< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 35 >
1 ಯೋಷೀಯನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಿದನು. ಮೊದಲನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು.
ಯೋಷೀಯನು ಯೆರೂಸಲೇಮಿನಲ್ಲಿ ಯೆಹೋವ ದೇವರಿಗೆ ಪಸ್ಕವನ್ನು ಆಚರಿಸಿದನು. ಮೊದಲನೆಯ ತಿಂಗಳ ಹದಿನಾಲ್ಕನೆಯ ದಿವಸದಲ್ಲಿ ಪಸ್ಕದ ಕುರಿಮರಿಯನ್ನು ವಧಿಸಿದರು.
2 ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ; ಯೆಹೋವ ದೇವರ ಆಲಯದ ಸೇವೆ ಮಾಡುವುದಕ್ಕೆ ಅವರನ್ನು ಪ್ರೋತ್ಸಾಹಿಸಿದನು.
ಆಗ ಅವನು ಯಾಜಕರನ್ನು ಅವರವರ ಕೆಲಸಗಳಲ್ಲಿ ನಿಲ್ಲಿಸಿ; ಯೆಹೋವ ದೇವರ ಆಲಯದ ಸೇವೆ ಮಾಡುವುದಕ್ಕೆ ಅವರನ್ನು ಪ್ರೋತ್ಸಾಹಿಸಿದನು.
3 “ಸಮಸ್ತ ಇಸ್ರಾಯೇಲರಿಗೆ ಬೋಧಿಸಿದ ಮತ್ತು ಯೆಹೋವ ದೇವರಿಗೆ ಪ್ರತಿಷ್ಠಿತರಾದ ಲೇವಿಯರಿಗೆ ಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವೆಂದೆಣಿಸದೇ, ನೀವು ಅದನ್ನು ಇಸ್ರಾಯೇಲಿನ ಅರಸನಾಗಿರುವ ದಾವೀದನ ಮಗ ಸೊಲೊಮೋನನು ಕಟ್ಟಿಸಿದ ಆಲಯದಲ್ಲಿ ಇರಿಸಿ, ನಿಮ್ಮ ದೇವರಾದ ಯೆಹೋವ ದೇವರನ್ನೂ, ದೇವಜನರಾದ ಇಸ್ರಾಯೇಲರನ್ನೂ ಸೇವಿಸಿರಿ.
“ಸಮಸ್ತ ಇಸ್ರಾಯೇಲರಿಗೆ ಬೋಧಿಸಿದ ಮತ್ತು ಯೆಹೋವ ದೇವರಿಗೆ ಪ್ರತಿಷ್ಠಿತರಾದ ಲೇವಿಯರಿಗೆ ಪರಿಶುದ್ಧವಾದ ಮಂಜೂಷವು ನಿಮ್ಮ ಭುಜಗಳ ಮೇಲೆ ಭಾರವೆಂದೆಣಿಸದೇ, ನೀವು ಅದನ್ನು ಇಸ್ರಾಯೇಲಿನ ಅರಸನಾಗಿರುವ ದಾವೀದನ ಮಗ ಸೊಲೊಮೋನನು ಕಟ್ಟಿಸಿದ ಆಲಯದಲ್ಲಿ ಇರಿಸಿ, ನಿಮ್ಮ ದೇವರಾದ ಯೆಹೋವ ದೇವರನ್ನೂ, ದೇವಜನರಾದ ಇಸ್ರಾಯೇಲರನ್ನೂ ಸೇವಿಸಿರಿ.
4 ಇದಲ್ಲದೆ ಇಸ್ರಾಯೇಲಿನ ಅರಸನಾದ ದಾವೀದನ ಮತ್ತು ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ, ನಿಮ್ಮ ಗೋತ್ರ ವರ್ಗಗಳ ಪ್ರಕಾರವಾಗಿಯೂ ಸಿದ್ಧಮಾಡಿಕೊಳ್ಳಿರಿ.
