< ಅರಸುಗಳು - ದ್ವಿತೀಯ ಭಾಗ 19 >

1 ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.
जब हिज़क़ियाह बादशाह ने यह सुना, तो अपने कपड़े फाड़े और टाट ओढ़कर ख़ुदावन्द के घर में गया।
2 ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.
और उसने घर के दीवान और इलियाक़ीम और शबनाह मुन्शी और काहिनों के बुज़ुर्गों को टाट उढ़ाकर आमूस के बेटे यसा'याह नबी के पास भेजा।
3 ಆಗ ಅವರು ಯೆಶಾಯನಿಗೆ, “ಹಿಜ್ಕೀಯನು ಹೇಳುವುದೇನೆಂದರೆ: ‘ಈ ದಿವಸವು ಕಷ್ಟಕರವಾಗಿಯೂ ಗದರಿಕೆಯಾಗಿಯೂ ಅವಮಾನಕರವಾಗಿಯೂ ಇದೆ. ಏಕೆಂದರೆ ಹೆರಿಗೆಯ ಸಮಯವು ಬಂದಿದೆ ಆದರೆ ಹೆರುವುದಕ್ಕೆ ಶಕ್ತಿಯಿಲ್ಲ.
और उन्होंने उससे कहा, हिज़क़ियाह यूँ कहता है, कि आज का दिन दुख, और मलामत, और तौहीन का दिन है; क्यूँकि बच्चे पैदा होने पर हैं, लेकिन विलादत की ताक़त नहीं।
4 ಜೀವಿಸುವ ದೇವರನ್ನು ನಿಂದಿಸಲು ಅಸ್ಸೀರಿಯದ ಅರಸನಿಂದ ಕಳುಹಿಸಲಾಗಿದ್ದ ಸೈನ್ಯಾಧಿಕಾರಿಯ ನಿಂದೆಯ ಮಾತುಗಳನ್ನು ನಿನ್ನ ದೇವರಾದ ಯೆಹೋವ ದೇವರು ಕೇಳಿದ್ದಾರೆ. ನಿನ್ನ ದೇವರಾದ ಯೆಹೋವ ದೇವರು ಅವನ ಮಾತುಗಳಿಗೋಸ್ಕರ ಅವನನ್ನು ಗದರಿಸುವರು. ಆದ್ದರಿಂದ ನೀನು ಉಳಿದಿರುವ ಜನರಿಗಾಗಿ ಅವರನ್ನು ಪ್ರಾರ್ಥಿಸು,’” ಎಂದರು.
शायद ख़ुदावन्द तेरा ख़ुदा रबशाक़ी की सब बातें सुने जिसको उसके आक़ा शाह — ए — असूर ने भेजा है, कि “ज़िन्दा ख़ुदा की तौहीन करे और जो बातें ख़ुदावन्द तेरे ख़ुदा ने सुनी हैं उन पर वह मलामत करेगा। इसलिए तू उस बक़िया के लिए जो मौजूद है दुआ कर।”
5 ಅರಸನಾದ ಹಿಜ್ಕೀಯನ ಸೇವಕರು ಯೆಶಾಯನ ಬಳಿಗೆ ಬಂದು ಹೇಳಿದಾಗ,
इसलिए हिज़क़ियाह बादशाह के मुलाज़िम यसा'याह के पास आए।
6 ಯೆಶಾಯನು ಅವರಿಗೆ, “ನೀವು ನಿಮ್ಮ ಯಜಮಾನನಿಗೆ ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ, ನೀನು ಕೇಳಿದಂಥ ಅಸ್ಸೀರಿಯದ ಅರಸನ ಸೇವಕರು ನನ್ನನ್ನು ದೂಷಿಸಿದಂಥ ಮಾತುಗಳನ್ನು ನೀವು ಕೇಳಿದ್ದಕ್ಕೋಸ್ಕರ ಭಯಪಡಬೇಡಿರಿ.
