< ಅರಸುಗಳು - ದ್ವಿತೀಯ ಭಾಗ 19 >
1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.
౧వాళ్ళ నివేదిక హిజ్కియా విన్నప్పుడు, తన బట్టలు చింపుకుని గోనెపట్ట కట్టుకుని యెహోవా మందిరానికి వెళ్ళాడు.
2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.
౨గృహ నిర్వాహకుడైన ఎల్యాకీమునూ, శాస్త్రి షెబ్నానూ, యాజకుల్లో పెద్దలనూ, ప్రవక్త అయిన ఆమోజు కొడుకు యెషయా దగ్గరికి పంపాడు.
3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.
౩వీళ్ళు గోనెపట్ట కట్టుకుని అతని దగ్గరికి వచ్చి అతనితో “హిజ్కియా చెప్పేదేమంటే, ఇది కష్టం, శిక్ష, దూషణల దినం. పిల్లలు పుట్టే సమయం వచ్చింది, కాని కనడానికి శక్తి లేదు.
4 ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’” ಎಂದರು.
౪జీవం కలిగిన దేవుణ్ణి దూషించడానికి అష్షూరు రాజైన తన యజమాని పంపిన రబ్షాకే పలికిన మాటలన్నీ నీ దేవుడైన యెహోవా ఒకవేళ విని, నీ దేవుడైన యెహోవా విన్న ఆ మాటలను బట్టి ఆయన అష్షూరురాజును గద్దించొచ్చు. కాబట్టి ఇక్కడ మిగిలి ఉన్న వాళ్ళ కోసం నీవు ప్రార్థన చెయ్యి.”
5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,
౫రాజైన హిజ్కియా సేవకులు యెషయా దగ్గరికి వచ్చినప్పుడు,
6 ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
౬యెషయా వాళ్ళతో “మీ యజమానికి ఈ మాట తెలియజేయండి. యెహోవా చెప్పేదేమంటే, అష్షూరురాజు పనివారు నన్ను దూషిస్తూ పలికిన ఆ మాటలు నీవు విని భయపడొద్దు.
7 ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’” ಎಂದು ಹೇಳಿದನು.
౭అతనిలో ఒక ఆత్మను నేను పుట్టిస్తాను. అతడు అ వదంతి విని తన దేశానికి వెళ్ళిపోతాడు. అతని దేశంలో అతన్ని కత్తితో చంపుతారు” అన్నాడు.
8 ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.
౮అష్షూరురాజు లాకీషు పట్టణాన్ని విడిచి వెళ్లి లిబ్నా మీద యుద్ధం చేస్తూ ఉన్నప్పుడు, రబ్షాకే వెళ్లి అతన్ని కలుసుకున్నాడు.
9 ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,
౯అప్పుడు, కూషురాజు తిర్హాకా తన మీద యుద్ధం చెయ్యడానికి వచ్చాడని అష్షూరు రాజు విన్నాడు. అతడు ఇంకొకసారి హిజ్కియా దగ్గరికి వార్తాహరులను పంపాడు.
10 “ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
౧౦“యూదారాజు హిజ్కియాతో ఈ విధంగా చెప్పండి. యెరూషలేము అష్షూరురాజు చేతికి చిక్కదు అని చెప్పి నీవు నమ్ముకొన్న నీ దేవుడి వల్ల మోసపోవద్దు.
11 ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?
౧౧చూడు, అష్షూరు రాజులు అన్ని దేశాలను పూర్తిగా నాశనం చేసిన సంగతి నీకు వినబడింది గదా, నీవు మాత్రం తప్పించుకోగలవా?
12 ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?
౧౨నా పూర్వికులు నాశనం చేసిన గోజాను, హారాను, రెజెపు ప్రజలు గానీ, తెలశ్శారులో ఉన్న ఏదెనీయులు గానీ, తమ దేవుళ్ళ సాయం వల్ల తప్పించుకున్నారా?
13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.
౧౩హమాతు రాజు ఏమయ్యాడు? అర్పాదు, సెపర్వియీము, హేన, ఇవ్వా అనే పట్టణాల రాజులు ఏమయ్యారు?” అని వార్త పంపాడు.
14 ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.
