< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 26 >

1 ಆಗ ಯೆಹೂದ ಜನರೆಲ್ಲರು ಹದಿನಾರು ವರ್ಷದವನಾದ ಉಜ್ಜೀಯನನ್ನು ತೆಗೆದುಕೊಂಡು, ಅವನನ್ನು ಅವನ ತಂದೆ ಅಮಚ್ಯನಿಗೆ ಬದಲಾಗಿ ಅರಸನನ್ನಾಗಿ ಮಾಡಿದರು.
तब यहूदाह के सब लोगों ने 'उज़्ज़ियाह को जो सोलह साल का था, लेकर उसे उसके बाप अमसियाह की जगह बादशाह बनाया।
2 ಅರಸನು ತನ್ನ ಪಿತೃಗಳ ಜೊತೆ ಸೇರಿದ ತರುವಾಯ, ಉಜ್ಜೀಯನು ಏಲೋತ್ ಪಟ್ಟಣವನ್ನು ಕಟ್ಟಿಸಿ, ಅದನ್ನು ಯೆಹೂದಕ್ಕೆ ತಿರುಗಿ ಸೇರಿಸಿದನು.
उसने बादशाह के अपने बाप — दादा के साथ सो जाने के बाद ऐलोत को ता'मीर किया और उसे फिर यहूदाह में शामिल कर दिया।
3 ಉಜ್ಜೀಯನು ಅರಸನಾದಾಗ, ಹದಿನಾರು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಐವತ್ತೆರಡು ವರ್ಷ ಆಳಿದನು. ಅವನ ತಾಯಿಯ ಹೆಸರು ಯೆಕೊಲ್ಯಳು, ಅವಳು ಯೆರೂಸಲೇಮಿನವಳು.
'उज़्ज़ियाह सोलह साल का था जब वह हुकूमत करने लगा, और उसने येरूशलेम में बावन साल हुकूमत की। उसकी माँ का नाम यकूलियाह था, जो येरूशलेम की थी।
4 ಅವನು ತನ್ನ ತಂದೆಯಾದ ಅಮಚ್ಯನಂತೆ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
उसने वही जो ख़ुदावन्द की नज़र में दुरुस्त है, ठीक उसी के मुताबिक़ किया जो उसके बाप अमसियाह ने किया था।
5 ದೇವರ ದರ್ಶನಗಳಲ್ಲಿ ಗ್ರಹಿಕೆಯುಳ್ಳವನಾದ ಜೆಕರ್ಯನ ದಿವಸಗಳಲ್ಲಿ ಅವನು ದೇವರನ್ನು ಹುಡುಕಿದನು. ಯೆಹೋವ ದೇವರನ್ನು ಹುಡುಕುವ ದಿವಸಗಳ ಮಟ್ಟಿಗೂ, ದೇವರು ಅವನನ್ನು ಅಭಿವೃದ್ಧಿ ಪಡಿಸಿದರು.
और वह ज़करियाह के दिनों में जो ख़ुदा के ख़्वाबो में माहिर था, ख़ुदा का तालिब रहा और जब तक वह ख़ुदावन्द का तालिब रहा ख़ुदा ने उसे कामयाब रखा।
6 ಅವನು ಹೊರಟುಹೋಗಿ ಫಿಲಿಷ್ಟಿಯರ ಮೇಲೆ ಯುದ್ಧಮಾಡಿ, ಗತ್‌ನ ಗೋಡೆಯನ್ನೂ, ಯಬ್ನೆಯ ಗೋಡೆಯನ್ನೂ, ಅಷ್ಡೋದಿನ ಗೋಡೆಯನ್ನೂ ಕೆಡವಿಬಿಟ್ಟು, ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.
