< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 25 >

1 ಅಮಚ್ಯನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಹೋವದ್ದಾನ್, ಅವಳು ಯೆರೂಸಲೇಮಿನವಳು.
अमस्या राजा झाला तेव्हा पंचवीस वर्षांचा होता. नंतर त्याने यरूशलेमामध्ये एकोणतीस वर्षे राज्य केले. याच्या आईचे नाव यहोअदान, ती यरूशलेमची होती.
2 ಅವನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನೇ ಮಾಡಿದನು, ಆದರೆ ಪೂರ್ಣಹೃದಯದಿಂದಲ್ಲ.
त्याची वर्तणूक परमेश्वरास पटेल अशी होती पण त्यामध्ये मन: पूर्वकता नव्हती.
3 ಅವನು ರಾಜ್ಯವನ್ನು ಸ್ಥಿರಪಡಿಸಿಕೊಂಡ ತರುವಾಯ, ಅರಸನಾಗಿದ್ದ ತನ್ನ ತಂದೆಯನ್ನು ಕೊಂದ ಸೇವಕರಿಗೆ ಮರಣದಂಡನೆಯನ್ನು ವಿಧಿಸಿದನು.
अमस्या शक्तीशाली राजा झाला मग त्याने आपल्या वडलांच्या मारेकऱ्यांची हत्या केली.
4 ಆದರೆ, “ಮಕ್ಕಳು ಮಾಡಿದ ಪಾಪಕ್ಕೆ ತಂದೆಗಾಗಲಿ, ತಂದೆಯ ಪಾಪಕ್ಕಾಗಿ ಮಕ್ಕಳಿಗಾಗಲಿ ಮರಣಶಿಕ್ಷೆಯಾಗಬಾರದು. ಪ್ರತಿಯೊಬ್ಬನೂ ತನ್ನ ಪಾಪದ ನಿಮಿತ್ತವೇ ಮರಣಶಿಕ್ಷೆಯನ್ನು ಹೊಂದಬೇಕು,” ಎಂದು ಯೆಹೋವ ದೇವರು ಆಜ್ಞಾಪಿಸಿದ ಮೋಶೆಯ ನಿಯಮ ಗ್ರಂಥದಲ್ಲಿ ಬರೆದಿರುವ ಪ್ರಕಾರ, ಅಮಚ್ಯನು ಕೊಲೆಗಾರರ ಮಕ್ಕಳನ್ನು ಕೊಂದುಹಾಕಲಿಲ್ಲ.
पण त्यांच्या पुत्रांना त्याने ठार केले नाही कारण याबाबतीत मोशेच्या नियमशास्त्रातली आज्ञा त्याने पाळली. परमेश्वराची आज्ञा अशी आहे, “मुलांच्या अपराधासाठी मातापितांना आणि मातापित्यांच्या अपराधासाठी पुत्रांना मृत्युदंड देऊ नये. ज्याच्या हातून अपराध झाला त्या व्यक्तीलाच देहदंड व्हावा.”
5 ಇದಲ್ಲದೆ ಅಮಚ್ಯನು ಯೆಹೂದದವರನ್ನು ಕೂಡಿಸಿಕೊಂಡು, ಯೆಹೂದ ಬೆನ್ಯಾಮೀನ್ಯರೆಲ್ಲರಲ್ಲಿ ತಮ್ಮ ಪಿತೃಗಳ ಮನೆಗಳ ಪ್ರಕಾರ ಅವರನ್ನು ಸಾವಿರ ಜನರ ಮೇಲೆ ಅಧಿಪತಿಗಳಾಗಿಯೂ, ನೂರು ಜನರ ಮೇಲೆ ಅಧಿಪತಿಗಳಾಗಿಯೂ ಮಾಡಿದನು. ಅವನು ಇಪ್ಪತ್ತು ವರ್ಷ ಮೊದಲುಗೊಂಡು ಹೆಚ್ಚಿನ ಪ್ರಾಯವುಳ್ಳವರನ್ನು ಲೆಕ್ಕಿಸಿ ಆಯ್ದುಕೊಂಡನು. ಯುದ್ಧಕ್ಕೆ ಹೋಗತಕ್ಕಂಥ, ಈಟಿಯನ್ನೂ, ಖೇಡ್ಯವನ್ನೂ ಹಿಡಿದುಕೊಂಡಿರುವಂಥ, ಮೂರು ಲಕ್ಷ ಮಂದಿಯನ್ನು ಕೂಡಿಸಿದನು.
