< ಅರಸುಗಳು - ದ್ವಿತೀಯ ಭಾಗ 2 >

1 ಯೆಹೋವ ದೇವರು ಎಲೀಯನನ್ನು ಬಿರುಗಾಳಿಯಿಂದ ಆಕಾಶಕ್ಕೆ ಎತ್ತಿಕೊಳ್ಳುವಾಗ, ಎಲೀಯನು ಎಲೀಷನ ಸಂಗಡ ಗಿಲ್ಗಾಲಿನಿಂದ ಹೋಗುತ್ತಾ ಇದ್ದನು.
وَعِنْدَمَا أَزْمَعَ الرَّبُّ أَنْ يَنْقُلَ إِيلِيَّا فِي الْعَاصِفَةِ إِلَى السَّمَاءِ، ذَهَبَ إِيلِيَّا وَأَلِيشَعُ مِنَ الْجِلْجَالِ.١
2 ಆಗ ಎಲೀಯನು ಎಲೀಷನಿಗೆ, “ನೀನು ದಯಮಾಡಿ ಇಲ್ಲಿ ಇರು. ಯೆಹೋವ ದೇವರು ನನ್ನನ್ನು ಬೇತೇಲಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕೆ ಎಲೀಷನು, “ಯೆಹೋವ ದೇವರ ಜೀವದಾಣೆ, ನಿನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಬೇತೇಲಿಗೆ ಹೋದರು.
فَقَالَ إِيلِيَّا لأَلِيشَعَ: «امْكُثْ هُنَا لأَنَّ الرَّبَّ قَدْ أَوْفَدَنِي إِلَى بَيْتِ إِيلَ». فَأَجَابَ أَلِيشَعُ: «حَيٌّ هُوَ الرَّبُّ، وَحَيَّةٌ هِيَ نَفْسُكَ إِنِّي لَا أَتْرُكُكَ». فَانْطَلَقَا مَعاً إِلَى بَيْتِ إِيلَ.٢
3 ಆಗ ಬೇತೇಲಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಇಂದು ಯೆಹೋವ ದೇವರು ನಿನ್ನ ಯಜಮಾನನನ್ನು ನಿನ್ನಿಂದ ತೆಗೆದುಕೊಳ್ಳುವರೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ಹೌದು, ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.
فَخَرَجَ بَنُو الأَنْبِيَاءِ الْمُقِيمُونَ فِي بَيْتِ إِيلَ لِلِقَاءِ أَلِيشَعَ وَقَالُوا لَهُ: «هَلْ تَعْلَمُ أَنَّ الرَّبَّ سَيَأْخُذُ الْيَوْمَ مِنْكَ سَيِّدَكَ إِيلِيَّا؟» فَأَجَابَ: «نَعَمْ، إِنِّي أَعْلَمُ، فَاصْمُتُوا».٣
4 ಆಗ ಎಲೀಯನು ಅವನಿಗೆ, “ಎಲೀಷನೇ, ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೆರಿಕೋವಿಗೆ ಕಳುಹಿಸುತ್ತಿದ್ದಾರೆ” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರು ಯೆರಿಕೋವಿಗೆ ಬಂದರು.
ثُمَّ قَالَ لَهُ إِيلِيَّا: «يَا أَلِيشَعُ، امْكُثْ هُنَا لأَنَّ الرَّبَّ قَدْ أَوْفَدَنِي إِلَى أَرِيحَا». فَأَجَابَهُ: «حَيٌّ هُوَ الرَّبُّ وَحَيَّةٌ هِيَ نَفْسُكَ إِنِّي لَا أَتْرُكُكَ». فَتَوَجَّهَا نَحْوَ أَرِيحَا.٤
5 ಆಗ ಯೆರಿಕೋವಿನಲ್ಲಿರುವ ಪ್ರವಾದಿಗಳ ಗುಂಪು ಎಲೀಷನ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ಇಂದು ನಿನ್ನ ಯಜಮಾನನನ್ನು ನಿನ್ನ ಬಳಿಯಿಂದ ತೆಗೆದುಕೊಳ್ಳುವನೆಂದು ತಿಳಿದಿದ್ದೀಯೋ?” ಎಂದರು. ಅದಕ್ಕವನು, “ನಾನು ಕೂಡಾ ಬಲ್ಲೆ, ಸುಮ್ಮನೆ ಇರಿ,” ಎಂದನು.