और वह निकला और फ़िलिस्तियों से लड़ा, और जात की दीवार को और यबना की दीवार को और अशदूद की दीवार को ढा दिया, और अशदूद के मुल्क में और फ़िलिस्तियों के बीच शहर ता'मीर किए।
7 ಇದಲ್ಲದೆ ಫಿಲಿಷ್ಟಿಯರ ಮೇಲೆಯೂ, ಗುರ್ಬಾಳಿನಲ್ಲಿ ವಾಸವಾಗಿದ್ದ ಅರಬಿಯರ ಮೇಲೆಯೂ, ಮೆಗೂನ್ಯರ ಮೇಲೆಯೂ ಅವನು ಯುದ್ಧಮಾಡಿದಾಗ, ದೇವರು ಅವನಿಗೆ ಸಹಾಯ ಮಾಡಿದರು.
और ख़ुदा ने फ़िलिस्तियों और जूरबाल के रहने वाले 'अरबों और मऊनियों के मुक़ाबिले में उसकी मदद की।
8 ಅಮ್ಮೋನ್ಯರು ಉಜ್ಜೀಯನಿಗೆ ಕಪ್ಪವನ್ನು ಕೊಟ್ಟರು. ಆದ್ದರಿಂದ ಅವನ ಹೆಸರು ಈಜಿಪ್ಟಿನ ಪ್ರದೇಶದವರೆಗೂ ಬಹಳವಾಗಿ ಹಬ್ಬಿತು. ಅವನು ಬಹಳವಾಗಿ ಬಲಪಡಿಸಿಕೊಂಡಿದ್ದನು.
और 'अम्मूनी 'उज़्ज़ियाह को नज़राने देने लगे और उसका नाम मिस्र की सरहद तक फैल गया, क्यूँकि वह बहुत ताक़तवर हो गया था।
9 ಉಜ್ಜೀಯನು ಯೆರೂಸಲೇಮಿನಲ್ಲಿ ಮೂಲೆ ಬಾಗಿಲ ಬಳಿಯಲ್ಲಿಯೂ, ತಗ್ಗಿನ ಬಾಗಿಲ ಬಳಿಯಲ್ಲಿಯೂ, ಕೋಟೆಯ ಮೂಲೆಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು.
और उज़्ज़ियाह ने येरूशलेम में कोने के फाटक और वादी के फाटक और दीवार के मोड़ पर बुर्ज बनवाए और उनको मज़बूत किया।
10 ತಗ್ಗಿನ ದೇಶದಲ್ಲಿಯೂ, ಬಯಲು ದೇಶದಲ್ಲಿಯೂ ಅವನಿಗೆ ಬಹು ಪಶುಗಳಿದ್ದವು. ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಹಾಗೆಯೇ ಪರ್ವತಗಳಲ್ಲಿಯೂ, ಕರ್ಮೆಲಿನಲ್ಲಿಯೂ ಅವನಿಗೆ ಒಕ್ಕಲಿಗರೂ, ದ್ರಾಕ್ಷಿ ವ್ಯವಸಾಯದವರೂ ಇದ್ದರು. ಏಕೆಂದರೆ ಅವನು ವ್ಯವಸಾಯದಲ್ಲಿ ಇಷ್ಟವುಳ್ಳವನಾಗಿದ್ದನು.
और उसने वीरान में बुर्ज बनवाए और बहुत से हौज़ खुदवाए, क्यूँकि नशेब की ज़मीन में भी और मैदान में उसके बहुत चौपाए थे। और पहाड़ों और ज़रखेज़ खेतों में उसके किसान और ताकिस्तानों के माली थे, क्यूँकि काश्त कारी उसे बहुत पसंद थी।
11 ಇದಲ್ಲದೆ ಲೇಖಕನಾದ ಯೆಹೀಯೇಲನ ಕೈಯಿಂದಲೂ, ಅಧಿಪತಿಯಾದ ಮಾಸೇಯನ ಕೈಯಿಂದ ಬರೆದಿರುವ ಲೆಕ್ಕದ ಪ್ರಕಾರ, ಗುಂಪುಗುಂಪಾಗಿ ಯುದ್ಧಕ್ಕೆ ಹೋಗುವ ಯುದ್ಧವೀರರ ಸೈನ್ಯವು ಉಜ್ಜೀಯನಿಗೆ ಇತ್ತು. ಆ ಸೈನ್ಯವು ಅರಸನ ಪ್ರಧಾನರಲ್ಲಿ ಒಬ್ಬನಾದ ಹನನ್ಯನ ಕೈಕೆಳಗೆ ಇತ್ತು.
