< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >

1 ಹಿಜ್ಕೀಯನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.
जब हिज़किय्याह राजा बना, उसकी उम्र पच्चीस साल थी. येरूशलेम में उसने उनतीस साल शासन किया. उसकी माता का नाम अबीयाह था, वह ज़करयाह की पुत्री थी.
2 ಅವನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
उसने वही किया, जो याहवेह की दृष्टि में सही था. वैसा ही, जैसा उसके पूर्वज दावीद ने किया था.
3 ಹಿಜ್ಕೀಯನು ತನ್ನ ಆಳ್ವಿಕೆಯ ಮೊದಲನೆಯ ವರ್ಷದ ಮೊದಲನೆಯ ತಿಂಗಳಲ್ಲಿ ಯೆಹೋವ ದೇವರ ಆಲಯದ ಬಾಗಿಲುಗಳನ್ನು ತೆರೆದು, ಅವುಗಳನ್ನು ಭದ್ರಪಡಿಸಿದನು.
अपने शासन के पहले साल, पहले महीने में ही उसने याहवेह के भवन के फाटक खोल दिए और उनमें ज़रूरी सुधार भी किए.
4 ಇದಲ್ಲದೆ ಹಿಜ್ಕೀಯನು ಯಾಜಕರನ್ನೂ, ಲೇವಿಯರನ್ನೂ ಕರೆಕಳುಹಿಸಿ, ಅವರನ್ನು ಪೂರ್ವದಿಕ್ಕಿನ ಅಂಗಣದಲ್ಲಿ ಕೂಡಿಸಿಕೊಂಡು, ಅವರಿಗೆ ಹೇಳಿದ್ದೇನೆಂದರೆ,
उसने पुरोहितों और लेवियों को पूर्वी चौक में इकट्ठा किया.
5 “ಲೇವಿಯರೇ, ನನ್ನ ಮಾತನ್ನು ಕೇಳಿರಿ. ನೀವು ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ನಿಮ್ಮ ಪಿತೃಗಳ ದೇವರಾದ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದರ ಮೈಲಿಗೆಯನ್ನು ಪರಿಶುದ್ಧ ಸ್ಥಾನದಿಂದ ತೆಗೆದುಹಾಕಿರಿ.
राजा हिज़किय्याह ने उन्हें कहा: “आप जो लेवी हैं ध्यान से सुनिए! अब अपने आपको शुद्ध करो, याहवेह, अपने पूर्वजों के परमेश्वर के भवन को पवित्र करो और पवित्र स्थान से अशुद्धता को निकाल डालो.
6 ಏಕೆಂದರೆ ನಮ್ಮ ಪಿತೃಗಳು ಅಪನಂಬಿಗಸ್ತರಾಗಿ, ನಮ್ಮ ದೇವರಾದ ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿ, ಅವರನ್ನು ಬಿಟ್ಟುಬಿಟ್ಟರು. ಇದಲ್ಲದೆ ಅವರು ಯೆಹೋವ ದೇವರ ನಿವಾಸ ಸ್ಥಾನದ ಕಡೆಯಿಂದ ತಮ್ಮ ಮುಖಗಳನ್ನು ತಿರುಗಿಸಿ, ತಮ್ಮ ಬೆನ್ನುಗಳನ್ನು ತೋರಿಸಿದ್ದಾರೆ.
हमारे पूर्वज सच्चे नहीं थे. उन्होंने वह सब किया, जो याहवेह, हमारे परमेश्वर की दृष्टि में बुरा है. उन्होंने उनको त्याग दिया. वे याहवेह के घर से दूर हो गए, और इसे पीठ ही दिखा दी है.
