< ಅರಸುಗಳು - ದ್ವಿತೀಯ ಭಾಗ 18 >

1 ಇಸ್ರಾಯೇಲಿನ ಅರಸನಾಗಿರುವ ಏಲನ ಮಗ ಹೋಶೇಯನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ಯೆಹೂದದ ಅರಸನಾಗಿದ್ದ ಆಹಾಜನ ಮಗ ಹಿಜ್ಕೀಯನು ಆಳಲು ಆರಂಭಿಸಿದನು.
और शाह — ए इस्राईल होशे' बिन ऐला के तीसरे साल ऐसा हुआ कि शाह — ए — यहूदाह आख़ज़ का बेटा हिज़क़ियाह सल्तनत करने लगा।
2 ಅವನು ಅರಸನಾದಾಗ ಇಪ್ಪತ್ತೈದು ವರ್ಷದವನಾಗಿದ್ದು, ಯೆರೂಸಲೇಮಿನಲ್ಲಿ ಇಪ್ಪತ್ತೊಂಬತ್ತು ವರ್ಷ ಆಳಿದನು. ಅವನ ತಾಯಿಯ ಹೆಸರು ಅಬೀಯಾ. ಅವಳು ಜೆಕರ್ಯನ ಮಗಳಾಗಿದ್ದಳು.
जब वह सल्तनत करने लगा तो पच्चीस बरस का था, और उसने उन्तीस बरस येरूशलेम में सल्तनत की। उसकी माँ का नाम अबी था, जो ज़करियाह की बेटी थी।
3 ಹಿಜ್ಕೀಯನು ತನ್ನ ತಂದೆ ದಾವೀದನು ಮಾಡಿದ ಪ್ರಕಾರ ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯದನ್ನು ಮಾಡಿದನು.
और जो — जो उसके बाप दाऊद ने किया था, उसने ठीक उसी के मुताबिक़ वह काम किया जो ख़ुदावन्द की नज़र में अच्छा था।
4 ಹಿಜ್ಕೀಯನು ಉನ್ನತ ಪೂಜಾಸ್ಥಳಗಳನ್ನು ತೆಗೆದುಹಾಕಿ, ವಿಗ್ರಹಗಳನ್ನು ಒಡೆದುಬಿಟ್ಟು, ಅಶೇರ ಸ್ತಂಭಗಳನ್ನು ಕಡಿದುಹಾಕಿದನು. ಮೋಶೆಯು ಮಾಡಿದ ತಾಮ್ರದ ಸರ್ಪವನ್ನು ಮುರಿದುಬಿಟ್ಟನು. ಏಕೆಂದರೆ ಆ ದಿವಸಗಳವರೆಗೂ ಇಸ್ರಾಯೇಲರು ಅದಕ್ಕೆ ಧೂಪ ಸುಡುತ್ತಿದ್ದರು. ಅದನ್ನು ನೆಹುಷ್ಟಾನ್ ಎಂದು ಕರೆಯುತ್ತಿದ್ದರು.
उसने ऊँचे मक़ामों को दूर कर दिया, और सुतूनों को तोड़ा और यसीरत को काट डाला; और उसने पीतल के साँप को जो मूसा ने बनाया था चकनाचूर कर दिया, क्यूँकि बनी — इस्राईल उन दिनों तक उसके आगे ख़ुशबू जलाते थे; और उसने उसका नाम नहुश्तान' रखा।
5 ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ.
वह ख़ुदावन्द इस्राईल के ख़ुदा पर भरोसा करता था, ऐसा कि उसके बाद यहूदाह के सब बादशाहों में उसकी तरह एक न हुआ, और न उससे पहले कोई हुआ था।
6 ಅವನು ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟುಬಿಡದೆ, ದೇವರನ್ನೇ ಆತುಕೊಂಡು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನು ಕೈಗೊಂಡನು.
