< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 1 >

1 ದಾವೀದನ ಮಗ ಸೊಲೊಮೋನನು ತನ್ನ ರಾಜ್ಯದಲ್ಲಿ ಬಲಗೊಂಡನು ಮತ್ತು ಅವನ ದೇವರಾದ ಯೆಹೋವ ದೇವರು ಅವನ ಸಂಗಡ ಇದ್ದು, ಅವನನ್ನು ಉನ್ನತನನ್ನಾಗಿ ಮಾಡಿದರು.
दावीद के पुत्र शलोमोन ने अपने राज्य पर अपने आपको सुरक्षा के साथ मजबूत कर लिया. याहवेह उनके परमेश्वर उनके साथ थे. परमेश्वर ने उन्हें बहुत ही उन्‍नत किया.
2 ಆಗ ಸೊಲೊಮೋನನು ಸಮಸ್ತ ಇಸ್ರಾಯೇಲರ ಶತಾಧಿಪತಿಗಳೊಂದಿಗೂ, ಸಹಸ್ರಾಧಿಪತಿಗಳೊಂದಿಗೂ, ನ್ಯಾಯಾಧಿಪತಿಗಳೊಂದಿಗೂ, ಪ್ರಧಾನರಾದವರೊಂದಿಗೂ, ಸಮಸ್ತ ಇಸ್ರಾಯೇಲರ ಪಿತೃಗಳ ಶ್ರೇಷ್ಠರಾದ ಸಮಸ್ತ ಪ್ರಭುಗಳೊಂದಿಗೂ ಮಾತನಾಡಿದನು.
शलोमोन ने सारे इस्राएल, सहस्रपतियों और शतपतियों, न्यायाध्यक्षों, सारे इस्राएल में हर एक अगुओं और पितरों के प्रधानों को बुलाकर उनसे बातचीत की.
3 ಹೀಗೆ ಅವನೂ, ಅವನ ಸಂಗಡ ಸಮಸ್ತ ಸಮೂಹವೂ ಗಿಬ್ಯೋನಿನಲ್ಲಿರುವ ಉನ್ನತ ಸ್ಥಳಕ್ಕೆ ಹೋದರು. ಯೆಹೋವ ದೇವರ ಸೇವಕನಾದ ಮೋಶೆಯು ಮರುಭೂಮಿಯಲ್ಲಿ ಮಾಡಿದ ದೇವದರ್ಶನ ಗುಡಾರವು ಅಲ್ಲಿತ್ತು.
शलोमोन और उनके साथ यह सभा उठकर गिबयोन के ऊंचे स्थान पर गई, क्योंकि याहवेह के सेवक मोशेह द्वारा बंजर भूमि में बनाया गया परमेश्वर का मिलापवाला तंबू वहीं था.
4 ಆದರೆ ದಾವೀದನು ಯೆಹೋವ ದೇವರ ಮಂಜೂಷವನ್ನು ಕಿರ್ಯತ್ ಯಾರೀಮಿನಿಂದ ತಾನು ಅದಕ್ಕೋಸ್ಕರ ಸಿದ್ಧಮಾಡಿದ ಸ್ಥಳಕ್ಕೆ ತೆಗೆದುಕೊಂಡು ಬಂದಿದ್ದನು. ಅವನು ಯೆರೂಸಲೇಮಿನಲ್ಲಿ ಅದಕ್ಕೋಸ್ಕರ ಗುಡಾರವನ್ನು ಹಾಕಿಸಿದ್ದನು.
हां, दावीद किरयथ-यआरीम से परमेश्वर का संदूक उस विशेष स्थान पर ले आए थे, जो उन्होंने इसी के लिए तैयार किया था, क्योंकि इसके लिए दावीद ने येरूशलेम में खास तंबू खड़ा किया था.
5 ಆದರೆ ಊರಿಯನ ಮಗ, ಹೂರನ ಮೊಮ್ಮಗನಾದ ಬೆಚಲಯೇಲನು ಮಾಡಿದ ಕಂಚಿನ ಬಲಿಪೀಠವು ಗಿಬ್ಯೋನಿನಲ್ಲಿ ಯೆಹೋವ ದೇವರ ಗುಡಾರದ ಮುಂದೆ ಇತ್ತು. ಅಲ್ಲಿ ಸೊಲೊಮೋನನೂ, ಸಭೆಯೂ ದೇವರ ಇಚ್ಛೆಯನ್ನು ವಿಚಾರಿಸಿದರು.
इस समय वह कांसे की वेदी, जिसको उरी के पुत्र, हूर के पोते बसलेल ने बनाया था, याहवेह के मिलनवाले तंबू के सामने ही थी. शलोमोन और सभा ने इससे याहवेह की इच्छा मालूम की.