यसा'याह ने उनसे कहा, “तुम अपने मालिक से यूँ कहना, 'ख़ुदावन्द यूँ फ़रमाता है कि तू उन बातों से जो तूने सुनी हैं, जिनसे शाह — ए — असूर के मुलाज़िमों ने मेरी बुराई की है, न डर।
7 ಇಗೋ, ನಾನು ಅವರ ಮೇಲೆ ಆತ್ಮವನ್ನು ಕಳುಹಿಸುವೆನು. ಅವನು ಒಂದು ಸುದ್ದಿಯನ್ನು ಕೇಳಿ ತನ್ನ ದೇಶಕ್ಕೆ ಹಿಂದಿರುಗುವನು. ಇದಲ್ಲದೆ ಅವನು ತನ್ನ ದೇಶದಲ್ಲಿ ಖಡ್ಗಕ್ಕೆ ತುತ್ತಾಗುವಂತೆ ಮಾಡುವೆನು,’” ಎಂದು ಹೇಳಿದನು.
देख, मैं उसमें एक रूह डाल दूँगा, और वह एक अफ़वाह सुनकर अपने मुल्क को लौट जाएगा, और मैं उसे उसी के मुल्क में तलवार से मरवा डालूँगा।”
8 ಹೀಗೆ ಸೈನ್ಯಾಧಿಕಾರಿಯು ಅಸ್ಸೀರಿಯದ ಅರಸನು ಲಾಕೀಷನ್ನು ಬಿಟ್ಟು ಹೊರಟಿದ್ದಾನೆಂದು ಕೇಳಿದಾಗ, ಅವನು ಲಿಬ್ನಕ್ಕೆ ಹೋಗಿ, ಅಲ್ಲಿ ಅರಸನು ಲಿಬ್ನದವರೊಂದಿಗೆ ಯುದ್ಧಮಾಡುತ್ತಿರುವುದನ್ನು ಕಂಡನು.
इसलिए रबशाक़ी लौट गया और उसने शाह — ए — असूर को लिबनाह से लड़ते पाया, क्यूँकि उसने सुना था कि वह लकीस से चला गया है;
9 ಅಷ್ಟರಲ್ಲಿ ಕೂಷನ ಅರಸನಾದ ತಿರ್ಹಾಕನು ತನಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೊರಟಿದ್ದಾನೆಂಬ ಸುದ್ದಿಯನ್ನು ಅಸ್ಸೀರಿಯದ ಅರಸನು ಕೇಳಿ, ಹಿಜ್ಕೀಯನ ಬಳಿಗೆ ತಿರಿಗಿ ದೂತರನ್ನು ಕಳುಹಿಸಿ ಅವರಿಗೆ,
और जब उसने कूश के बादशाह तिरहाक़ा के ज़रिए' ये कहते सुना कि “देख, वह तुझसे लड़ने को निकला है,” तो उसने फिर हिज़क़ियाह के पास क़ासिद रवाना किए और कहा,
10 “ನೀವು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಬೇಕಾದದ್ದೇನೆಂದರೆ: ನೀನು ನಂಬುವ ದೇವರು, ‘ಯೆರೂಸಲೇಮನ್ನು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ ನಿನ್ನನ್ನು ಮೋಸಗೊಳಿಸಾನು.
कि “शाह — ए — यहूदाह हिज़क़ियाह से इस तरह कहना, 'तेरा ख़ुदा, जिस पर तेरा भरोसा है, तुझे यह कहकर धोखा न दे कि येरूशलेम शाह — ए — असूर के क़ब्ज़े में नहीं किया जाएगा।
11 ಇಗೋ, ಅಸ್ಸೀರಿಯದ ಅರಸರು ಸಮಸ್ತ ದೇಶಗಳನ್ನು ಸಂಪೂರ್ಣವಾಗಿ ನಾಶಮಾಡಿದರೆಂದು ನೀನು ಕೇಳಿದಿಯಲ್ಲಾ. ಹೀಗಿದ್ದ ಮೇಲೆ ನೀನು ಬಿಡುಗಡೆಯಾಗುವೆಯೋ?
देख, तूने सुना है कि असूर के बादशाहों ने तमाम मुमालिक को बिल्कुल ग़ारत करके उनका क्या हाल बनाया है; इसलिए क्या तू बचा रहेगा?
12 ನನ್ನ ಪಿತೃಗಳು ಹಾಳುಮಾಡಿದ ಗೋಜಾನ್, ಹಾರಾನ್, ರೆಜೆಫ್ ಮುಂತಾದ ದೇವರುಗಳು ಅವರನ್ನು ಬಿಡುಗಡೆ ಮಾಡಲಿಲ್ಲ. ತೆಲ್ ಅಸ್ಸಾರ್ ಎಂಬಲ್ಲಿದ್ದ ಏದೆನಿನ ಜನರನ್ನು ಈ ದೇವರುಗಳು ಅವರನ್ನು ರಕ್ಷಿಸಲು ಸಾಧ್ಯವಾಯಿತೇ?