ಇದಲ್ಲದೆ ಇಸ್ರಾಯೇಲಿನ ಅರಸನಾದ ದಾವೀದನ ಮತ್ತು ಅವನ ಮಗನಾದ ಸೊಲೊಮೋನನ ಬರಹದ ಪ್ರಕಾರವಾಗಿಯೂ, ನಿಮ್ಮ ಗೋತ್ರ ವರ್ಗಗಳ ಪ್ರಕಾರವಾಗಿಯೂ ಸಿದ್ಧಮಾಡಿಕೊಳ್ಳಿರಿ.
5 “ಇದರ ಹೊರತಾಗಿ, ಪವಿತ್ರ ಸ್ಥಳಗಳು ಸಾಮಾನ್ಯ ಜನರ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು, ಲೇವಿಯರು ಕೂಡ ಕುಲಗಳ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು.
“ಇದರ ಹೊರತಾಗಿ, ಪವಿತ್ರ ಸ್ಥಳಗಳು ಸಾಮಾನ್ಯ ಜನರ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು, ಲೇವಿಯರು ಕೂಡ ಕುಲಗಳ ಭಾಗಗಳಿಗೆ ಅನುಗುಣವಾಗಿ ನಿಲ್ಲಬೇಕು.
6 ಪಸ್ಕದ ಕುರಿಮರಿಯನ್ನು ವಧಿಸಿ ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ,” ಎಂದನು.
ಪಸ್ಕದ ಕುರಿಮರಿಯನ್ನು ವಧಿಸಿ ನಿಮ್ಮನ್ನು ಪ್ರತಿಷ್ಠೆ ಮಾಡಿಕೊಂಡು, ಯೆಹೋವ ದೇವರು ಮೋಶೆಯ ಮುಖಾಂತರವಾಗಿ ಹೇಳಿದ ವಾಕ್ಯದ ಪ್ರಕಾರ ನಿಮ್ಮ ಸಹೋದರರು ಮಾಡುವ ಹಾಗೆ ಅವರನ್ನು ಸಿದ್ಧಮಾಡಿರಿ,” ಎಂದನು.
7 ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಸಾಮಾನ್ಯ ಜನರಿಗೆ ಪಸ್ಕದ ಆಡುಮರಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ, ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನೂ ಕೊಟ್ಟನು. ಇವೆಲ್ಲಾ ಅರಸನ ಸ್ವಂತ ಸೊತ್ತಿನಿಂದಲೇ ಕೊಟ್ಟನು.
ಆಗ ಯೋಷೀಯನು ಸಿದ್ಧವಾಗಿದ್ದ ಸಮಸ್ತ ಸಾಮಾನ್ಯ ಜನರಿಗೆ ಪಸ್ಕದ ಆಡುಮರಿಗೋಸ್ಕರ ಮಂದೆಯಿಂದ ಮೂವತ್ತು ಸಾವಿರ ಕುರಿಮರಿಗಳನ್ನೂ, ಮೇಕೆಯ ಮರಿಗಳನ್ನೂ ಕೊಟ್ಟನು. ಇದಲ್ಲದೆ ಮೂರು ಸಾವಿರ ಎತ್ತುಗಳನ್ನೂ ಕೊಟ್ಟನು. ಇವೆಲ್ಲಾ ಅರಸನ ಸ್ವಂತ ಸೊತ್ತಿನಿಂದಲೇ ಕೊಟ್ಟನು.
8 ಹಾಗೆಯೇ ಅವನ ಪ್ರಧಾನರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ, ಜೆಕರ್ಯನೂ, ಯೆಹೀಯೇಲನೂ ಪಸ್ಕದ ಬಲಿಗೋಸ್ಕರ ಎರಡು ಸಾವಿರದ ಆರುನೂರು ಪಸ್ಕದ ಬಲಿಗಳನ್ನೂ, ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
ಹಾಗೆಯೇ ಅವನ ಪ್ರಧಾನರು ಜನರಿಗೂ, ಯಾಜಕರಿಗೂ, ಲೇವಿಯರಿಗೂ ಮನಃಪೂರ್ವಕವಾಗಿ ಕೊಟ್ಟರು. ದೇವರ ಆಲಯದ ನಾಯಕರಾದ ಹಿಲ್ಕೀಯನೂ, ಜೆಕರ್ಯನೂ, ಯೆಹೀಯೇಲನೂ ಪಸ್ಕದ ಬಲಿಗೋಸ್ಕರ ಎರಡು ಸಾವಿರದ ಆರುನೂರು ಪಸ್ಕದ ಬಲಿಗಳನ್ನೂ, ಮುನ್ನೂರು ಎತ್ತುಗಳನ್ನೂ ಯಾಜಕರಿಗೆ ಕೊಟ್ಟರು.
