< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 1 >

1 ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ಕೊರಿಂಥದಲ್ಲಿರುವ ದೇವರ ಸಭೆಗೆ ಮತ್ತು ಅಖಾಯ ಪ್ರಾಂತದಲ್ಲಿರುವ ಎಲ್ಲಾ ಪವಿತ್ರ ಜನರಿಗೆ ಬರೆಯುವ ಪತ್ರ:
Παῦλος ἀπόστολος Ἰησοῦ Χριστοῦ διὰ θελήματος Θεοῦ, καὶ Τιμόθεος ὁ ἀδελφός, τῇ ἐκκλησίᾳ τοῦ Θεοῦ τῇ οὔσῃ ἐν Κορίνθῳ, σὺν τοῖς ἁγίοις πᾶσι τοῖς οὖσιν ἐν ὅλῃ τῇ Ἀχαΐᾳ·
2 ನಮ್ಮ ತಂದೆಯಾದ ದೇವರಿಂದಲೂ ಕರ್ತ ಆಗಿರುವ ಯೇಸು ಕ್ರಿಸ್ತರಿಂದಲೂ ನಿಮಗೆ ಕೃಪೆಯೂ ಶಾಂತಿಯೂ ಆಗಲಿ.
χάρις ὑμῖν καὶ εἰρήνη ἀπὸ Θεοῦ πατρὸς ἡμῶν καὶ Κυρίου Ἰησοῦ Χριστοῦ.
3 ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರಿಗೆ ಸ್ತೋತ್ರವಾಗಲಿ. ಅವರು ಕರುಣೆಯುಳ್ಳ ತಂದೆಯೂ ಎಲ್ಲರನ್ನೂ ಆದರಿಸುವ ದೇವರೂ ಆಗಿದ್ದಾರೆ.
Εὐλογητὸς ὁ Θεὸς καὶ πατὴρ τοῦ Κυρίου ἡμῶν Ἰησοῦ Χριστοῦ, ὁ πατὴρ τῶν οἰκτιρμῶν καὶ Θεὸς πάσης παρακλήσεως,
4 ದೇವರು ನಮಗಾಗುವ ಎಲ್ಲಾ ಬಾಧೆಗಳಲ್ಲಿ ನಮ್ಮನ್ನು ಸಂತೈಸುವವರಾಗಿದ್ದಾರೆ. ಇತರರು ಬಾಧೆಗಳನ್ನು ಅನುಭವಿಸುತ್ತಿರುವಾಗ, ನಾವು ಸಹ ದೇವರಿಂದ ಹೊಂದಿರುವ ಸಂತೈಸುವಿಕೆಯಿಂದ ಅವರನ್ನು ಸಂತೈಸಲು ನಮ್ಮನ್ನು ಶಕ್ತರನ್ನಾಗಿ ಮಾಡಿದ್ದಾರೆ.
ὁ παρακαλῶν ἡμᾶς ἐπὶ πάσῃ τῇ θλίψει ἡμῶν, εἰς τὸ δύνασθαι ἡμᾶς παρακαλεῖν τοὺς ἐν πάσῃ θλίψει, διὰ τῆς παρακλήσεως ἧς παρακαλούμεθα αὐτοὶ ὑπὸ τοῦ Θεοῦ.
5 ಕ್ರಿಸ್ತ ಯೇಸುವಿನ ಸಂಕಟವು ನಮ್ಮಲ್ಲಿ ಹೇಗೆ ಅಧಿಕವಾಗಿದೆಯೋ ಹಾಗೆಯೇ, ಕ್ರಿಸ್ತ ಯೇಸುವಿನ ಮೂಲಕ ನಮ್ಮ ಸಂತೈಸುವಿಕೆಯೂ ನಮ್ಮಲ್ಲಿ ಅಧಿಕವಾಗಿರುತ್ತದೆ.
Ὅτι καθὼς περισσεύει τὰ παθήματα τοῦ Χριστοῦ εἰς ἡμᾶς, οὕτω διὰ τοῦ Χριστοῦ περισσεύει καὶ ἡ παράκλησις ἡμῶν.