क्यूँकि वह ख़ुदावन्द से लिपटा रहा और उसकी पैरवी करने से बाज़ न आया; बल्कि उसके हुक्मों को माना जिनको ख़ुदावन्द ने मूसा को दिया था।
7 ಯೆಹೋವ ದೇವರು ಅವನ ಸಂಗಡ ಇದ್ದರು. ಹಿಜ್ಕೀಯನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಯಿತು. ಅವನು ಅಸ್ಸೀರಿಯದ ಅರಸನನ್ನು ಸೇವಿಸದೆ, ಅವನ ಮೇಲೆ ತಿರುಗಿಬಿದ್ದನು.
और ख़ुदावन्द उसके साथ रहा और जहाँ कहीं वह गया कामयाब हुआ; और वह शाह — ए — असूर से फिर गया और उसकी पैरवी न की।
8 ಅವರು ಕಾವಲು ಗೋಪುರದಿಂದ ಕೋಟೆಯುಳ್ಳ ಪಟ್ಟಣಗಳವರೆಗೂ ಫಿಲಿಷ್ಟಿಯರನ್ನು ಗಾಜಪ್ರಾಂತ್ಯದವರೆಗೆ ಸಂಹರಿಸಿದನು.
उसने फ़िलिस्तियों को ग़ज़्ज़ा और उसकी सरहदों तक, निगहबानों के बुर्ज से फ़सीलदार शहर तक मारा।
9 ಇಸ್ರಾಯೇಲಿನ ಅರಸನಾದ ಏಲನ ಮಗ ಹೋಶೇಯನ ಆಳ್ವಿಕೆಯ ಏಳನೆಯ ವರ್ಷ, ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆಹಾಕಿದನು.
हिज़क़ियाह बादशाह के चौथे बरस जो शाह — ए — इस्राईल हूसे'अ — बिन — ऐला का सातवाँ बरस था, ऐसा हुआ कि शाह — ए — असूर सलमनसर ने सामरिया पर चढ़ाई की, और उसको घेर लिया।
10 ಮೂರು ವರ್ಷದ ತರುವಾಯ ಸಮಾರ್ಯವನ್ನು ಅಸ್ಸೀರಿಯದವರು ಸ್ವಾಧೀನಮಾಡಿಕೊಂಡರು. ಇಸ್ರಾಯೇಲಿನ ಅರಸನಾದ ಹೋಶೇಯನ ಒಂಬತ್ತನೆಯ ವರ್ಷವಾದ, ಹಿಜ್ಕೀಯನ ಆರನೆಯ ವರ್ಷದಲ್ಲಿ ಸಮಾರ್ಯವು ಸ್ವಾಧೀನವಾಯಿತು.
और तीन साल के आख़िर में उन्होंने उसको ले लिया; या'नी हिज़क़ियाह के छठे साल जो शाह — ए — इस्राईल हूसे'अ का नौवाँ बरस था, सामरिया ले लिया गया।
11 ಅಸ್ಸೀರಿಯದ ಅರಸನು ಇಸ್ರಾಯೇಲರನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು.
और शाह — ए — असूर इस्राईल को ग़ुलाम करके असूर को ले गया, और उनको ख़लह में और जौज़ान की नदी ख़ाबूर पर, और मादियों के शहरों में रख्खा,
12 ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.
इसलिए कि उन्होंने ख़ुदावन्द अपने ख़ुदा की बात न मानी, बल्कि उसके 'अहद को या'नी उन सब बातों को जिनका हुक्म ख़ुदा के बन्दे मूसा ने दिया था मुख़ालिफ़त की, और न उनको सुना न उन पर 'अमल किया।
13 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು.
हिज़क़ियाह बादशाह के चौदहवें बरस शाह — ए — असूर सनहेरिब ने यहूदाह के सब फ़सीलदार शहरों पर चढ़ाई की और उनको ले लिया।
14 ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಬಿಟ್ಟು ಹಿಂದಿರುಗಿ ಹೋಗು. ನೀನು ನನ್ನ ಮೇಲೆ ವಿಧಿಸುವುದನ್ನು ನಾನು ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಆಗ ಅಸ್ಸೀರಿಯದ ಅರಸನು ಯೆಹೂದದ ಅರಸನಾದ ಹಿಜ್ಕೀಯನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ, ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ನೇಮಕಮಾಡಿದನು.