7 ಇದಲ್ಲದೆ ಅವರು ದ್ವಾರಾಂಗಳದ ಬಾಗಿಲುಗಳನ್ನು ಮುಚ್ಚಿ, ದೀಪಗಳನ್ನು ಆರಿಸಿ, ಇಸ್ರಾಯೇಲಿನ ದೇವರಿಗೆ ಪರಿಶುದ್ಧ ಸ್ಥಾನದಲ್ಲಿ ಧೂಪವನ್ನು ಸುಡದೆ, ದಹನಬಲಿಗಳನ್ನು ಅರ್ಪಿಸದೆ ಹೋದರು.
उन्होंने तो ओसारे के द्वार बंद कर दिए हैं, दीप बुझा दिए हैं और इस्राएल के परमेश्वर के पवित्र स्थान पर धूप जलाना और होमबलि चढ़ाना छोड़ रखा है.
8 ಆದ್ದರಿಂದ ಯೆಹೂದ ಮತ್ತು ಯೆರೂಸಲೇಮಿನವರ ಮೇಲೆ ಯೆಹೋವ ದೇವರು ಕೋಪಗೊಂಡು, ಅವುಗಳನ್ನು ಭಯಭೀತಿಗೂ, ಅಪಹಾಸ್ಯಗಳಿಗೂ ಆಸ್ಪದ ಮಾಡಿದ್ದಾರೆ. ಇದಕ್ಕೆ ನೀವೇ ಸಾಕ್ಷಿಗಳು.
इसलिये यहूदिया और येरूशलेम याहवेह के क्रोध के पात्र हो गए; फलस्वरूप जैसा आप देख ही रहे हैं, याहवेह ने इन्हें घृणा और आतंक का विषय बना दिया है.
9 ಇದಕ್ಕೋಸ್ಕರ ನಮ್ಮ ಪಿತೃಗಳು ಖಡ್ಗದಿಂದ ಬಿದ್ದಿದ್ದಾರೆ. ನಮ್ಮ ಪುತ್ರ ಪುತ್ರಿಯರೂ, ನಮ್ಮ ಹೆಂಡತಿಯರೂ ಸೆರೆಯಲ್ಲಿದ್ದಾರೆ.
आपने देखा कि हमारे पूर्वज तलवार से घात किए गए हैं और हमारे पुत्र, पुत्रियों और पत्नियां इसके कारण बंदी बना ली गईं.
10 ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರ ಉಗ್ರಕೋಪವು ನಮ್ಮನ್ನು ಬಿಟ್ಟುಹೋಗುವ ಹಾಗೆ, ನಾನು ಅವರ ಸಂಗಡ ಒಡಂಬಡಿಕೆಯನ್ನು ಮಾಡಲು ಮನಸ್ಸುಳ್ಳವನಾಗಿದ್ದೇನೆ.
अब मेरी इच्छा यह है कि मैं याहवेह इस्राएल के परमेश्वर के साथ एक वाचा बांधूं, कि उनका भड़का हुआ क्रोध हम पर से हट जाए.
11 ನನ್ನ ಮಕ್ಕಳೇ, ಉದಾಸೀನರಾಗಿರಬೇಡಿರಿ. ಏಕೆಂದರೆ ತಮ್ಮ ಸಮ್ಮುಖದಲ್ಲಿ ನಿಲ್ಲುವುದಕ್ಕೂ, ತಮ್ಮನ್ನು ಸೇವಿಸುವುದಕ್ಕೂ, ತಮಗೆ ಸೇವಕರಾಗಿರುವುದಕ್ಕೂ, ತಮಗೆ ಧೂಪವನ್ನು ಸುಡುವುದಕ್ಕೂ ಯೆಹೋವ ದೇವರು ನಿಮ್ಮನ್ನು ಆಯ್ದುಕೊಂಡಿದ್ದಾರೆ,” ಎಂದನು.
मेरे पुत्रों, अब उपेक्षा को त्याग दो, क्योंकि याहवेह ने तुम्हें चुन लिया है कि तुम उनके सामने खड़े रहो, उनकी सेवा करो और उनके सेवक होकर उनके सामने धूप जलाओ.”