6 ನಮಗೆ ಕಷ್ಟಸಂಕಟಗಳು ಬಂದರೆ, ಅದು ನಿಮ್ಮ ಆದರಣೆ ಮತ್ತು ರಕ್ಷಣೆಗೋಸ್ಕರವೇ ಇರುತ್ತದೆ. ನಾವು ಸಂತೈಸುವಿಕೆಯನ್ನು ಹೊಂದಿರುವುದಾದರೆ, ಅದು ನಿಮ್ಮ ಆದರಣೆಗಾಗಿಯೇ. ಆ ಆದರಣೆಯು ನಮ್ಮಂತೆ ನೀವು ಅನುಭವಿಸುವ ಕಷ್ಟಸಂಕಟಗಳನ್ನು ಸಹನೆಯಿಂದ ಅನುಭವಿಸುವಂತೆ ಮಾಡುವುದು.
Εἴτε δὲ θλιβόμεθα, ὑπὲρ τῆς ὑμῶν παρακλήσεως καὶ σωτηρίας, τῆς ἐνεργουμένης ἐν ὑπομονῇ τῶν αὐτῶν παθημάτων ὧν καὶ ἡμεῖς πάσχομεν· καὶ ἡ ἐλπὶς ἡμῶν βεβαία ὑπὲρ ὑμῶν· εἴτε παρακαλούμεθα, ὑπὲρ τῆς ὑμῶν παρακλήσεως καὶ σωτηρίας·
7 ನಿಮಗಾಗಿರುವ ನಮ್ಮ ನಿರೀಕ್ಷೆಯು ಸ್ಥಿರವಾಗಿದೆ. ಏಕೆಂದರೆ, ನಮ್ಮ ಕಷ್ಟಸಂಕಟಗಳಲ್ಲಿ ನೀವು ಪಾಲುಗಾರರಾಗಿದ್ದಂತೆಯೇ, ನಮ್ಮ ಸಂತೈಸುವಿಕೆಗಳಲ್ಲಿಯೂ ನೀವು ನಮ್ಮೊಂದಿಗೆ ಪಾಲುಗಾರರಾಗಿದ್ದೀರಿ ಎಂದು ನಮಗೆ ಗೊತ್ತಿದೆ.
εἰδότες ὅτι ὥσπερ κοινωνοί ἐστε τῶν παθημάτων, οὕτω καὶ τῆς παρακλήσεως.
8 ಪ್ರಿಯರೇ, ನಾವು ಏಷ್ಯಾ ಪ್ರಾಂತದಲ್ಲಿ ಅನುಭವಿಸಿದ ಕಷ್ಟ ಸಂಕಟಗಳ ಬಗ್ಗೆ ನೀವು ತಿಳಿಯಬೇಕೆಂದು ಬಯಸುತ್ತೇವೆ. ನಾವು ಸಹಿಸುವುದಕ್ಕೆ ಬಹುಕಷ್ಟಕರವಾದ ಒತ್ತಡಗಳು ನಮಗೆ ಬಂದೊದಗಿದಾಗ, ಅವು ನಮ್ಮ ಪ್ರಾಣಕ್ಕೂ ಅಪಾಯಕಾರಿ ಎಂದೆನಿಸಿತು.
Οὐ γὰρ θέλομεν ὑμᾶς ἀγνοεῖν, ἀδελφοί, ὑπὲρ τῆς θλίψεως ἡμῶν τῆς γενομένης ἡμῖν ἐν τῇ Ἀσίᾳ, ὅτι καθ᾽ ὑπερβολὴν ἐβαρήθημεν ὑπὲρ δύναμιν, ὥστε ἐξαπορηθῆναι ἡμᾶς καὶ τοῦ ζῇν.
9 ಮರಣದ ಶಿಕ್ಷೆಯನ್ನು ನಾವು ಅನುಭವಿಸುತ್ತೇವೋ ಎಂಬಂತೆ ನಮಗಾಯಿತು. ನಾವು ನಮ್ಮ ಮೇಲೆ ಭರವಸೆಯಿಡದೆ, ಸತ್ತವರನ್ನು ಎಬ್ಬಿಸುವ ದೇವರ ಮೇಲೆಯೇ ಭರವಸೆ ಇಡುವವರಾಗಬೇಕೆಂದು ಇದೆಲ್ಲಾ ಸಂಭವಿಸಿತು.
Ἀλλὰ αὐτοὶ ἐν ἑαυτοῖς τὸ ἀπόκριμα τοῦ θανάτου ἐσχήκαμεν, ἵνα μὴ πεποιθότες ὦμεν ἐφ᾽ ἑαυτοῖς ἀλλ᾽ ἐπὶ τῷ Θεῷ τῷ ἐγείροντι τοὺς νεκρούς·
10 ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.