क्या उन क़ौमों के मा'बूदों ने उनको, या'नी जौज़ान और हारान और रसफ़ और बनी — 'अदन जो तिल्लसार में थे, जिनको हमारे बाप — दादा ने बर्बाद किया, छुड़ाया?
13 ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.
हमात का बादशाह और अरफ़ाद का बादशाह, और शहर सिफ़वाइम और हेना' और इवाह का बादशाह कहाँ है?”
14 ಹಿಜ್ಕೀಯನು ಆ ದೂತರ ಕೈಯಿಂದ ಪತ್ರವನ್ನು ತೆಗೆದುಕೊಂಡು ಓದಿದನು, ಅನಂತರ ಯೆಹೋವ ದೇವರ ಆಲಯಕ್ಕೆ ಹೋಗಿ ಅದನ್ನು ಯೆಹೋವ ದೇವರ ಮುಂದೆ ತೆರೆದಿಟ್ಟನು.
हिज़क़ियाह ने क़ासिदों के हाथ से ख़त लिया और उसे पढ़ा, और हिज़क़ियाह ने ख़ुदावन्द के घर में जाकर उसे ख़ुदावन्द के सामने फैला दिया।
15 ಇದಲ್ಲದೆ ಹಿಜ್ಕೀಯನು ಯೆಹೋವ ದೇವರ ಮುಂದೆ ಪ್ರಾರ್ಥನೆಮಾಡಿ ಹೇಳಿದ್ದೇನೆಂದರೆ, “ಕೆರೂಬಿಗಳ ಮಧ್ಯದಲ್ಲಿ ವಾಸವಾಗಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರೇ, ನೀವೊಬ್ಬರೇ ಭೂಮಿಯ ಸಮಸ್ತ ರಾಜ್ಯಗಳಿಗೆ ದೇವರಾಗಿದ್ದೀರಿ. ನೀವೇ ಆಕಾಶವನ್ನೂ, ಭೂಮಿಯನ್ನೂ ಉಂಟುಮಾಡಿದ್ದೀರಿ.
और हिज़क़ियाह ने ख़ुदावन्द के सामने इस तरह दुआ की, ऐ ख़ुदावन्द, इस्राईल के ख़ुदा, करूबियों के ऊपर बैठने वाले! तू ही अकेला ज़मीन की सब सल्तनतों का ख़ुदा है। तू ने ही आसमान और ज़मीन को पैदा किया।
16 ಯೆಹೋವ ದೇವರೇ, ನಿಮ್ಮ ಕಿವಿಗೊಟ್ಟು ಕೇಳಿರಿ. ಯೆಹೋವ ದೇವರೇ, ನಿಮ್ಮ ಕಣ್ಣುಗಳನ್ನು ತೆರೆದು ನೋಡಿರಿ. ಸನ್ಹೇರೀಬನು ಜೀವವುಳ್ಳ ದೇವರನ್ನು ನಿಂದಿಸಿ ಕಳುಹಿಸಿದ ಮಾತುಗಳನ್ನು ಕೇಳಿರಿ.
ऐ ख़ुदावन्द, कान लगा और सुन! ऐ ख़ुदावन्द, अपनी आँखें खोल और देख; और सनहेरिब की बातों को, जिनसे ज़िन्दा ख़ुदा की तौहीन करने के लिए उसने इस आदमी को भेजा है, सुन ले।
17 “ಯೆಹೋವ ದೇವರೇ, ಅಸ್ಸೀರಿಯದ ಅರಸರು ಜನಾಂಗಗಳನ್ನೂ ಅವರ ದೇಶಗಳನ್ನೂ ಹಾಳು ಮಾಡಿ, ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ.
ऐ ख़ुदावन्द, असूर के बादशाहों ने दर हक़ीक़त क़ौमों को उनके मुल्कों समेत तबाह किया:
18 ಅವು ದೇವರುಗಳಲ್ಲ, ಕೇವಲ ಮನುಷ್ಯರು ಕೆತ್ತಿದ ಕಲ್ಲುಮರಗಳಷ್ಟೆ, ಆದ್ದರಿಂದಲೇ ಅವರು ಅವುಗಳನ್ನು ನಾಶಮಾಡಿದ್ದಾರೆ.