12 ಆಗ ಲೇವಿಯರು ಸೇವೆಗಾಗಿ ಮುಂದೆ ಬಂದರು: ಕೊಹಾತ್ಯರಲ್ಲಿ ಅಮಾಸೈಯನ ಮಗ ಮಹತ್, ಅಜರ್ಯನ ಮಗ ಯೋಯೇಲ್, ಮೆರಾರೀಯರಲ್ಲಿ ಅಬ್ದೀಯನ ಮಗ ಕೀಷ್, ಯೆಹಲ್ಲೆಲೇಲನ ಮಗ ಅಜರ್ಯ, ಗೇರ್ಷೋನ್ಯರಲ್ಲಿ ಜಿಮ್ಮನ ಮಗ ಯೋವಾಹ, ಯೋವಾಹನ ಮಗ ಏದೆನ್,
यह सुनकर ये लेवी लोग सेवा के लिए: आगे आ गये कोहाथ के वंशजों में से: आमासाई का पुत्र माहाथ और अज़रियाह का पुत्र योएल; मेरारी के वंशजों में से: अबदी का पुत्र कीश और येहालेलेल का पुत्र अज़रियाह; गेरशोन के वंशजों में से: ज़िम्माह का पुत्र योआह और योआह का पुत्र एदेन;
13 ಎಲೀಚಾಫಾನ್ಯರಲ್ಲಿ ಶಿಮ್ರೀ, ಯೆಹೀಯೇಲ್, ಆಸಾಫ್ಯರಲ್ಲಿ ಜೆಕರ್ಯ, ಮತ್ತನ್ಯ,
एलिज़ाफ़ान के वंशजों में से: शिमरी और येइएल; आसफ के वंशजों में से: ज़करयाह और मत्तनियाह;
14 ಹೇಮಾನ್ಯರಲ್ಲಿ ಯೆಹೀಯೇಲ್, ಶಿಮ್ಮಿ; ಯೆದುತೂನ್ಯರಲ್ಲಿ ಶೆಮಾಯ ಹಾಗೂ ಉಜ್ಜೀಯೇಲ್.
हेमान के वंशजों में से: येहिएल और शिमेई; यदूथून के वंशजों में से: शेमायाह और उज्ज़िएल.
15 ಇವರು ಅರಸನ ಆಜ್ಞಾಧಾರಕರಾಗಿ ಯೆಹೋವ ದೇವರ ವಾಕ್ಯವನ್ನು ಅನುಸರಿಸಿ, ತಮ್ಮ ಸಹೋದರರನ್ನು ಕೂಡಿಸಿ, ತಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರ ಆಲಯವನ್ನು ಶುಚಿಮಾಡಲು ಬಂದರು.
इन सभी ने अपने भाइयों को इकट्ठा किया, अपने आपको पवित्र किया और राजा के आदेश पर याहवेह के भवन को शुद्ध करने के उद्देश्य से उसमें प्रवेश किया, कि याहवेह द्वारा निर्धारित विधि से यह काम पूरा किया जाए.
16 ಯಾಜಕರು ಯೆಹೋವ ದೇವರ ಆಲಯವನ್ನು ಶುದ್ಧಿಮಾಡಲು ಅದರ ಒಳಭಾಗವನ್ನು ಪ್ರವೇಶಿಸಿ, ಯೆಹೋವ ದೇವರ ಮಂದಿರದಲ್ಲಿ ಕಂಡ ಮೈಲಿಗೆಯನ್ನು ಯೆಹೋವ ದೇವರ ಆಲಯದ ಅಂಗಳದೊಳಗೆ ತಂದರು. ಆಗ ಲೇವಿಯರು ಅದನ್ನು ತೆಗೆದುಕೊಂಡು, ಕಿದ್ರೋನ್ ಹಳ್ಳದಲ್ಲಿ ಹಾಕಲು ಹೊರಗೆ ಒಯ್ದರು.