ὃς ἐκ τηλικούτου θανάτου ἐρρύσατο ἡμᾶς καὶ ῥύεται, εἰς ὃν ἠλπίκαμεν ὅτι καὶ ἔτι ῥύσεται,
11 ನೀವು ನಿಮ್ಮ ಪ್ರಾರ್ಥನೆಯಿಂದ ನಮಗೆ ಸಹಾಯಮಾಡಿರಿ. ಹೀಗೆ, ಬಹಳ ಜನರ ಪ್ರಾರ್ಥನೆಗಳಿಗೆ ಉತ್ತರವಾಗಿ ನಮಗೆ ದೊರಕಿದ ಕೃಪೆಯ ಮೆಚ್ಚುಗೆಗಾಗಿ, ಅನೇಕರು ನಮ್ಮ ಪರವಾಗಿ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುವರು.
συνυπουργούντων καὶ ὑμῶν ὑπὲρ ἡμῶν τῇ δεήσει, ἵνα ἐκ πολλῶν προσώπων τὸ εἰς ἡμᾶς χάρισμα διὰ πολλῶν εὐχαριστηθῇ ὑπὲρ ὑμῶν.
12 ಈ ಲೋಕದೊಂದಿಗೂ, ವಿಶೇಷವಾಗಿ ನಮ್ಮ ಮತ್ತು ನಿಮ್ಮ ಸಂಬಂಧದಲ್ಲಿಯೂ, ನಾವು ದೇವರಿಂದ ಹೊಂದಿದ ಪವಿತ್ರತೆ ಮತ್ತು ದೈವಿಕ ನಿಷ್ಕಪಟತ್ವದಿಂದ ಯೋಗ್ಯರಾಗಿ ವರ್ತಿಸಿದ್ದೇವೆ ಎಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಈ ಮನಸ್ಸಾಕ್ಷಿಯ ಹೇಳಿಕೆಯು ನಮಗೆ ಹೆಮ್ಮೆಯ ವಿಷಯವಾಗಿದೆ. ನಾವು ಇದನ್ನು ಈ ಲೋಕದ ಜ್ಞಾನದಿಂದ ಅಲ್ಲ, ದೇವರ ಕೃಪೆಯನ್ನೇ ಆಶ್ರಯಿಸಿ ಮಾಡಿದ್ದೇವೆ.
Ἡ γὰρ καύχησις ἡμῶν αὕτη ἐστί, τὸ μαρτύριον τῆς συνειδήσεως ἡμῶν, ὅτι ἐν ἁπλότητι καὶ εἰλικρινείᾳ Θεοῦ, οὐκ ἐν σοφίᾳ σαρκικῇ ἀλλ᾽ ἐν χάριτι Θεοῦ, ἀνεστράφημεν ἐν τῷ κόσμῳ, περισσοτέρως δὲ πρὸς ὑμᾶς.
13 ನಿಮಗೆ ಓದಲು ಅಥವಾ ಅರ್ಥಮಾಡಿಕೊಳ್ಳಲು ಅಸಾಧ್ಯವಾದ ಯಾವುದನ್ನೂ ನಾವು ಬರೆಯಲಿಲ್ಲ.
Οὐ γὰρ ἄλλα γράφομεν ὑμῖν, ἀλλ᾽ ἢ ἃ ἀναγινώσκετε ἢ καὶ ἐπιγινώσκετε, ἐλπίζω δὲ ὅτι καὶ ἕως τέλους ἐπιγνώσεσθε·
14 ಈಗ ನೀವು ನಮ್ಮನ್ನು ಸ್ವಲ್ಪಮಟ್ಟಿಗೆ ಅರಿತುಕೊಂಡಿದ್ದೀರಿ. ಆದರೆ ಕರ್ತ ಆಗಿರುವ ಯೇಸುವಿನ ಪುನರಾಗಮನ ದಿನದಲ್ಲಿ ನಾವು ನಿಮ್ಮ ಬಗ್ಗೆ ಹೆಮ್ಮೆ ಪಡುವಂತೆ, ನಮ್ಮ ಬಗ್ಗೆ ಹೆಮ್ಮೆ ಪಡಲು ನೀವು ಸಂಪೂರ್ಣವಾಗಿ ನಮ್ಮನ್ನು ಅರಿತುಕೊಳ್ಳುವಿರೆಂಬ ನಿರೀಕ್ಷೆ ನಮಗಿದೆ.