अमस्याने सर्व यहूदा लोकांस एकत्र केले आणि त्यांच्या घराण्यांवर सेनापती आणि सेनानायक यांच्या नेमणुका केल्या. समस्त यहूदा आणि बन्यामीन सैनिकांवर या प्रमुखांचा अंमल होता. युध्दात भाग घेण्यासाठी किमान वीस आणि त्यापुढील वयाचे सैनिक निवडले. भाले आणि ढालींनी सज्ज असे एकंदर तीन लाख सैनिक युध्दाला तयार होते.
6 ಇದಲ್ಲದೆ ಇಸ್ರಾಯೇಲಿನವರಿಗೆ 3,400 ಕಿಲೋಗ್ರಾಂ ಬೆಳ್ಳಿಯನ್ನು ಕೊಟ್ಟು, ಪರಾಕ್ರಮಶಾಲಿಗಳಾದ ಒಂದು ಲಕ್ಷ ಮಂದಿಯನ್ನು ಕೂಲಿಗೆ ತೆಗೆದುಕೊಂಡನು.
यांच्याखेरीज आणखी एक लाख सैन्याची कुमक अमस्याने इस्राएलकडून मागवली. त्यासाठी त्याने शंभर किक्कार चांदी एवढी किंमत मोजली.
7 ಆಗ ದೇವರ ಮನುಷ್ಯನೊಬ್ಬನು ಅವನ ಬಳಿಗೆ ಬಂದು ಅವನಿಗೆ, “ಅರಸನೇ, ಇಸ್ರಾಯೇಲಿನ ಸೈನ್ಯವು ನಿನ್ನ ಸಂಗಡ ಹೋಗದಿರಲಿ. ಏಕೆಂದರೆ ಯೆಹೋವ ದೇವರು ಇಸ್ರಾಯೇಲರಾದ ಎಫ್ರಾಯೀಮನ ಸಮಸ್ತ ಜನರ ಸಂಗಡ ಇರುವುದಿಲ್ಲ.
पण यावेळी देवाचा एक मनुष्य अमस्याकडे येऊन त्यास म्हणाला, “हे राजा, इस्राएलच्या सैन्याला आपल्याबरोबर घेऊ नकोस. एफ्राइमाच्या वंशजांना म्हणजेच इस्राएलच्या लोकांस परमेश्वराची साथ नाही.
8 ನೀವು ಹೋಗಿ ಯುದ್ಧದಲ್ಲಿ ಧೈರ್ಯದಿಂದ ಹೋರಾಡಿದರೂ ದೇವರು ಶತ್ರುವಿನ ಮುಂದೆ ನಿನ್ನನ್ನು ಸೋಲಿಸಿಬಿಡುವರು. ಏಕೆಂದರೆ ಸಹಾಯ ಕೊಡುವುದಕ್ಕೂ, ಬೀಳ ಮಾಡುವುದಕ್ಕೂ ದೇವರಿಗೆ ಶಕ್ತಿ ಉಂಟು,” ಎಂದನು.
तू भले कितीही तयारी करून लढाईत उतरलास तरी तुझा जय पराजय होणे देवाच्याच हातात आहे.”
9 ಆಗ ಅಮಚ್ಯನು ದೇವರ ಮನುಷ್ಯನಿಗೆ, “ಆದರೆ ಇಸ್ರಾಯೇಲಿನ ದಂಡಿಗೆ ನಾನು ಕೊಟ್ಟ 3,400 ಕಿಲೋಗ್ರಾಂ ಬೆಳ್ಳಿಯನ್ನು ಏನು ಮಾಡಬೇಕು?” ಎಂದನು. ಅದಕ್ಕೆ ದೇವರ ಮನುಷ್ಯನು, “ಯೆಹೋವ ದೇವರು ಇದಕ್ಕಿಂತ ಅಧಿಕವಾಗಿಯೇ ನಿನಗೆ ಕೊಡಲು ಶಕ್ತರು,” ಎಂದನು.
