< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 28 >
1 ಆಹಾಜನು ಆಳಲು ಆರಂಭಿಸಿದಾಗ ಇಪ್ಪತ್ತು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಹದಿನಾರು ವರ್ಷ ಆಳಿದನು. ಆದರೆ ಅವನು ತನ್ನ ತಂದೆಯಾದ ದಾವೀದನ ಹಾಗೆ ನಡೆಯದೆ, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಲಿಲ್ಲ.
आख़ज़ बीस साल का था जब वह हुकूमत करने लगा, और उसने सोलह साल येरूशलेम में हुकूमत की। और उसने वह न किया जो ख़ुदावन्द की नज़र में दुरुस्त है जैसा उसके बाप दाऊद ने किया था
2 ಆಹಾಜನು ಇಸ್ರಾಯೇಲಿನ ಅರಸರ ಮಾರ್ಗದಲ್ಲಿ ನಡೆದು, ಆರಾಧಿಸುವುದಕ್ಕಾಗಿ ಬಾಳನ ಎರಕ ಹೊಯ್ದ ವಿಗ್ರಹಗಳನ್ನು ಮಾಡಿಸಿದನು.
बल्कि इस्राईल के बादशाहों के रास्तों पर चला, और बा'लीम की ढाली हुई मूरतें भी बनवाई।
3 ಇದಲ್ಲದೆ ಆಹಾಜನು ಬೆನ್ ಹಿನ್ನೋಮ್ ತಗ್ಗಿನಲ್ಲಿ ಧೂಪವನ್ನರ್ಪಿಸಿ, ಯೆಹೋವ ದೇವರು ಇಸ್ರಾಯೇಲರ ಎದುರಿನಿಂದ ಓಡಿಸಿಬಿಟ್ಟ ಇತರ ಜನಾಂಗಗಳ ಅಸಹ್ಯಕರವಾದ ಆಚಾರಗಳನ್ನು ಅನುಸರಿಸಿ ಅವನು ತನ್ನ ಮಗನನ್ನೇ ಬೆಂಕಿಯಲ್ಲಿ ಯಜ್ಞವಾಗಿ ಅರ್ಪಿಸಿದನು.
इसके 'अलावा उसने हिनूम के बेटे की वादी में ख़ुशबू जलाया, और उन क़ौमों के नफ़रती दस्तूरों के मुताबिक़ जिनको ख़ुदावन्द ने बनी — इस्राईल के सामने से ख़ारिज किया था, अपने ही बेटों को आग में झोंका।
4 ಇದಲ್ಲದೆ ಅವನು ಪೂಜಾಸ್ಥಳಗಳ ಮೇಲೆಯೂ ಬೆಟ್ಟಗಳ ಮೇಲೆಯೂ ಎಲ್ಲಾ ಹಸಿರಾದ ಮರಗಳ ಕೆಳಗೂ ಬಲಿಗಳನ್ನೂ ಧೂಪವನ್ನೂ ಅರ್ಪಿಸಿದನು.
उसने ऊँचे मक़ामों और पहाड़ों पर, और हर एक हरे दरख़्त के नीचे क़ुर्बानियाँ कीं और ख़ुशबू जलायी।
5 ಆದ್ದರಿಂದ ಆಹಾಜನ ದೇವರಾದ ಯೆಹೋವ ದೇವರು ಅರಾಮಿನ ಅರಸನ ಕೈಯಲ್ಲಿ ಅವನನ್ನು ಒಪ್ಪಿಸಿದರು. ಅರಾಮ್ಯರು ಅವನನ್ನು ಹೊಡೆದು, ಅವರಲ್ಲಿ ಅನೇಕರನ್ನು ಸೆರೆಹಿಡಿದು, ದಮಸ್ಕಕ್ಕೆ ತೆಗೆದುಕೊಂಡು ಹೋದರು. ಇದಲ್ಲದೆ ಆಹಾಜನು ಇಸ್ರಾಯೇಲಿನ ಅರಸನ ಕೈವಶವಾಗಿ, ಅವನಿಂದಲೂ ಕಠಿಣವಾಗಿ ಸೋತು ಹೋದನು.