और उनके मा'बूदों को आग में डाला क्यूँकि वह ख़ुदा न थे, बल्कि आदमियों की दस्तकारी, या'नी लकड़ी और पत्थर थे; इसलिए उन्होंने उनको बर्बाद किया है।
19 ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.
इसलिए अब ऐ ख़ुदावन्द हमारे ख़ुदा मैं तेरी मिन्नत करता हूँ, कि तू हमको उसके हाथ से बचा ले, ताकि ज़मीन की सब सल्तनतें जान लें कि तू ही अकेला ख़ुदावन्द ख़ुदा है।”
20 ಆಗ ಆಮೋಚನ ಮಗನಾದ ಯೆಶಾಯನು ಹಿಜ್ಕೀಯನಿಗೆ ಹೇಳಿ ಕಳುಹಿಸಿದ್ದೇನೆಂದರೆ: “ಇಸ್ರಾಯೇಲಿನ ಯೆಹೋವ ದೇವರ ಮಾತಿದು: ನೀನು ಅಸ್ಸೀರಿಯದ ಅರಸನಾದ ಸನ್ಹೇರೀಬನನ್ನು ಕುರಿತು ಮಾಡಿದ ಪ್ರಾರ್ಥನೆಯನ್ನು ಕೇಳಿದ್ದೇನೆ.
तब यसा'याह — बिन — आमूस ने हिज़क़ियाह को कहला भेजा कि ख़ुदावन्द इस्राईल का ख़ुदा यूँ फ़रमाता है: चूँकि तू ने शाह — ए — असूर सनहेरिब के ख़िलाफ़ मुझसे दू'आ की है, मैंने तेरी सुन ली।
21 ಅವನನ್ನು ಕುರಿತು ಯೆಹೋವ ದೇವರು ಹೇಳುವುದೇನೆಂದರೆ: “‘ಕನ್ನಿಕೆಯಾದ ಚೀಯೋನ್ ಪುತ್ರಿಯು ನಿನ್ನನ್ನು ತಿರಸ್ಕರಿಸಿ, ನಿನಗೆ ಅಪಹಾಸ್ಯ ಮಾಡುತ್ತಾಳೆ. ಯೆರೂಸಲೇಮಿನ ಪುತ್ರಿಯು ನೀನು ಓಡಿ ಹೋಗುವಾಗ ತನ್ನ ತಲೆಯಾಡಿಸುತ್ತಾಳೆ.
इसलिए ख़ुदावन्द ने उसके हक़ में यूँ फ़रमाया कि कुँवारी दुख़्तरें सिय्यून ने तुझे हक़ीर जाना और तेरा मज़ाक़ उड़ाया।
22 ನೀನು ಯಾರನ್ನು ನಿಂದಿಸಿ, ಯಾರನ್ನು ದೂಷಿಸಿದೆ? ಯಾರಿಗೆ ವಿರೋಧವಾಗಿ ನಿನ್ನ ಧ್ವನಿಯನ್ನು ಎತ್ತಿದ್ದೀ? ನಿನ್ನ ಕಣ್ಣುಗಳು ಗರ್ವದಿಂದ ನೋಡಿದ್ದು ಯಾರನ್ನು? ಇಸ್ರಾಯೇಲಿನ ಪರಿಶುದ್ಧ ದೇವರಿಗೆ ವಿರೋಧವಾಗಿಯಲ್ಲವೇ?
येरूशलेम की बेटी ने तुझ पर सर हिलाया है, तूने किसकी तौहीन — ओ — बुराई की है? तूने किसके ख़िलाफ़ अपनी आवाज़ बलन्द की, और अपनी आँखें ऊपर उठाई? इस्राईल के क़ुद्दूस के ख़िलाफ़!