9 ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ, ಅವನ ಸಹೋದರನಾದ ಶೆಮಾಯನೂ, ನೆತನೆಯೇಲನೂ, ಹಷಬ್ಯನೂ, ಯೆಹಿಯೇಲನೂ, ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಪಸ್ಕದ ಬಲಿಗಳನ್ನೂ, ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
ಇದಲ್ಲದೆ ಲೇವಿಯರಲ್ಲಿ ಪ್ರಧಾನರಾದ ಕೋನನ್ಯನೂ, ಅವನ ಸಹೋದರನಾದ ಶೆಮಾಯನೂ, ನೆತನೆಯೇಲನೂ, ಹಷಬ್ಯನೂ, ಯೆಹಿಯೇಲನೂ, ಯೋಜಾಬಾದನೂ ಪಸ್ಕದ ಬಲಿಗಳ ನಿಮಿತ್ತವಾಗಿ ಐದು ಸಾವಿರ ಪಸ್ಕದ ಬಲಿಗಳನ್ನೂ, ಐನೂರು ಎತ್ತುಗಳನ್ನೂ ಲೇವಿಯರಿಗೆ ಕೊಟ್ಟರು.
10 ಹೀಗೆ ಅರಸನ ಆಜ್ಞೆಯ ಪ್ರಕಾರ ಸೇವೆಯನ್ನು ಸಿದ್ಧಮಾಡಲಾಯಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
ಹೀಗೆ ಅರಸನ ಆಜ್ಞೆಯ ಪ್ರಕಾರ ಸೇವೆಯನ್ನು ಸಿದ್ಧಮಾಡಲಾಯಿತು. ಯಾಜಕರು ತಮ್ಮ ತಮ್ಮ ಸ್ಥಳಗಳಲ್ಲಿಯೂ, ಲೇವಿಯರು ತಮ್ಮ ತಮ್ಮ ಸರತಿಗಳಲ್ಲಿಯೂ ನಿಂತಿದ್ದರು.
11 ಲೇವಿಯರು ಪಸ್ಕದ ಕುರಿಮರಿಯನ್ನು ವಧಿಸಿದ ತರುವಾಯ, ಯಾಜಕರು ಅವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಆದರೆ ಲೇವಿಯರು ಚರ್ಮವನ್ನು ಸುಲಿದರು,
ಲೇವಿಯರು ಪಸ್ಕದ ಕುರಿಮರಿಯನ್ನು ವಧಿಸಿದ ತರುವಾಯ, ಯಾಜಕರು ಅವರ ಕೈಯಿಂದ ರಕ್ತವನ್ನು ತೆಗೆದುಕೊಂಡು ಚಿಮುಕಿಸಿದರು. ಆದರೆ ಲೇವಿಯರು ಚರ್ಮವನ್ನು ಸುಲಿದರು,
12 ಮೋಶೆಯ ಗ್ರಂಥದಲ್ಲಿ ಬರೆದಿರುವಂತೆ, ಜನರ ವಂಶಗಳ ಮನೆಗಳ ಪ್ರಕಾರ, ಯೆಹೋವ ದೇವರಿಗೆ ಅರ್ಪಿಸಲು ಅವರು ಕೊಡುವ ಹಾಗೆ ದಹನಬಲಿಗಳನ್ನು ತೆಗೆದು ಇಟ್ಟರು. ಹಾಗೆಯೇ ಎತ್ತುಗಳನ್ನು ತೆಗೆದಿಟ್ಟರು.