وَعِنْدَمَا بَلَغَاهَا تَقَدَّمَ بَنُو الأَنْبِيَاءِ الْمُقِيمُونَ فِي أَرِيحَا مِنْ أَلِيشَعَ قَائِلِينَ: «أَتَعْلَمُ أَنَّ الرَّبَّ سَيَأْخُذُ الْيَوْمَ مِنْكَ سَيِّدَكَ إِيلِيَّا؟» فَقَالَ: «نَعَمْ، إِنِّي أَعْلَمُ فَاصْمُتُوا».٥
6 ಎಲೀಯನು ಅವನಿಗೆ, “ನೀನು ದಯಮಾಡಿ ಇಲ್ಲೇ ಇರು. ಯೆಹೋವ ದೇವರು ನನ್ನನ್ನು ಯೊರ್ದನಿಗೆ ಕಳುಹಿಸುತ್ತಿದ್ದಾರೆ,” ಎಂದನು. ಅದಕ್ಕವನು, “ಯೆಹೋವ ದೇವರ ಜೀವದಾಣೆ, ನನ್ನ ಪ್ರಾಣದ ಜೀವದಾಣೆ, ನಾನು ನಿನ್ನನ್ನು ಬಿಡುವುದಿಲ್ಲ,” ಎಂದನು. ಹಾಗೆಯೇ ಅವರಿಬ್ಬರೂ ಮುಂದಕ್ಕೆ ನಡೆದರು.
ثُمَّ قَالَ لَهُ إِيلِيَّا: «امْكُثْ هُنَا لأَنَّ الرَّبَّ قَدْ أَوْفَدَنِي إِلَى الأُرْدُنِّ». فَأَجَابَ: «حَيٌّ هُوَ الرَّبُّ وَحَيَّةٌ هِيَ نَفْسُكَ إِنِّي لَا أَتْرُكُكَ». فَانْطَلَقَا مَعاً.٦
7 ಪ್ರವಾದಿಗಳ ಗುಂಪಿನಲ್ಲಿ ಐವತ್ತು ಮಂದಿ ಹೋಗಿ ದೂರದಲ್ಲಿ ಎದುರಾಗಿ ನಿಂತರು. ಆದರೆ ಆ ಇಬ್ಬರು ಯೊರ್ದನ್ ನದಿ ಬಳಿಯಲ್ಲಿ ನಿಂತರು.
وَرَافَقَهُمَا خَمْسُونَ رَجُلاً مِنْ بَنِي الأَنْبِيَاءِ إِلَى حَيْثُ كَانَا يَقِفَانِ إِلَى جُوَارِ الأُرْدُنِّ. وَتَوَقَّفُوا تُجَاهَهُمَا مِنْ بَعِيدٍ.٧
8 ಆದರೆ ಎಲೀಯನು ತನ್ನ ಹೊದಿಕೆಯನ್ನು ತೆಗೆದು ಮಡಿಸಿಕೊಂಡು, ನೀರನ್ನು ಹೊಡೆದನು. ಆಗ ಆ ನೀರು ಈ ಕಡೆ, ಆ ಕಡೆ ವಿಭಾಗವಾದುದರಿಂದ ಅವರಿಬ್ಬರೂ ಒಣಭೂಮಿಯ ಮೇಲೆ ದಾಟಿಹೋದರು.
فَتَنَاوَلَ إِيلِيَّا رِدَاءَهُ وَطَوَاهُ، ثُمَّ ضَرَبَ بِهِ الْمَاءَ، فَانْفَلَقَ النَّهْرُ إِلَى شَطْرَيْنِ، فَاجْتَازَا فَوْقَ الْيَابِسَةِ.٨
9 ಅವರು ದಾಟಿಹೋದ ತರುವಾಯ, ಎಲೀಯನು ಎಲೀಷನಿಗೆ, “ನಾನು ನಿನ್ನನ್ನು ಬಿಟ್ಟುಹೋಗುವುದಕ್ಕೆ ಮುಂಚೆ, ನಿನಗೋಸ್ಕರ ನಾನು ಮಾಡಬೇಕಾದದ್ದನ್ನು ಕೇಳು,” ಎಂದನು. ಅದಕ್ಕೆ ಎಲೀಷನು, “ನಿನ್ನ ಆತ್ಮದ ಎರಡು ಪಾಲನ್ನು ನಾನು ಬಾಧ್ಯವಾಗಿ ಹೊಂದುವಂತೆ ಮಾಡು,” ಎಂದನು.
