< ಅರಸುಗಳು - ದ್ವಿತೀಯ ಭಾಗ 12 >
1 ಯೇಹುವಿನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೋವಾಷನು ಅರಸನಾಗಿ, ಯೆರೂಸಲೇಮಿನಲ್ಲಿ ನಲವತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಚಿಬ್ಯಳು. ಅವಳು ಬೇರ್ಷೆಬ ಊರಿನವಳು.
၁ဣသရေလပြည်ဘုရင်ယေဟုမင်း၏နန်း စံခုနစ်နှစ်မြောက်တွင် ယောရှသည်ယုဒပြည် ဘုရင်အဖြစ်နန်းတက်၍ ယေရုရှလင်မြို့၌ အနှစ်လေးဆယ်နန်းစံလေသည်။ သူ၏မယ် တော်ကားဗေရရှေဘမြို့သူဇိဗိဖြစ်၏။-
2 ಯಾಜಕನಾದ ಯೆಹೋಯಾದಾವನು ಯೋವಾಷನಿಗೆ ಬೋಧಿಸಿದ ಎಲ್ಲಾ ವರ್ಷಗಳಲ್ಲಿ ಯೋವಾಷನು ಯೆಹೋವ ದೇವರ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿದನು.
၂သူသည်ယဇ်ပုရောဟိတ်ယောယဒ၏သွန် သင်မှုကိုခံယူရရှိသဖြင့် တစ်သက်လုံး ထာဝရဘုရားနှစ်သက်တော်မူသော အမှုများကိုပြု၏။-
3 ಆದರೂ ಪೂಜಾಸ್ಥಳಗಳನ್ನು ತೆಗೆದುಹಾಕಲಿಲ್ಲ ಆದ್ದರಿಂದ ಜನರು ಪೂಜಾಸ್ಥಳಗಳ ಮೇಲೆ ಬಲಿಗಳನ್ನೂ ಧೂಪಗಳನ್ನೂ ಅರ್ಪಿಸುವುದನ್ನು ಮುಂದುವರೆಸಿದ್ದರು.
၃သို့ရာတွင်ရုပ်တုကိုးကွယ်ရာဌာနများ ကိုမူကား မဖျက်မသိမ်းဘဲထားသဖြင့် ပြည်သူတို့သည်ထိုအရပ်များတွင်ယဇ် ပူဇော်၍နံ့သာပေါင်းကိုမီးရှို့ကြသေး၏။
4 ಯೋವಾಷನು ಯಾಜಕರಿಗೆ, “ಯೆಹೋವ ದೇವರ ಆಲಯಕ್ಕೆ ಪವಿತ್ರ ಅರ್ಪಣೆಗಳಾಗಿ ತರಲಾದ ಜನಗಣತಿಯಲ್ಲಿ ಸಂಗ್ರಹಿಸಿದ ಹಣ, ವೈಯಕ್ತಿಕ ಪ್ರತಿಜ್ಞೆಗಳಿಂದ ಪಡೆದ ಹಣ ಮತ್ತು ದೇವಾಲಯಕ್ಕೆ ಸ್ವಯಂಪ್ರೇರಣೆಯಿಂದ ತಂದ ಹಣವನ್ನು ಸಂಗ್ರಹಿಸಿರಿ ಎಂದನು.
၄ယောရှသည်ယဇ်ပုရောဟိတ်တို့ကိုခေါ်ပြီး လျှင် ဗိမာန်တော်အတွင်း၌ယဇ်ပူဇော်မှုနှင့် ပတ်သက်၍ရရှိသည့်ငွေများ၊ ယဇ်ကောင် များအတွက်ပေးချေငွေများနှင့် စေတနာ အလျောက်ပေးလှူငွေများကိုစုဆောင်း ထားရန်အမိန့်ပေး၏။-
5 ಯಾಜಕರಲ್ಲಿ ಪ್ರತಿಯೊಬ್ಬನು ಖಜಾಂಚಿಯವರಿಂದ ಹಣವನ್ನು ತೆಗೆದುಕೊಂಡು ಆಲಯದಲ್ಲಿ ಕಂಡುಕೊಳ್ಳುವ ಒಡಕುಗಳನ್ನೆಲ್ಲಾ ದುರಸ್ತಿ ಮಾಡಿಸಲು ಉಪಯೋಗಿಸಿರಿ,” ಎಂದನು.