ಮೋಶೆಯ ಗ್ರಂಥದಲ್ಲಿ ಬರೆದಿರುವಂತೆ, ಜನರ ವಂಶಗಳ ಮನೆಗಳ ಪ್ರಕಾರ, ಯೆಹೋವ ದೇವರಿಗೆ ಅರ್ಪಿಸಲು ಅವರು ಕೊಡುವ ಹಾಗೆ ದಹನಬಲಿಗಳನ್ನು ತೆಗೆದು ಇಟ್ಟರು. ಹಾಗೆಯೇ ಎತ್ತುಗಳನ್ನು ತೆಗೆದಿಟ್ಟರು.
13 ಹೀಗೆ ಕಟ್ಟಳೆಯ ಪ್ರಕಾರ ಪಸ್ಕದ ಮಾಂಸವನ್ನು ಬೆಂಕಿಯಿಂದ ಸುಟ್ಟರು. ಆದರೆ ಪರಿಶುದ್ಧವಾದವುಗಳನ್ನು ಗಡಿಗೆಗಳಲ್ಲಿಯೂ, ತಪ್ಪಲೆಗಳಲ್ಲಿಯೂ, ಕೊಪ್ಪರಿಗೆಗಳಲ್ಲಿಯೂ ಬೇಯಿಸಿ, ಶೀಘ್ರವಾಗಿ ಜನರೆಲ್ಲರಿಗೆ ಕಳುಹಿಸಿದರು.
ಹೀಗೆ ಕಟ್ಟಳೆಯ ಪ್ರಕಾರ ಪಸ್ಕದ ಮಾಂಸವನ್ನು ಬೆಂಕಿಯಿಂದ ಸುಟ್ಟರು. ಆದರೆ ಪರಿಶುದ್ಧವಾದವುಗಳನ್ನು ಗಡಿಗೆಗಳಲ್ಲಿಯೂ, ತಪ್ಪಲೆಗಳಲ್ಲಿಯೂ, ಕೊಪ್ಪರಿಗೆಗಳಲ್ಲಿಯೂ ಬೇಯಿಸಿ, ಶೀಘ್ರವಾಗಿ ಜನರೆಲ್ಲರಿಗೆ ಕಳುಹಿಸಿದರು.
14 ತರುವಾಯ ತಮಗೋಸ್ಕರ, ಯಾಜಕರಿಗೋಸ್ಕರ ಭೋಜನವನ್ನು ಸಿದ್ಧಮಾಡಿದರು. ಏಕೆಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನಬಲಿಗಳನ್ನೂ, ಕೊಬ್ಬನ್ನೂ ಅರ್ಪಿಸುವುದರಲ್ಲಿದ್ದರು. ಆದ್ದರಿಂದ ಲೇವಿಯರು ತಮಗೋಸ್ಕರವೂ, ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಭೋಜನವನ್ನು ಸಿದ್ಧಮಾಡಿದರು.
ತರುವಾಯ ತಮಗೋಸ್ಕರ, ಯಾಜಕರಿಗೋಸ್ಕರ ಭೋಜನವನ್ನು ಸಿದ್ಧಮಾಡಿದರು. ಏಕೆಂದರೆ ಆರೋನನ ಮಕ್ಕಳಾದ ಯಾಜಕರು ರಾತ್ರಿಯ ಪರ್ಯಂತರ ದಹನಬಲಿಗಳನ್ನೂ, ಕೊಬ್ಬನ್ನೂ ಅರ್ಪಿಸುವುದರಲ್ಲಿದ್ದರು. ಆದ್ದರಿಂದ ಲೇವಿಯರು ತಮಗೋಸ್ಕರವೂ, ಆರೋನನ ಮಕ್ಕಳಾದ ಯಾಜಕರಿಗೋಸ್ಕರವೂ ಭೋಜನವನ್ನು ಸಿದ್ಧಮಾಡಿದರು.
15 ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.