23 ನೀನು ನಿನ್ನ ದೂತರ ಮುಖಾಂತರ ಯೆಹೋವ ದೇವರನ್ನು ನಿಂದಿಸಿರುವೆ. ಇದಲ್ಲದೆ ನೀನು ಈ ಮಾತುಗಳನ್ನಾಡಿ ಜಂಬಕೊಚ್ಚಿಕೊಂಡಿದ್ದೀ, “ನಾನು ನನ್ನ ರಥಸಮೂಹದೊಡನೆ ಪರ್ವತಗಳ ಶಿಖರಗಳನ್ನು ಹತ್ತಿದ್ದೇನೆ, ಲೆಬನೋನಿನ ಎತ್ತರಗಳಿಗೆ ಹೋಗಿದ್ದೇನೆ. ಅದರ ಉನ್ನತವಾದ ದೇವದಾರುಗಳನ್ನೂ, ಅತ್ಯುತ್ತಮ ತುರಾಯಿ ಮರಗಳನ್ನೂ ಕಡಿದುಹಾಕಿದ್ದೇನೆ. ಅದರ ಅಂಚಿನ ಗಡಿಸ್ಥಳಗಳಲ್ಲಿಯೂ, ಅದರ ಫಲಭರಿತ ಅಡವಿಯಲ್ಲಿಯೂ ಪ್ರವೇಶಿಸಿದ್ದೇನೆ.
तूने अपने क़ासिदों के ज़रिए' से ख़ुदावन्द की तौहीन की, और कहा, कि मैं बहुत से रथों को साथ लेकर पहाड़ों की चोटियों पर, बल्कि लुबनान के वस्ती हिस्सों तक चढ़आया हूँ; और मैं उसके ऊँचे — ऊँचे देवदारों और अच्छे से अच्छे सनोबर के दरख़्तों को काट डालूँगा; और मैं उसके दूर से दूर मक़ाम में, जहाँ उसकी बेशक़ीमती ज़मीन का जंगल है घुसा चला जाऊँगा।
24 ಪರದೇಶಗಳಲ್ಲಿ ನಾನು ಬಾವಿಗಳನ್ನು ಅಗೆದು, ನೀರು ಕುಡಿದಿದ್ದೇನೆ. ನನ್ನ ಅಂಗಾಲುಗಳಿಂದ ಈಜಿಪ್ಟಿನವರ ಎಲ್ಲಾ ನದಿಗಳನ್ನು ಬತ್ತಿಹೋಗುವಂತೆ ಮಾಡಿದ್ದೇನೆ.”
मैंने जगह — जगह का पानी खोद — खोद कर पिया है और मैं अपने पाँव के तलवे से मिस्र की सब नदियाँ सुखा डालूँगा।
25 “‘ಹೀಗಾಗಬೇಕೆಂದು ಬಹಳ ದಿನಗಳ ಹಿಂದೆಯೇ ನಿರ್ಣಯಿಸಿದ್ದನ್ನು ನೀನು ಕೇಳಲಿಲ್ಲವೋ? ಪುರಾತನ ದಿನಗಳಲ್ಲಿ ನಾನು ಯೋಚಿಸಿದ್ದನ್ನು, ಈಗ ನಾನು ಅದನ್ನು ನೆರವೇರಿಸಿದ್ದೇನೆ. ಆದ್ದರಿಂದಲೇ ನೀನು ಕೋಟೆಗಳುಳ್ಳ ಪಟ್ಟಣಗಳನ್ನು ಹಾಳಾದ ದಿಬ್ಬಗಳಾಗಿ ಮಾಡಿಬಿಟ್ಟಿರುವೆ.
क्या तू ने नहीं सुना कि मुझे यह किए हुए मुद्दत हुई और मैने इसे गुज़रे दिनों में ठहरा दिया था? अब मैने उसको पूरा किया है कि तू फ़सीलदार शहरों को उजाड़ कर खंडर बना देने के लिए खड़ा हो।
26 ಆದ್ದರಿಂದ ಅವುಗಳ ನಿವಾಸಿಗಳು ಬಲಹೀನರಾಗಿ ಹೆದರಿ ಆಶಾಭಂಗಹೊಂದಿ ನಾಚಿಕೆಪಟ್ಟರು. ಅವರು ಹೊಲದ ಹುಲ್ಲಿನಂತೆಯೂ, ಹಸಿರು ಸಸಿಗಳಂತೆಯೂ, ಮಾಳಿಗೆಯ ಮೇಲಿನ ಹುಲ್ಲಿನಂತೆಯೂ, ಬೆಳೆಯುವುದಕ್ಕಿಂತ ಮುಂಚೆಯೇ ಬಾಡಿಹೋಗುವ ಪೈರಿನಂತೆಯೂ ಅವರಿದ್ದಾರೆ.