6 ಆಗ ಸೊಲೊಮೋನನು ಸಭೆಯ ಗುಡಾರದ ಬಳಿಯಲ್ಲಿ ಯೆಹೋವ ದೇವರ ಮುಂದೆ ಇರುವ ಕಂಚಿನ ಪೀಠದ ಬಳಿಗೆ ಹೋಗಿ, ಅದರ ಮೇಲೆ ಸಹಸ್ರ ದಹನಬಲಿಗಳನ್ನು ಅರ್ಪಿಸಿದನು.
शलोमोन कांसे की वेदी के पास याहवेह के सामने आए, जो मिलनवाले तंबू में थी. वहां उस पर उन्होंने एक हज़ार होमबलियां चढ़ाईं.
7 ಅದೇ ರಾತ್ರಿಯಲ್ಲಿ ದೇವರು ಸೊಲೊಮೋನನಿಗೆ ಕಾಣಿಸಿಕೊಂಡು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.
उस रात परमेश्वर शलोमोन पर प्रकट हुए और उनसे कहा, “मुझसे जो चाहो, मांग लो.”
8 ಅದಕ್ಕೆ ಸೊಲೊಮೋನನು ದೇವರಿಗೆ, “ನೀವು ನನ್ನ ತಂದೆ ದಾವೀದನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ, ಅವನಿಗೆ ಬದಲಾಗಿ ನಾನು ಆಳುವಂತೆ ಮಾಡಿದಿರಿ.
शलोमोन ने परमेश्वर से कहा, “मेरे पिता दावीद के साथ आपका व्यवहार बहुत ही करुणा भरा रहा है. अब आपने मुझे उनके स्थान पर राजा बनाया है.
9 ಈಗ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವು ದೃಢವಾಗಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯಾತ ಜನರ ಮೇಲೆ ನನ್ನನ್ನು ಅರಸನನ್ನಾಗಿ ಮಾಡಿದ್ದೀರಿ.
अब, याहवेह परमेश्वर, मेरे पिता दावीद से की गई आपकी प्रतिज्ञा पूरी हो गई है, क्योंकि आपने मुझे ऐसे अनगिनत लोगों पर राजा बनाया है, जो भूमि की धूल के समान अनगिनत हैं.
10 ನಾನು ಈ ಜನರನ್ನು ಪರಿಪಾಲಿಸುವುದಕ್ಕೆ ಜ್ಞಾನವನ್ನೂ, ತಿಳುವಳಿಕೆಯನ್ನೂ ಕೊಡಿರಿ. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.
अब मुझे बुद्धि और ज्ञान दीजिए कि मैं इस प्रजा के सामने आना-जाना कर सकूं, क्योंकि किसमें आपकी इतनी बड़ी प्रजा पर शासन करने की क्षमता है?”
11 ಆಗ ದೇವರು ಸೊಲೊಮೋನನಿಗೆ, “ಇದು ನಿನ್ನ ಹೃದಯದಲ್ಲಿ ಇದ್ದುದರಿಂದಲೂ ನೀನು ಐಶ್ವರ್ಯವನ್ನೂ, ಸ್ಥಿತಿಯನ್ನೂ, ಘನವನ್ನೂ, ನಿನ್ನ ಶತ್ರುಗಳ ಪ್ರಾಣವನ್ನೂ ಕೇಳದೆ ಮತ್ತು ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ, ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ, ಆ ನನ್ನ ಜನರಿಗೆ ನೀನು ನ್ಯಾಯತೀರಿಸುವ ಹಾಗೆ, ಜ್ಞಾನವನ್ನೂ, ತಿಳುವಳಿಕೆಯನ್ನೂ ನೀನು ಕೇಳಿದ್ದರಿಂದಲೂ;
परमेश्वर ने शलोमोन को उत्तर दिया, “इसलिये कि यही तुम्हारे मन इच्छा रही है और तुमने मुझसे न तो धन-संपत्ति, न वैभव, न कीर्ति न अपने शत्रुओं के प्राण और न अपने लिए लंबी उम्र की विनती की है, मगर तुमने अपने लिए बुद्धि और ज्ञान की विनती की है कि तुम मेरी प्रजा का शासन कर सको, जिस पर मैंने तुम्हें राजा बनाया है.
12 ಜ್ಞಾನ ಮತ್ತು ತಿಳುವಳಿಕೆಯನ್ನು ನಿನಗೆ ಕೊಡುತ್ತೇನೆ. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸರಲ್ಲಿ ಯಾರಿಗೂ ಇಲ್ಲದಂಥ ಮತ್ತು ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ, ಆಸ್ತಿಯನ್ನೂ, ಘನವನ್ನೂ ಕೊಡುತ್ತೇನೆ,” ಎಂದರು.
बुद्धि और ज्ञान तुम्हें दिए जा चुके हैं. मैं तुम्हें समृद्धि, धन संपदा और सम्मान भी दूंगा, इतना, जितना तुम्हारे पहले किसी भी राजा ने नहीं पाया और न ही तुम्हारे बाद किसी को मिलेगा.”
13 ತರುವಾಯ ಸೊಲೊಮೋನನು ಗಿಬ್ಯೋನಿನ ಉನ್ನತ ಸ್ಥಳದಲ್ಲಿದ್ದ ದೇವದರ್ಶನ ಗುಡಾರವನ್ನು ಬಿಟ್ಟು, ಯೆರೂಸಲೇಮಿಗೆ ಬಂದು, ಇಸ್ರಾಯೇಲನ್ನು ಆಳಿದನು.
शलोमोन गिबयोन में याहवेह की उपस्थिति के मिलनवाले तंबू से येरूशलेम लौट गए. वहां उन्होंने इस्राएल पर शासन करना शुरू किया.
14 ಇದಲ್ಲದೆ ಸೊಲೊಮೋನನು ರಥಗಳನ್ನೂ, ರಾಹುತರನ್ನೂ ಕೂಡಿಸಿದನು. ಸಾವಿರದ ನಾನೂರು ರಥಗಳು, ಹನ್ನೆರಡು ಸಾವಿರ ಕುದುರೆಯ ರಾಹುತರು ಇದ್ದರು. ಇವುಗಳಲ್ಲಿ ಕೆಲವನ್ನು ಯೆರೂಸಲೇಮಿನಲ್ಲಿ ತನ್ನ ಬಳಿಯಲ್ಲಿಯೇ ಇರಿಸಿದನು, ಉಳಿದವುಗಳನ್ನು ರಥಗಳ ಪಟ್ಟಣಗಳಲ್ಲಿಯೂ ಇರಿಸಿದನು.
शलोमोन ने अब तक एक हज़ार चार सौ रथ, बारह हज़ार घुड़सवार इकट्ठा कर लिए थे. इन सबको उसने रथों के लिए बनाए नगरों और येरूशलेम में राजा के लिए ठहराए गए स्थानों पर रखवा दिया था.
15 ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಬಂಗಾರವನ್ನು ಕಲ್ಲುಗಳಂತೆಯೂ, ದೇವದಾರು ಮರಗಳನ್ನು ತಗ್ಗಿನಲ್ಲಿರುವ ಅತ್ತಿಮರಗಳಂತೆಯೂ ಪರಿಗಣಿಸಲಾಯಿತು.
राजा द्वारा येरूशलेम में चांदी और सोना का मूल्य वैसा ही कर दिया गया था, जैसा पत्थरों का होता है और देवदार की लकड़ी का ऐसा जैसे तराई के गूलर के पेड़ों का.
16 ಇದಲ್ಲದೆ ಸೊಲೊಮೋನನಿಗೆ ಈಜಿಪ್ಟಿನಿಂದಲೂ ಕುವೆಯಿಂದಲೂ ಕುದುರೆಗಳು ಬರುತ್ತಿದ್ದವು. ಅರಸನ ವರ್ತಕರು ಅವುಗಳನ್ನು ಹಿಂಡುಹಿಂಡಾಗಿ ಕೊಂಡುಕೊಂಡು ಬರುತ್ತಿದ್ದರು
शलोमोन घोड़ों का आयात मिस्र और कवे से करते थे. राजा के व्यापारी इन्हें दाम देकर कवे से लाया करते थे.
17 ಹಾಗೆಯೇ ಈಜಿಪ್ಟಿನಿಂದ ಆರುನೂರು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ರಥವನ್ನೂ ನೂರ ಐವತ್ತು ಬೆಳ್ಳಿ ನಾಣ್ಯಗಳ ಕ್ರಯಕ್ಕೆ ಒಂದು ಕುದುರೆಯನ್ನೂ ತರಿಸುತ್ತಿದ್ದರು. ಈ ಪ್ರಕಾರ ಹಿತ್ತಿಯರ ಮತ್ತು ಅರಾಮಿನ ಅರಸುಗಳೆಲ್ಲರು ಇವರ ಮುಖಾಂತರವಾಗಿಯೇ ತರಿಸುತ್ತಿದ್ದರು.
मिस्र से लाए गए एक रथ की कीमत होती थी चांदी के छः सौ सिक्‍के. इसी प्रकार राजा के व्यापारी इनका निर्यात सभी हित्ती और अरामी राजाओं को कर देते थे.

< ಪೂರ್ವಕಾಲವೃತ್ತಾಂತ ದ್ವಿತೀಯ ಭಾಗ 1 >