καθὼς καὶ ἐπέγνωτε ἡμᾶς ἀπὸ μέρους, ὅτι καύχημα ὑμῶν ἐσμεν, καθάπερ καὶ ὑμεῖς ἡμῶν, ἐν τῇ ἡμέρᾳ τοῦ Κυρίου Ἰησοῦ.
15 ಈ ಭರವಸೆಯಿಂದ, ನಾನು ನಿಮ್ಮನ್ನು ಮೊದಲು ಸಂದರ್ಶಿಸಿ, ನಿಮಗೆ ಎರಡರಷ್ಟು ಉಪಯುಕ್ತತೆಯನ್ನು ಹೊಂದುವಂತೆ ಯೋಚನೆ ಮಾಡಿದ್ದೆನು.
Καὶ ταύτῃ τῇ πεποιθήσει ἐβουλόμην ἐλθεῖν πρὸς ὑμᾶς τὸ πρότερον, ἵνα δευτέραν χάριν ἔχητε·
16 ಮಕೆದೋನ್ಯಕ್ಕೆ ಹೋಗುವಾಗ ನಾನು ನಿಮ್ಮನ್ನು ಸಂದರ್ಶಿಸುವೆನು, ಅಲ್ಲಿಂದ ಹಿಂದಿರುಗಿ ಬರುವಾಗಲೂ ನಿಮ್ಮನ್ನು ಸಂದರ್ಶಿಸಲು ನಾನೇ ಯೂದಾಯಕ್ಕೆ ಬರುವಂತೆ ಯೋಚನೆ ಮಾಡಿದ್ದೆನು.
καὶ δι᾽ ὑμῶν διελθεῖν εἰς Μακεδονίαν, καὶ πάλιν ἀπὸ Μακεδονίας ἐλθεῖν πρὸς ὑμᾶς, καὶ ὑφ᾽ ὑμῶν προπεμφθῆναι εἰς τὴν Ἰουδαίαν.
17 ನಾನು ಇದನ್ನು ಯೋಚಿಸಿದಾಗ, ಚಂಚಲಹೃದಯವನ್ನು ತಾಳಿದೆನೋ? ಅಥವಾ, ಒಮ್ಮೆ ಅದು “ಹೌದು, ಹೌದು” ಅದೇ ಕ್ಷಣದಲ್ಲಿ ಅದು “ಅಲ್ಲ, ಅಲ್ಲ” ಎಂದು ನಾನು ಲೋಕ ರೀತಿಯಾಗಿ ಯೋಜನೆಯನ್ನು ತಯಾರಿಸಿದ್ದೇನೋ?
Τοῦτο οὖν βουλευόμενος, μήτι ἄρα τῇ ἐλαφρίᾳ ἐχρησάμην; Ἢ ἃ βουλεύομαι, κατὰ σάρκα βουλεύομαι, ἵνα ᾖ παρ᾽ ἐμοὶ τὸ Ναί, ναὶ καὶ τὸ Οὔ, οὔ;
18 ನಿಶ್ಚಯವಾಗಿ, ದೇವರು ಹೇಗೆ ಪ್ರಾಮಾಣಿಕತೆಗೆ ಯೋಗ್ಯರೋ, ಹಾಗೆಯೇ ನಾವು ನಿಮಗೆ ಕೊಟ್ಟ ಸಂದೇಶವೂ, ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ.
Πιστὸς δὲ ὁ Θεός, ὅτι ὁ λόγος ἡμῶν ὁ πρὸς ὑμᾶς οὐκ ἐγένετο Ναὶ καὶ Οὔ.
19 ನಾನು, ಸಿಲ್ವಾನ ಮತ್ತು ತಿಮೊಥೆಯನು ನಿಮ್ಮಲ್ಲಿ ಬೋಧಿಸಿದ ದೇವರ ಪುತ್ರನಾದ ಯೇಸು ಕ್ರಿಸ್ತನು ಒಮ್ಮೆ “ಹೌದು,” ಒಮ್ಮೆ “ಅಲ್ಲ” ಎಂದಾಗಿರುವುದಿಲ್ಲ. ಯಾವಾಗಲೂ ಅದು ಕ್ರಿಸ್ತನಲ್ಲಿ ಹೌದು ಎಂದೇ ಆಗಿರುತ್ತಾನೆ.
