन सैकड़ों के सरदारों को जो लश्कर पर मुक़र्रर थे, बाहर ले आया और उनसे कहा कि उसको सफ़ों के बीच करके निकाल ले जाओ, और जो कोई उसके पीछे चले वह तलवार से मारा जाए। क्यूँकि काहिन कहने लगा कि ख़ुदावन्द के घर में उसे क़त्ल न करो।
15 ಆಗ ಅವರು ಅವಳನ್ನು ಅಧೀನಕ್ಕೆ ತೆಗೆದುಕೊಂಡು, ಅರಮನೆಯ ಬಳಿಯಲ್ಲಿ ಕುದುರೆ ಬಾಗಿಲಿನ ಪ್ರವೇಶದಲ್ಲಿ ಬಂದಾಗ ಅಲ್ಲಿ ಅವಳನ್ನು ಕೊಂದುಹಾಕಿದರು.
इसलिए उन्होंने उसके लिए रास्ता छोड़ दिया, और वह शाही महल के घोड़ा फाटक के सहन को गई, और वहाँ उन्होंने उसे क़त्ल कर दिया
16 ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.
फिर यहूयदा' ने अपने और सब लोगों और बादशाह के बीच 'अहद बाँधा कि वह ख़ुदावन्द के लोग हों।
17 ಸಮಸ್ತ ಜನರು ಬಾಳನ ದೇವಸ್ಥಾನಕ್ಕೆ ಹೋಗಿ ಅದನ್ನು ಕೆಡವಿಹಾಕಿ, ಅದರ ಬಲಿಪೀಠಗಳನ್ನೂ ವಿಗ್ರಹಗಳನ್ನೂ ಒಡೆದುಬಿಟ್ಟು, ಬಲಿಪೀಠಗಳ ಮುಂದೆ ಬಾಳನ ಯಾಜಕನಾದ ಮತ್ತಾನನನ್ನು ಕೊಂದುಹಾಕಿದರು.
तब सब लोग बा'ल के मन्दिर को गए और उसे ढाया; और उन्होंने उसके मज़बहों और उसकी मूरतों को चकनाचूर किया, और बा'ल के पुजारी मतान को मज़बहों के सामने क़त्ल किया।
18 ಆಗ ಯೆಹೋಯಾದಾವನು ಲೇವಿಯರಾದ ಯಾಜಕರ ಕೈಕೆಳಗೆ ಯೆಹೋವ ದೇವರ ಆಲಯದ ಪರಿಚಾರಕರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಯೆಹೋವ ದೇವರ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ಬೇರ್ಪಡಿಸಿದ್ದನು. ದಾವೀದನಿಂದ ನೇಮಕವಾದ ಪ್ರಕಾರ ಸಂತೋಷದಿಂದ ಹಾಡುತ್ತಾ ಮೋಶೆಯ ನಿಯಮದಲ್ಲಿ ಬರೆದಿರುವಂತೆ ಯೆಹೋವ ದೇವರಿಗೆ ದಹನಬಲಿಗಳನ್ನು ಅರ್ಪಿಸುವುದು ಅವರ ಕರ್ತವ್ಯವಾಗಿತ್ತು.
और यहूयदा' ने ख़ुदावन्द की हैकल की ख़िदमत लावी काहिनों के हाथ में सौंपी, जिनको दाऊद' ने ख़ुदावन्द की हैकल में अलग अलग ठहराया था कि ख़ुदावन्द की सोख़्तनी क़ुर्बानियाँ जैसा मूसा की तौरेत में लिखा है, ख़ुशी मनाते हुए और गाते हुए दाऊद के दस्तूर के मुताबिक़ अदा करेंगे।
19 ಯೆಹೋವ ದೇವರ ಆಲಯದಲ್ಲಿ ಯಾವ ಅಪವಿತ್ರವಾದದ್ದೂ ಒಳಗೆ ಪ್ರವೇಶಿಸದ ಹಾಗೆ ಬಾಗಿಲುಗಳ ಬಳಿಯಲ್ಲಿ ದ್ವಾರಪಾಲಕರನ್ನು ಇರಿಸಿದನು.
और उसने ख़ुदावन्द की हैकल के फाटकों पर दरबानों को बिठाया, ताकि जो कोई किसी तरह से नापाक हो, अन्दर आने न पाए।
20 ಅವನು ಶತಾಧಿಪತಿಗಳನ್ನೂ, ಗೌರವಸ್ಥರನ್ನೂ, ಜನರ ಅಧಿಪತಿಗಳನ್ನೂ, ದೇಶದ ಜನರೆಲ್ಲರನ್ನೂ ಕರೆದುಕೊಂಡು ಹೋಗಿ, ಅರಸನನ್ನು ಯೆಹೋವ ದೇವರ ಆಲಯದಿಂದ ಕರೆತಂದನು. ಅವರು ಹೆಬ್ಬಾಗಿಲಿನಿಂದ ಅರಮನೆಗೆ ಬಂದು, ಅರಸನನ್ನು ರಾಜಸಿಂಹಾಸನದ ಮೇಲೆ ಕುಳ್ಳಿರಿಸಿದರು.
और उसने सैकड़ों के सरदारों और हाकिम और क़ौम के हाकिमों और मुल्क के सब लोगों को साथ लिया, और बादशाह को ख़ुदावन्द की हैकल से ले आया, और वह ऊपर के फाटक से शाही महल में आए और बादशाह की तख़्त — ए — हुकूमत पर बिठाया।
21 ಅತಲ್ಯಳನ್ನು ಖಡ್ಗದಿಂದ ಕೊಂದುಹಾಕಿದ್ದರಿಂದ ದೇಶದ ಜನರೆಲ್ಲರೂ ಸಂತೋಷಪಟ್ಟರು, ಪಟ್ಟಣವು ಶಾಂತವಾಯಿತು.
तब मुल्क के सब लोगों ने ख़ुशी मनाई और शहर में अमन हुआ। उन्होंने 'अतलियाह को तलवार से क़त्ल कर दिया।