ದಾವೀದನೂ, ಆಸಾಫನೂ, ಹೇಮಾನನೂ, ಅರಸನ ಪ್ರವಾದಿಯಾದ ಯೆದುತೂನನೂ ಇವರ ಆಜ್ಞೆಯ ಪ್ರಕಾರ ಆಸಾಫನ ಮಕ್ಕಳಾದ ಹಾಡುಗಾರರು ತಮ್ಮ ಸ್ಥಳದಲ್ಲಿದ್ದರು. ದ್ವಾರಪಾಲಕರು ಬಾಗಿಲಲ್ಲಿ ಇದ್ದರು. ಅವರು ತಮ್ಮ ಸೇವೆಯನ್ನು ಬಿಡಲು ಆಗದೆ ಇತ್ತು. ಏಕೆಂದರೆ ಅವರ ಸಹೋದರರಾದ ಲೇವಿಯರಿಗೋಸ್ಕರ ಭೋಜನವನ್ನು ಸಿದ್ಧಮಾಡುತ್ತಿದ್ದರು.
16 ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕವನ್ನು ಆಚರಿಸುವುದಕ್ಕೂ, ಯೆಹೋವ ದೇವರ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ, ಅದೇ ಸಮಯದಲ್ಲಿ ಯೆಹೋವ ದೇವರ ಸೇವೆಯು ಸಿದ್ಧವಾಯಿತು.
ಹೀಗೆಯೇ ಅರಸನಾದ ಯೋಷೀಯನ ಆಜ್ಞೆಯ ಪ್ರಕಾರ ಪಸ್ಕವನ್ನು ಆಚರಿಸುವುದಕ್ಕೂ, ಯೆಹೋವ ದೇವರ ಬಲಿಪೀಠದ ಮೇಲೆ ದಹನಬಲಿಗಳನ್ನು ಅರ್ಪಿಸುವುದಕ್ಕೂ, ಅದೇ ಸಮಯದಲ್ಲಿ ಯೆಹೋವ ದೇವರ ಸೇವೆಯು ಸಿದ್ಧವಾಯಿತು.
17 ಸಿದ್ಧವಾಗಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕವನ್ನು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನೂ ಏಳು ದಿವಸ ಆಚರಿಸಿದರು.
ಸಿದ್ಧವಾಗಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕವನ್ನು ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನೂ ಏಳು ದಿವಸ ಆಚರಿಸಿದರು.
18 ಪ್ರವಾದಿಯಾದ ಸಮುಯೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ. ಇಸ್ರಾಯೇಲಿನ ಸಮಸ್ತ ಅರಸರಲ್ಲಿ ಯೋಷೀಯನೂ, ಯಾಜಕರೂ, ಲೇವಿಯರೂ, ಸಿದ್ಧವಾಗಿದ್ದ ಯೆಹೂದ ಹಾಗೂ ಇಸ್ರಾಯೇಲರೆಲ್ಲರೂ, ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
ಪ್ರವಾದಿಯಾದ ಸಮುಯೇಲನ ದಿವಸಗಳು ಮೊದಲುಗೊಂಡು ಇಸ್ರಾಯೇಲಿನಲ್ಲಿ ಇಂಥಾ ಪಸ್ಕವನ್ನು ಆಚರಿಸಿರಲಿಲ್ಲ. ಇಸ್ರಾಯೇಲಿನ ಸಮಸ್ತ ಅರಸರಲ್ಲಿ ಯೋಷೀಯನೂ, ಯಾಜಕರೂ, ಲೇವಿಯರೂ, ಸಿದ್ಧವಾಗಿದ್ದ ಯೆಹೂದ ಹಾಗೂ ಇಸ್ರಾಯೇಲರೆಲ್ಲರೂ, ಯೆರೂಸಲೇಮಿನ ನಿವಾಸಿಗಳೂ ಆಚರಿಸಿದ ಪಸ್ಕದ ಹಾಗೆ ಯಾರೂ ಆಚರಿಸಲಿಲ್ಲ.
19 ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಆಚರಿಸಲಾಯಿತು.
ಯೋಷೀಯನ ಆಳ್ವಿಕೆಯ ಹದಿನೆಂಟನೆಯ ವರ್ಷದಲ್ಲಿ ಈ ಪಸ್ಕಹಬ್ಬವನ್ನು ಆಚರಿಸಲಾಯಿತು.