وَلَمَّا عَبَرَا قَالَ إِيلِيَّا لأَلِيشَعَ: «اطْلُبْ مَاذَا أَصْنَعُ لَكَ قَبْلَ أَنْ أُؤخَذَ مِنْكَ؟» فَأَجَابَ أَلِيشَعُ: «لِيَحِلَّ عَلَيَّ ضِعْفُ مَا لَدَيْكَ مِنْ قُوَّةٍ رُوحِيَّةٍ».٩
10 ಅದಕ್ಕವನು, “ನೀನು ಕಠಿಣವಾದದ್ದನ್ನು ಕೇಳಿದೆ. ಆದಾಗ್ಯೂ ನಿನ್ನ ಬಳಿಯಿಂದ ತೆಗೆಯಲಾಗುವಾಗ ನೀನು ನನ್ನನ್ನು ಕಂಡರೆ, ನಿನಗೆ ಅದು ದೊರಕುವುದು, ಇಲ್ಲದಿದ್ದರೆ, ದೊರಕುವುದಿಲ್ಲ,” ಎಂದನು.
فَقَالَ إِيلِيَّا: «لَقَدْ طَلَبْتَ أَمْراً صَعْباً، وَلَكِنْ إِنْ رَأَيْتَنِي وَأَنَا أُؤخَذُ مِنْكَ تَنَلْ سُؤْلَكَ، وَإلَّا فَلَنْ تَحْصُلَ عَلَى مَا طَلَبْتَ».١٠
11 ಅವರು ನಡೆಯುತ್ತಾ ಬಂದು ಮಾತನಾಡಿಕೊಂಡಿರುವಾಗ, ಬೆಂಕಿಯ ರಥವೂ ಬೆಂಕಿಯ ಕುದುರೆಗಳೂ ಅವರಿಬ್ಬರನ್ನೂ ಬೇರೆಯಾಗಿ ಮಾಡಿದವು. ಎಲೀಯನು ಬಿರುಗಾಳಿಯಲ್ಲಿ ಆಕಾಶಕ್ಕೆ ಏರಿಹೋದನು.
وَفِيمَا هُمَا يَسِيرَانِ وَيَتَجَاذَبَانِ أَطْرَافَ الْحَدِيثِ، فَصَلَتْ بَيْنَهُمَا مَرْكَبَةٌ مِنْ نَارٍ تَجُرُّهَا خُيُولٌ نَارِيَّةٌ، نَقَلَتْ إِيلِيَّا فِي الْعَاصِفَةِ إِلَى السَّمَاءِ.١١
12 ಎಲೀಷನು ಅದನ್ನು ಕಂಡು, “ನನ್ನ ತಂದೆಯೇ, ನನ್ನ ತಂದೆಯೇ, ಇಸ್ರಾಯೇಲಿನ ರಥ ಮತ್ತು ಸಾರಥಿಯಾದ್ದಾತನೇ!” ಎಂದು ಕೂಗಿದನು. ಮತ್ತೆ ಅವನನ್ನು ಕಾಣಲಿಲ್ಲ. ಆಗ ಅವನು ತನ್ನ ವಸ್ತ್ರಗಳನ್ನು ತೆಗೆದು ಎರಡು ತುಂಡುತುಂಡಾಗಿ ಹರಿದನು.
وَرَأَى أَلِيشَعُ مَا جَرَى فَأَخَذَ يَهْتِفُ: «يَا أَبِي، يَا أَبِي، يَا مَرْكَبَاتِ إِسْرَائِيلَ وَفُرْسَانَهَا». وَغَابَ إِيلِيَّا عَنْ عَيْنَيْهِ، فَأَمْسَكَ ثِيَابَهُ وَمَزَّقَهَا قِطْعَتَيْنِ،١٢
13 ಎಲೀಷನು ಎಲೀಯನಿಂದ ಬಿದ್ದ ಹೊದಿಕೆಯನ್ನು ಎತ್ತಿಕೊಂಡು, ಹಿಂದಕ್ಕೆ ಹೋಗಿ, ಯೊರ್ದನ್ ನದಿ ತೀರದಲ್ಲಿ ನಿಂತನು.