और शाह — ए — यहूदाह हिज़क़ियाह ने शाह — ए — असूर को लकीस में कहला भेजा, “मुझ से ख़ता हुई, मेरे पास से लौट जा; जो कुछ तू मेरे सिर करे मैं उसे उठाऊँगा।” इसलिए शाह — ए — असूर ने तीन सौ क़िन्तार चाँदी और तीस क़िन्तार सोना शाह — ए — यहूदाह हिज़क़ियाह के ज़िम्मे लगाया।
15 ಆದ್ದರಿಂದ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿಯೂ, ಅರಸನ ಮನೆಯ ಬೊಕ್ಕಸಗಳಲ್ಲಿಯೂ, ಸಿಕ್ಕಿದ ಸಮಸ್ತ ಬೆಳ್ಳಿಯನ್ನೂ ಕೊಟ್ಟನು.
और हिज़क़ियाह ने सारी चाँदी जो ख़ुदावन्द के घर और शाही महल के ख़ज़ानों में मिली उसे दे दी।
16 ಈ ಸಮಯದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು, ಯೆಹೋವ ದೇವರ ಮಂದಿರದ ಕದಗಳ ಮೇಲೆಯೂ, ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನೂ ಕತ್ತರಿಸಿ, ಅಸ್ಸೀರಿಯದ ಅರಸನಿಗೆ ಕೊಟ್ಟನು.
उस वक़्त हिज़क़ियाह ने ख़ुदावन्द की हैकल के दरवाज़ों का और उन सुतूनों पर का सोना, जिनको शाह — ए — यहूदाह हिज़क़ियाह ने ख़ुद मंढ़वाया था, उतरवा कर शाह — ए — असूर को दे दिया।
17 ಅಸ್ಸೀರಿಯದ ಅರಸನು ತನ್ನ ಅತಿ ಪ್ರಮುಖ ಅಧಿಕಾರಿಯನ್ನೂ, ಮುಖ್ಯ ನಾಯಕರನ್ನೂ, ಸೈನ್ಯಾಧಿಕಾರಿಯನ್ನೂ ಲಾಕೀಷಿನಿಂದ ದೊಡ್ಡ ಸೈನ್ಯದೊಂದಿಗೆ ರಬ್ಷಾಕೆ ಎಂಬವನನ್ನೂ ಯೆರೂಸಲೇಮಿನಲ್ಲಿದ್ದ ಹಿಜ್ಕೀಯನ ಬಳಿಗೆ ಕಳುಹಿಸಿದನು. ಅವರು ಯೆರೂಸಲೇಮಿಗೆ ಬಂದು ಅಗಸರ ಹೊಲದ ಮಾರ್ಗದಲ್ಲಿ ಮೇಲಿನ ಕೆರೆಯ ಕಾಲುವೆಯ ಸಮೀಪದಲ್ಲಿ ನಿಂತುಕೊಂಡರು.
फिर भी शाह — ए — असूर ने तरतान और रब सारिस और रबशाक़ी को लकीस से बड़े लश्कर के साथ हिज़क़ियाह बादशाह के पास येरूशलेम को भेजा। इसलिए वह चले और येरूशलेम को आए, और जब वहाँ पहुँचे तो जाकर ऊपर के तालाब की नाली के पास, जो धोबियों के मैदान के रास्ते पर है, खड़े हो गए।
18 ಅವರು ಅರಸನನ್ನು ಕರೆಕಳುಹಿಸಿದರು. ಅರಮನೆಯ ಕಾರ್ಯನಿರ್ವಾಹಕನಾದ ಹಿಲ್ಕೀಯನ ಮಗ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬುವರು ಅವರ ಬಳಿಗೆ ಬಂದರು.