20 ಯೋಷೀಯನು ಮಹಾ ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ಅರಸ ನೆಕೋ ಎಂಬವನು ಯುದ್ಧಮಾಡುವುದಕ್ಕಾಗಿ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದನು.
ಯೋಷೀಯನು ಮಹಾ ದೇವಾಲಯದ ವಿಷಯದಲ್ಲಿ ಈ ಎಲ್ಲಾ ವ್ಯವಸ್ಥೆಯನ್ನು ಮಾಡಿದ ನಂತರ, ಈಜಿಪ್ಟಿನ ಅರಸ ನೆಕೋ ಎಂಬವನು ಯುದ್ಧಮಾಡುವುದಕ್ಕಾಗಿ ಯೂಫ್ರೇಟೀಸ್ ನದಿಯ ತೀರದಲ್ಲಿದ್ದ ಕರ್ಕೆಮೀಷಿಗೆ ಬಂದನು. ಯೋಷೀಯನು ಅವನನ್ನು ಯುದ್ಧದಲ್ಲಿ ಎದುರಿಸಲು ಹೋದನು.
21 ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ, “ಯೆಹೂದದ ಅರಸನೇ, ನನಗೆ ನೀನು ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ. ನಾನು ಯುದ್ಧಮಾಡುವ ವೈರಿಯ ಮೇಲೆಯೇ ದಾಳಿಮಾಡುತ್ತೇನೆ. ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾರೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶಮಾಡದ ಹಾಗೆ ನೀನು ದೇವರ ಮುಂದೆ ಸುಮ್ಮನಿರು.”
ಆದರೆ ಇವನು ಯೋಷೀಯನ ಬಳಿಗೆ ಸೇವಕರನ್ನು ಕಳುಹಿಸಿ, “ಯೆಹೂದದ ಅರಸನೇ, ನನಗೆ ನೀನು ಏನು? ಈ ಹೊತ್ತು ನಿನ್ನ ಮೇಲೆ ಅಲ್ಲ. ನಾನು ಯುದ್ಧಮಾಡುವ ವೈರಿಯ ಮೇಲೆಯೇ ದಾಳಿಮಾಡುತ್ತೇನೆ. ತ್ವರೆಮಾಡು ಎಂದು ದೇವರು ನನಗೆ ಹೇಳಿದ್ದಾರೆ. ನನ್ನ ಸಂಗಡ ಇರುವ ದೇವರು ನಿನ್ನನ್ನು ನಾಶಮಾಡದ ಹಾಗೆ ನೀನು ದೇವರ ಮುಂದೆ ಸುಮ್ಮನಿರು.”
22 ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು.
ಆದಾಗ್ಯೂ ಯೋಷೀಯನು ತನ್ನ ಮುಖವನ್ನು ಅವನ ಕಡೆಯಿಂದ ತಿರುಗಿಸದೆ, ಅವನ ಸಂಗಡ ಯುದ್ಧಮಾಡಲು ತನ್ನ ವೇಷ ಮರೆಸಿಕೊಂಡು ಹೋದನು. ಯೋಷೀಯನು ದೇವರ ಬಾಯಿಂದ ಬಂದ ನೆಕೋ ಎಂಬವನ ಮಾತುಗಳನ್ನು ಕೇಳದೆ ಮೆಗಿದ್ದೋ ತಗ್ಗಿನಲ್ಲಿ ಯುದ್ಧಮಾಡಲು ಬಂದನು.
23 ಆಗ ಬಿಲ್ಲುಗಾರರು ಅರಸನಾದ ಯೋಷೀಯನ ಮೇಲೆ ಬಾಣವನ್ನು ಎಸೆದರು. ಅರಸನು ತನ್ನ ಸೇವಕರಿಗೆ, “ನನ್ನನ್ನು ಆಚೆಗೆ ಒಯ್ಯಿರಿ, ಏಕೆಂದರೆ ಬಹು ಗಾಯಪಟ್ಟಿದ್ದೇನೆ,” ಎಂದನು.
