< ಅರಸುಗಳು - ದ್ವಿತೀಯ ಭಾಗ 19 >
1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.
히스기야왕이 듣고 그 옷을 찢고 굵은 베를 입고 여호와의 전에 들어가서
2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.
궁내대신 엘리야김과 서기관 셉나와 제사장 중 장로들에게 굵은 베를 입혀서 아모스의 아들 선지자 이사야에게로 보내매
3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.
저희가 이사야에게 이르되 히스기야의 말씀이 오늘은 곤란과 책벌과 능욕의 날이라 아이가 임산하였으나 해산할 힘이 없도다
4 ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’” ಎಂದರು.
랍사게가 그 주 앗수르 왕의 보냄을 받고 와서 사신 하나님을 훼방하였으니 당신의 하나님 여호와께서 혹시 저의 말을 들으셨을지라 당신의 하나님 여호와께서 그 들으신 말을 인하여 꾸짖으실듯하니 당신은 이 남아 있는 자를 위하여 기도하소서 하더이다
5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,
이와 같이 히스기야 왕의 신복이 이사야에게 나아가니
6 ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
이사야가 저희에게 이르되 너희는 너희 주에게 이렇게 고하라 여호와의 말씀이 너는 앗수르 왕의 신복에게 들은바 나를 능욕하는 말을 인하여 두려워하지 말라
7 ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’” ಎಂದು ಹೇಳಿದನು.
내가 한 영을 저의 속에 두어 저로 풍문을 듣고 그 본국으로 돌아가게 하고 또 그 본국에서 저로 칼에 죽게 하리라 하셨느니라
8 ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.
랍사게가 돌아가다가 앗수르 왕이 이미 라기스에서 떠났다 함을 듣고 립나로 가서 왕을 만났으니 왕이 거기서 싸우는 중이더라
9 ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,
앗수르 왕이 구스 왕 디르하가가 나와서 더불어 싸우고자 한다 함을 듣고 다시 히스기야에게 사자를 보내며 가로되
10 “ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
너희는 유다 왕 히스기야에게 이같이 말하여 이르기를 너의 의뢰하는 네 하나님이 예루살렘을 앗수르 왕의 손에 붙이지 않겠다 하는 말에 속지 말라
11 ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?
앗수르의 열왕이 열방에 행한바 진멸한 일을 네가 들었나니 네가 어찌 구원을 얻겠느냐
12 ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?
내 열조가 멸하신 열방 곧 고산과 하란과 레셉과 들라살에 있는 에덴 족속을 그 나라의 신들이 건졌느냐
13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.
하맛 왕과 아르밧 왕과 스발와임성의 왕과 헤나와 아와의 왕들이다 어디 있느냐 하라 하니라
14 ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.
히스기야가 사자의 손에서 편지를 받아보고 여호와의 전에 올라가서 그 편지를 여호와 앞에 펴놓고
15 ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.
그 앞에서 기도하여 가로되 그룹들의 위에 계신 이스라엘 하나님 여호와여 주는 천하 만국에 홀로 하나님이시라 주께서 천지를 조성하셨나이다
16 ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.
여호와여 귀를 기울여 들으소서 여호와여 눈을 떠서 보시옵소서 산헤립이 사신 하나님을 훼방하러 보낸 말을 들으시옵소서
17 “ಯೆಹೋವ ದೇವರೇ, ಅಸ್ಸೀರಿಯದ ಅರಸರು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.
여호와여 앗수르 열왕이 과연 열방과 그 땅을 황폐케 하고
18 ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.
또 그 신들을 불에 던졌사오니 이는 저희가 신이 아니요 사람의 손으로 지은 것 곧 나무와 돌 뿐이므로 멸하였나이다
19 ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.
우리 하나님 여호와여 원컨대 이제 우리를 그 손에서 구원하옵소서 그리하시면 천하 만국이 주 여호와는 홀로 하나님이신줄 알리이다 하니라
20 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.