ثُمَّ رَفَعَ رِدَاءَ إِيلِيَّا الَّذِي سَقَطَ مِنْهُ وَتَوَجَّهَ نَحْوَ ضَفَّةِ نَهْرِ الأُرْدُنِّ،١٣
14 ಎಲೀಯನಿಂದ ಬಿದ್ದ ಹೊದಿಕೆಯನ್ನು ತೆಗೆದುಕೊಂಡು ನೀರನ್ನು ಹೊಡೆದು, “ಎಲೀಯನ ದೇವರಾದ ಯೆಹೋವ ದೇವರು ಎಲ್ಲಿ?” ಎಂದನು. ಅವನು ಹಾಗೆ ನೀರನ್ನು ಹೊಡೆದ ತರುವಾಯ, ಅದು ಬಲಗಡೆಗೂ ಎಡಗಡೆಗೂ ವಿಭಾಗವಾದದ್ದರಿಂದ, ಎಲೀಷನು ದಾಟಿಹೋದನು.
وَضَرَبَ بِهِ الْمَاءَ هَاتِفاً: «أَيْنَ هُوَ الرَّبُّ إِلَهُ إِيلِيَّا؟» ثُمَّ ضَرَبَ الْمَاءَ ثَانِيَةً، فَانْفَلَقَ النَّهْرُ إِلَى شَطْرَيْنِ مُتَقَابِلَيْنِ، فَاجْتَازَ أَلِيشَعُ نَحْوَ الضَّفَّةِ الأُخْرَى.١٤
15 ಯೆರಿಕೋವಿನ ಬಳಿಯಲ್ಲಿ ಎದುರಾಗಿದ್ದ ಪ್ರವಾದಿಗಳ ಗುಂಪು ಅವನನ್ನು ಕಂಡಾಗ, “ಎಲೀಯನ ಆತ್ಮವು ಎಲೀಷನ ಮೇಲೆ ನಿಂತಿರುವುದು,” ಎಂದು ಹೇಳಿ, ಎದುರುಗೊಳ್ಳಲು ಬಂದು, ಅವನ ಮುಂದೆ ನೆಲದವರೆಗೂ ಅಡ್ಡಬಿದ್ದರು.
وَلَمَّا شَاهَدَهُ بَنُو الأَنْبِيَاءِ الْمُقِيمُونَ فِي أَرِيحَا قَادِماً نَحْوَهُمْ قَالُوا: «إِنَّ رُوحَ إِيلِيَّا قَدِ اسْتَقَرَّتْ عَلَى أَلِيشَعَ». فَأَقْبَلُوا لِلِقَائِهِ وَانْحَنَوْا أَمَامَهُ.١٥
16 ಇದಲ್ಲದೆ ಅವರು ಅವನಿಗೆ, “ಇಗೋ, ನಿನ್ನ ಸೇವಕರ ಸಂಗಡ ಐವತ್ತು ಮಂದಿ ಬಲಿಷ್ಠರಾದವರಿದ್ದಾರೆ. ಅವರು ಹೋಗಿ ನಿನ್ನ ಯಜಮಾನನನ್ನು ಹುಡುಕಲು ಅಪ್ಪಣೆ ಆಗಲಿ. ಒಂದು ವೇಳೆ ಯೆಹೋವ ದೇವರ ಆತ್ಮರು ಅವನನ್ನು ಎತ್ತಿಕೊಂಡು ಹೋಗಿ ಬೆಟ್ಟದ ಮೇಲಾದರೂ, ತಗ್ಗಿನಲ್ಲಾದರೂ ಇಟ್ಟಿರಬಹುದು,” ಎಂದರು. ಅದಕ್ಕೆ ಅವನು, “ಕಳುಹಿಸಬೇಡಿರಿ,” ಎಂದನು.