तब पुरोहितों ने याहवेह के भवन के भीतरी कमरे में प्रवेश किया, कि इसे शुद्ध करने का काम शुरू किया जाए. वहां उन्होंने हर एक वस्तु को, जो स्वच्छ नहीं थी, याहवेह के भवन से बाहर और याहवेह के भवन के आंगन में लाया; फिर लेवी इन्हें किद्रोन घाटी में ले गए.
17 ಅವರು ಮೊದಲನೆಯ ತಿಂಗಳಿನ ಮೊದಲನೆಯ ದಿವಸದಲ್ಲಿ ಪ್ರತಿಷ್ಠೆ ಮಾಡಲು ಆರಂಭಿಸಿ, ಆ ತಿಂಗಳ ಎಂಟನೆಯ ದಿವಸದಲ್ಲಿ ಯೆಹೋವ ದೇವರ ದ್ವಾರಾಂಗಳದವರೆಗೂ ಬಂದರು. ಹೀಗೆಯೇ ಎಂಟು ದಿವಸಗಳಲ್ಲಿ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆಮಾಡಿ, ಅದನ್ನು ಮೊದಲನೆಯ ತಿಂಗಳಿನ ಹದಿನಾರನೆಯ ದಿವಸದಲ್ಲಿ ಮುಗಿಸಿದರು.
पहले महीने के पहले दिन उन्होंने पवित्र करने का काम शुरू कर दिया. महीने के आठवें दिन उन्होंने याहवेह के ओसारे में प्रवेश किया. इसके बाद याहवेह के भवन को उन्होंने अगले आठ दिनों में पवित्र किया और पहले महीने के सोलहवें दिन सारा काम पूरा हो गया.
18 ಆಗ ಅವರು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರ ಆಲಯವನ್ನೆಲ್ಲಾ, ದಹನಬಲಿಪೀಠವನ್ನೂ, ನೈವೇದ್ಯ ರೊಟ್ಟಿಗಳನ್ನಿಡತಕ್ಕ ಮೇಜನ್ನು, ಅದರ ಎಲ್ಲಾ ಪಾತ್ರೆಗಳನ್ನೂ ಶುದ್ಧಿಮಾಡಿದೆವು.
तब वे राजा हिज़किय्याह के सामने गए और उन्होंने बताया, हमने याहवेह के पूरे भवन को शुद्ध कर दिया है, होमबलि की वेदी, उससे संबंधित सारे बर्तन, भेंट की रोटी की मेज़ और उससे संबंधित सारे बर्तन.
19 ಇದಲ್ಲದೆ ಅರಸನಾದ ಆಹಾಜನು ಆಳಿದಾಗ, ದೇವದ್ರೋಹಿಯಾಗಿ ಬಿಸಾಡಿದ ಎಲ್ಲಾ ಸಲಕರಣೆಗಳನ್ನು ಪುನಃ ತಂದು ಪ್ರತಿಷ್ಠೆ ಮಾಡಿದೆವು. ಅವು ಯೆಹೋವ ದೇವರ ಬಲಿಪೀಠದ ಮುಂದೆ ಇವೆ,” ಎಂದು ಹೇಳಿದರು.
इसके अलावा, वे सारे बर्तन, जिन्हें राजा आहाज़ ने अपने विश्वासघात में अपने शासनकाल में फेंक दिए थे, हमने ठीक कर शुद्ध कर दिए हैं. आप देख लीजिए, ये सभी याहवेह की वेदी के सामने रखे हुए हैं.
20 ಆಗ ಅರಸನಾದ ಹಿಜ್ಕೀಯನು ಉದಯದಲ್ಲಿ ಎದ್ದು, ಪಟ್ಟಣದ ಪ್ರಧಾನರನ್ನು ಕೂಡಿಸಿ, ಯೆಹೋವ ದೇವರ ಆಲಯಕ್ಕೆ ಹೋದನು.
