< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >
1 ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ, ಬೆಂಕಿಯು ಆಕಾಶದಿಂದ ಇಳಿದು ದಹನಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿತು.
१शलमोनाची प्रार्थना संपल्याबरोबर स्वर्गातून अग्नी खाली उतरला आणि त्याने होमबली आणि यज्ञार्पणे भस्मसात केली. परमेश्वराच्या लखलखीत तेजाने मंदिर भरुन गेले.
2 ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿದ್ದರಿಂದ ಯಾಜಕರು ಆಲಯದಲ್ಲಿ ಹೋಗಲಾರದೆ ಇದ್ದರು.
२त्या तेजाने दिपलेल्या याजकांनाही परमेश्वराच्या मंदिरात जाता येईना.
3 ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”
३सरळ स्वर्गातून अग्नी खाली येणे आणि परमेश्वराचे तेज मंदिरावर पसरणे या गोष्टी इस्राएलाच्या समस्त लोकांनी पाहिल्या. तेव्हा त्यांनी जमिनीपर्यंत लवून नमन केले, परमेश्वरास धन्यवाद दिले आणि ते म्हणाले, “परमेश्वर चांगला आहे त्याची कृपा सर्वकाळ राहते.”
4 ಆಗ ಅರಸನೂ, ಸಮಸ್ತ ಜನರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು.
४शलमोनाने आणि सर्व इस्राएल लोकांनी परमेश्वरापुढे यज्ञ केले.
5 ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.
५राजा शलमोनाने बावीस हजार बैल आणि एक लाख वीस हजार मेंढरे यांचा यज्ञ केला. अशा प्रकारे लोकांनी व राजाने देवाच्या घरा साठी समर्पण केले.
6 ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.
६याजक आपल्या कामाला सिध्द झाले. परमेश्वराच्या भजनाची वाद्ये घेऊन लेवीही उभे राहिले. राजा दाविदाने ही वाद्ये परमेश्वराच्या स्तवनासाठी करून घेतली होती. “परमेश्वराचे स्तवन करा कारण त्याची कृपा सनातन आहे” असे याजक आणि लेवी गात होते. लेवीच्या समोर उभे राहून याजक कर्णे वाजवत होते. सर्व इस्राएल लोक तिथे उभे होते.
7 ಸೊಲೊಮೋನನು ಮಾಡಿಸಿದ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಯ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಸೊಲೊಮೋನನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆಮಾಡಿ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
७परमेश्वराच्या मंदिरासमोरचे मधले दालन शलमोनाने पवित्र केले. या जागी त्याने होमार्पणे आणि शांत्यर्पणांची वपा वाहिली. होमार्पणे, अन्नार्पणे आणि वपा यांचे प्रमाण एवढे प्रचंड होते की पितळी वेदीवर ते सर्व मावेना म्हणून मधले दालन त्याने वापरले.
8 ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ಅವನ ಸಂಗಡ ಏಳು ದಿವಸ ಹಬ್ಬವನ್ನು ಮಾಡಿದರು.
८शलमोन आणि इस्राएल लोक यांनी सात दिवस हा सण साजरा केला. हमाथच्या वेशीपासून ते मिसरच्या झऱ्या पर्यंतच्या भागातले सगळे इस्राएल लोक इथे आल्यामुळे शलमोनबरोबरचा जमाव खूपच मोठा होता.
9 ಎಂಟನೆಯ ದಿನದಲ್ಲಿ ಪರಿಶುದ್ಧ ಸಮೂಹವನ್ನು ನಡೆಸಿದರು. ಏಕೆಂದರೆ ಏಳು ದಿವಸ ಬಲಿಪೀಠದ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿವಸ ಹಬ್ಬವನ್ನು ಆಚರಿಸಿದರು.
९आठव्या दिवशी त्यांनी पवित्र सभा घेतली कारण त्या आधी सात दिवस त्यांनी सण साजरा केला होता व समर्पणे सात दिवस वेदीवर ठेवली होती, ती फक्त परमेश्वराच्या उपासनेसाठी वापरायची होती. सात दिवस त्यांनी सण साजरा केला.
10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.
१०सातव्या महिन्याच्या तेविसाव्या दिवशी शलमोनाने लोकांस घरोघरी परतायला सांगितले. दावीद, शलमोन आणि इस्राएल लोक यांच्यावर परमेश्वराने कृपा केल्यामुळे लोक आनंदी झाले होते. त्यांची अंत: करणे आनंदाने भरुन गेली होती.