इसलिए ख़ुदावन्द उसके ख़ुदा ने उसको शाह — ए — अराम के हाथ में कर दिया, इसलिए उन्होंने उसे मारा और उसके लोगों में से ग़ुलामों की भीड़ की भीड़ ले गए, और उनको दमिश्क़ में लाए; और वह शाह — ए — इस्राईल के हाथ में भी कर दिया गया, जिसने उसे मारा और बड़ी ख़ूनरेज़ी की।
6 ಯೆಹೂದ್ಯರು ತಮ್ಮ ಪಿತೃಗಳ ದೇವರಾದ ಯೆಹೋವ ದೇವರನ್ನು ಬಿಟ್ಟುಬಿಟ್ಟದ್ದರಿಂದ, ರೆಮಲ್ಯನ ಮಗ ಪೆಕಹನು ಒಂದೇ ದಿವಸದೊಳಗೆ ಅವರಲ್ಲಿ ಲಕ್ಷದ ಇಪ್ಪತ್ತು ಸಾವಿರ ಮಂದಿಯನ್ನು ಕೊಂದುಹಾಕಿದನು. ಇವರೆಲ್ಲರು ಪರಾಕ್ರಮಶಾಲಿಗಳಾಗಿದ್ದರು.
और फ़िक़ह बिन रमलियाह ने एक ही दिन में यहूदाह में से एक लाख बीस हज़ार को, जो सब के सब सूर्मा थे क़त्ल किया, क्यूँकि उन्होंने ख़ुदावन्द अपने बाप — दादा के ख़ुदा को छोड़ दिया था।
7 ಇದಲ್ಲದೆ ಎಫ್ರಾಯೀಮ್ಯನಾಗಿರುವ ಪರಾಕ್ರಮಶಾಲಿಯಾದ ಜಿಕ್ರಿಯು ಅರಸನ ಮಗ ಮಾಸೇಯನನ್ನೂ, ಅರಮನೆಯ ನಾಯಕನಾದ ಅಜ್ರೀಕಾಮನನ್ನೂ, ಅರಸನಿಗೆ ಎರಡನೆಯವನಾದ ಎಲ್ಕಾನನನ್ನೂ ಕೊಂದುಹಾಕಿದನು.
और ज़िकरी ने जो इफ़्राईम का एक पहलवान था, मासियाह शाहज़ादे को और महल के नाज़िम 'अज़रिक़ाम को और बादशाह के वज़ीर इल्क़ाना को मार डाला।
8 ಇಸ್ರಾಯೇಲರು ತಮ್ಮ ಸಹೋದರರಲ್ಲಿ ಎರಡು ಲಕ್ಷಮಂದಿ ಸ್ತ್ರೀಯರನ್ನೂ, ಪುತ್ರಪುತ್ರಿಯರನ್ನೂ ಸೆರೆಯಾಗಿ ತೆಗೆದುಕೊಂಡು ಹೋದರು. ಅವರಿಂದ ಬಹು ಕೊಳ್ಳೆಯನ್ನೂ ತೆಗೆದುಕೊಂಡು ಸಮಾರ್ಯಕ್ಕೆ ಬಂದರು.
और बनी — इस्राईल अपने भाइयों में से दो लाख 'औरतों और बेटे — बेटियों को ग़ुलाम करके ले गए, और उनका बहुत सा माल लूट लिया और लूट को सामरिया में लाए।
9 ಯೆಹೋವ ದೇವರ ಪ್ರವಾದಿ ಒಬ್ಬನು ಅಲ್ಲಿ ಇದ್ದನು. ಅವನ ಹೆಸರು ಓದೇದನು. ಅವನು ಸಮಾರ್ಯಕ್ಕೆ ಬಂದ ಸೈನ್ಯಕ್ಕೆದುರಾಗಿ ಹೊರಟುಹೋಗಿ ಅವರಿಗೆ, “ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರು ಯೆಹೂದದ ಮೇಲೆ ಕೋಪಗೊಂಡದ್ದರಿಂದ, ದೇವರು ಅವರನ್ನು ನಿಮ್ಮ ಕೈಯಲ್ಲಿ ಒಪ್ಪಿಸಿದ್ದಾರೆ. ನೀವು ಆಕಾಶಕ್ಕೆ ಮುಟ್ಟುವ ಉಗ್ರತೆಯಿಂದ ಅವರನ್ನು ಕೊಂದುಹಾಕಿದ್ದೀರಿ.
लेकिन वहाँ ख़ुदावन्द का एक नबी था जिसका नाम 'ओदिद था, वह उस लश्कर के इस्तक़बाल को गया जो सामरिया को आ रहा था और उनसे कहने लगा, “देखो, इसलिए कि ख़ुदावन्द तुम्हारे बाप — दादा का ख़ुदा यहूदाह से नाराज़ था, उसने उनको तुम्हारे हाथ में कर दिया और तुम ने उनको ऐसे तैश में क़त्ल किया है जो आसमान तक पहुँचा।
10 ಈಗ ನಿಮಗೆ ದಾಸರೂ, ದಾಸಿಯರೂ ಆಗಿರುವ ಹಾಗೆ ಯೆಹೂದದ ಮತ್ತು ಯೆರೂಸಲೇಮಿನ ಮಕ್ಕಳನ್ನು ನಿಮ್ಮ ವಶಮಾಡಬೇಕೆಂದು ಇದ್ದೀರಿ. ಆದರೆ ನಿಮ್ಮಲ್ಲಿಯೇ ನಿಮ್ಮ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ಅಪರಾಧಗಳು ಇಲ್ಲವೋ?
और अब तुम्हारा 'इरादा है कि बनी यहूदाह और येरूशलेम को अपने ग़ुलाम और लौंडियाँ बना कर उनको दबाए रखो। लेकिन क्या तुम्हारे ही गुनाह जो तुमने ख़ुदा वन्द अपने ख़ुदा के ख़िलाफ़ किए हैं, तुम्हारे सिर नहीं हैं?
11 ಆದ್ದರಿಂದ ನೀವು ನನ್ನ ಮಾತು ಕೇಳಿ ನಿಮ್ಮ ನಿಮ್ಮ ಸಹೋದರರಲ್ಲಿ ನೀವು ಸೆರೆಯಾಗಿ ತೆಗೆದುಕೊಂಡ ಸೆರೆಯವರನ್ನು ಬಿಟ್ಟುಬಿಡಿರಿ. ಏಕೆಂದರೆ ಯೆಹೋವ ದೇವರ ಕೋಪಾಗ್ನಿಯು ನಿಮ್ಮ ಮೇಲೆ ಇರುವುದು,” ಎಂದನು.
इसलिए तुम अब मेरी सुनो और उन ग़ुलामों को, जिनको तुम ने अपने भाइयों में से ग़ुलाम कर लिया है, आज़ाद करके लौटा दो क्यूँकि ख़ुदावन्द का क़हर — ए — शदीद तुम पर है।”
12 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದ ಯೆಹೋಹಾನಾನನ ಮಗ ಅಜರ್ಯನೂ, ಮೆಷಿಲ್ಲೇಮೋತನ ಮಗ ಬೆರೆಕ್ಯನೂ, ಶಲ್ಲೂಮನ ಮಗ ಹಿಜ್ಕೀಯನೂ, ಹದ್ಲೈಯನ ಮಗ ಅಮಾಸನೂ ಯುದ್ಧದಿಂದ ಬಂದವರಿಗೆ ವಿರೋಧವಾಗಿ ಎದ್ದು
तब बनी इफ़्राईम के सरदारों में से 'अज़रियाह बिन यूहनान और बरकियाह बिन मसल्लीमोत और यहज़क़ियाह बिन सलूम और 'अमासा बिन ख़दली, उनके सामने जो जंग से आ रहे थे खड़े हो गए
13 ಅವರಿಗೆ, “ನೀವು ಸೆರೆಯವರನ್ನು ಇಲ್ಲಿಗೆ ತರಬೇಡಿರಿ. ಏಕೆಂದರೆ ನಾವು ಯೆಹೋವ ದೇವರಿಗೆ ವಿರೋಧವಾಗಿ ಅಪರಾಧ ಮಾಡಿದ್ದೇವೆ. ನೀವು ನಮ್ಮ ಪಾಪಗಳನ್ನೂ, ನಮ್ಮ ಅಪರಾಧಗಳನ್ನೂ ಹೆಚ್ಚಿಸಬೇಕೆಂದಿದ್ದೀರಿ. ನಿಶ್ಚಯವಾಗಿ ನಮ್ಮ ಅಪರಾಧವು ದೊಡ್ಡದಾಗಿದೆ. ಇಸ್ರಾಯೇಲಿನ ಮೇಲೆ ಯೆಹೋವ ದೇವರ ಉಗ್ರಕೋಪವು ಉಂಟಾಯಿತು,” ಎಂದರು.
और उनसे कहा कि “तुम ग़ुलामों को यहाँ नहीं लाने पाओगे, क्यूँकि जो तुम ने ठाना है उससे हम ख़ुदावन्द के गुनाहगार बनेंगे और हमारे गुनाह और खताएं बढ़ जायेंगी क्यूँकि हमारी ख़ता बड़ी है और इस्राईल पर क़हर — ए — शदीद है।
14 ಆಗ ಸೈನ್ಯದವರು ಸೆರೆಯವರನ್ನೂ, ಕೊಳ್ಳೆಯನ್ನೂ ಪ್ರಧಾನರ ಮುಂದೆಯೂ, ಸಮಸ್ತ ಕೂಟದ ಮುಂದೆಯೂ ಬಿಟ್ಟುಬಿಟ್ಟರು.
इसलिए उन हथियारबन्द लोगों ने गु़लामों और माल — ए — ग़नीमत को, अमीरों और सारी जमा'अत के आगे छोड़ दिया।
15 ಆಗ ಎಫ್ರಾಯೀಮ್ಯರಲ್ಲಿ ಮುಖಂಡರಾಗಿದ್ದವರು ಎದ್ದು ಸೆರೆಯವರನ್ನು ತೆಗೆದುಕೊಂಡು, ಅವರಲ್ಲಿ ಬೆತ್ತಲೆಯಾದವರಿಗೆ ಕೊಳ್ಳೆಯ ವಸ್ತ್ರಗಳನ್ನು ಉಡಿಸಿ ತೊಡಿಸಿ, ಅವರಿಗೆ ಕೆರಗಳನ್ನು ಕೊಟ್ಟು ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕೊಟ್ಟು, ಅವರ ತಲೆಗಳಿಗೆ ಎಣ್ಣೆಯನ್ನು ಹಚ್ಚಿ, ಅವರಲ್ಲಿ ಇರುವ ಬಲಹೀನರನ್ನು ಕತ್ತೆಗಳ ಮೇಲೆ ಏರಿಸಿ, ಯೆರಿಕೋವೆಂಬ ಖರ್ಜೂರದ ಪಟ್ಟಣಕ್ಕೆ ಅವರ ಸಹೋದರರ ಬಳಿಗೆ ತೆಗೆದುಕೊಂಡು ಬಂದರು. ಆಗ ಅವರು ಸಮಾರ್ಯಕ್ಕೆ ಹಿಂದಿರುಗಿದರು.
और वह आदमी जिनके नाम मज़कूर हुए, उठे और ग़ुलामों को लिया और लूट के माल में से उन सभों को जो उनमें नंगे थे, लिबास से आरास्ता किया और उनको जूते पहनाए और उनको खाने — पीने को दिया और उन पर तेल मला, और जितने उनमें कमज़ोर थे उनको गधों पर चढ़ा कर खजूर के दरख़्तों के शहर यरीहू में उनके भाइयों के पास पहुँचा दिया। तब सामरिया को लौट गए।
16 ಅದೇ ಕಾಲದಲ್ಲಿ ಅರಸನಾದ ಆಹಾಜನು ಅಸ್ಸೀರಿಯದ ಅರಸರ ಬಳಿಗೆ ಕಳುಹಿಸಿ ಸಹಾಯ ಬೇಡಿಕೊಂಡನು.
उस वक़्त आख़ज़ बादशाह ने असूर के बादशाहों के पास कहला भेजा के उसकी मदद करें।
17 ಏಕೆಂದರೆ ಎದೋಮ್ಯರು ತಿರುಗಿಬಂದು ಯೆಹೂದದವರನ್ನು ಸಂಹರಿಸಿ, ಕೆಲವರನ್ನು ಸೆರೆಯಾಗಿ ತೆಗೆದುಕೊಂಡು ಹೋದರು.
इसलिए कि अदोमियों ने फिर चढ़ाई करके यहूदाह को मार लिया और ग़ुलामों को ले गए थे।
18 ಇದಲ್ಲದೆ ಫಿಲಿಷ್ಟಿಯರು ತಗ್ಗಿನ ದೇಶದ ಪಟ್ಟಣಗಳಲ್ಲಿಯೂ, ಯೆಹೂದದ ದಕ್ಷಿಣ ಪ್ರಾಂತದಲ್ಲಿಯೂ ನುಗ್ಗಿ, ಬೇತ್ ಷೆಮೆಷ್, ಅಯ್ಯಾಲೋನ್, ಗೆದೇರೋತ್, ಸೋಕೋ ಅದರ ಗ್ರಾಮಗಳನ್ನೂ, ತಿಮ್ನಾ ಅದರ ಗ್ರಾಮಗಳನ್ನೂ, ಗಿಮ್ಜೋ ಅದರ ಗ್ರಾಮಗಳನ್ನೂ ತೆಗೆದುಕೊಂಡು ಅಲ್ಲಿ ವಾಸವಾಗಿದ್ದರು.