अगले दिन राजा हिज़किय्याह सुबह-सुबह उठा, नगर के शासकों को इकट्ठा किया और वे सभी याहवेह के भवन को गए.
21 ಅವರು ರಾಜ್ಯಕ್ಕೋಸ್ಕರವೂ, ಪರಿಶುದ್ಧ ಸ್ಥಾನಕ್ಕೋಸ್ಕರವೂ, ಯೆಹೂದಕ್ಕೋಸ್ಕರವೂ ದೋಷಪರಿಹಾರದ ಬಲಿಯಾಗಿ ಏಳು ಹೋರಿಗಳನ್ನೂ, ಏಳು ಟಗರುಗಳನ್ನೂ, ಏಳು ಕುರಿಮರಿಗಳನ್ನೂ, ಏಳು ಮೇಕೆಗಳನ್ನೂ ತಂದರು. ಆಗ ಅರಸನು ಯಾಜಕರಾದ ಆರೋನನ ಸಂತಾನದವರಿಗೆ ಯೆಹೋವ ದೇವರ ಬಲಿಪೀಠದ ಮೇಲೆ ಅವುಗಳನ್ನು ಅರ್ಪಿಸಲು ಹೇಳಿದನು.
वे अपने साथ सात बछड़े, सात मेढ़े, सात मेमने और सात बकरे ले गए, कि वे अपने राज्य के लिए, पवित्र स्थान के लिए और यहूदिया के लिए बलि चढ़ाएं. राजा ने अहरोन के वंशज पुरोहितों को आदेश दिया कि वे इन्हें याहवेह की वेदी पर चढ़ाएं.
22 ಹೋರಿಗಳನ್ನು ವಧಿಸಿದ ಮೇಲೆ ಯಾಜಕರು ಅವುಗಳ ರಕ್ತವನ್ನು ತೆಗೆದುಕೊಂಡು, ಪೀಠದ ಮೇಲೆ ಚಿಮುಕಿಸಿದರು. ಟಗರುಗಳನ್ನು ವಧಿಸಿ ರಕ್ತವನ್ನು ಚಿಮುಕಿಸಿದರು. ಕುರಿಮರಿಗಳನ್ನು ತೆಗೆದುಕೊಂಡು ಬಲಿಪೀಠದ ಮೇಲೆ ಅವುಗಳನ್ನು ವಧಿಸಿ, ರಕ್ತವನ್ನು ತೆಗೆದುಕೊಂಡು, ಬಲಿಪೀಠದ ಮೇಲೆ ಚಿಮುಕಿಸಿದರು.
तब बछड़ों का वध किया गया और पुरोहितों ने उनका लहू वेदी पर छिड़का; उन्होंने मेढ़ों का भी वध किया और उनका लहू भी वेदी पर छिड़क दिया; उन्होंने मेमनों का भी वध किया और उनका लहू वेदी पर छिड़क दिया.
23 ಅರಸನ ಮುಂದೆಯೂ, ಸಭೆಯ ಮುಂದೆಯೂ ದೋಷಪರಿಹಾರದ ಬಲಿಗಾಗಿ ತಂದ ಹೋತಗಳನ್ನು ಹತ್ತಿರ ತೆಗೆದುಕೊಂಡು ಬಂದು, ತಮ್ಮ ಕೈಗಳನ್ನು ಅವುಗಳ ಮೇಲೆ ಇಟ್ಟರು.
तब वे पापबलि के लिए राजा और सभा के सामने पापबलि के लिए ठहराए गए बकरे लेकर आए और उन पर अपने हाथ रखे.