ಆಗ ಬಿಲ್ಲುಗಾರರು ಅರಸನಾದ ಯೋಷೀಯನ ಮೇಲೆ ಬಾಣವನ್ನು ಎಸೆದರು. ಅರಸನು ತನ್ನ ಸೇವಕರಿಗೆ, “ನನ್ನನ್ನು ಆಚೆಗೆ ಒಯ್ಯಿರಿ, ಏಕೆಂದರೆ ಬಹು ಗಾಯಪಟ್ಟಿದ್ದೇನೆ,” ಎಂದನು.
24 ಆದ್ದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು, ಅವನಿಗಿದ್ದ ಎರಡನೆಯ ರಥದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಮರಣ ಹೊಂದಲು, ಅವನ ಶವವನ್ನು ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಸಮಸ್ತ ಯೆಹೂದ ಮತ್ತು ಯೆರೂಸಲೇಮಿನವರು ಯೋಷೀಯನಿಗೋಸ್ಕರ ದುಃಖಪಟ್ಟರು.
ಆದ್ದರಿಂದ ಅವನ ಸೇವಕರು ಆ ರಥದೊಳಗಿಂದ ಅವನನ್ನು ತೆಗೆದುಕೊಂಡು, ಅವನಿಗಿದ್ದ ಎರಡನೆಯ ರಥದಲ್ಲಿ ಅವನನ್ನು ಇರಿಸಿ ಯೆರೂಸಲೇಮಿಗೆ ತಂದರು. ಅವನು ಅಲ್ಲಿ ಮರಣ ಹೊಂದಲು, ಅವನ ಶವವನ್ನು ಅವನ ಪಿತೃಗಳ ಸ್ಮಶಾನದಲ್ಲಿ ಸಮಾಧಿಮಾಡಿದರು. ಸಮಸ್ತ ಯೆಹೂದ ಮತ್ತು ಯೆರೂಸಲೇಮಿನವರು ಯೋಷೀಯನಿಗೋಸ್ಕರ ದುಃಖಪಟ್ಟರು.
25 ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.
ಯೆರೆಮೀಯನು ಯೋಷೀಯನಿಗೋಸ್ಕರ ದುಃಖ ಗೀತವನ್ನು ಬರೆದನು. ಹಾಡುಗಾರರೂ, ಹಾಡುಗಾರ್ತಿಯರೂ ಯೋಷೀಯನನ್ನು ಇದುವರೆಗೂ ತಮ್ಮ ಗೋಳಾಟ ಪದ್ಯಗಳಲ್ಲಿ ಸ್ಮರಿಸಿಕೊಳ್ಳುತ್ತಾರೆ. ಇದು ಇಸ್ರಾಯೇಲಿನಲ್ಲಿ ಸಂಪ್ರದಾಯವಾಯಿತು ಮತ್ತು ಈ ಗೀತೆಗಳು ಪ್ರಲಾಪಗಳಲ್ಲಿ ಬರೆದಿರುತ್ತವೆ.
26 ಯೋಷೀಯನ ಮಿಕ್ಕಾದ ಕ್ರಿಯೆಗಳು ಯೆಹೋವ ದೇವರ ನಿಯಮದಲ್ಲಿ ಬರೆದಿರುವ ಪ್ರಕಾರ, ಅವನು ಮಾಡಿದ ಭಕ್ತಿಕಾರ್ಯಗಳೂ,
ಯೋಷೀಯನ ಮಿಕ್ಕಾದ ಕ್ರಿಯೆಗಳು ಯೆಹೋವ ದೇವರ ನಿಯಮದಲ್ಲಿ ಬರೆದಿರುವ ಪ್ರಕಾರ, ಅವನು ಮಾಡಿದ ಭಕ್ತಿಕಾರ್ಯಗಳೂ,
27 ಅವನ ಕ್ರಿಯೆಗಳೂ, ಮೊದಲನೆಯವುಗಳೂ, ಕಡೆಯವುಗಳೂ ಇಸ್ರಾಯೇಲ್ ಯೆಹೂದದ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ.
ಅವನ ಕ್ರಿಯೆಗಳೂ, ಮೊದಲನೆಯವುಗಳೂ, ಕಡೆಯವುಗಳೂ ಇಸ್ರಾಯೇಲ್ ಯೆಹೂದದ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ.