< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >

1 ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ, ಬೆಂಕಿಯು ಆಕಾಶದಿಂದ ಇಳಿದು ದಹನಬಲಿಗಳನ್ನೆಲ್ಲಾ ದಹಿಸಿಬಿಟ್ಟಿತು. ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿತು.
సొలొమోను తన ప్రార్థన ముగించగానే ఆకాశం నుండి అగ్ని దిగి దహనబలులనూ ఇతర బలులనూ దహించివేసింది. యెహోవా తేజస్సు మందిరాన్ని పూర్తిగా నింపింది.
2 ಯೆಹೋವ ದೇವರ ಮಹಿಮೆಯು ಆಲಯವನ್ನು ತುಂಬಿದ್ದರಿಂದ ಯಾಜಕರು ಆಲಯದಲ್ಲಿ ಹೋಗಲಾರದೆ ಇದ್ದರು.
యెహోవా తేజస్సుతో మందిరం నిండిపోవడం వలన యాజకులు అందులో ప్రవేశించలేక పోయారు.
3 ಇಸ್ರಾಯೇಲರೆಲ್ಲರೂ ಬೆಂಕಿಯು ಇಳಿದದ್ದನ್ನೂ, ಆಲಯದ ಮೇಲೆ ಇರುವ ಯೆಹೋವ ದೇವರ ಮಹಿಮೆಯನ್ನೂ ಕಂಡಾಗ, ಅವರು ನೆಲಕ್ಕೆ ತಮ್ಮ ಮುಖಗಳನ್ನು ಬಾಗಿ, ನೆಲಗಟ್ಟಿನ ಮೇಲೆ ಮೊಣಕಾಲೂರಿ ಆರಾಧಿಸುತ್ತಾ, ಯೆಹೋವ ದೇವರನ್ನು ಕೊಂಡಾಡಿ ಹೇಳಿದ್ದೇನೆಂದರೆ, “ಯೆಹೋವ ದೇವರು ಒಳ್ಳೆಯವರು, ಅವರ ಪ್ರೀತಿಯು ಯುಗಯುಗಕ್ಕೂ ಇರುವುದು.”
అగ్నీ యెహోవా తేజస్సూ మందిరం పైకి దిగటం చూసి ఇశ్రాయేలీయులంతా సాష్టాంగ నమస్కారం చేసి “యెహోవా దయ గలవాడు. ఆయన కృప నిత్యమూ నిలుస్తుంది” అంటూ ఆయనను ఆరాధించి స్తుతించారు.
4 ಆಗ ಅರಸನೂ, ಸಮಸ್ತ ಜನರೂ ಯೆಹೋವ ದೇವರ ಮುಂದೆ ಬಲಿಗಳನ್ನು ಅರ್ಪಿಸಿದರು.
రాజూ, ప్రజలూ కలిసి యెహోవా ముందు బలులు అర్పించారు.
5 ಅರಸನಾದ ಸೊಲೊಮೋನನು 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಬಲಿಯಾಗಿ ಅರ್ಪಿಸಿದನು. ಹೀಗೆಯೇ ಅರಸನೂ, ಸಮಸ್ತ ಜನರೂ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.
సొలొమోను రాజు 22,000 పశువులనూ 1, 20,000 గొర్రెలనూ బలులుగా అర్పించాడు. రాజు, ప్రజలు, అందరూ కలిసి దేవుని మందిరాన్ని ప్రతిష్టించారు.
6 ಯಾಜಕರು ತಮ್ಮ ತಮ್ಮ ಸೇವೆಯಲ್ಲಿ ನಿಂತರು. ಹಾಗೆಯೇ ಲೇವಿಯರು ಯೆಹೋವ ದೇವರ ಗೀತವಾದ್ಯಗಳನ್ನು ಹಿಡಿದುಕೊಂಡು ನಿಂತರು. ಅರಸನಾದ ದಾವೀದನು ಯೆಹೋವ ದೇವರನ್ನು ಕೊಂಡಾಡುವುದಕ್ಕೆ ಇವುಗಳನ್ನು ಮಾಡಿಸಿದ್ದನು. “ಯೆಹೋವ ದೇವರ ಪ್ರೀತಿಯು ಯುಗಯುಗಕ್ಕೂ ಇರುವುದು,” ಎಂಬುದಾಗಿ ಆ ವಾದ್ಯಗಳೊಡನೆ ಭಜಿಸುತ್ತಿದ್ದರು. ಯಾಜಕರು ಲೇವಿಯರ ಮುಂದೆ ನಿಂತು ತುತೂರಿಗಳನ್ನು ಊದುತ್ತಿದ್ದರು. ಸಮಸ್ತ ಇಸ್ರಾಯೇಲರೂ ನಿಂತಿದ್ದರು.
యాజకులు తమ తమ సేవా స్థలాల్లో నిలిచారు. లేవీయులు “యెహోవా కృప నిత్యమూ నిలుస్తుంది” అంటూ దేవుణ్ణి స్తుతించడానికి దావీదు ఏర్పాటు చేసిన యెహోవా గీతాలు పాడుతూ, వాయిద్యాలు వాయిస్తూ ఉన్నారు. యాజకులు వారికి ఎదురుగా నిలబడి బూరలు ఊదుతూ ఉంటే, ఇశ్రాయేలు ప్రజలంతా నిలబడి ఉన్నారు.
7 ಸೊಲೊಮೋನನು ಮಾಡಿಸಿದ ಕಂಚಿನ ಬಲಿಪೀಠದ ಮೇಲೆ ದಹನಬಲಿಗಳನ್ನೂ, ಧಾನ್ಯ ಸಮರ್ಪಣೆಯ ಕೊಬ್ಬನ್ನೂ ಇಡುವುದಕ್ಕೆ ಸ್ಥಳ ಸಾಲದೆ ಇದ್ದುದರಿಂದ, ಸೊಲೊಮೋನನು ಯೆಹೋವ ದೇವರ ಆಲಯದ ಮುಂದಿರುವ ಮಧ್ಯದ ಅಂಗಳವನ್ನು ಪ್ರತಿಷ್ಠೆಮಾಡಿ, ಅಲ್ಲಿ ಅವನು ದಹನಬಲಿಗಳನ್ನೂ, ಸಮಾಧಾನದ ಬಲಿಗಳ ಕೊಬ್ಬನ್ನೂ ಅರ್ಪಿಸಿದನು.
సొలొమోను తాను చేయించిన ఇత్తడి బలిపీఠం దహనబలులకూ నైవేద్యాలకూ కొవ్వుకూ సరిపోక పోవడం వలన యెహోవా మందిరం ముందు ఉన్న మధ్య ఆవరణాన్ని ప్రతిష్ఠించి, అక్కడ దహనబలులనూ శాంతి బలిపశువుల కొవ్వునూ అర్పించాడు.
8 ಅದೇ ಕಾಲದಲ್ಲಿ ಸೊಲೊಮೋನನೂ, ಅವನ ಸಂಗಡ ಲೆಬೊ ಹಮಾತಿನ ಪ್ರದೇಶ ಮೊದಲುಗೊಂಡು ಈಜಿಪ್ಟಿನ ನದಿಯವರೆಗೆ ಇರುವ ಮಹಾ ಜನಾಂಗವಾಗಿ ಕೂಡಿಬಂದಿದ್ದ ಸಮಸ್ತ ಇಸ್ರಾಯೇಲರೂ ಅವನ ಸಂಗಡ ಏಳು ದಿವಸ ಹಬ್ಬವನ್ನು ಮಾಡಿದರು.
సొలొమోను, అతనితో కూడా హమాతు సరిహద్దు నుండి ఐగుప్తు నది వరకూ ఉన్న దేశం నుండి గొప్ప సమూహంగా వచ్చిన ఇశ్రాయేలీయులందరూ ఏడు రోజులు పండగ ఆచరించారు.
9 ಎಂಟನೆಯ ದಿನದಲ್ಲಿ ಪರಿಶುದ್ಧ ಸಮೂಹವನ್ನು ನಡೆಸಿದರು. ಏಕೆಂದರೆ ಏಳು ದಿವಸ ಬಲಿಪೀಠದ ಪ್ರತಿಷ್ಠೆಯನ್ನು ಮತ್ತು ಇನ್ನು ಏಳು ದಿವಸ ಹಬ್ಬವನ್ನು ಆಚರಿಸಿದರು.
ఎనిమిదో రోజు వారు పండగ ముగించారు. ఏడు రోజులూ బలిపీఠాన్ని ప్రతిష్టిస్తూ పండగ ఆచరించారు.
10 ಏಳನೆಯ ತಿಂಗಳಿನ ಇಪ್ಪತ್ತಮೂರನೆಯ ದಿವಸದಲ್ಲಿ ಅವನು ಜನರಿಗೆ ಅವರವರ ಡೇರೆಗಳಿಗೆ ಹೋಗುವುದಕ್ಕೆ ಅಪ್ಪಣೆಕೊಡಲು, ಆಗ ಅವರು ಯೆಹೋವ ದೇವರು ದಾವೀದನಿಗೂ, ಸೊಲೊಮೋನನಿಗೂ, ತನ್ನ ಜನರಾದ ಇಸ್ರಾಯೇಲರಿಗೂ ಮಾಡಿದ ಉಪಕಾರದ ನಿಮಿತ್ತ ಅವರು ಹೃದಯದಲ್ಲಿ ಆನಂದಭರಿತರಾಗಿ ಸಂತೋಷಪಡುತ್ತಾ ಹೋದರು.
౧౦ఏడవ నెల ఇరవై మూడో రోజున సొలొమోను దావీదుకు, తనకు, తన ప్రజలు ఇశ్రాయేలీయులకు యెహోవా చేసిన మేలుల విషయంలో సంతోషిస్తూ, మనసులో ఆనందపడుతూ, ఎవరి గుడారాలకు వారిని వెళ్ళమని ప్రజలకి అనుమతినిచ్చి పంపేశాడు.
11 ಸೊಲೊಮೋನನು ಯೆಹೋವ ದೇವರ ಆಲಯವನ್ನೂ, ಅರಮನೆಯನ್ನೂ ಕಟ್ಟಿಸಿ ತೀರಿಸಿದನು. ಅವನು ಯೆಹೋವ ದೇವರ ಆಲಯದಲ್ಲಿಯೂ, ತನ್ನ ಅರಮನೆಯಲ್ಲಿಯೂ ಮಾಡಬೇಕಾದ ತನ್ನ ಮನಸ್ಸಿನಲ್ಲಿ ಇದ್ದ ಯೋಜನೆಯನ್ನು ಈಡೇರಿಸುವಲ್ಲಿ ಯಶಸ್ವಿಯಾದನು.
౧౧ఆ విధంగా సొలొమోను యెహోవా మందిరాన్ని, రాజనగరాన్ని కట్టించి, యెహోవా మందిరంలో, తన నగరంలో చేయాలని తాను ఆలోచించిన దానంతటినీ ఏ లోపమూ లేకుండా నెరవేర్చి పని ముగించాడు.
12 ಯೆಹೋವ ದೇವರು ರಾತ್ರಿಯಲ್ಲಿ ಸೊಲೊಮೋನನಿಗೆ ಪ್ರತ್ಯಕ್ಷರಾಗಿ ಅವನಿಗೆ, “ನಾನು ನಿನ್ನ ಪ್ರಾರ್ಥನೆಯನ್ನು ಕೇಳಿ ಬಲಿಯನ್ನು ಅರ್ಪಿಸುವ ಆಲಯವಾಗಿ ನನಗೆ ಈ ಸ್ಥಳವನ್ನು ಆಯ್ದುಕೊಂಡಿದ್ದೇನೆ.
౧౨అప్పుడు యెహోవా రాత్రి వేళ సొలొమోనుకు ప్రత్యక్షమై ఈ విధంగా చెప్పాడు “నేను నీ విన్నపాన్ని అంగీకరించి ఈ స్థలాన్ని నాకు బలులు అర్పించే మందిరంగా కోరుకున్నాను.