और फ़िलिस्तियों ने भी नशेब की ज़मीन के और यहूदाह के जुनूब के शहरों पर हमला करके बैतशम्स और अय्यालोन और जदीरोत को, और शोको और उसके देहात को, और तिमना और उसके देहात को, और जिमसू और उसके देहात को भी ले लिया था और उनमें बस गए थे।
19 ಇಸ್ರಾಯೇಲಿನ ಅರಸನಾದ ಆಹಾಜನ ನಿಮಿತ್ತ ಯೆಹೋವ ದೇವರು ಯೆಹೂದ್ಯ ಪ್ರಾಂತ್ಯವನ್ನು ತಗ್ಗಿಸಿದರು. ಏಕೆಂದರೆ ಅವನು ಯೆಹೂದ್ಯರನ್ನು ಅಧರ್ಮಕ್ಕೆ ಪ್ರಚೋದಿಸಿ, ಯೆಹೋವ ದೇವರಿಗೆ ಮಹಾ ದ್ರೋಹ ಮಾಡಿದನು. ಯೆಹೋವ ದೇವರಿಗೆ ಅತ್ಯಂತ ಅಪನಂಬಿಗಸ್ತನಾಗಿದ್ದನು.
क्यूँकि ख़ुदावन्द ने शाह — ए — इस्राईल आख़ज़ की वजह से यहूदाह को पस्त किया, इसलिए कि उसने यहूदाह में बेहयाई की चाल चलकर ख़ुदावन्द का बड़ा गुनाह किया था;
20 ಆಗ ಅಸ್ಸೀರಿಯದ ಅರಸ ತಿಗ್ಲತ್ಪಿಲೆಸರನು ಅವನ ಬಳಿಗೆ ಬಂದು, ಅವನಿಗೆ ನೆರವಾಗುವುದಕ್ಕೆ ಬದಲಾಗಿ ಬಾಧೆಪಡಿಸಿದನು.
और शाह — ए — असूर तिलगातपिलनासर उसके पास आया, लेकिन उसने उसको तंग किया और उसकी मदद न की।
21 ಆಹಾಜನು ಯೆಹೋವ ದೇವರ ಆಲಯದಿಂದಲೂ, ಅರಮನೆಯಿಂದಲೂ, ಪ್ರಧಾನರಿಂದಲೂ ಆಸ್ತಿಯ ಒಂದು ಪಾಲನ್ನು ತೆಗೆದುಕೊಂಡು, ಅಸ್ಸೀರಿಯದ ಅರಸನಿಗೆ ಕಾಣಿಕೆಯಾಗಿ ಕೊಟ್ಟನು, ಆದರೂ ಅವನು ಆಹಾಜನಿಗೆ ಸಹಾಯ ಮಾಡಲಿಲ್ಲ.
क्यूँकि आख़ज़ ने ख़ुदावन्द के घर और बादशाह और सरदारों के महलों से माल लेकर शाह — ए — असूर को दिया, तो भी उसकी कुछ मदद न हुई।
22 ಇದಲ್ಲದೆ ಈ ಅರಸನಾದ ಆಹಾಜನು ತನ್ನ ಇಕ್ಕಟ್ಟಿನ ಕಾಲದಲ್ಲಿ ಇನ್ನೂ ಅಧಿಕವಾಗಿ ಯೆಹೋವ ದೇವರಿಗೆ ಅಪನಂಬಿಗಸ್ತನಾದನು.
अपनी तंगी के वक़्त में भी उसने, या'नी इसी आख़ज़ बादशाह ने ख़ुदावन्द का और भी ज़्यादा गुनाह किया;
23 ಕೊನೆಗೆ ಆಹಾಜನು, “ಅರಾಮಿನ ಅರಸರ ದೇವರುಗಳು ಅವರಿಗೆ ಸಹಾಯ ಕೊಟ್ಟದ್ದರಿಂದ, ಅವು ನನಗೆ ಸಹ ಸಹಾಯ ಕೊಡುವ ಹಾಗೆ ನಾನು ಅವುಗಳಿಗೆ ಬಲಿಯನ್ನು ಅರ್ಪಿಸುತ್ತೇನೆ,” ಎಂದುಕೊಂಡು ತನ್ನನ್ನು ಸೋಲಿಸಿದ ದಮಸ್ಕದವರ ದೇವರುಗಳಿಗೆ ಬಲಿಗಳನ್ನು ಅರ್ಪಿಸಿದನು. ಆದರೆ ಆ ದೇವರುಗಳು ಅವನನ್ನೂ, ಸಮಸ್ತ ಇಸ್ರಾಯೇಲರನ್ನೂ ಬೀಳುವಂತೆ ಮಾಡಿದವು.
क्यूँकि उसने दमिश्क़ के मा'बूदों के लिए जिन्होंने उसे मारा था, क़ुर्बानियाँ कीं और कहा, चूँकि अराम के बादशाहों के मा'बूदों ने उनकी मदद की है, इसलिए मैं उनके लिए क़ुर्बानी करूंगा ताकि वह मेरी मदद करें।” लेकिन वह उसकी और सारे इस्राईल की तबाही की वजह हुए।
24 ಇದಲ್ಲದೆ ಆಹಾಜನು ದೇವರ ಮನೆಯ ಸಲಕರಣೆಗಳನ್ನು ಕೂಡಿಸಿ, ದೇವರ ಆಲಯದ ಸಾಮಗ್ರಿಗಳನ್ನು ಚೂರುಚೂರು ಮಾಡಿ ಕತ್ತರಿಸಿ, ಯೆಹೋವ ದೇವರ ಮನೆಯ ಬಾಗಿಲುಗಳನ್ನು ಮುಚ್ಚಿಬಿಟ್ಟು, ಯೆರೂಸಲೇಮಿನ ಸಮಸ್ತ ಮೂಲೆಗಳಲ್ಲಿ ಬಲಿಪೀಠಗಳನ್ನು ಕಟ್ಟಿಸಿದನು.
और आख़ज़ ने ख़ुदा के घर के बर्तनों को जमा' किया और ख़ुदा के घर के बर्तनों को टुकड़े टुकड़े किया और ख़ुदावन्द के घर के दरवाज़ों को बन्द किया और अपने लिए येरूशलेम के हर कोने में मज़बहे बनाए।
25 ಯೆಹೂದದ ಸಮಸ್ತ ಪಟ್ಟಣಗಳಲ್ಲಿ ಅನ್ಯ ದೇವರುಗಳಿಗೆ ಧೂಪ ಸುಡುವುದಕ್ಕೆ ಎತ್ತರ ಸ್ಥಳಗಳನ್ನು ಕಟ್ಟಿಸಿ, ತನ್ನ ಪಿತೃಗಳ ದೇವರಾದ ಯೆಹೋವ ದೇವರಿಗೆ ಕೋಪವನ್ನೆಬ್ಬಿಸಿದನು.
और यहूदाह के एक एक शहर में ग़ैर — मा'बूदों के आगे ख़ुशबू जलाने के लिए ऊँचे मक़ाम बनाए, और ख़ुदावन्द अपने बाप — दादा के ख़ुदा को गु़स्सा दिलाया।
26 ಅವನ ಆಳ್ವಿಕೆಯಲ್ಲಿಯ ಇತರ ಕ್ರಿಯೆಗಳೂ, ಅವನ ಸಕಲ ಮಾರ್ಗಗಳೂ, ಮೊದಲನೆಯವುಗಳೂ, ಕಡೆಯವುಗಳೂ ಯೆಹೂದದ ಮತ್ತು ಇಸ್ರಾಯೇಲರ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
और उसके बाक़ी काम और उसके सब तौर तरीके़ शुरू' से आख़िर तक यहूदाह और इस्राईल के बादशाहों की किताब में लिखा हैं।
27 ಆಹಾಜನು ಮೃತನಾಗಿ ತನ್ನ ಪಿತೃಗಳ ಬಳಿಯಲ್ಲಿ ಸೇರಿದನು. ಆದರೆ ಅವನನ್ನು ಇಸ್ರಾಯೇಲಿನ ಅರಸರ ಸಮಾಧಿಯ ಸ್ಥಳದಲ್ಲಿ ಹೂಣಿಡದೆ ಯೆರೂಸಲೇಮ್ ಪಟ್ಟಣದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗ ಹಿಜ್ಕೀಯನು ಅರಸನಾದನು.
और आख़ज़ अपने बाप — दादा के साथ सो गया, और उन्होंने उसे शहर में या'नी येरूशलेम में दफ़्न किया क्यूँकि वह उसे इस्राईल के बादशाहों की क़ब्रों में न लाए और उसका बेटा हिज़क़ियाह उसकी जगह बादशाह हुआ।