၅ယဇ်ပုရောဟိတ်အသီးသီးတို့သည်မိမိ တို့ယဇ်ပူဇော်ပေး၍ရရှိသည့်ငွေများဖြင့် ဗိမာန်တော်မွမ်းမံပြင်ဆင်မှုတွင်လိုအပ် သလိုအသုံးပြုရန်တာဝန်ယူရသည်။
6 ಆದರೆ ಯಾಜಕರು ಅರಸನಾದ ಯೋವಾಷನ ಆಳ್ವಿಕೆಯ ಇಪ್ಪತ್ತಮೂರನೆಯ ವರ್ಷದವರೆಗೂ ದೇವಾಲಯವನ್ನು ದುರಸ್ತಿ ಮಾಡದೆ ಇದ್ದರು.
၆သို့ရာတွင်ယောရှ၏နန်းစံနှစ်ဆယ့်သုံးနှစ် မြောက်သို့ရောက်ရှိသည်တိုင်အောင် ဗိမာန်တော် တွင်မည်သည့်မွမ်းမံပြင်ဆင်မှုကိုမျှမပြု ရသေးသဖြင့်၊-
7 ಆದ್ದರಿಂದ ಅರಸನಾದ ಯೋವಾಷನು ಯಾಜಕನಾದ ಯೆಹೋಯಾದಾವನನ್ನು, ಇತರ ಯಾಜಕರನ್ನು ಕರೆದು ಅವರಿಗೆ, “ನೀವು ದೇವಾಲಯದ ಒಡಕುಗಳನ್ನು ಏಕೆ ದುರಸ್ತಿ ಮಾಡಿಸುತ್ತಿಲ್ಲ? ಇನ್ನು ಮೇಲೆ ನೀವು ನಿಮಗೆ ಪರಿಚಯವಿರುವ ಖಜಾಂಚಿಯವರಿಂದ ಹಣವನ್ನು ತೆಗೆದುಕೊಳ್ಳದೆ ದೇವಾಲಯದ ಒಡಕುಗಳನ್ನು ದುರಸ್ತಿ ಮಾಡಿಸಲು ಅದನ್ನು ಒಪ್ಪಿಸಿಕೊಡಿರಿ,” ಎಂದನು.
၇ယောရှသည်ယောယဒနှင့်အခြားယဇ်ပုရော ဟိတ်များကိုခေါ်၍``သင်တို့သည်အဘယ် ကြောင့်ဗိမာန်တော်ကိုမပြင်ဘဲနေကြသနည်း။ ယခုအချိန်မှအစပြု၍ သင်တို့သည်မိမိ တို့ရရှိသည့်ငွေကိုသိမ်းဆည်း၍မထားရ ကြ။ ဗိမာန်တော်မွမ်းမံပြင်ဆင်မှုအတွက် ပေးအပ်ရကြမည်'' ဟုဆို၏။-
8 ಆಗ ಯಾಜಕರು, “ನಾವು ಇನ್ನು ಮುಂದೆ ಜನರಿಂದ ಹಣ ತೆಗೆದುಕೊಳ್ಳುವುದಿಲ್ಲ, ದೇವಾಲಯದ ದುರಸ್ತಿಗಾಗಿ ಕೈ ಹಾಕುವುದಿಲ್ಲ,” ಎಂಬುದಾಗಿ ಮಾತುಕೊಟ್ಟರು.
၈ယဇ်ပုရောဟိတ်တို့သည်လည်းငွေကိုပေး အပ်ရန်နှင့် ဗိမာန်တော်မွမ်းမံပြင်ဆင်မှုကို တာဝန်မယူရန်သဘောတူကြလေသည်။
9 ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಅದರ ಮುಚ್ಚಳದಲ್ಲಿ ಒಂದು ರಂಧ್ರವನ್ನು ಮಾಡಿದನು. ಅವನು ಅದನ್ನು ಬಲಿಪೀಠದ ಬಳಿಯಲ್ಲಿ ಯೆಹೋವ ದೇವರ ಆಲಯ ಪ್ರವೇಶದ ಬಲಗಡೆಯಲ್ಲಿ ಇಟ್ಟನು. ಆಗ ಬಾಗಿಲು ಕಾಯುವ ಯಾಜಕರು ಯೆಹೋವ ದೇವರ ಆಲಯಕ್ಕೆ ತರಲಾದ ಹಣವನ್ನೆಲ್ಲಾ ಅದರಲ್ಲಿ ಹಾಕಿಸುತ್ತಿದ್ದರು.