24 ಆಗ ಸಮಸ್ತ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತವಾಗಿ ಯಾಜಕರು ಅವುಗಳನ್ನು ವಧಿಸಿ, ಬಲಿಪೀಠದ ಮೇಲೆ ಅವುಗಳ ರಕ್ತದಿಂದ ಪಾಪ ನಿವಾರಣೆ ಮಾಡಿದರು. ದಹನಬಲಿಯೂ, ದೋಷಪರಿಹಾರದ ಬಲಿಯೂ ಸಮಸ್ತ ಇಸ್ರಾಯೇಲಿಗೋಸ್ಕರ ಆಗಬೇಕೆಂದು ಅರಸನು ಆಜ್ಞಾಪಿಸಿದನು.
पुरोहितों ने उनका वध किया, उनके लहू को वेदी पर छिड़का कि सारे इस्राएलियों के लिए प्रायश्चित किया जाए, क्योंकि राजा का आदेश था कि होमबलि और पापबलि सारे इस्राएल के लिए चढ़ाई जाए.
25 ಇದಲ್ಲದೆ ಅವನು ತಾಳಗಳನ್ನೂ, ವೀಣೆಗಳನ್ನೂ, ಕಿನ್ನರಿಗಳನ್ನೂ ಹಿಡಿದ ಲೇವಿಯರನ್ನು ದಾವೀದನೂ, ಅರಸನ ದರ್ಶಿಯಾದ ಗಾದನೂ, ಪ್ರವಾದಿಯಾದ ನಾತಾನನೂ ಇವರ ಆಜ್ಞೆಯ ಪ್ರಕಾರ, ಯೆಹೋವ ದೇವರ ಆಲಯದಲ್ಲಿ ನಿಲ್ಲಿಸಿದನು. ಏಕೆಂದರೆ ಯೆಹೋವ ದೇವರ ಆಜ್ಞೆಯು ಅವನ ಪ್ರವಾದಿಗಳ ಮುಖಾಂತರ ಹೀಗೆ ಇತ್ತು.
इसके बाद उसने, याहवेह के भवन में दावीद, और राजा का दर्शी गाद और भविष्यद्वक्ता नाथान के आदेश के अनुसार झांझ, सारंगी और वीणाओं के लिए लेवी चुने, क्योंकि यह भविष्यवक्ताओं द्वारा घोषित याहवेह की आज्ञा थी.
26 ಲೇವಿಯರು ದಾವೀದನ ವಾದ್ಯಗಳನ್ನೂ ಯಾಜಕರು ತುತೂರಿಗಳನ್ನೂ ಹಿಡಿದು ನಿಂತಿದ್ದರು.
दावीद द्वारा बनवाए वाद्य लिए हुए लेवी खड़े थे और पुरोहित नरसिंगे.
27 ಹಿಜ್ಕೀಯನು ಬಲಿಪೀಠದ ಮೇಲೆ ದಹನಬಲಿಯನ್ನು ಅರ್ಪಿಸಲು ಹೇಳಿದನು. ದಹನಬಲಿಯನ್ನು ಅರ್ಪಿಸಲು ಆರಂಭಿಸಿದಾಗ ತುತೂರಿಗಳಿಂದಲೂ, ಇಸ್ರಾಯೇಲಿನ ಅರಸನಾದ ದಾವೀದನ ವಾದ್ಯಗಳಿಂದಲೂ ಯೆಹೋವ ದೇವರ ಹಾಡು ಆರಂಭವಾಯಿತು.
इसी समय हिज़किय्याह ने आदेश दिया कि वेदी पर होमबलि चढ़ाई जाए. जब होमबलि चढ़ाना शुरू हुई, नरसिंगों की आवाजों के साथ याहवेह के लिए स्तुतिगान भी शुरू हो गया. इनके अलावा इस्राएल के राजा दावीद द्वारा बनवाए वाद्य भी बजाए जा रहे थे.
28 ಆಗ ಸಭೆಯವರೆಲ್ಲರೂ ಆರಾಧಿಸಿದರು. ದಹನಬಲಿ ಅರ್ಪಿಸಿ ತೀರಿಸುವ ತನಕ ಹಾಡುಗಾರರು ಹಾಡಿದರು. ತುತೂರಿ ಊದುವವರು ಊದಿದರು.