13 “ಮಳೆಯಿಲ್ಲದಂತೆ ನಾನು ಆಕಾಶವನ್ನು ಮುಚ್ಚಿದರೂ ದೇಶವನ್ನು ತಿಂದುಬಿಡಲು ಮಿಡತೆಗಳಿಗೆ ಆಜ್ಞಾಪಿಸಿದರೂ, ಇಲ್ಲವೆ ನನ್ನ ಜನರ ಮಧ್ಯದಲ್ಲಿ ಘೋರ ವ್ಯಾಧಿಯನ್ನು ಕಳುಹಿಸಿದರೂ,
౧౩నేను ఆకాశాన్ని మూసివేసి వాన కురవకుండా చేసినప్పుడూ, దేశాన్ని నాశనం చేయడానికి మిడతలకు సెలవిచ్చినప్పుడూ, నా ప్రజల మీదికి తెగులు రప్పించినప్పుడూ,
14 ನನ್ನ ಹೆಸರಿನಿಂದ ಕರೆಯಲಾದ ನನ್ನ ಜನರು ತಮ್ಮನ್ನು ತಗ್ಗಿಸಿಕೊಂಡು ಪ್ರಾರ್ಥನೆಮಾಡಿ, ನನ್ನನ್ನು ಹುಡುಕಿ ತಮ್ಮ ದುರ್ಮಾರ್ಗಗಳಿಂದ ತಿರುಗಿದರೆ, ಆಗ ನಾನು ಪರಲೋಕದಿಂದ ಕೇಳಿ ಅವರ ಪಾಪವನ್ನು ಮನ್ನಿಸಿ, ಅವರ ದೇಶವನ್ನು ಗುಣ ಮಾಡುವೆನು.
౧౪నా పేరు పెట్టుకున్న నా ప్రజలు తమని తాము తగ్గించుకుని, ప్రార్థన చేసి, నన్ను వెతికి, తమ దుష్టత్వాన్ని విడిచి నన్ను వేడుకుంటే, నేను పరలోకం నుండి వారి ప్రార్థన విని, వారి పాపాన్ని క్షమించి, వారి దేశాన్ని స్వస్థపరుస్తాను.
15 ಈಗ ಈ ಸ್ಥಳದ ಪ್ರಾರ್ಥನೆಗೆ ನನ್ನ ಕಣ್ಣುಗಳು ತೆರೆದಿರುವುವು, ನನ್ನ ಕಿವಿಗಳು ಆಲೈಸುತ್ತಿರುವುವು.
౧౫ఈ స్థలం లో చేసే ప్రార్థన మీద నా దృష్టి ఉంటుంది, నా చెవులు దాన్ని వింటాయి.
16 ನನ್ನ ನಾಮವು ಯುಗಯುಗಾಂತರಕ್ಕೂ ಅಲ್ಲಿರುವ ಹಾಗೆ ಈ ಆಲಯವನ್ನು ಆಯ್ದುಕೊಂಡು ಪರಿಶುದ್ಧ ಮಾಡಿದ್ದೇನೆ. ನನ್ನ ಕಣ್ಣುಗಳೂ, ನನ್ನ ಹೃದಯವೂ ನಿತ್ಯವಾಗಿ ಅಲ್ಲಿರುವುವು.
౧౬నా పేరు ఈ మందిరానికి నిత్యమూ ఉండేలా నేను దాన్ని కోరుకుని పరిశుద్ధపరిచాను. నా కనులు, నా మనస్సు నిత్యం దాని మీద ఉంటాయి.
17 “ನೀನು ನಿನ್ನ ತಂದೆಯಾದ ದಾವೀದನಂತೆ, ನಾನು ನಿನಗೆ ಆಜ್ಞಾಪಿಸಿದ ನನ್ನ ಕಟ್ಟಳೆಗಳನ್ನೂ ನ್ಯಾಯಗಳನ್ನೂ ನಿಷ್ಠೆಯಿಂದ ಕೈಗೊಂಡು ನಡೆದರೆ,
౧౭నీ తండ్రి దావీదు నడుచుకున్నట్టు నువ్వు కూడా నాకు అనుకూలంగా ప్రవర్తించి, నేను నీకాజ్ఞాపించిన దానంతటినీ జరిగించి, నా కట్టడలనీ నా న్యాయవిధులనీ అనుసరిస్తే,
18 ‘ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲ,’ ಎಂದು ನಾನು ನಿನ್ನ ತಂದೆ ದಾವೀದನ ಸಂಗಡ ಮಾಡಿದ ಒಡಂಬಡಿಕೆಯ ಪ್ರಕಾರ ನಿನ್ನ ರಾಜ್ಯದ ಸಿಂಹಾಸನವನ್ನು ಸ್ಥಿರಪಡಿಸುತ್ತೇನೆ.