아모스의 아들 이사야가 히스기야에게 기별하여 가로되 이스라엘 하나님 여호와의 말씀이 네가 앗수르 왕 산헤립 까닭에 내게 기도하는 것을 내가 들었노라 하셨나이다
21 ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “‘ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.
여호와께서 앗수르 왕에게 대하여 이같이 말씀하시기를 처녀 딸 시온이 너를 멸시하며 너를 비웃었으며 딸 예루살렘이 너를 향하여 머리를 흔들었느니라
22 ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?
네가 누구를 꾸짖었으며 훼방하였느냐 누구를 향하여 소리를 높였으며 눈을 높이 떴느냐 이스라엘의 거룩한 자에게 그리하였도다
23 ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.
네가 사자로 주를 훼방하여 이르기를 내가 많은 병거를 거느리고 여러 산꼭대기에 올라가며 레바논 깊은 곳에 이르러 높은 백향목과 아름다운 잣나무를 베고 내가 그 지경 끝에 들어가며 그 동산의 무성한 수풀에 이르리라
24 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ.”
내가 땅을 파서 이방의 물을 마셨고 나의 발바닥으로 애굽의 모든 하수를 말렸노라 하였도다
25 “‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.
네가 듣지 못하였느냐 이 일은 내가 태초부터 행하였고 상고부터 정한 바라 이제 내가 이루어 너로 견고한 성들을 멸하여 돌무더기가 되게 함이니라
26 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.
그러므로 그 거한 백성의 힘이 약하여 두려워하며 놀랐나니 저희는 마치 들의 풀 같고 나물 같고 지붕의 풀 같고 자라기 전에 마른 곡초같으니라
27 “‘ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.
네 거처와 네 출입과 네가 내게 향한 분노를 내가 다 아노니
28 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’
네가 내게 향한 분노와 네 교만한 말이 내 귀에 들렸도다 그러므로 내가 갈고리로 네 코에 꿰고 자갈을 네 입에 먹여 너를 오던 길로 끌어 돌이키리라 하셨나이다
29 “ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.
또 네게 보일 징조가 이러하니 너희가 금년에는 스스로 자라난 것을 먹고 명년에는 그것에서 난 것을 먹되 제 삼년에는 심고 거두며 포도원을 심고 그 열매를 먹으리라
30 ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.
유다 족속의 피하고 남은 자는 다시 아래로 뿌리가 서리고 위로 열매를 맺을지라
31 ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.
남은 자는 예루살렘에서부터 나올 것이요 피하는 자는 시온산에서부터 나오리니 여호와의 열심이 이 일을 이루리라 하셨나이다
32 “ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “‘ಅವನು ಈ ಪಟ್ಟಣದೊಳಗೆ ಬರುವುದಿಲ್ಲ; ಅಲ್ಲಿ ಬಾಣವನ್ನು ಎಸೆಯುವುದಿಲ್ಲ; ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು; ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.
그러므로 여호와께서 앗수르 왕을 가리켜 이르시기를 저가 이 성에 이르지 못하며 이리로 살을 쏘지 못하며 방패를 성을 향하여 세우지 못하며 치려고 토성을 쌓지도 못하고
33 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.
오던 길로 돌아가고 이 성에 이르지 못하리라 하셨으니 이는 여호와의 말씀이시라
34 ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’”
내가 나와 나의 종 다윗을 위하여 이 성을 보호하여 구원하리라 하셨나이다 하였더라
35 ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.
이 밤에 여호와의 사자가 나와서 앗수르 진에서 군사 십 팔만 오천을 친지라 아침에 일찌기 일어나 보니 다 송장이 되었더라
36 ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
앗수르 왕 산헤립이 떠나 돌아가서 니느웨에 거하더니
37 ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
그 신 니스록의 묘에 경배할 때에 아드람멜렉과 사레셀이 저를 칼로 쳐죽이고 아라랏 땅으로 도망하매 그 아들 에살핫돈이 대신하여 왕이 되니라