सारी सभा आराधना में लीन थी, गायक गा रहे थे और नरसिंगे बजाए जा रहे थे. यह सब उस समय तक होता रहा जब तक होमबलि का काम पूरा न हो गया.
29 ಅವರು ಅರ್ಪಿಸುವುದು ತೀರಿಸಿದಾಗ ಅರಸನೂ, ಅವನ ಸಂಗಡ ಇದ್ದವರೆಲ್ಲರೂ ಮೊಣಕಾಲೂರಿ ಆರಾಧಿಸಿದರು.
होमबलि खत्म हो जाने पर राजा और उसके साथ उपस्थित सभी व्यक्तियों ने झुककर आराधना की.
30 ಇದಲ್ಲದೆ ಅರಸನಾದ ಹಿಜ್ಕೀಯನೂ, ಪ್ರಧಾನರೂ ದಾವೀದನ ಮಾತುಗಳಿಂದಲೂ, ಆಸಾಫನ ಕೀರ್ತನೆಗಳಿಂದಲೂ ಯೆಹೋವ ದೇವರನ್ನು ಸ್ತುತಿಸಬೇಕೆಂದು ಲೇವಿಯರಿಗೆ ಹೇಳಿದರು. ಆಗ ಅವರು ಸಂತೋಷವಾಗಿ ಸ್ತುತಿಸಿ ಮೊಣಕಾಲೂರಿಕೊಂಡು ಆರಾಧಿಸಿದರು.
इसके अलावा राजा हिज़किय्याह और उपस्थित अधिकारियों ने आदेश दिया, कि दावीद और दर्शी आसफ की गीत रचनाओं द्वारा लेवी याहवेह की स्तुति करें. तब उन्होंने बड़ी खुशी से स्तुति की और झुक-झुक कर आराधना की.
31 ಹಿಜ್ಕೀಯನು ಅವರಿಗೆ ಉತ್ತರಕೊಟ್ಟು, “ಈಗ ನೀವು ನಿಮ್ಮನ್ನು ಯೆಹೋವ ದೇವರಿಗೆ ಪ್ರತಿಷ್ಠೆ ಮಾಡಿದ್ದರಿಂದ, ಸಮೀಪಕ್ಕೆ ಬಂದು ಬಲಿಗಳನ್ನೂ, ಸ್ತೋತ್ರ ಅರ್ಪಣೆಗಳನ್ನೂ ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬನ್ನಿರಿ,” ಎಂದನು. ಆಗ ಸಭೆಯವರು ಬಲಿಗಳನ್ನೂ, ಸ್ತೋತ್ರದ ಅರ್ಪಣೆಗಳನ್ನೂ ಮತ್ತು ಇಷ್ಟಪೂರ್ವಕ ಮನಸ್ಸುಳ್ಳವರು ದಹನಬಲಿಗಳನ್ನೂ ತಂದರು.
यह होने पर हिज़किय्याह ने उन्हें कहा, “अब इसलिये कि आप लोगों ने स्वयं को याहवेह के लिए पवित्र कर लिया है,” निकट आकर याहवेह के भवन में बलि और धन्यवाद की भेंट चढ़ाइए. तब सारी सभा बलियां और धन्यवाद की भेंटें लेकर आ गई और जिन्होंने चाहा वे होमबलियां चढ़ाने आ गए.
32 ಸಭೆಯು ತಂದ ದಹನಬಲಿಗಳ ಲೆಕ್ಕವೇನೆಂದರೆ: ಎಪ್ಪತ್ತು ಹೋರಿಗಳು, ನೂರು ಟಗರುಗಳು, ಇನ್ನೂರು ಕುರಿಮರಿಗಳು. ಇವೆಲ್ಲಾ ಯೆಹೋವ ದೇವರಿಗೆ ಅರ್ಪಿಸಿದ ದಹನಬಲಿಗಳಾಗಿದ್ದವು.