Ὁ γὰρ τοῦ Θεοῦ υἱὸς Ἰησοῦς Χριστὸς ὁ ἐν ὑμῖν δι᾽ ἡμῶν κηρυχθείς, δι᾽ ἐμοῦ καὶ Σιλουανοῦ καὶ Τιμοθέου, οὐκ ἐγένετο Ναὶ καὶ Οὔ, ἀλλὰ Ναὶ ἐν αὐτῷ γέγονεν.
20 ದೇವರು ಕೊಟ್ಟಿರುವ ವಾಗ್ದಾನಗಳೆಲ್ಲವೂ ಕ್ರಿಸ್ತ ಯೇಸುವಿನಲ್ಲಿ “ಹೌದು” ಎಂದೇ ಇರುತ್ತದೆ. ಕ್ರಿಸ್ತ ಯೇಸುವಿನ ಮೂಲಕ ನಾವು ಅದಕ್ಕೆ “ಆಮೆನ್” ಎಂದು ದೇವರ ಮಹಿಮೆಗಾಗಿ ಎನ್ನುತ್ತೇವೆ.
Ὅσαι γὰρ ἐπαγγελίαι Θεοῦ, ἐν αὐτῷ τὸ Ναί, καὶ ἐν αὐτῷ τὸ Ἀμήν, τῷ Θεῷ πρὸς δόξαν δι᾽ ἡμῶν.
21 ನೀವೂ ನಾವೂ ಕ್ರಿಸ್ತ ಯೇಸುವಿನಲ್ಲಿ ದೃಢವಾಗಿ ನಿಲ್ಲುವಂತೆ ದೇವರು ನಮ್ಮನ್ನು ಸ್ಥಿರಪಡಿಸುತ್ತಾರೆ. ದೇವರು ನಮ್ಮನ್ನು ಅಭಿಷೇಕಿಸಿ,
Ὁ δὲ βεβαιῶν ἡμᾶς σὺν ὑμῖν εἰς Χριστόν, καὶ χρίσας ἡμᾶς, Θεός·
22 ನಮ್ಮ ಮೇಲೆ ದೇವರಿಗಿರುವ ಅಧಿಕಾರವೆಂಬ ಮುದ್ರೆಯನ್ನು ಒತ್ತಿದರು. ಮಾತ್ರವಲ್ಲದೇ ತಮ್ಮ ಪವಿತ್ರಾತ್ಮನನ್ನು ಖಾತರಿಯಾಗಿ ನಮ್ಮ ಹೃದಯದಲ್ಲಿಟ್ಟರು.
ὁ καὶ σφραγισάμενος ἡμᾶς, καὶ δοὺς τὸν ἀρραβῶνα τοῦ πνεύματος ἐν ταῖς καρδίαις ἡμῶν.
23 ನಿಮಗೆ ಶ್ರಮೆ ಪಡಿಸಬಾರದೆಂದು ನಾನು ಕೊರಿಂಥಕ್ಕೆ ಹಿಂದಿರುಗಿ ಬರಲಿಲ್ಲ. ಇದಕ್ಕೆ ದೇವರೇ ಸಾಕ್ಷಿ.
Ἐγὼ δὲ μάρτυρα τὸν Θεὸν ἐπικαλοῦμαι ἐπὶ τὴν ἐμὴν ψυχήν, ὅτι φειδόμενος ὑμῶν οὐκέτι ἦλθον εἰς Κόρινθον.
24 ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತೇವೆಂದು ತಿಳಿಯಬೇಡಿರಿ. ಆದರೆ ನಿಮ್ಮ ಆನಂದಕ್ಕಾಗಿ ಕೆಲಸಮಾಡಿ, ನಾವೂ ಭಾಗಿಗಳಾಗಿರಲು ಬಯಸುತ್ತೇವೆ. ಏಕೆಂದರೆ, ನೀವು ವಿಶ್ವಾಸದಲ್ಲಿ ದೃಢವಾಗಿ ನಿಂತಿದ್ದೀರಲ್ಲ.
Οὐχ ὅτι κυριεύομεν ὑμῶν τῆς πίστεως, ἀλλὰ συνεργοί ἐσμεν τῆς χαρᾶς ὑμῶν· τῇ γὰρ πίστει ἑστήκατε.

< ಕೊರಿಂಥದವರಿಗೆ ಬರೆದ ಎರಡನೆಯ ಪತ್ರಿಕೆ 1 >