وَقَالُوا لَهُ: «إِنَّ بَيْنَ عَبِيدِكَ خَمْسِينَ رَجُلاً مِنْ ذَوِي الْبَأْسِ، فَدَعْهُمْ يَذْهَبُونَ لِلْبَحْثِ عَنْ سَيِّدِكَ. لَعَلَّ رُوحَ الرَّبِّ حَمَلَهُ وَطَرَحَهُ عَلَى أَحَدِ الْجِبَالِ أَوْ فِي أَحَدِ الأَوْدِيَةِ». فَأَجَابَ: «لا تُرْسِلُوا أَحَداً».١٦
17 ಆದರೆ ಅವರು ಅವನನ್ನು ಬೇಸರಪಡುವವರೆಗೂ ಬಲವಂತ ಮಾಡಿದ್ದರಿಂದ ಅವನು, “ಕಳುಹಿಸಿರಿ,” ಎಂದನು. ಅವರು ಐವತ್ತು ಮಂದಿಯನ್ನು ಕಳುಹಿಸಿದರು. ಇವರು ಮೂರು ದಿವಸ ಹುಡುಕಿ ಅವನನ್ನು ಕಾಣದೆ ಹೋದರು.
فَأَلَحُّوا عَلَيْهِ حَتَّى اعْتَرَاهُ الْخَجَلُ فَأَذْعَنَ لَهُمْ، فَأَوْفَدُوا خَمْسِينَ رَجُلاً ظَلُّوا يَبْحَثُونَ عَنْهُ ثَلاثَةَ أَيَّامٍ دُونَ جَدْوَى.١٧
18 ಅವನು ಯೆರಿಕೋವಿನಲ್ಲಿ ನಿಂತಿರುವಾಗ, ಅವರು ತಿರುಗಿ ಅವನ ಬಳಿಗೆ ಬಂದರು. ಆಗ ಅವನು ಅವರಿಗೆ, “ಹೋಗಬೇಡಿರೆಂದು ನಾನು ನಿಮಗೆ ಹೇಳಲಿಲ್ಲವೋ?” ಎಂದನು.
وَعِنْدَمَا رَجَعُوا إِلَيْهِ فِي أَرِيحَا قَالَ لَهُمْ: «أَمَا قُلْتُ لَكُمْ لَا تَبْحَثُوا عَنْهُ؟»١٨
19 ಆಗ ಪಟ್ಟಣದ ಮನುಷ್ಯರು ಎಲೀಷನಿಗೆ, “ಈ ಪಟ್ಟಣದ ಸ್ಥಳವು ಒಳ್ಳೆಯದಾಗಿದೆ. ನಮ್ಮ ಯಜಮಾನನೇ, ನೋಡು ನಿನಗೆ ಕಾಣುವುದು. ಆದರೆ ನೋಡು ನೀರು ಕೆಟ್ಟದ್ದು, ಭೂಮಿ ಬಂಜೆಯಾದದ್ದು,” ಎಂದರು.
وَقَالَ رِجَالُ مَدِينَةِ أَرِيحَا لأَلِيشَعَ: «هُوَذَا الْمَدِينَةُ كَمَا تَرَى ذَاتُ مَوْقِعٍ جَيِّدٍ، أَمَّا الْمِيَاهُ فَرَدِيئَةٌ وَالأَرْضُ مُجْدِبَةٌ».١٩
20 ಅದಕ್ಕವನು, “ನನ್ನ ಬಳಿಗೆ ಹೊಸ ಗಡಿಗೆಯನ್ನು ತೆಗೆದುಕೊಂಡು ಬಂದು ಅದರಲ್ಲಿ ಉಪ್ಪು ಹಾಕಿರಿ,” ಎಂದನು. ಅವರು ಅವನ ಬಳಿಗೆ ತೆಗೆದುಕೊಂಡು ಬಂದರು.
فَقَالَ: «أَحْضِرُوا لِي صَحْناً، وَضَعُوا فِيهِ مِلْحاً». فَأَتَوْا إِلَيْهِ بِمَا طَلَبَ.٢٠
21 ಅವನು ನೀರಿನ ಬುಗ್ಗೆಯ ಬಳಿಗೆ ಹೊರಟುಹೋಗಿ, ನೀರಿನಲ್ಲಿ ಉಪ್ಪು ಹಾಕಿ, “‘ಆ ನೀರನ್ನು ಶುದ್ಧಮಾಡಿದೆನು. ಇನ್ನು ಮೇಲೆ ಅದರಿಂದ ಮರಣವೂ, ಬಂಜೆತನವೂ ಆಗದಿರಲಿ,’ ಎಂದು ಯೆಹೋವ ದೇವರು ಹೇಳುತ್ತಾರೆ,” ಎಂದನು.