၉ထိုနောက်ယောယဒသည်သေတ္တာတစ်လုံး ကိုယူ၍အဖုံးတွင်အပေါက်ဖောက်ပြီးလျှင် ဗိမာန်တော်အဝင်လမ်းလက်ယာဘက်ရှိယဇ် ပလ္လင်အနီးတွင်ထား၏။ ဗိမာန်တော်အဝင်ဝ တွင်တာဝန်ကျသောယဇ်ပုရောဟိတ်များ သည် ဝတ်ပြုကိုးကွယ်ရန်လာရောက်သူတို့ ပေးလှူသောငွေတို့ကိုသေတ္တာထဲသို့ထည့် ကြ၏။-
10 ಪೆಟ್ಟಿಗೆಯಲ್ಲಿ ಬಹಳ ಹಣ ಉಂಟೆಂದು ಅವರು ಕಂಡಾಗಲೆಲ್ಲಾ ಅರಸನ ಲೇಖಕನೂ, ಮಹಾಯಾಜಕನೂ ಬಂದು, ಯೆಹೋವ ದೇವರ ಆಲಯದಲ್ಲಿ ತಂದಿದ್ದ ಹಣವನ್ನು ಎಣಿಸಿ, ಚೀಲಗಳಲ್ಲಿ ಹಾಕಿದರು.
၁၀အလှူခံသေတ္တာတွင်ငွေများလာသည့်အခါ တိုင်း ဘုရင့်အတွင်းဝန်နှင့်ယဇ်ပုရောဟိတ် မင်းတို့လာ၍ ငွေကိုထုတ်ယူကာအရည် ကြိုပြီးလျှင်ချိန်တွယ်ကြ၏။-
11 ಅವರು ಎಣಿಸಿದ ಹಣವನ್ನು ಯೆಹೋವ ದೇವರ ಆಲಯದ ಕೆಲಸಕ್ಕೆ ನೇಮಕಗೊಂಡ ಮೇಲ್ವಿಚಾರಕರ ಕೈಯಲ್ಲಿ ಅದನ್ನು ಒಪ್ಪಿಸಿದರು. ಅದರೊಂದಿಗೆ, ಅವರು ಯೆಹೋವ ದೇವರ ದೇವಸ್ಥಾನದಲ್ಲಿ ಕೆಲಸ ಮಾಡುವ ಬಡಗಿ, ಶಿಲ್ಪಿ,
၁၁သူတို့သည်အလေးချိန်အတိအကျကို မှတ်သားထားပြီးလျှင် ငွေကိုဗိမာန်တော် ပြင်ဆင်မှုလုပ်ငန်းကြီးကြပ်သူတို့၏လက် သို့ပေးအပ်ကြ၏။ ကြီးကြပ်သူတို့သည် ထိုငွေကိုလက်သမား၊-
12 ಉಪ್ಪಾರ, ಕಲ್ಲುಕುಟಿಗರಿಗೆ ಕೊಟ್ಟರು. ಇದಲ್ಲದೆ ಯೆಹೋವ ದೇವರ ಆಲಯವನ್ನು ದುರಸ್ತಿ ಮಾಡುವುದಕ್ಕೆ ಮರ, ಕೆತ್ತಿದ ಕಲ್ಲುಗಳನ್ನು ತೆಗೆದುಕೊಳ್ಳುವುದಕ್ಕೂ, ಆಲಯ ದುರಸ್ತಿ ಮಾಡಲು ಬೇಕಾದ ಸಮಸ್ತ ಖರ್ಚಿಗೂ ಕೊಟ್ಟರು.
၁၂ပန်းရံသမားနှင့်ကျောက်ဆစ်သမားတို့၏ လုပ်ခများအတွက်လည်းကောင်း၊ မွမ်းမံပြင် ဆင်ရာတွင်လိုအပ်သောသစ်သား၊ ကျောက် ဝယ်ယူရန်နှင့်အခြားလိုအပ်သည့်စရိတ် များအတွက်လည်းကောင်းအသုံးပြုကြ၏။-
13 ಯೆಹೋವ ದೇವರ ಆಲಯದೊಳಗೆ ತಂದ ಹಣದಿಂದ ಬೆಳ್ಳಿ ಬಟ್ಟಲು, ಕತ್ತರಿ, ಪಾತ್ರೆ, ತುತೂರಿ, ಬೆಳ್ಳಿಬಂಗಾರದ ಸಾಮಾನುಗಳು, ಇವೆಲ್ಲವುಗಳನ್ನು ಮಾಡಿಸದೆ,
၁၃ငွေခွက်၊ ငွေဖလား၊ ငွေတံပိုးခရာနှင့်ငွေ မီးညှပ်များပြုလုပ်ရန်အတွက်သော်လည်း ကောင်း ထိုငွေကိုလုံးဝအသုံးမပြုကြ။-
14 ಅವರು ಅದನ್ನು ಕೆಲಸದವರಿಗೆ ಕೊಟ್ಟು, ಯೆಹೋವ ದೇವರ ಆಲಯದ ದುರಸ್ತಿ ಮಾಡಿಸಿದರು.