सभा द्वारा चढ़ाई गई होमबलियों की गिनती उस दिन इस तरह थी: सत्तर बछड़े, सौ बैल, और दो सौ मेमने. ये सभी पशु याहवेह को होमबलि के लिए थे.
33 ಪ್ರತಿಷ್ಠೆ ಮಾಡಲಾದವುಗಳು ಆರುನೂರು ಹೋರಿಗಳೂ ಮೂರು ಸಾವಿರ ಕುರಿಗಳೂ ಮೇಕೆಗಳೂ ಇದ್ದವು.
शुद्ध किए हुए पशुओं की संख्या इस प्रकार थी: छः सौ बैल और तीन हज़ार भेड़ें.
34 ಆದರೆ ಯಾಜಕರು ಸ್ವಲ್ಪ ಜನರಾಗಿದ್ದು, ದಹನಬಲಿಗಳನ್ನೆಲ್ಲಾ ಸುಲಿಯಲಾರದೆ ಇದ್ದುದರಿಂದ, ಕೆಲಸವು ತೀರುವವರೆಗೂ, ಮಿಕ್ಕ ಯಾಜಕರು ತಮ್ಮನ್ನು ಪರಿಶುದ್ಧಮಾಡಿಕೊಳ್ಳುವವರೆಗೂ ಲೇವಿಯರಾದ ಅವರ ಸಹೋದರರು ಅವರಿಗೆ ಸಹಾಯ ಮಾಡುತ್ತಿದ್ದರು. ಏಕೆಂದರೆ ಯಾಜಕರಿಗಿಂತ ತಮ್ಮನ್ನು ಪರಿಶುದ್ಧ ಮಾಡಿಕೊಳ್ಳುವುದರಲ್ಲಿ ಲೇವಿಯರು ಯಥಾರ್ಥ ಹೃದಯವುಳ್ಳವರಾಗಿದ್ದರು.
मगर इनके लिए पुरोहितों की संख्या कम साबित हुई फलस्वरूप होमबलि के पहले पशुओं की खाल उतारना संभव न हो सका. इसलिये लेवी आकर इसमें उनकी सहायता तब तक करते रहे, जब तक यह काम खत्म न हो गया और जब तक बाकी पुरोहितों ने अपने आपको शुद्ध न कर लिया. क्योंकि यह देखा गया कि स्वयं को शुद्ध करने के लिए पुरोहितों की तुलना में लेवी अधिक सीधे मन के थे.
35 ಇದಲ್ಲದೆ ದಹನಬಲಿಗಳೂ, ಸಮಾಧಾನದ ಬಲಿಗಳ ಕೊಬ್ಬೂ, ದಹನಬಲಿಗೆ ಬೇಕಾದ ಪಾನದ ಅರ್ಪಣೆಗಳೂ ಬಹಳವಾಗಿದ್ದವು. ಹೀಗೆ ಯೆಹೋವ ದೇವರ ಆಲಯದ ಸೇವೆಯು ಸಿದ್ಧವಾಯಿತು.
बड़ी संख्या में होमबलि के अलावा वहां मेल बलि में से बची रह गई चर्बी और पेय बलि भी थी. इस प्रकार याहवेह के भवन में आराधना दोबारा शुरू की गई.
36 ಆಗ ದೇವರು ತಮ್ಮ ಜನರನ್ನು ಸಿದ್ಧಮಾಡಿದ್ದರಿಂದ ಹಿಜ್ಕೀಯನೂ, ಜನರೆಲ್ಲರೂ ಸಂತೋಷಪಟ್ಟರು. ಏಕೆಂದರೆ ಈ ಕಾರ್ಯವು ತ್ವರೆಯಾಗಿ ನಡೆಯಿತು.
हिज़किय्याह और सारी प्रजा बहुत ही खुश थी कि परमेश्वर ने बहुत ही जल्दी उनके लिए यह सब कर दिया था.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 29 >