౧౪హిజ్కియా వార్తాహరుల చేతిలోనుంచి ఆ ఉత్తరం తీసుకుని చదివి, యెహోవా మందిరంలోకి వెళ్లి, యెహోవా సన్నిధిలో దాన్ని విప్పి పరిచి,
15 ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.
౧౫యెహోవా సన్నిధిలో ప్రార్థన చేస్తూ “యెహోవా, కెరూబుల మధ్య నివాసం ఉన్న ఇశ్రాయేలీయుల దేవా, భూమినీ ఆకాశాన్ని సృష్టించిన అద్వితీయ దేవా, నీవు లోకంలో ఉన్న అన్ని రాజ్యాలకూ దేవుడవు.
16 ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.
౧౬యెహోవా, ఆలకించు. యెహోవా, కళ్ళు తెరచి చూడు. సజీవ దేవుడివైన నిన్ను దూషించడానికి సన్హెరీబు పంపినవాడి మాటలు ఆలకించు.
17 “ಯೆಹೋವ ದೇವರೇ, ಅಸ್ಸೀರಿಯದ ಅರಸರು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.
౧౭యెహోవా, అష్షూరురాజులు ఆ ప్రజలను, వాళ్ళ దేశాలను పాడు చేసి
18 ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.
౧౮వాళ్ళ దేవుళ్ళను అగ్నిలో వేసిన మాట నిజమే. ఆ రాజ్యాల దేవుళ్ళు నిజమైన దేవుళ్ళు కాదు. అవి మనుషుల చేసిన కర్రలు, రాళ్లే. కాబట్టి వారు వాటిని నాశనం చేశారు.
19 ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.
౧౯యెహోవా మా దేవా, లోకంలో ఉన్న మనుషులందరూ నువ్వే నిజంగా అద్వితీయ దేవుడవైన యెహోవావని తెలుసుకునేలా అతని చేతిలోనుంచి మమ్మల్ని రక్షించు” అన్నాడు.
20 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.
౨౦అప్పుడు ఆమోజు కొడుకు యెషయా హిజ్కియా దగ్గరికి వార్త పంపుతూ “ఇశ్రాయేలీయుల దేవుడైన యెహోవా చెప్పేదేమంటే, అష్షూరురాజు సన్హెరీబు విషయంలో నీవు నా ఎదుట చేసిన ప్రార్థన నేను అంగీకరించాను.
21 ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “‘ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.
౨౧అతని గురించి యెహోవా చెప్పేదేమంటే, సీయోను కుమారి కన్యక నిన్ను తిరస్కరిస్తున్నది. నిన్ను హేళన చేస్తూ ఉంది. యెరూషలేము కుమారి నిన్ను చూసి తల ఊపుతూ ఉంది.
22 ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?
౨౨నీవు ఎవర్ని తిరస్కరించావు? ఎవర్ని దూషించావు? నీవు గర్వించి ఎవర్ని భయపెట్టావు?
23 ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.
౨౩ఇశ్రాయేలీయుల పవిత్ర దేవుణ్ణి కాదా? నీ వర్తమానికుల చేత యెహోవాను తిరస్కరించి పలికించిన మాటలు ఇవే గదా. నా రథాల సమూహంతో నేను పర్వత శిఖరాలకూ, లెబానోను కొండల ఎత్తులకూ, ఎక్కాను. ఎత్తుగల దాని దేవదారు వృక్షాలనూ, శ్రేష్ఠమైన సరళ వృక్షాలనూ నరికాను. దూరపు సరిహద్దుల్లో ఉన్న సత్రాల్లోకీ, ఫలాలకు క్షేత్రమైన అడవిలోకీ ప్రవేశించాను.
24 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ.”
౨౪నేను బావులు తవ్వి, పరుల నీళ్లు పానం చేశాను. నా అరకాలి కింద నేను ఐగుప్తు నదులన్నిటినీ ఎండిపోజేశాను.
25 “‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.
౨౫నేనే పూర్వకాలంలోనే దీన్ని కలగచేశాననీ, పురాతన కాలంలోనే దీన్ని నిర్ణయించాననీ నీకు వినబడలేదా? ప్రాకారాలున్న పట్టణాలను నీవు పాడు దిబ్బలుగా చెయ్యడం నావల్లే జరిగింది.
26 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.
౨౬కాబట్టి వాటి కాపురస్థులు బలహీనులై జడిసి, విభ్రాంతి పొంది, పొలంలో ఉన్న గడ్డిలా, కాడలు లేని చేలలా అయ్యారు.
27 “‘ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.
౨౭నీవు కూర్చోవడం, బయలుదేరడం, లోపలికి రావడం, నా మీద వేసే రంకెలూ అన్నీ నాకు తెలుసు.
28 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’
౨౮నా మీద నీవు వేసే రంకెలూ, నీవు చేసిన గొడవ నా చెవుల్లో పడింది గనుక నా గాలాన్ని నీ ముక్కుకు తగిలిస్తాను. నా కళ్ళెం నీ నోట్లో పెట్టి నిన్ను మళ్ళిస్తాను. నీవు వచ్చిన దారిలోనే నిన్ను మళ్ళిస్తాను.
29 “ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.
౨౯హిజ్కియా, నీకిదే సూచన. ఈ సంవత్సరంలో దానంతట అదే పండే ధాన్యం, రెండో సంవత్సరంలో దాని నుంచి వచ్చే ధాన్యం మీరు తింటారు. మూడో సంవత్సరంలో మీరు విత్తనం విత్తి చేలు కోస్తారు. ద్రాక్షతోటలు నాటి వాటి ఫలం అనుభవిస్తారు.
30 ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.
౩౦యూదా వంశంలో తప్పించుకొన్న శేషం ఇంకా కిందకు వేరు తన్ని పైకి ఎదిగి ఫలిస్తారు.
31 ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.
౩౧ఆ మిగిలిన వారు యెరూషలేములోనుంచి బయలు దేరుతారు. తప్పించుకొన్నవారు సీయోను కొండలోనుంచి బయలు దేరుతారు. సైన్యాలకు అధిపతి అయిన యెహోవా ఆసక్తి దీన్ని నెరవేరుస్తుంది.
32 “ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “‘ಅವನು ಈ ಪಟ್ಟಣದೊಳಗೆ ಬರುವುದಿಲ್ಲ; ಅಲ್ಲಿ ಬಾಣವನ್ನು ಎಸೆಯುವುದಿಲ್ಲ; ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು; ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.
౩౨కాబట్టి అష్షూరు రాజు గురించి యెహోవా చెప్పేదేమంటే, అతడు ఈ పట్టణంలోకి రాడు. దానిమీద ఒక్క బాణమైనా వెయ్యడు. ఒక్క డాలైనా దానికి చూపించడు. దాని ఎదుట ముట్టడి దిబ్బ కట్టడు.
33 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.
౩౩ఈ పట్టణం లోపలికి రాకుండా, తాను వచ్చిన దారిలోనే అతడు తిరిగి వెళ్ళిపోతాడు. ఇదే యెహోవా వాక్కు.
34 ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’”
౩౪నా నిమిత్తమూ, నా సేవకుడైన దావీదు నిమిత్తమూ, నేను ఈ పట్టణాన్ని కాపాడి రక్షిస్తాను.”
35 ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.
౩౫ఆ రాత్రే యెహోవా దూత బయలుదేరి అష్షూరు వాళ్ళ శిబిరంలోకి వెళ్లి 1, 85,000 మందిని హతం చేశాడు. ఉదయాన ప్రజలు లేచి చూసినప్పుడు వాళ్ళందరూ శవాలై చచ్చి పడి ఉన్నారు.
36 ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
౩౬అష్షూరురాజు సన్హెరీబు వెనక్కి తిరిగి, నీనెవె పట్టణానికి వెళ్ళిపోయి అక్కడ నివసించాడు.
37 ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
౩౭అతడు నిస్రోకు అనే తన దేవుడు మందిరంలో మొక్కుతూ ఉన్నప్పుడు, అతని కొడుకులు అద్రమ్మెలెకు, షరెజెరు కత్తితో అతన్ని చంపి అరారాతు దేశంలోకి తప్పించుకు పారిపోయారు. అప్పుడు అతని కొడుకు ఏసర్హద్దోను అతని స్థానంలో రాజయ్యాడు.