यावर अमस्या त्या देवाच्या मनुष्यास म्हणाला, “पण इस्राएली सैन्याला मी शंभर किक्कार चांदी देऊन बसलो आहे, त्याचे काय?” देवाचा मनुष्य म्हणाला, “परमेश्वराकडे अलोट संपत्ती आहे, तो तुला त्यापेक्षा कितीतरी जास्त देऊ शकेल.”
10 ಆಗ ಅಮಚ್ಯನು ಎಫ್ರಾಯೀಮಿನಿಂದ ತನ್ನ ಬಳಿಗೆ ಬಂದ ಸೈನಿಕರು ತಮ್ಮ ಸ್ಥಳಕ್ಕೆ ತಿರುಗಿ ಹೋಗುವಹಾಗೆ ಅವರನ್ನು ಕಳುಹಿಸಿಬಿಟ್ಟನು. ಆದಕಾರಣ ಅವರ ಕೋಪವು ಯೆಹೂದದ ಮೇಲೆ ಬಹಳವಾಗಿ ಉರಿಯಿತು. ಅವರು ಕೋಪಗೊಂಡವರಾಗಿ ತಮ್ಮ ಮನೆಗೆ ತಿರುಗಿದರು.
१०तेव्हा अमस्याने इस्राएलच्या सैन्याला एफ्राइमला परत पाठवले, या कृत्यामुळे इस्राएली सैन्य, यहूदाचा राजा आणि यहूदाचे लोक यांच्यावर संतापले आणि रागाने घरी परतले.
11 ಅಮಚ್ಯನು ತನ್ನನ್ನು ಬಲಪಡಿಸಿ ತನ್ನ ಜನರನ್ನು ನಡೆಸಿಕೊಂಡು ಉಪ್ಪಿನ ತಗ್ಗಿಗೆ ಹೋಗಿ, ಅಲ್ಲಿ ಸೇಯೀರಿನ ಮಕ್ಕಳೊಳಗೆ ಹತ್ತು ಸಾವಿರ ಮಂದಿಯನ್ನು ಹೊಡೆದನು.
११यानंतर अमस्याने मोठे धाडस करून अदोम देशातील मिठाच्या खोऱ्यावर हल्ला चढवला. अमस्याच्या सैन्याने याठिकाणी सेईर मधील दहा हजार लोकांस ठार केले.
12 ಬದುಕಿದ್ದ ಬೇರೆ ಹತ್ತು ಸಾವಿರ ಮಂದಿಯನ್ನು ಯೆಹೂದ್ಯರು ಸೆರೆಯಾಗಿ ಒಯ್ದು, ಬಂಡೆಯ ಶಿಖರಕ್ಕೆ ಅವರನ್ನು ಕರೆದುಕೊಂಡು ಹೋಗಿ, ಅಲ್ಲಿಂದ ಅವರನ್ನು ದಬ್ಬಿ ಸಾಯಿಸಿದರು.
१२यहूदी लोकांनी दहा हजार जणांना बंदिवान केले. त्यांना धरुन पर्वत माथ्यावर नेले आणि एवढ्या उंचीवरुन त्यांचा कडेलोट केला. खालच्या दगडधोंड्यांवर त्यांचे देह छिन्नविच्छिन्न होऊन पडले.
13 ತಮ್ಮ ಸಂಗಡ ಯುದ್ಧಕ್ಕೆ ಬಾರದ ಹಾಗೆ ಅಮಚ್ಯನು ಹಿಂದಕ್ಕೆ ಕಳುಹಿಸಿದ ಗುಂಪಿನವರು ಯೆಹೂದದ ಪಟ್ಟಣಗಳ ಮೇಲೆ ದಾಳಿಮಾಡಿ, ಸಮಾರ್ಯ ಮೊದಲುಗೊಂಡು ಬೇತ್ ಹೋರೋನಿನ ಮಟ್ಟಿಗೂ ಮೂರು ಸಾವಿರ ಮಂದಿಯನ್ನು ಕೊಂದು, ಬಹು ಕೊಳ್ಳೆಯನ್ನು ತೆಗೆದುಕೊಂಡು ಹೋದರು.
१३नेमक्या याचवेळी अमस्याने परत पाठवलेल्या इस्राएली सैन्याने यहूदातील काही नगरांवर हल्ला चढवला. त्यांनी बेथ-होरोनपासून सरळ शोमरोनपर्यंत गावे उद्ध्वस्त केली, तीन हजार लोकांस जिवे मारले आणि मौल्यवान चीजवस्तू लुटल्या. अमस्याने आपल्याला लढाईत सामील करून न घेतल्यामुळे हे इस्राएली सैन्य भडकले होते.
14 ಅಮಚ್ಯನು ಎದೋಮ್ಯರನ್ನು ಹೊಡೆದು ತಿರುಗಿ ಬಂದ ತರುವಾಯ, ಸೇಯೀರನ ಮಕ್ಕಳ ದೇವರುಗಳನ್ನು ತೆಗೆದುಕೊಂಡು ಬಂದು, ಅವು ತನಗೆ ದೇವರುಗಳಾಗಿರುವ ಹಾಗೆ ನಿಲ್ಲಿಸಿಕೊಂಡು, ಅವುಗಳ ಮುಂದೆ ಅಡ್ಡಬಿದ್ದು, ಅವುಗಳಿಗೆ ಧೂಪವನ್ನು ಸುಟ್ಟನು.
१४अदोम्यांचा पाडाव करून अमस्या आपल्या नगरात परतला. येताना त्याने सेईर येथील लोकांच्या देवाच्या मूर्ती बरोबर आणल्या आणि त्यांची पूजाअर्चा सुरू केली. या दैवतांना वंदन करून तो त्यांच्यापुढे धूप जाळू लागला.
15 ಆದಕಾರಣ ಯೆಹೋವ ದೇವರ ಕೋಪವು ಅಮಚ್ಯನ ಮೇಲೆ ಬಂತು. ದೇವರು ಅವನ ಬಳಿಗೆ ಪ್ರವಾದಿಯನ್ನು ಕಳುಹಿಸಿದರು. ಪ್ರವಾದಿಯು ಅರಸನಿಗೆ, “ನಿನ್ನ ಕೈಯಿಂದ ತಮ್ಮ ಜನರನ್ನು ತಪ್ಪಿಸಲಾರದೆ ಹೋದ ದೇವರುಗಳನ್ನು ನೀನು ವಿಚಾರಿಸುವುದೇನು?” ಎಂದನು.
१५या कृतीमुळे परमेश्वराचा अमस्यावर कोप झाला. परमेश्वराने संदेष्ट्याला अमस्याकडे पाठवले. संदेष्टा राजाला म्हणाला, “अमस्या, त्या लोकांच्या दैवतांची पूजा तू का करत आहेस? त्या दैवतांना तर स्वत: च्याच लोकांचे तुझ्यापासून रक्षण करता आले नाही.”
16 ಪ್ರವಾದಿಯು ಅರಸನ ಸಂಗಡ ಮಾತನಾಡುತ್ತಿರುವಾಗಲೇ ಅರಸನು ಅವನಿಗೆ, “ಅರಸನ ಆಲೋಚನಾ ಮಂತ್ರಿಯನ್ನಾಗಿ ನಿನ್ನನ್ನು ನೇಮಿಸಿದವರು ಯಾರು? ಸುಮ್ಮನಿರು! ನೀನು ಏಕೆ ಮರಣಹೊಂದಬೇಕೆಂದಿರುವೆ?” ಎಂದನು. ಆಗ ಪ್ರವಾದಿಯು, “ನೀನು ನನ್ನ ಯೋಚನೆಯನ್ನು ಕೇಳದೆ ಇದನ್ನು ಮಾಡಿದ್ದರಿಂದ, ದೇವರು ನಿನ್ನನ್ನು ನಾಶಮಾಡಲು ತೀರ್ಮಾನಿಸಿದ್ದಾರೆಂದು ನಾನು ಬಲ್ಲೆನು,” ಎಂದನು.
१६अमस्या संदेष्ट्याच्या या बोलण्यावर म्हणाला, “आम्ही तुला राजाचा सल्लागार म्हणून नेमलेले नाही, तेव्हा तू गप्प रहावे हे चांगले नाहीतर जिवाला मुकशील.” संदेष्टा गप्प बसला पण नंतर म्हणाला, “देवाने तुझा नाश करायचे निश्चित केले आहे. कारण तू करु नये त्या गोष्टी केल्यास आणि माझे ऐकले नाहीस.”
17 ಆಗ ಯೆಹೂದದ ಅರಸನಾದ ಅಮಚ್ಯನು ಆಲೋಚನೆ ಕೇಳಿ, ಯೇಹುವಿನ ಮೊಮ್ಮಗನೂ ಯೆಹೋವಾಹಾಜನ ಮಗನೂ ಇಸ್ರಾಯೇಲರ ಅರಸನಾದ ಯೋವಾಷನಿಗೆ, “ನಾವು ಒಬ್ಬರನ್ನೊಬ್ಬರು ಎದುರಿಸೋಣ ಬಾ,” ಎಂದು ದೂತರ ಮುಖಾಂತರ ಹೇಳಿ ಕಳುಹಿಸಿದನು.
१७यहूदाचा राजा अमस्या याने यावर आपल्या सल्लागारांबरोबर विचार विनिमय केला. मग योवाशाला त्याने निरोप पाठवला की, “आपली एकदा प्रत्यक्ष युध्दात गाठ पडली पाहिजे.” योवाश हा यहोआहाजाला पुत्र आणि यहोआहाज येहूचा, येहू इस्राएलचा राजा होता.
18 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೂದದ ಅರಸನಾಗಿರುವ ಅಮಚ್ಯನಿಗೆ, “ಲೆಬನೋನಿನಲ್ಲಿದ್ದ ಮುಳ್ಳುಗಿಡವು ಲೆಬನೋನಿನಲ್ಲಿರುವ ದೇವದಾರು ಮರಕ್ಕೆ, ‘ನನ್ನ ಮಗನಿಗೆ ಹೆಂಡತಿಯಾಗಿರಲು ನೀನು ನಿನ್ನ ಮಗಳನ್ನು ಕೊಡು,’ ಎಂದು ಹೇಳಿ ಕಳುಹಿಸಿತು. ಆದರೆ ಲೆಬನೋನಿನಲ್ಲಿದ್ದ ಅಡವಿಯ ಮೃಗವು ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿಯಿತು.
१८इस्राएलचा राजा योवाश याने यहूदाचा राजा अमस्या याच्याकडे आपले उत्तर पाठवले. योवाशाने दृष्टांत दिला तो असा: “लबानोन मधल्या एका काटेरी झुडुपाने लबानोनाच्या एका गंधसरूला निरोप पाठवला की, ‘तुझ्या कन्येचे माझ्या पुत्रांशी लग्न व्हावे.’ पण तेवढ्यात ते झुडुप तिथून जाणाऱ्या एका वन्यपशूच्या पायाखाली तुडवले गेले.
19 ನೀನು ಎದೋಮ್ಯರನ್ನು ಸೋಲಿಸಿ ಕೀರ್ತಿಯನ್ನು ಪಡೆದುಕೊಂಡೆನಲ್ಲಾ ಎಂದು ನಿನ್ನ ಹೃದಯವು ಗರ್ವಪಡದಿರಲಿ. ಈಗ ಮನೆಯಲ್ಲಿ ಸುಮ್ಮನೆ ಕೂತಿರು. ನೀನೂ, ನಿನ್ನ ಸಂಗಡ ಯೆಹೂದವೂ ಬಿದ್ದುಹೋಗುವಂತೆ ನಿನ್ನ ಕೇಡಿಗೆ ನೀನೇ ಕೈ ಹಾಕುವುದೇಕೆ?” ಎಂದನು.
१९मी अदोमचा पराभव केला. असे तू खुशाल म्हण. तू हे प्रौढीने म्हणतो आहेस खरे पण तू आपल्या घरी स्वस्थ बसावेस हे बरे. स्वत: ला उगीच अडचणीत पाडू नकोस! पण तू तसे केलेस तर तू स्वत: च्या आणि त्याबरोबर यहूदाच्या नाशाला कारणीभूत होशील.”
20 ಆದರೆ ಅಮಚ್ಯನು ಕೇಳದೆ ಹೋದನು. ಏಕೆಂದರೆ ಯೆಹೂದ್ಯರು ಎದೋಮ್ಯರ ದೇವರುಗಳನ್ನು ಹುಡುಕಿದ ನಿಮಿತ್ತ, ಅವರನ್ನು ಯೆಹೋವಾಷನ ಕೈಯಲ್ಲಿ ಒಪ್ಪಿಸುವಂತೆ ಇದು ದೇವರಿಂದ ಆಯಿತು.
२०पण अमस्याने या निरोपाला दाद दिली नाही. यहूदाच्या लोकांनी अदोमी लोकांच्या दैवताचे भजन पूजन सुरु केल्यामुळे इस्राएलकडून यहूदाचा पराभव करायचे परमेश्वराने योजले होते.
21 ಹಾಗೆಯೇ ಇಸ್ರಾಯೇಲಿನ ಅರಸನಾದ ಯೋವಾಷನು ಯುದ್ಧಕ್ಕೆ ಹೊರಟನು. ಅವನೂ, ಯೆಹೂದದ ಅರಸನಾದ ಅಮಚ್ಯನೂ ಯೆಹೂದಕ್ಕೆ ಸೇರಿದ ಬೇತ್ ಷೆಮೆಷ್ ಊರಿನ ಬಳಿಯಲ್ಲಿ ಒಬ್ಬರನ್ನೊಬ್ಬರು ಎದುರಿಸಿದರು.
२१तेव्हा इस्राएलचा राजा योवाश आणि यहूदाचा राजा अमस्या यांची बेथ-शेमेश नगरात समोरासमोर गाठ पडली. बेथ-शेमेश यहूदातच आहे.
22 ಯೆಹೂದದವರು ಇಸ್ರಾಯೇಲರ ಮುಂದೆ ಸೋತುಹೋದದ್ದರಿಂದ ಅವರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಓಡಿಹೋದರು.
२२इस्राएलने यहूदाचा पराभव केला. झाडून सर्व यहूद्यांनी या लढाईतून पळ काढला.
23 ಆಗ ಇಸ್ರಾಯೇಲಿನ ಅರಸನಾದ ಯೋವಾಷನು ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಬೇತ್ ಷೆಮೆಷ್ ಊರಿನ ಬಳಿಯಲ್ಲಿ ವಶಪಡಿಸಿಕೊಂಡನು. ಅನಂತರ ಅವನನ್ನು ಯೆರೂಸಲೇಮಿಗೆ ತೆಗೆದುಕೊಂಡು, ಎಫ್ರಾಯೀಮಿನ ಬಾಗಿಲು ಮೊದಲುಗೊಂಡು, ಮೂಲೆಯ ಬಾಗಿಲವರೆಗೂ, 180 ಮೀಟರ್ ಉದ್ದದ ಯೆರೂಸಲೇಮಿನ ಗೋಡೆಯನ್ನು ಕೆಡವಿಬಿಟ್ಟನು.