11 ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದನು. ಅವನು ಯೆಹೋವ ದೇವರ ಆಲಯದಲ್ಲಿಯೂ, ತನ್ನ ಅರಮನೆಯಲ್ಲಿಯೂ ಮಾಡಬೇಕಾದ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸುವಲ್ಲಿ ಯಶಸ್ವಿಯಾದನು.
११परमेश्वराचे मंदिर आणि राजगृह बांधण्याचे काम शलमोनाने पार पाडले. परमेश्वराचे मंदिर आणि आपले निवासस्थान यांच्याबाबतीत योजलेल्या सर्व गोष्टी त्याने यशस्वीपणे पूर्ण केल्या.
12 ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.
१२नंतर एकदा रात्री परमेश्वराने शलमोनाला दर्शन दिले. तो शलमोनाला म्हणाला, “शलमोना तुझी प्रार्थना मी ऐकली आहे. हे स्थळ यज्ञगृह म्हणून मी निवडले आहे.
13 “ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,
१३कधी जर पर्जन्यवृष्टी होऊ नये म्हणून मी आकाशमार्ग बंद केला, धान्य फस्त करायला टोळधाड पाठवली किंवा माझ्या लोकांमध्ये रोगाराईचा प्रसार केला
14 ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.
१४आणि अशावेळी लोकांनी नम्र होऊन माझा धावा करून माझ्या दर्शनाची इच्छा बाळगली, दुराचाराचा त्याग केला तर मी स्वर्गातून त्यांच्या हाकेला उत्तर देईन. त्यांना त्यांच्या पापाची क्षमा करेन आणि त्यांची भूमी संकटमुक्त करीन.
15 ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವುವು, ನನ್ನ ಕಿವಿಗಳು ಆಲೈಸುತ್ತಿರುವುವು.
१५आता माझी दृष्टी याठिकाणी वळलेली आहे. इथे होणाऱ्या प्रार्थना ऐकायला माझे कान उत्सुक आहेत.
16 ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.
१६हे मंदिर मी माझे म्हणून निवडले आहे माझे नाव येथे सदासर्वकाळ रहावे म्हणून मी हे स्थान पवित्र केले आहे माझी दृष्टी आणि माझे चित्त नेहमी या मंदिराकडे लागलेले असेल.
17 “ನೀನು ನಿನ್ನ ತಂದೆಯಾದ ದಾವೀದನಂತೆ, ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,
१७शलमोना, तुझे पिता दावीद यांच्या प्रमाणेच तू माझ्याशी वागलास, माझ्या आज्ञांचे पालन केलेस, माझे विधी आणि नियम पाळलेस,
18 ‘ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲ,’ ಎಂದು ನಾನು ನಿನ್ನ ತಂದೆ ದಾವೀದನ ಸಂಗಡ ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
१८तर मी तुला समर्थ राजा बनवील आणि तुझे राज्य महान होईल. तुझे पिता दावीद यांना मी तसे वचन दिले आहे. त्यांना मी म्हटले होते, ‘दावीद तुझ्या घराण्यातील पुरुषच इस्राएलाच्या राजपदावर आरुढ होईल.’
19 “ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ,
१९पण जर माझ्या आज्ञा आणि नियम तू पाळले नाहीस. इतर दैवतांची उपासना व सेवा केलीस,
20 ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.
२०तर मात्र मी दिलेल्या या भूमीतून इस्राएल लोकांस मी हुसकावून लावीन. माझ्या नावाप्रीत्यर्थ असलेले हे पवित्र मंदिर मी सोडून जाईन. इतकेच नव्हे तर त्यांना मी देशामध्ये निंदेचा विषय करीन.
21 ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು, ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.
२१एकेकाळी पूज्य मानल्या गेलेल्या या मंदिरावरुन जाणाऱ्या येणाऱ्या प्रत्येकाला आता आश्चर्य वाटेल. ते लोक म्हणतील, ‘हा प्रदेश आणि हे मंदिर यांची अशी अवस्था परमेश्वराने का केली बरे?’
22 ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ, ಅವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’” ಎಂದರು.
२२तेव्हा त्यांना इतर लोक सांगतील, ‘कारण आपल्या पूर्वजांचा देव परमेश्वर याचे या इस्राएल लोकांनी ऐकले नाही. या लोकांस या परमेश्वरानेच मिसरातून बाहेर आणले. तरी हे इतर दैवतांच्या भजनी लागले. त्यांनी त्यांची उपासना व सेवा केली. त्यांनी मूर्तीपूजा सुरु केली. म्हणून इस्राएल लोकांवर परमेश्वराने हे अरिष्ट आणले.’”