इसके 'अलावा उज़्ज़ियाह के पास जंगी जवानों का लश्कर था जो य'ईएल मुन्शी और मासियाह नाज़िम के शुमार के मुताबिक़, ग़ोल ग़ोल होकर बादशाह के एक सरदार हनानियाह के मातहत लड़ाई पर जाता था।
12 ಪರಾಕ್ರಮಶಾಲಿಗಳಲ್ಲಿ ಕುಟುಂಬಗಳ ಮುಖ್ಯಸ್ಥರ ಲೆಕ್ಕವು 2,600 ಮಂದಿ.
और आबाई ख़ान्दानों के सरदारों या'नी ज़बरदस्त सूर्माओं का कुल शुमार दो हज़ार छ: सौ था।
13 ಅವರ ಕೈಕೆಳಗೆ ಅರಸನಿಗೆ ಸಹಾಯವಾಗಿ ಶತ್ರುವಿನ ಮೇಲೆ ಬಹಳ ಪರಾಕ್ರಮದಿಂದ ಯುದ್ಧಮಾಡುವ 3,07,500 ಮಂದಿಯುಳ್ಳ ಸೈನ್ಯವಿತ್ತು.
और उनके मातहत तीन लाख साढ़े सात हज़ार का ज़बरदस्त लश्कर था, जो दुश्मन के मुक़ाबिले में बादशाह की मदद करने को बड़े ज़ोर से लड़ता था।
14 ಉಜ್ಜೀಯನು ಸಮಸ್ತ ದಂಡಿನಲ್ಲಿ ಅವರ ನಿಮಿತ್ತ ಗುರಾಣಿಗಳನ್ನೂ, ಈಟಿಗಳನ್ನೂ, ಶಿರಸ್ತ್ರಾಣಗಳನ್ನೂ, ಉಕ್ಕಿನ ಕವಚಗಳನ್ನೂ, ಬಿಲ್ಲುಗಳನ್ನೂ, ಕವಣೆಗಳನ್ನೂ ಸಿದ್ಧಮಾಡಿದನು.
और उज़्ज़ियाह ने उनके लिए या'नी सारे लश्कर के लिए ढालें और बर्छे और ख़ूद और बकतर और कमानें और फ़लाख़न के लिए पत्थर तैयार किए
15 ಇದಲ್ಲದೆ ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನೂ ಎಸೆಯುವ ನಿಮಿತ್ತ ಬುರುಜುಗಳ ಮೇಲೆಯೂ, ಮಣ್ಣುದಿಬ್ಬಗಳ ಮೇಲೆಯೂ ಇರಲು, ಪ್ರವೀಣರಿಂದ ಮಾಡಿದ ಯಂತ್ರಗಳನ್ನೂ ಯೆರೂಸಲೇಮಿನಲ್ಲಿ ಮಾಡಿಸಿದನು. ಆದ್ದರಿಂದ ಅವನ ಹೆಸರು ಬಹಳ ದೂರದವರೆಗೆ ಪ್ರಸಿದ್ಧಿಯಾಯಿತು. ಬಹು ಬಲಿಷ್ಠನಾಗುವ ಪರ್ಯಂತರ ಅವನು ಬಹು ಆಶ್ಚರ್ಯಕರವಾಗಿ ಸಹಾಯ ಪಡೆಯುತ್ತಿದ್ದನು.
और उसने येरूशलेम में हुनरमंद लोगों की ईजाद की हुई कीलें बनवायीं ताकि वह तीर चलाने और बड़े बड़े पत्थर फेंकने के लिए बुर्जों और फ़सीलों पर हों। इसलिए उसका नाम दूर तक फ़ैल गया क्यूँकि उसकी मदद ऐसी 'अजीब तरह से हुई कि वह ताक़तवर हो गया
16 ಆದರೆ ಅವನು ಬಲ ಹೊಂದಿದ ಮೇಲೆ ಅವನ ಗರ್ವವು ನಾಶಕ್ಕೆ ನಡೆಸಿತು. ಅವನು ಧೂಪಪೀಠದ ಮೇಲೆ ಧೂಪಸುಡುವುದಕ್ಕೂ, ಯೆಹೋವ ದೇವರ ಆಲಯದಲ್ಲಿ ಪ್ರವೇಶಿಸಿ ತನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದನು.