౧౮ఇశ్రాయేలీయులను పాలించడానికి నీ సంతతి వాడు ఒకడు నీకుండకుండా పోడు, అని నేను నీ తండ్రి దావీదుతో చేసిన నిబంధనను అనుసరించి నేను నీ రాజ్య సింహాసనాన్ని స్థిరపరుస్తాను.
19 “ಆದರೆ ನೀವು, ನಾನು ನಿಮಗೆ ಕೊಟ್ಟಿರುವ ಆಜ್ಞೆಗಳನ್ನೂ ಕಟ್ಟಳೆಗಳನ್ನೂ ತೊರೆದುಬಿಟ್ಟು, ನನ್ನಿಂದ ದೂರಹೋಗಿ ಅನ್ಯದೇವರುಗಳನ್ನು ಸೇವಿಸಿ ಅವುಗಳಿಗೆ ಅಡ್ಡಬಿದ್ದರೆ,
౧౯అయితే మీరు దారి తొలగి, నేను మీకు నియమించిన కట్టడలనూ ఆజ్ఞలనూ విడిచిపెట్టి, ఇతర దేవుళ్ళను అనుసరించి వాటిని పూజిస్తే,
20 ಆಗ ನಾನು ಇಸ್ರಾಯೇಲಿಗೆ ಕೊಟ್ಟ ನನ್ನ ದೇಶದೊಳಗಿಂದ ಅವರನ್ನು ಕಿತ್ತುಹಾಕಿ, ನನ್ನ ನಾಮಕ್ಕೋಸ್ಕರ ಪ್ರತಿಷ್ಠಿಸಿಕೊಂಡ ಈ ಆಲಯವನ್ನು ನಾನು ನಿರಾಕರಿಸುವೆನು. ಅದನ್ನು ಸಮಸ್ತ ಜನರಲ್ಲಿ ಗಾದೆಯಾಗಿಯೂ, ಅಪಹಾಸ್ಯಕ್ಕೆ ಆಸ್ಪದವಾಗುವಂತೆ ಮಾಡುವೆನು.
౨౦నేను మీకిచ్చిన నా దేశంలోనుండి మిమ్మల్ని పెళ్ళగించి, నా నామం కోసం నేను పరిశుద్ధపరచిన ఈ మందిరాన్ని నా సన్నిధి నుండి తీసేసి, సమస్త జాతుల్లో దాన్ని సామెతకు, ఎగతాళికీ కారణంగా చేస్తాను.
21 ಇದಲ್ಲದೆ ಉನ್ನತವಾಗಿರುವ ಈ ಆಲಯದ ಮಾರ್ಗವಾಗಿ ಹೋಗುವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು, ‘ಯೆಹೋವ ದೇವರು, ಈ ದೇಶಕ್ಕೂ, ಈ ಆಲಯಕ್ಕೂ ಹೀಗೆ ಏಕೆ ಮಾಡಿದರು?’ ಎಂದು ಕೇಳುವರು.
౨౧అప్పుడు గొప్ప పేరు పొందిన ఈ మందిరం పక్కగా వెళ్ళేవారంతా విస్మయం చెంది, ‘యెహోవా ఈ దేశానికీ మందిరానికీ ఎందుకిలా చేశాడు?’ అని అడుగుతారు.
22 ಅದಕ್ಕೆ ಜನರು, ‘ತಮ್ಮ ತಂದೆಗಳನ್ನು ಈಜಿಪ್ಟ್ ದೇಶದೊಳಗಿಂದ ಬರಮಾಡಿದ ತಮ್ಮ ದೇವರಾದ ಯೆಹೋವ ದೇವರನ್ನು ಬಿಟ್ಟು, ಅನ್ಯದೇವರುಗಳನ್ನು ಹಿಂಬಾಲಿಸಿ, ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ, ಅವರು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಾರೆಂದು ಹೇಳುವರು,’” ಎಂದರು.
౨౨అప్పుడు మనుషులు, ‘ఈ దేశ ప్రజలు తమ పూర్వికులను ఐగుప్తు దేశం నుండి రప్పించిన తమ దేవుడు యెహోవాను విసర్జించి ఇతర దేవుళ్ళను వెంబడించి వాటిని పూజించారు కాబట్టి యెహోవా ఈ విపత్తునంతటినీ వారిమీదకి రప్పించాడు’ అని చెబుతారు.”

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 7 >