၁၄အလုပ်သမားခများပေးရန်နှင့်မွမ်းမံ ပြင်ဆင်မှုဆိုင်ရာပစ္စည်းများဝယ်ယူရန် အတွက်သာ ထိုငွေကိုအသုံးပြုကြ၏။-
15 ಇದಲ್ಲದೆ ಅವರು ಕೆಲಸಮಾಡುವವರಿಗೆ ಹಣ ಕೊಡುವುದಕ್ಕೆ ಯಾರ ಕೈಯಲ್ಲಿ ಒಪ್ಪಿಸಿದ್ದರೋ, ಅವರಿಂದ ಹಣದ ಲೆಕ್ಕವನ್ನು ತೆಗೆದುಕೊಳ್ಳಲಿಲ್ಲ, ಏಕೆಂದರೆ ಅವರು ನಂಬಿಗಸ್ತರಾಗಿದ್ದರು.
၁၅လုပ်ငန်းကြီးကြပ်သူတို့သည်လုံးဝယုံ ကြည်စိတ်ချရသူများဖြစ်သဖြင့် သူတို့ အားငွေစာရင်းအင်းများကိုတင်ပြခိုင်း ရန်မလိုချေ။-
16 ಆದರೆ ಪ್ರಾಯಶ್ಚಿತ್ತ ಬಲಿಯ ಹಣವನ್ನು, ಪಾಪ ಪರಿಹಾರದ ಬಲಿಯ ಹಣವನ್ನು ಯೆಹೋವ ದೇವರ ಆಲಯಕ್ಕೆ ತೆಗೆದುಕೊಂಡು ಬರಲಿಲ್ಲ, ಅದು ಯಾಜಕರದಾಗಿತ್ತು.
၁၆ဒုစရိုက်ဖြေရာပူဇော်သကာနှင့်အပြစ်ဖြေ ရာပူဇော်သကာတို့မှရရှိသည့်ငွေကိုမူ အလှူခံသေတ္တာထဲသို့မထည့်ဘဲယဇ်ပုရော ဟိတ်တို့ယူရကြ၏။
17 ಈ ಸಮಯದಲ್ಲಿ ಅರಾಮ್ಯರ ಅರಸನಾದ ಹಜಾಯೇಲನು ಹೋಗಿ ಗತ್ ಊರಿನ ಮೇಲೆ ಯುದ್ಧಮಾಡಿ, ಅದನ್ನು ವಶಪಡಿಸಿಕೊಂಡನು. ನಂತರ ಹಜಾಯೇಲನು ಯೆರೂಸಲೇಮಿನ ಮೇಲೆ ದಾಳಿಮಾಡಲು ಹೊರಟನು.
၁၇ထိုကာလ၌ရှုရိဘုရင်ဟာဇေလသည် ဂါသ မြို့ကိုတိုက်ခိုက်သိမ်းယူလေသည်။ ထိုနောက် ယေရုရှလင်မြို့ကိုတိုက်ခိုက်ရန်ချီတက် လာသည့်ကာလ၊-
18 ಆಗ ಯೆಹೂದದ ಅರಸನಾದ ಯೋವಾಷನು ತನ್ನ ಪೂರ್ವಜರಾದ ಯೆಹೋಷಾಫಾಟ, ಯೆಹೋರಾಮ್, ಅಹಜ್ಯ ಎಂಬ ಯೆಹೂದದ ಅರಸರು ಅರ್ಪಿಸಿದ ಸಮಸ್ತ ಪ್ರತಿಷ್ಠಿತವಾದವುಗಳನ್ನೂ ತಾನೇ ಸ್ವತಃ ಅರ್ಪಿಸಿದ ಪ್ರತಿಷ್ಠಿತವಾದವುಗಳನ್ನೂ ಯೆಹೋವ ದೇವರ ಆಲಯದ ಬೊಕ್ಕಸದಲ್ಲಿಯೂ, ಅರಸನ ಮನೆಯಲ್ಲಿಯೂ ಸಿಕ್ಕಿದ ಸಕಲ ಬಂಗಾರವನ್ನೂ ತೆಗೆದುಕೊಂಡು ಅರಾಮಿನ ಅರಸನಾದ ಹಜಾಯೇಲನಿಗೆ ಕಳುಹಿಸಿದನು. ಆಗ ಅವನು ಯೆರೂಸಲೇಮನ್ನು ಬಿಟ್ಟುಹೋದನು.