२३इस्राएलाचा राजा योवाशाने बेथ-शेमेश येथे यहूदाचा राजा अमस्याला पकडले आणि यरूशलेमेला नेले. अमस्याच्या पित्याचे नाव योवाश. योवाशाचे पिता यहोआहाज. योवाशाने एफ्राइम वेशीपासून कोपऱ्याच्या वेशीपर्यंतची यरूशलेमेच्या तटबंदीची चारशे हात लांबीची भिंत पार मोडून तोडून टाकली.
24 ಅವನು ಓಬೇದ್ ಏದೋಮನ ಬಳಿಯಲ್ಲಿ ಯೆಹೋವ ದೇವರ ಆಲಯದಲ್ಲಿ ಸಿಕ್ಕಿದ ಸಕಲ ಬೆಳ್ಳಿಬಂಗಾರವನ್ನೂ, ಎಲ್ಲಾ ಸಲಕರಣೆಗಳನ್ನೂ, ಅರಮನೆಯ ಬೊಕ್ಕಸಗಳನ್ನೂ ಬಂಧಿತರಾದವರನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಹಿಂದಿರುಗಿದನು.
२४सर्व सोने व रुपे तसेच मंदिरातील उपकरणे, भांडी देखील त्याने हस्तगत केली. देवाच्या मंदिरातील वस्तूंची देखभाल करण्याची जबाबदारी ओबेद-अदोमची होती. राजमहालातील वस्तूही योवाशाने लुटल्या. काहीजणांना बंदिवान केले. या सगळ्यासह तो शोमरोनला परतला.
25 ಇಸ್ರಾಯೇಲಿನ ಅರಸನಾದ ಯೆಹೋವಾಹಾಜನ ಮಗನಾದ ಯೆಹೋವಾಷನ ಮರಣದ ತರುವಾಯ, ಯೆಹೂದದ ಅರಸನಾದ ಯೋವಾಷನ ಮಗನಾಗಿರುವ ಅಮಚ್ಯನು ಹದಿನೈದು ವರ್ಷ ಬದುಕಿದನು.
२५यहोआहाजाचा पुत्र इस्राएलाचा राजा योवाश याच्या मृत्यूनंतर अमस्या पंधरा वर्षे जगला. अमस्याचे पिता म्हणजे यहूदाचा राजा योवाश.
26 ಅಮಚ್ಯನ ಆಳ್ವಿಕೆಯ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಯೆಹೂದ ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
२६यहूदा आणि इस्राएलमधील राजांचा इतिहास या पुस्तकात, अमस्याने बाकी जे जे केले त्याची संपूर्ण हकिकत आली आहे.
27 ಅಮಚ್ಯನು ಯೆಹೋವ ದೇವರ ಕಡೆಯಿಂದ ತೊಲಗಿಹೋದ ತರುವಾಯ, ಯೆರೂಸಲೇಮಿನವರು ಅವನ ವಿರೋಧವಾಗಿ ಒಳಸಂಚು ಮಾಡಿದ್ದರಿಂದ, ಅವನು ಲಾಕೀಷಿಗೆ ಓಡಿಹೋದನು. ಆದರೆ ಅವರು ಅವನ ಹಿಂದೆ ಲಾಕೀಷಿಗೆ ಜನರನ್ನು ಕಳುಹಿಸಿ, ಅಲ್ಲಿ ಅವನನ್ನು ಕೊಂದುಹಾಕಿದರು.
२७अमस्याने परमेश्वराचे आज्ञापालन करायचे थांबवल्यावर यरूशलेमेच्या लोकांनी त्याच्याविरुध्द कट केला. तेव्हा तो लाखीश येथे पळून गेला. पण लोकांनी त्याच्या मागावर माणसे पाठवून त्याचा तेथे वध केला.
28 ಅವರು ಅವನ ಶವವನ್ನು ಕುದುರೆಗಳ ಮೇಲೆ ತೆಗೆದುಕೊಂಡು ಬಂದು, ಯೆಹೂದದ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು.
२८अमस्याचा मृतदेह मग लोकांनी घोड्यावर लादला आणि यहूदाच्या नगरात आणून त्यास पूर्वंजाशेजारी पुरले.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 25 >