इसी वजह से उनके बाशिन्दे कमज़ोर हुए और वह घबरा गए, और शर्मिन्दा हुए वह मैदान की घास और हरी पौद और छतों पर की घास, और उस अनाज की तरह हो गए, जो बढ़ने से पहले सूख जाए।
27 “‘ಆದರೆ ನೀನು ಎಲ್ಲಿ ವಾಸಿಸುವೆಯೆಂಬುದನ್ನು ನೀನು ಯಾವಾಗ ಬರುವೆ ಹೋಗುವೆ ಎಂಬುದನ್ನು ನೀನು ನನ್ನ ಮೇಲೆ ಹೇಗೆ ಕೋಪಿಸಿಕೊಳ್ಳುವೆ? ಎಂಬುದನ್ನು ನಾನು ಬಲ್ಲೆನು.
“लेकिन मैं तेरी मजलिस और आमद — ओ — रफ़्त और तेरा मुझ पर झुंझलाना मैं जानता हूँ।
28 ನೀನು ನನಗೆ ವಿರೋಧವಾಗಿ ಮಾಡುವ ನಿನ್ನ ರೌದ್ರವೂ, ನಿನ್ನ ಅಹಂಕಾರವೂ ನನ್ನ ಕಿವಿಗಳಿಗೆ ತಲುಪಿದೆ. ಆದ್ದರಿಂದ ನಾನು ನನ್ನ ಕೊಂಡಿಯನ್ನು ನಿನ್ನ ಮೂಗಿನಲ್ಲಿಯೂ, ನನ್ನ ಕಡಿವಾಣವನ್ನು ನಿನ್ನ ಬಾಯಲ್ಲಿಯೂ ಹಾಕಿ, ನೀನು ಬಂದ ದಾರಿಯಿಂದಲೇ ನಿನ್ನನ್ನು ಹಿಂದಿರುಗಿಸುವೆನು.’
तेरे मुझ पर झंझलाने की वजह से, और इसलिए कि तेरा घमण्ड मेरे कानों तक पहुँचा है, मैं अपनी नकेल तेरी नाक में, और अपनी लगाम तेरे मुँह में डालूँगा; और तू जिस रास्ते से आया है, मैं तुझे उसी रास्ते से वापस लौटा दूँगा।
29 “ಹಿಜ್ಕೀಯನೇ, ಇದು ನಿಮಗೆ ಸಂಕೇತವಾಗಿರುವದು, “ಈ ವರ್ಷದಲ್ಲಿ ತನ್ನಷ್ಟಕ್ಕೆ ತಾನೇ ಬೆಳೆದದ್ದನ್ನೂ, ಎರಡನೆಯ ವರ್ಷದಲ್ಲಿ ಅದರಿಂದ ಮೊಳೆತದ್ದನ್ನೂ ತಿನ್ನುವಿರಿ. ಆದರೆ ಮೂರನೆಯ ವರ್ಷದಲ್ಲಿ ನೀವು ಬೀಜವನ್ನು ಬಿತ್ತಿ ಕೊಯ್ಯುವಿರಿ. ದ್ರಾಕ್ಷಿತೋಟಗಳಲ್ಲಿ ವ್ಯವಸಾಯಮಾಡಿ, ಅವುಗಳ ಫಲಗಳನ್ನು ತಿನ್ನುವಿರಿ.
“और तेरे लिए ये निशान होगा कि तुम इस साल वह चीज़ें जो ख़ुद से उगती हैं, और दूसरे साल वह चीज़ें जो उनसे पैदा हों खाओगे; और तीसरे साल तुम बोना और काटना, और बाग़ लगाकर उनका फल खाना।
30 ಯೆಹೂದದ ಮನೆತನದಲ್ಲಿ ತಪ್ಪಿಸಿಕೊಂಡು ಉಳಿದವರು ತಿರುಗಿ ದೇಶದಲ್ಲಿ ಬೇರೂರಿ ನೆಲೆಗೊಂಡು ಅಭಿವೃದ್ಧಿಯಾಗುವರು.
और वह जो यहूदाह के घराने से बचा रहा है फिर नीचे की तरफ़ जड़ पकड़ेगा और ऊपर कि तरफ़ फल लाएगा।
31 ಏಕೆಂದರೆ ಯೆರೂಸಲೇಮಿನಿಂದ ಉಳಿದವರೂ, ಚೀಯೋನ್ ಪರ್ವತದಿಂದ ತಪ್ಪಿಸಿಕೊಂಡವರೂ ಹೊರಡುವರು. ಸೇನಾಧೀಶ್ವರ ಯೆಹೋವ ದೇವರ ಆಸಕ್ತಿಯು ಇದನ್ನು ನೆರವೇರಿಸುವುದು.