၁၈ယုဒဘုရင်ယောရှသည်မိမိ၏အလျင် အုပ်စိုးခဲ့ကြသောယောရှဖတ်မင်း၊ ယဟောရံ မင်းနှင့်အာခဇိမင်းတို့ထာဝရဘုရားအား ဆက်ကပ်လှူဒါန်းခဲ့သည့်ပူဇော်သကာများနှင့် မိမိကိုယ်တိုင်ပေးလှူထားသည့်ပူဇော်သကာ များကိုလည်းကောင်း၊ ဗိမာန်တော်နှင့်နန်းတော် ဘဏ္ဍာတိုက်များတွင်ရှိသမျှသောရွှေကိုလည်း ကောင်းယူ၍ လက်ဆောင်ပဏ္ဏာအဖြစ်ဟာဇေလ မင်းထံပေးပို့လိုက်၏။ ထိုအခါဟာဇေလ သည်မိမိ၏တပ်မတော်ကို ယေရုရှလင်မြို့ မှရုပ်သိမ်းသွားလေ၏။
19 ಯೋವಾಷನ ಇತರ ಕಾರ್ಯಗಳು, ಅವನು ಮಾಡಿದ್ದೆಲ್ಲವೂ ಯೆಹೂದದ ಅರಸರ ಇತಿಹಾಸಗಳ ಪುಸ್ತಕದಲ್ಲಿ ಬರೆದಿರುತ್ತವೆ.
၁၉ယောရှမင်းလုပ်ဆောင်ခဲ့သည့်အခြားအမှု အရာအလုံးစုံတို့ကို ယုဒရာဇဝင်တွင်ရေး ထားသတည်း။
20 ಯೋವಾಷನ ಸೇವಕರು ಎದ್ದು ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಸಿಲ್ಲಾ ಊರಿಗೆ ಇಳಿದು ಹೋಗುವ ಮಾರ್ಗವಾದ ಬೇತ್ ಮಿಲ್ಲೋ ಎಂಬ ಸ್ಥಳದಲ್ಲಿ ಯೋವಾಷನನ್ನು ಕೊಂದುಹಾಕಿದರು.
၂၀ယောရှမင်း၏မှူးမတ်တို့သည်သူ့အားလုပ်ကြံရန် လျှို့ဝှက်ကြံစည်ကြ၏။ ထိုသူတို့အနက်ရှိမတ် ၏သားယောဇကာနှင့်ရှောမေရ၏သားယဟော ဇဗပ်တို့သည် ယေရုရှလင်မြို့အရှေ့ပိုင်းသိလ ရွာသွားရာလမ်းရှိဖို့မြေပေါ်တွင်တည်ဆောက် ထားသောစံနန်း၌သူ့အားလုပ်ကြံကြ၏။ သူ့ အားဒါဝိဒ်မြို့ရှိသင်္ချိုင်းတော်တွင်သင်္ဂြိုဟ်ကြ၏။ ထိုနောက်သူ၏သားတော်အာမဇိသည် ခမည်း တော်၏အရိုက်အရာကိုဆက်ခံ၍နန်းတက် လေသည်။
21 ಅವನ ಸೇವಕರಾದ ಶಿಮೆಯಾತನ ಮಗ ಯೋಜಾಬಾದ್ ಮತ್ತು ಶೋಮೇರನ ಮಗ ಯೆಹೋಜಾಬಾದ್ ಎಂಬವರು ಅರಸನನ್ನು ಕೊಂದರು. ಯೋವಾಷನ ಜನರು ಅವನ ಶವವನ್ನು ದಾವೀದನ ಪಟ್ಟಣದಲ್ಲಿ ಅವನ ಪಿತೃಗಳ ಬಳಿಯಲ್ಲಿ ಸಮಾಧಿಮಾಡಿದರು. ಅವನ ಮಗ ಅಮಚ್ಯನು ಅವನಿಗೆ ಬದಲಾಗಿ ಅರಸನಾದನು.
၂၁