लेकिन जब वह ताक़तवर हो गया, तो उसका दिल इस क़दर फूल गया कि वह ख़राब हो गया और ख़ुदावन्द अपने ख़ुदा की नाफ़रमानी करने लगा; चुनाँचे वह ख़ुदावन्द की हैकल में गया ताकि ख़ुशबू की क़ुर्बानगाह पर ख़ुशबू जलाए।
17 ಆಗ ಯಾಜಕನಾದ ಅಜರ್ಯನೂ, ಅವನ ಸಂಗಡ ಯೆಹೋವ ದೇವರ ಪರಾಕ್ರಮವುಳ್ಳ ಯಾಜಕರಾದ ಎಂಬತ್ತು ಮಂದಿಯೂ ಅರಸನಾದ ಉಜ್ಜೀಯನ ಹಿಂದೆ ಪ್ರವೇಶಿಸಿ,
तब 'अज़्ज़रियाह काहिन उसके पीछे पीछे गया और उसके साथ ख़ुदावन्द के अस्सी काहिन और थे जो बहादुर आदमी थे,
18 ಅವನನ್ನು ಎದುರಿಸಿ, “ಉಜ್ಜೀಯನೇ, ಯೆಹೋವ ದೇವರಿಗೆ ಧೂಪ ಸುಡುವುದು ಪ್ರತಿಷ್ಠಿತರಾದ ಯಾಜಕರಾದ ಆರೋನನ ಮಕ್ಕಳಿಗೆ ಸೇರಿದ್ದು. ನೀನು ಪರಿಶುದ್ಧ ಸ್ಥಳದಿಂದ ಹೊರಟು ಹೋಗು, ಅಪರಾಧ ಮಾಡಿದೆ. ದೇವರಾದ ಯೆಹೋವ ದೇವರಿಂದ ನಿನಗೆ ಗೌರವ ದೊರಕದು,” ಎಂದನು.
और उन्होंने 'उज़्ज़ियाह बादशाह का सामना किया और उससे कहने लगे, “ऐ 'उज़्ज़ियाह, ख़ुदावन्द के लिए ख़ुशबू जलाना तेरा काम नहीं, बल्कि काहिनों या'नी हारून के बेटों का काम है, जो ख़ुशबू जलाने के लिए पाक किए गए हैं। इसलिए मक़दिस से बाहर जा, क्यूँकि तू ने ख़ता की है, और ख़ुदावन्द ख़ुदा की तरफ़ से यह तेरी 'इज़्ज़त का ज़रिया' न होगा।”
19 ಆಗ ಉಜ್ಜೀಯನು ಕೋಪಿಸಿಕೊಂಡನು. ಧೂಪವನ್ನು ಸುಡಲು ಅವನ ಕೈಯಲ್ಲಿ ಧೂಪಾರತಿ ಇತ್ತು. ಆದರೆ ಅವನು ಯಾಜಕರ ಮೇಲೆ ಕೋಪ ಮಾಡುತ್ತಿರುವಾಗಲೇ, ಯೆಹೋವ ದೇವರ ಮಂದಿರದಲ್ಲಿರುವ ಧೂಪಪೀಠದ ಬಳಿಯಲ್ಲಿ ನಿಂತ ಯಾಜಕರ ಮುಂದೆ ಅವನ ಹಣೆಯಲ್ಲಿ ಕುಷ್ಠವು ಬಂದಿತು.
तब 'उज़्ज़ियाह गु़स्सा हुआ, और ख़ुशबू जलाने को बख़ूरदान अपने हाथ में लिए हुए था; और जब वह काहिनों पर झुंझला रहा था, तो काहिनों के सामने ही ख़ुदावन्द के घर के अन्दर ख़ुशबू की कु़र्बानगाह के पास उसकी पेशानी पर कोढ़ फूट निकला।
20 ಆಗ ಮುಖ್ಯಯಾಜಕನಾದ ಅಜರ್ಯನೂ, ಯಾಜಕರೆಲ್ಲರೂ ಅವನನ್ನು ದೃಷ್ಟಿಸಿ ನೋಡಿದಾಗ ಅವನ ಹಣೆಯಲ್ಲಿ ಕುಷ್ಠವು ಕಂಡುಬಂದದ್ದರಿಂದ ಅವರು ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಹಾಕಿದರು. ಯೆಹೋವ ದೇವರು ತನ್ನನ್ನು ಬಾಧಿಸಿದ್ದರಿಂದ ಅವನು ಸ್ವತಃ ಹೊರಗೆ ಹೋಗಲು ತ್ವರೆಪಟ್ಟನು.
और सरदार काहिन 'अज़रियाह और सब काहिनों ने उस पर नज़र की और क्या देखा कि उसकी पेशानी पर कोढ़ निकला है। इसलिए उन्होंने उसे जल्द वहाँ से निकाला, बल्कि उसने खु़द भी बाहर जाने में जल्दी की क्यूँकि ख़ुदावन्द की मार उस पर पड़ी थी।
21 ಅರಸನಾದ ಉಜ್ಜೀಯನು ಮರಣದ ದಿವಸದವರೆಗೂ ಕುಷ್ಠರೋಗಿಯಾಗಿದ್ದು ಯೆಹೋವ ದೇವರ ಆಲಯದಿಂದ ಬಹಿಷ್ಕೃತನಾದನು. ಅವನು ಕುಷ್ಠರೋಗದ ನಿಮಿತ್ತ ಪ್ರತ್ಯೇಕವಾದ ಮನೆಯಲ್ಲಿ ವಾಸವಾಗಿದ್ದನು. ಅವನ ಮಗ ಯೋತಾಮನು ರಾಜಗೃಹಾಧಿಪತ್ಯವನ್ನು ಮತ್ತು ಪ್ರಜಾಪಾಲನೆಯನ್ನೂ ನೋಡಿಕೊಳ್ಳುತ್ತಿದ್ದನು.
चुनाँचे 'उज़्ज़ियाह बादशाह अपने मरने के दिन तक कोढ़ी रहा, और कोढ़ी होने की वजह से एक अलग घर में रहता था; क्यूँकि वह ख़ुदावन्द के घर से काट डाला गया था। और उसका बेटा यूताम बादशाह के घर का मुख़्तार था और मुल्क के लोगों का इन्साफ़ करता था।
22 ಉಜ್ಜೀಯನ ಇತರ ಕ್ರಿಯೆಗಳನ್ನು, ಮೊದಲನೆಯದಿಂದ ಕಡೆಯವರೆಗೆ ಆಮೋಚನ ಮಗನಾದ ಯೆಶಾಯನೆಂಬ ಪ್ರವಾದಿಯು ಬರೆದನು.
और 'उज़्ज़ियाह के बाक़ी काम शुरू' से आख़िर तक आमूस के बेटे यसायाह नबी ने लिखे।
23 ಉಜ್ಜೀಯನು ಮೃತನಾಗಿ ತನ್ನ ಪಿತೃಗಳ ಬಳಿಗೆ ಸೇರಿದನು. ಅವನು ಕುಷ್ಠರೋಗಿಯಾಗಿದ್ದರಿಂದ, ಅವರು ಅವನ ಶವವನ್ನು ರಾಜಕುಟುಂಬದ ಸ್ಮಶಾನ ಭೂಮಿಯ ಹತ್ತಿರದ ಹೊಲದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಯೋತಾಮನು ಅರಸನಾದನು.
इसलिए 'उज़्ज़ियाह अपने बाप — दादा के साथ सो गया; और उन्होंने क़ब्रिस्तान के मैदान में जो बादशाहों का था, उसके बाप — दादा के साथ उसे दफ़न किया क्यूँकि वह कहने लगे, “वह कोढ़ी है।” और उसका बेटा यूताम उसकी जगह बादशाह हुआ।

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 26 >