क्यूँकि एक बक़िया येरूशलेम से, और वह जो बच रहे हैं कोह — ए — सिय्यून से निकलेंगे। ख़ुदावन्द की ग़य्यूरी ये कर दिखाएगी।
32 “ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “‘ಅವನು ಈ ಪಟ್ಟಣದೊಳಗೆ ಬರುವುದಿಲ್ಲ; ಅಲ್ಲಿ ಬಾಣವನ್ನು ಎಸೆಯುವುದಿಲ್ಲ; ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು; ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.
“इसलिए ख़ुदावन्द शाह — ए — असूर के हक़ में यूँ फ़रमाता है कि वह इस शहर में आने, या यहाँ तीर चलाने न पाएगा; वह न तो सिपर लेकर उसके सामने आने, और न उसके मुक़ाबिल दमदमा बाँधने पाएगा।
33 ಅವನು ಬಂದ ದಾರಿಯಿಂದಲೇ ಹಿಂದಿರುಗಿ ಹೋಗುವನು, ಈ ಪಟ್ಟಣದೊಳಗೆ ಬರುವುದೇ ಇಲ್ಲ, ಎಂದು ಯೆಹೋವ ದೇವರು ಹೇಳುತ್ತಾರೆ.
बल्कि ख़ुदावन्द फ़रमाता है कि जिस रास्ते से वह आया, उसी रास्ते से लौट जाएगा; और इस शहर में आने न पाएगा।
34 ಈ ಪಟ್ಟಣವನ್ನು ನನಗೋಸ್ಕರವೂ ನನ್ನ ಸೇವಕನಾದ ದಾವೀದನಿಗೋಸ್ಕರವೂ ಕಾಪಾಡಿ ಅದನ್ನು ರಕ್ಷಿಸುವೆನು.’”
क्यूँकि मैं अपनी ख़ातिर और अपने बन्दे दाऊद की ख़ातिर इस शहर की हिमायत करूँगा ताकि इसे बचा लें।”
35 ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.
इसलिए उसी रात को ख़ुदावन्द के फ़रिश्ते ने निकल कर असूर की लश्करगाह में एक लाख पचासी हज़ार आदमी मार डाले, और सुबह को जब लोग सवेरे उठे तो देखा, कि वह सब मरे पड़े हैं।
36 ಆಗ ಅಸ್ಸೀರಿಯದ ಅರಸನಾದ ಸನ್ಹೇರೀಬನು ಹಿಂದಿರುಗಿ ನಿನೆವೆ ಪಟ್ಟಣಕ್ಕೆ ಹೋಗಿ ಅಲ್ಲಿ ವಾಸಿಸಿದನು.
तब शाह — ए — असूर सनहेरिब वहाँ से चला गया और लौटकर नीनवा में रहने लगा।
37 ಒಂದು ದಿನ ಅವನು ತನ್ನ ದೇವರಾದ ನಿಸ್ರೋಕನ ಆಲಯದಲ್ಲಿ ಆರಾಧನೆ ಮಾಡುತ್ತಿರುವಾಗ, ಅವನ ಮಕ್ಕಳಾದ ಅದ್ರಮ್ಮೆಲೆಕ್, ಸರೆಚೆರ್ ಎಂಬವರು ಅವನನ್ನು ಖಡ್ಗದಿಂದ ಕೊಂದು, ಅರಾರಾಟ್ ದೇಶಕ್ಕೆ ತಪ್ಪಿಸಿಕೊಂಡು ಹೋದರು. ಅವನ ಮಗ ಏಸರ್‌ಹದ್ದೋನನು ಅವನಿಗೆ ಬದಲಾಗಿ ಅರಸನಾದನು.
और जब वह अपने मा'बूद निसरूक के बुतख़ाने में इबादत कर रहा था, तो अदरम्मलिक और शराज़र ने उसे तलवार से क़त्ल किया, और अरारात की सरज़मीन को भाग गए। और उसका बेटा असरहद्दून उसकी जगह बादशाह हुआ।

< ಅರಸುಗಳು - ದ್ವಿತೀಯ ಭಾಗ 19 >