فَاتَّجَهَ نَحْوَ نَبْعِ الْمَاءِ وَطَرَحَ فِيهِ الْمِلْحَ، وَقَالَ: «هَذَا مَا تَكَلَّمَ بِهِ الرَّبُّ: لَقَدْ أَبْرَأْتُ هَذِهِ الْمِيَاهَ فَلَنْ تُسَبِّبَ الْمَوْتَ أَوِ الْجَدْبَ بَعْدَ الآنَ».٢١
22 ಎಲೀಷನು ಹೇಳಿದ ವಾಕ್ಯದ ಪ್ರಕಾರವೇ ಆ ನೀರು ಇಂದಿನವರೆಗೂ ಶುದ್ಧವಾಗಿಯೇ ಇದೆ.
فَبَرِئَتِ الْمِيَاهُ إِلَى هَذَا الْيَوْمِ، كَمَا أَنْبَأَ أَلِيشَعُ.٢٢
23 ಅವನು ಆ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋದನು. ಅವನು ಮಾರ್ಗದಲ್ಲಿ ಏರಿ ಹೋಗುತ್ತಿರುವಾಗ, ಚಿಕ್ಕ ಹುಡುಗರು ಪಟ್ಟಣದಿಂದ ಹೊರಟುಬಂದು ಅವನನ್ನು ಹಾಸ್ಯಮಾಡಿ ಅವನಿಗೆ, “ಬೋಳು ತಲೆಯವನೇ, ಏರಿ ಹೋಗು; ಬೋಳು ತಲೆಯವನೇ, ಏರಿ ಹೋಗು,” ಎಂದರು.
ثُمَّ ارْتَحَلَ مِنْ هُنَاكَ إِلَى بَيْتِ إِيلَ، وَفِيمَا هُوَ سَائِرٌ فِي طَرِيقِهِ خَرَجَ بَعْضُ الْفِتْيَانِ الصِّغَارِ مِنَ الْمَدِينَةِ وَشَرَعُوا يَسْخَرُونَ مِنْهُ قَائِلِينَ: «اصْعَدْ (فِي الْعَاصِفَةِ) يَا أَقْرَعُ!»٢٣
24 ಅವನು ಹಿಂದಿರುಗಿ ಅವರನ್ನು ನೋಡಿ, ಯೆಹೋವ ದೇವರ ಹೆಸರಿನಲ್ಲಿ ಅವರನ್ನು ಶಪಿಸಿದನು. ಆಗ ಅಡವಿಯಿಂದ ಎರಡು ಕರಡಿಗಳು ಹೊರಟು, ಅವರಲ್ಲಿ ನಾಲ್ವತ್ತೆರಡು ಹುಡುಗರನ್ನು ಸೀಳಿಬಿಟ್ಟವು.
فَالْتَفَتَ وَرَاءَهُ وَتَفَرَّسَ فِيهِمْ، ثُمَّ دَعَا عَلَيْهِمْ بِاسْمِ الرَّبِّ. فَخَرَجَتْ دُبَّتَانِ مِنَ الْغَابَةِ وَالْتَهَمَتَا مِنْهُمُ اثْنَيْنِ وَأَرْبَعِينَ فَتىً.٢٤
25 ಅವನು ಆ ಸ್ಥಳವನ್ನು ಬಿಟ್ಟು ಕರ್ಮೆಲ್ ಬೆಟ್ಟಕ್ಕೆ ಹೋದನು. ಅಲ್ಲಿಂದ ಸಮಾರ್ಯಕ್ಕೆ ಇಳಿದು ಹೋದನು.
وَانْطَلَقَ مِنْ هُنَاكَ إِلَى جَبَلِ الْكَرْمَلِ وَمِنْهُ رَجَعَ إِلَى السَّامِرَةِ.٢٥

< ಅರಸುಗಳು - ದ್ವಿತೀಯ ಭಾಗ 2 >