और जब उन्होंने बादशाह को पुकारा, तो इलियाक़ीम — बिन — ख़िलक़ियाह जो घर का दीवान था और शबनाह मुन्शी और आसफ़ मुहर्रिर का बेटा यूआख़ उनके पास निकल कर आए।
19 ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು: “‘ಮಹಾರಾಜನಾದ ಅಸ್ಸೀರಿಯದ ಅರಸನು ಹೇಳುವುದೇನೆಂದರೆ, ಈ ನಿನ್ನ ಭರವಸೆಗೆ ಆಧಾರ ಏನು?
और रबशाक़ी ने उनसे कहा, “तुम हिज़क़ियाह से कहो, कि मलिक — ए — मुअज़्ज़म शाह — ए — असूर यूँ फ़रमाता है, 'तू क्या भरोसा किए बैठा है?
20 ಯುದ್ಧಕ್ಕೆ ಬೇಕಾದ ಆಲೋಚನೆಯೂ, ಪರಾಕ್ರಮವೂ ಉಂಟೆಂದು ಹೇಳುವ ನಿನ್ನ ಮಾತು ಬರೀ ವ್ಯರ್ಥವಾದ ಮಾತುಗಳೇ, ನೀನು ಯಾರನ್ನು ನಂಬಿಕೊಂಡು ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದೀಯೆ?
तू कहता तो है, लेकिन ये सिर्फ़ बातें ही बातें हैं कि जंग की मसलहत भी है और हौसला भी। आख़िर किसके भरोसे पर तू ने मुझ से सरकशी की है?
21 ಇಗೋ, ನೀನು ಜಜ್ಜಿದ ದಂಟಿಗೆ ಸಮಾನವಾಗಿರುವ ಈಜಿಪ್ಟಿನ ಮೇಲೆ ಭರವಸೆ ಇಟ್ಟಿರುವಿಯಷ್ಟೆ, ಅದರ ಮೇಲೆ ಮನುಷ್ಯನು ಊರಿಕೊಂಡರೆ ಅದು ಅವನ ಕೈಯನ್ನೇ ಚುಚ್ಚಿ ಗಾಯ ಮಾಡುವುದು! ಈಜಿಪ್ಟಿನ ಅರಸನಾದ ಫರೋಹನಲ್ಲಿ ಭರವಸೆ ಇಟ್ಟವರೆಲ್ಲರಿಗೂ ಇದೇ ಗತಿಯಾಗುವದು.
देख, तुझे इस मसले हुए सरकण्डे के 'असा या'नी मिस्र पर भरोसा है; उस पर अगर कोई टेक लगाए, तो वह उसके हाथ में गड़ जाएगा और उसे छेद देगा।” शाह — ए — मिस्र फ़िर'औन उन सब के लिए जो उस पर भरोसा करते हैं, ऐसा ही है।
22 ಬಹುಶಃ ನೀವು, “ನಮ್ಮ ದೇವರಾದ ಯೆಹೋವ ದೇವರನ್ನೇ ನಂಬಿಕೊಂಡಿದ್ದೇವೆ,” ಎಂದು ಹೇಳಬಹುದು. “ಯೆರೂಸಲೇಮಿನ ಬಲಿಪೀಠದ ಮುಂದೆಯೇ ಆರಾಧನೆ ಮಾಡಬೇಕು,” ಎಂದು ಯೆಹೂದ್ಯರಿಗೆ ಮತ್ತು ಯೆರೂಸಲೇಮಿನವರಿಗೆ ಹಿಜ್ಕೀಯನು ಆಜ್ಞಾಪಿಸಿ, ಆ ಯೆಹೋವ ದೇವರ ಪೂಜಾಸ್ಥಳಗಳನ್ನೂ, ಬೇರೆ ಎಲ್ಲಾ ಬಲಿಪೀಠಗಳನ್ನೂ ಹಾಳುಮಾಡಿದನಲ್ಲವೇ?
और अगर तुम मुझ से कहो कि हमारा भरोसा ख़ुदावन्द हमारे ख़ुदा पर है, तो क्या वह वही नहीं है, जिसके ऊँचे मक़ामों और मज़बहों को हिज़क़ियाह ने दूर करके यहूदाह और येरूशलेम से कहा है, कि तुम येरूशलेम में इस मज़बह के आगे सिज्दा किया करो?'
23 “‘ಹಾಗಾದರೆ ಈಗ ನೀನು ಅಸ್ಸೀರಿಯದ ಅರಸನಾದ ನನ್ನ ಯಜಮಾನನೊಂದಿಗೆ ಒಪ್ಪಂದ ಮಾಡಿಕೋ, ಆಗ ನಿನಗೆ ಎರಡು ಸಾವಿರ ಕುದುರೆಸವಾರರನ್ನು ಬಳಸಲು ಸಾಮರ್ಥ್ಯವಿದ್ದರೆ ನಾನು ಎರಡು ಸಾವಿರ ಕುದುರೆಗಳನ್ನು ಕೊಡುತ್ತೇನೆ.
इसलिए अब ज़रा मेरे आक़ा शाह — ए — असूर के साथ शर्त बाँध और मैं तुझे दो हज़ार घोड़े दूँगा, बशर्ते कि तू अपनी तरफ़ से उन पर सवार चढ़ा सके।
24 ಇದಾಗದಿದ್ದರೆ ನನ್ನ ಯಜಮಾನನ ಸೇವಕರಲ್ಲಿ ಚಿಕ್ಕವನಾದ ಒಬ್ಬ ಸೈನ್ಯಾಧಿಪತಿಯನ್ನು ಹೇಗೆ ಎದುರಿಸುತ್ತೀ? ನೀನು ರಥಗಳಿಗೋಸ್ಕರವೂ, ರಾಹುತರಿಗೋಸ್ಕರವೂ ಈಜಿಪ್ಟಿನ ಮೇಲೆ ಭರವಸೆ ಇಟ್ಟಿದ್ದೀಯೋ?
भला फिर तू क्यूँकर मेरे आक़ा के अदना मुलाज़िमों में से एक सरदार का भी मुँह फेर सकता है, और रथों और सवारों के लिए मिस्र पर भरोसा रखता है?
25 ಈ ಸ್ಥಳವನ್ನು ನಾಶಮಾಡುವುದಕ್ಕೆ ಯೆಹೋವ ದೇವರ ಅಪ್ಪಣೆ ಇಲ್ಲದೆ ಬಂದಿದ್ದೇನೋ? ಈ ದೇಶದ ಮೇಲೆ ಹೋಗಿ ಅದನ್ನು ನಾಶಮಾಡೆಂದು ಯೆಹೋವ ದೇವರೇ ನನಗೆ ಹೇಳಿದರು,’” ಎಂದನು.
और क्या अब मैंने ख़ुदावन्द के बिना कहे ही इस मक़ाम को ग़ारत करने के लिए इस पर चढ़ाई की है? ख़ुदावन्द ही ने मुझ से कहा कि इस मुल्क पर चढ़ाई कर और इसे बर्बाद कर दे।”
26 ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.
तब इलियाक़ीम — बिन — ख़िलक़ियाह, और शबनाह, और यूआख़ ने रबशाक़ी से अर्ज़ की कि “अपने ख़ादिमों से अरामी ज़बान में बात कर, क्यूँकि हम उसे समझते हैं; और उन लोगों के सुनते हुए जो दीवार पर हैं, यहूदियों की ज़बान में बातें न कर।”
27 ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.
लेकिन रबशाक़ी ने उनसे कहा, “क्या मेरे आक़ा ने मुझे ये बातें कहने को तेरे आक़ा के पास, या तेरे पास भेजा है? क्या उसने मुझे उन लोगों के पास नहीं भेजा, जो तुम्हारे साथ अपनी ही नजासत खाने और अपना ही क़ारूरा पीने को दीवार पर बैठे हैं?”
28 ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ.
फिर रबशाक़ी खड़ा हो गया और यहूदियों की ज़बान में बलन्द आवाज़ से ये कहने लगा, “मलिक — ए — मुअज़्ज़म शाह — ए — असूर का कलाम सुनो,
29 ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ. ಏಕೆಂದರೆ ಅವನು ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ಶಕ್ತನಲ್ಲ.
बादशाह यूँ फ़रमाता है, 'हिज़क़ियाह तुम को धोका न दे, क्यूँकि वह तुम को उसके हाथ से छुड़ा न सकेगा।
30 ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರು, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ, ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವನು.
और न हिज़क़ियाह ये कहकर तुम से ख़ुदावन्द पर भरोसा कराए, कि ख़ुदावन्द ज़रूर हमको छुड़ाएगा और ये शहर शाह — ए — असूर के हवाले न होगा।
31 “ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ: ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.
हिज़क़ियाह की न सुनो। क्यूँकि शाह — ए — असूर यूँ फ़रमाता है कि तुम मुझसे सुलह कर लो और निकलकर मेरे पास आओ, और तुम में से हर एक अपनी ताक और अपने अंजीर के दरख्त़ का फल खाता और अपने हौज़ का पानी पीता रहे।
32 ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.
जब तक मैं आकर तुम को ऐसे मुल्क में न ले जाऊँ, जो तुम्हारे मुल्क की तरह ग़ल्ला और मय का मुल्क, रोटी और ताकिस्तानों का मुल्क, ज़ैतूनी तेल और शहद का मुल्क है; ताकि तुम जीते रहो, और मर न जाओ; इसलिए हिज़क़ियाह की न सुनना, जब वह तुमको ये ता'लीम दे कि ख़ुदावन्द हमको छुड़ाएगा।
33 ಯಾವ ಜನಾಂಗದ ದೇವರುಗಳಾದರೂ ತನ್ನ ದೇಶಗಳನ್ನು ಅಸ್ಸೀರಿಯದ ಅರಸನ ಕೈಯಿಂದ ಬಿಡಿಸಿದ್ದು ಉಂಟೋ?
क्या क़ौमों के मा'बूदों में से किसी ने अपने मुल्क को शाह — ए — असूर के हाथ से छुड़ाया है?
34 ಹಮಾತ್, ಅರ್ಪಾದ್ ದೇವರುಗಳು ಎಲ್ಲಿ? ಸೆಫರ್ವಯಿಮ್, ಹೇನ, ಇವ್ವಗಳ ದೇವರುಗಳು ಎಲ್ಲಿ? ಅವರು ಸಮಾರ್ಯವನ್ನು ನನ್ನ ಕೈಯಿಂದ ಬಿಡಿಸಿಕೊಂಡರೋ?
हमात और अरफ़ाद के मा'बूद कहाँ हैं? और सिफ़वाइम और हेना' और इवाह के मा'बूद कहाँ हैं? क्या उन्होंने सामरिया को मेरे हाथ से बचा लिया?
35 ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.
और मुल्कों के तमाम मा'बूदों में से किस — किस ने अपना मुल्क मेरे हाथ से छुड़ा लिया, जो यहोवा येरूशलेम को मेरे हाथ से छुड़ा लेगा?”
36 ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.
लेकिन लोग ख़ामोश रहे और उसके जवाब में एक बात भी न कही, क्यूँकि बादशाह का हुक्म यह था कि उसे जवाब न देना।
37 ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ, ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
तब इलियाक़ीम — बिन — ख़िलक़ियाह जो घर का दीवान था, और शबनाह मुन्शी, और यूआख़ बिन — आसफ़ मुहर्रिर अपने कपड़े चाक किए हुए हिज़क़ियाह के पास आए और रबशाक़ी की बातें उसे सुनाई।

< ಅರಸುಗಳು - ದ್ವಿತೀಯ ಭಾಗ 18 >